Author: admin

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಸಿರಿಮುಡಿ ಕಾಂಪ್ಲೆಕ್ಸ್ ನಲ್ಲಿ ಸ್ಟೈಲ್ ಲ್ಯಾಬ್ ಬ್ಯೂಟಿ ಪಾರ್ಲರ್ ಶುಭಾರಂಭಗೊಂಡಿತು. ವೈದ್ಯೆ ಡಾ. ತ್ರಿವೇಣಿ ಬ್ಯೂಟಿ ಪಾರ್ಲರ್ ಉದ್ಘಾಟಿಸಿದರು. ನಿವೃತ್ತ ಬಿಎಸ್ ಎಫ್ ಯೋಧ ಚಂದಪ್ಪ ಮೂಲ್ಯ ದೀಪ ಪ್ರಜ್ವಲಿಸಿದರು. ಕರಾವಳಿ ಕುಲಾಲ ಕುಂಬಾರ ಯುವವೇದಿಕೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಜಯಗಣೇಶ್ ಬಂಗೇರ ಮತ್ತಿತರರು ಗಣ್ಯರು ಭಾಗವಹಿಸಿದ್ದರು. ಸ್ಟೈಲ್ ಲ್ಯಾಬ್ ಬ್ಯೂಟಿ ಪಾರ್ಲರ್ ಮಾಲಕಿ ಶೋಭಾ ಜಯಪ್ರಕಾಶ್ ಕುಡುಮುನ್ನೂರು ಸ್ವಾಗತಿಸಿದರು, ಜಯಪ್ರಕಾಶ್ ಬಂಗೇರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Read More

ಬಂಟ್ಚಾಳ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ಆಶ್ರಯದಲ್ಲಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ಭಾನುವಾರ ನಡೆದ 18ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 6 ಜೋಡಿ ವಧು ವರರು ಧಾರ್ಮಿಕ ಪೂಜಾ ವಿಧಿ ವಿಧಾನಗಳೊಂದಿಗೆ ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು.ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಧರ್ಮಸ್ಥಳ ಕ್ಷೇತ್ರವನ್ನು ಹೊರತು ಪಡಿಸಿ ದ.ಕ. ಜಿಲ್ಲೆಯಲ್ಲಿ ಅತೀ ಹೆಚ್ಚು ಜೋಡಿಗೆ ಮದುವೆ ಭಾಗ್ಯ ಕರುಣಿಸಿದ ಹೆಗ್ಗಳಿಕೆ ತುಂಗಪ್ಪ ಬಂಗೇರ ಅವರಿಗೆ ಸಲ್ಲುತ್ತದೆ. ಐನ್ನೂರಕ್ಕಿಂತಲೂ ಅಧಿಕ ಜೋಡಿಗೆ ಮದುವೆ ಮಾಡಿರುವುದು ಶ್ರೇಷ್ಠ ಕೆಲಸ, ಇದನ್ನು ನಿರಂತರವಾಗಿ ಮುಂದುವರೆಸಿ ಎಂದು ಶುಭ ಹಾರೈಸಿದರು.ಕಾರ್ಯಕ್ರಮವನ್ನು ರಾಜ್ಯ ಧಾರ್ಮಿಕ ಪರಿಷತ್ತಿನ ವಿಶೇಷ ಆಹ್ವಾನಿತರಾದ ರವಿಶಂಕರ್ ಶೆಟ್ಟಿ ಬಡಾಜೆಗುತ್ತು ಉದ್ಘಾಟಿಸಿದರು. ಅವರು ಮಾತನಾಡಿ ಆರ್ಥಿಕವಾಗಿ ಸ್ಥಿತಿವಂತನಲ್ಲದಿದ್ದರೂ ಪ್ರತೀ ವರ್ಷ ನೂತನ ಜೋಡಿಗಳಿಗೆ ಮದುವೆ ಮಾಡಿಸುವ ತುಂಗಪ್ಪ ಬಂಗೇರ ಅವರ ಸೇವಾ ಕಾರ್ಯ ಆದರ್ಶವಾದುದು…

