Author: admin
ಬಂಟ್ವಾಳ: ಭಾರತವನ್ನು ಬೆಳಗಿಸುವ ಅಪೂರ್ವವಾದ ಗೀತೆ ವಂದೆ ಮಾತರಂ. ಇತಿಹಾಸದ ಹಿನ್ನಲೆಯಲ್ಲಿ ನಾವು ರಾಷ್ಟಕಟ್ಟಬೇಕು. ರಾಷ್ಟ್ರಕಟ್ಟಲು ನಾವು ಯಾಕೆ ಸೋತೆವೆಂದರೆ ನಾವು ಇತಿಹಾಸವನ್ನು ಮರೆತಿದ್ದೇವೆ. ಇತಿಹಾಸ ಬರೆಯುವುದಕ್ಕಿಂತ ಇತಿಹಾಸ ನಿರ್ಮಿಸಬೇಕು. ಬಂಕಿಮಚಂದ್ರರು ಅದ್ಭುತವಾದ ಗೀತೆ ಬರೆದು ಇತಿಹಾಸ ಸೃಷ್ಟಿಸಿದರು ಎಂದು ಮುಕ್ಕ ಶ್ರೀನಿವಾಸ ಯುನಿವರ್ಸಿಟಿಯ ಸಂಸ್ಕೃತ ವಿಭಾಗದ ಸಂಶೋಧನಾ ಮಾರ್ಗದರ್ಶಕ ಡಾ. ಸೋಂದಾ ಭಾಸ್ಕರ ಭಟ್ ಹೇಳಿದರು. ಬಿ. ಸಿ.ರೋಡಿನ ಶಮ್ಯಾಪ್ರಾಸದಲ್ಲಿ ನಡೆದ ಸರಿದಂತರ ಗೌರವ ಪುರಸ್ಕಾರ ಸಮಾರಂಭದಲ್ಲಿ ಭಾರತದ ಆತ್ಮಶಕ್ತಿ ವಂದೇ ಮಾತರಂ ಎನ್ನುವ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಬಿ.ಸಿ.ರೋಡಿನ ವೈದ್ಯ ಡಾ. ಸತ್ಯಶಂಕರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮಾಜ ಸೇವೆ ಮಾಡುವರಿಗೆ ಕುಹಕದ ಮಾತುಗಳು ಸಾಮಾನ್ಯ ಅವುಗಳನ್ನು ಎದುರಿಕೊಂಡು ಮುನ್ನಡೆಯುವುದೇ ನಿಜವಾದ ಸಾಧನೆ ಎಂದರು. ಕನ್ಯಾನ ಭಾರತ ಸೇವಾಶ್ರಮದ ಕಾರ್ಯದರ್ಶಿ ಎಸ್. ಈಶ್ವರ ಭಟ್ ಅವರಿಗೆ ಸರಿದಂತರ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು. ಸರಿದಂತರ ಪ್ರಕಾಶನದ ಸಂಚಾಲಕ ಪ್ರೊ.ರಾಜಮಣಿ ರಾಮಕುಂಜ ಸ್ವಾಗತಿಸಿ, ಪ್ರಸ್ತಾವಿಕ…
ಬಂಟ್ವಾಳ: ಕುರಿಯಾಳ ಗ್ರಾಮದ ದುರ್ಗಾನಗರ ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರದ ವಾರ್ಷಿಕೋತ್ಸವ ಡಿ.26ರಂದು ಶುಕ್ರವಾರ ನಡೆಯಿತು. ಅಂದು ಬೆಳಿಗ್ಗೆ 5ಕ್ಕೆ ಸಾಮೂಹಿಕ ಪ್ರಾರ್ಥನೆ ನಡೆದು ಗಣಹೋಮ, ಬಳಿಕ ಸೂರ್ಯೋದಯದಿಂದ ಸೂರ್ಯೋಸ್ತದವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಿತು. ಬೆಳಿಗ್ಗೆ 10 ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, 11ರಿಂದ ನಾಗದೇವರಿಗೆ ನಾಗತಂಬಿಲ, ಆಶೇಷಬಲಿ, ಮಹಾಪೂಜೆ, ಮಧ್ಯಾಹ್ನ 12.30ಕ್ಕೆ ಶ್ರೀ ಓಂಕಾರೇಶ್ವರಿ ದೇವಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಜೆ 