Author: admin
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಲ್ಲಡ್ಕ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಸರಕಾರಿ ಪ್ರೌಢ ಶಾಲೆ ಗೋಳ್ತಮಜಲು ಇದರ ಸಂಯುಕ್ತ ಆಶ್ರಯದಲ್ಲಿ ಗೋಳ್ತಮಜಲುವಿನಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬುಧವಾರ ನಡೆಯಿತು. ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ವಲಯ ತರಬೇತುದಾರ, ಪತ್ರಕರ್ತ ಸಂದೀಪ್ ಸಾಲ್ಯಾನ್ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದು. ಹದಿಹರೆಯದ ವಯಸ್ಸಿನಲ್ಲಿ ಅನೇಕ ಆಕರ್ಷಣೆಗಳು ನಮ್ಮನ್ನು ಸೆಳೆಯುತ್ತದೆ. ಕೆಟ್ಟ ಕುತೂಹಲಕ್ಕೆ ಒಳಗಾಗಿ ದುಶ್ಚಟಗಳಿಗೆ ದಾಸರಾಗಿ ಜೀವನವನ್ನು ಹಾಳು ಮಾಡಿಕೊಳ್ಳದಂತೆ ಎಚ್ಚರ ವಹಿಸಿ ಎಂದು ತಿಳಿಸಿದರು. ಮಾದಕ ವ್ಯಸನಗಳಿಗೆ ದಾಸರಾಗುವುದರಿಂದ ವೈಯಕ್ತಿಕ ಆರೋಗ್ಯ ಹದಗೆಡುವುದರ ಜೊತೆಗೆ ಸಮಾಜದ ಸ್ವಾಸ್ಥ್ಯವೂ ಹದಗೆಡುತ್ತದೆ. ನಮ್ಮ ಆರೋಗ್ಯದ ಜೊತೆಗೆ ಸಮಾಜದ ಸ್ವಾಸ್ಯವನ್ನು ಕಾಪಾಡುವ ಮಹತ್ತರವಾದ ಜವಬ್ದಾರಿ ನಮ್ಮೆಲ್ಲರ ಮೇಲಿದೆ. ಕ್ಷಣಿಕ ಸುಖಕ್ಕಾಗಿ ಮಾದಕ…
ಬಂಟ್ವಾಳ: ಶ್ರೀ ದುರ್ಗಾ ಫ್ರೆಂಡ್ಸ್ ಇವರ ವತಿಯಿಂದ ಕುರಿಯಾಳ ದುರ್ಗಾನಗರ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 17ನೇ ವರ್ಷದ ಮೊಸರು ಕುಡಿಕೆ ಉತ್ಸವವು ವಿಜ್ರಂಭಣೆಯಿಂದ ನಡೆಯಿತು. ಬೆಳ್ಳಿಗ್ಗೆ ಕ್ರೀಡಾಕೂಟ ಉದ್ಘಾಟನೆ ಸಮಾರಂಭದಲ್ಲಿ ಶ್ರೀ ಓಂಕಾರೇಶ್ವರಿ ದೇವಿ ಭಜನಾ ಮಂದಿರದ ಅರ್ಚಕ ಹೊನ್ನಪ್ಪ ಪೂಜಾರಿ, ಅಮ್ಟಾಡಿ ಗ್ರಾಮ ಪಂಚಾಯತಿ ಸದಸ್ಯೆ ಯಶೋಧ ಮೇಗಿನ ಕುರಿಯಾಳ, ಸದಸ್ಯರಾದ ರೂಪೇಶ್ ಕುಟೀಲ, ಅಶ್ವಿನಿ ಶೆಟ್ಟಿ ನೋಡಾಜೆ, ಕುರಿಯಾಳ ಬಿಲ್ಲವ ಸಂಘ ಅಧ್ಯಕ್ಷ ವಿಶ್ವನಾಥ ಪೂಜಾರಿ ಗಾಣದಕೊಟ್ಯ, ಶ್ರೀ ಓಂಕಾರೇಶ್ವರಿ ದೇವಿ ಭಜನಾ ಮಂದಿರದ ಅಧ್ಯಕ್ಷ ಶ್ರೀನಿಧಿ ವಿ ಬಂಗೇರ, ಓಂಕಾರ ಸೇವಾ ಬಳಗ ಅಧ್ಯಕ್ಷ ಸಂತೋಷ್ ಸುವರ್ಣ, ಶ್ರೀ ದುರ್ಗಾ ಫ್ರೆಂಡ್ಸ್ ಅಧ್ಯಕ್ಷ ಸಂದೇಶ್ ಪೂಜಾರಿ ಭಾಗವಹಿಸಿದ್ದರು. ಬಳಿಕ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀರಾಮ ವಿದ್ಯಾಕೇಂದ್ರದ ನಿವೃತ್ತ ಶಿಕ್ಷಕ ರಾಧಾಕೃಷ್ಣ ಅಡ್ಯಂತಾಯ, ಉದ್ಯಮಿ ಜಗದೀಶ್ ನೆತ್ತರಕೆರೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ,…
