Author: admin

ಬಂಟ್ವಾಳ: ಇಲ್ಲಿನ ಪುರಸಭೆಯ ವತಿಯಿಂದ ಲಯನ್ಸ್ ಕ್ಲಬ್ ಬಿ.ಸಿ.ರೋಡ್, ತಾಲೂಕು ಆಸ್ಪತ್ರೆ ಬಂಟ್ವಾಳ, ಎ.ಜೆ. ವೈದ್ಯಕೀಯ ಕಾಲೇಜು ಆಸ್ಪತ್ರೆ ಮಂಗಳೂರು, ಸ್ವ ಸಹಾಯ ಸಂಘಗಳ ಒಕ್ಕೂಟಗಳು ಪುರಸಭೆ, ಬಂಟ್ವಾಳ ಬೀದಿ ಬದಿ ವ್ಯಾಪಾರಿಗಳ ಪಟ್ಟಣ ಮಾರಾಟ ಸಮಿತಿ ಇವರ ಸಹಯೋಗದೊಂದಿಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಶಿಬಿರವನ್ನು ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಕೋಟ್ಯಾನ್, ತಾಲೂಕು ಆಸ್ಪತ್ರೆ ಬಂಟ್ವಾಳ ಇಲ್ಲಿನ ವೈದ್ಯಾಧಿಕಾರಿ ಡಾ. ಪುಷ್ಪಲತಾ, ಬೀದಿ ಬದಿ ವ್ಯಾಪಾರಿಗಳ ಸಂಘದ ಸದಸ್ಯ ಮಹಮ್ಮದ್ ಇಕ್ಬಾಲ್, ಸ್ವ ಸಹಾಯ ಸಂಘದ ಒಕ್ಕೂಟಗಳ ಅಧ್ಯಕ್ಷೆ ವಸಂತಿ ಉಪಸ್ಥಿತರಿದ್ದರು.ಶಿಬಿರದಲ್ಲಿ ಎ. ಜೆ ವೈದ್ಯಕೀಯ ಕಾಲೇಜು ಆಸತ್ರೆ ಮಂಗಳೂರು ಇಲ್ಲಿನ ತಜ್ಞ ವೈದ್ಯರು ಹಾಜರಿದ್ದು, ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆಯನ್ನು ನಡೆಸಿದರು. ಶಿಬಿರದಲ್ಲಿ ಕಣ್ಣಿನ ತಪಾಸಣೆ ನಡೆಸಿ ಕನ್ನಡಕ ಅಗತ್ಯವಿದ್ದವರಿಗೆ ಪುರಸಭೆಯಿಂದ ಉಚಿತ ಕನ್ನಡಕ ವಿತರಿಸಲಾಯಿತು. ಮಂಗಳ ಸ್ವಾಗತಿಸಿ, ಗೀತಾ ವಂದಿಸಿದರು. ಸಮುದಾಯ ಸಂಘಟಕಿ…

Read More

ಬಂಟ್ವಾಳ: ಹಲವು ವರ್ಷಗಳಿಂದ ಸ್ವಂತ ಸೂರಿಲ್ಲದೆ ಮಳೆ, ಬಿಸಿಲಿಗೆ ಪರಿತಪಿಸುತ್ತಿದ್ದ ಸಜೀಪ ಮೂಡ ಗ್ರಾಮದ ಮಿತ್ತಮಜಲು ನಿವಾಸಿಗಳಾದ ಭಾಗಿ ಮತ್ತು ಕಮಲ ಎಂಬವರಿಗೆ ಸ್ಥಳೀಯ ಯುವ ಎಂಜಿನಿಯರ್, ಸಜೀಪಮೂಡ ವಲಯ ಕಾಂಗ್ರೆಸ್ ಉಪಾಧ್ಯಕ್ಷ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆಯವರು ಮನೆ ನಿರ್ಮಿಸಿ ಕೊಟ್ಟಿದ್ದು ಫೆ. 29ರಂದು ಗುರುವಾರ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಗಣಹೋಮ ನಡೆಯಲಿದೆ. ಬಳಿಕ ನಡೆಯುವ ಸಮಾರಂಭದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸುವರು, ಸಜೀಪಮೂಡ ಗ್ರಾ.ಪಂ. ಅಧ್ಯಕ್ಷೆ ಶೋಭಾ ಶೆಟ್ಟಿ ಅಧ್ಯಕ್ಷತೆ ವಹಿಸುವರು, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತಿ ಮಾಜಿ ಸದಸ್ಯ ಕೆ. ಸಂಜೀವ ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಸಜೀಪಮೂಡ ವಲಯ ಕಾಂಗ್ರೆಸ್ ಅಧ್ಯಕ್ಷ ಕರೀಂ ಬೊಳ್ಳಾಯಿ, ಪ್ರಗತಿಪರ ಕೃಷಿಕ ಸುಂದರ ಪೂಜಾರಿ ಕುಚ್ಚಿಗುಡ್ಡೆ, ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯ ಸ್ಥಾಪಕ ಬಿ.ಕೆ. ಸೇಸಪ್ಪ ಬೆದ್ರಕಾಡು ಭಾಗವಹಿಸುವರು. ಮನೆಗೆ ಆಧಾರವಾಗಿದ್ದವೆರೆಲ್ಲ ಅನಾರೋಗ್ಯದಿಂದ…

