Author: admin
ಬಂಟ್ವಾಳ : ಪುದು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾರಿಪಳ್ಳ ಎಂಬಲ್ಲಿ ಫ್ರಾನ್ಸಿಸ್ ವಾಸ್ ಎಂಬವರಿಗೆ ಸೇರಿದ್ದ ಫಲಭರಿತ ತೆಂಗಿನಮರವನ್ನು ಕಡಿಯುಂತೆ ಪಂಚಾಯತಿ ಪಿಡಿಓ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ.ಅದೇ ಪಂಚಾಯತಿನ ಪ್ರಭಾವಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಸರಿಯಾಗಿ ಪರಿಶೀಲಿಸದೆ ಸಮೃದ್ಧ ಫಲಭರಿತ ತೆಂಗಿನ ಮರವನ್ನು ತಕ್ಷಣ ಕಡಿಯುವಂತೆ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಯವರ ಸೂಚನೆಯಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೋಟಿಸ್ ನೀಡಿದ್ದರು. ಸದ್ರಿ ನೋಟಿಸನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಫ್ರಾನ್ಸಿಸ್ ವಾಸ್ ರವರ ಅರ್ಜಿಯನ್ನು ಬುಧವಾರ ವಿಚಾರಿಸಿದ ನ್ಯಾಯಮೂರ್ತಿ ಜಸ್ಟಿಸ್ ಮಹಮ್ಮದ್ ನವಾಝ್ ರವರ ಪೀಠವು ಅರ್ಜಿಯನ್ನು ಪರಿಶೀಲಿಸಿ ಮರ ಕಡಿಯದಂತೆ ತಡೆಯಾಜ್ಞೆ ನೀಡಿದೆ.ಅರ್ಜಿದಾರರ ಪರವಾಗಿ ಬೆಂಗಳೂರಿನ ಆರ್. ಪಿ ಡಿಸೋಜಾ ಅಸೋಸಿಯೇಟ್ಸ್ ನ ಯುವ ವಕೀಲ ಆರ್. ಪಿ ಡಿʼಸೋಜಾರವರು ವಾದ ಮಂಡಿಸಿದರು. Advertisement Advertisement Advertisement
ಬಂಟ್ವಾಳ: ಮಗುವಿನ ವ್ಯಕ್ತಿತ್ವವನ್ನು ಅರಳಿಸುವ ಕೆಲಸವನ್ನು ತಾಯಿ ಮಾಡಿದರೆ ಮಗುವಿನ ಮನದಲ್ಲಿ ಧಾರ್ಮಿಕ ಭಾವ ಉದ್ದೀಪನವಾಗುತ್ತದೆ ಆ ಮೂಲಕ ಹಿಂದೂ ಸಮಾಜ ಉತ್ಕರ್ಷವಾಗುತ್ತದೆ. ಮಕ್ಕಳಿಗೆ ಸಂಸ್ಕಾರ ಕೊಡುವ ಕೆಲಸ ತಾಯಿಯಂದಿರಿಂದ ಆಗಬೇಕಾಗಿದ್ದು ಸಂಸ್ಕಾರದ ಪಾಠ ಮಾಡುವ ಪ್ರಯತ್ನ ಸಾಕಾರವಾದರೆ ಇಂತಹ ಕಾರ್ಯಕ್ರಮಗಳು ಅರ್ಥಪೂರ್ಣವಾಗುತ್ತದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜರಾಂ ಭಟ್ ಹೇಳಿದರು.ಶ್ರೀ ಶಾರದಾ ಸೇವಾ ಪ್ರತಿಷ್ಠಾನ ತುಂಬೆ ಇದರ ಆಶ್ರಯದಲ್ಲಿ ನಡೆದ 24ನೇ ವರ್ಷದ ತುಂಬೆ ಶ್ರೀ ಶಾರದಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. Advertisement ಮುಖ್ಯ ಅತಿಥಿ, ನ್ಯಾಯವಾದಿ ಆಶಾಮಣಿ ಡಿ. ರೈ ಮಾತನಾಡಿ ಶಾರದೆ ಜ್ಞಾನ ಮಾತೆ. ಶಾರದೆಯನ್ನು ಆರಾಧಿಸಿದರೆ ಲಕ್ಷ್ಮಿ ಒಲಿಯುತ್ತಾಳೆ. ಹಣದ ಆಸೆಯ ಹಿಂದೆ ಬಿದ್ದು ಪ್ರಕೃತಿಯನ್ನು ಹಾಳು ಮಾಡುವುದು ಸರಿಯಲ್ಲ, ನಾವು ಸಂಸ್ಕಾರವಂತರಾಗಿ ಇನ್ನೊಬ್ಬರಿಗೆ ತಿಳಿಸಿಕೊಡಬೇಕು. ಉಪದೇಶಕ್ಕಿಂತ ಅನುಸರಿಸಿ ತೋರುವುದೇ ಶ್ರೇಷ್ಠ ಎಂದು ತಿಳಿಸಿದರು. ಮುಂಬೈ ಉದ್ಯಮಿ ಮುರಳೀಧರ ಮಾತನಾಡಿದರು. ಸಾರ್ವಜನಿಕ ಶ್ರೀ ಶಾರದಾ…
