Author: admin
ಬಂಟ್ವಾಳ: ಇಲ್ಲಿನ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದ ಬ್ರಹ್ಮರಥೋತ್ಸವದ 200 ವರ್ಷಾಚರಣೆಯ ಪ್ರಯುಕ್ತ ದೇವಸ್ಥಾನಕ್ಕೆ ಚಿತ್ತೈಸಿರುವ ಕಾಶೀ ಮಠದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಯವರು ಸೋಮವಾರ ರಾತ್ರಿ ನೇತ್ರಾವತಿ ನದಿ ತೀರದಲ್ಲಿ ಗಂಗಾರತಿ ನೆರವೇರಿಸಿದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಈ ಸಂದರ್ಭ ಉಪಸ್ಥಿರಿದ್ದು ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡರು.
ಚಿತ್ರ:.ಶ್ರೀ ಕ್ಷೇತ್ರ ಕಾರಿಂಜ ಜಾತ್ರೋತ್ಸವದಲ್ಲಿ ಇತಿಹಾಸ ಪ್ರಸಿದ್ಧ ಪಾರ್ವತಿ-ಪರಮೇಶ್ವರ ಭೇಟಿ ನಡೆಯಿತು ಬಂಟ್ವಾಳ : ಇತಿಹಾಸ ಪ್ರಸಿದ್ಧ ಭೂಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ, ಜಾತ್ರೋತ್ಸವ ಪ್ರಯಕ್ತ ವಿಶೇಷ ಕಾರ್ಯಕ್ರಮವಾದ ಶ್ರೀ ಪಾರ್ವತಿ, ಪರಮೇಶ್ವರರ ಭೇಟಿ ನಡೆಯಿತು.ಕ್ಷೇತ್ರದ ತಂತ್ರಿ ವರ್ಕಾಡಿ ಗಣೇಶ ತಂತ್ರಿ ಅವರ ನೇತೃತ್ವದಲ್ಲಿ ಕ್ಷೇತ್ರದ ಅರ್ಚಕರಾದ ಮಿಥುನ್ ರಾಜ್ ನಾವಡ ಮತ್ತು ಜಯಶಂಕರ ಉಪಾಧ್ಯಾಯ ಅವರ ಸಹಕಾರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.ಮಾ.೮ರಂದು ಕಾರಿಂಜೇಶ್ವರ ಸನ್ನಿಧಿಯಲ್ಲಿ ತುಲಾಭಾರ ಸೇವೆ, ಏಕಾದಶ ರುದ್ರಾಭಿಷೇಕ, ರಂಗಪೂಜೆ ನಡೆಯಿತು. ಸಾವಿರಾರು ಭಕ್ತರು ಮಹಾಶಿವರಾತ್ರಿ ಜಾಗರಣೆಯಲ್ಲಿ ಸಂಭ್ರಮದಿಂದ ಪಾಲ್ಗೊಂಡರು. ರಾತ್ರಿ ಯಕ್ಷಗಾನ ಬಯಲಾಟ ನಡೆಯಿತು. ಮಾ.೯ರಂದು ರಾತ್ರಿ ಬಲ್ಲೋಡಿ ಮಾಗಣೆ ಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಆಗಮಿಸಿತು. ಸಂಜೆ ಭರತನಾಟ್ಯ, ಯಕ್ಷರೂಪಕ ನಡೆಯಿತು. ರಾತ್ರಿ ಜಾತ್ರೋತ್ಸವದಲ್ಲಿ ಪ್ರಮುಖ ಆಕರ್ಷಣೆಯಾಗಿರುವ ಪಾರ್ವತಿ-ಪರಮೇಶ್ವರ ದೇವರ ಭೇಟಿ ನಡೆಯಿತು. ಬಳಿಕ ಚಂದ್ರ ಮಂಡಲ ಉತ್ಸವ, ಬೆಳಗ್ಗೆ ಶಯನೋತ್ಸವ…
ಬಂಟ್ವಾಳ: ಕನ್ನಡ ಭವನ ಮತ್ತು ಗ್ರಂಥಾಲಯ (ರಿ )ಕನ್ನಡ ಭವನ ಪ್ರಕಾಶನ ಕಾಸರಗೋಡು ಮತ್ತು ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಕಥಾಬಿಂದು ಪ್ರಕಾಶನ ಮಂಗಳೂರು ಇದರ ವತಿಯಿಂದ ಪಯಸ್ವಿನಿ ಪ್ರಶಸ್ತಿ 2024 ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕನ್ನಡ ಭವನ ಕಾಸರಗೋಡಿನಲ್ಲಿ ಮಾ.10 ರಂದು ಭಾನುವಾರ 10 ಗಂಟೆಗೆ ನಡೆಯಲಿರುವ ಕೇರಳಮತ್ತು ಕರ್ನಾಟಕ ಕನ್ನಡ ಸಂಸ್ಕೃತಿ ಗಡಿನಾಡ ಉತ್ಸವ -2024 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಪ್ರದಾನ ನಡೆಯಲಿದೆ. ಕರ್ನಾಟಕ ಹಾಗೂ ಕೇರಳದ ಗಣ್ಯರಾದ ಪಿ.