Author: admin

ಬಂಟ್ವಾಳ:‌ ಗ್ರಾಮೀಣ ಕೃಷಿಕರು ಮನೋರಂಜನೆ ಗಾಗಿ ಆರಂಭಿಸಿದ ಕಂಬಳ ಕ್ರೀಡೆ ಪ್ರಸಕ್ತ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿದೆ ಎಂದು ಪೂಂಜ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಹೇಳಿದರು.ಇಲ್ಲಿನ ಸಿದ್ಧಕಟ್ಟೆ ಸಮೀಪದ ಕೊಡಂಗೆ ಎಂಬಲ್ಲಿ ಶನಿವಾರ ಆರಂಭಗೊಂಡ2 ನೇ ವರ್ಷದ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಉದ್ಘಾಟಿಸಿ ಅವರು ಮಾತನಾಡಿದರು. ಪೂಂಜ ಕ್ಷೇತ್ರದ ಆಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ ಆಶೀರ್ವಚನ ನೀಡಿದರು. ಕುಡುಂಬೂರುಗುತ್ತು ಕ್ಷೇತ್ರದ ಆಡಳಿತ ಮೊಕ್ತೇಸರ ಗುತ್ತಿನಾರ್ ಜಯರಾಮ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಶಿವಮೊಗ್ಗ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಎಲಿಯಾಸ್ ಸ್ಯಾಂಕ್ಟಿಸ್, ಸಿದ್ಧಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ, ಸಿದ್ಧಕಟ್ಟೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು, ಸಿದ್ದಕಟ್ಟೆ ಹಿರಿಯ ವೈದ್ಯ ಡಾ. ಪ್ರಭಾಚಂದ್ರ ಜೈನ್,ವೈದ್ಯ ಡಾ.ಸುದೀಪ್ ಕುಮಾರ್ ಜೈನ್ , ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್, ಸಂಗಬೆಟ್ಟು ಗ್ರಾಮ ಪಂಚಾಯತಿ ಮಾಜಿ…

Read More

ಬಂಟ್ವಾಳ: ಬಂಟ್ಚಾಳ ತಾಲೂಕಿನ ಲೊರೆಟ್ಟೊ ಪದವಿನಲ್ಲಿರುವ ಲೊರೆಟ್ಟೊ ಆಂಗ್ಲಮಾಧ್ಯಮ‌ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವ ಮೂಲಕ ಗಮನ ಸೆಳೆಯುತ್ತಿದೆ.ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ‌ ಶಿಕ್ಷಣವನ್ನು ನೀಡುವ ಉದ್ದೇಶದಿಂದ 2010ರಲ್ಲಿ ಆರಂಭಗೊಂಡ ಲೊರೆಟ್ಟೊ ಆಂಗ್ಲಮಾಧ್ಯಮ‌ ಶಾಲೆಯಲ್ಲಿ ಎಲ್ ಕೆ.ಜಿ ಯಿಂದ ಹತ್ತನೆ ತರಗತಿಯವರೆಗೆ ಸುಮಾರು 457 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ರಸ್ತುತ ಈ ಶಾಲೆಗೆ ಕೇಂದ್ರಿಯ ಶಿಕ್ಷಣ ಮಂಡಳಿಯ ಮಾನ್ಯತೆಯೂ ಲಭಿಸಿದ್ದು‌ 2024- 25 ನೇ ಸಾಲಿನಿಂದ‌ ಇಲ್ಲಿ ಸಿಬಿಎಸ್ ಸಿ (CBSC) ತರಗತಿಗಳು ಆರಂಭಗೊಂಡಿರುವುದು ಶಾಲೆಯ ಕೀರ್ತಿಯ ಮುಕುಟಕ್ಕಿಟ್ಟ ಗರಿಯಾಗಿದೆ. ಶಾಲೆಯ ಎಲ್ಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಸುಸಜ್ಜಿತವಾದ ತರಗತಿ ಕೋಣೆಗಳು, 7 ಡಿಜಿಟಲ್‌ ತರಗತಿಗಳು, ವ್ಯವಸ್ಥಿತವಾದ ಕಂಪ್ಯೂಟರ್ ಲ್ಯಾಬ್, 4 ಸಾವಿರಕ್ಕಿಂತಲೂ ಅಧಿಕ ಪುಸ್ತಕಗಳಿರುವ ಗ್ರಂಥಾಲಯ, ವಿದ್ಯಾರ್ಥಿಗಳಿಗೆ ಲಿಫ್ಟ್ ವ್ಯವಸ್ಥೆ, ಪ್ಲೇ ಸ್ಕೂಲ್, ಸ್ಲೂಲ್ ಬಸ್ಸ್, ವಿಶಾಲವಾದ ಆಟದ ಮೈದಾನ ಈ ಶಾಲೆಯ ವಿಶೇಷತೆಯಾಗಿದೆ. ಪರಿಣಿತ ಶಿಕ್ಷಕರ ತಂಡವಿದೆ. ಕಚೇರಿ ಕೆಲಸಗಳಲ್ಲಿ…

