Author: admin

ಬಂಟ್ವಾಳ: ಸಮಾಜಸೇವಾ ಸಹಕಾರಿ ಸಂಘ ನಿ. ಬಂಟ್ವಾಳ ಇದರ ವತಿಯಿಂದ 2024-25ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಭಾನುವಾರ ಸಂಘದ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಜೆಸಿಐ ವಲಯ ತರಬೇತುದಾರ ಸಂದೀಪ್ ಸಾಲ್ಯಾನ್ ಉದ್ಘಾಟಿಸಿ ಮಾತನಾಡಿ ಸ್ವಾತಂತ್ರ್ಯ ಹೋರಾಟಗಾರ ಡಾ. ಅಮ್ಮೆಂಬಳ ಬಾಳಪ್ಪ ಅವರ ದೂರದೃಷ್ಟಿಯ ಫಲವಾಗಿ ಸಮಾಜಸೇವಾ ಸಹಕಾರಿ ಬ್ಯಾಂಕ್ ಸ್ಥಾಪನೆಯಾಗಿದೆ. ಬಡಜನರಿಗೆ ಆರ್ಥಿಕ ಸಹಕಾರವನ್ನು ನೀಡುವುದರ ಜೊತೆಗೆ ಬಡ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗುವ ಉದ್ದೇಶದಿಂದ ಡಾ. ಬಾಳಪ್ಪ ಅವರ ಆಶಯದಂತೆ ಸಂಘ ನಿರಂತರವಾಗಿ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಸಂಘದ ಆಡಳಿತ ಮಂಡಳಿ, ಸಿಬ್ಬಂದಿಗಳ ಶ್ರಮ, ಗ್ರಾಹಕರ ಸಹಕಾರದಿಂದಾಗಿ ಸಮಘ ಲಾಭದಾಯಕವಾಗಿ ನಡೆಯುತ್ತಿದ್ದು ಅದರ ಒಂದಂಶವನ್ನು ವಿದ್ಯಾರ್ಥಿ ವೇತನವಾಗಿ ನೀಡುತ್ತಿದ್ದು ವಿದ್ಯಾರ್ಥಿಗಳು ಈ ಮೊತ್ತವನ್ನು ವಿದ್ಯಾಭ್ಯಾಸಕ್ಕೆ ಸದುಪಯೋಗ ಪಡಿಸಬೇಕೆಂದು ತಿಳಿಸಿದರು. ಕೆಐಸಿಎಂ ಮೂಡಬಿದಿರೆ ಇದರ ಪ್ರಥಮದರ್ಜೆ ಸಹಾಯಕ ಹೊನ್ನಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. 160 ಮಂದಿ ಸ್ನಾತಕ್ಕೋತರ ವಿದ್ಯಾಭ್ಯಾಸ ಪಡೆಯುವ ವಿದ್ಯಾರ್ಥಿಗಳಿಗೆ ಒಟ್ಟು 6.88 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ವಿತರಿಸಲಾಯಿತು.…