Read More

https://youtu.be/0jXa4ncbzFU?si=qkKYFiL3Umy8dF5c For video click here ⬆️ ಬಂಟ್ವಾಳ: ಇತಿಹಾಸ ಪ್ರಸಿದ್ದ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಮಹಾರಥೋತ್ಸವ ಮಂಗಳವಾರ ರಾತ್ರಿ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ಅಥರ್ವ ಶೀರ್ಷ ಹೋಮ, ಮಧ್ಯಾಹ್ನ ಮಹಾಪೂಜೆ, ಶ್ರೀ ದೇವರ ರಥಾರೋಹಣ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ವಿಜ್ರಂಭಣೆಯಿಂದ ನಡೆದ ಮಹಾರಥೋತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಸುಡುಮದ್ದು ಪ್ರದರ್ಶನ ಆಕರ್ಷಣೀಯವಾಗಿತ್ತು. ಬಳಿಕ ದೇವಳದ ಅಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆಯಿತು.

Read More

ಬಂಟ್ವಾಳ: ನಾವೂರು ಗ್ರಾಮದ ಕೂಡಿಬೈಲು ಎಂಬಲ್ಲಿ ಬಂಟ್ವಾಳ ಕಂಬಳ ಎಂದು ಪ್ರಸಿದ್ದಿ ಪಡೆದಿರುವ 13ನೇ ವರ್ಷದ ಹೊನಲು ಬೆಳಕಿನ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳವು ಮಾ. 2ರಂದು ಹಲವು ವೈಶಿಷ್ಟ್ಯತೆಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷ ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಇಲ್ಲಿನ ಬಿ.ಸಿ.ರೋಡಿನಲ್ಲಿ ಮಂಗಳವಾರ ಆಮಂತ್ರಣಪತ್ರ ಬಿಡುಗಡೆಗೊಳಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಹಿಂದೆ ಕಾವಳಕಟ್ಟೆಯಲ್ಲಿ 10ವರ್ಷ ನಡೆದಿದ್ದ ಈ ಕಂಬಳವು ಹೊಸ ಆವಿಷ್ಕಾರಗಳಿಂದಲೇ ಗುರುತಿಸಿಕೊಂಡಿತ್ತು. ಇದೀಗ ನಾವೂರು ಗ್ರಾಮದ ಕೂಡಿಬೈಲು ಗದ್ದೆಯಲ್ಲಿ ಮೂರನೇ ವರ್ಷ ನಡೆಯಲಿರುವ ಕಂಬಳದಲ್ಲಿ ಕೂಡಾ ಅತಿಥಿಗಳಿಗೆ ಪ್ರತ್ಯೇಕ ವಿಐಪಿ ಗ್ಯಾಲರಿ ಅಳವಡಿಸಲು ಚಿಂತನೆ ನಡೆಸಲಾಗಿದೆ ಎಂದರು. ಜಿಲ್ಲೆಯಲ್ಲಿ ಕಂಬಳ ಉಳಿಸಿ ಬೆಳೆಸುವಲ್ಲಿ ಕಾನೂನು ಹೋರಾಟ ನಡೆಸಿ, ಮಹಿಳೆಯರು ಕೂಡಾ ಕಂಬಳ ವೀಕ್ಷಿಸಲು ಪ್ರತ್ಯೇಕ ಗ್ಯಾಲರಿ ಅಳವಡಿಕೆ, ಸಿನೆಮಾ ತಾರೆಯರು ಮತ್ತು ಗಣ್ಯರು ಭಾಗವಹಿಸುವ ಮೂಲಕ ಕಂಬಳಕ್ಕೆ ಹೊಸ ರೂಪ ಕೊಟ್ಟ ಹೆಗ್ಗಳಿಕೆ ಮೂಡೂರು-ಪಡೂರು ಕಂಬಳ ಕೂಟಕ್ಕೆ ಸಲ್ಲುತ್ತದೆ. ಈ…

