Author: admin
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಬಂಟ್ವಾಳ ವಲಯದ ರಜತ ಸಂಭ್ರಮ ಹಾಗೂ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾಕಲಾಮಂದಿರದಲ್ಲಿ ಮೇ.24ರಂದು ಭಾನುವಾರ ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷ ಸುಧಾಕರ್ ಸಾಲ್ಯಾನ್ ತಿಳಿಸಿದರು. ಅವರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅಂದು ಬೆಳಿಗ್ಗೆ 9.30ಕ್ಕೆ ಸಂಘದ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯುವ ಪದಗ್ರಹಣ ಸಮಾರಂಭದಲ್ಲಿ ಉದ್ಯಮಿ ಶಶಿಧರ ಪೈ, ಕಾರ್ಮಿಕ ನಿರೀಕ್ಷಕಿ ಲವೀನಾ ಡಿಸೋಜಾ, ಉದ್ಯಮಿಗಳಾದ ರಾಜೇಶ್ ಮೆಂಡನ್, ಯೋಗೀಶ್, ಸಂಘದ ಜಿಲ್ಲಾಧ್ಯಕ್ಷ ದಿನಕರ ಕುಲಾಲ್, ದ.ಕ. ಗ್ಯಾರೇಜು ಮಾಲಕರ ಸೌಹಾರ್ಧ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ, ಜಿಲ್ಲಾ ಸಂಘದ ನಿರ್ದೇಶಕ ಜೆ.ಪುಂಡಲೀಕ ಸುವರ್ಣ ಭಾಗವಹಿಸುವರು. ಕಾರ್ಯಕ್ರಮದಲ್ಲಿ ತಾಲೂಕಿನ ಹಿರಿಯ ಮೆಕ್ಯಾನಿಕ್ ಸದಸ್ಯರನ್ನು ಹಾಗೂ ಸಾಧಕರನ್ನು ಸನ್ಮಾನಿಸಲಾಗುವುದು. 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯೂಸಿಯಲ್ಲಿ ಶೇ.85 ಕ್ಕಿಂತ ಅಧಿಕ ಅಂಕ ಗಳಿಸಿದ ಸಂಘದ ಸದಸ್ಯರ…
ಬಂಟ್ವಾಳ : ಇಲ್ಲಿನ ಎಲ್ಲೈಸಿ ಶಾಖೆಯ ಹಿರಿಯ ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಕಲ್ಮಾಡಿ ನೇತೃತ್ವದ ವಿಮಾ ಪ್ರತಿನಿಧಿಗಳ ತಂಡದ ಬೆಳ್ಳಿಹಬ್ಬ ಕಾರ್ಯಕ್ರಮ “ಕನಸು” ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ವಿಜ್ರಂಭಣೆಯಿಂದ ನಡೆಯಿತು. ಮೆರವಣಿಗೆ: ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಕಾರ್ಯಕ್ರಮ ನಡೆಯುವ ಸಭಾಂಗಣದವರೆಗೆ ಆಕರ್ಷಕ ಮೆರವಣಿಗೆ ನಡೆಯಿತು. ಗೊಂಬೆ ಕುಣಿತ, ಬಣ್ಣದ ಕೊಡೆ, ಸಮವಸ್ತ್ತ ಧರಿಸಿದ ಪ್ರತಿನಿಧಿಗಳು ಮೆರವಣಿಗೆಗೆ ಮೆರುಗು ನೀಡಿತು. ನೃತ್ಯದ ಮೂಲಕ ಅತಿಥಿಗಳನ್ನು ಸಭಾಂಗಣ ಕ್ಕೆ ಬರಮಾಡಿಕೊಳ್ಳಲಾಯಿತು. ಸಭಾ ಕಾರ್ಯಕ್ರಮ: ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲಯನ್ಸ್ ಪೂರ್ವ ಜಿಲ್ಲಾ ಗವರ್ನರ್ ಡಾ. ಗೀತಾ ಪ್ರಕಾಶ್ ಉದ್ಘಾಟಿಸಿದರು. ಅವರು ಮಾತನಾಡಿ ಮಧ್ವರಾಜ್ ಅವರ ಕನಸು ನನಸಾಗಿದೆ. ಅವರ ಸಾಧನೆಯ ಹಿಂದಿನ ಶ್ರಮ ಎದ್ದು ಕಾಣುತ್ತಿದೆ. ಅವರ ತಂಡ ಉತ್ತಮ ಸಾಧನೆ ಮಾಡಿದೆ ಎಂದು ತಿಳಿಸಿದರು. ಉಡುಪಿ ಹಿರಿಯ ವಿಭಾಗೀಯ ಅಧಿಕಾರಿ ಗಣಪತಿ ಎನ್.ಭಟ್ ಮಾತನಾಡಿ ಅಭಿವೃದ್ಧಿ ಅಧಿಕಾರಿಯಾಗಿ ತಂಡ ಕಟ್ಟುವುದು ದೊಡ್ಡ ಕೆಲಸ.…
ಬಂಟ್ವಾಳ: ಜನ ಸಾಮಾನ್ಯರಿಗೆ ಆರ್ಥಿಕ ಉನ್ನತಿ ಕೊಡಬೇಕು,ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವಕಾಶವನ್ನು ನೀಡುವ ಮೂಲಕ ಜನಪರ ಸೇವೆ ನೀಡಬೇಕು ಎನ್ನುವ ಉದ್ದೇಶದಿಂದ ಡಾ. ಅಮ್ಮೆಂಬಳ ಬಾಳಪ್ಪ ಹಾಗೂ ಹೂವಯ್ಯ ಮೂಲ್ಯನವರು ಅಂದು ಸ್ಥಾಪಿಸಿದ ಸಮಾಜ ಸೇವಾ ಸಹಕಾರಿ ಸಂಘ ಇಂದು ಅದೇ ಉದ್ದೇಶದಲ್ಲಿ ಮುಂದುವರಿಯುತ್ತಿರುವುದು ಅಭಿನಂದನೀಯ ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಉಳ್ಳಾಲ ತಾಲೂಕಿನ ಬೋಳಿಯಾರಿನ ಶ್ರೀ ದೇವಿಕಿರಣ್ ಸಂಕೀರ್ಣದಲ್ಲಿ ಸಮಾಜ ಸೇವಾ ಸಹಕಾರಿ ಸಂಘ ನಿ. ಇದರ 18 ನೇ ಬೋಳ್ಯಾರ್ ಶಾಖೆಯನ್ನು ಉದ್ಘಾಟಿಸಿ ಬಳಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಇಂದು ಸಮಾಜ ಸೇವಾ ಸಹಕಾರಿ ಸಂಘ ಪ್ರಗತಿಯ ಹಾದಿಯಲ್ಲಿದ್ದು ಹೆಚ್ಚಿನ ಶಾಖೆಗಳು ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಸ್ಥಿತಿಗೆ ಅಭಿವೃದ್ದಿಯಾಗಿದೆ. ಒಳ್ಳೆಯ ಉದ್ದೇಶ ಇಟ್ಟುಕೊಂಡು ಪ್ರಾಮಾಣಿಕ ಸೇವೆ ನೀಡಿದಾಗ ಸತ್ಯ ಖಂಡಿತವಾಗಿಯೂ ಪ್ರಕಾಶಕ್ಕೆ ಬರುತ್ತದೆ. ಬ್ಯಾಂಕ್ ಮುಂದಿನ ಪೀಳಿಗೆಯ ಸಮಾಜದ ಸಂಪತ್ತು. ಇದನ್ನು ಈ ಪೀಳಿಗೆಯ ಜನರು ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿದರು. ಅಮ್ಮೆಂಬಳ ವ್ಯವಸಾಯ…