6.30ಕ್ಕೆ ಭಜನಾ ಸಂಕೀರ್ತನೆಯ ಭಜನಾ ಮಂಗಳ, 7.30ರಿಂದ 8.30ರವರೆಗೆ ಭಜನೆ ರಾತ್ರಿ 8.30ಕ್ಕೆ ಓಂಕಾರೇಶ್ವರಿ ದೇವಿಗೆ ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ರಾತ್ರಿ 9.30ಕ್ಕೆ ಭಗವತಿ ಪ್ರಸಾದಿತ ದಶಾವತರ ಯಕ್ಷಗಾನ ಮಂಡಳಿ ಸಸಿಹಿತ್ಲು ಇವರಿಂದ ಸೋಣ ಸಂಕ್ರಾಂತಿ ಎಂಬ ಬಯಲಾಟ ನಡೆಯಿತು ಈ ಸಂದರ್ಭದಲ್ಲಿ ಪ್ರಸಂಗ ಕರ್ತ ವಸಂತ ಬಂಟ್ವಾಳ ಹಾಗೂ ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರದ ಮಹಾದಾನಿ…
ಬಂಟ್ವಾಳ: ಮೈಸೂರು ವಿಭಾಗ ಮಟ್ಟದ ಜೂಡೋ ಸ್ಪರ್ಧೆ-2025ರಲ್ಲಿ ಬಂಟ್ವಾಳ ತಾಲೂಕಿನ ಗ್ರಾಮೀಣ ಪ್ರದೇಶವಾದ ನೆತ್ತರೆಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ 13 ಮಂದಿ ವಿದ್ಯಾರ್ಥಿಗಳು ಬಹುಮಾನ ಗೆಲ್ಲುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಆರುಷಿ (-36), _ಗೀತೇಶ್ (-50), ಹಂಸಿಕಾ(-40) ಯಶ್ವಿನಿ (-44), ಭೂಮಿಕಾ(-28), ನಿಧಿನ್(-25), ವೇದಾಂತ್ (-30) ಯಕ್ಷಿತ್ (-30) ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡರೆ, ದೆನಿಕಾ -20), ಅನುಶ್ರೀ (-44), ಆರೋಧ್ಯ (-36), ಶೈಲೇಶ್ (-35), ದ್ವೀತಿಯ ಸ್ಥಾನದೊಂದಿಗೆ ಬೆಳ್ಳಿಯ ಪದಕ, ಭುವಿಶ್ (-25) ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದಕೊಂಡಿದ್ದಾರೆ. ಡಾ.ಎ.ಸಿ.ಮುನಿವೆಂಕಟೇಶ ಗೌಡ ಚಾರಿಟೇಬಲ್ ಟ್ರಸ್ಟ್ ಹಾಸನ, ಆಶ್ರಯ ಸೆಂಟರ್ ಫಾರ್ ಟ್ರಾನ್ಸ್ ಫರ್ಮೇಶನ್ ಬೆಂಗಳೂರು ಮತ್ತು ಹಾಸನ ಜಿಲ್ಲಾ ಅಮೆಚೂರು ಜೂಡೋ ಸಂಸ್ಥೆ, ಹಾಸನ ಜಿಲ್ಲಾ ಅಮೆಚೂರು ಬಾಡಿಬಿಲ್ಡರ್ ಸಂಸ್ಥೆ, ಹಾಸನ ಜಿಲ್ಲಾ ಕ್ರೀಡಾ ಪರಿಷತ್ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಎ.ಸಿ.ಎಂ.ಅವರ ಜನ್ಮದಿನದ ಪ್ರಯುಕ್ತ ಜೂಡೋ ಸ್ಫರ್ಧೆ…
