Author: admin

ಬಂಟ್ವಾಳ: ಉದ್ಯಮಿ, ಸಹಕಾರಿ ಧುರೀಣ ಸಜೀಪಮೂಡ ಗ್ರಾಮದ ಕುಚ್ಚಿಗುಡ್ಡೆ ಕೆ. ಸಂಜೀವ ಪೂಜಾರಿ ದ.ಕ.‌ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸಂಘವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಕಡಿಮೆ ಅವಧಿಯಲ್ಲಿ ಅತ್ಯಧಿಕ ಶಾಖೆಗಳನ್ನು ತೆರೆದು ಬಡಕುಟುಂಬದ ಮಹಿಳೆಯರಿಗೆ ಉದ್ಯೋಗ ನೀಡುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ.ಸಜೀಪಮೂಡ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷರಾಗಿ ಸಜೀಪಮೂಡದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜ್ಞಾನ ಮಂದಿರವನ್ನು ನಿರ್ಮಿಸಿದ ಹೆಗ್ಗಳಿಕೆ ಇವರದ್ದು.‌ ಉದ್ಯಮಿಯಾಗಿ, ತಾಲೂಕು ಪಂಚಾಯತಿ ಸದಸ್ಯರಾಗಿಯೂ ಗುರುತಿಸಿಕೊಂಡಿದ್ದಾರೆ.

Read More

ಬಂಟ್ವಾಳ :ಕಳೆದ 20 ವರ್ಷಗಳಿಂದ ಕಲಾಕೃತಿಗಳ ತಯಾರಿಕೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಕಲಾವಿದ ಮನೋಜ್ ಕನಪಾಡಿ ಇವರಿಗೆ 2024ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.ಇವರು ಬಾಲ್ಯದಲ್ಲಿ ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದ್ದರು ಇದಕ್ಕೆ ಪೂರಕವಾಗಿ ಮಂಗಳೂರಿನ ಮಹಾಲಸ ಕಾಲೇಜಿನಲ್ಲಿ ಡಿಪ್ಲೊಮೋ ಪದವಿ ಬಳಿಕ ಕಲಾಕೃತಿ ರಚನೆಯಲ್ಲಿ ವೃತ್ತಿ ಆರಂಭಿಸಿದ ಅವರು ಮಣ್ಣಿನ ಮೂರ್ತಿಗಳ ರಚನೆಯಲ್ಲಿ ತೊಡಗಿಸಿಕೊಂಡರು. ಕ್ರಮೇಣ ಜನರಿಗೆ ಆಕರ್ಷಣೆಯಾಗುವ ಮತ್ತು ಹೆಚ್ಚು ಬಾಳಿಕೆ ಬರುವ ಫೈಬರ್ ಕಲಾಕೃತಿಗಳ ರಚನೆಯಲ್ಲಿ ತೊಡಗಿಸಿ ಬ್ರಹ್ಮರಕೊಟ್ಲುವಿನಲ್ಲಿ ಕುಕ್ಕೆಶ್ರೀ ಕಲಾಕೇಂದ್ರದಲ್ಲಿ ಜನರ ಬೇಡಿಕೆ ಅನುಗುಣವಾದ ಫೈಬರ್ ಮೂರ್ತಿ ಸಿದ್ದಪಡಿಸಿ ಮಾರಾಟ ಮಾಡುವ ಮೂಲಕ ಪ್ರವೃತ್ತಿಯನ್ನು ವೃತ್ತಿಯಾಗಿಸಿದರು. ಇವರ ಕುಕ್ಕೆಶ್ರೀ ಕಲಾ ಕೇಂದ್ರದಲ್ಲಿ ವಿವಿಧ ರೀತಿಯ ಹತ್ತು ಹಲವು ಕಲಾಕೃತಿಗಳನ್ನು ಕಾಣಬಹುದು. ಇವರ ಕಲಾಕೃತಿ ರಚನೆಯ ಸಾಧನೆಗಾಗಿ ಹತ್ತು ಹಲವು ಪ್ರಶಸ್ತಿಗಳು ಲಭಿಸಿದ್ದಲ್ಲದೆ ಸನ್ಮಾನಗಳಿಗೆ ಭಾಜನರಾಗಿದ್ದಾರೆ. ಆಕರ್ಷಕ, ವಿಶಿಷ್ಟ,ವಿನೂತನ ಶೈಲಿಯ ಕಲಾಕೃತಿ ತಯಾರಿಯಲ್ಲಿ ಪರಿಣತಿ ಪಡೆದ ಇವರು ಈಗಾಗಲೇ ಛತ್ರಪತಿ ಶಿವಾಜಿ, ಈಶ್ವರ, ಕತ್ತೆತ್ತಿ ನೋಡುವ…