Read More

ಬಂಟ್ವಾಳ: 400 ಕೆ.ವಿ.ವಿದ್ಯುತ್ ಪ್ರಸರಣ ತಂತಿಗಳನ್ನು ಅಳವಡಿಸಲು ಟವರ್ ನಿರ್ಮಾಣಕ್ಕಾಗಿ ಅರಣ್ಯ ಇಲಾಖೆಯ ಅನುಮತಿಯನ್ನು ಪಡೆಯದೆ ಕಲ್ಲಡ್ಕದ ಪೂರ್ಲಿಪಾಡಿಯ ಬಳಿ ಬಾಯಿಲ ಎಂಬಲ್ಲಿನ ಖಾಸಗಿ ಜಮೀನಿನಲ್ಲಿ ಮರಗಳನ್ನು ಕಡಿಯುತ್ತಿದ್ದ ವೇಳೆ ರೈತ ಸಂಘ ಹಸಿರು ಸೇನೆಯ ಮುಖಂಡರು ಮುತ್ತಿಗೆ ಹಾಕಿ ಕೆಲಸವನ್ನು ತಡೆದ ಘಟನೆ ಮಂಗಳವಾರ ನಡೆದಿದೆ. ರಾಜಾರೋಷವಾಗಿ ಯಂತ್ರದ ಮೂಲಕ ಮರಗಳನ್ನು ಉರುಳಿಸುತ್ತಿದ್ದ ವೇಳೆ ರೈತ ಸಂಘದ ಮಾಹಿತಿಯಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬರುತ್ತಿದ್ದಂತೆಯೇ ಮರಕಡಿಯುತ್ತಿದ್ದ ಕಾರ್ಮಿಕರು ಪರಾರಿಯಾಗಿದ್ದಾರೆ. ರೈತರು ಹಾಗೂ ಸ್ಥಳೀಯರ ವಿರೋಧದ ನಡುವೆಯು ಪೊಲೀಸ್ ವ್ಯವಸ್ಥೆಯನ್ನು ಬಳಸಿಕೊಂಡು ಸ್ಟೆರ್‌ಲೈಟ್ ಪವರ್ ಕಂಪನಿ ಬಂಟ್ವಾಳ ತಾಲೂಕಿನಲ್ಲಿ ಹಂತಹಂತವಾಗಿ ಟವರ್ ನಿರ್ಮಿಸುವ ಕಾರ್ಯವನ್ನು ನಡೆಸಿಕೊಂಡು ಬರುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಬಂಟ್ವಾಳ ಕಸ್ಬ ಗ್ರಾಮದ ದರ್ಬಳಿಕೆಯಲ್ಲಿ ಟವರ್ ನಿರ್ಮಿಸಲು ರೈತ ಮುಖಂಡರು ಹಾಗೂ ಗ್ರಾಮಸ್ಥರು ಹೋರಾಟ ನಡೆಸಿ ವಿರೋಧ ವ್ಯಕ್ತಪಡಿಸಿದರೂ ಅಂತಿಮವಾಗಿ ಕಂಪೆನಿ ಟವರ್ ನಿರ್ಮಿಸುತ್ತಿದೆ. ಇದೀಗ ಬಾಯಿಲದಲ್ಲೂ ಸ್ಥಳೀಯ ರೈತರಿಗೆ ಯಾವುದೇ ಮಾಹಿತಿ ಹಾಗೂ ನೋಟೀಸ್ ನೀಡದೆ ಟವರ್…

Read More

ಬಂಟ್ವಾಳ: ದ.ಕ. ಜಿಲ್ಲೆಯ ಕಾರಣಿಕದ ದೈವಸ್ಥಾನ ಪಣೋಲಿಬೈಲು ಶ್ರೀ ಕಲ್ಲುರ್ಟಿ ಕಲ್ಕುಡ ದೈವಸ್ಥಾನದಲ್ಲಿ ವಾರ್ಷಿಕ ಕೋಲ ಭಾನುವಾರ ರಾತ್ರಿ ನಡೆಯಿತು.ಸಂಜೆ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ, ಸಂಜೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ವೈವಿಧ್ಯ, ಕಲ್ಲಡ್ಕ ವಿಠಲ್ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ಹಾಗೂ ನಾಟಕ ನಡೆಯಿತು. ಭಂಡಾರದ ಮನೆಯಿಂದ ದೈವಗಳ ಭಂಡಾರ ಬಂದು ವರ್ಷಾವಧಿ ಕೋಲ ನಡೆಯಿತು.ದೈವಸ್ಥಾನದ ಆಡಳಿತಾಧಿಕಾರಿ, ಕಾರ್ಯನಿರ್ವಹಣಾಧಿಕಾರಿ ಅರ್ಚಕ ವರ್ಗ, ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ ದೈವದ ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿದರು.

Read More

ಬಂಟ್ವಾಳ: ಮಹರ್ಷಿ ಆನಂದ ಗುರೂಜಿ ಅವರ ಬೆಂಗಳೂರಿನ ಭೂವರಹ ಸ್ವಾಮಿ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲು 11 ಅಡಿ ಎತ್ತರದ ಶ್ರೀ ಭೂವರಹ ಸ್ವಾಮಿಯ ಬೃಹತ್ ಫೈಬರ್ ಕಲಾಕೃತಿ ಬಂಟ್ವಾಳ ತಾಲೂಕಿನ ಕಳ್ಳಿಗೆಯ ಕಲಾವಿದ ಮನೋಜ್ ಕನಪಾಡಿಯವರ ಕೈ ಚಳಕದಲ್ಲಿ ನಿರ್ಮಾಣಗೊಂಡಿದ್ದು ಕುಂಚದ ಅಂತಿಮ ಸ್ಪರ್ಶಕ್ಕೆ ಕಾಯುತ್ತಿದೆ.

