Author: admin
ಬಂಟ್ವಾಳ: ರೂಟ್ ಪರ್ಮಿಟ್ ಬಸ್ಸುಗಳು ಮತ್ತು ಶಾಲಾ ಬಸ್ಸುಗಳು ಅನಧಿಕೃತವಾಗಿ ಬಾಡಿಗೆ ಮಾಡುತ್ತಿರುದನ್ನು ನಿಲ್ಲಿಸಿ ಟೂರಿಸ್ಟ್ ವ್ಯಾನ್ ಚಾಲಕ ಮಾಲಕರಿಗೆ ಆಗುವ ತೊಂದರೆಯನ್ನು ತಪ್ಪಿಸುವಂತೆ ಕೋರಿ ಆರ್ಟಿಓ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಿಗೆ ಬಂಟ್ವಾಳ ತಾಲೂಕು ಟೂರಿಸ್ಟ್ ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ಅಧ್ಯಕ್ಷ ಸದಾನಂದ ಹಳೆಗೇಟು ಅವರ ನೇತೃತ್ವದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು.ಬಂಟ್ವಾಳ ತಾಲೂಕಿನಲ್ಲಿ ಸುಮಾರು ೮೦ಕ್ಕೂ ಹೆಚ್ಚು ಮಿನಿ ಬಸ್, ಮ್ಯಾಕ್ಸಿಕ್ಯಾಬ್, ಟೆಂಪೋ ಟ್ರಾವೆಲ್ಸ್ ವಾಹನಗಳು ಇದ್ದು ಮಿನಿ ಬಸ್ ಒಂದಕ್ಕೆ 60 ಸಾವಿರ, ಟೆಂಪೋ ಟ್ರಾವೆಲರ್ಗೆ 23ಸಾವಿರದವರೆಗೆ ವಾರ್ಷಿಕ ತೆರಿಗೆಯನ್ನು ಟೂರಿಸ್ಟ್ ಪರ್ಮಿಟ್ ಆಧಾರದಲ್ಲಿ ಸರಕಾರಕ್ಕೆ ಪಾವತಿ ಮಾಡಲಾಗುತ್ತಿದೆ. ಈ ಟೂರಿಸ್ಟ್ ವಾಹನಗಳಿಗೆ ವಾರದಲ್ಲಿ ಒಂದು ಎರಡು ಬಾಡಿಗೆ ಆಗುತ್ತಿದ್ದು ಚಾಲಕರು ಕಷ್ಟದ ಜೀವನವನ್ನು ಸಾಗಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ರೂಟ್ ಪರ್ಮಿಟ್ ಬಸ್ಸುಗಳು ಬಿ.ಸಿ.ರೋಡ್- ತೊಕ್ಕೊಟ್ಟು -ಮಂಗಳೂರು, ಬಿ.ಸಿ.ರೋಡು – ಕೈಕಂಬ- ಕಟೀಲ್, ಬಿ.ಸಿ.ರೋಡು- ಪಂಜಿಕಲ್ಲು- ವಾಮದಪದವು, ಬಿ.ಸಿ.ರೋಡು -ಮೂಡಬಿದ್ರೆ, ಕುಕ್ಕಾಜೆ, ಮಂಚಿ, ಸಾಲೆತ್ತೂರ್…
ಬಂಟ್ವಾಳ: ಸ್ವಸ್ಥ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ತನ್ನ ವೈಯಕ್ತಿಕ ಆಸೆ ಆಕಾಂಕ್ಷೆಗಳನ್ನು ಬದಿಗೊತ್ತಿ ಸಮಾಜದ ಜನರ ನಿಸ್ವಾರ್ಥ ಸೇವಾ ಮಾಡುತ್ತಿರುವ ಕೃಷ್ಣ ಕುಮಾರ್ ಪೂಂಜ ಅವರ ಸೇವಾ ಕಾರ್ಯ ಅನುಕರಣೀಯ ಎಂದು ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್ ಹೇಳಿದರು. ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಕ್ಷಯರೋಗಿಗಳಿಗೆ ದವಸಧಾನ್ಯಗಳ ಆಹಾರದ ಕಿಟ್ ವಿತರಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಉತ್ತಮವಾದ ಕೆಲಸವನ್ನು ಪೂಂಜರು ಮಾಡುತ್ತಿದ್ದಾರೆ. ಕ್ಷಯರೋಗಿಗಳನ್ನು ಗುರುತಿಸಿ ಅವರಿಗೆ ಪೌಷ್ಠಿಕ ಆಹಾರವನ್ನು ಪ್ರತೀ ತಿಂಗಳು ನೀಡುವ ಮೂಲಕ ಅವರ ಸೇವೆ ಮಾಡುತ್ತಿದ್ದಾರೆ. ಇದನ್ನು ರೋಗಿಗಳು ಸದ್ಬಳಕೆ ಮಾಡಿಕೊಂಡು ರೋಗ ಗುಣಮುಖರಾಗುವುದೇ ಅವರಿಗೆ ಕೊಡುವ ಪ್ರತಿಫಲವಾಗಿದೆ ಎಂದು ತಿಳಿಸಿದರು. ಕ್ಷಯ ರೋಗಿಗಳು ಎನ್ನುವ ಕೀಳರಿಮೆ, ಹಿಂಜರಿಕೆ ಬಿಟ್ಟು ರೋಗ ನಿರ್ಮೂಲನೆಗೆ ಸಹಕರಿಸ ಬೇಕು. ನಮ್ಮ ಆಸುಪಾಸಿನಲ್ಲಿ ಬೇರೆ ಯಾರಾದರೂ ರೋಗಿಗಳಿದ್ದರೆ ಅವರಿಗೂ ಚಿಕಿತ್ಸೆಗೆ ನೆರವಾಗಬೇಕು ಎಂದರು. ಬಂಟ್ವಾಳ ರೋಟರಿ ಕ್ಲಬ್ನ ನಿಕಟಪೂರ್ವ ಅಧ್ಯಕ್ಷ ಬಿ.ಪ್ರಕಾಶ್ ಬಾಳಿಗ…
ತುಂಬೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳವು ಬಂಟ್ವಾಳ: ತುಂಬೆಯ ಶ್ರೀ ಮಹಾಲಿಂಗೇಶ್ವರದೇವಸ್ಥಾನಕ್ಕೆ ಸೋಮವಾರ ರಾತ್ರಿ ಕಳ್ಳರು ನುಗ್ಗಿ ಸೊತ್ತುಗಳನ್ನು ಕಳವುಗೈದಿದ್ದಾರೆ. ದೇವಸ್ಥಾನದ ಕಚೇರಿಯಲ್ಲಿದ್ದ ಬೆಳ್ಳಿಯ ಅಭಿಷೇಕದ ಜಲಧಾರಿಣಿ ಹಾಗೂ ದೇವಸ್ಥಾನದ ಒಳಗಿದ್ದ ಹುಂಡಿಯ ಕಾಣಿಕೆ ಹಣವನ್ನು ಕಳ್ಳರು ದೋಚಿದ್ದಾರೆ. ದೇವಸ್ಥಾನಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳವನ್ನೂ ಕರೆಸಿಕೊಳ್ಳಲಾಗಿದೆ. ಸೋಮವಾರ ಇಲ್ಲೇ ಪಕ್ಕದ ಸುಜೀರು ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು ಜನ ಆತಂಕ ಗೊಂಡಿದ್ದಾರೆ
ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯ ಇದರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸಂಘದ ಸದಸ್ಯ ದಿನೇಶ್ ಕುಲಾಲ್ ಅವರ ಚಿಕಿತ್ಸೆಗೆ ೧ ಲಕ್ಷ ರೂಪಾಯಿ ಆರ್ಥಿಕ ಸಹಕಾರವನ್ನು ಸಂಘದ ಅಧ್ಯಕ್ಷ ಸುಧೀರ್ ಪೂಜಾರಿ ಹಸ್ತಾಂತರಿಸಿದರು. ಈ ಸಂದರ್ಭ ಸಂಘದ ಗೌಲ ಸಲಹೆಗಾರರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು
