Author: admin

ಬಂಟ್ವಾಳ: ಕೆನರಾ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಬಬಿತ ಗಣೇಶ್ ಕುಲಾಲ್ ಇವರಿಗೆ ಮಾಹೆ ( Manipal Academy of Higher Education) ಯಿಂದ ಡಾಕ್ಟರೇಟ್ ಪದವಿ ದೊರಕಿದೆ. ಇವರು ಡಾ. ಶ್ವೇತಾ ವಿನ್ಸೆಂಟ್ , ಸಮೀನಾ ಪಟಾಣ್, ಮತ್ತು ಗಣೇಶ್ ಭಟ್ ರವರ ಮಾರ್ಗದರ್ಶನದಲ್ಲಿ ‘Machine Learning based Landslide based Susceptibility Mapping for the portion of Western Ghats in the state of Karnataka, India’ ಎಂಬ ವಿಷಯದಲ್ಲಿ ಪ್ರಬಂಧ ಮಂಡಿಸಿರುತ್ತಾರೆ. ಇವರಿಗೆ ಕಳೆದ ವರ್ಷ ಸೆಪ್ಟೆಂಬರ್ 27-28ರಂದು ದುಬೈ ನಲ್ಲಿ ನಡೆದ ಕಾನ್ಫರೆನ್ಸ್ ನಲ್ಲಿ ‘ಬೆಸ್ಟ್ ಕಾನ್ಫರೆನ್ಸ್ ಪೇಪರ್ ‘ಅವಾರ್ಡ್’ ಕೂಡ ಬಂದಿರುತ್ತದೆ. ಇವರು ವಾಮಂಜೂರಿನ ದಿ. ಗೋಪಾಲ್ ಬಂಗೇರ ಮತ್ತು ಲಕ್ಷ್ಮಿಯವರ ಪುತ್ರಿ ಮತ್ತು ಮೊಡಂಕಾಪುವಿನ ಗಣೇಶ್ ಕೃಷ್ಣಪ್ಪ ಕುಲಾಲ್ ಅವರ ಪತ್ನಿ.

Read More

ಬಂಟ್ವಾಳ: ಫರಂಗಿಪೇಟೆ ಕಲ್ಲತಡಮೆ ಕೆರೆಬಿತ್ತಿಲು ಶ್ರೀ ರಕ್ತೇಶ್ವರೀ ಜುಮಾದಿ ಬಂಟ, ಮೈಸಂದಾಯ ದೈವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಶಿಲಾಮಯ ಆಲಯದಲ್ಲಿ ಶ್ರೀ ದೈವಗಳ ಪುನಃ ಪ್ರತಿಷ್ಠೆ, ಸಾನಿಧ್ಯ ಕಲಶಾಭಿಷೇಕ ಹಾಗೂ ನೇಮ ಮೇ 7 ಹಾಗೂ 8ರಂದು ನಡೆಯಲಿದೆ. ಕ್ಷೇತ್ರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕ್ಷೇತ್ರದ ಪ್ರಮುಖರಾದ ಸಂದೀಪ್ ನಾಯಕ್ ಸುಜೀರ್ ಅವರು, ಮೇ 7ರಂದು ಸಂಜೆ 6.30ರಿಂದ ಪ್ರಸಾದ ಪರಿಗ್ರಹ, ಸಾಮೂಹಿಕ ಪ್ರಾರ್ಥನೆ, ವಾಸ್ತು ಹೋಮ, ವಾಸ್ತು ಪೂಜೆ, ಮಂಚ ಬಿಂಬಗಳ ಶುದ್ದಿ ಸಹಿತ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ ಎಂದರು. ಮೇ 8ರಂದು ಮುಂಜಾನೆ 6ರಿಂದ ಪುಣ್ಯಾಹ, ಗಣಪತಿ ಹೋಮ, ಕಲಶ ಪೂಜೆ, ಕಲಶಾಧಿವಾಸ, ಹೋಮಗಳು, ರಕ್ತೇಶ್ವರೀ ಸನ್ನಿಧಾನದಲ್ಲಿ ಕಲಶಪೂಜೆ, ಅಧಿವಾಸ ಪೂಜೆ, ಪ್ರತಿಷ್ಠಾ ಹೋಮ ನಡೆಯಲಿದೆ. 8.40ರ ಮಿಥುನ ಲಗ್ನದಲ್ಲಿ ಶ್ರೀ ರಕ್ತೇಶ್ವರೀ ಪ್ರತಿಷ್ಠೆ, ಪ್ರತಿಷ್ಠಾ ಕಲಶಾಭಿಷೇಕ, ಪ್ರತಿಷ್ಠಾ ಪೂಜೆ, ಸಾನಿಧ್ಯ ಕಲಶಾಭಿಷೇಕ, ಪರ್ವಪೂಜೆ ಹಾಗೂ ಮಹಾಪೂಜೆ, 9.55ಕ್ಕೆ ಜುಮಾದಿ ಬಂಟ ಹಾಗೂ ಮೈಸಂದಾಯ ದೈವಗಳ ಪ್ರತಿಷ್ಠೆ, ಪ್ರತಿಷ್ಠಾ ಕಲಶಾಭಿಷೇಕ…