ಬಂಟ್ವಾಳ: ರಾರಾಸಂ ಫೌಂಡೇಶನ್ ಬಂಟ್ವಾಳ ಇದರ ವತಿಯಿಂದ 15ನೇ ವರ್ಷದ ಸಾಂಸ್ಕೃತಿಕ ಕಲರವ “ರಾರಾಸಂಭ್ರಮ-25” ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಗುರುವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಲೋಕಾಯುಕ್ತ ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ ಬೆಳಿಗ್ಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಯುವವಾಹಿನಿ ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ, ಜೆಸಿಐ ಮಡಂತ್ಯಾರಿನ ಅಧ್ಯಕ್ಷೆ ಸಾಯಿಸುಮ ನಾವಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಾಜಿ ಸಚಿವರಾದ ಬಿ. ರಮಾನಾಥ ರೈ ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭಹಾರೈಸಿದರು. ಬಳಿಕ ನಡೆದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ನೂರಾರು ಸ್ಪರ್ಧಾಳುಗಳು ಉತ್ಸುಕತೆಯಿಂದ ಭಾಗವಹಿಸಿದ್ದರಿಂದ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ಬಂತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬಂ.ತಾ. ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಆರ್. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಪುರಂದರ ಎ., ಲಯನ್ಸ್ ಪೂರ್ವಾಧ್ಯಕ್ಷ ಜಯಂತ ಶೆಟ್ಟಿ, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಎಂ. ರೋಹಿತಾಶ್ವ, ಸುಧೀರ್…
ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಜಂಕ್ಷನ್ ನಲ್ಲಿರುವ ಸಿರಿಮುಡಿ ಕಾಂಪ್ಕೆಕ್ಸ್ ನಲ್ಲಿ ಜಯಶಂಕರ್ ಕಾನ್ಸಲೆ ಹಾಗೂ ಝಾಕೀರ್ ನಂದಾವರ ಮಾಲಕತ್ವದ ಜಝ್ ಕಾರ್ಸ್ ಎನ್ನುವ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ ಮತ್ತು ಲ್ಯಾಂಡ್ ಲಿಂಕ್ಸ್ ಸಂಸ್ಥೆ ಶುಭಾರಂಭಗೊಂಡಿತು. ಕಿಸ್ ಮಸ್ ಶುಭದಿನದಂದು ಸರ್ವಧರ್ಮಗಳ ಗ್ರಂಥಗಳಾದ ಭಗವದ್ಗೀತೆ, ಕುರಾನ್, ಬೈಬಲ್ ಗಳನ್ನು ಇಟ್ಟು ಎಳೆಯ ಮಕ್ಕಳು ಬಲೂನನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಬಳಿಕ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ವಿಠಲ ಬೆಳ್ಚಾಡ ಮತ್ತಿತರರು ರಿಬ್ಬನ್ ಕತ್ತರಿಸಿ, ಬಳಿಕ ದೀಪ ಪ್ರಜ್ವಲಿಸಿ ನೂತನ ಸಂಸ್ಥೆಗೆ ಚಾಲನೆ ನೀಡಿ ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ಪಾಲುದಾರರಾದ ಜಯಶಂಕರ್ ಕಾನ್ಸಲೆ ಹಾಗೂ ಝಾಕೀರ್ ನಂದಾವರ ಮಾತನಾಡಿ ಸರ್ವಧರ್ಮದ ಗ್ರಾಹಕರ ಅನುಕೂಲಕ್ಕಾಗಿ ಮಾರ್ನಬೈಲಿನಲ್ಲಿ ಜಝ್ ಕಾರ್ಸ್ ಸಂಸ್ಥೆಯನ್ನು ಆರಂಭಿಸಿದ್ದೇವೆ. ಇಲ್ಲಿ ಗ್ರಾಹಕರಿಗೆ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ, ಲ್ಯಾಂಡ್ ಲಿಂಕ್ಸ್, ವಾಹನ ಇನ್ಶುರೆನ್ಸ್, ಕಾರು ಲೋನ್ ವ್ಯವಸ್ಥೆ, ಡ್ರೈವಿಂಗ್ ಲೈಸೆನ್ಸ್,…
ಬಂಟ್ವಾಳ: ಸಜೀಪಮೂಡ ಗ್ರಾಮದ ಸುಭಾಷ್ ನಗರ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ಇದರ 2025/26-2027ನೇ ಸಾಲಿನ ನೂತನ ಅಧ್ಯಕ್ಷರಾಗಿ ಮೋಹನ್ ದಾಸ್ ಪೂಜಾರಿ ಬೊಳ್ಳಾಯಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಮಿತಿಯ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಗೌರವಧ್ಯಕ್ಷರಾಗಿ ಸಂಜೀವ ಪೂಜಾರಿ ಕುಚ್ಚಿಗುಡ್ಡೆ, ಉಪಾಧ್ಯಕ್ಷರಾಗಿ ದಾಮೋದರ್ ಪೂಜಾರಿ ಮಾರ್ನಬೈಲ್, ಕಾರ್ಯದರ್ಶಿಯಾಗಿ ಜಗದೀಶ್ ಪೂಜಾರಿ ಕಾರಾಜೆ, ಜತೆ ಕಾರ್ಯದರ್ಶಿಯಾಗಿ ವಿಜಯ್ ಗುರುಮಂದಿರ, ಕೋಶಾಧಿಕಾರಿಯಾಗಿ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರಮೋದ್ ಅಂಚನ್ ಸಾನದಮನೆ, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಪೂಜಾರಿ ಪಂಬೈಲ್ ಮತ್ತು ನವೀನ್ ಕಾರಾಜೆ. ಲೆಕ್ಕ ಪರಿಶೋಧಕರಾಗಿ ರಾಮಕೃಷ್ಣ ಮಿತ್ತಮಜಲು, ಸಾಂಸ್ಕೃತಿಕ ನಿರ್ದೇಶಕರಾಗಿ ಲೋಕೇಶ್ ಪೂಜಾರಿ ಸುಭಾಷ್ ನಗರ, ಆರೋಗ್ಯ ನಿರ್ದೇಶಕರಾಗಿ ಮಹೇಶ್ ಪೂಜಾರಿ ಬೊಳ್ಳಾಯಿ, ಭಜನಾ ಅಧ್ಯಕ್ಷರಾಗಿ ಪ್ರವೀಣ್ ಮುತ್ತುಕೃಷ್ಣ, ಭಜನಾ ಉಪಾಧ್ಯಕ್ಷರಾಗಿ ಸಂತೋಷ್ ಕೋಟ್ಯಾನ್ ದಾಸರಗುಡ್ಡೆ, ಭಜನಾ ಕಾರ್ಯದರ್ಶಿಯಾಗಿ ರಾಕೇಶ್ ಗುರುಮಂದಿರ, ಭಜನಾ ಜತೆ ಕಾರ್ಯದರ್ಶಿ ಲಕ್ಷ್ಮೀಶ ಅಗರಿ ಆಯ್ಕೆಯಾದರು.