Read More

ಬಂಟ್ವಾಳ: ಜಿ.ಎಚ್.ಎಮ್ ಫೌಂಡೇಶನ್ (ರಿ) ಮೂಲರಪಟ್ಣ ಇದರ ವತಿಯಿಂದ ಶೈಕ್ಷಣಿಕ ಕಾರ್ಯಾಗಾರ ಮೌಲಾನ ಅಝಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಮೂಲರಪಟ್ಣ ಇಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಮೊಹಮ್ಮದ್ ಶಾಲಿ ಎಮ್ ಎಸ್ ವಹಿಸಿದ್ದರು.ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕಾಧ್ಯಕ್ಷ ಹಂಝ ಗುತ್ತು,ಗೌರವ ಸಲಹೆಗಾರ ಎಮ್.ಬಿ.ಅಶ್ರಫ್, ಮೌಲಾನ ಅಝಾದ್ ಮಾದರಿ ಶಾಲೆಯ ಪ್ರಭಾರ ಪ್ರಾಂಶುಪಾಲ ಭರತ್, ಅಬ್ದುಲ್ ಸಮದ್ ಅರಳ,ಎಮ್ ಪಿ ಅಬ್ದುಲ್ ಜಬ್ಬಾರ್ ಸಂಸ್ಥೆಯ ಸದಸ್ಯರಾದ ಶಾರೂಕ್ ಎಂ ಬಿ, ಅಬ್ದುಲ್ ರಶೀದ್ ಎಂ ಬಿ ಹಾಗೂ ವಿಧ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜ! ಅಬ್ದುಲ್ ಖಾದರ್ ನಾವೂರು ವಿಧ್ಯಾರ್ಥಿಗಳ ಹಾಗೂ ಪೋಷಕರ ಜೊತೆ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು.ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಶಲೀಲ ವಿಟ್ಲ ಇವರು ವಿಧ್ಯಾರ್ಥಿಗಳ ಕಲಿಕೆಯ ಬೆಳವಣಿಗೆಯನ್ನು ಉತ್ತೇಜಿಸಲು ಪಠ್ಯವಾರು ವಿಷಯವನ್ನು ವಿಧ್ಯಾರ್ಥಿಗಳಿಗೆ ಹಾಗೂ ಪೋಷಕರರಿಗೆ ಮನದಟ್ಟು ಮಾಡಿಕೊಟ್ಟರು.ಇದರ ಜೊತೆಗೆ ವಿಧ್ಯಾರ್ಥಿಗಳಿಗೆ ಹಾಗೂ ಪೋಷಕರರಿಗೆ ಮಾದಕ ದ್ರವ್ಯ ಮುಕ್ತ ಸಮಾಜ ಮತ್ತು ಅಪರಾಧ ಮುಕ್ತ…

Read More

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :166 ಕನೆಹಲಗೆ: 06 ಜೊತೆಅಡ್ಡಹಲಗೆ: 06 ಜೊತೆಹಗ್ಗ ಹಿರಿಯ: 15 ಜೊತೆನೇಗಿಲು ಹಿರಿಯ: 34 ಜೊತೆಹಗ್ಗ ಕಿರಿಯ: 27 ಜೊತೆನೇಗಿಲು ಕಿರಿಯ: 78 ಜೊತೆಒಟ್ಟು ಕೋಣಗಳ ಸಂಖ್ಯೆ: 166 ಜೊತೆ ಕನೆಹಲಗೆ:ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿಹಲಗೆ ಮುಟ್ಟಿದವರು: ಶಿರೂರು ಮುದ್ದುಮನೆ ಭರತ್ ನಾಯ್ಕ್ ದ್ವಿತೀಯ: ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್ಚಂದ್ರ ಆಳ್ವಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ•••••••••••••••••••••••••••••••••••••••••••ಅಡ್ಡ ಹಲಗೆ: ಪ್ರಥಮ: ನಾರಾವಿ ಯುವರಾಜ್ ಜೈನ್(12.10)ಹಲಗೆ ಮುಟ್ಟಿದವರು: ಭಟ್ಕಳ ಹರೀಶ್ ದ್ವಿತೀಯ: ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ “ಬಿ”(13.87)ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್••••••••••••••••••••••••••••••••••••••••••••••ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ” (12.03)ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (12.21)ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ••••••••••••••••••••••••‌‌‌‌‌••••••••••••••••••••••ಹಗ್ಗ ಕಿರಿಯ: ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ…