ಸಿಸಿ ಟಿವಿ ದೃಶ್ಯಗಳು ಬಂಟ್ವಾಳ: ಪುದು ಗ್ರಾಮದ ಫರಂಗಿಪೇಟೆ ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿಯೇ ಇರುವ ಸುಜೀರು ಶ್ರೀ ದೇವಕಿ ಕೃಷ್ಣ ರವಳನಾಥ ದೇವಸ್ಥಾನದಲ್ಲಿ ಸೋಮವಾರ ಪ್ರಾಥಃ ಕಾಲದ ವೇಳೆ ಕಳ್ಳರು ನುಗ್ಗಿ ಚಿನ್ನ ಬೆಳಿ ಸಹಿತ ಹುಂಡಿಯಲ್ಲಿದ್ದ ಕಾಣಿಕೆಯನ್ನು ದೋಚಿ ಪರಾರಿಯಾಗಿದ್ದಾರೆ. ಮೂರು ಮಂದಿ ಕಳ್ಳರು ದೇವಸ್ಥಾನದ ಒಳನುಗ್ಗಿ ಗರ್ಭಗುಡಿ ಪ್ರವೇಶಿಸಿ ಸೊತ್ತುಗಳನ್ನು ಕಳವುಗೈಯ್ಯುತ್ತಿರುವ ದೃಶ್ಯಗಳು ಸಿಸಿ ಟವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ. ಸುಜೀರ್ಕಾರ್ಸ್ ಕುಟುಂಬಕ್ಕೆ ಸಂಬಂಧಪಟ್ಟ ದೇವಸ್ಥಾನ ಇದಾಗಿದ್ದು ಭಾನುವಾರ ಇಲ್ಲಿ ದೀಪಾವಳಿ ಆಚರಣೆ ಸಂಭ್ರಮದಿಂದ ನಡೆದಿತ್ತು. ಮಧ್ಯರಾತ್ರಿಯ ಬಳಿಕ ಕಳ್ಳರು ನುಗ್ಗಿ ಬೆಳ್ಳಿಯ ದೀಪಗಳು, ಗಿಂಡೆ, ಚೊಂಬು, ಪ್ರಭಾವಳಿಯ ಮೇಲಿಡುವ ಚಿನ್ನದ ಸಣ್ಣ ಕೊಡೆ, ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಎಗರಿಸಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ ಆಶ್ರಯದಲ್ಲಿ ಈ ಸಾಲಿನ ಇಂಟರಾಕ್ಟ್ ಕ್ಲಬ್ ನ ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭ ಸಜೀಪಮೂಡ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಬೇಬಿ ಕುಂದರ್ ಪದಗ್ರಹಣ ನೆರವೇರಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಹಾಗೂ ಸೇವಾಗುಣವನ್ನು ಮೂಡಿಸಲು ಇಂಟರಾಕ್ಟ್ ಕ್ಲಬ್ ಸಹಕಾರಿಯಾಗಿದೆ ಎಂದರು. ಶಾಲೆಯ ಹಿರಿಯ ವಿದ್ಯಾರ್ಥಿ ಸಂದೀಪ್ ಸಾಲ್ಯಾನ್, ಉಪಪ್ರಾಂಶುಪಾಲೆ ಜ್ಯೋತಿ ಕುಮಾರಿ, ಇಂಟರಾಕ್ಟ್ ಸಂಯೋಜಕ ಬಾಲಕೃಷ್ಣ ಶೆಟ್ಟಿ ವೇದಿಕೆಯಲ್ಲಿದ್ದರು. ನೂತನ ಅಧ್ಯಕ್ಷೆ ಕೃತಿಕಾ ಅಧಿಕಾರ ಸ್ವೀಕರಿಸಿ ಮಾತನಾಡಿದರು. ನಿರ್ಗಮಿತ ಅಧ್ಯಕ್ಷೆ ಅಶುರಾ ಅನಿಸಿಕೆ ವ್ಯಕ್ತಪಡಿಸಿದರು.ಕೃತಿಕಾ ಸ್ವಾಗತಿಸಿ, ಅಶುರಾ ವಂದಿಸಿದರು, ಇಮ್ನಾಝ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