Read More

ಬಂಟ್ವಾಳ: ತೋಟಗಾರಿಕಾ ಇಲಾಖೆ ಬಂಟ್ವಾಳ‌ ಹಾಗೂ ದ.ಕ. ಜಿಲ್ಲಾ ದಲಿತ ನಾಗರಿಕ ಹಿರಕ್ಷಕ ಯುವ ವೇದಿಕೆ ಬಂಟ್ವಾಳ ಇದರ ಆಶ್ರಯದಲ್ಲಿ ಉಚಿತ ಜೇನು ತರಬೇತಿ ಕಾರ್ಯಕ್ರಮದ ಅಂಗವಾಗಿ ಗುರುವಾರ ಪ್ರಾಯೋಗಿಕ ತರಬೇತಿ ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟುವಿನಲ್ಲಿ ನಡೆಯಿತು. ಜೇನು ತರಬೇತುದಾರ ಲಕ್ಷ್ಮಣ ಗೌಡ ತಮ್ಮ ಮನೆಯ ಆವರಣದಲ್ಲಿ ಶಿಬಿರಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡಿದರು.‌ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಲಾಯಿತು.ಈ ಸಂದರ್ಭ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜಾ,ದ.ಕ. ಜಿಲ್ಲಾ ದಲಿತ ನಾಗರಿಕ ಹಿರಕ್ಷಕ ಯುವ ವೇದಿಕೆಯ ಸ್ಥಾಪಾಕಾಧ್ಯಕ್ಷ ಹೊನ್ನಪ್ಪ ಕುಂದರ್, ಗೌರವಾಧ್ಯಕ್ಷ ಪಿ. ಕೇಶವ ನಾಯ್ಕ, ಅಧ್ಯಕ್ಷ ಕೆ.ಸತೀಶ್ ಅರಳ, ಉಪಾಧ್ಯಕ್ಷ ರಾಘವೇಂದ್ರ ಸುರುಳಿಮೂಲೆ, ಡಿ. ಗಂಗಾಧರ ನಾಯ್ಕ, ಪ್ರಧಾನ ಕಾರ್ಯದರ್ಶಿ ಸೀತರಾಮ ನಾಯ್ಕ, ಪದಾಧಿಕಾರಿಗಳಾದ ಸಂಜೀವ ಜಿ.‌, ಲಕ್ಷ್ಮಣ್ ಚೆಂಡ್ತಿಮಾರ್, ಕೃಷ್ಣಪ್ಪ ಪುದೊಟ್ಟು, ಧನಂಜಯ ನಾಯ್ಕ, ರಾಮದಾಸ ಮೇರಮಜಲು, ತೋಟರಿಗಾರಿಕ ಇಲಾಖೆಯ ಹರೀಶ್ ಉಪಸ್ಥಿತರಿದ್ದರು. ಬುಧವಾರ ಬಿ.ಸಿ.ರೋಡಿನ ಅಂಬೇಡ್ಕರ್ ಸಮುದಾಯಭವನದಲ್ಲಿ‌ ರಾಧಕೃಷ್ಣ ಬೆಟ್ಟಂಪಾಡಿ ತರಬೇತಿ ನೀಡಿದರು

