Author: admin
ಬಂಟ್ವಾಳ: ಗೃಹಪಯೋಗಿ ವಸ್ತುಗಳ ಮಾರಾಟ ಮಳಿಗೆ ಆರ್. ಎಸ್. ಫರ್ನಿಚರ್ ಆಂಡ್ ಮಾರ್ಕೆಂಟಿಂಗ್ ಬಂಟ್ವಾಳ ಪೇಟೆಯ ಕಾಲೇಜು ರಸ್ತೆಯಲ್ಲಿರುವ ನವದುರ್ಗಾ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. Advertisement ಕಟ್ಟಡದ ಮಾಲಕರಾದ ಬಾಮಿ ಶ್ರೀನಿವಾಸ ಶೆಣೈ ಹಾಗೂ ಶಾಂತೇರಿ ಶ್ರೀನಿವಾಸ ಶೆಣೈ ದೀಪ ಪ್ರಜ್ವಲಿಸಿ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಸೌತಡ್ಕ ಸ್ಟೀಲ್ಸ್ ಆಂಡ್ ಫರ್ನಿಚರ್ಸ್ ನ ಮಾಲಕರಾದ ನಾಗೇಶ್ ಸಾಲ್ಯಾನ್ ಹಾಗೂ ಪಲ್ಲವಿ ನಾಗೇಶ್ ಈ ಸಂದರ್ಭ ಉಪಸ್ಥಿತರಿದ್ದು ಶುಭ ಹಾರೈಸಿದರು.ಹಲವು ವರ್ಷಗಳಿಂದ ಒಂದೇ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದ ರಾಜೇಶ್ ಹಾಗೂ ಮಹಮ್ಮದ್ ರಶೀದ್ ತಮ್ಮ ಸ್ವಂತ ಉದ್ಯಮವನ್ನು ಸ್ಥಾಪಿಸುವ ಯೋಜನೆ ರೂಪಿಸಿದ್ದರು. ಅಂತೆಯೆ ಇದೀಗ ತಮ್ಮ ಕನಸಿನ ಆರ್. ಎಸ್. ಫರ್ನಿಚರ್ ಅಂಡ್ ಮಾರ್ಕೆಟಿಂಗ್ ಸಂಸ್ಥೆಯನ್ನು ಸ್ಥಾಪಿಸಿ ಹೊಸ ಉದ್ಯಮಕ್ಕೆ ಚಾಲನೆ ನೀಡಿದ್ದಾರೆ. ಇಲ್ಲಿ ಕಪಾಟು, ಡೈನಿಂಗ್ ಟೇಬಲ್, ಚೆಯರ್, ಟೀಪಾಯಿ, ಬೆಡ್ ಸೇರಿದಂತೆ ಎಲ್ಲಾ ಬಗೆಯ ಗೃಹಪಯೋಗಿ ವಸ್ತುಗಳು ಲಭ್ಯವಿದೆ. ಇವರ ಹಲವು ವರ್ಷಗಳ ಅನುಭವದಿಂದ ಗ್ರಾಹಕರಿಗೆ ಉತ್ತಮ ಸೇವೆ ಲಭ್ಯವಾಗಲಿದೆ. ಉದ್ಘಾಟನಾ…
ಬಂಟ್ವಾಳ ತಾಲೂಕಿನಾದ್ಯಂತ ಜನಪ್ರಿಯತೆಯನ್ನು ಪಡೆದುಕೊಂಡಿರುವ ಗೃಹಪಯೋಗಿ ವಸ್ತುಗಳ ಬೃಹತ್ ಮಾರಾಟ ಮಳಿಗೆ ಭದ್ರಾ ಹೋಂ ಅಪ್ಲೈಯೆನ್ಸಸ್ ಪ್ರಥಮ ಶಾಖೆ ಬಂಟ್ವಾಳ ತಾಲೂಕಿನ ಕೇಂದ್ರ ಸ್ಥಾನವಾಗಿರುವ ಬಿ.ಸಿ.ರೋಡಿನಲ್ಲಿ ಗುರುವಾರ ಶುಭಾರಂಭಗೊಂಡಿತು.ಬಿ.ಸಿ.ರೋಡಿನ ಸೋಮಾಯಜಿ ಹೌಸ್ ನಲ್ಲಿ ಸಂಸ್ಥೆಯ ಮೊದಲ ಶಾಖೆಯನ್ನು ಭದ್ರಾ ಸಮೂಹ ಸಂಸ್ಥೆಗಳ ಪ್ರವರ್ತಕ ಮಂಜುನಾಥ ಆಚಾರ್ಯ ಅವರ ಮಾತೃಶ್ರೀ ಆಶಾಲತಾ ಬಾಯಿ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಮಂಗಳೂರು ವೀರ ವೆಂಕಟೇಶ ದೇವಸ್ಥಾನದ ತಂತ್ರಿಗಳಾದ ಪಂಡಿತ್ ಕಾಶಿನಾಥ ಆಚಾರ್ಯ, ಭದ್ರಾ ಹೋಂ ಅಪ್ಲಾಯನ್ಸೆಸ್ ನ ಮಾಲಕಿಮೇಘ ಆಚಾರ್ಯ, ಭದ್ರಾ ಸಮೂಹ ಸಂಸ್ಥೆಗಳ ಪ್ರವರ್ತಕ ಮಂಜುನಾಥ ಆಚಾರ್ಯ, ಮದ್ವ ಆಚಾರ್ಯಮಾಲ್ಸಿ ಆಚಾರ್ಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಜನಪ್ರತಿನಿಧಿಗಳು, ಗಣ್ಯರು, ಗ್ರಾಹಕರು ಭೇಟಿ ನೀಡಿ ಶುಭಹಾರೈಸಿದರು. ನೂತನ ಶಾಖೆಯ ಪ್ರಥಮ ಗ್ರಾಹಕ ಸಿದ್ದಿಕ್ ಗೂಡಿನ ಬಳಿಯವರನ್ನು ಗೌರವಿಸಲಾಯಿತು. ಬಂಟ್ವಾಳ ಬಸ್ತಿಪಡ್ಪುವಿನಲ್ಲಿ ಅಗ್ನಿಶಾಮಕ ಠಾಣೆಯ ಮುಂಭಾಗ ಭಧ್ರಾ ಹೋಂ ಅಪ್ಲೈಯನ್ಸ್ ಪ್ರಧಾನ ಕಚೇರಿ ಹಾಗೂ ಶೋರೂಂ ಕಾರ್ಯ ನಿರ್ವಹಿಸುತ್ತಿದ್ದು ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವ ಮೂಲಕ…
ಬಂಟ್ವಾಳ: ಕ್ಷಯ ರೋಗಿಗಳ ಆರೋಗ್ಯ ದೃಷ್ಟಿಯಿಂದ ಪ್ರತಿ ತಿಂಗಳು ಆಹಾರದ ಕಿಟ್ ವಿತರಿಸುತ್ತಿರುವ ಸೇವಾಂಜಲಿ ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಮೂರ್ತಿ ಹೇಳಿದರು. Advertisement ಕ್ಷಯ ಮುಕ್ತ ಭಾರತ ನಿರ್ಮಾಣ ಕಾರ್ಯಕ್ರಮದಂಗವಾಗಿ ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ವತಿಯಿಂದ ನಡೆದ ಕ್ಷಯರೋಗಿಗಳಿಗೆ ಆಹಾರ ದವಸಧಾನ್ಯ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕ್ಷಯರೋಗದ ಜಾಗೃತಿಯ ಬಗ್ಗೆ ಹಾಗೂ ರೋಗ ನಿವಾರಣೆ ಮಾಡುವ ದೃಷ್ಟಿಯಿಂದ ಸೇವಾಂಜಲಿ ಕೇಂದ್ರ ಸರಕಾರದ ಜೊತೆ ಕೈ ಜೋಡಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ. ಕ್ಷಯ ರೋಗಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. Advertisement Advertisement ತುಂಬೆ ಯಾದವ ಸುವರ್ಣ ಮಾತನಾಡಿ ರೋಗಿಗಳಿಗೆ ಔಷಧಿ, ಆಹಾರದ ಜೊತೆಗೆ ಪ್ರೀತಿಯ ವಾತವರಣ ಇದ್ದಾಗ ಶೀಘ್ರ ರೋಗ ಗುಣಪಡಿಸಲು ಸಾಧ್ಯವಿದೆ. ಅಂತಹ ಸೇವಾ ಕಾರ್ಯವನ್ನು ಸೇವಾಂಜಲಿ ಸಂಸ್ಥೆ ಮಾಡುತ್ತಿದೆ ಎಂದರು.ಪುದು ಗ್ರಾ.ಪಂ. ಮಾಜಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ,…
ಬಂಟ್ವಾಳ: ಮಕ್ಕಳನ್ನು ದೇಶದ ಉತ್ತಮ ಪ್ರಜೆಯನ್ನಾಗಿ ರೂಪಿಸುವಲ್ಲಿ ಶಿಕ್ಷಕ ವೃಂದದ ನಿಷ್ಠೆ ಮತ್ತು ಪಾತ್ರ ಮಹತ್ತರವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು. Advertisement ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನೋತ್ಸವ ನೆನಪಿನಲ್ಲಿ ಬಂಟವಾಳದ ಬಂಟರ ಭವನದಲ್ಲಿ ಗುರುವಾರ ನಡೆದ ಜಿಲ್ಲಾಡಳಿತ ಮತ್ತು ದ.ಕ.ಜಿ.ಪಂ., ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಬಂಟ್ವಾಳ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇದರ ಆಶ್ರಯದಲ್ಲಿ ದ.ಕ.