Author: admin

ಬಂಟ್ವಾಳ: ಆನಿಯಾ ದರ್ಬಾರ್ ಗ್ರೂಪ್ ಆಫ್ ಹೊಟೇಲ್ಸ್ ನ ನೂತನ ಕಚೇರಿ ಬಿ.ಸಿ.ರೋಡಿನ ಜಿ.ಕೆ. ಸ್ಮಾರ್ಟ್ ಸಿಟಿಯ ಮೊದಲ ಮಹಡಿಯಲ್ಲಿ ಶುಭಾರಂಭಗೊಂಡಿತು. ಮಿತ್ತಬೈಲು ಮಸೀದಿಯ ಖತೀಬರಾದ ಇರ್ಶಾದ್ ದಾರಿಮಿ ದುವಾ ನೆರವೇರಿಸಿದರು.ಹಿದಾಯ ಫೌಂಡೇಷನ್ ಅಧ್ಯಕ್ಷ ಹನೀಫ್ ಹಾಜಿ ಗೋಳ್ತಮಜಲು ನೂತನ ಕಚೇರಿ ಉದ್ಘಾಟಿಸಿ ಮಾತನಾಡಿ ಆನಿಯ ಹೊಟೇಲ್ ನ ಮಾಲಕ ಹಂಝ ಬಸ್ತಿಕೋಡಿಯವರು ಎಲ್ಲಾ ಧರ್ಮದ ಜನರೊಂದಿಗೆ ಉತ್ತಮ‌ವಾದ ಒಡನಾಟ ಹೊಂದಿ ಮಾದರಿ ವ್ಯಕ್ತಿತ್ವವನ್ನು ರೂಪಿಸಿಕೊಂಡವರು. ಅವರ ಉದ್ಯಮ‌ ಕ್ಷೇತ್ರ ಇನ್ನಷ್ಟು ವಿಸ್ತರಿಸಲಿ ಎಂದು ಶುಭ ಹಾರೈಸಿದರು. ಬಂಟ್ಚಾಳ ಪುರಸಭೆಯ ಉಪಾಧ್ಯಕ್ಷ ಮೂನೀಶ್ ಅಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜ ಹಾಗೂ ಸಮುದಾಯಕ್ಕೆ ತನ್ನ ಕೊಡುಗೆಗಳನ್ನು ನೀಡುತ್ತಿರುವ ಹಂಝ ಅವರು ಎಲ್ಲಾ ಜಾತಿ, ಧರ್ಮದವರನ್ನು ಪ್ರೀತಿಸುವ ಅಜಾತಶತ್ರು ಎಂದು ತಿಳಿಸಿದರು. ಮುಂಬೈ ಬಿಲ್ಲವ ಅಸೋಸಿಯೇಷನ್ ನ ಕಾರ್ಯಧ್ಯಕ್ಷ ನೀಲೇಶ್ ಪೂಜಾರಿ ಪಲಿಮಾರು ಮಾತನಾಡಿ ಮುಂಬೈಯಲ್ಲೇ ಉತ್ತಮ ಗೆಳೆಯರಾಗಿದ್ದ ಹಂಝರವರು ಎಲ್ಲ ಸಮುದಾಯದ ಜನರನ್ನು…