Read More

ಬಂಟ್ವಾಳ: ಸಿದ್ಧ ವಿಧಾನಶಾಸ್ತ್ರ (ಮೆಥಡಲೋಜಿ) ಇಲ್ಲದೆ ರಾಜಮಣಿ ರಾಮಕುಂಜ ಅವರು ಸಂಶೋಧನಾ ಕೃತಿ ಬರೆದಿರುವುದು ಈ ಪುಸ್ತಕದ ಹೆಚ್ಚುಗಾರಿಕೆ. ಪುಸ್ತಕದ ಬಾಹ್ಯ ವ್ಯಕಿತ್ವದಷ್ಟೇ ಸುಂದರವಾಗಿ ಅಂತರಂಗವೂ ಮೂಡಿಬಂದಿದೆ. ಅವರಲ್ಲಿ ಇತಿಹಾಸ ಪ್ರಜ್ಞೆ ಇದೆ, ಅವರೊಬ್ಬ ಇತಿಹಾಸಕಾರ ಎಂದು ಎಂದು ಮೂಡಬಿದಿರೆ ಧವಳ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಡಾ. ಪುಂಡಿಕಾಯಿ ಗಣಪಯ್ಯ ಭಟ್ ಹೇಳಿದರು.ಸರಿದಂತರ ಪ್ರಕಾಶನ ಮೊಡಂಕಾಪು, ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಇದರ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡಿನ ಕನ್ನಡ ಸಾಹಿತ್ಯ ಪರಿಷತ್ ಸಭಾಭವನದಲ್ಲಿ ನಡೆದ ನಿವೃತ್ತ ಪ್ರಾಧ್ಯಾಪಕ ರಾಜಮಣಿ ರಾಮಕುಂಜ ಅವರ ಸಂಶೋಧನಾ ಗ್ರಂಥ ಬಂಟ್ವಾಳದ ಸಾಂಸ್ಕೃತಿಕ ಪರಿಸರ ಕೃತಿಯನ್ನು ಅನಾವರಣಗೊಳಿಸಿ ಮಾತನಾಡಿದರು. ಇಂದು ಪುಸ್ತಕ ಅನಾವರಣ ಗೊಂಡಿದೆ, ಅದರ ಹಿಂದೆ ಶ್ರಮಿಸಿದವರಿಗೆ ಬಿಡುಗಡೆಯಾಗಿದೆ. ಕುಂದುಕೊರತೆಗಳು ಇಲ್ಲದ ರೀತಿಯಲ್ಲಿ ಅದ್ಭುತವಾದ ಪುಸ್ತಕ ರಚನೆಯಾಗಿದ್ದು ಸ್ವಂತ ಪ್ರಕಾಶನದ ಮೂಲಕ ಪುಸ್ತಕ ಹೊರತರುವ ಸಾಹಸವನ್ನು ರಾಜಮಣಿ ಮಾಡಿದ್ದಾರೆ. 14 ವರ್ಷದ ಶ್ರಮದ ಫಲವಾಗಿ ಈ ಪುಸ್ತಕ ಉತ್ತಮವಾಗಿ ಮೂಡಿ ಬಂದಿದೆ ಎಂದು ತಿಳಿಸಿದರು.…