ಜಿಲ್ಲಾ ಮತ್ತು ಬಂಟ್ವಾಳ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ – 2024ನ್ನು ಉದ್ಘಾಟಿಸಿ ಅವರು ಮಾತನಾಡಿದರು. Advertisement ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಪುಟ್ಟ ಮಕ್ಕಳಿಗೆ ಬಣ್ಣ ಹಚ್ಚಿ ಕಾಯಿಸುವುದು ಸರಿಯಲ್ಲ, ಮಕ್ಕಳ ಪ್ರತಿಭೆಯನ್ನು ನೋಡಲು ಪೋಷಕರು, ಗ್ರಾಮಸ್ಥರು ಆಗಮಿಸಿರುತ್ತಾರೆ. ಜನಪ್ರತಿನಿಧಿಗಳು, ಗಣ್ಯರಿಗಾಗಿ ಸಣ್ಣ ಮಕ್ಕಳನ್ನು ಕಾಯಿಸದೆ ಶಿಕ್ಷಕರು ಕಾರ್ಯಕ್ರಮ ನಡೆಸಬೇಕು, ಈ ಬಗ್ಗೆ ಸುತ್ತೋಲೆ ಹೊರಡಿಸುವಂತೆ ಶಾಸಕ ರಾಜೇಶ್ ನಾಯ್ಕ್ ಅಧಿಕಾರಿಗಳಿಗೆ ಸೂಚಿಸಿದರು. ನಗರ…
ಬಂಟ್ವಾಳ: ಕಲಾ ಸಂಕುಲ ಸಂಸ್ಥೆ (ರಿ.) ರಾಯಚೂರು ಇವರ ವತಿಯಿಂದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ರಾಯಚೂರು ನಗರದ ರಂಗಮಂದಿರದಲ್ಲಿ ಸೆ. 8 ನಡೆಯಲಿದ್ದು ಶಿಕ್ಷಕ ರತ್ನ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಯ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಆಯ್ಕೆಯಾಗಿದ್ದಾರೆ. Advertisement Advertisement ಶಾಲಾ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪಠ್ಯೇತರ ಚಟುವಟಿಕೆಗಳು ಹಾಗೂ ಶಾಲಾ ಭೌತಿಕ ಅಭಿವೃದ್ಧಿಗೆ ತೊಡಗಿಸಿಕೊಂಡು ಸಮುದಾಯದ ಜೊತೆಗೆ ಉತ್ತಮ ಬಾಂಧವ್ಯ ಹೊಂದಿರುವುದನ್ನು ಗುರುತಿಸಿ ರಾಜ್ಯಮಟ್ಟದ “ಶಿಕ್ಷಕರತ್ನ” ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ, ಸಣ್ಣ ನೀರಾವರಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹಾಗೂ ರಾಯಚೂರು ಸಂಸದ ಜಿ.ಕುಮಾರ್ ನಾಯಕ್ ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕಲಾ ಸಂಕುಲ ಸಂಸ್ಥೆಯ ಅಧ್ಯಕ್ಷೆ ರೇಖಾ ಬಡಿಗೇರ್ ಪ್ರಕಟಣೆಯಲ್ಲಿ…
ಬಂಟ್ವಾಳ: ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನೋತ್ಸವ ನೆನೆಪಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಬಂಟ್ವಾಳ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ 2024 ಸೆ.5 ರಂದು ಬೆಳಿಗ್ಗೆ 10 ರಿಂದ ಬಂಟವಾಳದ ಬಂಟರ ಭವನದಲ್ಲಿ ನಡೆಯಲಿದೆ. Advertisement Advertisement ರಾಜ್ಯ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸುವರು, ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಲಿದ್ದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಎಸ್. ಬಂಗಾರಪ್ಪ ಗೌರವ ಉಪಸ್ಥಿತರಿರುವರು.