Read More

ಬಂಟ್ವಾಳ: ಲಯನ್ಸ್ ಮತ್ತು ಲಿಯೋ ಕ್ಲಬ್ ಕೊಳ್ನಾಡು ಸಾಲೆತ್ತೂರು ಲಯನ್ಸ್ ಕ್ಲಬ್ ಅಮ್ಟೂರು ಇಲ್ಲಿಗೆ ಲಯನ್ಸ್ ಜಿಲ್ಲಾ ಗವರ್ನರ್‌ ಲಯನ್ ಕುಡ್ಪಿ ಅರವಿಂದ ಶೆಣೈ ಅವರ ಅಧಿಕೃತ ಭೇಟಿ ಕಾರ್ಯಕ್ರಮ ಮಂಚಿಯ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಜಿಲ್ಲಾ ಗವರ್ನರ್ ಲಯನ್ ಕುಡ್ಪಿ ಅರವಿಂದ ಶೆಣೈ ಮಾತನಾಡಿ ಲಯನ್ಸ್ ಸಂಸ್ಥೆ ಅಮೇರಿಕಾದಲ್ಲಿ ಹುಟ್ಟಿದರೂ ಇಂದು ಭಾರತದಲ್ಲಿ ಅದರ ಸದಸ್ಯತನ ಹೆಚ್ಚಾಗುತ್ತಿದೆ. ಜಾಗತಿಕ ಸಂಸ್ಥೆಯಲ್ಲಿ ಭಾರತದ ಸದಸ್ಯತನ ನಂಬರ್ 1 ಆಗಿರುವುದು ನಮೆಗೆಲ್ಲರಿಗೂ ಹೆಮ್ಮೆ ಎಂದರು. ಹಿರಿಯ ಕ್ಲಬ್ ಆಗಿರುವ ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರಿನಿಂದ ಜಿಲ್ಲಾ ಗವರ್ನರ್ ಅಭ್ಯರ್ಥಿ ಮೂಡಿ ಬರಲಿ ಎಂದು ಆಶಿಸಿದರು. ಅಮ್ಟೂರು ಲಯನ್ಸ್ ಕ್ಲಬ್ ಕಡಿಮೆ ಅವಧಿಯಲ್ಲಿ ಉತ್ತಮ ಸೇವೆ ನೀಡಿ ಲಯನ್ಸ್ ಜಿಲ್ಲೆಗೆ ಉತ್ತಮ ಹೆಸರು ತಂದಿದೆ ಎಂದರು. ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರಿನ ಕಾರ್ಯದರ್ಶಿ ಬಾಲಕೃಷ್ಣ ಸೆರ್ಕಳ ಹಾಗೂ ಅಮ್ಟೂರು ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ಫ್ರಾನ್ಸಿಸ್ ಪ್ರವೀಣ್ ಕ್ರಾಸ್ತ ವರದಿ ವಾಚಿಸಿದರು. ಈ…

Read More

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಸಾಯಿ ಕಿಡ್ ಝೋನ್ ವಿದ್ಯಾಸಂಸ್ಥೆಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಹಾಗೂ ಶಾಲೆಯ ರಕ್ಷಕ ಶಿಕ್ಷಕ ಸಂಘದ ಸಹಯೋಗದೊಂದಿಗೆ ಆರ್ಟ್ ಮತ್ತು ಕ್ರಾಫ್ಟ್ ಪ್ರದರ್ಶನ ಮತ್ತು ಕಿಡ್ ಝೋನ್ ಪುಡ್ ಫೆಸ್ಟಿವಲ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ ಲೋಕೇಶ್ ಸುವರ್ಣ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ನ ವಲಯ ಸೇನಾನಿ ಪ್ರಕಾಶ್ ಬಾಳಿಗ, ನಿವೃತ್ತ ಚಿತ್ರಕಲಾ ಶಿಕ್ಷಕ ಚೆನ್ನಕೇಶವ ಡಿ.ಆರ್. , ರೋಟರಿ ಕ್ಲಬ್ ಬಂಟ್ವಾಳ ದ ಕಾರ್ಯದರ್ಶಿ ಮಹಮ್ಮದ್ ಯಾಸೀರ್, ಪ್ರಮುಖರಾದ ಜಯಪ್ರಕಾಶ್ ಜೆ.ಎಸ್., ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ತೇಜಸ್ವಿನಿ ಪೂಜಾರಿ, ಶಾಲಾ ಆಡಳಿತ ಮಂಡಳಿ ಸದಸ್ಯೆ ಆರತಿ ಅಮೀನ್, ಭಾಗವಹಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕ ಐತಪ್ಪ ಪೂಜಾರಿ ವಹಿಸಿಕೊಂಡು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಚೈತ್ರ ವಂದಿಸಿದರು. ಶಿಕ್ಷಕಿಯರಾದ ಪುಷ್ಪಲತಾ, ರಂಜಿನಿ, ಗೀತಾ ಹಾಗೂ ದಿವ್ಯ ಸಹಕರಿಸಿದರು.