ಬಂಟ್ವಾಳ: ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿರುವ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಮಾ.24ರಂದು ಇಲ್ಲಿನ ಬಂಗ್ಲೆ ಮೈದಾನದಲ್ಲಿ ಜರಗಲಿದೆ ಎಂದು ಕ್ಲಬ್ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ತಿಳಿಸಿದ್ದಾರೆ.ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ವಿವರ ನೀಡಿದರು. ಮುಂಬಯಿ ಉದ್ಯಮಿ ಕಕ್ಯಪದವು ನಾರಾಯಣ ಶೆಟ್ಟಿ ಅವರ ಸಾರಥ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಿಂದ ಮದುವೆ ಮಂಟಪದವರೆಗೆ ವೈಭವಪೂರ್ವಕವಾಗಿ ವಧು-ವರರ ದಿಬ್ಬಣ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 11.21ರ ಶುಭ ಮುಹೂರ್ತದಲ್ಲಿ 6 ಜೋಡಿ ವಧು-ವರರಿಗೆ ಸಾಮೂಹಿಕ ವಿವಾಹ ನಡೆಯಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿವಿಧ ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಮಾಡಲಾಗುವುದು ಎಂದು ಅವರು ತಿಳಿಸಿದರು.ನವದೆಹಲಿ ಅನಾರೋಕ್ ಸಂಸ್ಥೆಯ ವೈಸ್ಚೆಯರ್ಮೇನ್ ಸಂತೋಷ್ ಕುಮಾರ್ ಜೆ.ಪಿ.…
ಬಂಟ್ವಾಳ: ಬಿ.ಸಿ.ರೋಡಿನ ನಗರ ಭಾಗದಲ್ಲಿರುವ ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ವರ್ಷಾವಧಿ ಉತ್ಸವ ವಿಜ್ರಂಭಣೆಯಿಂದ ನಡೆಯಿತು. ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಂತೆ ಮಾ. 16ರಂದು ಉತ್ಸವ ಆರಂಭಗೊಂಡಿದ್ದು ಕೊನೆಯ ದಿನವಾದ ಸೋಮವಾರ ಬೆಳಿಗ್ಗೆ ಗಣಹೋಮ, ಪ್ರಧಾನ ಹೋಮ, ಕಲಶಾಭಿಷೇಕ, ನಾಗಾರಾಧನೆ, ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ಸಂಜೆ ಸಪ್ತಶತಿ ಪಾರಾಯಣ ಸಹಿತ ವಿಶೇಷ ದುರ್ಗಾ ನಮಸ್ಕಾರ ಪೂಜೆ, ರಂಗಪೂಜೆ, ಅಲಂಕಾರ ಪೂಜೆ ಹಾಗೂ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು.ಈ ಸಂದರ್ಭ ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಬಿ. ವಿಶ್ವನಾಥ, ಬೂಡ ಅಧ್ಯಕ್ಷ ಬಿ. ಬೇಬಿ ಕುಂದರ್, ಶ್ರೀ ಅನ್ನಪೂರ್ಣೆಶ್ವರೀ ನಾಗದೇವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೆಶ್ ಪಚ್ಚಿನಡ್ಕ, ಶ್ರೀ ಚಂಡಿಕಾ ಪರಮೇಶ್ವರೀ ದೇವಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಲೋಕನಾಥ ಶೆಟ್ಟಿ , ದೇವಸ್ಥಾನದ ಕಾರ್ಯಕಾರಿ ಸಮಿತಿ ಉಪಾಧ್ಯಕ್ಷ ಬಿ. ಸಂಜೀವ ಪೂಜಾರಿ, ಕಾರ್ಯದರ್ಶಿ ಎನ್. ಶಿವಶಂಕರ್, ಜೊತೆ ಕಾರ್ಯದರ್ಶಿ ರಮೇಶ್ ಸಾಲ್ಯಾನ್, ಕೋಶಾಧಿಕಾರಿ ಬಿ.…