Read More

ಬಂಟ್ವಾಳ: ಮಕ್ಕಳ ಸಾಹಿತ್ಯ ಸಮ್ಮೇಳನ 2023, ಮಕ್ಕಳ ಕಲಾಲೋಕ ಬಂಟ್ವಾಳ ಹಾಗೂ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯ ಇದರ ಜಂಟಿ ಆಶ್ರಯದಲ್ಲಿ 17ನೇ ಮಕ್ಕಳ ಸಾಹಿತ್ಯ ಸಮ್ಮೇಳನ 2023 ರ ಸ್ಮರಣ ಸಂಚಿಕೆ ” ಲಹರಿ” ಬಿಡುಗಡೆ ಕಾರ್ಯಕ್ರಮ ಕಡೇಶಿವಾಲಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸಂಜೆ ನಡೆಯಿತು.ಎಸ್.ವಿ.ಎಸ್ ಟೆಂಪಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್. ಗಂಗಾಧರ ಆಳ್ವ ಕೃತಿ ಬಿಡುಗಡೆಗೊಳಿಸಿದರು. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಬೇಕಾದ ಉದಾತ್ತವಾದ ಲೇಖನಗಳು ಈ ಸ್ಮರಣ ಸಂಚಿಕೆಯಲ್ಲಿದೆ, ಕೇವಲ ಲೇಖನಗಳಿಗೆ ಸೀಮಿತವಾಗದೆ ಈ ಊರಿಗೆ ಉಪಯೋಗವಾಗುವ ಸ್ಮರಣ ಸಂಚಿಕೆ ರಚನೆಯಾಗಿದೆ ಎಂದು ತಿಳಿಸಿದರು. ಸ್ಮರಣ ಸಂಚಿಕೆಯ ಗೌರವ ಸಂಪಾದಕ, ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕಾರಾಂ ಪೂಜಾರಿ ಮಾತನಾಡಿ ‌ನಾವು ಮಾಡುವ ಕೆಲಸಗಳು ದಾಖಲೆಯಾಗಬೇಕು. ಮುಂದಿನ ತಲೆಮಾರಿಗೆ ಅವುಗಳನ್ನು ತಿಳಿಸಬೇಕಾದರೆ ಇಂತಹ‌ ಪುಸ್ತಕಗಳಿಂದ ಮಾತ್ರ ಸಾಧ್ಯ ಎಂದರು. ಮಕ್ಕಳು ಬೆಳೆಯುತ್ತ ಹೋದಂತೆಯೇ ಅವರ ಯೋಚನಾ…

Read More

ಬಂಟ್ವಾಳ: ಶ್ರೀ ವಿಜಯಲಕ್ಷ್ಮೀ ಯುವಕ ಸಂಘ ನರಿಕೊಂಬು ಇದರ ೩೦ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಂಘದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ನಾರಿಕೊಂಭೇಶ್ವರ ದೇವಸ್ಥಾನದಲ್ಲಿ ಸಂಘದ ಹಿರಿಯ ಸದಸ್ಯ ಪ್ರೇಮನಾಥ ಶೆಟ್ಟಿ ಬಿಡುಗಡೆಗೊಳಿಸಿದರು. ಈ ಸಂದರ್ಭ ಸಂಘದ ಗೌರವಾಧ್ಯಕ್ಷ ಜಗದೀಶ್, ಅಧ್ಯಕ್ಷ ಹರೀಶ್ ಕುಲಾಲ್, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಗಾಣಿಗ, ಕೋಶಾಧಿಕಾರಿ ಕೃಷ್ಣಪ್ಪ ಗಾಣಿಗ, ಜತೆ ಕಾರ್ಯದರ್ಶಿ ಸುರೇಶ್ ಕುಲಾಲ್, ಕ್ರೀಡಾ ಕಾರ್ಯದರ್ಶಿ ಗಿರೀಶ್ ಪೂಜಾರಿ ಹಾಗೂ ಸಂಘದ ಹಿರಿಯ ಸದಸ್ಯರಾದ ಶ್ರೀಶ ರಾಯಸ, , ಬಾಲಕೃಷ್ಣ, ಪ್ರಸಾದ್ ಬೋರುಗುಡ್ಡೆ, ಚಂದ್ರ ಕುಲಾಲ್, ಕೂಸಪ್ಪ ಅಂತರ, ಕೊರಗಪ್ಪ, ವಸಂತ ಅಂತರ, ರಾಜೇಶ್ ಕೆದ್ದೇಲು ಉಪಸ್ಥಿತರಿದ್ದರು.