Read More

ಬಂಟ್ವಾಳ: ಎಲೆಕ್ಟ್ರಾನಿಕ್ಸ್ ವಸ್ತುಗಳ ಮಾರಾಟ ಕ್ಷೇತ್ರದಲ್ಲಿ ಬಂಟ್ವಾಳ ತಾಲೂಕಿನಾದ್ಯಂತ ಮನೆಮಾತಾಗಿರುವ ಪ್ರತಿಷ್ಠಿತ ಶ್ರೀ ಪೊಳಲಿ ಎಲೆಕ್ಟ್ರಾನಿಕ್ಸ್ ಯಶಸ್ವಿ 10ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ.‌ಈ ಸುಸಂದರ್ಭದಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಮಾರಾಟ ಮಳಿಗೆಯನ್ನು ವಿಸ್ತೃತ ಗೊಳಿಸಿದ್ಸು ಇದರ ಶುಭಾರಂಭ ಬಂಟ್ವಾಳ ಬೈಪಾಸ್ ನ ಅಜೆಕಲದಲ್ಲಿರುವ ಸ್ಮೃತಿ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಖ್ಯಾತ ಜ್ಯೋತಿಷಿ ಅನಿಲ್ ಪಂಡಿತ್ ನೂತನ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿ ಆರಂಭದಲ್ಲಿ ಸಣ್ಣ ಉದ್ಯಮವನ್ನು ಆರಂಭಿಸಿ ಕಠಿಣ ಪರಿಶ್ರಮದಿಂದ ಯಶಸ್ಸನ್ನು ಗಳಿಸುವ ಮೂಲಕ ಪೊಳಲಿ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಮಾಲಕರು ಸಾಧನೆಯನ್ನು ಮಾಡಿದ್ದಾರೆ. ನಿರಂತರ ಪ್ರಯತ್ನದಿಂದ ಒಬ್ಬ ವ್ಯಕ್ತಿ ಏನು ಬೇಕಾದರೂ ಸಾಧನೆಯನ್ನು ಮಾಡಬಹುದು ಎನ್ನುವುದಕ್ಕೆ ಕಿರಣ್ ಹಾಗೂ ಲಿಖಿತ ದಂಪತಿಗಳೇ ಸಾಕ್ಷಿ. ಅವರ ಉದ್ಯಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭ ಕಟ್ಟಡ ಮಾಲಕ ಸತೀಶ್ ಸಪಲ್ಯ ದಂಪತಿ, ಸಂಸ್ಥೆಯ ಪ್ರವರ್ತಕರ ಮಾತಾ ಪಿತರಾದ ಕೃಷ್ಣಪ್ಪ, ಲೀಲಾ, ಅಜ್ಜಿ ಅಪ್ಪಿ ಹಾಗೂ ಸಂಸ್ಥೆಯ ಮಾಲಕರಾದ ಕಿರಣ್, ಲಿಖಿತ ಉಪಸ್ಥಿತರಿದ್ದರು. ಶ್ರೀ ಪೊಳಲಿ ಎಲೆಕ್ಟ್ರಾನಿಕ್ಸ್…

Read More

ಬಂಟ್ವಾಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುತ್ತಿರುವ ಶ್ರೀ ದೇವರಾಜು ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಗಿರಿಗುಡ್ಡೆ ಇದರ ಹಾಸ್ಟೆಲ್ ಡೇ ಹಾಗೂ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಶನಿವಾರ ಸಂಜೆ ವಿದ್ಯಾರ್ಥಿ ನಿಲಯದ ಆವರಣದಲ್ಲಿ ನಡೆಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮಾತು ಉತ್ತಮವಾಗಿರ ಬೇಕು, ಮಾತಿನಲ್ಲಿ ಇನ್ನೊಬ್ಬರನ್ನು ನಿಂದಿಸದೆ, ನೋಯಿಸದೇ, ವಿಡಂಬಣೆ ಮಾಡದೆ ಸದ್ವಿಚಾರ ಹಾಗೂ ಮೌಲ್ಯಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡಾಗ ವಿದ್ಯಾರ್ಥಿಗಳ ಭವಿಷ್ಯ ಉಜ್ಬಲವಾಗಿರುತ್ತದೆ ಎಂದು ತಿಳಿಸಿದರು. ವಾಮದಪದವು ವಿದ್ಯಾರ್ಥಿ ನಿಲಯದ ವಾರ್ಡ್ ನ್ ಭವಾನಿ, ಜಿಪಿಟಿಯ ಕಂಪ್ಯೂಟರ್ ಶಿಕ್ಷಕ ಶ್ರೀನಿವಾಸ ಗೌಡ, ಶಂಭೂರು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಾರ್ಡನ್ ವಿಶ್ವನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು.ಗಿರಿಗುಡ್ಡೆ ವಿದ್ಯಾರ್ಥಿನಿಲಯದ ವಾರ್ಡನ್ ಪುಷ್ಪಲತಾ ಸ್ವಾಗತಿಸಿದರು, ಕೌಶಲ್ ಬಹುಮಾನಿತರ ಪಟ್ಟಿ ವಾಚಿಸಿದರು, ನಿಖಿಲ್ ವಂದಿಸಿದರು.…