ಬಂಟ್ವಾಳ: ಸಜೀಪಮೂಡ ಸರಕಾರಿ ಪ್ರೌಢಶಾಲೆಯಲ್ಲಿ, ಚಿತ್ರಕಲಾ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಅವರ ಸಂಯೋಜನೆಯಲ್ಲಿ ೩ ದಿನಗಳ ಚಿಗುರು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ ಸಂಪನ್ನಗೊಂಡಿತು. ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರಿನ ಅಧ್ಯಕ್ಷ ಯೋಗೀಶ್ ಆಳ್ವ ಶಿಬಿರ ಉದ್ಘಾಟಿಸಿದರು. ಶಾಲಾ ಎಸ್ಡಿಎಂಸಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಉಪಪ್ರಾಂಶುಪಾಲೆ ಜಯಲಕ್ಷ್ಮೀ ಪಿ.ಎನ್, ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರಿನ ಕಾರ್ಯದರ್ಶಿ ರಾಮಪ್ರಸಾದ್ ರೈ ತಿರುವಾಜೆ, ಖಜಾಂಚಿ ಚಿತ್ತರಂಜನ್ ಕೆ.ಆರ್., ಪತ್ರಕರ್ತ ಮೌನೇಶ್ ವಿಶ್ವಕರ್ಮ, ಎಸ್ ಡಿ ಎಂ ಸಿ ಸದಸ್ಯ ದಿನಕರ್, ಭಾಗವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು, ಸಾಮಾಜಿಕ ಮುಂದಾಳು ಪ್ರಭಾಕರ ಶೆಟ್ಟಿ ಪೆರ್ವ, ಸಜೀಪ ಮೂಡ ಗ್ರಾ.ಪಂ.ಸದಸ್ಯ ವಿಶ್ವನಾಥ ಬೆಳ್ಚಾಡ, ಹಿರಿಯ ವಿದ್ಯಾರ್ಥಿ ಸಂದೀಪ್ ಸಾಲ್ಯಾನ್ ಉಪಸ್ಥಿತರಿದ್ದರು. ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ಮೌನೇಶ್ ವಿಶ್ವಕರ್ಮ, ಮುರಳೀಕೃಷ್ಣ ರಾವ್, ಸಂದೀಪ್ ಸಾಲ್ಯಾನ್, ಅರವಿಂದ ಕುಡ್ಲ, ಪ್ರೇಮನಾಥ…
ಬಂಟ್ವಾಳ: ಮಧ್ಯಪ್ರದೇಶದ ಥಾಂಗ್-ತಾ ಅಸೋಸಿಯೆಷನ್ ವತಿಯಿಂದ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರೀಯ ಜೂನಿಯರ್ ತಾಂಗ್- ತಾ( ಮಣಿಪುರ ಕಳರಿ ಫೈಟ್) ಚಾಂಪಿಯನ್ ಶಿಪ್ ನಲ್ಲಿ ಸುಂಕದಕಟ್ಟೆ ನಿರಂಜನಾನಂದ ಸ್ವಾಮಿ ಪಾಲಿಟೆಕ್ನಿಕ್ ನ ಮೆಕ್ಯಾನಿಕಲ್ ವಿಭಾಗದ ಪ್ರಥಮ ವರ್ಷದ ಡಿಪ್ಲೋಮ ವಿದ್ಯಾರ್ಥಿ ಸತೀಶ್ ಎಸ್. ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. Advertisement Advertisement ಅ.5 ರಿಂದ ಅ.7 ರವರೆಗೆ ತಾಂಗ್- ತಾ ಫೆಡರೇಷನ್ ಆಫ್ ಇಂಡಿಯದ ಸಹಕಾರದೊಂದಿಗೆ ನಡೆದ ಈ ಕ್ರೀಡಾಕೂಟದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿ ಈ ಸಾಧನೆ ಮಾಡಿ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.