Read More

ಬಂಟ್ವಾಳ: ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಬೆಂಗಳೂರು ಇವರು ಕೊಡಮಾಡುವ ಪ್ರತಿಷ್ಠಿತ ಆರ್ಯಭಟ ಅಂತರಾಷ್ಟ್ರೀಯ – 2026 ಪ್ರಶಸ್ತಿಗೆ ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ) ಪುತ್ತೂರು ಇದರ ನೃತ್ಯಗುರು ಮತ್ತು ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಅಪರೇಟಿವ್ ಸೊಸೈಟಿ ನಿ. ಬಿ.ಸಿ.ರೋಡ್ ಇದರ ಅಧ್ಯಕ್ಷೆ ವಿದುಷಿ ರೋಹಿಣಿ ಉದಯ್ ಆಯ್ಕೆಯಾಗಿರುತ್ತಾರೆ. ಭರತನಾಟ್ಯ ಕ್ಷೇತ್ರದ ಸಾಧನೆ ಹಾಗೂ ಕಲಾ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ . ಮೇ 23, 2026 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಕೊಡಲಾಗುವುದು ಎಂದು ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ನಾಟ್ಯ ಕ್ಷೇತ್ರದ ಅಪ್ರತಿಮ ಸಾಧಕಿ: ವಿದುಷಿ ಶ್ರೀಮತಿ ರೋಹಿಣಿ ಉದಯ್ ಇವರು ಕಳೆದ 22 ವರ್ಷಗಳಿಂದ ಭರತ ನೃತ್ಯ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಕಡೆಗಳಲ್ಲಿ ನೃತ್ಯ ತರಗತಿಗಳನ್ನು ನಡೆಸುತ್ತಿದ್ದು ( ಪುತ್ತೂರು, ಪುರುಷರಕಟ್ಟೆ,…

Read More

ಮಂಗಳೂರು: ಉಳ್ಳಾಲ ತಾಲೂಕಿನ ಸಂಪಿಗೆದಡಿ‌ ಬಾಳಿಕೆಯಲ್ಲಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಬಳಿಯಿರುವ ಸಂಪಿಗೆದಡಿ ಮನೆತನಕ್ಕೊಳಪಟ್ಟ ಶ್ರೀ ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನದಲ್ಲಿ ಶ್ರೀ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ಕೋಲ ಮಂಗಳವಾರ ರಾತ್ರಿ ನಡೆಯಿತು. ಆರಂಭದಲ್ಲಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ರಂಗ ಪೂಜೆ ಜರುಗಿತು. ಈ ಸಂದರ್ಭ ಅಪಾರ ಸಂಖ್ಯೆಯಲ್ಲಿ ಭಕ್ತರು ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ದೈವಸ್ಥಾನದಲ್ಲಿ ಶ್ರೀ ಕಲ್ಲುರ್ಟಿ ಹಾಗೂ ಪಂಜುರ್ಲಿ ವಾರ್ಷಿಕ ದೈವಗಳಿಗೆ ನೇಮೋತ್ಸವ ಜರುಗಿತು. ಈ ಸಂದರ್ಭ ಸಂಪಿಗೆದಡಿ ಮನೆತನದ ರಾಜೀವ ಆಳ್ವ ಸಂಪಿಗೆದಡಿ, ರಾಜೇಶ್ ಬಂಗ, ವಿವೇಕ್ ಬಂಗ, ಭಾಸ್ಕರ್ ರೈ, ದೇವರಾಜ ರೈ, ನಂದರಾಮ ರೈ ಬಡಗಬೆಳ್ಳೂರು, ಮನೋಹರ ಶೆಟ್ಟಿ ನಡಿಕಂಬಳ ಗುತ್ತು, ಗುತ್ತು ಮನೆತನದ ಪ್ರಮುಖರಾದ ವಿಖ್ಯಾತ್ ಬಳ್ಳಾಲ್ ಪರಿಯಾಳ ಗುತ್ತು, ಮೋಹನದಾಸ ರೈ ಡೆಬ್ಬೆಲಿಗುತ್ತು, ಮಹಾಬಲ ಹೆಗ್ಡೆ ಡೆಬ್ಬೆಲಿ, ರತ್ನಾಕರ ಕಾವ ಕುತ್ತಾರುಗುತ್ತು, ಜಯಶಾಂತ ಬೋಳ್ಯಾರು ಗುತ್ತು, ರವಿರಾಜ ರೈ ಎಲಿಯಾರ್ ಮತ್ತಿತರರು ಉಪಸ್ಥಿತರಿದ್ದರು. ಅಪಾರ…

