Author: admin
Advertisement ಬಂಟ್ವಾಳ: ಈ ಬಾರಿ ಪ್ರಾಯೋಗಿಕವಾಗಿ ನಡೆಸಿದ ಶ್ರೀ ಕೃಷ್ಣ ವೇಷ ಸ್ಪರ್ಧೆ ಯಶಸ್ವಿಯಾಗಿ ನಡೆದಿದ್ದು ಮುಂದಿನ ವರ್ಷ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಬಂಟ್ವಾಳ ತುಳುಕೂಟದ ಅಧ್ಯಕ್ಷ ಸುದರ್ಶನ್ ಜೈನ್ ಹೇಳಿದರು.ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ. ಬಂಟ್ವಾಳ ವಿಶಂತಿ ಸಂಭ್ರಮದ ಪ್ತಯುಕ್ತ ಸಂಘದ ಆಶ್ರಯದಲ್ಲಿ ಹಾಗೂ ತುಳುಕೂಟ ಬಂಟ್ವಾಳ ಇದರ ಸಂಯೋಜನೆಯಲ್ಲಿ ನಡೆದ ಶ್ರೀ ಕೃಷ್ಣ ವೇಷ ಸ್ಪರ್ಧೆ 2024 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. Advertisement Advertisement Advertisement ಕಾರ್ಯಕ್ರಮದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು ಅವರನ್ನು ಗೌರವಿಸಲಾಯಿತು. ಕೃಷ್ಣ ವೇಷ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ವೇದಿಕೆಯಲ್ಲಿ ತುಳುಕೂಟದ ಉಪಾಧ್ಯಕ್ಷ ಸೀತಾರಾಮ ಶೆಟ್ಟಿ ಸಜೀಪ, ಕಾರ್ಯಕ್ರಮ ಸಂಯೋಜಕ ದಿವಾಕರ ದಾಸ್, ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಜಿತ್ ಕುಮಾರ್ ಜೈನ್ ಉಪಸ್ಥಿತರಿದ್ದರು. ತೀರ್ಪುಗಾರರ ಪರವಾಗಿ ರವೀಂದ್ರ ಕುಕ್ಕಾಜೆ ಮಾತನಾಡಿದರು.ದ.ಕ. ವರ್ತಕರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ…
ಬಂಟ್ವಾಳ : ದಿನವಿಡಿ ಕರ್ತವ್ಯದ ಒತ್ತಡದಿಂದ ಬ್ಯುಸಿ ಆಗಿರುವ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭಾನುವಾರ ಯುವಕರೊಂದಿಗೆ ಕೆಸರು ಗದ್ದೆಯಲ್ಲಿ ಆಡಿ ಸಂಭ್ರಮಿದರು. ಅನಂತಾಡಿ ಗ್ರಾಮದ ನವ ಭಾರತ್ ಯುವಕ ಸಂಘ ಅನಂತಾಡಿ ವತಿಯಿಂದ ಪಡಿಪಿರೆ ಗದ್ದೆಯಲ್ಲಿ ಜರಗಿದ 6 ನೇ ವರ್ಷದ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಧಿಕಾರದ ಹಮ್ಮು ಬಿಮ್ಮುಗಳನ್ನು ಬಿಟ್ಟು ಮಕ್ಕಳ ಜೊತೆ ಮಗುವಾಗಿ ಬೆರೆತು ಮಣ್ಣಿನ ಮಗನಾದರು. ಜಿಲ್ಲಾಧಿಕಾರಿ ಕೆಸರಿನಲ್ಲೂ ಮಕ್ಕಳ ಜೊತೆಗೂಡಿ ಸಂತಸಪಟ್ಟ ರೀತಿ ಕಂಡು ಊರೇ ಸಂಭ್ರಮಿಸಿತು. ಈ ಸಂದರ್ಭ ಮಾತನಾಡಿದ ಅವರು ದೇಶದ ಬೆನ್ನೆಲುಬಾಗಿರುವ ರೈತ ಸಂತೋಷವಾಗಿದ್ದರೆ ಇಡೀ ಜಗತ್ತೇ ಸಂತೋಷವಾಗಿರುತ್ತದೆ. ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕು ಎಂದು ತಿಳಿಸಿದರು. ಜಿಲ್ಲೆಯ ಹವಾಮಾನದ ಎಡರು ತೊಡರುಗಳನ್ನು ದಾಟಿ ರೈತ ಬದುಕಬೇಕಾಗುತ್ತದೆ. ಈ ನೆಲದ ಸಂಸ್ಕೃತಿಯು ಬೆಳೆದು ಬಂದಿರುವುದು ಗದ್ದೆಗಳಿಂದ ಎಂದರು. Advertisement Advertisement Advertisement Advertisement ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ…
ಬಂಟ್ವಾಳ: 12 ವರ್ಷಗಳಿಂದ ಸ್ವಚ್ಚಗೊಳಿಸದೇ ಉಳಿದಿದ್ದ ನಾವೂರು ಗ್ರಾಮದ ಕುಡಿಯುವ ನೀರು ಪೂರೈಸುವ ಮೇಲ್ಸ್ಥರದ ಟ್ಯಾಂಕನ್ನು ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣ ಘಟಕದ ನಾವೂರು ಶೌರ್ಯ ತಂಡ ಶ್ರಮದಾನದ ಮೂಲಕ ಶುಚಿಗೊಳಿಸಿದೆ. Advertisement ನಾವೂರು ಶಾಲೆಯ ಬಳಿ ನೇತ್ರಾವತಿ ನದಿ ಸಮೀಪದ ಎತ್ತರ ಪ್ರದೇಶದಲ್ಲಿ ನಾವೂರು ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕ್ ಇದೆ. ಟ್ಯಾಂಕ್ನ ಸುತ್ತಮುತ್ತ ಕಳೆಗಿಡಗಳು, ಪೊದೆಗಳು ಬೆಳೆದು ಹತ್ತಿರಕ್ಕೆ ಹೋಗಲಾಗದ ಸ್ಥಿತಿ ನಿರ್ಮಾಣಗೊಂಡಿತ್ತು. ಈ ಟ್ಯಾಂಕನ್ನು ಸ್ವಚ್ಚಗೊಳಿಸದೇ 12 ವರ್ಷಗಳೇ ಕಳೆದಿವೆ ಎನ್ನುತ್ತಾರೆ ಸ್ಥಳೀಯರು. ಇದನ್ನರಿತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡ ಕಳೆಗಿಡಗಳನ್ನು ಯಂತ್ರದ ಮೂಲಕ ತುಂಡರಿಸಿ ಪರಿಸರವನ್ನು ಸ್ವಚ್ಚಗೊಳಿಸುವುದರ ಜೊತೆಗೆ ಟ್ಯಾಂಕನ್ನು ಸ್ವಚ್ಚಗೊಳಿಸಲಾಯಿತು. ಟ್ಯಾಂಕ್ನಲ್ಲಿ ಕೊಚ್ಚೆಯಂತೆ ತುಂಬಿಕೊಂಡಿದ್ದ ಕೆಸರು ಪೈಪ್ ಮೂಲಕ ಹೊರ ಚೆಲ್ಲಲ್ಪಟ್ಟಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯ ಯೋಜನಾಧಿಕಾರಿ ಬಾಲಕೃಷ್ಣ, ಮೇಲ್ವಿಚಾರಕಿ ರೂಪ ಜೆ. ಭೇಟಿ ನೀಡಿದರು. ಶೌರ್ಯ ತಂಡದ ಅಧ್ಯಕ್ಷ…
ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 445.45 ಕೋಟಿ ವ್ಯವಹಾರ ನಡೆಸಿ 1.68 ಕೋಟಿ ಲಾಭಾಂಶ ಗಳಿಸಿದ್ದು ಸಂಘದ ಸದಸ್ಯರಿಗೆ ಶೇ.12 ರಷ್ಟು ಲಾಭಾಂಶ ನೀಡಲಾಗುವುದೆಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದರು. ಅವರು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೇಂದ್ರ ಕಛೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಜರಗಿದ 2023-24 ನೇ ಸಾಲಿನ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ಸಂಘದಲ್ಲಿ ೫೨೪೦ ಎ ತರಗತಿ ಸದಸ್ಯರು , ೧೮೬೬ ಡಿ ತರಗತಿ ಸದಸ್ಯರು ಸೇರಿದಂತೆ ಒಟ್ಟು ೭೧೦೬ ಸದಸ್ಯರನ್ನು ಹೊಂದಿದೆ, ವರದಿ ವರ್ಷದಲ್ಲಿ ೧೫೪೭ ಮಂದಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ೩೪.೫೫ ಕೋಟಿ ಸಾಲವನ್ನು ಮಂಗಳಾ ಕಿಸಾನ್ ಕಾರ್ಡ್ ಮೂಲಕ ವಿತರಿಸಲಾಗಿದ್ದು, ಶೇ.3 ಬಡ್ಡಿದರದಲ್ಲಿ ಕೃಷಿ ಅಭಿವೃದ್ದಿಗಾಗಿ 243ಮಂದಿ ರೈತರಿಗೆ 7 ಕೋಟಿ ಸಾಲ ನೀಡಲಾಗಿದೆ. ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ…
ಬಂಟ್ವಾಳ: ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಬಲಾಡ್ಯವಾಗಿ ಬೆಳೆದಿದ್ದು, ಇಡೀ ದೇಶದಲ್ಲಿ ಶೇ.೧೦೦ ಸಾಲ ಮರುಪಾವತಿಯಾಗುವ ಜಿಲ್ಲೆಯಿದ್ದರೆ ಅದು ದ.ಕ. ಮಾತ್ರ ಎಂದು ಕರ್ನಾಟಕ ಸಹಕಾರ ಮಾರಾಟ ಮಹಾಮಂಡಲ ಬೆಂಗಳೂರು ಹಾಗೂ. ದ,ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. Advertisement ಬಿ.ಸಿ. ರೋಡಿನ ಸ್ಪರ್ಶಾಕಲಾಮಂದಿರದಲ್ಲಿ ಶನಿವಾರ ನಡೆದ ದ.ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ. ಬಂಟ್ವಾಳ ಇದರ ವಿಂಶತಿ ಸಂಭ್ರಮ – ಸದಸ್ಯರ ಸಮಾಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಹಕಾರ ಸಂಘವನ್ನು ಸ್ಥಾಪಿಸುವುದು ಸುಲಭ, ಆದರೆ ಮುನ್ನಡೆಸುವುದು ಕಷ್ಟ. ದ.ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ಆರಂಭಗೊಂಡು ಇದೀಗ ೨೦ ವರ್ಷದ ಸಂಭ್ರಮ ಆಚರಿಸುತ್ತಿರುವುದು ಎಲ್ಲರಿಗೂ ಖುಷಿ ಕೊಟ್ಟಿದೆ ಎಂದರು.ದ.ಕ. ಬ್ಯಾಂಕ್ಗಳ ತವರೂರು. ಅನೇಕ ವಾಣಿಜ್ಯ ಬ್ಯಾಂಕ್ಗಳು ಹಾಗೂ ಸಹಕಾರಿ ಸಂಘಗಳು ಇಲ್ಲಿ ಹುಟ್ಟಿಕೊಂಡಿವೆ. ವಾಣಿಜ್ಯ ಬ್ಯಾಂಕ್ಗಳು ಇತರ ಬ್ಯಾಂಕ್ಗಳೊಂದಿಗೆ ವಿಲೀನ ಗೊಂಡಿದೆ, ಗ್ರಾಹಕರಿಕೆ ನೀಡುವ ಸೇವೆಯಿಂದ…
