Author: admin
ಬಂಟ್ವಾಳ: ರಾರಾಸಂ ಫೌಂಡೇಷನ್ ಬಂಟ್ವಾಳ ಇದರ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಬಂಟ್ವಾಳ ಇದರ ಸಹಯೋಗದೊಂದಿಗೆ ರಾರಸಂಭ್ರಮ 14ನೇ ವರ್ಷದ ಸಾಂಸ್ಕೃತಿಕ ಕಲರವ ಡಿ.25ರಂದು ಬೆಳಿಗ್ಗೆ ಗಂಟೆ 9ರಿಂದ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸುವರು, ದ.ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್, ಸಂತ ಅಲೋಷಿಯಸ್ ಕಾಲೇಜಿನ ಪ್ರಾಧ್ಯಪಕಿ ಡಾ. ದಿವ್ಯ ವಿ.ಶೆಟ್ಟಿ, ಪತ್ರಕರ್ತ ಹರೀಶ್ ಮಾಂಬಾಡಿ, ಸುರಿಬೈಲು ಶಾಲೆಯ ಶಿಕ್ಷಕ ಗೋಪಾಲ ಎಸ್., ಜೆಸಿಐ ಬಂಟ್ವಾಳದ ಅಧ್ಯಕ್ಷ ಗಣೇಶ್ ಕೆ. ಕುಲಾಲ್ ಭಾಗವಹಿಸುವರು. ಸಂಜೆ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಲಯನ್ಸ್ ಕ್ಲಬ್ ಮಂಗಳೂರಿನ ಅಧ್ಯಕ್ಷ ಜಯರಾಜ್ ಪ್ರಕಾಶ್, ಲಯನ್ಸ್ ಕ್ಲಬ್ ಪೂರ್ವ ಪ್ರಾಂತ್ಯಾಧ್ಯಕ್ಷ ರಮಾನಂದ ನೂಜಿಪ್ಪಾಡಿ, ಉದ್ಯಮಿ ಮಂಜುನಾಥ ಆಚಾರ್ಯ, ಜೆಸಿಐ ಮಡಂತ್ಯಾರಿನ ನಿಯೋಜಿತ ಅಧ್ಯಕ್ಷೆ ಅಮಿತಾ ಅಶೋಕ್, ಸದ್ಯಮಿ ಸದಾನಂದ ಬಂಗೇರ ಉಪಸ್ಥಿತರಿರುವರು.ಇಂಡಿಯಾ ಮತ್ತು ಏಷ್ಯಾಬುಕ್ ಆಪ್ ರೆಕಾರ್ಡ್ನಲ್ಲಿ ದಾಖಲಾದ ಪ್ರತಿಭೆ ಅನ್ವೇಶ್ ಅಂಬೆಕಲ್ಲು ಅವರಿಗೆ…
ಬಂಟ್ವಾಳ: ಶ್ರೀಮತಿ ಲಕ್ಷ್ಮಿ ದೇವಿ ನರಸಿಂಹ ಪೈ ವಿದ್ಯಾಲಯ ಪಾಣೆ ಮಂಗಳೂರು ಇಲ್ಲಿನ ವಿದ್ಯಾರ್ಥಿಗಳಾದ ಶಮಿತಾ ಯು. ಇವರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಿರಿಯ ವಿಭಾಗದ ಭಕ್ತಿಗೀತೆ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೆಯೇ ಸಮರ್ಥ್ ವೈ ಇವರು ಹಿರಿಯ ವಿಭಾಗದ ಭಕ್ತಿ ಗೀತೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮೊಡಂಕಾಪುವಿನ ದೀಪಿಕಾ ಪ್ರೌಢಶಾಲೆಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ವಜ್ರಮಹೋತ್ಸವನ್ನು ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಲವಾರು ವಿಶೇಷ ಕಾರ್ಯಕ್ರಮಗಳ ಮೂಲಕ ಸಂಭ್ರಮದಿಂದ ಆಚರಿಸಿದರು.ಎರಡನೇ ದಿನದ ಕಾರ್ಯಕ್ರಮದಲ್ಲಿ ತಮಗೆ ವಿದ್ಯೆ ನೀಡಿದ ಗುರು ಶ್ರೇಷ್ಠರನ್ನು ಗೌರವಿಸಿ ಕೃತಾರ್ಥರಾದರು. ಈ ಎಲ್ಲಾ ಕಾರ್ಯಕ್ರಮಗಳ ಪೈಕಿ ವಿಶೇಷವಾಗಿ ಗಮನ ಸೆಳೆದಿದ್ದು ಇಬ್ಬರು ಐಸ್ ಕ್ಯಾಂಡಿ ವ್ಯಾಪರಿಗಳಾದ ಖಾದ್ರಿಯಕ್ಕ ಹಾಗೂ ದಾಮೋದರ್ ಅವರನ್ನು ಗೌರವಿಸಿದ ಕ್ಷಣ!ಮೂವತ್ತು ನಲವತ್ತು ವರ್ಷಗಳ ಹಿಂದಿನ ಶಾಲಾ ವಿದ್ಯಾರ್ಥಿಗಳ ಜೀವನ ಈಗಿನ ವಿದ್ಯಾರ್ಥಿಗಳಂತಿರಲ್ಲ. ಈಗಿನ ವಿದ್ಯಾರ್ಥಿಗಳು ಐವತ್ತು, ನೂರು ರೂಪಾಯಿಯನ್ನು ಒಂದು ಕ್ಷಣಕ್ಕೆ ಖರ್ಚು ಮಾಡಿದರೆ ಕೇವಲ 50 ಪೈಸೆ ಕೊಟ್ಟು ಒಂದು ಐಸ್ ಕ್ಯಾಂಡಿ ಕೊಳ್ಳುವಷ್ಟು ಹಣ ಆಗ ಜೇಬಲ್ಲಿ ಇರುತ್ತಿರಲಿಲ್ಲ. ಸಂಜೆ ಶಾಲೆಯ ಗಂಟೆ ಬಾರಿಸಿದಾಗ ಶಾಲೆಯ ಅಂಗಳದಲ್ಲಿ ಖಾದ್ರಿಯಕ್ಕನ ಐಸ್ ಕ್ಯಾಂಡಿಯ ಗಂಟೆ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿತ್ತು. ಹಣವಿದ್ದವರು ಕ್ಯಾಂಡಿ ಖರೀದಿಸುತ್ತಿದ್ದರು. ಹಣವಿಲ್ಲದ ಕೆಲ ವಿದ್ಯಾರ್ಥಿಗಳು ಬೇರೆ ವಿದ್ಯಾರ್ಥಿಗಳು ಕ್ಯಾಂಡಿ ತಿನ್ನುತ್ತಿರುವುದನ್ನು ದೂರದಿಂದ ನೋಡಿ ಆಸೆ…
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಸೇವಾಂಜಲಿ ಸಂಗೀತ ತರಗತಿಯ ವಾರ್ಷಿಕೋತ್ಸವ ಭಾನುವಾರ ಸಂಜೆ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಶಿವಾಂಜಲಿ ಕಲಾ ಕೇಂದ್ರ ಪೇರ್ಲದ ನಿರ್ದೇಶಕಿ ವಿದೂಷಿ ಕಾವ್ಯಭಟ್ ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇದೊಂದು ವೇದಿಕೆಯಾಗಿದೆ. ಸಂಗೀತ ಕಲಿಯುವ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಸಿಗದೇ ಹೋದಾಗ ಅವರಲ್ಲಿ ಕಲಿಯುವ ಆಸಕ್ತಿ ಕಡಿಮೆಯಾಗುತ್ತದೆ. ಆಸಕ್ತಿ ನಿರಂತರವಾಗಿಬೇಕಾದರೆ ಇಂತಹ ವೇದಿಕೆಯ ಅವಕಾಶ ಸಿಗಬೇಕಾಗಿದೆ ಎಂದರು.ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಮಾತನಾಡಿ ಕಾವ್ಯಭಟ್ ಅವರು ಉದ್ಯೋಗದ ಜೊತೆ ಭರತನಾಟ್ಯವನ್ನು ಕಲಿಸುವ ಮೂಲಕ ದೇಶಿಯ ಸಂಸ್ಕೃತಿಯನ್ನು ಉಳಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.ವೇದಿಕೆಯಲ್ಲಿ ಗಾಯಕಿ ಪವಿತ್ರ ವಿನಯ ಮಯ್ಯ ತುಪ್ಪೆಕಲ್ಲು, ಸಂಗೀತ ವಿದ್ವಾನ್ ಕೃಷ್ಣಾಚಾರ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಗುರುವಂದನೆ ಸಲ್ಲಿಸಿದರು. ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ದೇವರ ನಾಮ, ವಿದ್ವಾನ್ ಕೃಷ್ಣಾಚಾರ್ಯ ಅವರಿಂದ ಶಾಸ್ತ್ರೀಯ ಸಂಗೀತ ಮತ್ತು ಭಕ್ತಿ ಗೀತೆ ನಡೆಯಿತು.
ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ ೩೧೭ ಡಿ ಇದರ ಆಶ್ರಯದಲ್ಲಿ ಲಯನ್ಸ್ ಜಿಲ್ಲಾ ಕ್ರೀಡೋತ್ಸವ ಬಂಟ್ವಾಳದ ಎಸ್ವಿಎಸ್ ಮೈದಾನದಲ್ಲಿ ನಡೆಯಿತು.ಲಯನ್ಸ್ ಜಿಲ್ಲಾ ಸ್ಪೋರ್ಟ್ಸ್ ಪ್ರಧಾನ ಸಂಯೋಜಕ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಸ್ತಾವಿಕವಾಗಿ ಮಾತನಾಡಿ ಲಯನ್ಸ್ ಕುಟುಂಬದ ಸದಸ್ಯರು ತಮ್ಮ ಕೆಲಸ, ಒತ್ತಡಗಳನ್ನು ಬದಿಗಿಟ್ಟು ಈ ದಿನವನ್ನು ಸಂಭ್ರಮಿದಿಂದ ಕಳೆಯುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಎಲ್ಲರು ಸಕ್ರಿಯವಾಗಿ ಆಟೋಟಗಳಲ್ಲಿ ಭಾಗವಹಿಸುವಂತೆ ತಿಳಿಸಿದರು.ಅಕ್ಷರ ದಾಸೋಹ ಉಪಕಾರ್ಯದರ್ಶಿ ಎಂ.ಪಿ. ಜ್ಞಾನೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ದೀಪ ಪ್ರಜ್ವಲಿಸಿ ಮಾತನಾಡಿ ಲಯನ್ಸ್ ಸಂಸ್ಥೆಯ ಸೇವಾ ಕಾರ್ಯಗಳು ಅಪೂರ್ವವಾದುದು. ಶಾಲೆಗಳಿಗೂ ಹಲವಾರು ಸೌಲಭ್ಯಗಳನ್ನು ಒದಗಿಸಿ ಕೊಟ್ಟಿದೆ. ಇದು ತಮ್ಮ ಸಂತೋಷಕ್ಕಾಗಿ ಮಾಡುವ ಕರ್ಮಯೋಗವಿದ್ದಂತೆ ಎಂದು ತಿಳಿಸಿದರು. ಲಯನ್ಸ್ ಜಿಲ್ಲಾ ಗವರ್ನರ್ ಬಿ.ಎಂ. ಭಾರತಿ ಬಲೂನ್ ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.ಈ ಸಂದರ್ಭ ವಿವಿಧ ವಲಯಗಳಿಂದ ಆಗಮಿಸಿದ ಲಯನ್ಸ್ ಕ್ರೀಡಾಪಟುಗಳ ಫತಸಂಚಲನ ನಡೆದು ಗವರ್ನರ್ ಸಹಿತ ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.ಜಿಲ್ಲಾ…
ಬಂಟ್ವಾಳ: ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸಹಕಾರಿ-ಸಮಾಜ ಸೇವಾ ಕ್ಷೇತ್ರದ ಸಾಧಕ ಕೆ.ಸಂಜೀವ ಪೂಜಾರಿ ಅವರಿಗೆ ಕೆ.ಸಂಜೀವ ಪೂಜಾರಿ ಅಭಿನಂದನಾ ಸಮಿತಿ, ಬಿ.ಸಿ.ರೋಡಿನ ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಲ, ಮೆಲ್ಕಾರಿನ ಶ್ರೀಗುರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಶಿವಗಿರಿ ಮಹಿಳಾ ಸಹಕಾರಿ ಸಂಘ ಹಾಗೂ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ರವಿವಾರ ಸಜೀಪಮೂಡ ಸುಭಾಷ್ನಗರ ಶ್ರೀಗುರು ಕಲ್ಯಾಣ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಅಭಿಮಾನದ ಸಾಧಕನಿಗೆ ಹುಟ್ಟೂರ ಗೌರವ ನೀಡಿ ಸಮ್ಮಾನಿಸಲಾಯಿತು.ಮಾಜಿ ಸಚಿವ ಬಿ.