Author: admin
ಮಂಗಳೂರು: ಸವಿತಾ ಸೌಹಾರ್ದ ಸಹಕಾರಿ ನಿಯಮಿತ ಇದರ ಸುರತ್ಕಲ್ ಶಾಖೆ ಹಾಗೂ ಉತ್ಪನ್ನಗಳ ಮಾರಾಟ ಮಳಿಗೆಯು ಸುರತ್ಕಲ್ ನ ಅಂಚೆ ಕಚೇರಿ ಮುಂಭಾಗದಲ್ಲಿರುವ ಶಂಕರ ಸದಸನದಲ್ಲಿ ಶುಭಾರಂಭಗೊಂಡಿತು. Advertisement ನೂತನ ಶಾಖೆ ಹಾಗೂ ಮಾರಾಟ ಮಳಿಗೆಯನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಸವಿತಾ ಸೌಹಾರ್ದ ಸಹಕಾರಿ ಸಂಘ ಹಾಗೂ ಸೌಂದರ್ಯ ವರ್ಧಕ ಉತ್ಪನ್ನಗಳ ಮಾರಾಟ ಮಳಿಗೆಯಿಂದ ಸುರತ್ಕಲ್ ಪರಿಸರದ ಜನರಿಗೆ ಉಪಯೋಗವಾಗಲಿದೆ ಎಂದರು. ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಗ್ರಾಹಕರು ಸಾಲ ಪಡೆಯಲು ಸಾಕಷ್ಟು ದಾಖಲೆಗಳನ್ನು ನೀಡಬೇಕಾಗುತ್ತದೆ. ಆದರೆ ಸಹಕಾರಿ ಸಂಘಗಳು ಗ್ರಾಹಕನ ವಿಶ್ವಾಸದ ಮೇಲೆ ವ್ಯವಹಾರ ಮಾಡುತ್ತವೆ, ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಸಹಕಾರಿ ಸಂಘದಿಂದ ಸಾಧ್ಯವಾಗಿದೆ ಎಂದ ಅವರುಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಕ್ಷೌರಿಕ ವೃತ್ತಿ ಮಾಡುವವರಿಗೆ ನೂತನ ಮಳಿಗೆ ಅನುಕೂಲಕರವಾಗಿದೆ ಎಂದು ತಿಳಿಸಿದರು. Advertisement Advertisement ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ…
ಬಂಟ್ವಾಳ ತಾಲೂಕು 2024-25 ನೇ ಸಾಲಿನ ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಭೆ ಇಂದು ಬಿ ಸಿ ರೋಡಿನ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಇಂದು ಶನಿವಾರ ನಡೆಯಿತು.ನೂತನ ಅಧ್ಯಕ್ಷರಾಗಿ ಯತೀಶ್ ಹಡೀಲು ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ನವೀನ್ ಎನ್ ದೇವಾಡಿಗ.ಗೌರವ ಅಧ್ಯಕ್ಷರಾಗಿ ಜಗನ್ನಾಥ ಅಳಿಕೆ.ಗೌರವ ಸಲಹೆಗಾರಾಗಿ ಮೋಹನ್ ದಾಸ್ ಕೊಟ್ಟಾರಿ ಕಲ್ಲಡ್ಕ.ಕಾರ್ಯದರ್ಶಿ ಸತೀಶ್ ಸಿದ್ಧಕಟ್ಟೆ.ಜೊತೆ ಕಾರ್ಯದರ್ಶಿ ಉಷಾ ಪಿಲಾತಬೆಟ್ಟು,ಖಜಾಂಚಿ ಗಣೇಶ್ ಕೇಪು.ಆಯ್ಕೆಯಾದರು. Advertisement Advertisement Advertisement Advertisement