ಬಂಟ್ವಾಳ: ತುಳುನಾಡಿನ ಶೈಲಿಯ ತಿಂಡಿ ತಿನಿಸುಗಳಿಗೆ ಜನಪ್ರಿಯತೆಯನ್ನು ಪಡೆದುಕೊಂಡಿರುವ ಬಂಟ್ವಾಳ ತಾಲೂಕಿನ ಕೈಕಂಬದ ಪೊಳಲಿ ದ್ವಾರದ ಬಳಿಯಿರುವ ಸಾಯಿಲೀಲಾ ಶುದ್ದ ಸಸ್ಯಹಾರಿ ಹೋಟೇಲ್ ನಲ್ಲಿ ಶ್ರೀ ಲಕ್ಷ್ಮೀ ಪೂಜೆ ವಿಜ್ರಂಭಣೆಯಿಂದ ನಡೆಯಿತು. ಸಂಜೆ ಅರ್ಚಕ ವೃಂದದ ಪೌರೋಹಿತ್ಯದಲ್ಲಿ ಶ್ರೀ ಲಕ್ಷ್ಮೀ ಪೂಜೆ ನೆರೆವೇರಿದ್ದು ಹೊಟೇಲ್ ಮಾಲಕ ಸದಾನಂದ ಬಂಗೇರ, ಅವರ ಕುಟುಂಬ ವರ್ಗ, ಗ್ರಾಹಕರು, ಹಿತೈಷಿಗಳು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು. ಬಳಿಕ ಖ್ಯಾತ ಗಾಯಕ ಕೆ.ಜೆ. ಏಸುದಾಸ್ ಅವರ ಶಿಷ್ಯ ವೆಂಕಟಕೃಷ್ಣ ಬಳಗದಿಂದ ನಡೆದ ಭಕ್ತಿಗಾನ ವೈಭವ ನೆರೆದ ಪ್ರೇಕ್ಷಕರ ಮನ ಸೂರೆಗೊಳಿಸಿತು. ಸದಾನಂದ ಬಂಗೇರ ಅವರ ಮಾಲಕತ್ವದ ಹೊಟೇಲ್ ಸಾಯಿಲೀಲಾ ತುಳು ಚಿತ್ರನಟ ಭೋಜರಾಜ್ ವಾಮಂಜೂರು ಅವರಿಂದ ಉದ್ಘಾಟನೆಗೊಂಡು ಯಶಸ್ವಿ ಏಳು ವರ್ಷಗಳನ್ನು ಪೂರೈಸಿ ಮುನ್ನಡೆಯುತ್ತಿದ್ದು ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ತುಳುನಾಡು ಶೈಲಿಯ ಮನೆ ತಿಂಡಿಗಳು ಇಲ್ಲಿನ ವಿಶೇಷತೆಯಾಗಿದ್ದು ಊರ ಪರವೂರ ಗ್ರಾಹಕರು ವಿಶೇಷ ತಿಂಡಿ, ತಿನಿಸು ಖಾದ್ಯಗಳನ್ನು ಸವಿಯಲು ಇಲ್ಲಿಗೆ ಆಗಮಿಸುತ್ತಾರೆ. ಪತ್ರೋಡೆ, ಬಸಳೆ ಪುಂಡಿ, ಎಣ್ಣೆ ರಹಿತ…
ಬಂಟ್ವಾಳ: ತಾಲೂಕಿನ ನೇರಂಬೋಳುವಿನ ರಕ್ತೇಶ್ವರಿ ಯುವಕ ಸಂಘ ಈ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ. ಕಳೆದ 25 ವರ್ಷಗಳಿಂದ ಸಾಮಾಜಿಕ, ಸಾಂಸ್ಕೃತಿಕ, ಕ್ರೀಡೆ ಹಾಗೂ ಸಂಘಟನಾತ್ಕಕ ಚಟುವಟಿಕೆಗಳನ್ನು ನಡೆಸಿಕೊಂಡು ಗ್ರಾಮೀಣ ಭಾಗದಲ್ಲಿ ಜನರನ್ನು ಸಂಘಟಿಸಿಕೊಂಡು ಬರುತ್ತಿದೆ.