ಬಂಟ್ವಾಳ: ಮುಂಬರುವ ಲೋಕಸಭಾ ಚುನಾವಣೆ ನಿಕ್ಷ್ಪಕ್ಷಪಾತವಾಗಿ, ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ನಡೆಯಬೇಕೆನ್ನುವ ಉದ್ದೇಶದಿಂದ ಮಾ.16ರಿಂದ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದ್ದು ವಿವಿಧ ತಂಡಗಳನ್ನು ರಚಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಡಾ. ಉದಯ ಶೆಟ್ಟಿ ತಿಳಿಸಿದರು.ಭಾನುವಾರ ಬಿ.ಸಿ.ರೋಡಿನ ಆಡಳಿತ ಸೌಧದ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದರು. ಮಾ. 28 ಚುನಾವಣೆ ನೋಟಿಸು ಹೊರಡಿಸುವುದು, ಎ.4 ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ, ಎ.೫ ನಾಮ ಪತ್ರ ಪರಿಶೀಲನೆಯ ದಿನಾಂಕ, ಎ.8 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ, ಎ.26 ಚುನಾವಣೆ ನಡೆಯುವ ದಿನಾಂಕ, ಜೂ.4 ಮತ ಎಣಿಕೆ ದಿನಾಂಕ, ಜೂ.6 ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳುವ ದಿನಾಂಕ ಎಂದು ತಿಳಿಸಿದರು. ಮಾ. 28 ರಿಂದ ಎ.8ರವರೆಗೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ದ.ಕ. ಜಿಲ್ಲಾ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಮುಲ್ಲೈ ಮುಹಿಲನ್ ಅವರಿಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಚುನಾವಣೆಗೆ ಸಂಬಮಧಿಸಿದಂತೆ ಡಿಯುಡಿಸಿ ಯೋಜನಾ ನಿರ್ದೇಶಕ ಡಾ. ಉದಯ ಶೆಟ್ಟಿ…
ಬಂಟ್ವಾಳ: ಇಲ್ಲಿನ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ಬಳಿಕ ಭಾನುವಾರ ಅವಭೃತೋತ್ಸವ ವಿಜ್ರಂಭಣೆಯಿಂದ ನಡೆಯಿತು.ಬೆಳಿಗ್ಗೆ ದ್ವಾರಪೂಜೆ, ಚೂರ್ಣೊತ್ಸವ ನಡೆದು ಮಧ್ಯಾಹ್ನ ಅವಭೃತೋತ್ಸವ ಹಾಗೂ ನದೀಸ್ನಾನ ನಡೆಯಿತು. ಸಂಜೆ ಧ್ವಜಾವರೋಹಣ, ಯಜ್ಞವಿಸರ್ಜನೆ, ಮಹಾಪೂಜೆ, ಸಂಪ್ರೋಕ್ಷಣೆ, ರಾತ್ರಿ ಮಹಾ ನೈವೇದ್ಯ, ಮಂಗಳಾರತಿ, ಸಮಾರಾಧನೆ ನಡೆದು ಸಣ್ಣ ರಥೋತ್ಸವ, ವಸಂತಪೂಜೆ, ಕಲಶದಾನ, ಅಂಕುರಪ್ರಸಾದ ವಿತರಣೆ ನಡೆಯಿತು.