Advertisement Advertisement Advertisement advertisement ಬಂಟ್ವಾಳ: ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಯ ವಿದ್ಯಾರ್ಥಿಗಳಾದ ಸಂದೀಪ್, ಜತಿನ್ ಅಯ್ಯಪ್ಪ , ಗೀತೇಶ್, ರಕ್ಷಾ ಮತ್ತು ಅನನ್ಯ ಇವರು ಬಹುಮಾನಗಳನ್ನು ಪಡೆದಿರುತ್ತಾರೆ. ಈ ಪೈಕಿ ಸಂದೀಪ್ ಮತ್ತು ಜತಿನ್ ಅಯ್ಯಪ್ಪ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಪ್ಪೆಪದವು: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಇದರ ಆಶ್ರಯದಲ್ಲಿ ಉಡುಪಿ ಕಾಸರಗೋಡು 400 ಕೆ.ವಿ. ವಿದ್ಯುತ್ ಲೈನ್ ವಿರೋಧಿಸಿ ಕುಪ್ಪೆ ಪದವು ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. Advertisement Advertisement ಪ್ರತಿಭಟನಕಾರರನ್ನು ಉದ್ದೇಶಿಸಿ ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ಮಾತನಾಡಿ 400 ಕೆ.ವಿ. ವಿದ್ಯುತ್ ಪ್ರಸರಣ ಜಾಲಾದಿಂದ ಜನರಿಗೆ ಇಷ್ಟು ತೊಂದರೆ ಯಾಗುತ್ತಿದ್ದರೂ ಜನಪ್ರತಿನಿಧಿಗಳು ಯಾಕೆ ಮೌನವಾಗಿದ್ದಾರೆ? ಎಂದು ಪ್ರಶ್ನಿಸಿದರು. ಕಂಪೆನಿಯಿಂದ ಹಣ ಪಡೆದು ಕೊಂಡು ನಾಯಕತ್ವ ವಹಿಸಿ ಕೊಂಡು ಬರುವವರನ್ನು ದೂರ ಇಡಬೇಕು, ಭೂಮಿಗೆ ಅನ್ಯಾಯ ಮಾಡಿದವರು ಯಾರೂ ಸುಖವಾಗಿಲ್ಲ. ಬೇರೆ ಕಂಪೆನಿಯನ್ನು ಬೆಳೆಸಲು ನಮ್ಮಭೂಮಿಯನ್ನು ಕಂಪೆನಿಗೆ ಮಾರುವುದು ಸರಿಯಲ್ಲ ಎಂದು ಆರೋಪಿಸಿದರು.ಹೋರಾಟಗಾರ ಚಂದ್ರಹಾಸ ಶೆಟ್ಟಿ ಇನ್ನಾ ಮಾತನಾಡಿ 400 ಕೆ.ವಿ ವಿದ್ಯುತ್ ಪ್ರಸರಣ ಅನುಷ್ಠಾನಗೊಂಡರೆ ತೊಂದರೆಗೆ ಒಳಗಾಗುವುದು ಭೂಮಿ ಮಾರಿದವರಲ್ಲ. ಭೂಮಿ ಮಾಲಿಕರು ಪರಿಹಾರ ಪಡೆದು ಬೇರೆಡೆ ಜೀವನ ಭದ್ರ ಪಡಿಸಿಕೊಳ್ಳುತ್ತಾರೆ. ಸಮಸ್ಯೆ ಅನುಭವಿಸುವವರು ಇಲ್ಲಿ ಇರುವವರು, ಸುತ್ತಮುತ್ತಲಿನ ಜನರು. 46…
ಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ವಠಾರದಲ್ಲಿ 4 ದಿನ ಆರಾಧಿಸಲಾದ 45 ನೇ ವರ್ಷದ ಭವ್ಯ ಶೋಭಾಯಾತ್ರೆ ಮಂಗಳವಾರ ಸಂಜೆ ಬಿ.ಸಿ.