Read More

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೋರ್ವರು ಪ್ರಸವ ವೇದನೆ ಕಾಣಿಸಿಕೊಂಡು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಬಿ ಸಿ ರೋಡು ರೈಲ್ವೇ ನಿಲ್ದಾಣದಲ್ಲಿ ಭಾನುವಾರ ರಾತ್ರಿ ವೇಳೆ ಸಂಭವಿಸಿದೆ. ಮೈಸೂರು ಮೂಲದ ನಿವಾಸಿ ಪೊನ್ನಮ್ಮ ಅವರೇ ರೈಲು ಗಾಡಿಯ ಬೋಗಿಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ ಎಂದು ತಿಳಿದು ಬಂದಿದೆ. ಮಂಗಳೂರು-ಬೆಂಗಳೂರು ನಡುವೆ ಸಂಚಾರದ ರೈಲಿನಲ್ಲಿ ಈ ಘಟನೆ ಸಂಭವಿಸಿದೆ. ಮಂಗಳೂರಿನಲ್ಲಿ ರೈಲು ಹತ್ತಿ ಪ್ರಯಾಣಿಸುತ್ತಿದ್ದ ತುಂಬು ಗರ್ಭಿಣಿ ಪೊನ್ನಮ್ಮಳಿಗೆ ಹಠಾತ್ ಆಗಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಅದೇ ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಮಹಿಳೆಯರು ಅವರನ್ನು ಆರಂಭದಲ್ಲಿ ಉಪಚರಿಸಿ, ಬಳಿಕ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಪಂದಿಸಿದ ರೈಲ್ವೆ ಇಲಾಖೆ ಬಿ.ಸಿ.ರೋಡಿನ ನಿಲ್ದಾಣದಲ್ಲಿ ಗಾಡಿಯನ್ನು ನಿಲ್ಲಿಸಿ, ಸ್ಥಳೀಯ ಸೋಮಯಾಜಿ ಆಸ್ಪತ್ರೆಯ ವೈದ್ಯರ ತಂಡವನ್ನು ಸ್ಥಳಕ್ಕೆ ಕರೆಸಿಕೊಂಡು ರೈಲು ಬೋಗಿಯೊಳಗೆ ಹೆರಿಗೆಗಾಗಿ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ವೈದ್ಯರ ತಂಡ ಯಶಸ್ವಿಯಾಗಿ ಮಹಿಳೆಗೆ ಹೆರಿಗೆ ಮಾಡಿಸಿದೆ. ಬಳಿಕ ತಕ್ಷಣ ಅಂಬ್ಯುಲೆನ್ಸ್ ಕರೆಸಿ…