Read More

ಬಂಟ್ವಾಳ: ಜಿಲ್ಲೆಯ ಪ್ರಸಿದ್ದ ದೇವಸ್ಥಾನವಾದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನದಲ್ಲಿ ಮಹಾರಥೋತ್ಸವ ನಾಳೆ (ಫೆ.27) ನಡೆಯಲಿದೆ. ಫೆ. 24 ರಂದು ವಾರ್ಷಿಕ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು ಇಂದು ರಾತ್ರಿ ಶ್ರೀ ದೇವರ ಬಲಿ, ಪಾಲಕಿ ಉತ್ಸವ ಹಾಗೂ ರಥ ಬೀದಿಯಲ್ಲಿ ಸಾಗಿ ಕಟ್ಟೆ ಉತ್ಸವ ನಡೆಯಲಿದೆ. ನಾಳೆ ಬೆಳಿಗ್ಗೆ 7.30ಕ್ಕೆ ಅಥರ್ವ ಶೀರ್ಷ ಹೋಮ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಶ್ರೀ ದೇವರ ರಥಾರೋಹಣ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 7ಕ್ಕೆ ಮಹಾರಥೋತ್ಸವ, ಸುಡುಮದ್ದು ಪ್ರದರ್ಶನ, ಶ್ರೀ ದೇವರ ಬಲಿ ಉತ್ಸವ ನಡೆಯಲಿದೆ‌. ಫೆ. 28 ರಂದು ರಾತ್ರಿ 7 ಕ್ಕೆ ಶ್ರೀ ದೇವರ ಬಲಿ ಹೊರಟು ಅವಭೃತ ಸ್ನಾನ, ಧ್ವಜಾವರೋಹಣ ನಡೆಯಲಿದೆ. ರಾತ್ರಿ‌‌ 11 30ಕ್ಕೆ ಮಾಗಣೆಯ ಶ್ರೀ ನಾಲ್ಕೈತ್ತಾಯ ದೈವದ ನೇಮೋತ್ಸವ ಜರುಗಲಿದೆ. ಫೆ. 29 ರಂದು ಸಂಪ್ರೋಕ್ಷಣೆ ಮತ್ತು ಮಂತ್ರಾಕ್ಷತೆ ನಡೆಯಲಿದೆ.

Read More

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೂಲತಃ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ; ಪ್ರಸಕ್ತ ಪಾಣೆಮಂಗಳೂರು – ಆಲಡ್ಕದಲ್ಲಿ ವಾಸ್ತವ್ಯವಿದ್ದ ಅಶ್ರಫ್ (32) ಮೃತಪಟ್ಟ ಯುವಕ. ಅವರು ಸ್ನೇಹತನಿಗೆ ಸಹಾಯ ಮಾಡಲು ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಶ್ರಫ್ ಇಂದು ಮುಂಜಾನೆ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಸ್ನೇಹಿತ ಆಲಡ್ಕ ನಿವಾಸಿ ತನ್ವೀರ್ ಎಂಬವರನ್ನು ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡ್ ಕೈಕಂಬದಲ್ಲಿರುವ ಅಂಗಡಿಗೆ ಬಿಡಲು ತೆರಳಿದ್ದರು. ಹಾಗೆ 5:30ರ ಸುಮಾರಿಗೆ ಕೈಕಂಬಕ್ಕೆ ತಲುಪಿದ ಇವರು ತನ್ವೀರ್ ರನ್ನು ಸ್ಕೂಟರ್ ನಿಂದ ಇಳಿಸಬೇಕು ಅನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಹಿಂದಿರುಗುತ್ತಿದ್ದ ಲಾರಿಯನ್ನು ಅದರ ಚಾಲಕ ಅಜಾಗರೂಕತೆಯಿಂದ ಹಿಂಬದಿಗೆ ಚಲಿಸಿ ಸ್ಕೂಟರ್ ಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಸ್ಥಳೀಯರು ಆರೋಪಿದ್ದಾರೆ. ಘಟನೆಯಿಂದ ಇಬ್ಬರಿಗೂ ಗಾಯಗಳಾಗಿದ್ದು, ಗಂಭೀರ ಗಾಯಗೊಂಡಿದ್ದ ಅಶ್ರಫ್ ರನ್ನು ತಕ್ಷಣ ಮಂಗಳೂರಿನ…

