Author: admin
ಬಂಟ್ವಾಳ: ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಮೂಲಕ ದೀನ ದುರ್ಬಲರಿಗೆ ನೆರವಿನ ಮೂಲಕ ದೊಡ್ಡ ತಪಸ್ಸಿನ ಕಾರ್ಯ ನಡೆಯುತ್ತಿದ್ದು, ಇದು ಸನ್ಯಾಸಿಗಳ ತ್ಯಾಗಕ್ಕಿಂತಲೂ ಮಿಗಿಲಾದ ಸೇವೆಯಾಗಿದೆ. ಇಂತಹ ಸಂಸ್ಥೆಗಳಿಗೆ ನಾವೆಲ್ಲರೂ ದಾನಿಗಳನ್ನು ಕರೆ ತರುವ ಕಾರ್ಯ ಮಾಡಬೇಕಿದೆ. ಕ್ಷಯ ರೋಗಿಗಳಿಗೆ ದೇಹದ ಮೇಲೆ ಔಷಧ ಕೆಲಸ ಮಾಡಬೇಕಾದರೆ ಪೌಷ್ಟಿಕಾಹಾರ ಅಗತ್ಯ ಎಂದು ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಸೇವಾಂಜಲಿ ಪ್ರತಿಷ್ಢಾನದ ವತಿಯಿಂದ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಮಂಗಳವಾರ ನಡೆದ ಆಹಾರ ದವಸ ಧಾನ್ಯದ ಕಿಟ್ ವಿತರಿಸಿ ಅವರು ಆಶೀರ್ವಚನ ನೀಡಿದರು. ಸೇವಾಂಜಲಿ ಪ್ರತಿಷ್ಠಾನದಿಂದ ಆಡಳಿತ ಟ್ರಸ್ಟಿ ಕೆ.ಕೃಕುಮಾರ್ ಪೂಂಜ ಪ್ರಸ್ತಾವನೆಗೈದು, ದೇಶವು 2025ಕ್ಕೆ ಕ್ಷಯ ಮುಕ್ತ ಭಾರತ ಆಗಬೇಕು ಎಂಬ ಪ್ರಧಾನಿಗಳ ಆಶಯಕ್ಕೆ ಪೂರಕವಾಗಿ ಪ್ರತಿಷ್ಠಾನವು ಪ್ರತಿ ತಿಂಗಳು ಕ್ಷಯರೋಗಿಗಳಿಗೆ 10 ಬಗೆಯ ಆಹಾರ ಧಾನ್ಯ ವಿತರಿಸಲಾಗುತ್ತಿದ್ದು, ಒಂದು ರೋಗಿಗೆ ತಲಾ 6 ಸಾವಿರ ರೂ. ಖರ್ಚು ಮಾಡಲಾಗುತ್ತಿದೆ. ಈವರೆಗೆ 98…
https://youtu.be/vwXE4a8LG4M for video click here ⬆️ ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿಯಮಿತ ಇದರ ಬೋಳಂತೂರು ಸ್ಥಳಾಂತರಗೊಂಡ ಶಾಖೆಯ ಉದ್ಘಾಟನಾ ಸಮಾರಂಭ ಸೋಮವಾರ ಬೋಳಂತೂರು ಗ್ರಾಮದ ಉತ್ತಮ ನಗರದಲ್ಲಿ ನಡೆಯಿತು. ಆದರ್ಶ ಸೊಸೈಟಿಯ ನಿರ್ದೇಶಕ ಮಹಾಬಲ ರೈ ಹೊಸಮನೆ ಶಾಖೆ ಉದ್ಘಾಟಿಸಿದರು. ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಜೀಪಮುನ್ನೂರು ಮೂರ್ತೇದಾರರ ಸೇವಾ ಸಹಕಾರಿ ಸಂಘದ ೧೩ ಶಾಖೆಗಳು ಉತ್ತಮವಾಗಿ ಕಾರ್ಯಹಿಸುತ್ತಿದ್ದು ಮುಂದಿನ ದಿನಗಳಲ್ಲಿ ವೇಣೂರು ಹಾಗೂ ಬಿ.ಸಿ. ರೋಡಿನಲ್ಲಿ ಹೊಸ ಶಾಖೆಗಳು ಆರಂಭಗೊಳ್ಳಲಿವೆ. ೨೫ ಶಾಖೆಗಳನ್ನು ಹೊಂದಿ ೧೦೦ ಮಂದಿ ಮಹಿಳೆಯರಿಗೆ ಉದ್ಯೋಗ ಒದಗಿಸಿಕೊಡುವ ಚಿಂತನೆ ಆಡಳಿತ ಮಂಡಳಿಯ ಮುಂದಿದೆ ಎಂದರು. ಪ್ರಾಮಾಣಿಕತೆ ಹಾಗೂ ನಂಬಿಕೆಯಿಂದ ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿರುವುದರಿಂದ ಜಿಲ್ಲೆಯಲ್ಲಿ ಅತ್ಯುತ್ತಮ ಸಂಘ ಎನ್ನುವ ಹೆಗ್ಗಳಿಕೆ ಪಾತ್ರವಾಗಿದೆ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತಾ.ಪಂ. ಮಾಜಿ ಉಪಾಧ್ಯಕ್ಷ ಅಬ್ಬಾಸ್ ಅಲಿ ಮಾತನಾಡಿ ಶ್ರಮಜೀವಿಯಾಗಿರುವ ಸಂಜೀವ ಪೂಜಾರಿಯವರ…
