Author: admin
ಬಂಟ್ವಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನವಪೀಳಿಗೆಯು ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕಾದರೆ ಅವರಿಗೆ ಕೌಶಲ್ಯಭರಿತ ಮತ್ತು ಮೌಲ್ಯಯುತವಾದ ಶಿಕ್ಷಣ ನೀಡುವ ಅಗತ್ಯವಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.ಅವರು ಗೋಳ್ತಮಜಲು ಜೆಮ್ ಪಬ್ಲಿಕ್ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು . ಬಡತನ, ನಿರುದ್ಯೋಗ, ಅಸಮಾನತೆ ಇವೇ ಮೊದಲಾದ ಪಿಡುಗುಗಳಿಗೆ ಗುಣಮಟ್ಟದ ಶಿಕ್ಷಣವು ಒಂದು ಅತ್ಯುತ್ತಮ ಪರಿಹಾರ ಕ್ರಮವಾಗಿದ್ದು ಅಂತಹ ಗುಣಮಟ್ಟದ ಶಿಕ್ಷಣವನ್ನು ಕಳೆದ ಇಪ್ಪತ್ತೈದು ವರ್ಷಗಳಿಂದ ನೀಡುತ್ತಾ ಬಂದಿರುವ ಜೆಮ್ ಶಾಲೆಯ ಯಶಸ್ಸಿನ ಹಾದಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಳ್ಳಿಹಬ್ಬದ ಪ್ರಯುಕ್ತ ಹೊರತರಲಾದ ರಜತರತ್ನ ಸ್ಮರಣ ಸಂಚಿಕೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಬಿಡುಗಡೆಗೊಳಿಸಿ , ಜೆಮ್ ಶಿಕ್ಷಣ ಸಂಸ್ಥೆಯ ಸ್ಥಾಪಕ ದಿವಂಗತ ಗೋಳ್ತಮಜಲು ಅಬ್ದುಲ್ ಖಾದರ್ ಹಾಜಿಯವರ ಶಿಕ್ಷಣ ಪ್ರೇಮ ಮತ್ತು ಅವರ ಸಾಮಾಜಿಕ ಕಳಕಳಿಯನ್ನು ಸ್ಮರಿಸಿದರು. ಮೀಫ್ ಸಂಸ್ಥೆಯ ದಕ್ಕಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧ್ಯಕ್ಷ ಮೂಸಬ್ಬ ಪಿ.ಬ್ಯಾರಿ ಜೋಕಟ್ಟೆ…
ಬಂಟ್ವಾಳ: ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಘಟಕದ ಅಧ್ಯಕ್ಷೆ ರಶ್ಮಿ ಶೆಟ್ಟಿ ಅಧ್ಯಕ್ಷತೆಯಲ್ಲಿ, ನಿಟಕಪೂರ್ವಾಧ್ಯಕ್ಷ ರಾಜೇಂದ್ರ ಕೆ. ಉಪಸ್ಥಿತಿಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು. ನೂತನ ಸಾಲಿನ ನಿಕಟಪೂರ್ವ ಅಧ್ಯಕ್ಷೆಯಾಗಿ ರಶ್ಮಿ ಶೆಟ್ಟಿ, ಕಾರ್ಯದರ್ಶಿಯಾಗಿ ಕಿಶೋರ್ ಆಚಾರ್ಯ, ಕೋಶಾಧಿಕಾರಿಯಾಗಿ ಜೀವಿತಾ ಯತೀಶ್ ಕರ್ಕೆರಾ, ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಶ್ರೀನಿವಾಸ ಅರ್ಬಿಗುಡ್ಡೆ, ಉಮೇಶ್ ಪೂಜಾರಿ, ಮನೋಜ್ ಕನಪಾಡಿ, ಕಿರಣ್, ವಚನ್ ಶೆಟ್ಟಿ, ವಿಮಲ ಶ್ರೀನಿವಾಸ್, ಲೇಡಿ ಜೇಸಿ ಸಂಯೋಜಕಿಯಾಗಿ ಬಬಿತಾ ಗಣೇಶ್, ಜೆಜೆಸಿ ಸಂಯೋಜಕರಾಗಿ ಸಂತೋಷ್ ಜೈನ್, ನಿರ್ದೇಶಕರಾಗಿ ವೆಂಕಟೇಶ್, ಅಕ್ಷಯ್, ನಾಗೇಶ್ ಸಜೀಪ, ರವೀಣಾ ಬಂಗೇರ, ಆಶಾಮಣಿ ರೈ, ಶಿವರಾಮ ಮರ್ತಾಜೆ, ನಾರಾಯಣ ಪೆರ್ನೆ, ದೀಪ್ತಿ ರೈ ಆಯ್ಕೆಗೊಂಡರು.