ಕಳೆದ ಸೆ.21 ಮತ್ತು 22 ರಂದು ವಿಜಯಪುರದಲ್ಲಿ ನಡೆದ 5ನೇ ರಾಜ್ಯಮಟ್ಟದ ಥಾಂಗ್ ತಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು.ಪೊಳಲಿ ಶ್ರೀರಾಮಕೃಷ್ಣ ತಪೋವನದಲ್ಲಿ ಪೊಳಲಿ ಸರಕಾರಿ ಪ್ರೌಡಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯಂತ್ ಆಚಾರ್ಯ ಹಾಗೂ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮಕೂಟ್ಲು ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಸತೀಶ್ ಅವರ…
ಬಂಟ್ವಾಳ: ದೇಶದ ಮಾನವ ಸಂಪನ್ಮೂಲ ಹಾಳಾಗಲು ಅಮಲು ಪದಾರ್ಥ ಸೇವನೆಯೊಂದೇ ಸಾಕು, ಬೇರಾವುದೇ ಕ್ಷಿಪಣಿ, ಬಾಂಬಿನ ಅಗತ್ಯವಿಲ್ಲ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ ಬಿ.ಸಿ. ಟ್ರಸ್ಟ್ ಬಂಟ್ವಾಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮ ಸಹಯೋಗದೊಂದಿಗೆ ಬಂಟ್ವಾಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.ಸರ್ವ ಮತೀಯ ಐಕ್ಯತೆಗೆ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಹೊಸ ಭಾಷ್ಯ ಬರೆದಿದ್ದುಸರ್ವಧರ್ಮಿಯರನ್ನು ಸೇರಿಸಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಜನಜಾಗೃತಿ ವೇದಿಕೆ ಸರ್ವಧರ್ಮ ಸಮ್ಮೇಳನನ್ನು ನಿತ್ಯ ನಿರಂತರ ನಡೆಸಿಕೊಂಡು ಬರುತ್ತಿದೆ. ಮಹತ್ಮ ಗಾಂಧೀಜಿಯವರ ಆದರ್ಶ, ಸಿದ್ದಾಂತವನ್ನು ಕೇವಲ ಗಾಂಧಿ ಜಯಂತಿಯಂದು ಮಾತ್ರವಲ್ಲದೆ ಪ್ರತಿದಿನ ನೆನೆಪಿಸಿಕೊಂಡು ಕೆಲಸ…
ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ ಮಿತ್ರ ಯೋಜನೆಯಡಿ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಕ್ಷಯ ರೋಗಿಗಳಿಗೆ ಧವಸ ಧಾನ್ಯಗಳನ್ನೊಳಗೊಂಡ ಆಹಾರ ಸಾಮಾಗ್ರಿಗಳ ಕಿಟ್ ವಿತರಣಾ ಸಮಾರಂಭ ಶನಿವಾರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು. Advertisement Advertisement ಆಹಾರ ಕಿಟ್ ವಿತರಿಸಿದ ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಸಂಜಿತ್ ಎಸ್.