ಬಂಟ್ವಾಳ: ಕಲ್ಲಡ್ಕ ಮ್ಯೂಸಿಯಂನ ಸ್ಥಾಪಕ ಮಹಮ್ಮದ್ ಯಾಸೀರ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.ಮಹಮ್ಮದ್ ಯಾಸೀರ್ ಕಲ್ಲಡ್ಕದ ಬೀಡಿ ಉದ್ಯಮಿ. ಇವರ ಹಳೇ ವಸ್ತುಗಳು ಹಾಗೂ ವಿವಿಧ ದೇಶಗಳ ಕರೆನ್ಸಿ ಸಂಗ್ರಹ ಇಂದು ಕಲ್ಲಡ್ಕ ಮ್ಯೂಸಿಯಂ ಆಗಿ ಬದಲಾಗಿದೆ. ರಾಜರ ಕಾಲದಿಂದ ಆರಂಭಗೊಂಡು ಹಿರಿಯರು ಬಳಸಿದ ಅಪರೂಪದ ವಸ್ತುಗಳ ಅಪೂರ್ವ ಸಂಗ್ರಹ ಇವರ ಮ್ಯೂಸಿಯಂ ನಲ್ಲಿದೆ.ಮನೆಯೇ ಇವರ ವಸ್ತು ಸಂಗ್ರಹಾಲಯ.2003ರಲ್ಲಿ ಶಾಲಾ ವಿದ್ಯಾರ್ಥಿಯಾಗಿದ್ದಾಗ ನಾಣ್ಯ ಸಂಗ್ರಹಿಸುವ ಹವ್ಯಾಸ ಹೊಂದಿದ್ದರು. ಇಂದು ಅವರ ಮ್ಯೂಸಿಯಂ ನಲ್ಲಿ ಪುರಾತನ ವಸ್ತುಗಳು, ಅಪರೂಪದ ಕರೆನ್ಸಿಗಳು, ಫ್ಯಾನ್ಸಿ ನೋಟುಗಳು, ಹಳೆಯ ಪತ್ರಿಕೆಗಳು ಸೇರಿದಂತೆ ಅಪರೂಪದ ವಸ್ತುಗಳನ್ನು ನೋಡಬಹುದಾಗಿದೆ. ಮ್ಯೂಸಿಯಂಗೆ ಭೇಟಿ ನೀಡುವ ಪ್ರತಿಯೊಬ್ಬ ವೀಕ್ಷಕನಿಗೂ ಅವರ ಸಂಗ್ರಹದಲ್ಲಿರುವ ಪ್ರತಿಯೊಂದು ವಸ್ತುವಿನ ನಿಖರವಾದ ಮಾಹಿತಿ ಕಲೆಯನ್ನೂ ಕರಗತ ಮಾಡಿಕೊಂಡಿದ್ದಾರೆ. ಮಹಾಯುದ್ಧದ ಸಂದರ್ಭ ಬಳಕೆಯಲ್ಲಿದ್ದ ವಸ್ತುಗಳು ಸೇರಿದಂತೆ ದೇಶ ವಿದೇಶದ ಮಹಾನ್ ನಾಯಕರ ನೆನಪು ಮೂಡಿಸುವಂತ ಅಪರೂಪದ ವಸ್ತುಗಳು ಇಲ್ಲಿವೆ.
ಬಂಟ್ವಾಳ : ತಾಲೂಕಿನ ತುಂಬೆಯ ರಂಗ ಕಲಾವಿದ ಕಲಾ ಪೋಷಕ ಸಾಮಾಜಿಕ ಧಾರ್ಮಿಕ ಮುಂದಾಳು ಸದಾಶಿವ ಡಿ ತುಂಬೆ ಈ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಇಂಚರ ಕಲಾವಿದರು ತುಂಬೆ ಎಂಬ ನಾಟಕ ತಂಡವನ್ನು ಕಟ್ಟಿಆ ಮೂಲಕ ನಾಟಕವನ್ನು ಪ್ರದರ್ಶಿಸಿ, ಕಲಾವಿದರನ್ನು ಬೆಳೆಸುವ ಹಾಗೂ ಕಲಾ ತಂಡಗಳನ್ನು ಪೋಷಿಸುವ ಕಾರ್ಯ ಮಾಡುತಿದ್ದರು, ಅಲ್ಲದೆ ಅನೇಕ ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿಯೂ ಸೇವೆ ಸಲ್ಲಿಸಿದ್ದರು, ಇವರ ಸಾಧನೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಗೌರವಿಸಿತ್ತು. ಕಲಾ ಕ್ಷೇತ್ರದ ಇವರ ಸೇವೆ ಗುರುತಿಸಿ ಈ ಸಲದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.