ಗಣ್ಯ ಅತಿಥಿಗಳಾಗಿ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ವಿವಿಧ ಅಕಾಡೆಮಿ, ನಿಗಮಗಳ ಅಧ್ಯಕ್ಷರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು ಭಾಗವಹಿಸುವರು. Advertisement ಬೆಳಿಗ್ಗೆ 9 ರಿಂದ ಬಂಟ್ವಾಳ ತಾಲೂಕಿನ ವಿವಿಧ ವಿದ್ಯಾಸಂಸ್ಥೆಗಳ ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ, ಬಂಟ್ವಾಳ ತಾಲೂಕು ನಿವೃತ್ತ ಶಿಕ್ಷಕ, ಶಿಕ್ಷಕೇತರ ನೌಕರರಿಗೆ ಸನ್ಮಾನ, ಕನ್ನಡ ಮಾಧ್ಯಮದಲ್ಲಿ…
ಬಂಟ್ವಾಳ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ವಿಶ್ವ ಹಿಂದೂ ಪರಿಷದ್ ಸ್ಥಾಪನ ದಿನದ ಷಷ್ಠಿ ಪೂರ್ತಿ ಕಾರ್ಯಕ್ರಮದ ಅಂಗವಾಗಿ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಪುದು ಗ್ರಾಮದ ಕಡೆಗೋಳಿ ನಾಣ್ಯದ ಗದ್ದೆಯಲ್ಲಿ ನಡೆಯಿತು. Advertisement Advertisement Advertisement ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬಂಟ್ವಾಳ ಪ್ರಖಂಡ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷ ಪ್ರಸಾದ್ ಕುಮಾರ್ ವಿಶ್ವ ಹಿಂದೂ ಪರಿಷದ್ ನ ಕಾರ್ಯಚಟುವಟಿಕೆಯ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ, ಬಜರಂಗದಳದ ಜಿಲ್ಲಾ ಸಂಯೋಜಕ್ ಭರತ್ ಕುಮ್ಡೇಲ್, ಭಾ.ಜ.ಪ.ಜಿಲ್ಲಾ ವಿಶೇಷ ಅಹ್ವಾನಿತರಾದ ಜನಾರ್ಧನ ಅರ್ಕುಳ, ಶ್ರೀಧರ ಹೊಳ್ಳ, ಗಣೇಶ್ ಕಾಮಾಜೆ, ಭುವನೇಶ್ ಪಚ್ಚಿನಡ್ಕ, ಸಂದೀಪ್ ಆಚಾರ್ಯ ಬಿ.ಸಿ ರೋಡು, ರುಕ್ಮಯ ನಲಿಕೆ, ವಿಶ್ವನಾಥ ಕೆಂಪುಗುಡ್ಡೆ, ಧನರಾಜ್ ಶೆಟ್ಟಿ ಫರಂಗಿಪೇಟೆ, ಸೋಮನಾಥ ಕುಮ್ಡೇಲ್, ವೆಂಕಪ್ಪ ಗುರಿಕಾರ ಕುಮ್ಡೇಲ್, ಪ್ರಖಂಡ ಸಂಯೋಜಕ್ ಶಿವಪ್ರಸಾದ್ ತುಂಬೆ ಉಪಸ್ಥಿತರಿದ್ದರು.…
ಬಂಟ್ವಾಳ: ಬಿ.ಸಿ.ರೋಡಿನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬಿ.ಮೂಡದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. Advertisement Advertisement ಇವರಲ್ಲಿ ಮೂವರು ಪ್ರಥಮ, ಒಬ್ಬರು ದ್ವಿತೀಯ ಹಾಗೂ ಮೂವರು ತೃತೀಯ ಬಹುಮಾನ ಪಡೆದಿದ್ದಾರೆ. 