ವಿ.ಪ್ರದೀಪ ಕುಮಾರ್ , ಹಿರಿಯ ಕವಿಗಳಾದ ವಿ.ಜಿ.ಕುಳಮರ್ವ,ರಾಧಾಕೃಷ್ಣ ಉಳಿಯತಡ್ಕ ಮೊದಲಾದವರ ಉಪಸ್ಥಿತಿಯಲ್ಲಿ ಕವಿಗೋಷ್ಠಿ ಹಾಗೂ ವಿವಿಧ ಕಾರ್ಯ ಕ್ರಮಗಳು ನಡೆಯಲಿವೆ ಎಂದು ಕನ್ನಡ ಭವನ ಅಧ್ಯಕ್ಷ ವಾಮನ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ: ಜನರ ಹಣ ಜನರ ಕೈ ಸೇರಬೇಕು, ರಾಜ್ಯದ ಪ್ರತಿಯೊಬ್ಬರೂ ಕೂಡ ನಾಗರೀಕ ಜೀವನ ನಡೆಸಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯ ಸರಕಾರದ ಬೊಕ್ಕಸ ಖಾಲಿಯಾಗುತ್ತದೆ ಎನ್ನುವ ಟೀಕೆಯ ನಡುವೆಯೂ ಎಲ್ಲಾ ಗ್ಯಾರಂಟಿ ಯೋಜನೆಗಳನನು ಸರಕಾರ ಸಂಪೂರ್ಣವಾಗಿ ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು. ಬಿ.ಸಿ.ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಶನಿವಾರ ಮದ್ಯಾಹ್ನ ನಡೆದ ಬಂಟ್ವಾಳ ತಾಲೂಕು ವ್ಯಾಪ್ತಿಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿ ಪ್ರಮಾಣ ವಚನ ಮಾಡಿದ ದಿನದಂದೆ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ೫ ಗ್ಯಾರಂಟಿಗಳ ಘೋಷಣೆ ಮಾಡಿದರು. ಯುವನಿಧಿ ಯೋಜನೆಯ ಮೂಲಕ ಯುವಕ ಯುವತಿಯರಿಗೆ ಶಕ್ತಿ ತುಂಬುವ ಕಾರ್ಯ ಆಗಿದೆ. ಅನ್ನ ಭಾಗ್ಯ ಯೋಜನೆಯ ಮೂಲಕ ಬಡವರ ಹಸಿವು ನೀಗಿದೆ. ಬಿಪಿಎಲ್ ಖಾತೆಗೆ ೫ ಕೆ.ಜಿ…
ಬಂಟ್ವಾಳ: ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ, ಕೃಷಿಕರು ಹಾಗೂ ಹವ್ಯಾಸಿ ಛಾಯಾಗ್ರಾಹಕಿಯಾಗಿರುವ ರಮ್ಯ ನಿತ್ಯಾನಂದ ಶೆಟ್ಟಿಯವರ ಚೊಚ್ಚಲ ಕೃತಿ ಕಂಬಳಲೋಕ ಭಾಗ-೧ ನ್ನು ಸಿದ್ಧಕಟ್ಟೆ ಶ್ರೀ ಪದ್ಮ ಕ್ಲೀನಿಕ್ನ ಡಾ| ಪ್ರಭಾಚಂದ್ರರು, ಪಿಡಿಒ ಗಣೇಶ್ ಶೆಟ್ಟಿ ಗೋಳಿದೊಟ್ಟು, ಶಿಕ್ಷಕ ರಾಜೇಶ್ರಾವ್ ನೆಲ್ಯಾಡಿ ಹಾಗೂ ಪೊಡುಂಬ ಸರೋಜಿನಿ ಸಂಜೀವ ಶೆಟ್ಟಿಯವರು ಅನಾವರಣ ಮಾಡಿ ಶುಭ ಹಾರೈಸಿದರು. ನಿತ್ಯಾನಂದ ಶೆಟ್ಟಿ ಹಾಗೂ ರಮ್ಯಾ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.