Read More

ಬಂಟ್ವಾಳ: ಜಿಲ್ಲೆಯ ಕಾರಣಿಕದ ದೈವ ಕ್ಷೇತ್ರ ಸಜೀಪಮೂಡ ಗ್ರಾಮದ ಶ್ರೀ ಪಣೋಲಿಬೈಲು ಕಲ್ಲುರ್ಟಿ- ಕಲ್ಕುಡ ದೈವಸ್ಥಾನದಲ್ಲಿ ವರ್ಷವಧಿ ಕೋಲದ ಪ್ರಯುಕ್ತ ಶನಿವಾರ ಸ್ವಸ್ತಿ ಪುಣ್ಯಾಹ, ಪಂಚಗವ್ಯ, ದ್ವಾದಶ ನಾಳಿಕೇರ ಗಣಹೋಮ, ಸಾನಿಧ್ಯ ಕಲಶಾಭಿಷೇಕ, ಪರ್ವ ಸೇವೆ, ನಾಗ ದೇವರಿಗೆ ಫಲಪಂಚಾಮೃತ ಅಭಿಷೇಕ, ಶ್ರೀ ಆಶ್ಲೇಷ ಬಲಿಪೂಜೆ, ವಟು ಆರಾಧನೆ ಕಲ್ಪೋಕ್ತ ಪೂಜೆ, ಪ್ರಸನ್ನ ಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಪೌರೋಹಿತ್ಯ ವಹಿಸಿದ್ದರು. ದೈವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ದಿವಾಕರ ಮುಗುಳ್ಯ, ಪ್ರಥಮ ಅರ್ಚಕ ವಾಸುದೇವ ಮೂಲ್ಯ, ಎರಡನೇ ಅರ್ಚಕ ನಾರಾಯಣ ಮೂಲ್ಯ, ಮೂರನೇ ಅರ್ಚಕ ಮೋನಪ್ಪ ಮೂಲ್ಯ, ನಗ್ರಿ ಗುತ್ತು ಜಯ ಶೆಟ್ಟಿ, ನೀಲ್ಯ ಚಂದ್ರಶೇಖರ ಶೆಟ್ಟಿ, ರಮೇಶ್ ಕುಲಾಲ್ ಹಾಗೂ ಸಿಬ್ಬಂದಿಗಳು ವರ್ಗದವರು ಉಪಸ್ಥಿತರಿದ್ದರು. ಸಾವಿರಾರು ಮಂದಿ ಭಕ್ತರು ಕ್ಷೇತ್ರ ದರ್ಶನ ಮಾಡಿ ಅನ್ನಪ್ರಸಾದ ಸ್ವೀಕರಿಸಿದರು.