ಬಂಟ್ವಾಳ: ಕ್ಷಯ ರೋಗಕ್ಕೆ ಭಯಪಡುವ ಅಗತ್ಯವಿಲ್ಲ,ಸಮಯಕ್ಕೆ ಸರಿಯಾಗಿ ಔಷಧಿ ಸೇವಿಸುವುದರ ಜೊತೆಗೆ ಪೌಷ್ಢಿಕ ಆಹಾರ ಸೇವನೆ ಹಾಗೂ ಜೀವನದಲ್ಲಿ ಶಿಸ್ತು ಕಾಪಾಡಿಕೊಳ್ಳುವುದರಿಂದ ಬೇಗ ರೋಗ ಮುಕ್ತರಾಗಲು ಸಾಧ್ಯವಿದೆ ಎಂದು ಸಂಚಯಗಿರಿ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಕಾರ್ಯದರ್ಶಿ ಡಾ. ಆಶಾಲತಾ ಸುವರ್ಣ ಹೇಳಿದರುಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಆಶ್ರಯದಲ್ಲಿ ಸೇವಾಂಜಲಿ ಸಭಾಂಗಣದಲ್ಲಿ ನಡೆದ ಕ್ಷಯ ರೋಗಿಗಳಿಗೆ ಆಹಾರ ದವಸಧಾನ್ಯ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ರೋಗ ಬಂದ ಬಳಿಕ ಮತ್ತೊಬ್ಬರಿಗೆ ಹರಡದಂತೆ ಎಚ್ಚರವಹಿಸುವ ಜವಬ್ದಾರಿ ರೋಗಿಗಳಲ್ಲಿ ಇದ್ದು ಮಕ್ಕಳು, ಹಿರಿಯರ ಜೊತೆ ಹಾಗೂ ಸಾರ್ವಜನಿಕ ಕಾರ್ಯಕ್ತಮದಲ್ಲಿ ಭಾಗವಹಿಸುವ ಸಂದರ್ಭ ಜಾಗ್ರತೆ ವಹಿಸುವಂತೆ ತಿಳಿಸಿದರು. ದ..ಕ. ಜಿಲ್ಲಾ ಕೃಷಿ ಅಭಿವೃದ್ಧಿ ರವೀಂದ್ರ ಕಂಬಳಿ ಮಾತನಾಡಿ ಸೇವಾಂಜಲಿ ಪ್ರತಿಷ್ಠಾನ ಧಾರ್ಮಿಕ, ಸಾಮಾಜಿಕ, ಆರೋಗ್ಯ, ಶೈಕ್ಷಣಿಕ ಸೇವೆಯನ್ನು ನಿರಂತರವಾಗಿ ನೀಡುತ್ತಾ ಬರುತ್ತಿದ್ದು, ಕೃಷ್ಣ ಕುಮಾರ್ ಪೂಂಜ ಅವರ ಒಳ್ಳೆಯ ಕೆಲಸದೊಂದಿಗೆ ನಾವೂ ಕೈ ಜೋಡಿಸೋಣ ಎಂದರು.ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯ…
ಬಂಟ್ವಾಳ: ವಾಮದಪದವು ಹಾಗೂ ಚೆನ್ನೈತ್ತೋಡಿಯಲ್ಲಿರುವ ಶ್ರೀ ದೇವರಾಜ ಅರಸು ಮೆಟ್ರಿಕ್ ನಂತರದ ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ಹಾಸ್ಟೆಲ್ ಡೇ ಶನಿವಾರ ನಡೆಯಿತು.ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಬಿಂದಿಯಾ ನಾಯಕ್ ಉದ್ಘಾಟಿಸಿದರು. ಚೆನ್ನೈತ್ತೋಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ವನಿತಾ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೆಸಿಐ ವಿಟ್ಲದ ಅಧ್ಯಕ್ಷ ಸಂತೋಷ್ ಕುಮಾರ್, ವಾಮದಪದವು ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಪ್ರಮುಖರಾದ ಪ್ರಕಾಶ್ ಆಳ್ವ, ನವೀನ್ ಶೆಟ್ಟಿ, ಶಶಿಕಲಾ ಶೆಟ್ಟಿ, ಪುಷ್ಪಲತಾ ಉಪಸ್ಥಿತರಿದ್ದರು.ನಿಲಯಪಾಲಕಿ ಭವಾನಿ ಸ್ವಾಗತಿಸಿ, ಪ್ರಾಸ್ತವಿಕ ಮಾತುಗಳನ್ನಾಡಿದರು. ಯಕ್ಷಿತಾ ವಂದಿಸಿ ತನುಶ್ರೀ ಕಾರ್ಯಕ್ರಮ ನಿರೂಪಿಸಿದರು.
ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಗ್ರಾಮದ ಕೌಡೇಲು ಪ್ರದೇಶದಲ್ಲಿ ಕುಡಿಯುವ ನೀರಿನ ಮುಖ್ಯ ಕೊಳವೆಯು ಒಡೆದು ನೀರಿನ ಸೋರಿಕೆಯಾಗುತ್ತಿರುವುದರಿಂದ ದುರಸ್ತಿ ಕಾರ್ಯ ಕೈಗೊಳ್ಳಲಾvದೆ. ಆದ್ದರಿಂದ ರೆಂಗೇಲು ಶಾಂತಿಗುಡ್ಡೆ ವ್ಯಾಪ್ತಿಗೆ ಎರಡು ದಿನಗಳಲ್ಲಿ ಕುಡಿಯುವ ನೀರಿನ ವ್ಯತ್ಯಯ ಉಂಟಾಗಲಿದೆ ಎಂದು ಬಂಟ್ವಾಳ ಪ್ಮರಸಭೆಯ ಪ್ರಕಟಣೆ ತಿಳಿಸಿದೆ. —
ಬಂಟ್ವಾಳ: ತಾಲೂಕಿನ ವಾಮದಪದವು ಹಾಗೂ ಚೆನ್ನೈತ್ತೋಡಿಯಲ್ಲಿರುವ ಶ್ರೀ ದೇವರಾಜ ಅರಸು ಮೆಟ್ರಿಕ್ ನಂತರದ ಹಾಸ್ಟೆಲ್ ವಿದ್ಯಾರ್ಥಿನಿಯರು ಕಳೆದ ಸೆ.5 ರಂದು ಕೃಷಿ ಕಲಿ -ನಲಿ ಕಾರ್ಯಕ್ರಮದ ಮೂಲಕ ಸ್ಥಳೀಯ ವಾಂಬೆಟ್ಟುವಿನ ಯಜ್ಞನಾರಾಯಣ ಎಂಬವರ ಅರ್ಧ ಎಕರೆ ವಿಸ್ತೀಣ್ದ ಗದ್ದೆಯಲ್ಲಿ ಭತ್ತದ ಸಾಗುವಳಿ ಮಾಡಿದ್ದರು. ವಿದ್ಯಾರ್ಥಿಗಳಿಗೆ ಭತ್ತದ ಬೇಸಾಯದ ಬಗ್ಗೆ ಸಮಗ್ರ ಮಾಹಿತಿಯನ್ನು ಒದಗಿಸುವುದರ ಜೊತೆಗೆ ಅದರ ಪ್ರಾಯೋಗಿಕ ಅನುಭವವೂ ಆಗಬೇಕು ಎನ್ನುವ ಉದ್ದೇಶದಿಂದ ನಿಲಯದ ಮೇಲ್ವಿಚಾರಕಿ ಭವಾನಿ ಅವರ ಮುತುವರ್ಜಿಯಲ್ಲಿ, ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್ ಅವರ ಮಾರ್ಗದರ್ಶನದಂತೆ ಸ್ಥಳೀಯ ಕೃಷಿಕ ಯಜ್ಞ ನಾರಾಯಣ ಅವರ ಸಹಕಾರದೊಂದಿಗೆ ಕೃಷಿ ಚಟುವಟಿಕೆ ನಡಸಲಾಗಿತ್ತು. ಮೂರು ಹಾಸ್ಟೆಲ್ಗಳ 300 ಮಂದಿ ವಿದ್ಯಾರ್ಥಿಗಳು ಅಂದು ಈ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು. ಬಳಿಕ ವಿದ್ಯಾರ್ಥಿಗಳೇ ಮೇಲುಸ್ತುವರಿ ವಹಿಸಿಕೊಂಡು ಗದ್ದೆಯ ನಿರ್ವಹಣೆ ನೋಡಿಕೊಳ್ಳುತ್ತಿದ್ದರು. ಇದೀಗ ಭತ್ತದ ಪೈರು ಕೊಯ್ಲಿಗೆ ಬಂದಿದ್ದು ಅದೇ ವಿದ್ಯಾರ್ಥಿಗಳು ಹಾಗೂ ಇಲಾಖಾ ಅಧಿಕಾರಿಗಳು ಭಾಗವಹಿಸಿ ಭಾನುವಾರ ಪೈರನ್ನು ಕಟಾವು ಮಾಡಿ, ತೆನೆಯನ್ನು ಬಡಿದು…
