Author: admin
ಬಂಟ್ವಾಳ: ಸಿಡಿಲು ಬಡಿದು ಬಾಲಕ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಬಂಟ್ವಾಳ ತಾಲೂಕು ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಮೃತ ಬಾಲಕ.ಸಂಜೆ ಬಾರಿ ಗುಡುಗು ಸಿಡಿಲು ಸಹಿತ ಮಳೆಯಾಗಿತ್ತು. ಸುಭೋದ್ ಅವರು ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡಿದ್ದ ಆತನನ್ನು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೆ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಬಂಟ್ವಾಳ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕದ ಮೂರನೇ ಮಿನಿ ಒಲಂಪಿಕ್ ಕ್ರೀಡಾಕೂಟದಲ್ಲಿ ಮುಕ್ತ ವಿಭಾಗದ ಜೂಡೋ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಪೊಳಲಿ ಸರಕಾರಿ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಯಶ್ವಿನಿ ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ಜೂಡೋ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ಉಚಿತ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿದ್ಯಾವಿಲಾಸ ಶಾಲೆಯಾಡಳಿತ ಮಂಡಳಿಯ ಸುಬ್ರಾಯ ಕಾರಂತ್, ಪೊಳಲಿ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯಂತ್ ಆಚಾರ್ಯ ಸಹಕರಿಸಿದ್ದಾರೆ. ರಾಜೇಶ್ ಬ್ರಹ್ಮರಕೂಟ್ಲು ಅವರು ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಮಾರ್ಷಲ್ ಆರ್ಟ್ ತರಬೇತಿಯನ್ನು ನೀಡುತ್ತಿದ್ದು ಆಸಕ್ತರು 9964673040 ಸಂಪರ್ಕಿಸ ಬಹುದಾಗಿದೆ
ಬಂಟ್ವಾಳ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕದ ಮೂರನೇ ಮಿನಿ ಒಲಂಪಿಕ್ ಕ್ರೀಡಾಕೂಟದಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜೂಡೋ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಪೊಳಲಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಹಂಸಿಕಾ ಕಂಚಿನ ಪದಕದೊಂದಿಗೆ ತೃತೀಯ ಸ್ಥಾನವನ್ನು ಗೆದ್ದುಕೊಂಡಿದ್ದಾರೆ. ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ಜೂಡೋ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿದ್ಯಾವಿಲಾಸ ಶಾಲೆಯಾಡಳಿತ ಮಂಡಳಿಯ ಸುಬ್ರಾಯ ಕಾರಂತ್, ಪೊಳಲಿ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯಂತ್ ಆಚಾರ್ಯ ಸಹಕರಿಸಿದ್ದಾರೆ.
ಬಂಟ್ವಾಳ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕದ ಮೂರನೇ ಮಿನಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜೂಡೋ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯ 6ನೇ ತರಗತಿ ವಿದ್ಯಾಥಿನಿ ಅನನ್ಯ ಆರ್. ಕಂಚಿನ ಪದಕದೊಂದಿಗೆ ತೃತೀಯ ಸ್ಥಾನವನ್ನು ಗೆದ್ದುಕೊಂಡಿದ್ದಾರೆ. ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ಜೂಡೋ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿದ್ಯಾವಿಲಾಸ ಶಾಲೆಯಾಡಳಿತ ಮಂಡಳಿಯ ಸುಬ್ರಾಯ ಕಾರಂತ್ ಸಹಕರಿಸಿದ್ದಾರೆ.