Read More

ಬಂಟ್ವಾಳ : ತಾಲೂಕಿನ ಬೋರಿಮಾ‌ರ್ ಮೂಲದ ಅನಿಲ್‌ ಜಾನ್ ಸಿಕ್ವೇರಾ ರವರು 2023 ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಯಶಸ್ಸನ್ನು ಗಳಿಸಿದ್ದಾರೆ, ಪ್ರಿಲಿಮ್ಸ್, ಮೇನ್ಸ್ ಮತ್ತು ಸಂದರ್ಶನದಲ್ಲಿ 25 ನೇ ವಯಸ್ಸಿನಲ್ಲಿ ಉತ್ತೀರ್ಣರಾಗಿದ್ದಾರೆ. ಇದು ಅವರನ್ನು ಕಿರಿಯ ಸಿವಿಲ್ ನ್ಯಾಯಾಧೀಶರನ್ನಾಗಿ ಮಾಡಿದೆ.ಇವರ ತಂದೆ ಎವರೆಸ್ಟ್ ಸಿಕ್ವೇರಾ ಮತ್ತು ತಾಯಿ ಐವಿ ಸಿಕ್ಕ್ವೇರಾ ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ವಾಸಿಸುತ್ತಿದ್ದು ಕೃಷಿಯನ್ನು ತಮ್ಮ ಜೀವನಕ್ಕೆ ಆಧಾರವಾಗಿ ಇದ್ದ ಇವರು ಇವರ ಮಗನ ಸಾಧನಗೆ ಹಲವು ಪ್ರಶಂಸೆ ವ್ಯಕ್ತವಾಗಿದೆ. ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಪದವೀಧರರಾಗಿರುವ ಅನಿಲ್‌, ತಮ್ಮ ಶೈಕ್ಷಣಿಕ ಪಯಣದುದ್ದಕ್ಕೂ ಸತತವಾಗಿ ಶೈಕ್ಷಣಿಕ ಉತ್ಕೃಷ್ಟತೆಯನ್ನು ಪ್ರದರ್ಶಿಸಿದ್ದಾರೆ. ಅವರು ಬೋರಿಮಾರ್‌ನಲ್ಲಿರುವ ಸೇಂಟ್ ಜೋಸೆಫ್ ಹೈಯ‌ರ್ ಪ್ರೈಮರಿ ಶಾಲೆಯಲ್ಲಿ ತಮ್ಮ ಶಿಕ್ಷಣವನ್ನು ಪ್ರಾರಂಭಿಸಿದರು, ನಂತರ ಅವರ ಪ್ರೌಢಶಾಲಾ ಅಧ್ಯಯನಕ್ಕಾಗಿ ಮಾಣಿ ಕರ್ನಾಟಕ ಹೈಸ್ಕೂಲ್ ಅನ್ನು ಪ್ರಾರಂಭಿಸಿದರು. ಅವರ ಪದವಿ ಪೂರ್ವ ಶಿಕ್ಷಣವು ಪುತ್ತೂರಿನ ಸೇಂಟ್ ಫಿಲೋಮಿನಾ ಪಿಯು ಕಾಲೇಜಿನಲ್ಲಿ ಪೂರ್ಣಗೊಂಡಿತು. ಮಂಗಳೂರು ವಕೀಲರ…

Read More

ಬಂಟ್ವಾಳ : ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರ ಇದರ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ.25 ಹಾಗೂ ಫೆ.27ರಂದು ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೇಲು ಸೇವೆ ಇರುವುದಿಲ್ಲವೆಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Read More