Read More

ಬಂಟ್ವಾಳ: ೪೦೦ ಕೆವಿ ವಿದ್ಯುತ್ ಪ್ರಸರಣ ತಂತಿ ಅಳವಡಿಸಲು ಟವರ್ ನಿರ್ಮಾಣದ ಕಾಮಗಾರಿ ನಡೆಯುತ್ತಿದ್ದ ಬಂಟ್ವಾಳ ಕಸ್ಬಾ ಗ್ರಾಮದ ಅಗ್ರಹಾರ್ ಬಳಿಯ ದರ್ಬಳಿಕೆ ಎಂಬಲ್ಲಿಗೆ ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿ ಪುಣಚ ಅವರ ನೇತೃತ್ವದಲ್ಲಿ ರೈತ ಸಂಘದ ಸದಸ್ಯರು, ಸಂತ್ರಸ್ತ ರೈತರು ಹಾಗೂ ಗ್ರಾಮಸ್ಥರು ಮುತ್ತಿಗೆ ಹಾಕಿ ಕಾಮಗಾರಿಗೆ ನಡೆಸದಂತೆ ತಡೆಯೊಡಿದ್ದಾರೆ. ಗುರುವಾರ ಮಧ್ಯಾಹ್ನದ ವೇಳೆಗೆ ಕಾಮಗಾರಿ ನಡೆಯುತ್ತಿದ್ದ ದರ್ಬಳಿಕೆಗೆ ಬಂದ ರೈತ ಸಂಘದ ಮುಖಂಡರು ಎರಡು ಜೆಸಿಬಿಗಳ ಮೂಲಕ ಮಣ್ಣು ತೋಡುವ ಕೆಲಸವನ್ನು ನಿಲ್ಲಿಸಿ ಕಾಮಗಾರಿ ನಡೆಸದಂತೆ ಗುತ್ತಿಗೆ ಕಂಪೆನಿಯ ಕಾರ್ಮಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಒಂದು ವ್ಯಾನ್ ಪೊಲೀಸರನ್ನು ನಿಯೋಜಿಸಿ ಕಾಮಗಾರಿ ನಡೆಯುತ್ತಿದ್ದರೂ ಕ್ಯಾರೇ ಎನ್ನದ ರೈತ ಸಂಘದ ಮುಖಂಡರು ಕಾಮಗಾರಿ ನಿಲ್ಲಿಸಿರುವ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ., ಹಾಗೂ ಎಸೈ ರಾಮಕೃಷ್ಣ ಕಾಮಗಾರಿ ನಡೆಸಲು ಅವಕಾಶ ಮಾಡಿಕೊಡುವಂತೆ ರೈತ…