Read More

ಬಂಟ್ವಾಳ: ಬಿಜೆಪಿ ದ.ಕ.‌ಜಿಲ್ಲಾ ಓಬಿಸಿ ಮೋರ್ಚಾದ ಉಪಾಧ್ಯಕ್ಷರಾಗಿ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಆಯ್ಕೆಯಾಗಿದ್ದಾರೆ. ಕಳೆದ 25 ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ವಿಟ್ಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಹಕಾರಿ ಪ್ರಕೋಷ್ಠದ ಸಂಚಾಲಕನಾಗಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ, ಜಿಲ್ಲಾ ಓಬಿಸಿ ಮೋರ್ಚಾದ ಉಪಾಧ್ಯಕ್ಷನಾಗಿ, ನರಿಕೊಂಬು ಗ್ರಾಮ ಪಂಚಾಯತಿ ನ ಸದಸ್ಯನಾಗಿ , ಪ್ರಸ್ತುತ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ. ತನ್ನನ್ನು ತಾನು ಸಕ್ರಿಯವಾಗಿ ಪಕ್ಷದಲ್ಲಿ ತೊಡಗಿಸಿಕೊಂಡಿರುವ ಇವರ ನಿಷ್ಠೆ ಹಾಗೂ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಈ ನೇಮಕಾತಿಯನ್ನು ಮಾಡಿದ್ದಾರೆ.

Read More

ಬಂಟ್ವಾಳ: ಕ್ಷಯರೋಗಿಗಳನ್ನು ಗುರುತಿಸಿ ಅವರಿಗೆ ಪೌಷ್ಟಿಕಾಹಾರ ನೀಡುವುದರ ಜೊತೆಗೆ ವೈದ್ಯಕೀಯ ನೆರವು ನೀಡುತ್ತಿರುವ ಸೇವಾಂಜಲಿ ಪ್ರತಿಷ್ಠಾನದ ಕಾರ್ಯ ದೇವರು ಮೆಚ್ಚುವ ಕೆಲಸ ಹಾಗೂ ಪ್ರಧಾನ ಮಂತ್ರಿಯವರ ಸಂಕಲ್ಪಕ್ಕೆ ಶಕ್ತಿ ತುಂಬುವ ಕಾರ್ಯ ಎಂದು ಸಂಸದ ಕ್ಯಾ ಬೃಜೇಶ್ ಚೌಟ ಹೇಳಿದರು. ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಸೇವಾಂಜಲಿ ಸಭಾಗ್ರಹದಲ್ಲಿ ಕ್ಷಯ ರೋಗಿಗಳಿಗೆ ಆಹಾರ ದವಸಧಾನ್ಯ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕ್ಷಯಮುಕ್ತ ಭಾರತ ನಿರ್ಮಾಣ ಪ್ರಧಾನಿಯವರ ಕನಸಾಗಿದೆ. ಪೌಷ್ಟಿಕಾಂಶದ ಕೊರತೆಯಿಂದ ಕ್ಷಯ ರೋಗ ಉಲ್ಭಣಿಸುವುದರಿಂದ ಸಂಘ ಸಂಸ್ಥೆಗಳ ಸಹಕಾರದ ಮೂಲಕ ನಿಕ್ಷಯ್ ಮಿತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ರೋಗಿಗೆ ಜಾಗೃತಿ ಹಾಗೂ ಆರೋಗ್ಯ ಮಾಹಿತಿ ನೀಡುವುದರ ಜೊತೆಗೆ ಮಾನಸಿಕ ಸ್ಥೈರ್ಯ ತುಂಬುವ ಕಾರ್ಯವೂ ಆಗಬೇಕಾಗಿದೆ‌. ಈ ಕಾರ್ಯ ಯಶಸ್ಬಿಯಾಗಬೇಕಾದರೆ ಸಮುದಾಯದ ಸಹಕಾರವೂ ಅಗತ್ಯವಾಗಿದೆ ಎಂದು ತಿಳಿಸಿದ ಅವರು ಸೇವಾಂಜಲಿಯ ಈ ಮಾದರಿ ಸೇವಾ ಕಾರ್ಯವನ್ನು ಇತರ ಸಂಘ ಸಂಸ್ಥೆಗಳು ಅನುಸರಿಸಿದರೆ ನಮ್ಮ‌ಜಿಲ್ಲೆಯನ್ನು ಕ್ಷಯಮುಕ್ತವನ್ನಾಗಿ ಮಾಡಲು…