ಬಂಟ್ವಾಳ: ನಾವೂರು ಕೂಡಿ ಬೈಲಿನಲ್ಲಿ ನಡೆದ 13 ನೇ ವರ್ಷದ ಮೂಡೂರು ಪಡೂರು ಜೋಡುಕರೆ ಕಂಬಳ ಸಮಾಪನ ಗೊಂಡಿದ್ದು ಫಲಿತಾಂಶ ಇಂತಿದೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 09 ಜೊತೆ, ಅಡ್ಡಹಲಗೆ: 04 ಜೊತೆ ಹಗ್ಗ ಹಿರಿಯ: 15 ಜೊತೆ, ನೇಗಿಲು ಹಿರಿಯ: 29 ಜೊತೆ , ಹಗ್ಗ ಕಿರಿಯ: 20ಜೊತೆ , ನೇಗಿಲು ಕಿರಿಯ: 105 ಜೊತೆಒಟ್ಟು ಕೋಣಗಳ ಸಂಖ್ಯೆ: 182 ಜೊತೆ Advertisement Advertisement ಕನೆಹಲಗೆ:ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೊಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿಅಡ್ಡ ಹಲಗೆ:ಪ್ರಥಮ: ಅಲ್ಲಿಪಾದೆ ಪೆರಿಯಾರ್ ಮಿಂಗಲ್ ಸೇನ್ಹಲಗೆ ಮುಟ್ಟಿದವರು:ಭಟ್ಕಳ ಹರೀಶ್ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ Advertisement Advertisement ಹಗ್ಗ ಹಿರಿಯ:ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ”ಓಡಿಸಿದವರು:ಕಾವೂರ್ ತೋಟ ಸುದರ್ಶನ್ಹಗ್ಗ…
ಬಂಟ್ವಾಳ: ಭೂ ಕೈಲಾಸ ಪ್ರತೀತಿಯ ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ 50 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ ನೂತನ ಮಹಾರಥದ ಸಮರ್ಪಣೆ ಕಾರ್ಯಕ್ರಮದ ಶೋಭಾಯಾತ್ರೆಗೆ ರವಿವಾರ ಬಿ.ಸಿ.ರೋಡ್ನಲ್ಲಿ ಚಾಲನೆ ನೀಡಲಾಯಿತು. Advertisement Advertisement ಬಿ.ಸಿ.ರೋಡ್ ನಿಂದ ಶ್ರೀ ಕ್ಷೇತ್ರ ಕಾರಿಂಜದವರೆಗೆ ನಡೆದ ಶೋಭಾಯಾತ್ರೆಗೆ ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಸ್ಥಾನದ ಬಳಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಶ್ರೀ ರಕ್ತೇಶ್ವರಿ ಸನ್ನಿಧಿಯಲ್ಲಿ ದೀಪ ಬೆಳಗಿಸಿ ಹಿರಿಯ ಸಾಹಿತಿ ಕೆ.ಎಲ್. ಆಚಾರ್ಯ ಅವರು ಪ್ರಾರ್ಥನೆ ಸಲ್ಲಿಸಿದರು. ಉದ್ಯಮಿ ಕೆ.ಕೆ.ಶೆಟ್ಟಿ. ಶ್ರೀ ರಕ್ತೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಬಿ.ವಿಶ್ವನಾಥ, ಉಪಾಧ್ಯಕ್ಷ ಕೆ.ಸಂಜೀವ ಪೂಜಾರಿ ಗುರುಕೃಪಾ,ಮಾಜಿ ಅಧ್ಯಕ್ಷ ಗೋಪಾಲ ಸುವರ್ಣ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ಬಿಜೆಪಿ ಕ್ಷೇತ್ರಾದ್ಯಕ್ಷ ದೇವಪ್ಪ ಪೂಜಾರಿ, ಉದ್ಯಮಿ ರಮೇಶ್ ಸಾಲ್ಯಾನ್, ನಿವೃತ್ತ ಕಂದಾಯ ಅಽಕಾರಿಗಳಾದ ರೋಹಿನಾಥ್ ಪಟ್ರಾಡಿ, ಅಣ್ಣು…