Read More

ಬಂಟ್ವಾಳ: ದ.ಕ.ಜಿಲ್ಲೆಯ ಪ್ರಸಿದ್ಧ ದೈವಸ್ಥಾನ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಂಪ್ರತಿಯಂತೆ ಪುದ್ದರ್ದ ಅಗೇಲು ಗುರುವಾರ ನಡೆಯಿತು.ಪ್ರತೀ ವರ್ಷ ಕಾವೇರಿ ಸಂಕ್ರಮಣದಂದು‌ ತಾಯಿಗೆ ಹೊಸ ಅಕ್ಕಿಯ ಅನ್ನ ಹಾಗೂ ಹಲವಾರು ಬಗೆಯ ತರಕಾರಿಯಿಂದ ತಯಾರಿಸಿದ ಪದಾರ್ಥದ ನೈವೇದ್ಯದೊಂದಿಗೆ ಅಗೇಲು ಸಮರ್ಪಿಸುವ ಪರಂಪರೆ ನಡೆದುಕೊಂಡು ಬರುತ್ತಿದ್ದು ಗುರುವಾರ 1242 ಅಗೇಲು ಸೇವೆ ಸಲ್ಲಿಕೆಯಾಗಿದೆ. ಈ ಸಂದರ್ಭ ಪಣೋಲಿಬೈಲು ದೈವಸ್ಥಾನದ ಅರ್ಚಕರಾದ ವಾಸು ಮೂಲ್ಯ, ನಾರಾಯಣ ಮೂಲ್ಯ, ಮೋನಪ್ಪ ಮೂಲ್ಯ , ಕಾರ್ಯನಿರ್ವಾಹಣಾಧಿಕಾರಿ ದಿವಾಕರ ಮುಗುಳಿ ದೈವದ ಚಾಕರಿಯವರು, ಸಿಬ್ಬಂದಿಗಳು ಹಾಗೂ ಭಕ್ತವೃಂದ ಹಾಜರಿದ್ದರು.

Read More

ಬಂಟ್ವಾಳ : ಬಿ.ಸಿ.ರೋಡಿನ ಉದ್ಯಮಿ,ಜೋಡುಮಾರ್ಗ ನೇತ್ರಾವತಿ ಜೇಸಿ, ಬಂಟ್ವಾಳ ರೋಟರಿ ಟೌನ್ ಪೂರ್ವಾಧ್ಯಕ್ಷರೂ ಆಗಿದ್ದ ಉದ್ಯಮಿ ನಿರ್ಮಲ್ ಎಸೋಸಿಯೇಟ್ಸ್ ಮಾಲಕರಾದ ಉಮೇಶ್ ನಿರ್ಮಲ್ (53) ಅವರು ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ದಿಢೀರ್ ಹೃದಯಾಘಾತದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಅಸು ನೀಗಿರುವುದಾಗಿ ವೈದ್ಯರು ತಿಳಿಸಿದರು.ಶಿಕ್ಷಣ ಸಂಪನ್ಮೂಲ ಕೇಂದ್ರ, ಜಿಲ್ಲಾ ಜುವಿನೈಲ್ ಜಸ್ಟೀಸ್ ಬೋರ್ಡ್ ಜೀವ ವಿಮಾ ನಿಗಮ ಕ್ಲಬ್ ಸದಸ್ಯ ಪರಿಸರಾಸಕ್ತರ ಒಕ್ಕೂಟ JCI, ರೋಟರಿ ಹಾಗೂ ವಿವಿದ ಸಮಾಜ ಮುಖಿ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳನ್ನು ನಿರ್ವಹಿಸಿದವರಾಗಿರುತ್ತಾರೆ.ಅವರು ಪತ್ನಿ ಸವಿತಾ ನಿರ್ಮಲ್, ಮಗ ಶಮಿತ್ ನಿರ್ಮಲ್ ಮಗಳು ತನ್ಮಯಿ ನಿರ್ಮಲ್ ಅವರನ್ನು ಅಗಲಿದ್ದಾರೆ..

