Author: admin
ಬಂಟ್ವಾಳ: ತಾಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೊತ್ಸವದ ಪ್ರಥಮ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನೇರವೇರಿತು. ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ ಸಂಚಯಗಿರಿ ಬಂಟ್ವಾಳದ ಪ್ರೊ.ತುಕರಾಮ್ ಪೂಜಾರಿಯವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಹಾದೇವ ಗೌಡ ಮುದ್ದಾಜೆ, ತುಕರಾಮ್ ಶೆಟ್ಟಿ, ಶ್ರೀಹರಿ ಭಟ್, ರಮಾನಂದ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಗೌಡ ಮತ್ತಾವೂ , ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗೌಡ ಕಾರಂಬಡೆ, ಪ್ರಧಾನ ಅರ್ಚಕರು ರಾಮಚಂದ್ರ ಭಟ್, ದಿನೇಶ್ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಚೌಟ, ರಾಯಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಂತೋಷ್ ಕುಮಾರ್, ಭಜನಾ ಮಂಡಳಿ ಅಧ್ಯಕ್ಷ ರಾಜೇಶ್ ಶಿವನಗರ, ಸಮಿತಿ ಕಾರ್ಯದರ್ಶಿಗಳಾದ ಪ್ರದೀಪ್ ಮಿಯಾಲು ಸಮಿತ್ ಶಿವನಗರ, ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಸ್ವಾಗತಿಸಿದರು. ವೇದಿಕೆ ಸಮಿತಿ ಸಂಚಾಲಕ ದಿನೇಶ್ ಸುವರ್ಣ ನಿರೂಪಿಸಿದರು.
ಬಂಟ್ವಾಳ: ಆದರ್ಶಗಳನ್ನು ಇಟ್ಟುಕೊಂಡು ಮುಂದು ಹೋದರೆ ಜೀವನದಲ್ಲಿ ಸುಖ ಶಾಂತಿ ಸಿಗುತ್ತದೆ. ಯಾವುದೋ ಸಿನಿಮಾ ಹಾಡುಗಳಿಗೆ ಮಕ್ಕಳು ರೀಲ್ಸ್ ಮಾಡುವ ಬದಲುತ್ರಿಪದಿಗಳನ್ನು ಹೇಳುವ ರೀಲ್ಸ್ ಮಾಡಿದರೆ ಅದು ಪ್ರಯೋಜನಕಾರಿಯಾಗುತ್ತದೆ ಈ ಬಗ್ಗೆ ಮಕ್ಕಳಿಗೆ ತಿಳಿಸಿಕೊಡಬೇಕು ಎಂದು ಬಂಟ್ವಾಳ ತಹಶೀಲ್ದಾರ್ ಅರ್ಚನ ಭಟ್ ಹೇಳಿದರು. ಅವರು ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟದ ವತಿಯಿಂದ ಬಿ.ಸಿ.ರೋಡಿನ ಆಡಳಿತ ಸೌಧದದ ಸಭಾಂಗಣದಲ್ಲಿ ನಡೆದ ಸರ್ವಜ್ಞ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಸುರೇಶ್ ಕುಮಾರ್ ನಾವೂರು ಉಪನ್ಯಾಸ ನೀಡಿ ಕವಿ ಸರ್ವಜ್ಞ ತನ್ನ ತ್ರಿಪದಿಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿಳಿಸುವ ಕಾರ್ಯವನ್ನು ಮಾಡಿದ್ದಾರೆ. ಅವರಿಂದ ಸಾವಿರಕ್ಕಿಂತಲೂ ಅಧಿಕ ತ್ರಿಪದಿಗಳು ರಚನೆಯಾಗಿದ್ದು ಸಾರ್ವಕಾಲಿಕ ಸತ್ಯವನ್ನು ತಿಳಿಸುತ್ತದೆ ಎಂದರು.ಬಂಟ್ವಾಳ ತಾಲೂಕು ಹಿರಿಯ ನಾಗರಿಕರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಸೋಮಯ್ಯ ಹನೈನಡೆ, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ, ರಾಜ್ಯ ಕುಲಾಲ ಕುಂಬಾರರ…