ಬಂಟ್ವಾಳ: ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಡಿಸೆಂಬರ್ 7ರಂದು ನಡೆಯಲಿರುವ ಹೊನಲು ಬೆಳಕಿನ ಕ್ರೀಡೋತ್ಸವಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ವರಿಷ್ಠರಾಗಿರುವ ಸರಸಂಘಚಾಲಕ ಡಾ. ಮೋಹನ್ ಜೀ ಭಾಗವತ್ ಆಗಮಿಸಲಿದ್ದಾರೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.ಸೋಮವಾರ ಸಂಜೆ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಿವರ ನೀಡಿದರು.ಶ್ರೀರಾಮ ವಿದ್ಯಾಕೇಂದ್ರದಲ್ಲಿ ಪದವಿಕಾಲೇಜು, ಸೆಕೆಂಡರಿ ಸ್ಕೂಲ್, ಪದವಿಪೂರ್ವ ಕಾಲೇಜು, ಹೈಸ್ಕೂಲು ಹಾಗೂ ಪ್ರಾಥಮಿಕ ಶಾಲೆ ಜೊತೆಗೆ ಶಿಶುಮಂದಿರವಿದೆ. 3338 ವಿದ್ಯಾರ್ಥಿಗಳು ಹಾಗೂ 230 ಶಿಕ್ಷಕರು, ಸಿಬ್ಬಂದಿ ವರ್ಗ ಇದ್ದಾರೆ. ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸದ ಜೊತೆ ದೇಶಭಕ್ತಿ, ಸಂಸ್ಕೃತಿಯನ್ನು ಮೂಡಿಸುವುದು ಹಾಗೂ ರಾಷ್ಟ್ರೀಯ ದೃಷ್ಟಿಕೋನದ ಶಿಕ್ಷಣ ನೀಡುವುದನ್ನು ಕಳೆದ ನಾಲ್ಕು ದಶಕಗಳಿಂದ ಮಾಡುತ್ತಿದ್ದೇವೆ. ಮೂರುವರೆ ದಶಕಗಳಿಂದ ನಡೆಸುತ್ತಿರುವ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಎಲ್ಲ ವಿದ್ಯಾರ್ಥಿಗಳೂ ಪಾಲ್ಗೊಳ್ಳುತ್ತಾರೆ. ಈ ಬಾರಿ 20 ವಿಶೇಷಚೇತನ ವಿದ್ಯಾರ್ಥಿಗಳೂ ಭಾಗವಹಿಸಲಿದ್ದಾರೆ. ಪ್ರತಿ ಬಾರಿಯೂ ರಾಜ್ಯ, ರಾಷ್ಟ್ರಮಟ್ಟದ ಗಣ್ಯರು ಆಗಮಿಸುವುದು ಇಲ್ಲಿನ ವಿಶೇಷ.…
ಬಂಟ್ವಾಳ :ಎಲ್ಲರಿಗೂ ಒಳಿತು ಮಾಡುವ ಧರ್ಮವೊಂದಿದ್ದಾರೆ ಅದು ಹಿಂದೂ ಧರ್ಮ, ವಿಶಾಲ ದೃಷ್ಟಿಕೋನವಿರುವ ಹಿಂದೂ ಸಮಾಜಕ್ಕೆ ಸಾವಿರಾರು ವರುಷಗಳ ಇತಿಹಾಸ ಇದೆ, ಶ್ರೀ ರಾಮನನ್ನು ಆದರ್ಶವಾಗಿಟ್ಟುಕೊಂಡು ಗ್ರಾಮ ವಿಕಾಸದ ಮೂಲಕ ರಾಮ ರಾಜ್ಯದ ಕನಸು ಸಾಕಾರಗೊಳಿಸೋಣ . ಈ ಪುಣ್ಯ ಭೂಮಿ ನಮ್ಮದು, ಇಲ್ಲಿ ಜಾತಿ, ವರ್ಣ, ಸಂಪತ್ತು ಇವೆಲ್ಲವನ್ನೂ ಮೀರಿ ನಿಂತು ನಮ್ಮ ಸಮಾಜವು ಇನ್ನಷ್ಟು ಬಲಗೊಳ್ಳಲು ಹಾಗೂ ಬದಲಾವಣೆಗೆ ಶನಿ ಪೂಜೆಯಂತ ಧಾರ್ಮಿಕ ಕಾರ್ಯಕ್ರಮಗಳು ಪ್ರೇರಣೆಯಾಗಲಿ ಶನಿ ದೇವರು ನಮ್ಮಲ್ಲಿರುವ ಕೆಡುಕನ್ನು ಅಳಿಸಿ ಒಳಿತನ್ನು ಮಾಡಲಿ, ಎಂದು ಆರ್ ಎಸ್ ಎಸ್ ಮುಖಂಡ ಡಾ ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.