Read More

ಸಾಹಿತಿ ಸಂಘಟಕ ಬಿ.ತಮ್ಮಯ್ಯ ಅವರ ನೆನಪಿನ ರಾಜ್ಯಮಟ್ಟದ “ಅತೀ ಸಣ್ಣ ಕಥೆ” ಹಾಗೂ ಲಲಿತ ಪಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಎರಡು ವಿಭಾಗಗಳಲ್ಲಿ ಪ್ರತ್ಯೇಕ ಸ್ಪರ್ಧೆಯು ನಡೆಯಲಿದೆ. ಅತೀ ಸಣ್ಣ ಕಥೆ ಸ್ಪರ್ಧೆಯು ಕಥೆಗಾರರಲ್ಲಿರುವ ಕಥಾ ಕೌಶಲವನ್ನು ಪ್ರಕಟಪಡಿಸುವ ವೇದಿಕೆಯಾಗಿದ್ದು, 250 ಪದಮಿತಿಯಲ್ಲಿ ಕಥೆಯನ್ನು ಬರೆದು ಕಳುಹಿಸಬೇಕು.ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ತಮ್ಮ ಆಯ್ಕೆಯ ಯಾವುದಾದರೂ ಒಂದು ವಿಷಯದ ಮೇಲೆ 5 ಪುಟ ಮೀರದಂತೆ ಲಲಿತ ಪ್ರಬಂಧ ಬರೆದು ಕಳುಹಿಸಬಹುದು. ಎರಡೂ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾರ್ಥಿಗಳು ಕಳುಹಿಸುವ ಬರಹಗಳು ಸ್ವಂತ ರಚನೆಯಾಗಿದ್ದು, ಎಲ್ಲಿಯೂ ಪ್ರಕಟಗೊಂಡಿರಬಾರದು. ತಮ್ಮ ಬರಹಗಳನ್ನು ನುಡಿ ಅಥವಾ ಯುನಿಕೋಡ್ ನಲ್ಲಿ 12 ಫಾಂಟ್ ನಲ್ಲಿ ಬರೆದು ಕಳುಹಿಸಬೇಕು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಪ್ರಥಮ:3000, ದ್ವಿತೀಯ: 2000 ನಗದು ಬಹುಮಾನದೊಂದಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಬರಹಗಾರರಿಗೆ ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ. ಬರಹಗಾರರು ತಮ್ಮ ಸ್ವವಿಳಾಸವನ್ನು ಮೊಬೈಲ್ ಸಂಖ್ಯೆಯೊಂದಿಗೆ ಸ್ಪಷ್ಟವಾಗಿ ನಮೂದಿಸತಕ್ಕದ್ದು. ತಮ್ಮ ಬರವಣಿಗೆಗಳನ್ನು…