ರೋಡಿನಲ್ಲಿ ವಿಜ್ರಂಭಣೆಯಿಂದ ನಡೆಯಿತು Advertisement Advertisement Advertisement ಶ್ರೀ ಗಣೇಶನ ವಿಗ್ರಹಕ್ಕೆ ವಿಸರ್ಜನಾ ಪೂಜೆ ನೆರವೇರಿಸಿ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ವಿವಿಧ ಸಂಘ ಸಂಸ್ಥೆಗಳ ಟ್ಯಾಬ್ಲೋಗಳು, ಹುಲಿ ಕುಣಿತ, ಗೊಂಬೆ ಜುಣಿತ, ಚೆಂಡ ವಾದನ ಶೋಭಾಯಾತ್ರೆಗೆ ಮೆರುಗು ನೀಡಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಿ.ಸಿ.ರೋಡಿನ ರಸ್ತೆ ಇಕ್ಕೆಲ, ಕಟ್ಟಡಗಳಲ್ಲಿ ನಿಂತು ಶೋಭಾಯಾತ್ರೆಯನ್ನು ಕಣ್ತುಂಬಿ ಕೊಂಡರು. ಶೋಭಾಯಾತ್ರೆ ರಕ್ತೇಶ್ವರಿ ದೇವಸ್ಥಾನದ ಬಳಿಯಿಂದ ಹೊರಟು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ, ಕೈಕಂಬದತ್ತ ಸಾಗಿತು. Advertisement
ಬಂಟ್ವಾಳ: ನೇಪಾಲದಲ್ಲಿ ಪಿಸಿಎ ಸ್ಪೋರ್ಟ್ಸ್ ಈವೆಂಟ್ಸ್ ಮ್ಯಾನೇಜ್ಮೆಂಟ್ ವತಿಯಿಂದ ನಡೆದ ಇಂಡೋ-ನೇಪಾಲ್ ಇಂಟರ್ನ್ಯಾಷನಲ್ ಇನ್ವಿಟೇಶನಲ್ ಮೆನ್ ಆ್ಯಂಡ್ ವುಮೆನ್ ಸ್ಪೋರ್ಟ್ಸ್ ಚಾಂಪಿಯನ್ಶಿಪ್ನ ತ್ರೋಬಾಲ್ ಪಂದ್ಯಾಟದಲ್ಲಿ ಭಾರತ ಚಾಂಪಿಯನ್ ಪ್ರಶಸ್ತಿ ಪಡೆದಿದ್ದು, ತಂಡದಲ್ಲಿ ಭಾಗವಹಿಸಿದ್ದ ಬಂಟ್ವಾಳ ಚಂಡ್ತಿಮಾರಿನ ಸುಪ್ರಿಯಾ ಎಸ್.ಪಿ. ಅವರು ಬೆಸ್ಟ್ ಪ್ಲೇಯರ್ ಪ್ರಶಸ್ತಿ ಪಡೆದಿದ್ದಾರೆ. ಅವರು ಮಡಂತ್ಯಾರು ಸೇಕ್ರೆಟ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಜತೆಗೆ ಪುರುಷರ ತಂಡವನ್ನು ಚಂಡ್ತಿಮಾರಿನ ಪ್ರಜ್ವಲ್ ಎಸ್.ಪಿ, ರಕ್ಷಿತ್ ಆರ್. ಅವರು ಪ್ರತಿನಿಧಿಸಿದ್ದರು. Advertisement Advertisement Advertisement Advertisement
ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ ಸಜೀಪಮೂಡ ಗ್ರಾಮದ ಸುಭಾಷ್ ನಗರದಲ್ಲಿರುವ ಶ್ರೀ ಗುರು ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆಯಿತು. Advertisement ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ ಸಜೀಪಮುನ್ನೂರು ಮೂರ್ತೆದಾರರ ಸಹಕಾರಿ ಸಂಘ ಬ್ಯಾಂಕಿಂಗ್ ವ್ಯವಹಾರ ಮಾತ್ರವಲ್ಲಸೆ ಮಾತ್ರವಲ್ಲದೆ ಸಮಾಜದದ ದೀನರಿಗೆ, ಹಿಂದುಳಿದ ವರ್ಗದವರಿಗೆ ನೆರವಾಗುವ ಮೂಲಕ ಮಾದರಿ ಸಹಕಾರಿ ಸಂಘವಾಗಿ ಗುರುತಿಸಿಕೊಂಡಿದೆ ಎಂದರು. ಪೋಷಕರುಮಕ್ಕಳಿಗೆ ಸಂಪತ್ತು ಮಾಡಿಡುವ ಬದಲು ಮಕ್ಕಳನ್ನೇ ಸಂಪತ್ತನ್ನಾಗಿ ಮಾಡಬೇಕು, ಮಕ್ಕಳ ಬಗ್ಗೆ ಪೋಷಕರು ಸದಾ ನಿಗಾ ವಹಿಸಬೇಕು ಎಂದರು. ಪೋಷಕರು ಕಷ್ಟ ಪಟ್ಟು ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಾರೆ. ಉತ್ತಮ ವಿದ್ಯಾಭ್ಯಾಸ ಪಡೆದು ಒಳ್ಳೆಯ ನಾಗರಿಕರಾಗಿ ತಂದೆ ತಾಯಿಯ ಕಣ್ಣೀರೊರೆಸುವ ಕೆಲಸವನ್ನು ಮಕ್ಕಳು ಮಾಡಬೇಕು, ಸಜೀಪಮುನ್ನೂರು ಮೂರ್ತೆದಾರರ ಸಹಕಾರಿ ಸಂಘ ತನ್ನ ಲಾಭದ ಒಂದು ಅಂಶವನ್ನು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವಾಗಿ ನೀಡುತ್ತಿದ್ದಾರೆ. ಇದನ್ನು ಸದುಪಯೋಗ ಪಡಿಸಿಕೊಂಡು…
ಬಂಟ್ವಾಳ: ಲೊರೆಟ್ಟೊ ಪದವಿನಲ್ಲಿರುವ ಲೊರೆಟ್ಟೊ ಮಾತಾ ಚರ್ಚಿನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವಾದ (ಮೋಂತಿ ಫೆಸ್ತ್) ಭಾನುವಾರ ತೆನೆಹಬ್ಬ ವನ್ನು ಸಂಭ್ರಮದಿಂದ ಆಚರಿಸಲಾಯಿತು. ಚರ್ಚ್ ಧರ್ಮಗುರುಗಳಾದ ವಂದನೀಯ ಫ್ರಾನ್ಸಿಸ್ ಕ್ರಾಸ್ತ, ಲೋರೆಟ್ಟೋ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಂದನೀಯ ಜೇಸನ್ ಮೋನಿಸ್ ಪ್ರಧಾನ ಧರ್ಮಗುರುಗಳಾಗಿ ವಂದನೀಯ ಗ್ಲ್ಯಾಡ್ವಿನ್ ಫೆರ್ನಾಂಡಿಸ್ ಹಾಗೂ ಗುಜರಾತ್ ಧರ್ಮ ಪ್ರಾಂತ್ಯದಲ್ಲಿ ಸೇವೆ ನೀಡುತ್ತಿರುವ ವಂದನೀಯ ಜೇಮ್ಸ್ ವಾಸ್, ವಂದನೀಯ ಜೆರಾಲ್ಡ್ ಪೀಟರ್ ಲೋಬೊ ಬಲಿಪೂಜೆಯನ್ನು ಅರ್ಪಿಸಿದರು. Advertisement Advertisement ಪ್ರಧಾನ ಧರ್ಮಗುರುಗಳು ದೇವರ ವಾಕ್ಯದ ಸಂದೇಶದಲ್ಲಿ ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ತ್ಯಾಗಮಯ ಜೀವನದ ಬಗ್ಗೆ ಪ್ರವಚನ ನೀಡಿದರು. ಪೂಜೆಯಲ್ಲಿ ಮಕ್ಕಳು, ಭಕ್ತಾದಿಗಳು ಭಕ್ತಿ-ಶ್ರದ್ಧೆಯಿಂದ ಪಾಲ್ಗೊಂಡರು. ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿಯಿಂದ ಪಾಲ್ಗೊಂಡರು.ಕಳೆದ ೯ ದಿನಗಳಿಂದ ನಡೆದ ಮಾತೆ ಮರಿಯಮ್ಮನವರ ನೋವೆನಾ ಪ್ರಾರ್ಥನೆಗೆ ಮಕ್ಕಳು ಹೂಗಳನ್ನು ಅರ್ಪಿಸಿದರು. Advertisement ಸಂಭ್ರಮಕ್ಕೆ ಸಹಕರಿಸಿದ ಎಲ್ಲರಿಗೂ ಭತ್ತದ ತೆನೆಯನ್ನು ನೀಡಿ ಗೌರವಿಸಲಾಯಿತು. ಬಲಿ ಪೂಜೆ ಬಳಿಕ…