ಬಂಟ್ವಾಳ: ತಾಲೂಕಿನ ಎಲಿಯನಡುಗೋಡು ಗ್ರಾಮದ ಹೊಕ್ಕಾಡಿಗೋಳಿಯಲ್ಲಿ ಶನಿವಾರ ನಡೆದ ಎರಡು ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಸಮಾಪನಗೊಂಡಿದೆ. ವೀರ ವಿಕ್ರಮ ಕಂಬಳ ಸಮಿತಿ ವತಿಯಿಂದ ನಡೆದ ಪ್ರಥಮ ವರ್ಷದ ಹೊಕ್ಕಾಡಿಗೋಳಿ ಕೋಡಂಗೆ ವೀರ – ವಿಕ್ರಮ” ಜೋಡುಕರೆ ಕಂಬಳ ಕೂಟದ ಫಲಿತಾಂಶ: ಕೂಟದಲ್ಲಿ ಕನೆಹಲಗೆ: 1 ಜೊತೆ, ಅಡ್ಡಹಲಗೆ: ೩ ಜೊತೆ, ಹಗ್ಗ ಹಿರಿಯ: ೬ ಜೊತೆ , ನೇಗಿಲು ಹಿರಿಯ: 11 ಜೊತೆ, ಹಗ್ಗ ಕಿರಿಯ: 12 ಜೊತೆ, ನೇಗಿಲು ಕಿರಿಯ: 26 ಜೊತೆ ನೇಗಿಲು ಸಬ್ ಜೂನಿಯರ್: 39 ಒಟ್ಟು 99 ಜೊತೆ ಕೋಣಗಳು ಭಾಗಿಯಾಗಿದ್ದವು.ಕನೆಹಲಗೆಯಲ್ಲಿ ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವಹಲಗೆ ಮುಟ್ಟಿದವರು: ಬೈಂದೂರು ಬಾಸ್ಕರ ದೇವಾಡಿಗಅಡ್ಡ ಹಲಗೆಯಲ್ಲಿ ಪ್ರಥಮ ಹೊಸ್ಮಾರ್ ಸೂರ್ಯಶ್ರೀ ಜ್ಯೋತಿ ಸುರೇಶ್ ಕುಮಾರ್ ಶೆಟ್ಟಿಹಲಗೆ ಮುಟ್ಟಿದವರು ತೆಕ್ಕಟ್ಟೆ ಸುಧೀರ್ ದೇವಾಡಿಗದ್ವಿತೀಯ ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿಹಲಗೆ ಮುಟ್ಟಿದವರು ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗಹಗ್ಗ ಹಿರಿಯ ವಿಭಾಗದಲ್ಲಿಪ್ರಥಮ ಮೂಡಬಿದ್ರಿ ಕರಿಂಜೆ ವಿನು ವಿಶ್ವನಾಥ ಶೆಟ್ಟಿ…
ಬಂಟ್ವಾಳ: ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ ವತಿಯಿಂದ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.24ರಂದು ನಡೆಯಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಪೂರ್ವಭಾವಿಯಾಗಿ ವಿವಾಹದ ಸಾಮೂಹಿಕ ನಿಶ್ಚಿತಾರ್ಥ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆಮೈದಾನದ ಸಭಾಂಗಣದಲ್ಲಿ ರವಿವಾರ ನಡೆಯಿತು.ನಯನಾಡು ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್ನ ಮಾಲಕ ಟಿ.ಹರೀಂದ್ರ ಪೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದುಂದು ವೆಚ್ಚದ ವಿವಾಹಗಳ ಬದಲಾಗಿ ಸಾಮೂಹಿಕ ವಿವಾಹ ಉತ್ತಮ ಕಾರ್ಯವಾಗಿದೆ ಎಂದು ಹೇಳಿದರು. ಮೂರ್ಜೆ ನಾರಾಯಣ ಗುರು ವಸತಿ ಶಾಲೆ ಪ್ರಾಂಶುಪಾಲ ಸಂತೋಷ್ ಸನಿಲ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,ಭಾರತೀಯ ವಿವಾಹ ಪದ್ಧತಿ ಕುಟುಂಬ ಜೀವನದ ಭದ್ರ ಬುನಾದಿಯಾಗಿದೆ. ಇದು ಕುಟುಂಬದ ಹಾಗೂ ಸಮಾಜದ ನೆಮ್ಮದಿಯ ಸುವ್ಯವಸ್ಥೆಯಾಗಿದೆ ಎಂದರು.ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿ, ಬಡ, ಹಿಂದುಳಿದ ವರ್ಗದ ಜನತೆ ಅದ್ಧೂರಿಯ ವಿವಾಹ ನಡೆಸಲು ಅಸಾಧ್ಯವಾದ ಕಾರಣ ಸಾಮೂಹಿಕ ವಿವಾಹದ ಮೂಲಕ ವಿಜೃಂಭಣೆಯಲ್ಲಿ ವಿವಾಹ ಕಾರ್ಯಕ್ರಮ ನಡೆಸಲಾಗುವುದು ಎಂದರು. ಉದ್ಯಮಿ ನಾಗೇಶ್…