ಶೆಟ್ಟಿ ಮಾತನಾಡಿ, ಸೇವಾ ಕಾರ್ಯಗಳಿಗೆ ಮನಸ್ಸು ಅತಿ ಮುಖ್ಯವಾಗಿದ್ದು, ಆಗ ನಾವು ನೀಡಿದ ಸೇವೆಯೂ ಸಾರ್ಥಕತೆಯನ್ನು ಪಡೆಯುತ್ತದೆ. ಸೇವಾ ಕಾರ್ಯಗಳಲ್ಲಿ ಸೇವಾಂಜಲಿಯ ಹೆಸರು ಮುಂಚೂಣಿಯಲ್ಲಿದ್ದು, ನಿಕ್ಷಯ ಮಿತ್ರ ಯೋಜನೆಯ ಆರಂಭದಿಂದಲೂ ಬೆಂಬಲವಾಗಿ ನಿಂತ ಸಂಸ್ಥೆಯು ಕ್ಷಯ ಮುಕ್ತ ಭಾರತ ಯೋಚನೆಗೆ ಬಲುದೊಡ್ಡ ಕೊಡುಗೆ ನೀಡಿದೆ. ಆರೋಗ್ಯ ಕ್ಷೇತ್ರದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ವಿಶೇಷವಾಗಿದ್ದು, ಅವರ ಕಾರ್ಯಕ್ಕೆ ನಾವು ಚಿರಋಣಿಗಳಾಗಿರಬೇಕು ಎಂದರು. advertisement Advertisement ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಚೇತನ್ ಮಾತನಾಡಿ, ಹಿಂದಿನ ವರ್ಷಗಳಲ್ಲಿ ಕ್ಷಯ ರೋಗದ ನಿಯಂತ್ರಣ ಪ್ರಮಾಣ ವಾರ್ಷಿಕ ೨ ಶೇ.ದಷ್ಟಿದ್ದು, ಅದನ್ನು ೯೦ ಶೇ. ಏರಿಸಬೇಕು ಎಂಬ…
ಬಂಟ್ವಾಳ: ಕುರಿಯಾಳ ಗ್ರಾಮದ ಶ್ರೀ ಓಂಕಾರೇಶ್ವರಿ ದೇವಿ ಭಜನಾ ಮಂದಿರದಲ್ಲಿ ನವರಾತ್ರಿಯ ಮೊದಲ ದಿನವಾದ ಗುರುವಾರ ನೂತನ ಪಾಕಶಾಲ ಕಟ್ಟಡದ ಉದ್ಘಾಟನೆ ಹಾಗೂ ವಿಮಾ ಗ್ರಾಮ ಘೋಷಣೆ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಭಾರತೀಯ ಜೀವಾ ವಿಮಾ ನಿಗಮ ಬಂಟ್ಟಾಳ ಶಾಖೆಯ ಮುಖ್ಯ ಶಾಖಾಧಿಕಾರಿ ಕೆ.ಸತೀಶ್ ಕುಮಾರ್, ಸಹಾಯಕ ಶಾಖಾಧಿಕಾರಿ ಬಿ.ಎಚ್ ಕೃಪಾಲ್, ಅಭಿವೃದ್ಧಿ ಅಧಿಕಾರಿ ಮದ್ವರಾಜ್ ಕಲ್ಮಾಡಿ, ಶ್ರೀ ಓಂಕಾರೇಶ್ವರಿ ದೇವಿ ಭಜನಾ ಮಂದಿರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ವಿ ಮಣಿಹಳ್ಳ, ಆಡಳಿತ ಸಮಿತಿ ಗೌರವಾಧ್ಯಕ್ಷ ಜಗದೀಶ್ ಭಂಡಾರಿ, ಅಧ್ಯಕ್ಷ ಶ್ರೀನಿಧಿ ವಿ ಬಂಗೇರ, ಅರ್ಚಕ ಹೊನ್ನಪ್ಪ ಪೂಜಾರಿ ಉಪಸ್ಥಿತರಿದ್ದರು. ಚೈತ್ರ ಶ್ರೀನಿಧಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. Advertisement Advertisement Advertisement Advertisement
ಬಂಟ್ವಾಳ: ಜೆಸಿಐ ಬಂಟ್ವಾಳದ ಆಶ್ರಯದಲ್ಲಿ ದಸರಾ ಹಬ್ಬದ ಪ್ರಯುಕ್ತ ದಾಂಡಿಯ ನೈಟ್ಸ್ ವಿಶೇಷ ಕಾರ್ಯಕ್ರಮ ಅ.5ರಂದು ಶನಿವಾರ ಸಂಜೆ 6 ಗಂಟೆಗೆ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಜೆಸಿಐ ವಲಯ ನಾಯಕರು, ಗಣ್ಯರು ಭಾಗವಹಿಸಲಿದ್ದಾರೆ. ಯಕ್ಷಗಾನ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ಸಾಧಕರನ್ನು ಸಭಾ ವೇದಿಕೆಯಲ್ಲಿ ಗೌರವಿಸಲಾಗುವುದು ಎಂದು ಜೆಸಿಐ ಬಂಟ್ವಾಳದ ಅಧ್ಯಕ್ಷೆ ರಶ್ಮಿ ಶೆಟ್ಟಿ ತಿಳಿಸಿದ್ದಾರೆ. Advertisement Advertisement Advertisement