ಬಂಟ್ವಾಳ: ಬಿ.ಸಿ.ರೋಡು ಲಯನ್ಸ್ ಸಭಾಂಗಣದಲ್ಲಿ ಬಂಟ್ವಾಳ ಎಲ್ಲೈಸಿ ಶಾಖೆ ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಕಲ್ಮಾಡಿ ನೇತೃತ್ವದ ವಿಮಾ ಪ್ರತಿನಿಧಿಗಳ ತಂಡದ ವತಿಯಿಂದ ಬೆಳ್ಳಿಹಬ್ಬ ಕಾರ್ಯಕ್ರಮ ಮೇ.16ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಕನಸು ಹೆಸರಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಉಡುಪಿ ಹಿರಿಯ ವಿಭಾಗೀಯ ಅಧಿಕಾರಿ ಗಣಪತಿ ಎನ್.ಭಟ್ ಉದ್ಘಾಟಿಸಲಿದ್ದು, ಬಂಟ್ವಾಳ ಹಿರಿಯ ಶಾಖಾಧಿಕಾರಿ ಗುರುದತ್ ನಾಯಕ್ ಅಧ್ಯಕ್ಷತೆ ವಹಿಸುವರು. ಹಿರಿಯ ಅಧಿಕಾರಿಗಳಾದ ಗುರುರಾಜ್ ರಾವ್, ದುರ್ಗಾರಾಮ್ ಶೆಣೈ, ಬೆಳ್ತಂಗಡಿ ಶಾಖಾಧಿಕಾರಿ ಕೆ.ಪ್ರಕಾಶ್, ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಡಾ.ಗೀತ್ ಪ್ರಕಾಶ್, ಉಪ ಶಾಖಾಧಿಕಾರಿ ಮುತ್ತಯ್ಯ ಮರಾಟೆ ಭಾಗವಹಿಸುವರು. ಇದೇ ವೇಳೆ ಮೆರವಣಿಗೆ, ಸಾಧಕರಿಗೆ ಸನ್ಮಾನ, ಕಡೇಶ್ವಾಲ್ಯ ಶ್ರೀ ಚಿಂತಾಮಣಿ ತಂಡದಿಂದ ನೃತ್ಯ ಪ್ರದರ್ಶನ ಮತ್ತು ಉಮೇಶ್ ಮಿಜಾರ್ ತಂಡದಿಂದ ತೆಲಿಕೆದ ಗೊಂಚಿಲ್ ಹಾಸ್ಯ ಪ್ರದರ್ಶನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಬದುಕಿನ ಕ್ರಮವನ್ನು ಕಲಿಸಿ ಅವರ ಸರ್ವೋತೋಮುಖ ಬೆಳವಣಿಗೆಗೆ ಕಾರಣವಾಗಲಿದೆ ಎಂದು ಮಂಗಳೂರು ವಿವಿಯ ರಾ.ಸೇ.ಯೋ ಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಶೇಷಪ್ಪ ಹೇಳಿದರು. ಸರ್ಕಾರಿ ಪ್ರಥಮದರ್ಜೆ ಕಾಲೇಜು ವಾಮದಪದವು ವತಿಯಿಂದ ಪಂಜಿಕಲ್ಲು ಗ್ರಾಮದ ಆಚಾರಿಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಎನ್.ಎಸ್. ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ನವೀನ್ ಚಂದ್ರ ಶೆಟ್ಟಿ ಅವರು ಮಾತನಾಡಿ ಗ್ರಾಮಸ್ಥರ ಸಹಕಾರದೊಂದಿಗೆ ಕಾಲೇಜಿನ ವಾರ್ಷಿಕ ಶಿಬಿರವು ಯಶಸ್ವಿಯಾಗಲಿ. ಈ ಶಿಬಿರವು ಕಾಲೇಜಿಗೆ ಹಾಗೂ ವಿದ್ಯಾರ್ಥಿಗಳಿಗೆ ಒಳ್ಳೆಯ ಹೆಸರನ್ನು ತರಲಿ ಎಂದು ಆಶಿಸಿದರು. ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕರಣೇಂದ್ರ ಪೂಜಾರಿ, ಗ್ರಾ.ಪಂ. ಮಾಜಿ ಸದಸ್ಯ ಕೇಶವ ಪೂಜಾರಿ, ಶಾಲೆಯ ಮುಖ್ಯೋಪಧ್ಯಾಯಿನಿ ಮರ್ಸಿನ್ ಮೇಥಿ ಪಾಯಸ್ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್ ಕೆ.ಬಿ.ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಸಮಿತಿಯ ಸಂಚಾಲಕ…