ಬಂಟ್ವಾಳ: ಜಿಲ್ಲೆಯ ಕಾರಣಿಕ ದೈವಸ್ಥಾನ ಸಜೀಪಮೂಡ ಗ್ರಾಮದ ಪಣೋಲಿಬೈಲಿನ ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಈ ತಿಂಗಳ ನಾಲ್ಕು ದಿನ ಅಗೇಲು ಸೇವೆ ಇರುವುದಿಲ್ಲ.ಮಾ.10 ಭಾನುವಾರ ಅಮಾವಾಸ್ಯೆಯ ಪ್ರಯುಕ್ತ ಅಗೇಲು ಸೇವೆ ಇರುವುದಿಲ್ಲ, ಅದೇ ರೀತಿ ಮಾ. 22, 24, 26 ರಂದು ಸಜೀಪ ಮಾಗಣೆ ಪಡ್ಡೆರಮಾಡ ಜಾತ್ರೆಯ” ಪ್ರಯುಕ್ತ ಕ್ಷೇತ್ರದಲ್ಲಿ ಆಗೇಲು ಸೇವೆ ಇರುವುದಿಲ್ಲ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ಬಿ ಮೂಡ ಗ್ರಾಮದ ಬಿ ಸಿ ರೋಡು ಗೂಡಿನಬಳಿಯ ಚಿಕ್ಕಯಮಠ ಎಂಬಲ್ಲಿ ಗುಡ್ಡೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ಜು ಬಂಟ್ವಾಳ ಕಂದಾಯ ಇಲಾಖೆಯ ಕರೆಯಂತೆ ತಕ್ಷಣ ಬಂಟ್ವಾಳಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.ಈ ಸಂದರ್ಭದಲ್ಲಿಅಗ್ನಿ ಶಾಮಕ ದಳ ಬಂಟ್ವಾಳದ ಸಹಾಯಕ ಠಾಣಾಧಿಕಾರಿ ರಾಜೇಶ್ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗಇವರೊಂದಿಗೆ ಬಂಟ್ವಾಳ ಕಂದಾಯ ಇಲಾಖೆಯ ಕರಿಬಸಪ್ಪ ನಾಯಕ್, ಸಿಬ್ಬಂದಿ ಸದಾಶಿವ ಕೈಕಂಬಸಹಕರಿಸಿದರುಹತ್ತಿರದಲ್ಲಿ ಅನೇಕ ಮನೆಗಳಿದ್ದು ಯಾವುದೇ ಆಪಾಯ ಆಗಿರುವುದಿಲ್ಲ.
ಬಂಟ್ವಾಳ: ಗೌಡ ಸಾರಸ್ವತ ಬ್ರಾಹ್ಮಣ ವೃಂದದವರ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಸಹಿತ ಉತ್ಸವಾದಿ ಕಾರ್ಯಕ್ರಮಗಳು ಮಾರ್ಚ್ 12ರಿಂದ 17ರವರೆಗೆ ನಡೆಯಲಿದೆ. ಇದು ಬಂಟ್ವಾಳ ಬ್ರಹ್ಮರಥದ 200ನೇ ವರ್ಷಾಚರಣೆಯೂ ಆಗಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಲಿವೆ ಎಂದು ಶ್ರೀ ದೇವಳದ ಆಡಳಿತ ಮೊತ್ತೇಸರರಾದ ಅಶೋಕ್ ಶೆಣೈ ಹೇಳಿದರು. ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಬುಧವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಕಾರ್ಯಕ್ರಮಗಳಿಗೆ ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಮಾರ್ಚ್ 10ರಂದು ಆಗಮಿಸಿ 17ರವರೆಗೆ ಬಂಟ್ವಾಳದಲ್ಲಿ ಉಪಸ್ಥಿತರಿದ್ದು, ಶ್ರೀಗಳ ಆಜ್ಞಾನುಸಾರ ಕಾರ್ಯಕ್ರಮಗಳು ನಡೆಯಲಿವೆ, ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಎಲ್ಲ ಕಾರ್ಯಕ್ರಮಗಳಲ್ಲಿ ಸಹಭಾಗಿಗಳಾಗಿ ಶ್ರೀಹರಿಗುರುಕೃಪೆಗೆ ಪಾತ್ರರಾಗಬೇಕು ಎಂದವರು ವಿನಂತಿಸಿದರು. ಸಮಾಜ ಬಾಂಧವರಿಂದ ಮಾರ್ಚ್ 10ರಂದು ಶ್ರೀದೇವರಿಗೆ ಮಲ್ಲಿಗೆ ಹೂವಿನಿಂದ ಸಹಸ್ರನಾಮ ಪುಷ್ಪಾಂಜನೆ, ಸಾಯಂಕಾಲ ವಿಶೇಷ ಹೊರೆಕಾಣಿಕೆ, ಸಮಾರಾಧನೆ ನಡೆಯಲಿದೆ. ಅಂದು ಬೆಳಗ್ಗೆ 11.30ಕ್ಕೆ ಶ್ರೀ ಕಾಶೀ ಮಠಾಧೀಶ ಶ್ರೀಮದ್…