ಬಂಟ್ವಾಳ: ಬಿ.ಸಿ.ರೋಡಿನ ಕುಲಾಲರ ಮಠದ ಶ್ರೀ ಕುಂಭೋದರಿ ದೇವಿ ನಾಗಬ್ರಹ್ಮ ಮತ್ತು ಪರಿವಾರ ದೈವಗಳ ಕ್ಷೇತ್ರದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಾನುವಾರ ಸಂಜೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಮಾಣಿಲ ಶ್ರೀಧಾಮದ ಶ್ರೀ ಮೋಹನದಸ ಪರಮಹಂಸ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭ ಪ್ರಮುಖರಾದ ಭುವನೇಶ್ ಪಚ್ಚಿನಡ್ಕ, ರಾಮದಾಸ್ ಬಂಟ್ವಾಳ, ಮಚ್ಚೇಂದ್ರ ಸಾಲ್ಯಾನ್, ನಾಗೇಶ್ ಸಾಲ್ಯಾನ್, ಸುದರ್ಶನ್ ಬಜ, ವಿಶ್ವನಾಥ ಬಿ., ಗೋಪಾಲ ಸುವರ್ಣ, ಟ್ರಸ್ಟ್ನ ಆಡಳಿತ ಮಂಡಳಿ ಅಧ್ಯಕ್ಷ ಯೋಗೀಶ ಸಿ. ಗಾಂದೋಡಿ, ಉಪಾಧ್ಯಕ್ಷ ಕೆ. ಗಂಗಾಧರ, ಗೌರವಾಧ್ಯಕ್ಷರಾದ ಚಂದಪ್ಪ ಮೂಲ್ಯ, ಮಂಜುನಾಥ ಮೂಲ್ಯ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ. ಮೋಹನ್, ಅಧ್ಯಕ್ಷ ಕೃಷ್ಣಪ್ಪ ಬಿ., ಕಾರ್ಯಾಧ್ಯಕ್ಷ ಬಿ. ಕುಮಾರ್, ಪ್ರಧಾನ ಕಾರ್ಯದರ್ಶಿ ರವಿರಾಜ್ ಮಠ, ಕಾಐದರ್ಶಿ ಭಾಸ್ಕರ ಕಾಮಾಜೆ, ಕೋಶಾಧಿಕಾರಿ ರೇಷ್ಮಾ ವಿನಯ್, ಸಂಚಾಲಕ ಸೇಸಪ್ಪ , ಸಹಸಂಚಾಲಕ ಸುಕುಮಾರ್, ಉಪಾಧ್ಯಕ್ಷರಾದ ನಾರಾಯಣ ಪೆರ್ನೆ, ವಾಮನ ಕುಲಾಲ್ , ಕಿಶೋರ್ ಬಸ್ತಿಪಡ್ಪು, ಲಕ್ಷ್ಮಣ್ ಅಗ್ರಬೈಲು, ಕೇಶವ…
ಬಂಟ್ವಾಳ: ತಾಲೂಕಿನ ನಾವೂರು ಗ್ರಾಮದ ಮೈಂದಾಳ ಕೆಮ್ಮಟೆ ಎಂಬಲ್ಲಿ ದಾನಿಗಳು, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಡಕುಟುಂಬದ ರೇವತಿ ಪೂಜಾರಿಯವರಿಗೆ ನಿರ್ಮಾಣಗೊಂಡ ಶ್ರೀ ದುರ್ಗಾ ನಿವಾಸದ ಗೃಹಪ್ರವೇಶ ಭಾನುವಾರ ನಡೆಯಿತು.ಬಳಿಕ ನಡೆದ ಕೃತಜ್ಞತಾ ಸಭೆಯಲ್ಲಿ ಮಂಜೇಶ್ವರ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಜೋಸೆಫ್ ಕ್ರಾಸ್ತ ಮನೆಮಂದಿಗೆ ಕೀ ಹಸ್ತಾಂತರಿಸಿ ಮಾತನಾಡಿ ಸರ್ವ ಧರ್ಮದ ದಾನಿಗಳ ನೆರವಿನಿಂದ ರೇವತಿ ಅವರಿಗೆ ಸುಂದರ ನಿರ್ಮಾಣಗೊಂಡಿದೆ. ಮನೆ ನಿರ್ಮಾಣದ ವೇಳೆ ಸಾಕಷ್ಟು ತೊಂದರೆಗಳು ಬರುವುದು ಸಹಜ, ಅವೆಲ್ಲವನ್ನು ಮೀರಿ ಮನೆ ನಿರ್ಮಾಣದಂತಹ ಪುಣ್ಯ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಮಾನವ ಧರ್ಮ ಎಂದು ತಿಳಿಸಿದರು. ಅಟೋಮೇಶನ್ ಕ್ಲೌಡ್ ಸೊಲ್ಯುಷನ್ ಸಂಸ್ಥೆಯ ಅಧ್ಯಕ್ಷ ಜಗದೀಶ್ ರಾಮ ಉಡುಗೊರೆ ಹಸ್ತಾಂತರಿಸಿ ಶುಭಾಶಯ ಕೋರಿದರು. ಉದಯ ಯುವಕ ಮಂಡಲ ಅಧ್ಯಕ್ಷ ರಿತೇಶ್ ಅಬ್ಬೆಟ್ಟು, ಹೊಟೇಲ್ ಉದ್ಯಮಿ ಸದಾನಂದ ಬಂಗೇರ, ಯುವವಾಹಿನಿ ಮಂಗಳೂರು ಮಹಿಳಾ ಸಮಿತಿ ಅಧ್ಯಕ್ಷೆ ಶುಭಾ ರಾಜೇಂದ್ರ, ತುಳುನಾಡು ಸೇವಾ ಫೌಂಡೇಶನ್ ಟ್ರಸ್ಟ್ ಪ್ರಧಾನ ಕಾರ್ಯದರ್ಸಿ ವಿಜಯ ಕುಮಾರ್ ಅಮ್ಟಾಡಿ, ನಾವೂರು…