Read More

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆಕೆಎಂಸಿ ಆಸ್ಪತ್ರೆ ಮಂಗಳೂರು ಹಾಗೂರೋಟರಿ ಕ್ಲಬ್ ಫರಂಗಿಪೇಟೆ ಇದರ ಆಶ್ರಯದಲ್ಲಿ‌129ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.ಮಂಗಳೂರಿನ‌ ಜೆಪ್ಪುವಿನ ಶ್ರೀ ಅಂಬಾಮಹೇಶ್ವರೀ ಭಜನಾ ಮಂದಿರದ ಅಧ್ಯಕ್ಷ ಸೀತಾರಾಮ ಎ. ಶಿಬಿರ ಉದ್ಘಾಟಿಸಿ ಮಾತನಾಡಿ ಸೇವಾಂಜಲಿ‌ ಪ್ರತಿಷ್ಠಾನದ ಕೃಷ್ಣಕುಮಾರ್ ಪೂಂಜ ಅವರ‌ ಸೇವಾ ಕಾರ್ಯಗಳು ಎಲ್ಲರಿಗೂ ಪ್ರೇರಣೆಯಾಗಿದೆ. ಮಕ್ಕಳಿಗೆ ಸಂಗೀತ, ನೃತ್ಯ.‌ಭಜನೆಯಂತಹ ಕಾರ್ಯಕ್ರಮಗಳನ್ನು ನಡೆಸುವುದರ ಜೊತೆಗೆ ಜನರ ಪ್ರಾಣ ಉಳಿಸುವಂತಹ ರಕ್ತದಾನ ಶಿಬಿರವನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ನಿರೀಕ್ಷಕಶಿವಕುಮಾರ್ ಬಿ. ಮಾತನಾಡಿ ಕಳೆದ 45 ವರ್ಷಗಳಿಂದ‌ ಕೃಷ್ಣಕುಮಾರ್ ಪೂಂಜ ಅವರು ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡು ಬರುತ್ತಿದ್ದಾರೆ. ಸಮಾಜದಲ್ಲಿ ಅನೇಕ ಮಂದಿ ಶ್ರೀಮಂತರು ಇದ್ದರೂ ಕೂಡ ಎಲ್ಲರಿಗೂ ಸೇವಾಗುಣ ಇರುವುದಿಲ್ಲ ಆದರೆ ಕೃಷ್ಣಕುಮಾರ್ ಪೂಂಜ ನಿರಂತರವಾಗಿ ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.ನಿವೃತ್ತ ಅಧಿಕಾರಿ ಎಂ.ಆರ್. ನಾಯರ್ ಶುಭ ಹಾರೈಸಿದರು. ಕೆಎಂಸಿ ಆಸ್ಪತ್ರೆಯ ವೈದ್ಯ ಸ್ಟೀಫನ್, ಶಿವರಾಜ್ ಸುಜೀರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.…

Read More

ಬಂಟ್ವಾಳ: ಆಶೀರ್ವಾದ್ ಸೇವಾ ಸಂಘ ಹಾಗೂ ಆಶೀರ್ವಾದ್ ಮಹಿಳಾ ಸಂಘ ಇದರ ಆಶ್ರಯದಲ್ಲಿ ಅಂಚೆ ಇಲಾಖೆಯ ಅಪಘಾತ ವಿಮೆ, ಆಯುಷ್ಮಾನ್ ಕಾರ್ಡ್, ಸೀನಿಯರಗ ಸಿಟಿಜನ್ ಕಾರ್ಡ್ ನೋಂದಾಣಿ ಶಿಬಿರ‌ ತುಂಬೆ ಬೊಳ್ಳಾರಿಯ ಸಂಘದ ಕಚೇರಿಯಲ್ಲಿ ಭಾನುವಾರ ನಡೆಯಿತು.ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ ಶಿಬಿರ ಉದ್ಘಾಟಿಸಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಮಾತನಾಡಿ ಜನರ ಉಪಯೋಗಕ್ಕಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತದೆ. ಆದರೆ ಮಾಹಿತಿಯ ಕೊರತೆಯಿಂದ‌ ಅನೇಕ ಯೋಜನೆಗಳು ಅರ್ಹರಿಗೆ ತಲುಪುತ್ತಿಲ್ಲ. ಇಂತಹ ಶಿಬಿರಗಳನ್ನು ಆಯೋಜಿಸುವ ಮೂಲಕ ಸರಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ಸಿಗಲು ಸಾಧ್ಯವಿದೆ ಎಂದು ತಿಳಿಸಿದರು. ವೇದಿಕೆಕೆಯಲ್ಲಿ ಸಂಘದ ಗೌರವಾಧ್ಯಕ್ಷ, ತಾ.ಪಂ. ಮಾಜಿ ಸದಸ್ಯ ಗಣೇಶ್ ಸುವರ್ಣ ತುಂಬೆ, ತುಂಬೆ ಗ್ರಾಮ ಪಂಚಾಯತಿ ಸದಸ್ಯ ಕಿಶೋರ್, ಮಹಿಳಾ ಸಂಘದ ಅಧ್ಯಕ್ಷೆ ಜಲಜಾಕ್ಷಿ, ಗೌರವಾಧ್ಯಕ್ಷೆ ಪಾರ್ವತಿ ಐತಪ್ಪ ಕುಲಾಲ್, ಅಧ್ಯಕ್ಷ‌ವಚೆನ್ನಕೇಶವ, ಗ್ರಾಮ 1 ವ್ಯವಸ್ಥಾಪಕ ರಂಜಿತ್, ಪಂಚಾಯತಿನ ಮಾಜಿ ಅಧ್ಯಕ್ಷೆ ಹೇಮಲತಾ ಜಿ ಪೂಜಾರಿ,…