4ನೇ ತರಗತಿಯ ವಿಹಾನ್ ಛದ್ಮವೇಷದಲ್ಲಿ ಪ್ರಥಮ, 4ನೇ ತರಗತಿಯ ಯಜ್ಞಶ್ರೀ ಇಂಗ್ಲೀಷ್ ಕಂಠಪಾಠದಲ್ಲಿ ಪ್ರಥಮ, 2ನೇ ತರಗತಿಯ ಸಮರ್ಥ ಅಭಿನಯಗೀತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. 3ನೇ ತರಗತಿಯ ನಮಸ್ಯಾ ಚಿತ್ರಕಲೆಯಲ್ಲಿ ದ್ವಿತೀಯ,6ನೇ ತರಗತಿಯ ಶಿವರಾಜ್ ಆಶುಭಾಷಣದಲ್ಲಿ ತೃತೀಯ, 7ನೇ ತರಗತಿಯ ಕೃತೇಶ್ ಚಿತ್ರಕಲೆಯಲ್ಲಿ ತೃತೀಯ ಹಾಗೂ7ನೇ ತರಗತಿಯ ಬಿನೀತ್ ಕವನವಾಚನದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. Advertisement
ಬಂಟ್ವಾಳ: ಬ್ಯಾರಿ ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಅಪೂರ್ವ ಸೇವೆಗೈದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2023ರ ಗೌರವ ಪ್ರಶಸ್ತಿಗೆ ಪಾತ್ರರಾದ ಅಶ್ರಫ್ ಅಪೋಲೋ ಅವರನ್ನು ಕಲ್ಲಡ್ಕದ ಮುರಬೈಲು ಯೂನಿಯನ್ ವತಿಯಿಂದ ಕಲ್ಲಡ್ಕದ ಮ್ಯೂಸಿಯಂನಲ್ಲಿ ಶುಕ್ರವಾರ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭ ಮುರಬೈಲು ಯೂನಿಯನ್ ನ ಎಲ್ಲಾ ಸದಸ್ಯರು ಹಾಗೂ ಸ್ಥಳೀಯ ಹಿರಿಯರು ಉಪಸ್ಥಿತರಿದ್ದರು.
ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ 2023-24ನೇ ಸಾಲಿನಲ್ಲಿ 982.54 ಕೋಟಿ ವ್ಯವಹಾರ ನಡೆಸಿ 5.71 ಕೋಟಿ ರೂಪಾಯಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ತಿಳಿಸಿದರು.ಸಂಘದ ಪ್ರಧಾನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿ ಡಾ. ಅಮ್ಮೆಂಬಳ ಬಾಳಪ್ಪ ಹಾಗೂ ಬಿ. ಹೂವಯ್ಯ ಮೂಲ್ಯ ಅವರಿಂದ ಆರಂಭಗೊಂಡ ಸಮಾಜ ಸೇವಾ ಸಹಕಾರಿ ಸಂಘದಲ್ಲಿ ಪ್ರಸ್ತುತ 8660 ಸದಸ್ಯರಿದ್ದು, 7.87 ಕೋಟಿ ಪಾಲು ಬಂಡವಾಳ, 214.26 ಕೋಟಿ ಠೇವಣಾತಿ, 5.68 ಕೋಟಿ ನಿಧಿಗಳು, 59.82 ಕೋಟಿ ವಿನಿಯೋಗಗಳು, 192.78 ಕೋಟಿ ಸಾಲ ಹೊಂದಿದ್ದು ಶೇ. 95.02 ವಸೂಲಾತಿಯಾಗಿದೆ. ಸಂಘದ ದುಡಿಯವ ಬಂಡವಾಳ 239.90 ಕೋಟಿಯಾಗಿದ್ದು ಆಡಿಟ್ ವರ್ಗಿಕರಣದಲ್ಲಿ ಎ ತರಗತಿಯನ್ನು ಪಡೆದು ಕೊಂಡಿದೆ ಎಂದರು. ಬಂಟ್ವಾಳ, ಮಂಗಳೂರು, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕುಗಳಿಗೆ ಸೀಮಿತವಾಗಿದ್ದ ಸಂಘದ ಕಾರ್ಯಾವ್ಯಾಪ್ತಿಯನ್ನು ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ವಿಸ್ತರಿಸಿದೆ. ಮುಂದಿನ ದಿನಗಳಲ್ಲಿ ಇನ್ನೂ 4…