ರಮಾನಾಥ ರೈ ಸಮಾರಂಭ ಉದ್ಘಾಟಿಸಿ ಮಾತನಾಡಿ, ನಾರಾಯಣ ಗುರುಗಳ ಆದರ್ಶದೊಂದಿಗೆ ಸಂಜೀವಣ್ಣ ಸಹಕಾರಿ ಚಳುವಳಿಯಲ್ಲಿ ಸಾಧನೆ ತೋರಿದ್ದು, ಸಾಮಾಜಿಕ ಬದುಕಿನ ಜತೆಗೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯವಾಗಿದ್ದು, ಜನಪ್ರತಿನಿಽಯಾಗಿ ಸಮುದಾಯ ಏಳಿಗೆಯ ಕುರಿತು ಚಿಂತನೆ ನಡೆಸಿದ್ದರು. ಸರಕಾರವು ನಾರಾಯಣ ಗುರು ಜಯಂತಿ ಆಚರಿಸುವ ಘೋಷಣೆಯನ್ನು ಸಿಎಂ ಸಿದ್ದರಾಮಯ್ಯ ಅವರು ಸಜೀಪಮೂಡದ ಗುರುಮಂದಿರದಲ್ಲಿ ಮಾಡಿದ್ದು, ಇದರಲ್ಲಿ ಸಂಜೀವಣ್ಣನ ಪ್ರಯತ್ನವಿರುವುದು ಸ್ಮರಣೀಯ ಎಂದರು.ಅಭಿನಂದನಾ ಸಮಿತಿಯ…
ಬಂಟ್ವಾಳ: ಜೆಸಿಐ ಬಂಟ್ವಾಳ ಇದರ 2025ನೇ ಸಾಲಿನ ಅಧ್ಯಕ್ಷ ಗಣೇಶ್ ಕೆ. ಕುಲಾಲ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಸಂಜೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು.ನೂತನ ತಂಡವನ್ನು ಜೆಸಿಐ ಭಾರತದ ರಾಷ್ಟ್ರೀಯ ಉಪಾಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ ಉದ್ಘಾಟಿಸಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಜೆಸಿಐ ಭಾರತದ ಎಲ್ಲಾ ಘಟಕಗಳು ಮೌನವಹಿಸಿದ್ದಾಗ ವಲಯ 15 ಸದ್ದು ಮಾಡುತ್ತಿತ್ತು. ಈ ಸಂದರ್ಭ ವಲಯಕ್ಕೆ ಬೆನ್ನಲುಬಾಗಿ ನಿಂತು ಕಾರ್ಯಕ್ರಮ ಸಂಘಟಿಸಿದ ಕೀರ್ತಿ ಜೆಸಿಐ ಬಂಟ್ವಾಳಕ್ಕೆ ಸಲ್ಲುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕೋವಿಡ್ ಕಷ್ಟದ ಕಾಲದಲ್ಲೂ ವ್ಯವಹಾರ ಸಮ್ಮೇಳನವನ್ನು ನಿಶುಲ್ಕವಾಗಿ ಆಯೋಜಿಸಿದ ಹೆಗ್ಗಳಿಕೆ ಜೆಸಿಐ ಬಂಟ್ವಾಳಕ್ಕಿದೆ. ಇಂತಹ ಘಟಕದ ಮೇಲೆ ಪ್ರೀತಿ ಅಭಿಮಾನವಿದ್ದು ಮುಂದಿನ ದಿನಗಳಲ್ಲಿ ಅತ್ಯುತ್ತಮ ಕಾರ್ಯಗಳ ಮೂಲಕ ಮಾದರಿ ಘಟಕವಾಗಿ ಹೊರ ಹೊಮ್ಮಲಿ ಎಂದು ಆಶಿಸಿದರು. 2025ನೇ ಸಾಲಿನ ಚುನಾಯಿತ ವಲಯಾಧ್ಯಕ್ಷ ಅಭಿಲಾಷ್ ಬಿ.ಎ. ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಘಟಕ ರೈಸ್ ಅಪ್ ಆಗಬೇಕಾದರೆ ಎಲ್ಲರ ಸಹಕಾರ ಬೇಕು. ಮುಂದಿನ ವರ್ಷದಲ್ಲಿ ವಲಯದ ಅಭಿವೃದ್ದಿಗೆ…
ಬಂಟ್ವಾಳ: ಪುತ್ತೂರು ವಿವೇಕಾನಂದ ಪ್ರೌಢಶಾಲೆ ಯಲ್ಲಿ ನಡೆದ ರಾಷ್ಟ್ರಿಯ ಮಟ್ಟದ ಕರಾಟೆ ಮತ್ತು ಎಲೈಡ್ ಮಾರ್ಷಲ್ ಆರ್ಟ್ ಜೂನಿಯರ್ ವಿಭಾಗದ ಸ್ಪರ್ಧೆ ಯಲ್ಲಿ ಉಡುಪಿ ಅಜ್ಜರ ಕಾಡು ಸೈಂಟ್ ಸಿಸಿಲಿಯ ಪ್ರೌಢಶಾಲೆ ಯ ಆರನೇ ತರಗತಿ ವಿದ್ಯಾರ್ಥಿನಿ ತನಿಷ್ಕ ಪವನ್ ಕುಮಾರ್ ಚಿನ್ನದ ಪದಕ ಹಾಗೂ ಕಟಾ ವಿಭಾಗದ ಸ್ಪರ್ಧೆ ಯಲ್ಲಿ ರಜತ ಪದಕ ಪಡೆದಿದ್ದಾರೆ.ಈಕೆಭಾರತೀಯ ರೈಲ್ವೆ ಇಲಾಖೆಯ ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪವನ್ ಕುಮಾರ್ ಮತ್ತು ಅಕ್ಷತಾ ಪವನ್ ಕುಮಾರ್ ದಂಪತಿಯ ಸುಪುತ್ರಿ
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಸೇವಾಂಜಲಿ ಸಂಗೀತ ತರಗತಿಯ ವಾರ್ಷಿಕೋತ್ಸವ ಡಿ.15ರಂದು ಭಾನುವಾರ ಸಂಜೆ 4ಗಂಟೆಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಶಿವಾಂಜಲಿ ಕಲಾಕೇಂದ್ರ ಪೆರ್ಲ ಇದರ ನಿರ್ದೇಶಕಿ ವಿದುಷಿ ಕಾವ್ಯ ಭಟ್ ಉದ್ಘಾಟಿಸುವರು, ಗಾಯಕಿ ಪವಿತ್ರ ವಿನಯ ಮಯ್ಯ ಉಪಸ್ಥಿತರಿರುವರು. ಸಂಜೆ 4.30ರಿಂದ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ದೇವರ ನಾಮಗಳು, ಸಂಜೆ 5.30ರಿಂದ ವಿದ್ವಾನ್ ಕೃಷ್ಣಾಚಾರ್ಯ ಇವರಿಂದ ಶಾಸ್ತ್ರೀಯ ಸಂಗೀತ ಮತ್ತು ಭಕ್ತಿ ಗೀತೆ ನಡೆಯಲಿದೆ ಎಂದು ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. —
ಬಂಟ್ವಾಳ: ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಇದರ ಆಶ್ರಯದಲ್ಲಿ ಜ.19 ರಂದು ನಡೆಯಲಿರುವ ಬಂಟ್ವಾಳ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ- 2025ರ ಲಾಂಛನ ಬಿಡುಗಡೆ ಕಾರ್ಯಕ್ರಮ ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಭಾನುವಾರ ನಡೆಯಿತು. ಕುದ್ರೋಳಿ ಗೋಕರ್ಣ ದೇವಸ್ಥಾನದ ಟ್ರಸ್ಟಿ, ಉದ್ಯಮಿ ಜಗದೀಪ್ ಸುವರ್ಣ ಲಾಂಛನ ಬಿಡುಗಡೆಗೊಳಿಸಿದರು. ಬಳಿಕ ಸಭಾಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಬಿಲ್ಲವ ಸಮಾಜದ ಸರ್ವರು ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸಬೇಕು. ಈ ಮೂಲಕ ಸಮಾಜದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ರಾರಾಜಿಬೇಕು ಎಂದು ಶುಭ ಹಾರೈಸಿದರು. ಬಳಿಕ ಅವರು ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ತಾಲೂಕಿನ ಬಿಲ್ಲವರು ಸಂಘಟಿತರಾಗುವ ಉದ್ದೇಶದಿಂದ ಈ ಕ್ರೀಡಾಕೂಟ ಆಯೋಜಿಸಲಾಗಿದೆ. ಕ್ರೀಡಾಕೂಟವನ್ನು ಶಿಸ್ತುಬದ್ದವಾಗಿ, ಯಶಸ್ವಿಯಾಗಿ ನಡೆಸಲು ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಸಹಕಾರ ನೀಡುವಂತೆ ಮನವಿ ಮಾಡಿದರು. ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಕ್ರೀಡಾಕೂಟದ…