ಬಂಟ್ವಾಳ: ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ನಡೆಯುತ್ತಿರುವ ಪುನಃ ಪ್ರತಿಷ್ಠೆ, ಅಷ್ಟಬಂಧ, ಬ್ರಹ್ಮಕಲಶಾಭಿಷೇಕ ಮತ್ತು ಧ್ವಜಾಸ್ತಂಭ ಪ್ರತಿಷ್ಠೆ ಮತ್ತು ಜಾತ್ರಾಮಹೋತ್ಸವದ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ದೇವರ ದರ್ಶನ ಪಡೆದ ಅವರು ದೇವಸ್ಥಾನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇವಾಲಯ ನಿರ್ಮಾಣ ಕಾರ್ಯ ಅತ್ಯಂತ ಸುಂದರವಾಗಿ ಮೂಡಿಬಂದಿದ್ದು ಚಂದ್ರಪ್ರಕಾಶ್ ಶೆಟ್ಟಿಯವರ ನೇತೃತ್ವದ ತಂಡದ ಕಾರ್ಯ ಶ್ಲಾಘನೀಯ ಎಂದರು ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ಶ್ರೀ ಕ್ಷೇತ್ರದ ವತಿಯಿಂದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಗೌರವಿಸಿದರು. ಈ ಸಂದರ್ಭ ಮಾಜಿ ಸಚಿವ ಬಿ. ರಮನಾಥ ರೈ, ಪ್ರಮುಖರಾದ ರವಿಶಂಕರ್ ಶೆಟ್ಟಿ ಬಡಾಜೆ, ಅಶ್ವನಿ ಕುಮಾರ್ ರೈ, ಪದ್ಮರಾಜ್ ಆರ್, ಇನಾಯತ್ ಅಲಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ದೇವಸ್ಥಾನದ ವಿವಿಧ ಸಮಿತಿಯ ಪದಾಧಿಕಾರಿಗಳು, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಬಂಟ್ವಾಳ: ಬಿ.ಸಿ.ರೋಡಿನ ಪೊಲೀಸ್ ಲೈನ್ನಲ್ಲಿರುವ ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾಮಹೋತ್ಸವ ಫೆ. ೧೬ರಿಂದ ಫೆ. ೨೩ರವರೆಗೆ ನಡೆಯಲಿದ್ದು ಶಕ್ರವಾರ ಸಂಜೆ ವೈಭವದ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಕೈಕಂಬದ ಪೊಳಲಿ ದ್ವಾರದ ಬಳಿ ಹೊರೆಕಣಿಕೆ ಮೆರವಣಿಗೆಗೆ ಪೊಳಲಿ ಶ್ರೀರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಉದ್ಯಮಿ ರಘುಸಪಲ್ಯ ಚಾಲನೆ ನೀಡಿದರು. ಭಜನಾ ತಂಡ, ಬಣದ ಕೊಡೆಗಳು, ಕಲಶ ಹೊತ್ತ ಮಹಿಳೆಯರು, ಚೆಂಡೆ, ಗೊಂಬೆ ಕುಣಿತ ಮೆರವಣಿಗೆಗೆ ವಿಶೇಷ ಮೆರುಗು ನೀಡಿತು. ಕೈಕಂಬದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆರವಣಿಗೆ ಸಾಗಿ ಬಂದು ದೇವಸ್ಥಾನದಲ್ಲಿ ಸಮಾಪನಗೊಂಡಿತು. ಈ ಸಂದರ್ಭ ವ್ಯವಸ್ಥಾಪನ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಜೀಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಕಾರ್ಯಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ಕಾರಂತ್, ವಿವಿಧ ಸಮಿತಿಯ ಪದಾಧಿಕಾರಿಗಳಾದ ವಿಜಯಪ್ರಸಾದ್, ಅಶ್ವನಿ ಕುಮಾರ್ ರೈ, ಸದಾನಂದ ಶೆಟ್ಟಿ, ಐತ್ತಪ್ಪ ಆಳ್ವ…
ಬಂಟ್ವಾಳ: ಕರ್ಮ ಯೋಗ ಮತ್ತು ಭಕ್ತಿಯೋಗದ ಮೂಲಕ ದೇವರನ್ನು ಸುಲಭದಲ್ಲಿ ಒಲಿಸಿಕೊಳ್ಳಲು ಸಾಧ್ಯವಿದೆ ಎಂದು ಧರ್ಮಸ್ಥಳ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.ಅವರು ನೂತನವಾಗಿ ನಿರ್ಮಾಣಗೊಂಡ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠೆ, ಅಷ್ಟಬಂಧ, ಬ್ರಹ್ಮಕಲಶಾಭಿಷೇಕ ಮತ್ತು ಧ್ವಜಸ್ಥಂಭ ಪ್ರತಿಷ್ಠೆ ಮತ್ತು ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ಪ್ರಥಮ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಮಾನವ ಬದುಕಿನಲ್ಲಿ ಪುಣ್ಯದ ಉತ್ಕರ್ಷ ಆದಾಗ ಭಾಗ್ಯದ ಬಾಗಿಲು ತೆರೆಯುತ್ತದೆ. ಆಧ್ಯಾತ್ಮದೊಳಗೆ ಎಲ್ಲವೂ ಇದೆ. ಮಾನವನನ್ನು ಮಾಧವನನ್ನಾಗಿ ಮಾಡುವ ಶಕ್ತಿ ಆಧ್ಯಾತ್ಮಕ್ಕಿದೆ ಎಂದು ತಿಳಿಸಿದರು. ಬೆಂಗಳೂರಿನ ಉದ್ಯಮಿ ಎರಕಳ ಬಿ. ರಘುನಾಥ ಸೋಮಯಾಜಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಎ.ಜೆ. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲಉದ್ಯಮಿ ಜಗನ್ನಾಥ ಚೌಟ ಬದಿಗುಡ್ಡೆ, ಕೆ. ಎಂ.ಎಫ್ ಅಧ್ಯಕ್ಷ ಸುಚರಿತ ಶೆಟ್ಟಿ, ಅರುಣ್ ಕುಮಾರ್ ಪುತ್ತಿಲ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ಆರ್., ನ್ಯಾಯವಾದಿ…
ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಚಂಡಿಕಾ ಪರಮೇಶ್ವರೀ ದೇವಸ್ಥಾನದ ಜಾತ್ರಾಮಹೋತ್ಸವದ ಪ್ರಯುಕ್ತ ಗುರುವಾರ ಬೆಳಿಗ್ಗೆ ಶ್ರೀ ದೇವರ ದರ್ಶನ ಬಲಿ ಉತ್ಸವ ನಡೆಯಿತು. ಬಳಿಕ ಬಟ್ಟಲು ಕಾಣಿಕೆ ನಡೆದು ರಾಜಾಂಗಣ ಪ್ರಸಾದ ವಿತರಿಸಲಾಯಿತು. ಬಳಿಕ ನವಕ ಕಲಶಾಭಿಷೇಕ, ಮಹಾಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಿತು. ಹರಕೆ ಬಂದ ಸೀರೆಗಳನ್ನು ಏಲಂ ಮಾಡಲಾಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಲೋಕನಾಥ ಶೆಟ್ಟಿ, ಕಾರ್ಯದರ್ಶಿ ಇಂದೇಶ್, ಆಡಳಿತ ಸಮಿತಿ ಸದಸ್ಯರು, ಊರ ಪರವೂರ ಭಕ್ತರು ಭಾಗವಹಿಸಿದ್ದರು.