Read More

ಬಂಟ್ವಾಳ: ಅವಿಭಜಿತ ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ರೋಟರಿ ಕ್ಲಬ್ ವತಿಯಿಂದ ಸಬ್ ಜ್ಯೂನಿಯರ್ ಹಗ್ಗ ಮತ್ತು ನೇಗಿಲು ವಿಭಾಗದ ಕೋಣಗಳ ಕಂಬಳ ಕೂಟ ಆಯೋಜಿಸಲು ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೋ ಹಿಲ್ಸ್ ಮುಂದಾಗಿದೆ.ಇಲ್ಲಿನ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆಯಲ್ಲಿ ಅ.೧೯ರಂದು ಶನಿವಾರ ಬೆಳಿಗ್ಗೆ ಗಂಟೆ ೮.೩೦ರಿಂದ ರಾತ್ರಿ ಗಂಟೆ ೧೦.೩೦ ರತನಕ ಕಂಬಳ ಕೂಟ ನಡೆಯಲಿದೆ. ಪೂಂಜ ಕ್ಷೇತ್ರದ ಪ್ರಧಾನ ಅರ್ಚಕರಾದ ಪ್ರಕಾಶ ಆಚಾರ್ಯ ಇವರು ಕರೆ ಉದ್ಘಾಟಿಸಲಿದ್ದು, ರೋಟರಿ ಜಿಲ್ಲೆ ೩೧೮೧ರ ಜಿಲ್ಲಾ ಗವರ್ನರ್ ರೊ. ವಿಕ್ರಮ್ ದತ್ತ ಇವರು ದೀಪ ಪ್ರಜ್ವಲನೆ ಮೂಲಕ ಕಂಬಳ ಕೂಟಕ್ಕೆ ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಮಾಜಿ ಜಿಲ್ಲಾ ಗವರ್ನರ್ ರೊ.ಎನ್.ಪ್ರಕಾಶ ಕಾರಂತ್, ೨೦೨೬-೨೭ನೇ ಸಾಲಿನ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್, ರೋಟರಿ ಜಿಲ್ಲಾ ಕಾರ್ಯದರ್ಶಿ ರೊ.ರಿತೇಶ್ ಬಾಳಿಗಾ, ಸಹಾಯಕ ಗವರ್ನರ್ ಡಾ.ಮುರಳಿಕೃಷ್ಣ, ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್, ವಲಯ ಸೇನಾನಿ ರೊ. ಗಣೇಶ ಶೆಟ್ಟಿ ಸಿದ್ದಕಟ್ಟೆ…

Read More

ಬಂಟ್ವಾಳ: ಕುರಿಯಾಳ ಗ್ರಾಮದ ದುರ್ಗಾನಗರ ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರದಲ್ಲಿ ನವರಾತ್ರಿ ಮಹೋತ್ಸವ ಸಂಪನ್ನಗೊಂಡಿತು. ಅ.2ರಿಂದ ಅ11ರವೆರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಪೂಜಾ ಮಹೋತ್ಸವ ಜರುಗಿತು. ಗುರುವಾರ ಸುದರ್ಶನ್ ಬಲ್ಲಾಳ್ ಪೌರೋಹಿತ್ಯದಲ್ಲಿ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ, ಶುಕ್ರವಾರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉತ್ಸವದ ದಿನಗಳಲ್ಲಿ ಭಜನೆ, ಅನ್ನದಾನ ನಡೆಯಿತು. Advertisement Advertisement

Read More

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಮಹಾಚಂಡಿಕಾ ಯಾಗ ನಡೆಯಿತು. ಅಕ್ಟೋಬರ್ ೩ರಿಂದ ಶ್ರೀ ದೇವಿ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವ ನಡೆದು ವಿಜಯದಶಮಿಯ ಅಂಗವಾಗಿ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಂತೆ, ವೇದಮೂರ್ತಿ ಬಾಲಕೃಷ್ಣ ಆಚಾರ್ ಕಾರಿಂಜ ಅವರ ನೇತೃತ್ವದಲ್ಲಿ ಮಹಾಚಂಡಿಕಾ ಯಾಗ ನಡೆದು ಬೆಳಿಗ್ಗೆ ೧೧.೩೦ರ ವೇಳೆಗೆ ಪೂರ್ಣಾಹುತಿ ನಡೆಯಿತು. ಶ್ರೀ ರಕ್ತೇಶ್ವರೂ ದೇವಿ ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಬಿ. ವಿಶ್ವನಾಥ, ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಭಕ್ತರು ಮಹಾಚಂಡಿಕಾ ಯಾಗದ ಪುಣ್ಯ ಕಾರ್ಯದಲ್ಲಿ ಭಾಗಿಗಳಾಗಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ರಕ್ತೇಶ್ವರೀ ದೇವಿಗೆ ಮಹಾಪೂಜೆ ನಡೆದು ಅನ್ನದಾನ ನಡೆಯಿತು. Advertisement Advertisement Advertisement