Read More

ಬಂಟ್ವಾಳ: ಬೈದ್ಯ ಶ್ರೀ ಟ್ರೋಫಿ 2024 ಕ್ರಿಕೆಟ್ ಪಂದ್ಯಾಟಕ್ಕೆ ಟೀಮ್ ನಮ್ಮ ಬಿರುವೆರ್ ರಾಯಿ ಇದರ ಜೆರ್ಸಿ ಬಿಡುಗಡೆ ಕಾರ್ಯಕ್ರಮ ನಾಗೇಶ್ ಕುಲಾಲ್ ಮಾಲಕತ್ವದ ಸೌತಡ್ಕ ಪರ್ನಿಚರ್ಸ್ ಬಂಟ್ವಾಳದಲ್ಲಿ ನಡೆಯಿತು. ಮುಖ್ಯ ಅತಿಥಿ ಗಳಾಗಿ ಸೌತಡ್ಕ ಫರ್ನಿಚರ್ಸ್ ಮಾಲಕ ನಾಗೇಶ್ ಭಾಗವಹಿಸಿ ಶುಭ ಹಾರೈಸಿದರು. ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ರಾಯಿ ಕೊಯಿಲ ಅರಳ ಇದರ ಅಧ್ಯಕ್ಷ ಶೇಖರ್ ಅಂಚನ್, ಜೈನ್ ಫೈಬರ್ ಡೋರ್ ಮಾಲಕ ರಾಜೇಶ್ ಜೈನ್ ಪಡ್ರಯಿ, ಕುಡ್ಲ ಬಿಲ್ದರ್ಸ್ ಮಾಲಕ ಸುರೇಶ್ ಅಲ್ಲಿಪಾದೆ, ಯುವ ವಾಹಿನಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಬೆಟ್ಟು, ನಮ್ಮ ಬಿರುವೆರ್ ಟೀಮ್ ನ ಮಾಲಕ ಸಮಿತ್ ರಾಯಿ, ಧನ್ವಿ ಎಲೆಕ್ಟ್ರಿಕಲ್ ಮಾಲಕ ನಿತೇಶ್ ರಾಯಿ ಭಾಗವಹಿಸಿದ್ದರು. ತಂಡದ ಆಟಗಾರರು ಉಪಸ್ಥಿತರಿದ್ದರು.

Read More

ಬಂಟ್ವಾಳ: ತಾಲೂಕಿನ ಪುದು ಗ್ರಾಮದ ಸುಜೀರುವಿನಲ್ಲಿರುವ ಶ್ರೀರಾಮ ವೈದ್ಯನಾಥ ಭಜನಾ ಮಂದಿರದ 75ನೇ ವರ್ಷದ ಏಕಾಹ ಭಜನಾ ಮಹೋತ್ಸವ ಹಾಗೂ ಲೋಕ ಕಲ್ಯಾಣಾರ್ಥ ಶತರುದ್ರಯಾಗ 2025 ಜ.5 ರಿಂದ 14ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ಸುಜೀರುವಿನ ಶ್ರೀ ರಾಮ ವೈದ್ಯನಾಥ ಭಜನಾ ಮಂದಿರದಲ್ಲಿ ನಡೆಯಿತು. ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಪ್ರಕಾಶ್ಚಂದ್ರ ರೈ ದೇವಸ್ಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.ಗೌರವ ಸಲಹೆಗಾರ ರಾಧಸುರಭಿ ಗೋ ಮಂದಿರದ ಭಕ್ತಿ ಭೂಷಣ್ ಪ್ರಭುಜಿ ಮಾತನಾಡಿ ಶತರುದ್ರ ಯಾಗ ಅತ್ಯಂತ ಶಕ್ತಿಶಾಲಿಯಾದುದು, ಯಾಗ ಮಾಡಲು ನಮ್ಮಲ್ಲಿ ಆಧ್ಯಾತ್ಮ ಶಕ್ತಿ, ಭಕ್ತಿ ಶ್ರದ್ಧೆಯೂ ಬೇಕು. ಯಾಗದ ಸಂದರ್ಭ ಶುದ್ಧಾಚಾರದಲ್ಲಿ ಇದ್ದುಕೊಂಡು ದೇವರ ನಾಮಸ್ಮರಣೆ ಮಾಡಿದಾಗ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಐತಪ್ಪ ಆಳ್ವ ಸುಜೀರು ಗುತ್ತು ಅಧ್ಯಕ್ಷತೆ ವಹಿಸಿ ಮಾತನಾಡಿ ದುಷ್ಟ ಶಕ್ತಿಗಳನ್ನು ನಿವಾರಿಸಿ ನಮ್ಮ ಜೀವನದ ಅಭ್ಯುದಯಕ್ಕೆ ರುದ್ರಯಾಗ ಪ್ರಯೋಜನಕಾರಿಯಾಗಲಿದೆ. ಈ ಪುಣ್ಯ ಕಾರ್ಯದಲ್ಲಿ ಶ್ರದ್ದಾಭಕ್ತಿ,…