ಅವರು ಗ್ರಾಮ ವಿಕಾಸ ಪ್ರತಿಷ್ಠಾನ ಹಾಗೂ ಶನೈಶ್ಚರ ಪೂಜಾ ಸೇವಾ ಸಮಿತಿ ನೆತ್ತರಕೆರೆ ಇದರ ಆಶ್ರಯದಲ್ಲಿ ನ. 30ರಂದು ಶನಿವಾರ ಸಂಜೆ ನಡೆದ ಸಾಮೂಹಿಕ ಶನೈಶ್ಚರ ಪೂಜೆಯ ಪ್ರಯುಕ್ತ ನಡೆದ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಕಾರ್ಯಕ್ರಮ ಅಧ್ಯಕ್ಷತೆಯನ್ನು ದ. ಕ. ಜಿಲ್ಲಾ ಕೊಟ್ಟಾರಿ ಸಮಾಜದ ಸುಧಾರಕ ಸಂಘದ ಅಧ್ಯಕ್ಷ…
ಬಂಟ್ವಾಳ: ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ ಅಮಾವಾಸ್ಯೆಯ ಪ್ರಯುಕ್ತ ಡಿ.೧ರಂದು ಅಗೇಲು ಸೇವೆ ಮತ್ತು ಕೋಲ ಸೇವೆ ಇರುವುದಿಲ್ಲ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳದ “ದೀಪಾವಳಿ ಸಂಭ್ರಮ” ಕಾರ್ಯಕ್ರಮ ಲಯನ್ಸ್ ಸೇವಾ ಮಂದಿರದಲ್ಲಿ ಇತ್ತೀಚಿಗೆ ನಡೆಯಿತು.ತುಳಸಿ ಪೂಜೆ , ಲಕ್ಷ್ಮೀ ಪೂಜೆ , ಬಲೀಂದ್ರ ಪೂಜೆ ಹಾಗೂ ಗೋ ಪೂಜೆ ಮೊದಲಾದ ಕಾರ್ಯಕ್ರಮಗಳು ರಾಘವೇಂದ್ರ ಕಾರಂತ್ ನೇತೃತ್ವದಲ್ಲಿ ನಡೆಯಿತು. ಲಯನ್ಸ್ ಸದಸ್ಯರಿಗೆ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ, ರಂಗೋಲಿ ಸ್ಪರ್ಧೆ , ಮಕ್ಕಳಿಗೆ ಗೂಡುದೀಪ ಸ್ಪರ್ಧೆ ಮುಂತಾದವುಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲಾ ದೀಪಾವಳಿ ಮುಖ್ಯ ಸಂಯೋಜಕ ಲೋಕೇಶ್ ಉಳ್ಳಾಲ್ , ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಡಾ.ಎಂ ಹರ್ಷ ಸಂಪಿಗೆತ್ತಾಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ನಿಕಟಪೂರ್ವ ರೋಟರಿ ಸಹಾಯಕ ರಾಜ್ಯಪಾಲ ರಾಘವೇಂದ್ರ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ದೀಪಾವಳಿ ಹಬ್ಬ ಆಚರಣೆಯ ಮಹತ್ವ ತಿಳಿಸಿದರು. ಕಾರ್ಯಕ್ರಮದಲ್ಲಿ ಪೀಸ್ ಪೋಸ್ಟರ್ ಸ್ಪರ್ಧೆಯಲ್ಲಿ ವಿಜೇತ ಐದು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸೇವಾ ಕಾರ್ಯಕ್ರಮವಾಗಿ ರಾಯಿ ಲಕ್ಷ್ಮೀ ಕೋಡಿ ನಿವಾಸದ ಬಡ ಕುಟುಂಬದ ವಿದ್ಯಾರ್ಥಿನಿಗೆ…