Read More

ಬಂಟ್ವಾಳ: ಕುಕ್ಕಿಪಾಡಿ ಗ್ರಾಮದ ಕೋರ್ಯಾರು ಶ್ರೀ ದುರ್ಗಾ ಮಹಮ್ಮಾಯೀ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಗಳು ಎಪ್ರಿಲ್ 26 ರಿಂದ ಮೇ 2 ರ ತನಕ ಜರುಗಲಿದೆ ಎಂದು ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಉಮೇಶ್ ಗೌಡ ಮಂಚಕಲ್ಲು ತಿಳಿಸಿದರು. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದರು . ಎ‌.26 ರಂದು ಆದಿತ್ಯವಾರ 3 ಗಂಟೆಗೆ ಸಿದ್ದಕಟ್ಟೆ ನಲ್ಲೂರಂಗಡಿ ಬಸದಿಯಿಂದ ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಸಂಗಬೆಟ್ಟು ವೀರಭದ್ರ ದೇವಸ್ಥಾನದ ಪ್ರಧಾನ ಅರ್ಚಕ ಪ್ರಭಾಕರ ಐಗಳ್ ಮತ್ತು ಸಿದ್ದಕಟ್ಟೆಯ ವೈದ್ಯ ಡಾI ಪ್ರಭಾಚಂದ್ರ ಜೈನ್ ಚಾಲನೆ ನೀಡಲಿದ್ದಾರೆ‌. ಗಣ್ಯರಾದ ಕಿರಣ್ ಕುಮಾರ್ ಮಂಜಿಲ,ಜಗತ್ಪಾಲ ಶೆಟ್ಟಿ ಉಮನೊಟ್ಟು , ಮಹಾವೀರ ಜೈನ್, ನಿತ್ಯಾನಂದ ಪೂಜಾರಿ ಕೆಂತಲೆ, ಸಂತೋಷ್ ಕುಮಾರ್ ರಾಯಿಬೆಟ್ಟು , ಪ್ರಭಾಕರ ಆಚಾರ್ಯ ,ಸದಾನಂದ ಕುಲಾಲ್ , ಮುಂತಾದವರು ಭಾಗವಹಿಸುವರು . ಸಂಜೆ ಗಂಟೆ 6 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ…

Read More

ಬಂಟ್ವಾಳ:  ಸ್ವಾತಂತ್ರ್ಯ ಹೋರಾಟಗಾರ ಸಮಾಜರತ್ನ ಡಾ| ಅಮ್ಮೆಂಬಳ ಬಾಳಪ್ಪರವರ ನೇತೃತ್ವದಲ್ಲಿ ಹಾಗೂ ಸಹಕಾರಿ ಧುರಿಣ ಬಿ. ಹೂವಯ್ಯ ಮೂಲ್ಯರವರ ಸಾರಥ್ಯದಲ್ಲಿ ಸ್ಥಾಪಿಸಲ್ಪಟ್ಟ ಸಮಾಜ ಸೇವಾ ಸಹಕಾರಿ ಸಂಘವು 5.28ಕೋಟಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ  ಸುರೇಶ್‌ಕುಲಾಲ್ ತಿಳಿಸಿದ್ದಾರೆ. ಬಂಟ್ವಾಳದಲ್ಲಿ ಸ್ವಂತ ಕಟ್ಟಡದಲ್ಲಿ ಕೇಂದ್ರಕಛೇರಿ ಹೊಂದಿರುವ ಸಮಾಜ ಸೇವಾ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ ರೂ. 1432.13 ಕೋಟಿ ವ್ಯವಹಾರ ನಡೆಸಿದ್ದು ಆರ್ಥಿಕ ವರ್ಷ 2025-26ರ ಅಂತ್ಯಕ್ಕೆ ಸಂಘದಲ್ಲಿ 9319ಎ’ ತರಗತಿ, 5921 ‘ಬಿ’ ತರಗತಿ ಸದಸ್ಯರಿದ್ದು ರೂ. 8.28ಕೋಟಿ ಪಾಲು ಬಂಡವಾಳ ಹೊಂದಿರುತ್ತದೆ. 22.64 ಕೋಟಿರೂ. ನಿಧಿಗಳು 62.88 ಕೋಟಿ ರೂ. ವಿನಿಯೋಗಗಳು, 264.08ಕೋಟಿ ರೂ. ಠೇವಣಾತಿಗಳು ಇದ್ದು 248.99 ಕೋಟಿ ರೂ. ಹೊರ ಬಾಕಿ ಸಾಲಗಳು ಇರುತ್ತದೆ. ಸಂಘದ ದುಡಿಯುವ ಬಂಡವಾಳ ರೂ. 297.71ಕೋಟಿ ಆಗಿರುತ್ತದೆ. ಆಡಿಟ್ ವರ್ಗೀಕರಣದಲ್ಲಿ ಸತತವಾಗಿ ಎ ತರಗತಿ ಹೊಂದಿರುವ ಸಂಘವು ಸಂಪೂರ್ಣ ಗಣಕಿಕೃತ ಸಿಬಿಎಸ್ ತಂತ್ರಾಂಶದೊಂದಿಗೆ ಇ-ಕಲೆಕ್ಷನ್ ತಂತ್ರಾಜ್ಞಾನವನ್ನು ಆಳವಡಿಸಿಕೊಂಡಿರುತ್ತದೆ. ಸಂಘವು…