ಬಂಟ್ವಾಳ : ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲೊಂದಾದ ಬಂಟ್ಚಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ.ವು (ಪಿಎಲ್ ಡಿ ಬ್ಯಾಂಕ್)ಪ್ರಸಕ್ತ ಸಾಲಿನಲ್ಲಿ 1.05 ಕೋ.ರೂ. ಲಾಭಗಳಿಸಿದ್ದು, ಶೆ.11% ಡಿವಿಡೆಂಡ್ನ್ನು ಸದಸ್ಯರಿಗೆ ಹಂಚಲು ನಿರ್ಧರಿಸಲಾಗಿದೆ ಎಂದು ಬಿ.ಸಿ.ರೋಡಿನ ಯುವ ನ್ಯಾಯವಾದಿ, ಬ್ಯಾಂಕಿನ ಅಧ್ಯಕ್ಷ ಅರುಣ್ ರೋಶನ್ ಡಿಸೋಜ ತಿಳಿಸಿದ್ದಾರೆ.ಬಿ.ಸಿ.ರೋಡಿನಲ್ಲಿರುವ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು,2020 ಫೆ.ತಿಂಗಳಲ್ಲಿ ನಮ್ಮ ಆಡಳಿತ ಮಂಡಳಿ ಅಧಿಕಾರ ಸ್ವೀಕರಿಸಿದಾಗ ನಷ್ಟದಲ್ಲಿದ್ದ ಬ್ಯಾಂಕ್ ಪ್ರಸ್ತುತ ನಿರ್ದೇಶಕರು,ಎಲ್ಲಾ ಸದಸ್ಯರು ಹಾಗೂ ಸಿಬ್ಬಂದಿಗಳ ಸಹಕಾರದಿಂದ ಎಲ್ಲಾ ನಷ್ಟವನ್ನು ಭರಿಸಿ 2023-24ನೇ ಸಾಲಿನಲ್ಲಿ ಬ್ಯಾಂಕ್1.05 ಕೋ.ರೂ ಲಾಭವನ್ನು ಗಳಿಸಿದ್ದಲ್ಲದೆ ಇದೇ ಮೊದಲಿಗೆ ಸರ್ವಕಾಲಿಕ ದಾಖಲೆಯ ಪ್ರಮಾಣದಲ್ಲಿ ಸದಸ್ಯರಿಗೆ ಶೇ.11 ಡಿವಿಡೆಂಡ್ ಹಂಚಲು ಆಡಳಿತ ಮಂಡಳಿ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಸೆ.14 ರಂದು ನಡೆಯುವ ಬ್ಯಾಂಕಿನ ಮಹಾಸಭೆಯಂದು ಇದನ್ನು ಘೋಷಿಸಲಾಗುವುದು ಎಂದರು. Advertisement Advertisement ತಾಲೂಕಿನ 84 ಗ್ರಾಮಗಳ ವ್ಯಾಪ್ತಿಯ…
ಬಂಟ್ವಾಳ: ತಾಲೂಕಿನ ಕಾವಳಮೂಡೂರು ಗ್ರಾಮದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆವರಣಗೋಡೆ ಕುಸಿದು ಬಿದ್ದಿರುವ ಹಿನ್ನಲೆಯ್ಲಲಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಶುಕ್ರವಾರ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಧಾರ್ಮಿಕ ಪರಿಷತ್ ಜಿಲ್ಲಾ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಕಾವಳ ಪಡೂರು ಪಂಚಾಯತಿ ಸದಸ್ಯ ವೀರೇಂದ್ರ ಅಮೀನ್, ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಸದಸ್ಯ ಕರುಣೇಂದ್ರ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರವೀಣ್, ವಿಜಯ ಉಪಸ್ಥಿತರಿದ್ದರು. Advertisement Advertisement Advertisement —