ಬಂಟ್ವಾಳ: ದ.ಕ. ಜಿಲ್ಲಾ ಪಂಚಾಯತಿ, ಬಂಟ್ವಾಳ ತಾಲೂಕು ಕೃಷಿ ಇಲಾಖೆ ಇದರ ಆಶ್ರಯದಲ್ಲಿ ಆರ್ಐಡಿಎಫ್ ಯೋಜನೆಯಡಿ , ಕೆಆರ್ಡಿಐಎಲ್ ಸಂಸ್ಥೆಯ ವತಿಯಿಂದ ೨೫ ಲಕ್ಷ ರೂಪಾಯಿ ವೆಚ್ಚದ ಸುಸಜ್ಜಿತ ಬಂಟ್ವಾಳ ಹೋಬಳಿ ರೈತ ಸಂಪರ್ಕ ಕೇಂದ್ರ ಕಟ್ಟಡಕ್ಕೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಹಾಲು ಉತ್ಪಾದಕರ ಸಂಘದ ಬಳಿ ಇರುವ ಕೃಷಿ ಇಲಾಖೆಯ ಸ್ಥಳದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಕ್ ಶಿಲಾನ್ಯಾಸ ನೆರವೇರಿಸಿದರು. Advertisement ಬಳಿಕ ಅರ್ಹ ಫಲಾನುಭವಿ ಕೃಷಿಕರಿಗೆ ಶಾಸಕ ರಾಜೇಶ್ ನಾಕ್ ಕೃಷಿ ಯಂತ್ರೋಪಕರಣ, ತುಂತುರು ನೀರಾವರಿ ಘಟಕ, ಮಣ್ಣು ಆರೋಗ್ಯ ಕಾರ್ಡ್, ಎಸ್ಎನ್ಎಸ್ ಯೋಜನೆಯಡಿ ಉಚಿತ ಕಿಟ್ಗಳನ್ನು ವಿತರಿಸಿದರು. Advertisement ಸಂಗಬೆಟ್ಟು ಗ್ರಾ.ಪಂ. ಅಧ್ಯಕ್ಷೆ ರಾಜೀವಿ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸುರೇಶ್ ಕುಲಾಲ್, ಕುಕ್ಕಿಪ್ಪಾಡಿ ಗ್ರಾ.ಪಂ. ಅಧ್ಯಕ್ಷ ಶೇಖರ್ ಶೆಟ್ಟಿ ಬದ್ಯಾರು, ಉಪಾಧ್ಯಕ್ಷೆ ಬೇಬಿ, ಸಂಗಬೆಟ್ಟು ಗ್ರಾ.ಪಂ. ಸದಸ್ಯ ಸತೀಶ್ ಪೂಜಾರಿ, ಸಂಗಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ, ಸಿದ್ದಕಟ್ಟೆ ವ್ಯವಸಾಯಿಕ…
ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023-24ನೇ ಸಾಲಿನಲ್ಲಿ ಒಟ್ಟು 445.45 ಕೋಟಿ ವ್ಯವಹಾರ ನಡೆಸಿ, 1.68 ಕೋಟಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದರು. Advertisement ಸಿದ್ದಕಟ್ಟೆಯಲ್ಲಿರುವ ಸಂಘದ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿ 1947 ರಲ್ಲಿ ಬಿ. ಕೃಷ್ಣ ರೈ ರವರ ಅಧ್ಯಕ್ಷತೆಯಲ್ಲಿ ಸಂಘವನ್ನು ಸ್ಥಾಪಿಸಲಾಗಿದ್ದು , ಬಂಟ್ವಾಳ ತಾಲೂಕಿನ 7 ಗ್ರಾಮ ಹಾಗೂ ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮ ಸೇರಿದಂತೆ ಒಟ್ಟು 8ಗ್ರಾಮಗಳ ವ್ಯಾಪ್ತಿಯನ್ನು ಸಂಘ ಒಳಗೊಂಡಿದೆ. 