Read More

ಬಂಟ್ವಾಳ: ಕುಟುಂಬದ ಮನೆ ತಾಯಿ ಬೇರು ಇದ್ದಂತೆ. ದೈವದ ಹೆಸರಿನಲ್ಲಿ ಕುಟುಂಬದ ಬಂಧುಗಳನ್ನು ಸೇರಿಸುವ ಕೆಲಸವನ್ನು ನಮ್ಮ ಹಿರಿಯರು ಮಾಡಿಕೊಂಡು ಬಂದಿದ್ದು ಇದರಿಂದ ಕುಟುಂಬದ ಸದಸ್ಯರನ್ನು ಮುಖತ: ಭೇಟಿಯಾಗಲು ಸಾಧ್ಯವಿದೆ. ಸಂಬಂಧವನ್ನು ಪರಸ್ಪರ ಗಟ್ಟಿಗೊಳಿಸಲು ಸಾಧ್ಯವಿದೆ. ಇಂತಹ ಅವಕಾಶವನ್ನು ಕುಟುಂಬದ ಸದಸ್ಯರು ಬಳಸಿಕೊಳ್ಳಬೇಕು ಎಂದು ಮಂಗಳೂರು ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ವಿಭಾಗ ಮುಖ್ಯಸ್ಥ ಡಾ. ಅರುಣ್ ಉಳ್ಳಾಲ್ ಹೇಳಿದರು. ಅಣ್ಣಪ್ಪ ಪಂಜುರ್ಲಿ, ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನ ಕಲ್ಕಾರು ಇದರ ಕುಟುಂಬ ದೈವ ದೇವರುಗಳ ವಾರ್ಷಿಕ ನೇಮೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ನಡೆದ ಧಾರ್ಮಿಕ ಸಭಾಕಾರ್ಯಕ್ರಮದಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಕುಟುಂಬದ ಮನೆಯಲ್ಲಿ ಜೀವ ಜೀವಂತಿಕೆ ಮುಖಮುಖಿಯಾಗಬೇಕು. ಆ ಕಾರಣಕ್ಕಾಗಿ ಪ್ರತಿಯೊಬ್ಬರು ಕುಟುಂಬದ ಮನೆಗೆ ಬರಬೇಕು. ಹಿರಿಯರಿಂದ ಬಂದ ಕುಟುಂಬದ ಪರಂಪರೆಯನ್ನು ಕಿರಿಯರಿಗೆ ತಿಳಿಸಿಕೊಡುವ ಕಾರ್ಯ ಆಗಬೇಕು ಎಂದರು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ದೀಪ ಪ್ರಜ್ವಲಿಸಿ ಮಾತನಾಡಿ ತನಗೂ ಕಲ್ಕಾರ್ ಕುಟುಂಬಕ್ಕೂ ಇರುವ ಸಂಬಂಧದ ಬಗ್ಗೆ ತಿಳಿಸಿದರು.…