ಬಂಟ್ವಾಳ: ಶಿಕ್ಷಕನು ವಿದ್ಯಾರ್ಥಿಯ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದ್ದು ತನ್ನ ಬದುಕಿನುದ್ದಕ್ಕೂ ಕನ್ನಡಿಯಂತೆ ವ್ಯಕ್ತಿತ್ವವನ್ನು ಹೊಂದಿರಬೇಕಾಗುತ್ತದೆ, ಶಿಕ್ಷಕನ ವೃತ್ತಿ ಧರ್ಮವು ಸೇವೆಯ ರೂಪದಲ್ಲಿದ್ದು ಮಾದರಿ ವ್ಯಕ್ತಿತ್ವವನ್ನು ಹೊಂದಿರ ಬೇಕಾಗುತ್ತದೆ.ತನ್ನ ಉತ್ತಮ ನಡತೆ , ನಿಷ್ಪಕ್ಷಪಾತ ಸೇವೆ, ಶಾಲೆಯ ಅಭಿವೃದ್ಧಿ, ಮಕ್ಕಳ ಮಾದರಿ ಶಿಕ್ಷಕನಾಗಿ ಇದ್ದಾಗ ಮಾತ್ರ ಸೇವೆಯಲ್ಲಿ ಸಂಪೂರ್ಣತೆಯನ್ನು ಪಡೆಯಲು ಸಾಧ್ಯ ಎಂದು ಕಲ್ಲಡ್ಕ ವಲಯದ ಶಿಕ್ಷಣ ಸಂಯೋಜಕಿ ಪ್ರತಿಮಾ ಹೇಳಿದರು. Advertisement Advertisement Advertisement ಅವರು ಶನಿವಾರ ಬಂಟ್ವಾಳ ತಾಲೂಕಿನ ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಮಜಿ ವೀರಕಂಭ ಇಲ್ಲಿ ನಡೆದ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಲ್ಲಡ್ಕ ಕ್ಲಸ್ಟರ್ ನಲ್ಲಿ ಈ ವರ್ಷ ದಲ್ಲಿ ನಿವೃತರಾದ ಮಜಿ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಹಾಗೂ ಕೆಲಿಂಜ ಶಾಲೆಯ ನಿವೃತ್ತ ಸಹಶಿಕ್ಷಕಿ ಗಾಯತ್ರಿ ದೇವಿ ಇವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಕಲ್ಲಡ್ಕ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಬೂಬಕರ್ ಅಶ್ರಫ್, ಹಾಗೂ ಕಲ್ಲಡ್ಕ ಕ್ಲಸ್ಟರಿನ ಶಾಲೆಗಳ ಶಿಕ್ಷಕರು ಹಾಜರಿದ್ದರು. Advertisement Advertisement…
ಬಂಟ್ವಾಳ: ವಿಧಾನಸೌಧದಲ್ಲಿ ಪಾಕಿಸ್ಥಾನಕ್ಕೆ ಜಿಂದಾಬಾದ್ ಹೇಳಿದ ಭಯೋತ್ಪಾದಕ ಪ್ರೇಮಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯ ವತಿಯಿಂದ ಪ್ರತಿಭಟನೆ ಶನಿವಾರ ಬಿ.ಸಿ.ರೋಡಿನಲ್ಲಿ ನಡೆಯಿತು. Advertisement Advertisement ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ, ಎಂಟು ತಿಂಗಳ ಅವಧಿಯಲ್ಲಿ ಕರ್ನಾಟಕದ ಆತ್ಮವಾಗಿರುವ ವಿಧಾನಸೌಧದಲ್ಲಿ ಪಾಕಿಸ್ಥಾನ ಪರ ಘೋಷಣೆ ಕೂಗಿರುವುದು ಅವರು ಮಾಡಿರುವ ಸಾಧನೆ. ಇದೊಂದು ನಾಚಿಕೆಗೇಡಿನ ವಿಚಾರ ಎಂದರು. ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬದಲು ಇಡೀ ಸರಕಾರ ಆರೋಪಿಗಳ ಪರ ನಿಂತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಆರೋಪಿಗಳು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ನೀಡಿ ವೀರೋಚಿತವಾಗಿ ಹೆಜ್ಜೆ ಹಾಕುತ್ತಾರೆಂದರೆ ಈ ದೇಶದ ಪ್ರಜಾಪ್ರಭುತ್ವದ ಗೌರವ ಎಲ್ಲಿಗೆ ಬಂದಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದರು. ಸುಳ್ಳಿನ ಸರಮಾಲೆಯನ್ನು…
ಬಂಟ್ವಾಳ: ಮೂಡೂರು ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಂಟ್ವಾಳ ಕಂಬಳ ಎಂದೇ ಪಸಿದ್ದಿ ಪಡೆದಿರುವ 13ನೇ ವರ್ಷದ ಹೊನಲು ಬೆಳಕಿನ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳಕ್ಕೆ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಶನಿವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. Advertisement Advertisement ಅಲ್ಲಿಪಾದೆ ಸಂತ ಅಂತೋನಿ ಧರ್ಮಕೇಂದ್ರದ ಧರ್ಮಗರುಗಳಾದ ವಂದನೀಯ ಫೆಡ್ರಿಕ್ ಮೊಂತೆರೋ ಕಂಬಳ ಉದ್ಘಾಟಿಸಿದರು.ಕಂಬಳ ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಕರೆ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ಕಾರ್ಯಕ್ರಮ ಎಲ್ಲಾ ಜಾತಿ ಧರ್ಮ ವರ್ಗದ ಜನರು ಬರುವಂತೆ ಕೈ ಬೀಸಿ ಕರೆಯುವಂತಿರಬೇಕು ಎಂದರು. ಕಂಬಳ ವೀಕ್ಷಿಸಲು ಬರುವ ಅತಿಥಿಗಳು, ಕಂಬಳಾಭಿಮಾನಿಗಳಿಗೆ ಉತ್ತಮ ವ್ಯವಸ್ಥೆಯನ್ನು ಮಾಡಿಕೊಟ್ಟು ಇದೊಂದು ಮಾದರಿ ಕಂಬಳವಾಗಲು ಸಹಕರಿಸಬೇಕು ಎಂದು ತಿಳಿಸಿದರು. Advertisement Advertisement ಮುಖ್ಯ ಅತಿಥಿಗಳಾಗಿ ಉದ್ಯಮಿ ರಘುನಾಥ ಸೋಮಯಾಜಿ, ನಮ್ಮ ಕುಡ್ಲ ವಾಹಿನಿಯ ನಿರ್ದೇಶಕ ಲೀಲಾಕ್ಷ ಕರ್ಕೆರಾ, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್ ಖಾದರ್ಮಾಜಿ…
ಮಂಗಳೂರು:ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ.ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.