Read More

ಬಂಟ್ವಾಳ: ದ.ಕ.ಜಿಲ್ಲಾ ಟೂರಿಸ್ಟ್ ಕಾರು ಚಾಲಕರ ಮತ್ತು ಮಾಲಕರ ಸಂಘದ ಗೌರವಾಧ್ಯಕ್ಷರು, ಸಾಮಾಜಿಕ ಕಾರ್ಯಕರ್ತರಾದ ಬಿ.ಎಂ.ಪ್ರಭಾಕರ ದೈವಗುಡ್ಡೆ ( 72) ಅವರು ಅಸೌಖ್ಯದಿಂದ ಬಂಟ್ವಾಳ ದೈವಗುಡ್ಡೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ಶನಿವಾರ ಸಂಜೆ ನಿಧನರಾಗಿದ್ದಾರೆ. ವೃತ್ತಿಯಲ್ಲಿ ಟೂರಿಸ್ಟ್ ಕಾರು ಚಾಕರಾಗಿದ್ದ ಅವರು ಪತ್ನಿ,ಒರ್ವಪುತ್ರಿಯನ್ನು‌ ಅಗಲಿದ್ದಾರೆ.ಬಂಟ್ವಾಳ ತಾಲೂಕು ಸಮಾನಮನಸ್ಕ ಸಮನ್ವಯ ಸಮಿತಿಯ ಮಾಜಿ ಅಧ್ಯಕ್ಷರು ಆಗಿದ್ದ ಅವರ ಕಾರ್ಮಿಕರ,ಚಾಲಕ ಸಮುದಾಯದ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು.ಹುಟ್ಟು ಹೋರಾಟಗಾರರಾಗಿದ್ದ ಅವರು ಬ್ರಹ್ಮರಕೊಟ್ಲುಟೋಲ್ ಗೇಟ್ ವಿರುದ್ಧವು ಹೋರಾಟ ನಡೆಸಿದ್ದರು.ದ.ಕ.ಜಿಲ್ಲಾ ಟೂರಿಸ್ಟ್ ಕಾರು ಚಾಲಕರ ಮತ್ತು ಮಾಲಕರ ಸಂಘದ ಸಂಸ್ಥಾಪಕರಾಗಿ ಹಲವು ವರ್ಷಗಳ ಕಾಲ ಸಂಘವನ್ನು ಮುನ್ನಡೆಸಿದ್ದರು. ಬಿ.ಸಿ.ರೋಡು ಪರಿಸರದಲ್ಲಿ ದೈವಗುಡ್ಡೆಯೆಂದೆ ಚಿರಪರಿಚಿತರಾಗಿದ್ದರು.ವಿವಿಧ ಸಂಘಟನೆಯಲ್ಲಿಯು ಗುರುತಿಸಿದ್ದರು.ಅವರನ್ನು ಇತ್ತೀಚೆಗಷ್ಠೆ ಚಾಲಕ ಸಮುದಾಯ ಹಾಗೂ ಸಮಾನ ಮನಸ್ಕ ಸಂಘಟನೆಯ ವತಿಯಿಂದ ಸಾರ್ವಜನಿಕವಾಗಿ ಸನ್ಮಾನಿಸಲಾಗಿತ್ತು.

Read More