Read More

ಬಂಟ್ವಾಳ: 400 ಕೆ.ವಿ. ವಿದ್ಯುತ್ ಪ್ರಸರಣ ತಂತಿ ಅಳವಡಿಸಲು ಟವರ್ ನಿರ್ಮಾಣಕ್ಕೆ ಗುತ್ತಿಗೆ ಕಂಪೆನಿ ಅಧಿಕಾರಿಗಳು ಮುಂದಾಗುತ್ತಿದ್ದಂತೆಯೇ ರೈತ ಸಂಘದ ನೇತೃತ್ವದಲ್ಲಿ ಸ್ಥಳೀಯ ಸಂತ್ರಸ್ತ ರೈತರು ಕಾಮಗಾರಿ ನಿಲ್ಲಿಸಿ ಪ್ರತಿಭಟಿಸಿದ ಘಟನೆ ಬಂಟ್ವಾಳ ಕಸ್ಬ ಗ್ರಾಮದ ಅಗ್ರಹಾರ್ ಬಳಿಯ ದರ್ಬಳಿಕೆ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದ್ದು ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ. ಭಟ್ ಘಟನಾ ಸ್ಥಳಕ್ಕೆ ದೌಡಾಯಿಸಿ ಸಂತ್ರಸ್ತ ರೈತರನ್ನು ಮನವೊಲಿಸಿ ಕಾಮಗಾರಿ ಮುಂದುವರೆಯಲು ಅವಕಾಶ ಮಾಡಿಕೊಟ್ಟರು.ದರ್ಬಳಿಕೆಯ ಖಾಸಗಿ ಜಮೀನಿನಲ್ಲಿ ೪೦೦ ಕೆ.ವಿ. ವಿದ್ಯತ್ ಪ್ರಸರಣ ತಂತಿಯನ್ನು ಅಳವಡಿಸಲು ಗುತ್ತಿಗೆ ಸಂಸ್ಥೆಯಾಗಿರುವ ಸ್ಟೆರ್‌ಲೈಟ್ ಪವರ್ ಕಂಪೆನಿ ಪೊಲೀಸ್ ಭದ್ರತೆಯೊಂದಿಗೆ ಜೆಸಿಬಿ ಮೂಲಕ ಮರಗಳನ್ನು ಉರುಳಿಸಿ ನೆಲಸಮತಟ್ಟು ಮಾಡುವ ಕೆಲವನ್ನು ಆರಂಭಿಸಿತ್ತು. ಈ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ ರೈತ ಸಂಘ ಹಾಗೂ ೪೦೦ ಕೆ.ವಿ. ಸಂತ್ರಸ್ತ ರೈತರ ಹೋರಾಟ ಸಮಿತಿಯ ಪ್ರಮುಖರು ಸ್ಥಳಕ್ಕೆ ಧಾವಿಸಿ ಅಧಿಕಾರಿಗಳು, ಜನಪ್ರತಿನಿಧಿಗಳು,…

Read More

ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುಡುವೆಟ್ಟು ( 42 ) ನ. 19 ರಂದು ನಿಧನರಾದರು .ಪುದುವೆಟ್ಟು ನಿವಾಸಿನಾರಾಯಣ ರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನ.19ರಂದು ಕೊನೆಯುಸಿರೆಳೆದಿದ್ದಾರೆ. ಕರಾವಳಿ ಅಲೆ, ವೆಬ್‌ದುನಿಯಾ, ಕಸ್ತೂರಿ ಚಾನೆಲ್, ವಿಜಯವಾಣಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಭುವನೇಂದ್ರ ಪುದುವೆಟ್ಟು ಅವರು ಕೆಲವು ಸಮಯಗಳಿಂದ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತ, ಈರ್ವರು ಪುಟ್ಟ ಮಕ್ಕಳು ಮತ್ತು ಸಹೋದರ ಯತೀಂದ್ರ ಅವರನ್ನು ಅಗಲಿದ್ದಾರೆ. ಭುವನೇಂದ್ರ ಅವರ ಪಾರ್ಥೀವ ಶರೀರವನ್ನು ಇಂದು ಮಧ್ಯಾಹ್ನ ಮಂಗಳೂರು ಆಸ್ಪತ್ರೆಯಿಂದ ಪುದುವೆಟ್ಟು…