Read More

ಬಂಟ್ವಾಳ: ಪತ್ರಿಕಾ ಏಜೆಂಟ್, ಬಿ.ಸಿ.ರೋಡಿನ‌ ನಂದಿನಿ ಮಿಲ್ಕ್ ಪಾರ್ಲರ್ ಮಾಲಕ ವಸಂತ ಆಚಾರ್ಯ ( 56) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.ಕೊಡುಗೈದಾನಿಯಾಗಿದ್ದು, ವಿಶ್ವಕರ್ಮ ಸಂಘದ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿದ್ದು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಇವರು ಇಂದು ಪೊಳಲಿ ದೇವಸ್ಥಾನಕ್ಕೆ ಭೇಟಿ ನೀಡಿ ಹೊರ ಬರುತ್ತಿದ್ದಾಗ ಹಠಾತ್ ಆಗಿ ಎದೆ ನೋವು ಕಾಣಿಸಿಕೊಂಡು ಬಿದ್ದಿದ್ದಾರೆ. ಕೂಡಲೇ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ‌ನೀಡಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಆವರು ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ. Advertisement Advertisement advertisement

Read More

ನವರಾತ್ರಿ ಉತ್ಸವ ಅಂಗವಾಗಿ ಇಂದು ಬುಧವಾರ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು.ಅರ್ಚಕ ರಾಘವೇಂದ್ರ ಮಯ್ಯರಬೈಲು ಹಾಗೂ ಸಹಾಯಕ ಅರ್ಚಕರು ಪೂಜಾವಿಧಿ ವಿಧಾನ ಕಾರ್ಯಕ್ರಮವನ್ನು ನೆರವೇರಿಸಿದರು. Advertisement ಈ ಪೂಜಾ ಕಾರ್ಯಕ್ರಮದಲ್ಲಿ ಬಂಟ್ವಾಳ ತಹಶೀಲ್ದಾರ್ ಡಿ. ಅರ್ಚನಾ ಭಟ್ ಭಾಗವಹಿಸಿ, ಆರೋಗ್ಯ, ಸಂಪತ್ತು, ನೆಮ್ಮದಿಗಳ ಜೊತೆ ಎಲ್ಲಾ ಪರಿಸ್ಥಿತಿಗಳನ್ನೂ ಎದುರಿಸಲು ಶಕ್ತಿ ಬೇಕು. ದುರ್ಗಾ ದೇವಿಯು ಎಲ್ಲರಿಗೂ ಇಂತಹ ಶಕ್ತಿಯನ್ನು ಕರುಣಿಸಲಿ ಎಂದು ಶುಭ ಹಾರೈಸಿ, ಎಲ್ಲರಿಗೂ ನವರಾತ್ರಿ ಹಬ್ಬದ ಶುಭಾಶಯ ಕೋರಿದರು. ಉಪತಹಸೀಲ್ದಾರ್ ನರೆಂದನಾಥ್ ಮಿತ್ತೂರು, ರಾಜೇಶ್ ನಾಯ್ಕ್, ನವೀನ್ ಬೆಂಜನಪದವು,ವಿಜಯ ವಿಕ್ರಮ್,ದಿವಾಕರ ಮುಗಳಿಯ ಕಂದಾಯ ನಿರೀಕ್ಷಕರಾದ ಜನಾರ್ದನ್.ಜೆ, ವಿಜಯ್ ಆರ್ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಸಾರ್ವಜನಿಕರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು. Advertisement Advertisement Advertisement

Read More