Read More

ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘ ವಿದ್ಯಾಗಿರಿ ಬಂಟ್ವಾಳ, ಇದರ ವತಿಯಿಂದ ಶ್ರೀ ವೆಂಕಟರಮಣ ಸ್ವಾಮಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಘದ ಸದಸ್ಯ ಶ್ರೀ ರಾಘವೇಂದ್ರ ಕೂಡಿಗೆ ಶೆಣೈ ಅವರು ತಾಯಿ ಸವಿತಾ ಕೂಡಿಗೆ ಶೆಣೈ ಅವರ ಸ್ಮರಣಾರ್ಥ ನೀಡಲಾಗುವ ಮಧ್ಯಾಹ್ನದ ಉಚಿತ ಬಿಸಿಯೂಟ ಯೋಜನೆಗೆ ಬುಧವಾರ ಚಾಲನೆ ನೀಡಲಾಯಿತು. ಜೆಸಿಐ ವಲಯ ತರಬೇತುದಾರ ಸಂದೀಪ್ ಸಾಲ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಫಲಾನುಭವಿ ವಿದ್ಯಾರ್ಥಿಗಳಿಗೆ ಕಾರ್ಡ್ ವಿತರಿಸಿ ಮಾತನಾಡಿ ದೂರದೂರುಗಳಿಂದ ಬರುವ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಈ ಯೋಜನೆ ಜಾರಿಗೊಳಿಸಿರುವುದು ಅಭಿನಂದನೀಯ, ವಿದ್ಯಾರ್ಥಿಗಳು ಇದರ ಮಹತ್ವವನ್ನು ಅರಿತುಕೊಂಡು ಯೋಜನೆ ಯಶಸ್ವಿಯಾಗಿ ಸಾಕಾರಗೊಳ್ಳಲು ಸಹಕರಿಸುವಂತೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಸುಯೋಗವರ್ಧನ್ ಡಿ.ಎಂ. ಅವರು ಮಾತನಾಡಿ ಕೋವಿಡ್ ಬಳಿಕ ಕಾರಣಾಂತರಗಳಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಆಡಳಿತ ಮಂಡಳಿಯ ತೀರ್ಮಾನದಂತೆ ಈ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುದರ್ಶನ್…

Read More

ಬಂಟ್ವಾಳ: ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಹೃದಯಸ್ತಂಭನವಾಗಿ ಜೊತೆ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬಂಟ್ವಾಳದಲ್ಲಿ 1957, ಅಕ್ಟೋಬರ್ 12ರಂದು ಬಂಟ್ವಾಳ ಗಣಪತಿ ಆಚಾರ್ಯ, ಭವಾನಿ ಅಮ್ಮ ಅವರ ಪುತ್ರರಾಗಿ ಜನಿಸಿದ ಜಯರಾಮ ಆಚಾರ್ಯರು, ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಬೋರ್ಡ್ ಶಾಲೆ)ಯಲ್ಲಿ ವಿದ್ಯಾಭ್ಯಾಸ ನಡೆಸಿ, ತಂದೆಯವರ ಪ್ರೇರಣೆಯಿಂದ ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿ ವೇಷವನ್ನೂ ಮಾಡಿದ್ದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದ `ಲಲಿತ ಕಲಾ ಕೇಂದ್ರ’ಕ್ಕೆ ಸೇರಿ ಯಕ್ಷಗಾನ ಹೆಜ್ಜೆಗಾರಿಕೆ ಕಲಿತರು. ಅದಾದ ಬಳಿಕ ಕಟೀಲು ಮೇಳದಲ್ಲಿ 4 ವರ್ಷ, ಪುತ್ತೂರು ಮೇಳ, ಕದ್ರಿ ಮೇಳ, ಕುಂಬಳೆ ಮೇಳದಲ್ಲಿ ತಿರುಗಾಟ ನಡೆಸಿದರು.ಮತ್ತೆ ಕಟೀಲು…

Read More