Read More

ಮಂಗಳೂರು : ಭಾರತ ರತ್ನ ಮೌಲಾನಾ ಅಬುಲ್ ಕಲಾಂ ಆಝಾದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಮತ್ತು ಸಮನ್ವಯ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯ ಶಿಕ್ಷಕರ ಸಂಘದ ವತಿಯಿಂದ ತುಂಬೆ ಪದವಿಪೂರ್ವ ಕಾಲೇಜು ತುಂಬೆಯಲ್ಲಿ ಭಾನುವಾರ ನಡೆಯಿತು. ಸಮಾರಂಭದಲ್ಲಿ ಪ್ರಧಾನ ಭಾಷಣಗಾರರಾಗಿ ಭಾಗವಹಿಸಿದ್ದ ಅಡ್ಯಾರಿನಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ಡಾ.ಮುಸ್ಥಾಫ ಬಸ್ತಿಕೋಡಿ,ಮೌಲಾನಾ ಅಬುಲ್ ಕಲಾಂ ಆಝಾದರು , ಪ್ರಾಥಮಿಕ ಶಿಕ್ಷಣವು ಮಗುವಿನ ಹಕ್ಕಾಗಿದ್ದು ಅದು ಎಲ್ಲೆಡೆ ಮತ್ತು ಎಲ್ಲರಿಗೂ ಸಿಗುವಂತಾಗಬೇಕು ಎಂದು ಸ್ವಾತಂತ್ರ್ಯ ಪೂರ್ವದಲ್ಲೇಪ್ರತಿಪಾದನೆ ಮಾಡಿ ಅದಕ್ಕಾಗಿ ದೇಶದಲ್ಲಿ ಬುನಾದಿ ಹಾಕಿದ ಮಹಾನ್ ಮೇಧಾವಿಯಾಗಿದ್ದರು ಎಂದು ಹೇಳಿದರು. ಸಮಾರಂಭವನ್ನು ಉದ್ಘಾಟಿಸಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು ಎಚ್ ಮಾತನಾಡಿ ಅಕಾಡೆಮಿಯು ಸಾಹಿತ್ಯ ಮತ್ತು ಸಂಸ್ಕತಿಯ ಬೆಳವಣಿಗೆಗೆ ಪೂರಕವಾದ ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆಗೆ ಬದ್ದವಾಗಿದ್ದು ಶಾಶ್ವತವಾದ ಕಛೇರಿ ಮತ್ತು ವಸ್ತು ಸಂಗ್ರಹಾಲಯ…

Read More

ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ, ಕೋಲಾರ ಜಿಲ್ಲೆಯ ಆಶ್ರಯದಲ್ಲಿ ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೊಡಂಕಾಪು,ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ಹರಿಪ್ರಿಯಾ ಇವರು ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆಶಾಲಾ ಸಂಚಾಲಕರಾದ ಅತೀ ವಂದನೀಯ ಗುರು ಫಾ.ವಲೇರಿಯನ್ ಡಿಸೋಜಾ, ಶಾಲಾ ಮುಖ್ಯೋಪಾಧ್ಯಾಯರಾದ ಅತೀ ವಂದನೀಯ ಗುರು ಮೆಲ್ವಿನ್ ಲೋಬೋ ಶಿಕ್ಷಕ ಮತ್ತು ರಕ್ಷಕ ಸಂಘದ ಸಮಿತಿಯ ಸದಸ್ಯರು, ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಬಂಟ್ವಾಳ: ಫಾದರ್ ಮುಲ್ಲರ್ ಅಲೈಡ್ ಹೆಲ್ತ್‌ ಸೈನ್ಸ್ ಕಾಲೇಜ್ ತುಂಬೆ ಇಲ್ಲಿ ಪ್ರಥಮ‌ ವರ್ಷದ ಅನಸ್ತೇಷಿಯಾ ಆಪರೇಷನ್ ಥಿಯೇಟರ್ ಟೆಕ್ನೋಲಜಿ (ಬಿ ಎಸ್ಸಿ ಎಟಿ- ಓಟಿ ) ಇದರ ಉದ್ಘಾಟನಾ ಸಮಾರಂಭ ಕಾಲೇಜಿನ ಪ್ಲೋರೆನ್ಸ್ ನೈಟಿಂಗೇಲ್ ಸಭಾಂಗಣದಲ್ಲಿ ಸೋಮವಾರ ನಡೆಯಿತು.ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ ನ ನಿರ್ದೇಶಕ ರೆವರೆಂಡ್ ಫಾದರ್ ರಿಚಾರ್ಡ್ ಎ. ಕುವೆಲ್ಯೋ ಉದ್ಘಾಟಿಸಿದರು. ಅವರು ಮಾತನಾಡಿ ಫಾದರ್ ಮುಲ್ಲರ್ ಕಾಲೇಜ್ ಆಫ್ ಎಲೈಡ್ ಹೆಲ್ತ್ ಸೈನ್ಸ್ ಮೂಲಕ ಆರೋಗ್ಯ ಸೇವಾ ಕ್ಷೇತ್ರದಲ್ಲಿ ಅನೇಕ ಅವಕಾಶಗಳನ್ನು ಒದಗಿಸಿಕೊಡಲಾಗುತ್ತಿದ್ದು ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದು ಕೊಳ್ಳುವಂತೆ ತಿಳಿಸಿದರು.ಫಾದರ್ ಮುಲ್ಲರ್ ಕಾಲೇಜ್ ಆಫ್ ಎಲೈಡ್ ಹೆಲ್ತ್ ಸೈನ್ಸ್ ಮಂಗಳೂರು ಇಲ್ಲಿನ ಪ್ರಾಂಶುಪಾಲೆ ಡಾ. ಹಿಲ್ಡಾ ಫೆರ್ನಾಂಡಿಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸಂಸ್ಥೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅನೇಕ ಹೊಸ ಕೋರ್ಸ್ ಗಳನ್ನು ಪರಿಚಯಿಸುತ್ತಿದ್ದುಮುಂದಿನ‌ ದಿನಗಳಲ್ಲಿ ಇದನ್ನು ಅಭ್ಯಸುವ ವಿದ್ಯಾರ್ಥಿಗಳಿಗೆ ಉತ್ತಮ‌ ಭವಿಷ್ಯವಿದೆ ಎಂದು ತಿಳಿಸಿದರು. ಕಠಿಣ ಪರಿಶ್ರಮ ಇಲ್ಲದೆ ಯಶಸ್ಸು ಸಿಗುವುದಿಲ್ಲ.‌ 4…