ಬಂಟ್ವಾಳ: ಶಂಭೂರಿನ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಕಸವನ್ನು ಹೊತ್ತಿಸುವ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮಾ. ೧ ರಂದು ಶಂಭೂರು ಶಾಲಾ ಆವರಣದಲ್ಲಿ ಘಟನೆ ನಡೆದಿದ್ದು, ಬಳಿಕ ಬಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಇದೀಗ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ರಾಜೇಶ್ ನಾಯ್ಕ್ ಅವರು ಘಟನೆಯ ಬಗ್ಗೆ ಬಾಲಕನಿಂದ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದಲೂ ಮಾಹಿತಿ ಕೇಳಿ ಪಡೆಯುದಾಗಿ ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವೈಯಕ್ತಿಕವಾಗಿ ಧನಸಹಾಯ ಮಾಡಿದಲ್ಲದೆ ಧೈರ್ಯ ತುಂಬಿದ್ದಾರೆ. ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಉಪಸ್ಥಿತರಿದ್ದರು.
ಬಂಟ್ವಾಳ: ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಬಸವ ಶಂಕರ ಅನಾರೋಗ್ಯದಿಂದ ಕೆದ್ದಳಿಕೆಯ ಮನೆಯೊಂದರಲ್ಲಿ ಸೋಮವಾರ ಅಸು ನೀಗಿದೆ.ಬಸವ ಶಂಕರ ಕಳೆದ 14 ವರ್ಷಗಳಿಂದ ಕಾರಿಂಜ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ. ಒಂದು ವರ್ಷ ಪ್ರಾಯದ ಬಸವನನ್ನು ದೇವರಿಗೆ ಹರಕೆ ರೂಪದಲ್ಲಿ ಒಪ್ಪಿಸಲಾಗಿತ್ತು. ಶಿವ ಕ್ಷೇತ್ರವಾದುದರಿಂದ ಶಂಕರ ಎಂದು ನಾಮಕರಣ ಮಾಡಲಾಗಿತ್ತು. ಸೌಮ್ಯ ಸ್ವಭಾವದ ಶಂಕರ ತನ್ನ ಗಾಂಭೀರ್ಯದಿಂದ ಜಾತ್ರೆ ಸಂದರ್ಭದಲ್ಲಿ ಆಕರ್ಷಣೆಯ ಕೇಂದ್ರವಾಗಿದ್ದ. ಜಾತ್ರೆ ಸಮಯದಲ್ಲಿ ಪ್ರತೀವರ್ಷ ಶಂಕರನಿಗೆ ರಾಜ ಪೋಶಾಕನ್ನು ಕಾವಳಕಟ್ಟೆಯ ದಿನೇಶ್ ಟೈಲರ್ ಅವರು ಸಿದ್ಧಪಡಿಸುತ್ತಿದ್ದರು. ಈ ಬಾರಿಯೂ ಹೊಸ ವಸ್ತ್ರ ತಯಾರಾಗಿತ್ತು. ಕೆಲವು ದಿನಗಳ ಹಿಂದೆ ಶಂಕರನನ್ನು ಆರೈಕೆಗಾಗಿ ಕೆದ್ದಳಿಕೆಗೆ ಕೊಂಡೊಯ್ಯಲಾಗಿತ್ತು. ಶಿವರಾತ್ರಿ ಜಾತ್ರೆಗೆ ಕೆಲವೇ ದಿನಗಳಿರುವಾಗ ಶಂಕರ ಮೃತಪಟ್ಟಿದ್ದು ಗ್ರಾಮಸ್ಥರಿಗೆ ದು:ಖವನ್ನುಂಟುಮಾಡಿದೆ. ಬಸವ ಶಂಕರನ ಅಂತಿಮ ಸಂಸ್ಕಾರವನ್ನು ಕೆದ್ದಳಿಕೆಯಲ್ಲಿ ನೆರವೇರಿಸಲಾಯಿತು.