ಬಂಟ್ವಾಳ: ಬೊಳ್ಳಾಯಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಾರಿ ಸಂಘ ಇದರ ಸ್ಥಳಾಂತರಗೊಂಡ ಬೋಳಂತೂರು ಶಾಖೆಯ ಶುಭಾರಂಭ ಕಾರ್ಯಕ್ರಮ ಫೆ. 22ರಂದು ಗುರುವಾರ ಬೆಳಿಗ್ಗೆ 10 ಗಂಟೆಗೆ ಬೋಳಂತ್ತೂರಿನ ಉತ್ತಮ ನಗರದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗ್ರಾಮೀಣ ಭಾಗವಾದ ಸಜೀಪಮೂಡದಲ್ಲಿ ಆರಂಭಗೊಂಡ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇಂದು 12 ಶಾಖೆಗಳನ್ನೊಳಗೊಂಡು ಗ್ರಾಹಕರಿಗೆ ಅತ್ಯುತ್ತವಾದ ಸೇವೆಯನ್ನು ನೀಡುತ್ತಿದೆ. ಸಹಕಾರಿ ಕ್ಷೇತ್ರದಲ್ಲಿ ಹೊಸತನದ ಛಾಪನ್ನು ಮೂಡಿಸಿಕೊಂಡು ಮುನ್ನಡೆಯುತ್ತಿರುವ ಸಂಘ ಸಹಕಾರಿ ಕ್ಷೇತ್ರದಲ್ಲಿ ಕಡಿಮೆಯ ಅವಧಿಯಲ್ಲಿ ಸಾಧಿಸಿದ ಸಾಧನೆಗೆ ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆಗಳನ್ನು ವಿಸ್ತರಿಸಿಕೊಂಡು ಗ್ರಾಹಕ ಸ್ನೇಹಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಅವರು ತಿಳಿಸಿದ್ದಾರೆ.
ಬಂಟ್ವಾಳ: 1924ರಲ್ಲಿ ಆರಂಭವಾದ ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ದಿ ಸಂಭ್ರಮ ಕಾರ್ಯಕ್ರಮ ಫೆ.21 ರಿಂದ ಫೆ.24 ರ ವರೆಗೆ ಮಂದಿರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ ಎಂದು ಶತಾಬ್ದಿ ಸಂಭ್ರಮ ಸಮಿತಿ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ತಿಳಿಸಿದರು. ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಬುಧವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿಶತಾಬ್ದಿ ಕಾರ್ಯಕ್ರಮದಲ್ಲಿ ನೂತನವಾಗಿ ಶ್ರೀ ವಿದ್ಯಾಗಣಪತಿ ದೇವರ ಪ್ರತಿಷ್ಠೆ, ಶ್ರೀರಾಮಾಂಗಣ ಲೋಕಾರ್ಪಣೆ , ಮಾತೃ ಸಂಗಮ ಕಾರ್ಯಕ್ರಮ, 13 ಕೋಟಿ ರಾಮನಾಮ ತಾರಕ ಜಪಯಜ್ಞ ನಡೆಯಲಿದೆ. ಫೆ.21ರಂದು ಬುಧವಾರ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯ ನೇತ್ರಾವತಿ ನದಿಯಲ್ಲಿ ಗಂಗಾಪೂಜೆ ನೆರವೇರಿಸಿ ತೀರ್ಥ ಕಲಶಗಳನ್ನು ಮಂದಿರಕ್ಕೆ ತರುವುದು, ಬಳಿಕ ಧ್ವಜಾರೋಹಣ ನೆರವೇರಿ ಭಜನೆ ನಡೆಯಲಿರುವುದು ಬೆಳಿಗ್ಗೆ 10.30ಕ್ಕೆಶ್ರೀ ರಾಮವಿದ್ಯಾಕೇಂದ್ರದ ಮಕ್ಕಳಿಂದ ಸರಸ್ವತಿ ಪೂಜೆ ನಡೆಯಲಿದೆ., ಸಂಜೆ ೪ ಗಂಟೆಗೆ ಮಂದಿರದ ಸುತ್ತಮುತ್ತಲಿನ ಭಾಗದಿಂದ ಆಗಮಿಸಿದ ಹೊರಕಾಣಿಕೆಯನ್ನು ನರಹರಿ ಪರ್ವತ ದ್ವಾರದ ಬಳಿಯಿಂದ ಕಲ್ಲಡ್ಕ ಶ್ರೀರಾಮ ಮಂದಿರದವರೆಗೆ…