Read More

ಬಂಟ್ವಾಳ: ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಿಬಿರಕ್ಕೆ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಪೋರೆನ್ಸಿಕ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಮಹಾಬಲೇಶ್ ಶೆಟ್ಟಿ, ಬಂಟ್ವಾಳ ಗ್ರಾಮಾಂತರ ‌ಪೊಲೀಸ್ ಠಾಣೆಯ ಎಸೈ ಹರೀಶ್ ಎಂ.ಆರ್. ಪುದು ಗ್ರಾಮ ಪಂಚಾಯತಿ ಅಧ್ಯಕ್ಷೆ ರಶೀದಾ ಬಾನು ಸೇವಾಂಜಲಿ ಪ್ರತಿಷ್ಠಾನದ ಅಧ್ಯಕ್ಷ ವಜ್ರನಾಭ ಶೆಟ್ಟಿ, ಫರಂಗಿಪೇಟೆ ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಜಯರಾಮ ಶೇಖ, ರೋಟರಿ ಕ್ಲಬ್ ಫರಂಗಿಪೇಟೆ ಅಧ್ಯಕ್ಷ ಹಾಗೂ ಕಾರ್ಯಕ್ರಮ ಸಂಯೋಜಕ ಅರ್ಜುನ್ ಪೂಂಜ, ಎನ್ ಐಪಿ ಟಿ ಪ್ರಾಂಶುಪಾಲ ಡಾ.ಧನೇಶ್ ಕುಮಾರ್ ಕೆ.ಯು., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯ ಮೇಲ್ವಿಚಾರಕಿ ಮಮತ, ಎನ್ ಎಸ್ ಎಸ್ ವಿದ್ಯಾರ್ಥಿ ಕಾರ್ಯದರ್ಶಿ ಸಂಕೀರ್ತ್ ಸನೀಶ್ , ಡಾ. ಮಹಿಮಾ ಬಂಜನ್…

Read More