Read More

ಬಂಟ್ವಾಳ: ಕಟಪಾಡಿ –ಉಳ್ಳಾಲ ಅಬ್ಬಕ್ಕ ಸರ್ಕಲ್ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಲು ತಾ.ಪಂ. ಮಾಜಿ ಸದಸ್ಯ ಪ್ರಭಾಕರ ಪ್ರಭು ಮಂಗಳೂರು ಸಂಸದ ಬೃಜೇಶ್ ಚೌಟ, ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅವರಿಗೆ ಮನವಿ ಮಾಡಿದ್ದಾರೆ. ಕಟಪಾಡಿ –ಉಳ್ಳಾಲ ಅಬ್ಬಕ್ಕ ಸರ್ಕಲ್ ರಸ್ತೆಯು (ಎಸ್ .ಎಚ್ 300) ರಾಜ್ಯ ಹೆದ್ದಾರಿಯಾಗಿದ್ದು ಕಟಪಾಡಿಯಿಂದ ಪ್ರಾರಂಭಗೊಂಡು ಕಾರ್ಕಳ ಮಾರ್ಗವಾಗಿ ಮೂಡಬಿದ್ರಿ ,ಸಿದ್ದಕಟ್ಟೆ,ಬಂಟ್ವಾಳ ಮಾರ್ಗವಾಗಿ ಮೆಲ್ಕಾರ್ , ಮುಡಿಪು ಮೂಲಕ ಉಳ್ಳಾಲ ಅಬ್ಬಕ್ಕ ಸರ್ಕಲ್ ವರೆಗಿನ ರಾಜ್ಯ ಹೆದ್ದಾರಿಯಲ್ಲಿ ದಿನಂಪ್ರತಿ ಲಕ್ಷಾಂತರ ವಾಹನಗಳು ಸಂಚರಿಸುತ್ತಿದ್ದು ರಸ್ತೆಯು ಅಲ್ಲಲ್ಲಿ ತಿರುವುಗಳಿಂದ ಕೂಡಿದ್ದು ವಾಹನಗಳ ಸಂಚಾರಕ್ಕೆ ಬೇಕಾದಷ್ಟು ಅಗಲೀಕರಣ ಇರುವುದಿಲ್ಲ . ಈ ರಸ್ತೆಯು ಈ ಹಿಂದೆ ಎರಡು ಬಾರಿ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸುವ ಕುರಿತು ಕೇಂದ್ರ ಸಚಿವರಾದ ನಿತಿನ್ ಗಡ್ಕರಿಯಿಂದಲೂ ಘೋಷಣೆಗೊಂಡು ಶಂಕು ಸ್ಥಾಪನೆ ಸಹ ಆಗಿರುತ್ತದೆ ಎಂದು ತಿಳಿದು ಬಂದಿದೆ. ಬಳಿಕ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಆಸಕ್ತಿ ವಹಿಸದೇ…