ಬಂಟ್ವಾಳ: ಇಲ್ಲಿನ ಬೈಪಾಸ್ ಜಂಕ್ಷನಿನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿರುವ ಸಮಾಜ ಸೇವಾ ಸಹಕಾರಿ ಸಂಘದ 18ನೇ ಶಾಖೆಯು ಉಳ್ಳಾಲ ತಾಲೂಕಿನ ಬೋಳಿಯಾರು ದೇವಿಕಿರಣ್ ಸಂಕೀರ್ಣದಲ್ಲಿ ಮೇ.17ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳಲಿದೆ. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಪ್ರಜ್ವಲಿಸಿ ಆಶೀರ್ವಚನ ನೀಡುವರು. ಸಂಸದ ಕ್ಯಾ| ಬ್ರಿಜೇಶ್ ಚೌಟ ನೂತನ ಶಾಖೆಯನ್ನು ಉದ್ಘಾಟಿಸುವರು. ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸುವರು. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಭದ್ರತಾ ಕೊಠಡಿಯನ್ನು, ಶಾಸಕ ರಾಜೇಶ್ ನಾಯ್ಕ್ ಸೇಫ್ ಲಾಕರನ್ನು, ಕಂಪ್ಯೂಟರ್ ವ್ಯವಸ್ಥೆಯನ್ನು ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸುವರು. ಸಹಕಾರಿ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್ ಕೆ. ಠೇವಣಿ ಪತ್ರ ಬಿಡುಗಡೆಗೊಳಿಸುವರು ಮುಖ್ಯ ಅತಿಥಿಗಳಾಗಿ ಅಮ್ಮೆಂಬಳ ವ್ಯ. ಸೇ. ಸ. ಸಂಘದ ಅಧ್ಯಕ್ಷ ರಾಜರಾಮ ಭಟ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ಮೂಲ್ಯರ ಯಾನೆ ಕುಲಾಲರ ಮಾತೃ…
ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ, ಬಿ.ಎಂ.ಹನೀಫ್ ಸೇರಿ 18 ಮಂದಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಸಹಯೋಗದೊಂದಿಗೆ ನೀಡುವ ದತ್ತಿನಿಧಿ ಪ್ರಶಸ್ತಿಯನ್ನು ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಮತ್ತು ಕೆಯುಡಬ್ಲ್ಯುಜೆ ಕಾಸರಗೋಡು ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ ಘೋಷಿಸಿದ್ದಾರೆ. ಮೇ 16ರಂದು ಕಾಸರಗೋಡು ಜಿಲ್ಲೆಯ ಕುಡಾಲುಮೇರ್ಕಳ ಸುಬ್ಬಯ್ಯಕಟ್ಟೆಯ ಎ.