ಬಂಟ್ವಾಳ: ಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲು ಉದ್ದೇಶಿಸಿರುವ ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ‘ಎಳೆಯರ ಗೆಳೆಯ ಮುಳಿಯ’ ಎಂದೇ ಪ್ರಸಿದ್ಧರಾಗಿರುವ ಹಿರಿಯ ಸಾಹಿತಿ ಮುಳಿಯ ಶಂಕರ ಭಟ್ ಅವರನ್ನು ಆಯ್ಕೆಗೊಳಿಸಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಘೋಷಿಸಿದ್ದಾರೆ ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ಬಂಟ್ವಾಳ ತಾಲೂಕಿನ ಅಳಿಕೆ ಸಮೀಪ ಮುಳಿಯದಲ್ಲಿ ವಿಶ್ರಾಂತ ಜೀವನ ನಡೆಸುತ್ತಿರುವ 72ರ ಹರೆಯದ ನಿವೃತ್ತ ಅಧ್ಯಾಪಕ ಮುಳಿಯ ಶಂಕರ ಭಟ್ ಅವರು ಮಕ್ಕಳ ಸಾಹಿತ್ಯದಿಂದ ತೊಡಗಿ ಆಧ್ಯಾತ್ಮ, ಧಾರ್ಮಿಕ ಸಹಿತ ವೈವಿಧ್ಯಮಯ ಸಾಹಿತ್ಯ ರಚನೆಗಳನ್ನು ಮಾಡಿದ್ದು, ಸುಮಾರು 19ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ. ಪತ್ರಕರ್ತರಾಗಿ, ಗಮಕಿಯಾಗಿಯೂ ತೊಡಗಿಸಿಕೊಂಡಿದ್ದ ಅವರ ಕೃತಿ ಕೇರಳ ಶಾಲಾ ಪಠ್ಯದಲ್ಲಿ ಸೇರ್ಪಡೆಯಾಗಿದೆ. 2002ರಲ್ಲಿ ಪುತ್ತೂರಿನಲ್ಲಿ ನಡೆದ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದ ಅವರು, ಒಡಿಯೂರಿನಲ್ಲಿ 2006ರಲ್ಲಿ ನಡೆದ ವಿಟ್ಲ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದರು. 2021ರಲ್ಲಿ ಮಂಚಿಯಲ್ಲಿ…
ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನ ಶಂಭೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ನ.೧೯ರಂದು ಮಂಗಳವಾರ ಶಂಭೂರು ಶಾಲೆಯಲ್ಲಿ ನಡೆಯಲಿದೆ ಎಂದು ಮಕ್ಕಳ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಹೇಮಚಂದ್ರ ಭಂಡಾರದ ಮನೆ ಶಂಭೂರು ತಿಳಿಸಿದರು.ಅವರು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ನರಿಕೊಂಬು ಗ್ರಾಮ ಪಂಚಾಯತಿ ಅಧ್ಯಕ್ಷ ಸಂತೋಷ್ ಕುಮಾರ್ ಶೇಡಿಗುರಿಯಲ್ಲಿ ಮೆರವಣಿಗೆಗೆ ಚಾಲನೆ ನೀಡುವರು. ಶಂಭೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಪ್ರೇಕ್ಷಾ ಸರ್ವಾಧ್ಯಕ್ಷತೆ ವಹಿಸಲಿರುವರು. 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಕಡೇಶಿವಾಲಯ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿ ಸಾನ್ವಿ ಸುವರ್ಣ ಸಮ್ಮೇಳನವನ್ನು ಉದ್ಘಾಟಿಸುವರು ಎಂದರು. ಮಕ್ಕಳ ಸ್ವರಚಿತ ಕೃತಿಗಳನ್ನು ಸಾಹಿತಿ, ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೂಂತಾರು ಬಿಡುಗಡೆ ಮಾಡುವರು. ಬೆಳ್ತಂಗಡಿ ವಾಣಿ ಪಿ.ಯೂ ಕಾಲೇಜಿನ ದ್ವಿತೀಯ ಪಿ.ಯು. ತರಗತಿಯ ವಿಜ್ಞಾನ ವಿಭಾಗದ…