2023-24ನೇ ಸಾಲಿನ ವರ್ಷಾಂತ್ಯಕ್ಕೆ 54.39 ಕೋಟಿ ಠೇವಣಿ ಹೊಂದಿದ್ದು , ವರದಿ ವರ್ಷದಲ್ಲಿ ವಿವಿಧ ಉದ್ದೇಶಗಳಿಗೆ ಒಟ್ಟು 55 ಕೋಟಿ ಸಾಲ ವಿತರಿಸಲಾಗಿದೆ, ಹೊರ ಬಾಕಿ ಸಾಲವು 98.24 ಕೋಟಿ ಆಗಿದ್ದು, ವಿತರಿಸಿದ ಸಾಲದಲ್ಲಿ ಶೇ 98ರಷ್ಟು ವಸೂಲಾತಿಯಾಗಿರುತ್ತದೆ. ಕಳೆದ ಹಲವಾರು ವರ್ಷಗಳಿಂದ ಅಡಿಟ್ ವರದಿಯಲ್ಲಿ ಎ ಗ್ರೇಡ್ ನ್ನು ನಿರಂತರವಾಗಿ ಕಾಯ್ದುಕೊಂಡು ಬರುತ್ತಿದೆ ಎಂದರು. Advertisement 2023-24…
ಬಂಟ್ವಾಳ: ತಾಲೂಕು ಹಿಂದಿ ಭಾಷಾ ಶಿಕ್ಷಕ ಸಂಘದ ಆಶ್ರಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಂಟ್ವಾಳ, ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕ ಸಂಘ ಬೆಂಗಳೂರು, ಹಾಗೂ ಲಯನ್ಸ್ ಕ್ಲಬ್ ಬಂಟ್ವಾಳದ ಸಹಯೋಗದೊಂದಿಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಬುಧವಾರ ಹಿಂದಿ ದಿವಾಸ ಕಾರ್ಯಕ್ರಮ ನಡೆಯಿತು. Advertisement ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಾಷ್ಟ್ರ ಭಾಷೆಯಾಗಿರುವ ಹಿಂದಿ ಹೃದಯದ ಭಾಷೆ. ಎಲ್ಲ ಹಿಂದಿ ಭಾಷಾ ಶಿಕ್ಷಕರನ್ನು ಸಂಘಟಿಸಿಕೊಂಡು ಪ್ರತೀ ವರ್ಷ ಹಿಂದಿ ದಿವಾಸ್ ಆಚರಿಸಿಕೊಂಡು ಬರುತ್ತಿರುವುದು ಅಭಿದನೀಯ ಎಂದು ಹೇಳಿದರು. Advertisement ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಉದ್ಯೋಗ ಅಥವಾ ಇನ್ನಿತರ ಕಾರಣಗಳಿಗೆ ಹೊರ ರಾಜ್ಯಗಳಿಗೆ ಹೋಗಬೇಕಾದ ಅನಿವಾರ್ಯತೆ ಬಂದಾಗ ಹಿಂದಿ ಭಾಷೆಯ ಅಗತ್ಯವಿದೆ. ಶಾಲೆಯಲ್ಲಿ ಪಠ್ಯದ ಜೊತೆಗೆ ಹಿಂದಿ ಭಾಷೆ ಕಲಿಕೆಯ ಅಭಿಯಾನವನ್ನು ಆರಂಭಿಸಿದರೆ ವಿದ್ಯಾರ್ಥಿಗಳು ವ್ಯಾಕರಣ ಬದ್ದವಾಗಿ ಹಿಂದಿ ಮಾತನಾಡಲು ಸಾಧ್ಯವಿದೆ ಎಂದು ತಿಳಿಸಿದರು. Advertisement ಕಾರ್ಯಕ್ರಮದಲ್ಲಿ…
ಬಂಟ್ವಾಳ: ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ.ವು 20 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ “ವಿಂಶತಿ ಸಂಭ್ರಮ 2023-24,ವರ್ತಕರ- ಗ್ರಾಹಕರ ಮಹಾಸಂಗಮ” ಕಾರ್ಯಕ್ರಮವು ಸೆ.20 ರಿಂದ 22 ರವರೆಗೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ತಿಳಿಸಿದ್ದಾರೆ. ಮಂಗಳವಾರ ಬಿ.ಸಿ.