Read More

ಬಂಟ್ವಾಳ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ವತಿಯಿಂದ 18ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ಹಾಗೂ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾ.8 ರಂದು ರವಿವಾರ ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ನಡೆಯಲಿದೆ. ಬೆಳಿಗ್ಗೆ 9ಕ್ಕೆ ವಧು-ವರರ ಭವ್ಯ ಮೆರವಣಿಗೆ ನಡೆಯಲಿದೆ. 18ನೇ ವರ್ಷದ ಮದುವೆ ದಿಬ್ಬಣಕ್ಕೆ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ನಿವೃತ್ತ ಬ್ಯಾಂಕ್ ಮ್ಯಾನೇಜರ್ ಚಂದ್ರಹಾಸ ಶೆಟ್ಟಿ ಮಜಲೋಡಿ, ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಷನ್ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ ಮತ್ತಿತರ ಗಣ್ಯರು ಚಾಲನೆ ನೀಡುವರು. ರಾಜ್ಯ ಧಾರ್ಮಿಕ ಪರಿಷತ್ ವಿಶೇಷ ಆಹ್ವಾನಿತ ಸದಸ್ಯ ರವಿಶಂಕರ್ ಸಮಾರಂಭ ಉದ್ಘಾಟಿಸುವರು, ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸುವರು, ಸಂಸದ ಬ್ರಿಜೇಶ್ ಚೌಟ ರಾಜ್ಯ ಪ್ರಶಸ್ತಿ ಪ್ರದಾನ ಮಾಡುವರು, ಉದ್ಯಮಿ ಅಬ್ದುಲ್ ಕುಂಞ ಹಾಗೂ ಪಿಲಾತಬೆಟ್ಟು ವ್ಯವಸಾಯ ಸೇವಾಸ ಹಕಾರಿ ಬ್ಯಾಂಕಿನ ಮಾಜಿ ಅಧ್ಯಕ್ಷ ಯು.ಎಸ್. ಚಂದ್ರಶೇಖರ್ ಭಟ್ ಮಂಗಲ…

Read More

ಬಂಟ್ವಾಳ: ಈ ವರ್ಷ ಬೇಸಿಗೆ ಅವಧಿ ಹೆಚ್ಚಾಗಿ, ಮಳೆ ತಡವಾಗುವ ಸಾಧ್ಯತೆಯಿರುವುದರಿಂದ ಜೂನ್ ತಿಂಗಳವರೆಗೆ ನೀರಿನ ಲಭ್ಯತೆಯನ್ನು ಕಾಯ್ದಿರಿಸುವುದು ಅತೀ ಮುಖ್ಯವಾಗಿದೆ. ಮುಂದಿನ ೪ ತಿಂಗಳವರೆಗೆ ನೀರಿನ ಶೇಖರಣೆಯನ್ನು ಕಾಯ್ದುಕೊಳ್ಳುವುದರ ಜೊತೆಗೆ ಮಂಗಳೂರು ನಗರಕ್ಕೆ ನೀರಿನ ಕೊರತೆಯಾಗದಂತೆ ನೋಡಿಕೊಳ್ಳುವುದು ಅತೀ ಅವಶ್ಯಕ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡುವುದರ ಜೊತೆಗೆ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ತುಂಬೆ ವೆಂಟೆಡ್ ಡ್ಯಾಂನಲ್ಲಿ ಬುಧವಾರ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿ, ಬಳಿಕ ಗಂಗಾಪೂಜೆಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ತುಂಬೆ ವೆಂಟೆಡ್ ಡ್ಯಾಂ ಮತ್ತು ಎಎಂಆರ್ ಡ್ಯಾಂನಲ್ಲಿ ಸಾಕಷ್ಟು ನೀರಿನ ಸಂಗ್ರಹಣೆಯಿದೆ. ಈ ವರ್ಷ ನೀರಿನ ಹಾಹಾಕಾರ ಬಾರದಿರಲಿ ಎಂದು ಗಂಗಾದೇವಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭ ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಹರೀಶ್ ಕುಮಾರ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಾಜಿ ಸಚಿವ ಬಿ.ರಮಾನಾಥ ರೈ, ಮನಪ್ತಾಯುಕ್ತ ರವಿಚಂದ್ರ…

Read More

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ಬಿ.ಮೋಹನ್ ಆಯ್ಕೆಯಾಗಿದ್ದಾರೆ. ತ್ರೈವಾರ್ಷಿಕ ಮಹಾಸಭೆಯು ಶ್ರೀ ರಕ್ತೇಶ್ವರಿದೇವಿ ಸನ್ನಿಧಿ ವಠಾರದಲ್ಲಿ ಬ.ವಿಶ್ವನಾಥ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಮುಂದಿನ ಮೂರು ವರ್ಷದಅವಧಿಗೆ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸೇವಾ ಸಮಿತಿ ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಎನ್.ಶಿವಶಂಕರ್, ಕೋಶಾಧಿಕಾರಿಯಾಗಿ ರಾಜೇಶ್.ಎಲ್.ನಾಯಕ್, ಜತೆ ಕಾರ್ಯದರ್ಶಿಯಾಗಿ ಸತೀಶ್‌ಕುಮಾರ್ ಆಯ್ಕೆಯಾಗಿದ್ದಾರೆ. ಇತರಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Read More