ಬಂಟ್ವಾಳ: ಶಂಭೂರು ಮೂರ್ತೇದಾರರ ಸೇವಾ ಸಹಕಾರಿ ಸಂಘ ನಿ. ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಭಾನುವಾರ ಬಿರ್ವೆರ್ ಸೇವಾ ಟ್ರಸ್ಟ್ ನರಿಕೊಂಬು ಇದರ ಕಚೇರಿಯಲ್ಲಿ ನಡೆಯಿತು. Advertisement ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನರಿಕೊಂಬು ಗ್ರಾ.ಪಂ. ಅಧ್ಯಕ್ಷ ಸಂತೋಷ್ ಕುಮಾರ್, ಬಿರುವೆರ್ ಸೇವಾ ಟ್ರಸ್ಟ್ನ ಅಧ್ಯಕ್ಷ ಸೀತಾರಾಮ ಪೂಜಾರಿ ನರಿಕೊಂಬು ಗ್ರಾ.ಪಂ. ಸದಸ್ಯರಾದ ರವಿ ಅಂಚನ್, ರಂಜಿತ್ ಕೆದ್ದೇಲ್ ಭಾಗವಹಿಸಿದ್ದರು. ಸಂಘದ ನಿರ್ದೆಶಕರಾದ ಮೋನಪ್ಪ ಪೂಜಾರಿ ಬೊಂಡಾಲ, ರಾಜೇಶ್ ಆರ್., ಅಶೋಕ್ ಆರ್., ಕೃಷ್ಣಪ್ಪ ಪೂಜಾರಿ, ಗಣೇಶ್ ಪೆಲತ್ತಿಮಾರ್, ಶ್ರೀಶ ಆರ್., ನಾರಾಯಣ ಪೂಜಾರಿ ಕೇದಿಗೆ, ವಿಜಯ ತುಕರಾಮ, ಜಯಂತಿ ಈಶ್ವರ ಪೂಜಾರಿ ಉಪಸ್ಥಿತರಿದ್ದರು. ಈ ಸಂದರ್ಭ ಸಂಘಕ್ಕೆ ಶೇಂದಿ ಹಾಕುತ್ತಿರುವ ಮೂರ್ತೆದಾರ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಉಪಾಧ್ಯಕ್ಷ ಮಾಧವ ಕೆ. ಸ್ವಾಗತಿಸಿ, ಕಾರ್ಯದರ್ಶಿ ಯೋಗೀಶ್ ಅಮೀನ್ ಕಾಐಕ್ರಮ ನಿರೂಪಿಸಿದರು. ಸಿಬ್ಬಂದಿ ಕೃತಿಕ್ಷಾ ವಂದಿಸಿದರು. ಸಂಘದ ಪಿಗ್ಮಿ ಸಂಗ್ರಹಕ…
ಬಂಟ್ವಾಳ: ಅಮ್ಟಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಅಮ್ಟಾಡಿ ಬಂಟ್ವಾಳ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ನೂತನ ನಿವೇಶನದಲ್ಲಿ ಸಂಘದ ಅಧ್ಯಕ್ಷೆ ಮಲ್ಲಿಕಾ ವಿ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಶನಿವಾರ ಜರಗಿತು. Advertisement ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಯ್ ಕುಮಾರ್ ಅಜಿಲ ವರದಿ ಮಂಡಿಸಿ ಸಂಘವು ವರದಿ ಸಾಲಿನಲ್ಲಿ ರೂ 223.26 ಕೋಟಿ ವ್ಯವಹಾರ ನಡೆಸಿ ವರ್ಷಾಂತ್ಯಕ್ಕೆ ರೂ 1,02,30,807.89 ನಿವ್ವಳ ಲಾಭಗಳಿಸಿ ಶೇಕಡ 9 ಡಿವಿಡೆಂಟ್ ನೀಡಲಾಗುವುದು. ಸಂಘವು ವರದಿ ಸಾಲಿನಲ್ಲಿ ರೂ 40.30ಕೋಟಿ ಠೇವಣಿ ಹೊಂದಿದ್ದು ರೂ.36.65 ಕೋಟಿ ಸಾಲ ವಿತರಿಸಿದೆ. ಸಂಘದಲ್ಲಿ ರೂ. 1.65ಕೋಟಿ ಕ್ಷೇಮನಿಧಿ ಹಾಗೂ ಇತರ ನಿಧಿಗಳನ್ನು ಹೊಂದಿದೆ ಎಂದರು. Advertisement Advertisement ಸಂಘದ ಹಿರಿಯ ಸದಸ್ಯರಾದ ರಾಮಣ್ಣ ಪೂಜಾರಿ ಕಂಗಿತ್ಲು, ನವೀನ್ಚಂದ್ರ ಶೆಟ್ಟಿ ಮುಂಡಾಜೆ ಗುತ್ತು, ಅಲ್ಬಟ್ ಡಿಸೋಜ ಗುತ್ತಾರ್, ರಾಘವನ್ ನಾಯರ್ ರಾಮಲ್ಕಟ್ಟೆ , ಭಾರತಿ ಚೌಟ ಅಮ್ಟಾಡಿ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ…