ಬಂಟ್ವಾಳ: ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಓಬಿಸಿ ಮೋರ್ಚಾದ ಮಂಡಲ ಅಧ್ಯಕ್ಷರಾಗಿ ಗಣೇಶ್ ಸುವರ್ಣ ತುಂಬೆ ನೇಮಕಗೊಂಡಿದ್ದಾರೆ.ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರನ್ನಾಗಿ ಗಣೇಶ್ ಸುವರ್ಣ ಅವರನ್ನು ಆಯ್ಕೆಗೊಳಿಸಿದ್ದಾರೆ. ಅವರು ಬಂಟ್ವಾಳ ತಾಲೂಕು ಪಂಚಾಯತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಮಂಗಳೂರು ಮಂಡಲದ ಕಾರ್ಯದರ್ಶಿಯಾಗಿ, ಬಿಜೆಪಿ ಪುದು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ವಿವಿಧ ಸಾಮಾಜಿಕ ಸಂಘಟನೆಗಳಲ್ಲೂ ಸಕ್ರಿಯರಾಗಿದ್ದಾರೆ.
ಬಂಟ್ವಾಳ: ಹಲವು ವರ್ಷಗಳಿಂದ ಸ್ವಂತ ಸೂರಿಲ್ಲದೆ ಮಳೆ, ಬಿಸಿಲಿಗೆ ಪರಿತಪಿಸುತ್ತಿದ್ದ ಸಜೀಪ ಮೂಡ ಗ್ರಾಮದ ಮಿತ್ತಮಜಲು ನಿವಾಸಿಗಳಾದ ಭಾಗಿ ಮತ್ತು ಕಮಲ ಎಂಬವರಿಗೆ ಸ್ಥಳೀಯ ಯುವ ಎಂಜಿನಿಯರ್, ಸಜೀಪಮೂಡ ವಲಯ ಕಾಂಗ್ರೆಸ್ ಉಪಾಧ್ಯಕ್ಷ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆಯವರು ಮನೆ ನಿರ್ಮಿಸಿ ಕೊಟ್ಟಿದ್ದು ಗುರುವಾರ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಗಣಹೋಮ ನಡೆಯಿತು. ಬಳಿಕ ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿ ಮನೆಮಂದಿಗೆ ಕೀಲಿಕೈ ಹಸ್ತಾಂತರಿಸಿದರು. ಅವರು ಮಾತನಾಡಿ ಬಡವರಿಗೆ ಮನೆ ನಿರ್ಮಾಣ ಮಾಡಿರುವುದು ಇದು ದೇವರು ಮೆಚ್ಚುವಕಾರ್ಯವಾಗಿದ್ದು ಮನೆಮಂದಿಯ ಸಹಕಾರ ಹಾಗೂ ಪ್ರೋತ್ಸಾಹದಿಂದ ಶೈಲೇಶ್ ಪೂಜಾರಿ ಈ ಕೆಲಸ ಮಾಡಿದ್ದಾರೆ ಎಂದರು. ಇಂತಹ ಸೇವಾ ಕಾರ್ಯ ಮತ್ತೊಬ್ಬರಿಗೆ ಪ್ರೇರಣೆಯಾಗಬೇಕು ಎನ್ನುವ ಉದ್ದೇಶದಿಂದ ಸಣ್ಣ ಸಮಾರಂಭ ನಡೆಸಿ ಮನೆ ಹಸ್ತಾಂತರ ಕೆಲಸ ಮಾಡಲಾಗಿದೆ. ಇನ್ನಷ್ಟು ಮಂದಿ ಸ್ಪೂರ್ತಿ ಪಡೆದು ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮಾತನಾಡಿ ಹಲವು…