ಬಂಟ್ವಾಳ: ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಇಂಡೋರ್ ಸ್ಟೇಡಿಯಂನಲ್ಲಿ ಜರುಗಿದ 21ನೇ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ 14 ವರ್ಷದ ಬಾಲಕಿಯರ ವಿಭಾಗದ ಆಲ್ ಇಂಡಿಯಾ ಓಪನ್ ವಿಭಾಗದ ಕರಾಟೆಯ ಕಟಾ ವಿಭಾಗದಲ್ಲಿ ಪೂರ್ವಿ ಜೆ, ಬಂಗೇರ ದಾಸಕೋಡಿ ಪ್ರಥಮ ಸ್ಥಾನ, ಹಾಗೂ ಕುಮಿತೆ ಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಬೊಂಡಾಲ ಶ್ರೀ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆ ಯ 9ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು ಜಯ ಗಣೇಶ್ ಬಂಗೇರ ದಾಸಕೋಡಿ ಮತ್ತು ಜಯಶ್ರೀ ಜೆ ಬಂಗೇರ ಇವರ ಪುತ್ರಿ. ಸಮೀಕ್ಷಾ ಇವರಲ್ಲಿ ಕರಾಟೆ ತರಬೇತಿಯನ್ನು ಪಡೆಯುತ್ತಿದ್ದಾರೆ. — —
ಬಂಟ್ವಾಳ: ಕುರಿಯಾಳ ಗ್ರಾಮದ ದುರ್ಗಾನಗರ ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರದ ವಾರ್ಷಿಕೋತ್ಸವ ಡಿ.26ರಂದು ಶುಕ್ರವಾರ ನಡೆಯಲಿದೆ. ಅಂದು ಬೆಳಿಗ್ಗೆ 5ಕ್ಕೆ ಸಾಮೂಹಿಕ ಪ್ರಾರ್ಥನೆ ನಡೆದು ಗಣಹೋಮ, ಬಳಿಕ ಸೂರ್ಯೋದಯದಿಂದ ಸೂರ್ಯೋಸ್ತದವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಬೆಳಿಗ್ಗೆ 10 ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, 11ರಿಂದ ನಾಗದೇವರಿಗೆ ನಾಗತಂಬಿಲ, ಆಶೇಷಬಲಿ, ಮಹಾಪೂಜೆ, ಮಧ್ಯಾಹ್ನ 12.30ಕ್ಕೆ ಶ್ರೀ ಓಂಕಾರೇಶ್ವರಿ ದೇವಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30ಕ್ಕೆ ಭಜನಾ ಸಂಕೀರ್ತನೆಯ ಭಜನಾ ಮಂಗಳ, 7.30ರಿಂದ 8.30ರವರೆಗೆ ಭಜನೆ ನಡೆದು ರಾತ್ರಿ 8.30ಕ್ಕೆ ಓಂಕಾರೇಶ್ವರಿ ದೇವಿಗೆ ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 9.30ಕ್ಕೆ ಭಗವತಿ ಪ್ರಸಾದಿತ ದಶಾವತರ ಯಕ್ಷಗಾನ ಮಂಡಳಿ ಸಸಿಹಿತ್ಲು ಇವರಿಂದ ಸೋಣ ಸಂಕ್ರಾಂತಿ ಎಂಬ ಪ್ರಸಂಗ ಬಯಲಾಟ ನಡೆಯಲಿದೆ.