ರೋಡಿನಲ್ಲಿ ಕರೆದ ಸುದ್ದಿಗೋಷ್ಠಯಲ್ಲಿ ಈ ಬಗ್ಗೆ ವಿವರ ನೀಡಿದ ಅವರು,ಸೆ.20 ರಂದು ನಮ್ಮ ಸಂಸ್ಥೆ ಹಾಗೂ ರೋಟರಿ ಕ್ಲಬ್ ಬಂಟ್ವಾಳ ಟೌನ್ ಸಂಯೋಜನೆಯಲ್ಲಿ ನಡೆಯುವಗೃಹೊಪಯೋಗಿ ವಸ್ತುಗಳ ಮಾರಾಟ ಹಾಗೂ ತಿಂಡಿತಿನಸುಗಳ ಮಹಾಮೇಳ,ಆರೋಗ್ಯ ತಪಾಸಣೆ,ದಿವ್ಯಾಂಗರ ಸಮಸ್ಯೆಗಳ ಜಾಗೃತಿಕಾರ್ಯಕ್ರಮವನ್ನು ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ.ಭಟ್ ಉದ್ಘಾಟಿಸಿ ಚಾಲನೆ ನೀಡಲಿದ್ದಾರೆ ಎಂದರು. ಸೆ.21 ರಂದು “ವಿಂಶತಿ ಸಂಭ್ರಮ- ಸದಸ್ಯರ ಸಮಾಗಮ” ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರಕುಮಾರ್ ಉದ್ಘಾಟಿಸಲಿದ್ದಾರೆ.ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ್ ಸ್ವಾಮೀಜಿ ಆಶೀರ್ವಚನ ನೀಡಲಿದ್ದು,ವಿಧಾನಸಭಾಧ್ಯಕ್ಷ ಯು.ಟಿ.ಖಾದರ್,ಸಂಸದ ಕ್ಯಾ.ಬ್ರಿಜೇಶ್ ಚೌಟ,ಶಾಸಕ ರಾಜೇಶ್ ನಾಯ್ಕ್ ,ಮಾಜಿ ಸಚಿವ ರಮಾನಾಥರೈ ಸಹಿತ ಹಲವಾರು ಗಣ್ಯರು ಭಾಗವಹಿಸುವರು.ಈ…
ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಪುದು ಮಹಾ ಶಕ್ತಿ ಕೇಂದ್ರದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಪ್ರಧಾನಿಯವರಿಗೆ ದೀರ್ಘ ಆಯುಷ್ಯ ಹಾಗೂ ಯಶಸ್ಸಿಗಾಗಿ ಪ್ರಾರ್ಥಿಸಲಾಯಿತು. ಬಳಿಕ ಸಿಹಿ ತಿಂಡಿ ಹಂಚಿ ಪಕ್ಷದ ಕಾರ್ಯಕರ್ತರು ಸಂಭ್ರಮಿಸಿದರುಈ ಸಂದರ್ಭ ಬಿಜೆಪಿ ಮಂಡಲದ ಉಪಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ, ಮಹಾ ಶಕ್ತಿ ಕೇಂದ್ರದ ಪ್ರಭಾರಿ ಭರತ್ ರಾಜ್ ಗಟ್ಟಿ, ವೈಷ್ಣವಿ ಎಂಟರ್ ಪ್ರೈಸಸ್ ಮಾಲಕ ಹಾಗೂ ಪುದು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರ ಜಗನ್ನಾಥ ಸಾಲಿಯಾನ್ ತುಂಬೆ, ಪ್ರಧಾನ ಕಾರ್ಯದರ್ಶಿ ಸುಕೇಶ್ ಶೆಟ್ಟಿ ತೇವು, ಪ್ರಮುಖರಾದ ಸುಬ್ರಹ್ಮಣ್ಯ ಭಟ್ ನೆತ್ರಕೆರೆ, ಲಿಂಗಪ್ಪ ಕುಲಾಲ್ ತುಂಬೆ, ಸದಾನಂದ ತುಂಬೆ, ಮನೋಹರ್ ಪೆರ್ಲಕೆ , ಸುರಭೀ ಸ್ಟೀಲ್ಸ್ ನ ಮಾಲಕ ನವೀನ್ ಕೊಡ್ಮಣ್, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. Advertisement Advertisement Advertisement Advertisement