ಬಂಟ್ವಾಳ: ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ವಿಸ್ತಾರವಾಗಿ ಬೆಳೆದಿದ್ದು ಸಹಕಾರಿ ಸಂಘಗಳ ಮೂಲಕ ಸಮಾಜದ ಕೆಲಸವನ್ನು ಮಾಡಲು ಸುಲಭ ಸಾಧ್ಯವಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.ಅವರು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ಮಾರ್ನಬೈಲು ಸ್ಥಳಾಂತರಿತ ಶಾಖೆಯನ್ನು ಭಾನುವಾರ ಮಾರ್ನಬೈಲಿನ ಸಿರಿಮುಡಿ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟಿಸಿ ಮಾತನಾಡಿದರು. ಈ ಹಿಂದೆ ಇದ್ದ ಕಚೇರಿಯಿಂದ ಸುಸಜ್ಜಿತವಾದ ಹಾಗೂ ವಿಶಾಲವಾದ ಕಚೇರಿಗೆ ಸ್ಥಳಾಂತರಿಸುವ ಮೂಲಕ ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ನೀಡುವ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಬದ್ದತೆ ಕಾಣಿಸುತ್ತಿದೆ, ಸಹಕಾರಿ ಸಂಘಗಳ ಪೈಕಿ ತನ್ನದೇ ಆದ ಛಾಪನ್ನು ಮೂಡಿಸಿ ಅತ್ಯುತ್ತಮವಾದ ಸಹಕಾರಿ ಸಂಘ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಮಾಜದ ದುರ್ಬಲ ವರ್ಗದವರಿಗೆ ಆರ್ಥಿಕ ಸಹಕಾರ ನೀಡುವ ಉದ್ದೇಶದಿಂದ ಆರಮಭಗೊಂಡ ಈ ಸಂಘ ಇನ್ನಷ್ಟು ಶಾಖೆಗಳನ್ನು ತೆರೆಯುವ ಮೂಲಕ ಅಭಿವೃದ್ಧಿ ಪಥದಲ್ಲಿ ಸಾಗಲಿ ಎಂದು ಶುಭ ಹಾರೈಸಿದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಭದ್ರತಾ ಕೊಠಡಿ…
ಬಂಟ್ವಾಳ: ಸೇವಾಂಜಲಿ ಪ್ರತಿಷ್ಟಾನ ಫರಂಗಿಪೇಟೆ ಇದರ ವತಿಯಿಂದ ಎ.ಜೆ.ಆಸ್ಪತ್ರೆ ಮಂಗಳೂರು ಇವರ ಸಹಕಾರದಲ್ಲಿ 126ನೇ ರಕ್ತದಾನ ಶಿಬಿರ ಭಾನುವಾರ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.ಮಂಗಳೂರಿನ ಜೆಪ್ಪು ಶ್ರೀ ಅಂಬಾಮಹೇಶ್ವರೀ ಭಜನಾ ಮಂದಿರದ ಅಧ್ಯಕ್ಷ ಸೀತರಾಮ ಎ. ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಒಂದೆರಡು ರಕ್ತದಾನ ಶಿಬಿರಗಳನ್ನು ಆಯೋಸಜಿಸುವುದು ಸಾಮಾನ್ಯ . ಆದರೆ ಸೇವಾಂಜಲಿ ಪ್ರತಿಷ್ಠಾನ 126 ಶಿಬಿರಗಳನ್ನು ಸಂಘಟಿಸಿ ರೋಗಿಗಳಿಗೆ ರಕ್ತ ಒದಗಿಸುವ ಕಾರ್ಯ ಮಾಡಿರುವುದು ಅಭಿನಂದನೀಯ ಎಂದರು. ಸೇವಾಂಜಲಿ ಸಂಸ್ಥೆಯ ಕೃಷ್ಣಕುಮಾರ್ ಪೂಂಜ ಹಾಗೂ ಅದರ ಎಲ್ಲಾ ಕಾರ್ಯಕರ್ತರ ಸೇವಾ ಮನೋಭಾವನೆಯಿಂದ ಇಂತಹ ಮಹತ್ಕಾರ್ಯಗಳನ್ನು ನಡೆಸಿಕೊಂಡು ಬರಲು ಸಾಧ್ಯವಿದೆ. ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಕ್ಷಯರೋಗಿಗಳಿಗೆ ಆಹಾರದ ಕಿಟ್ ವಿತರಣೆಯಂತಹ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಸೇವಾಂಜಲಿಯ ಎಲ್ಲಾ ಕಾರ್ಯಗಳಿಗೂ ಸಹಕಾರ ನೀಡುವುದಾಗಿ ತಿಳಿಸಿದರು. ಮೆಸ್ಕಾಂನ ಹಿರಿಯ ಎಂಜಿನಿಯರ್ ದಿನೇಶ್ ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ತುರ್ತ ಸಂದರ್ಭದಲ್ಲಿ ರಕ್ತ ಪಡೆಯಲು ಅನೇಕ ರೋಗಿಗಳು ಪರದಾಡುತ್ತಾರೆ. ಆದರೆ ಸೇವಾಂಜಲಿ ಸಂಸ್ಥೆಯ…