ಯು.ಪಿ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಕರ್ನಾಟಕದ ಸಚಿವ ಬೋಸರಾಜು ಮತ್ತು ಮಂಜೇಶ್ವರ ಶಾಸಕ ಅಶ್ರಫ್ ಉಪಸ್ಥಿತಿಯಲ್ಲಿ ಪ್ರದಾನ ಮಾಡುವರು. ಹಿರಿಯ ಪತ್ರಕರ್ತರಾದ ಬಿ.ಎಂ.ಹನೀಫ್, ಕುರಿಯ ವಾಸುದೇವ ಎಂ.ಹೊಳ್ಳ, ಡಾ.ಯು.ಎಂ.ರವಿ, ವಿಜಯಲಕ್ಷ್ಮೀ ಶಿಬರೂರು, ಎಚ್.ಇ.ರವಿ ಸೋಮವಾರಪೇಟೆ, ವಿಶ್ವನಾಥ ಬೆಳಗಲ್ ಮಠ ಕೊಪ್ಪಳ, ಪ್ರಕಾಶ್ ಸುವರ್ಣ ಕಟಪಾಡಿ, ದೇವೇಂದ್ರಪ್ಪ ಆವಂಟಿ ಗುಲ್ಬರ್ಗ, ಸತೀಶ್ ಇರಾ, ಸುಭಾಷ್ ಸಿರಿಯ,…
ಬಂಟ್ವಾಳ: ದಕ್ಷಿಣ ಕನ್ನಡ ಗ್ಯಾರೇಜು ಮಾಲಕರ ಸಂಘ ಇದರ ಬಂಟ್ವಾಳ ವಲಯದ ೨೫ನೇ ವಾರ್ಷಿಕೋತ್ಸವದ ಕಾರ್ಯಕ್ರಮ ರಜತ ಸಂಭ್ರಮ ಹಾಗೂ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಮೇ ೨೪ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಆಟೋಲೈನ್ಸ್ ಗ್ಯಾರೇಜ್ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಸುಧೀರ್ ಪೂಜಾರಿ, ಕಾರ್ಯದರ್ಶಿ ರಾಜೇಶ್ ಕುಲಾಲ್, ಕೋಶಾಧಿಕಾರಿ ಭಾಸ್ಕರ ಕುಲಾಲ್, ಗೌರವ ಸಲಹೆಗಾರರಾದ ಸುಧಾಕರ ಸಾಲ್ಯಾನ್, ಅಣ್ಣುಪೂಜಾರಿ, ಉಪಾಧ್ಯಕ್ಷರಾದ ಉಮೇಶ್ ಶೆಟ್ಟಿ, ಸಿದ್ದೀಕ್ ಮೆಲ್ಕಾರ್, ಸತೀಶ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಗಣೇಶ್ ಸುವರ್ಣ ತುಂಬೆ, ಸಂಘಟನಾ ಸಂಚಾಲಕ ಪ್ರಶಾಂತ್ ಭಂಡಾರ್ಕಾರ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಬಂಟ್ವಾಳ: ಸಾತ್ವಿಕ ಆಹಾರ ಸೇವನೆಯ ಮೂಲಕ ಆರೋಗ್ಯವಂತರಾಗಿ ಬಾಳಬೇಕು. ಔಷಧಿಯನ್ನು ವೃತದಿಂದ ಸೇವಿಸಬೇಕು. ನಾವು ಸದೃಢರಾಗಿದ್ದರೆ ನಮ್ಮ ದೇಶ ಸದೃಢವಾಗಲಿದೆ. ಸರಕಾರ ಮಾಡುವ ಕಾರ್ಯದಲ್ಲಿ ಸೇವಾಂಜಲಿ ಪ್ರತಿಷ್ಠಾನ ಕೈ ಜೋಡಿಸಿದಂತೆ ಸೇವಾಂಜಲಿಯ ಸೇವಾ ಕಾರ್ಯದಲ್ಲಿ ನಾವೂ ಕೈ ಜೋಡಿಸೋಣ ಎಂದು ದ.ಕ.ಜಿಲ್ಲಾ ಕಸಾಪ ನಿಕಟಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹೇಳಿದರು. ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ನಡೆದ ಕ್ಷಯ ರೋಗಿಗಳಿಗೆ ದವಸಧಾನ್ಯ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸರಕಾರದ ಯೋಜನೆಯನ್ನು ಸಮಾಜದ ಜನತೆಗೆ ತಲುಪಿಸುವ ಸೇವಾಂಜಲಿಯ ಕಾರ್ಯ ಅಭಿನಂದನೀಯ ಎಂದು ತಿಳಿಸಿದರು. ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚೇತನ್ ಆರೋಗ್ಯ ಮಾಹಿತಿ ನೀಡಿ ಕೆಮ್ಮು ಮೊದಲಾದ ಕ್ಷಯ ರೋಗದ ಲಕ್ಷಣಗಳು ಕಂಡು ಬಂದಾಗ ವೈದ್ಯರಿಂದ ತಪಾಸಣೆ ನಡೆಸಿ ಔಷಧಿಯೊಂದಿಗೆ ಪೌಷ್ಟಿಕಾಹಾರ ಸೇವಿಸಿದಾಗ ರೋಗವನ್ನು ಸಂಪೂರ್ಣ ಗುಣಪಡಿಸಲು ಸಾಧ್ಯವಿದೆ ಎಂದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಾಸ್ತಾವಿಕವಾಗಿ ಮಾತನಾಡಿ ಬಂಟ್ವಾಳ,…
ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 18ನೇ ಶಿರ್ತಾಡಿ ಶಾಖೆಯು ಭಾನುವಾರ ಶಿರ್ತಾಡಿ ಮಕ್ಕಿ ಹೈಸ್ಕೂಲ್ ರಸ್ತೆಯ ಕಟ್ಟಡದಲ್ಲಿ ಶುಭಾರಂಭಗೊಂಡಿತು. ಮಾಜಿ ಸಚಿವ ಬಿ. ರಮಾನಾಥ ರೈ ನೂತನ ಶಾಖೆಯನ್ನು ಉದ್ಘಾಟಿಸಿದರು. ಶಿರ್ತಾಡಿ ಶಿಮುಂಜೆ ಗುತ್ತು ಸಂಪತ್ ಸಾಮ್ರಾಜ್ಯ್ ಭದ್ರತಾ ಕೋಶ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಮನಾಥ ರೈ ದೀಪ ಪ್ರಜ್ವಲಿಸಿ ಮಾತನಾಡಿ ಸಜೀಪಮುನ್ನೂರು ಮೂರ್ತೆದಾರರ ಸಹಕಾರಿ ಸಂಘ ಎಲ್ಲಾ, ಜಾತಿ, ವರ್ಗದ ಜನರ ಸಹಕಾರದಿಂದ ಕರಾವಳಿ ಭಾಗದಲ್ಲಿ ಅತ್ಯಂತ ಬಲಿಷ್ಠವಾದ ಸಹಕಾರಿ ಸಂಘವಾಗಿ ಮೂಡಿ ಬಂದಿದೆ ಎಂದರು. ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ಸಾಮಾಜಿಕ ಹಕ್ಕನ್ನು ಕೊಡುವ ಹೊಣೆಗಾರಿಕೆ ಎಲ್ಲರಿಗಿದ್ದು ಸಂಜೀವ ಪೂಜಾರಿಯವರು ತನ್ನ ಸಹಕಾರಿ ಸಂಘದ ಎಲ್ಲಾ ಶಾಖೆಯಲ್ಲಿ ಮಹಿಳೆಯರಿಗೆ ಉದ್ಯೋಗ ನೀಡುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಅರ್ಥ ನೀಡಿದ್ದಾರೆ ಎಂದರು. ಮುಖ್ಯ ಅತಿಥಿಯಾಗಿದ್ದ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ ಸಜೀಪಮುನ್ನೂರು ಮೂರ್ತೆದಾರರ ಸಹಕಾರಿ ಸಂಘವನ್ನು…