ಬಂಟ್ವಾಳ: ಸಜೀಪ ನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿ ಪ್ರಿಯತಮೆಯನ್ನು ಭೇಟಿಯಾಗಲು ಬಂದ ಯುವಕನಿಗೆ ಸ್ಥಳೀಯರು ಕಟ್ಟಿಹಾಕಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಂಚಿನಡ್ಕಪದವು ನಿವಾಸಿಗಳಾದ ಮಹಮ್ಮದ್ (25) ಮಹಮ್ಮದ್ ರಿಜ್ವಾನ್ (25) ಇರ್ಪಾನ್(27) ಅನೀಸ್ ಅಹಮ್ಮದ್ (19) ನಾಸೀರ್ (೨೭27) ಎಂದು ಗುರುತಿಸಲಾಗಿದೆ. ಕಳೆದ ನವೆಂಬರ್ 7 ರಂದು ರಾತ್ರಿ 19 ಉಳ್ಳಾಲ ತಾಲೂಕು ವ್ಯಾಪ್ತಿಯ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಪ ಎಂಬಾತನನು ಆತನ ದೂರದ ಸಂಬಂಧಿ ಹುಡುಗಿಯೊಬ್ಬಳು ಸಜೀಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿರುವ ಮನೆಗೆ ಬರಲು ಹೇಳಿದಂತೆ ಕಂಚಿನಡ್ಕಪದವಿಗೆ ಬಂದಾಗ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಕಂಬಕ್ಕೆ ಹಗ್ಗದಿಂದ ಕಟ್ಟಿಹಾಕಿ ಹಲ್ಲೆ ನಡೆಸಿದೆ. ಈ ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಹಲ್ಲೆಗೊಳಗಾದ ಮಹಮ್ಮದ್ ಮುಸ್ತಾಫ ಚಿಕಿತ್ಸಗಾಗಿ ಮಂಗಳೂರಿನ ಖಾಸಗಿ…
ಬಂಟ್ವಾಳ: ಮದುವೆ ಹಾಲ್ ನಲ್ಲಿ ಮಹಿಳೆಯೊಬ್ಬಳು ಇಬ್ಬರು ಮಕ್ಕಳ ಚಿನ್ನದ ಸರ ಕಳ್ಳತನ ನಡೆಸಿದ ಘಟನೆ ಭಾನುವಾರ ಬಂಟ್ವಾಳದ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮೀ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಸರ ಕಳ್ಳತನ ಮಾಡಿದ ಬಳಿಕ ಮಹಿಳೆ ಕಲ್ಯಾಣ ಮಂಟಪದಿಂದ ಕಾಲ್ಕಿತ್ತಿದ್ದಾಳೆ.ಭಾನುವಾರ ಬಂಟ್ವಾಳ ದ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮೀ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ಇತ್ತು. ಈ ಸಂದರ್ಭ ಸಲ್ವಾರ್ ಧರಿಸಿಕೊಂಡು ಬಂದಿದ್ದ ಮಹಿಳೆಯೊಬ್ಭಳು ಅಲ್ಲಿದ್ದ ಮಕ್ಕಳನ್ನು ಟಾರ್ಗೆಟ್ ಮಾಡಿ ಸರಕಳ್ಳತನಕ್ಕೆ ಇಳಿದಿದ್ದಳು. ಬಾಲಕಿಯೊಬ್ಬಳ ಕತ್ತಿನಲ್ಲಿ ಇರುವೆ ಇದೆ ಎಂದು ಹೇಳಿ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಎಗರಿಸಿದ್ದಾಳೆ. ಈ ಸಂದರ್ಭ ಬಾಲಕಿ ಈ ವಿಷಯವನ್ನು ತನ್ನ ಅಕ್ಕನಲ್ಲಿ ತಿಳಿಸಿದ್ದು ಅಕ್ಕ ಮನೆಮಂದಿಗೆ ತಿಳಿಸುವ ವೇಳೆ ಕಳ್ಳಿ ಕಲ್ಯಾಣ ಮಂಟಪದಿಂದ ಪರಾರಿಯಾಗಿದ್ದಾಳೆ. ಸುದ್ದಿ ಮದುವೆ ಹಾಲ್ ನಲ್ಲಿ ಹರಿದಾಡುತ್ತಿದ್ದಂತೆಯೇ ಪೋಷಕರು ತಮ್ಮ ಮಕ್ಕಳ ಚಿನ್ನಾಭರಣವನ್ನು ಪರಿಶೀಲಿಸಿದಾಗ ಇನ್ನೊರ್ವ ಬಾಲಕನ ಕತ್ತಿನಿಂದ ಸರ ಎಗರಿಸಿರುವುದು ಬೆಳಕಿಗೆ ಬಂದಿದೆ. ಮತ್ತೋರ್ವ ಬಾಲಕನ ಕತ್ತಿಗೆ ಕೈ ಹಾಕುವಾಗ…
ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ಇದರ 4ನೇ ಶಾಖೆಯಾದ ಕುಕ್ಕಾಜೆ ಶಾಖೆಯ 25ನೇ ವರ್ಷಾಚರಣೆಯ ಅಂಗವಾಗಿ ಸದಸ್ಯ ಗ್ರಾಹಕ ಸಮ್ಮಿಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಸಭಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಶಾಖೆಯಲ್ಲಿ ಗಣಹೋಮ ಮತ್ತು ಶ್ರೀ ಲಕ್ಷ್ಮೀ ಪೂಜೆಯನ್ನು ನೇರವೆರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಸಂಘದ ಅಭಿವೃದ್ಧಿಗೆ ಶ್ರಮಿಸಿದ ಗ್ರಾಹಕರನ್ನು ಮತ್ತು ಸಿಬ್ಬಂದಿಗಳನ್ನು ಗೌರವಿಸಲಾಯಿತು. ಉತ್ತಮ ವ್ಯವಹಾರ ನಡೆಸಿದ ಅಮೂಲ್ಯ ಸ್ವ-ಸಹಾಯ ಸಂಘಗಳನ್ನು ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿ ಶಾಖೆಯ ಏಳಿಗೆಗೆ ಶ್ರಮಿಸಿದ ಎಲ್ಲಾ ಸದಸ್ಯ ಗ್ರಾಹಕರಿಗೆ ಅಭಿನಂದನೆ ಸಲ್ಲಿಸಿದರು. ಮುಂದೆಯು ಇನ್ನೂ ಉತ್ತಮ ಸಹಕಾರ ನೀಡುವಂತೆ ವಿನಂತಿಸಿದರು. ಸರಕಾರಿ ಪ್ರೌಢ ಶಾಲೆ ಮಂಚಿಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಕಾರ್ಯಧ್ಯಕ್ಷ ಗಣೇಶ್ ಐತಾಳ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸಂಘದ ಸ್ಥಾಪಕಾಧ್ಯಕ್ಷ ಡಾ| ಅಮ್ಮೆಂಬಳ ಬಾಳಪ್ಪರವರ ಒಡನಾಟವನ್ನು ನೆನಪಿಸಿದರು. ಪಣೋಲಿಬೈಲು ಕ್ಷೇತ್ರದ ಅರ್ಚಕ ನಾರಾಯಣ ಮೂಲ್ಯ, ಮಹಾದೇವಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಮೋಹನ ನಾಯಕ್, ಯಕ್ಷಗಾನ ಕಲಾವಿದ…
ಬಂಟ್ವಾಳ: ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘ ದ.ಕ.ಜಿಲ್ಲೆ ವತಿಯಿಂದ 3ನೇ ವರ್ಷದ ವಾರ್ಷಿಕೋ ತ್ಸವ ಹಾಗೂ ಸಾರ್ವಜನಿಕ ಧನಲಕ್ಷ್ಮೀ ಪೂಜೆ ಬಿ.ಸಿ.ರೋಡ್ ನ ಶ್ರೀ ರಕೇಶ್ವರಿ ದೇವಸ್ಥಾನ ವಠಾರದಲ್ಲಿ ನಡೆಯಿತು.ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ ಗುರುದೇವಾನಂದ ಸ್ವಾಮೀಜಿ ಹಾಗೂ ಶ್ರೀಧಾಮ ಮಾಣಿಲ ಶ್ರೀ ಮೋಹನ ದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನಗೈದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಸಾಮಾಜಿಕ ಕಾರ್ಯ ಕರ್ತ, ಕಲಾವಿದ ಬಿ.ಆರ್. ಕಬಕ ಹಾಗೂ ಕರೆಂಕಿ ಶ್ರೀದುರ್ಗಾ ಫ್ರೆಂಡ್ಸ್ನ ಸಮಾಜ ಮುಖಿ ಕಾರ್ಯ ಗುರುತಿಸಿ, ಅಧ್ಯಕ್ಷರು, ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು. ಅನಾರೋಗ್ಯ ದಿಂದ ಬಳಲುತ್ತಿದ್ದ ಕಿಶೋರ್ ರಾವ್ ಮೂಡಬಿದಿರೆ ಅವರಿಗೆ ನೆರವು ವಿತರಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ಪ್ರಮುಖರಾದ ಪುರುಷೋತ್ತಮ ಮೊಗರ್ನಾಡ್, ಜನಾರ್ದನ ಭಟ್ ಮಂಗಳೂರು, ಶರಣ್ ಪಂಪ್ ವೆಲ್, ಪುನೀತ್ ಕೆರೆಹಳ್ಳಿ, ಭರತ್ ಕುಮ್ಡೇಲ್, ಉದ್ಯಮಿ…