Read More

ಬಂಟ್ವಾಳ: ಇಲ್ಲಿನ ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್ ಇಲ್ಲಿಗೆ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ.ಅವರ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು. ರೋಟರಿ ಸಭಾಭವನ ಗ್ರೀನ್ ಸಿಟಿ ಲೊರೆಟ್ಟೊ ಹಿಲ್ಸ್ ನಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಅವರು ಮಾತನಾಡಿ ಅದ್ಭುತವಾದ ಸಾರ್ವಜನಿಕ ಉಪಯೋಗದ ಸೇವಾ ಕಾರ್ಯಕ್ರಮವನ್ನು ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ಮಾಡಿದೆ ಎಂದರು. ಕ್ಲಬ್ ಮಾಡುವ ಸೇವಾ ಯೋಜನೆಗಳ ಎಲ್ಲಾ ಡೇಟಾಗಳು ನಮ್ಮಲ್ಲಿ ಅಗತ್ಯವಾಗಿ ಬೇಕಾಗಿದ್ದು ಅದಕ್ಕಾಗಿ ಸ್ವಂತ ವೆಬ್ ಸೈಟ್ ಆರಂಭಿಸುವಂತೆ ತಿಳಿಸಿದರು. ಇದರಿಂದ ನಾವೇನು ಮಾಡುತ್ತಿದ್ದೇವೆ ಎನ್ನುವುದು ಜನರಿಗೆ ತಿಳಿಯಲು ಸಾಧ್ಯವಿದೆ ಎಂದರು. ರೋಟರಿ ಜಿಲ್ಲಾ ಮಾಜಿ ಗವರ್ನರ್ ಎನ್.ಪ್ರಕಾಶ್ ಕಾರಂತ್ ಮಾತನಾಡಿ ರೋಟರಿ ಸಂಸ್ಥೆಯ ಟಿಆರ್ ಎಫ್ ಗೆ ನೀಡುವ ದೇಣಿಗೆ ಸಮಾಜದ ಅರ್ಹ ವ್ಯಕ್ತಿಗಳಿಗೆ ತಲುಪುತ್ತದೆ ಎಂದರು. ಸಹಾಯಕ ಗವರ್ನರ್ ಸಿ.ಎ. ಉಮೇಶ್ ರಾವ್ ಮಿಜಾರ್ ಮಾತನಾಡಿ ರೋಟರಿ ಸಂಸ್ಥೆಯ ಟಿಆರ್ ಎಫ್ ಗೆ ದೇಣಿಗೆ ನೀಡುವಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಇಂತಹ ಸಂಸ್ಥೆಯ ಸದಸ್ಯರಾಗಿರುವುದು…

Read More

ಬಂಟ್ವಾಳ: ಮುಂಬೈ ಉದ್ಯಮಿ ಸುನೀಲ್ ರಾಜು ಕೋಟ್ಯಾನ್ ಹಾಗೂ ಅವರ ಸಹಧರ್ಮಿಣಿ ದೇವಕಿ ಸುನೀಲ್ ಅವರ 26 ನೇ ವಿವಾಹ ವಾರ್ಷಿಕೋತ್ಸವವನ್ನು ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿರುವ ಭಾರತ್ ಸೇವಾಶ್ರಮದಲ್ಲಿ ಸರಳವಾಗಿ ಆಚರಿಸಲಾಯಿತು. ಸೇವಾಶ್ರಮದಲ್ಲಿರುವ ಶಿರ್ಡಿ ಸಾಯಿ ಮಂದಿರದಲ್ಲಿ ವಿಶೇಷ ಪೋಜೆ ಸಲ್ಲಿಸಿ, ಬಳಿಕ ಅಲ್ಲಿನ ಗೋಶಾಲೆಯಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ ಸೇವಾಶ್ರಮದಲ್ಲಿರುವ ಅನಾಥ ವೃದ್ದರು, ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಈ ಸಂದರ್ಭ ಸೇವಾಶ್ರಮದ ಕಾರ್ಯದರ್ಶಿ ಈಶ್ವರ್ ಭಟ್ ಅವರು ಜೊತೆಗಿದ್ದು ಆಶ್ರಮ ನಿರ್ಮಾಣ ಹಾಗೂ ನಡೆದು ಬಂದ ಹಾದಿಯ ಬಗ್ಗೆ ತಿಳಿಸಿಕೊಟ್ಟರು. ಸೇವಾಶ್ರಮದ ಮೂರು ಆಶ್ರಮಕ್ಕೂ ಭೇಟಿ ನೀಡಿ ಅಲ್ಲಿನ ವೃದ್ಧರು, ನಿರ್ಗತಿಕರು, ಮಕ್ಕಳೊಂದಿಗೆ ಬೆರೆತು ಸಹಭೋಜನ ನಡೆಸಿದರು. ವಿವಾಹ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ದಂಪತಿಗೆ ಹಿರಿಯರು ಮನಪೂರ್ವಕವಾಗಿ ಶುಭ ಹಾರೈಸಿದರು. ಈ ಮೂಲಕ ದಂಪತಿಗಳು ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿ ಮಾದರಿಯಾದರು. ಈ ಸಂದರ್ಭ ಪ್ರಮುಖರಾದ ತಿಮ್ಮಪ್ಪ ಕುಲಾಲ್ ಮಣ್ಣಗುಡ್ಡೆ, ಸುರೇಶ್ ಕುಲಾಲ್ ಮಂಗಳೂರು, ಮುಂಬೈ…

Read More