ಸುಳ್ಯ: ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರ ಹಾಗೂ ರಾಷ್ರೀಯ ಕೃಷಿ ಸಂಶೋಧನಾ ನಿರ್ವಹಣೆ ಅಕಾಡಮಿ, ಹೈದ್ರಾಬಾದ್ ಇವರ ಸಂಯುಕ್ತ ಆಶ್ರಯದಲ್ಲಿ ಪರಿಶಿಷ್ಟ ಜಾತಿಯ ರೈತರಿಗೆ ಎರೆಹುಳ ಗೊಬ್ಬರ ತಯಾರಿಕೆ ಕುರಿತು ಕೌಶಲ್ಯ ಅಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ ಪೇರಾಲು ಗ್ರಾಮದಲ್ಲಿ ಹಮ್ಮಿಕೊಳಲಾಗಿತು. ನಾರ್ಮ, ಹೈದ್ರಾರಾಬಾದ ಪ್ರಧಾನ ವಿಜ್ಞಾನಿ ಡಾ. ಬಾಲಕೃಷ್ಣನ್ ಕಾರ್ಯಕ್ರಮವನ್ನು ಉದ್ಘಾಟಿಸಿ ರೈತರು ತಮ್ಮ ಕೃಷಿ ಕ್ಷೇತ್ರದಲ್ಲಿ ದೊರಕುವ ಸಾವಯವ ವಸ್ತುಗಳನ್ನು ಎರೆಹುಳುಗಳನ್ನು ಬಳಸಿ ಅದನ್ನು ಪೋಷಕಾಂಶವುಳ್ಳ ಸಾವಯವ ಗೊಬ್ಬರಗಳನ್ನಾಗಿ ಮಾರ್ಪಾಡಿಸಿ ತಮ್ಮ ಕೃಷಿ ಕ್ಷೇತ್ರದ ಬೆಳೆಗಳಿಗೆ ಉಪಯೋಗಿಸಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಕೃಷಿ ವಿಜ್ಞಾನ ಕೇಂದ್ರ ಹಿರಿಯ ವಿಜ್ಞಾನಿ ಮಂಗಳೂರು ಡಾ. ಟಿ. ಜೆ. ರಮೇಶ, ಮಂಡೆಕೋಲು ಗ್ರಾ.ಪಂ. ಸದಸ್ಯೆ ಶಶಿಕಲಾ ಭಾಗವಹಿಸಿದರು. ಕೃಷಿ ವಿಜ್ಞಾನ ಕೇಂದ್ರದ ಬೇಸಾಯಶಾಸ್ತ್ರ ವಿಜ್ಞಾನಿಗಳಾದ ಡಾ. ಹರೀಶ್ ಶೆಣೈರವರು ಎರೆಹುಳ ಗೊಬ್ಬರ ತಯಾರಿಸುವ ವಿಧಾನ, ಎರೆಹುಳದ ಜೀವನಚಕ್ರ ಕುರಿತು ಮಾಹಿತಿ ನೀಡಿ ಪ್ರಾತ್ಯಕ್ಷಿಕೆ ಮುಖಾಂತರ ತರಬೇತಿಯನ್ನು ನಡೆಸಿಕೊಟ್ಟರು. ಮಾಧವ ಕೆ.…

Read More

ಬಂಟ್ವಾಳ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ನೇತ್ರಾವತಿ ವಲಯ, ಬಂಟ್ವಾಳ ತಾಲೂಕುಜಿಲ್ಲಾ ಸಮಿತಿ ವತಿಯಿಂದ ಮಹಾತೋಭಾರ ಶ್ರೀ ಕಾರಿಂಜೇಶ್ವರ ದೇಗುಲದಲ್ಲಿ ಶುಕ್ರವಾರ ಮುಂಜಾನೆ ರಥಸಪ್ತಮಿಯ ಪ್ರಯುಕ್ತ ಸಾಮೂಹಿಕ 108 ಸೂರ್ಯ ನಮಸ್ಕಾರ ನಡೆಯಿತು. ಮಹಾತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಗ್ರಾಮಣಿಗಳಾದ ವೆಂಕಟರಮಣ ಮುಚ್ಚಿನ್ನಾಯ ಕಳ್ಳಿಮಾರ್ ಚಾಲನೆ ನೀಡಿದರು. ಪತಂಜಲಿ ಯೋಗ ಶಿಕ್ಷಣ ಸಮಿತಿಯ ಪ್ರಾಂತ ಸಂಚಾಲಕ ಹರೀಶ, ಜಿಲ್ಲಾ ಸಹಸಂಚಾಲಕ ನಾರಾಯಣ, ಜಿಲ್ಲಾ ಶಿಕ್ಷಣ ಪ್ರಮುಖ್ ಹರೀಶ, ತಾಲೂಕು ಶಿಕ್ಷಣ ಪ್ರಮುಖ್ ಗಣೇಶ, ತಾಲೂಕು ಸಹಸಂಚಾಲಕಿ ನಯನ, ತಾಲೂಕು ವಿಸ್ತರಣಾ ಪ್ರಮುಖ್ ಕಿಶೋರ್ ಭಾಗವಹಿಸಿದ್ದರು. ಶಿವಶಂಕರ್ ರಥಸಪ್ತಮಿಯ ವಿಶೇಷತೆಯ ಬಗ್ಗೆ ಬೌದ್ಧಿಕ್ ನೀಡಿದರು, ಶಕುಂತಳ ನಿರೂಪಿಸಿ, ಹೇಮಂತ್ ವಂದಿಸಿದರು.

Read More