ಬಂಟ್ವಾಳ: ರಾರಾಸಂ ಫೌಂಡೇಶನ್ ಬಂಟ್ವಾಳ ಇದರ ವತಿಯಿಂದ 15 ನೇ ವರ್ಷದ ಸಾಂಸ್ಕೃತಿಕ ಕಲರವ ರಾರಾಸಂಭ್ರಮ ಡಿ.25 ರಂದು ಗುರುವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಮಾಜಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸುವರು, ಅತಿಥಿಗಳಾಗಿ ಲೋಕಾಯುಕ್ತ ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ನಿವೃತ್ತ ಮುಖ್ಯ ಶಿಕ್ಷಕ ಸಂಜೀವ ಎಚ್. ಪೆರಾಜೆ, ಯುವವಾಹಿನಿ ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ, ಜೆಸಿಐ ಮಡಂತ್ಯಾರಿನ ಅಧ್ಯಕ್ಷೆ ಸಾಯಿಸುಮ ಭಾಗವಹಿಸುವರು. ಸಂಜೆ 4 ಕ್ಕೆ ಸಮಾರೋಪ ನಡೆಯಲಿದ್ದು ಬಂ.ತಾ. ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಆರ್. ನಾಯಕ್ ಅಧ್ಯಕ್ಷತೆ ವಹಿಸುವರು, ಅತಿಥಿಗಳಾಗಿ ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಪುರಂದರ ಎ., ಲಯನ್ಸ್ ಪೂರ್ವಾಧ್ಯಕ್ಷ ಜಯಂತ ಶೆಟ್ಟಿ, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಎಂ. ರೋಹಿತಾಶ್ವ, ಸಿವಿಲ್ ಗುತ್ತಿಗೆದಾರ ಗಣೇಶ್ ಕಾಮಾಜೆ, ಸುಧೀರ್ ಕುಲಾಲ್, ಜೆಸಿಐ ಬಂಟ್ವಾಳ ದ ಅಧ್ಯಕ್ಷ ಕಿಶೋರ್…
ಬಂಟ್ವಾಳ: ಪುದು,ಕೊಡ್ಮಾಣ್,ಕಳ್ಳಿಗೆ, ತುಂಬೆ, ಅರ್ಕುಳ ಮತ್ತು ಮೇರಮಜಲು ಗ್ರಾಮಗಳನ್ನು ಕೇಂದ್ರವಾಗಿಟ್ಟುಕೊಂಡು ಕಳೆದ 48ದಿನಗಳಿಂದ ಪ್ರತಿ ಮನೆ ಮನಗಳಲ್ಲಿ ಸಾಮೂಹಿಕ ರಾಮ ಮಂತ್ರ ಪಠನದೊಂದಿಗೆ ಆರಂಭಗೊಂಡ ಶ್ರೀ ರಾಮ ನಾಮ ತಾರಕ ಜಪ ಯಜ್ಞ ಭಾನುವಾರ ವೇದಮೂರ್ತಿ ಕಶೆಕೊಡಿ ಸೂರ್ಯ ನಾರಾಯಣ ಭಟ್ ನೇತೃತ್ವದಲ್ಲಿ ಯಜ್ಞ ಆರಂಭಗೊಂಡು ಆಗಮಿಸಿದ ಎಲ್ಲಾ ರಾಮ ಭಕ್ತರು 10 ಕುಂಡಗಳಲ್ಲಿ ಕುಟುಂಬ ಸಮೇತರಾಗಿ ಭಕ್ತಿ ಭಾವದಿಂದ ಹವಿಸ್ಸು ಅರ್ಪಿಸುವ ಮೂಲಕ ಪೂರ್ಣಾಹುತಿಗೊಂಡು ಮಂಗಳಾರತಿಯೊಂದಿಗೆ ಯಾಗ ಸಂಪನ್ನಗೊಂಡಿತು. ಬೆಳಿಗ್ಗೆ 6ಗಂಟೆಗೆ ಯಾಗ ಸ್ಥಳದಲ್ಲಿ ಗಣಪತಿ ಹೋಮ ನಡೆದು ಬಳಿಕ ಧ್ವಜಾರೋಹಣ ಹಾಗೂ ಗೋ ಪೂಜೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಪ್ರಭಾಕರ ಭಟ್ ಕಲ್ಲಡ್ಕ ನೆರವೇರಿಸಿದರು. ಬಳಿಕ ನಡೆದ ಸುಧರ್ಮ ಸಭೆಯಲ್ಲಿ ಅಖಿಲ ಭಾರತ ಗ್ರಾಮ ವಿಕಾಸ ಟೋಳಿ ಸದಸ್ಯ ರಮೇಶ್ ಹೊಸು ತಮ್ಮ ದಿಕ್ಸೂಚಿ ಭಾಷಣ ಮಾಡಿ, ಹೋಮ, ಹವನ,ಪೂಜೆಯನ್ನು ನಮ್ಮಸಮಾಜದಲ್ಲಿ ವ್ಯಕ್ತಿಗತ ಸಾಧನೆಗಾಗಿ ಮಾಡುವ ಸಂಪ್ರದಾಯವಿದೆ, ಆದರೆ ಇಲ್ಲಿ ರಾಮ ತಾರಕ ಯಜ್ಞದ…








