Author: admin
ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317 ಡಿ ಲಯನ್ಸ್ ಪ್ರಾಂತ್ಯ ೫ರ ಪ್ರಾಂತೀಯ ಸಮ್ಮಿಲನ ‘ಸಂಧ್ಯಾ’ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿಯವರ ನೇತೃತ್ವದಲ್ಲಿ, ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ. ಎಂ. ಇವರ ಸಾರಥ್ಯದಲ್ಲಿ ಲಯನ್ಸ್ ಕ್ಲಬ್ ಕೊಳ್ಳಾಡು ಸಾಲೆತ್ತೂರು ಇದರ ಆತಿಥ್ಯದಲ್ಲಿ ಇರಾ ಬಂಟರ ಭವನದ ಬಿ. ವಿ. ಕಾರಂತ ವೇದಿಕೆಯಲ್ಲಿ ಸೇವಾ ಸಾರ್ಥಕ್ಯದ ಹೊಂಗಿರಣ ಶೀರ್ಷಿಕೆಯೊಂದಿಗೆ ವಿನೂತನ ರೀತಿಯಲ್ಲಿ ಭಾನುವಾರ ಸಂಜೆ ನಡೆಯಿತು. ಪ್ರಾಂತೀಯ ಪ್ರಥಮ ಮಹಿಳೆ ಸಂಧ್ಯಾ ರಮಾನಂದ ತೆಂಗಿನ ಗಿಡಕ್ಕೆ ನೀರು ಎರೆದು ಬಳಿಕ ವೇದಿಕೆಯಲ್ಲಿ ದೀಪಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭಕೋರಿದರು. ಪ್ರಧಾನ ಅತಿಥಿಯಾಗಿದ್ದ ಸರಕಾರಿ ಪದವಿಪೂರ್ವ ಕಾಲೇಜು ಸಿದ್ಧಕಟ್ಟೆ ಇಲ್ಲಿನ ಪ್ರೌಢಶಾಲಾ ವಿಭಾಗದ ಅಧ್ಯಾಪಕ ಮಹೇಶ್ ಕುಮಾರ್ ವಿ. ಕರ್ಕೇರ ಮಾತನಾಡಿ ಜಗತ್ತು ಭೂಮಿಯನ್ನು ನಪುಂಸಕ ಲಿಂಗದಿಂದ ಕರೆದರೆ ತಾಯಿ ಎನ್ನುವ ಮಾತೃಭಾವದಿಂದ ನಮ್ಮ ದೇಶದ ಹಿರಿಯರು ಕರೆದರು. ನೆಲದ ಮೆಲೆ ನಿಂತು ಆಕಾಶ ನೋಡಿ ಯಾವ ಯಾವ ಗ್ರಹಗಳು ಎಲ್ಲೆಲ್ಲಿವೆ ಎನ್ನುವುದನ್ನು ತಿಳಿಸಿಕೊಟ್ಟವರು…
ಬಂಟ್ವಾಳ: ನಾವೂರು ಗ್ರಾಮದ ಫರ್ಲಾ ಚರ್ಚ್ ಬಳಿ ಸರ್ಕಾರಿ ಬಸ್ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ನಡೆದಿದ್ದು ಈ ಸಂದರ್ಭ ಹೆದ್ದಾರಿ ಪಕ್ಕದಲ್ಲಿರುವ ಮನೆಗೆ ಸರಕಾರಿ ಬಸ್ಸು ಡಿಕ್ಕಿಯಾಗಿ ಹಾನಿಯಾಗಿದೆ. ಧರ್ಮಸ್ಥಳ ಕಡೆಯಿಂದ ಕೆಎಸ್ಆರ್ ಟಿಸಿ ಬಸ್ಸು ಬರುತ್ತಿದ್ದು ವಿರುದ್ದ ದಿಕ್ಕಿನಿಂದ ಟ್ಯಾಂಕರ್ ಲಾರಿ ಇನ್ನೊಂದು ಟ್ಯಾಂಕರ್ ಲಾರಿಯನ್ನು ಓವರ್ ಟೇಕ್ ಮಾಡುವ ಬರದಲ್ಲಿ ಪರಸ್ಪರ ಅಪಘಾತ ಸಂಭವಿಸಿ ಬಸ್ಸು ಹೆದ್ದಾರಿ ಪಕ್ಕ ಇರುವ ಭುಜಂಗ ಮೂಲ್ಯ ಎಂಬವರ ಮನೆಗೆ ಡಿಕ್ಕಿಯಾಗಿ ಹಾನಿ ಉಂಟಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾದಾಗ ಇವರ ಜಾಗವು ಭೂಸ್ವಾಧಿನವಾಗಿದ್ದು ಈ ಮನೆಯರಿಗೆ ಪರಿಹಾರ ಹಣ ಬಾರದೆ ಮನೆಯನ್ನು ಸ್ಥಳಂತರಿಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.
ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಯನ್ನು ಜನರಿಗೆ ತಿಳಿಸಬೇಕು, ಕಾಂಗ್ರೆಸ್ ಜನರಿಗೆ ಸುಳ್ಳು ಹೇಳುತ್ತಿದ್ದು ಬಿಜೆಪಿ ಕಾರ್ಯಕರ್ತರು ಜನರಿಗೆ ಸತ್ಯ ತಿಳಿಸುವ ಕಾರ್ಯ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.ಅವರು ಗ್ರಾಮ ಚಲೋ ಅಭಿಯಾನದಂಗದವಾಗಿ ಪುದು ಮಹಾಶಕ್ತಿ ಕೇಂದ್ರದ ವತಿಯಿಂದ ರಾಮಲ್ ಕಟ್ಟೆಯ ಶ್ರೀ ವೈದ್ಯನಾಥ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ ಗ್ಯಾರಂಟಿಗಳು ಜನರಿಗರ ಸಿಗುತ್ತಿಲ್ಲ, ಕಾಂಗ್ರೆಸ್ ನಾಯಕರು ಜನರಿಗೆ ಮುಖ ತೋರಿಸಿಕೊಳ್ಳಲಾಗದೆ ದೆಹಲಿಯತ್ತ ಹೋಗುತ್ತಿದ್ದಾರೆ ಎಂದು ಟೀಕಿಸಿದರು. ನಮ್ಮೆಲ್ಲರ ಹಲವು ವರ್ಷಗಳ ಕನಸಾದ ರಾಮ ಮಂದಿರ ನಿರ್ಮಾಣವನ್ನು ಮೋದಿ ಸರಕಾರ ಮಾಡಿದೆ, ಅತೀ ಹೆಚ್ಚು ಬಹುಮತದ ಮೂಲಕ ಮತ್ತೊಮ್ಮೆ ಅವರನ್ನು ಪ್ರಧಾನಿ ಮಾಡುವ ಸಂಕಲ್ಪ ತೊಡಬೇಕು ಎಂದು ತಿಳಿಸಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ ಗ್ರಾಮ ಚಲೋ ಕಾರ್ಯಕ್ರಮದಡಿ ಸಂಚಾಲಕ ಹಾಗೂ ಪ್ರವಾಸಿ ಕಾರ್ಯಕರ್ತರ ತಂಡ ಗ್ರಾಮದ ಪ್ರತೀ ಮನೆಗಳಿಗೂ ಭೇಟಿ…
ಬಂಟ್ವಾಳ: ತಾಲೂಕು ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ವತಿಯಿಂದ ಕೊಡ ಮಾಡುವ ವಿಷ್ಣು ಪ್ರಸಾದ ಪ್ರಶಸ್ತಿಯನ್ನು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್ ಪೂಂಜ ಅವರಿಗೆ ಪ್ರದಾನ ಮಾಡಲಾಯಿತು.ಮಾಜಿ ಸಚಿವ ಬಿ.ರಮಾನಾಥ ರೈ ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಸೇವೆಯಿಂದ ಸಾರ್ಥಕತೆ ಎಂಬ ಧ್ಯೇಯ ವಾಕ್ಯದಂತೆ ಆರೋಗ್ಯ, ಶಿಕ್ಷಣ, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸೇವಾಂಜಲಿ ಪ್ರತಿಷ್ಠಾನದ ಮೂಲಕ ಅನುಪಮ ಸೇವೆ ಸಲ್ಲಿಸುತ್ತಿರುವ ಕೃಷ್ಣ ಕುಮಾರ್ ಪೂಂಜ ಅವರ ಸೇವಾ ಕಾರ್ಯ ಅಭಿನಂದನೀಯ ಎಂದು ಹೇಳಿದರು. ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಪ್ರಧಾನ ಅರ್ಚಕರಾದ ಟಿ.ವಿ.ಶ್ರೀಧರ ರಾವ್ ಪೇಜಾವರ ಅವರು ಅಧ್ಯಕ್ಷತೆ ವಹಿಸಿದ್ದರು.ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಶುಭ ಹಾರೈಸಿದರು. ಸನಾತನ ಸಂಸ್ಥೆಯ ಉಪೇಂದ್ರ ಆಚಾರ್ಯ ಧಾರ್ಮಿಕ ಉಪನ್ಯಾಸ ನೀಡಿದರು. ಜಿ.ಪಂ.ಮಾಜಿ ಸದಸ್ಯ…
ಬೆಳ್ಮಣ್: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ (ರಿ.) ಸಚ್ಚೇರಿಪೇಟೆ ಹಾಗೂ ಹಿಂದು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಫೆ.10ರ ಶನಿವಾರದಂದು ಸಾಯಂಕಾಲ ಗಂಟೆ 4.00ರಿಂದ 20ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ ಜರಗಲಿದೆ.ರಾತ್ರಿ ಗಂಟೆ 7.00ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಗಂಟೆ 7.30ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ರಾತ್ರಿ ಗಂಟೆ 8.00ರಿಂದ “ಸಂತ ಸಮಾಗಮ” ಧಾರ್ಮಿಕ ಸಭೆ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಒಡಿಯೂರು ಕ್ಷೇತ್ರದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಭಾರತಭೂಷಣ ಚಾರುಕೀರ್ತಿ ಭಟ್ಟಾರಕ ಪಂಡಿತಾಚರ್ಯವರ್ಯ ಮಹಾ ಸ್ವಾಮೀಜಿ, ಶ್ರೀಧಾಮ ಮಾಣಿಲ ಕ್ಷೇತ್ರದ ಪರಮಪೂಜ್ಯ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ, ಗುರುಪುರ ಕ್ಷೇತ್ರ ವಜ್ರದೇಹಿ ಮಠದ ಪರಮಪೂಜ್ಯ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಶ್ರೀ ಕ್ಷೇತ್ರ ಬಲ್ಯೊಟ್ಟು ಮಠದ ಪರಮಪೂಜ್ಯ…
ಬಂಟ್ವಾಳ: ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.9 ಶುಕ್ರವಾರದಂದು ಅಮಾವಾಸ್ಯೆಯ ಪ್ರಯುಕ್ತ ಅಗೇಲು ಸೇವೆ ಇರುವುದಿಲ್ಲ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ಸಿದ್ದಕಟ್ಟೆ ಸಹಕಾರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇದರ 3ನೇ ಮಾವಿನ ಕಟ್ಟೆ ಶಾಖೆಯ ಉದ್ಘಾಟನಾ ಸಮಾರಂಭ ಎಲಿಯನಡುಗೋಡು ಗ್ರಾಮದ ಮಾವಿನಕಟ್ಟೆಯಲ್ಲಿರುವ ಶ್ರೀ ಚಾಮುಂಡೇಶ್ವರೀ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.ನೂತನ ಶಾಖೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿಪ್ರಾಮಾಣಿಕತೆ, ವಿಶ್ವಾಸದ ಆಧಾರದಲ್ಲಿ ನಡೆಯುತ್ತಿರುವ ಅತೀ ದೊಡ್ಡ ಆರ್ಥಿಕ ಸಂಸ್ಥೆ ಸಹಕಾರಿ ಸಂಘಗಳಾಗಿದೆ. ಬ್ಯಾಂಕಿಗಳಿಗಿಂತ ಸುಲಭವಾಗಿ ಹಣಕಾಸಿನ ಸಹಕಾರ ಸಹಕಾರಿ ಸಂಘದ ಮೂಲಕ ಸಿಗುತ್ತದೆ. ದೇಹಕ್ಕೆ ಅಂಗಗಳು ಹೇಗೆ ಪೂರಕವಾಗಿದೆಯೋ ಅದೆ ರೀತಿ ಸಹಕಾರಿ ಸಂಘ ಸಮಾಜದ ಬೆಳವಣಿಗೆಗೂ ಪೂರಕವಾಗಿದೆ. ಕಷ್ಟದಲ್ಲಿದ್ದವನಿಗೆ ಸಹಕಾರಿ ಸಂಘ ಸಹಾಯವನ್ನು ಮಾಡುತ್ತದೆ. ಈ ಸಹಕಾರಿ ಸಂಘ ಇನ್ನಷ್ಟು ಶಾಖೆಗಳನ್ನು ತೆರೆದು ಅಭಿವೃದ್ದಿಯಾಗುವುದರ ಜೊತೆಗೆ ಸಮಾಜದ ಜನರಿಗೂ ಸಹಕರಿಸುವ ಸಂಸ್ಥೆಯಾಗಲಿ ಎಂದು ಶುಭಹಾರೈಸಿದರು. ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿ ಪ್ರತೀ ಗ್ರಾಮ ಪಂಚಾಯತಿನಲ್ಲಿ ಸಹಕಾರಿ ಸಂಘಗಳನ್ನು ತೆರೆದು…
ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317 ಡಿ ಲಯನ್ಸ್ ಪ್ರಾಂತ್ಯ 5ರ ಪ್ರಾಂತೀಯ ಸಮ್ಮಿಲನ ‘ಸಂಧ್ಯಾ’ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿಯವರ ನೇತೃತ್ವದಲ್ಲಿ, ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ. ಎಂ. ಇವರ ಸಾರಥ್ಯದಲ್ಲಿ ಲಯನ್ಸ್ ಕ್ಲಬ್ ಕೊಳ್ಳಾಡು ಸಾಲೆತ್ತೂರು ಇದರ ಆತಿಥ್ಯದಲ್ಲಿ ಫೆಬ್ರವರಿ 11ರಂದು ಇರಾ ಬಂಟರ ಭವನದ ಬಿ. ವಿ. ಕಾರಂತ ವೇದಿಕೆಯಲ್ಲಿ ನಡೆಯಲಿದೆ. ಪ್ರಾಂತ್ಯ 5ರ ಕ್ಲಬ್ಗಳಾದ ಕೊಳ್ಳಾಡು ಸಾಲೆತ್ತೂರು, ಬಂಟ್ವಾಳ, ಮಂಗಳಗಂಗೋತ್ರಿ, ಚೋಟಮಂಗಳೂರು, ಲೊರೆಟ್ಟೋ ಅಗ್ರಾರ್, ಮುಡಿಪು ಕುರ್ನಾಡು, ವಾಮದಪದವು ಪ್ರಕೃತಿ, ವಿಟ್ಲ ಸಿಟಿ, ರಾಯಿ ಸಿದ್ಧಕಟ್ಟೆ ಹಾಗೂ ಅಮ್ಟೂರು ಒಳಗೊಂಡಂತೆ ಈ 10 ಕ್ಲಬ್ಗಳ ಪ್ರಾಂತೀಯ ಸಮ್ಮಿಲನವು ಸೇವಾ ಸಾರ್ಥಕ್ಯದ ಹೊಂಗಿರಣ ಶೀರ್ಷಿಕೆಯೊಂದಿಗೆ ವಿಶೇಷವಾಗಿ ಮಂಚಿ, ಇರಾ, ಕೊಳ್ಳಾಡು ಗ್ರಾಮದ ಸರಕಾರಿ ಶಾಲೆಗಳ ವಿಶೇಷ ಅಗತ್ಯಕ್ಕೆ ನೆರವಿನ ಸೇವಾ ಕಾರ್ಯಕ್ರಮದೊಂದಿಗೆ ನಡೆಯಲಿದೆ ಎಂದು ಪ್ರಾಂತ್ಯ 5ರ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಪ್ರಾಂತೀಯ ಸಮ್ಮಿಲನ ಸಮಿತಿಯ ಅಧ್ಯಕ್ಷ ದಾಮೋದರ ಬಿ.ಎಂ. ಮಾತನಾಡಿ…
ಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂನ ನೀರು ಹರಿದುಹೋಗುವ ರಭಸಕ್ಕೆ ಕೆಳಭಾಗದ ಕೃಷಿ ಭೂಮಿ ಕೊಚ್ಚಿ ಹೋದ ಸ್ಥಳಕ್ಕೆ ಒಂದೆಡೆ ಕಲ್ಲು ಹಾಕಿ ತಡೆಗೋಡೆ ನಿರ್ಮಿಸುವ ಕಾರ್ಯ ನಡೆಯುತ್ತಿದ್ದರೆ ಇನ್ನೊಂದೆಡೆ ಮತ್ತೆ ಮಣ್ಣು ಕುಸಿದು ಕೃಷಿ ಭೂಮಿ ನದಿಪಾಲಾಗುತ್ತಿದೆ. ಜಮೀನನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಬೇಕು ಎನ್ನುವ ಸಂತ್ರಸ್ತ ರೈತರಲ್ಲಿ ಭೂ ಕುಸಿತ ಮತ್ತೆ ಆತಂಕ ಹುಟ್ಟಿಸಿದೆ. ತುಂಬೆ ಡ್ಯಾಂನಿಂದ ನೀರು ಹರಿದು ಹೋಗುವ ರಭಸಕ್ಕೆ ಡ್ಯಾಂನ ಕೆಳ ಭಾಗದ ಬಲ ಪಾರ್ಶದಲ್ಲಿ ಸುಮಾರು ೯ ಮಂದಿ ರೈತರಿಗೆ ಸೇರಿದ ಕೃಷಿ ಭೂಮಿ ಕೊಚ್ಚಿಹೋಗಿ ರೈತರು ಸಂಕಷ್ಟ ಅನುಭವಿಸಿದ್ದಾರೆ. ತಮ್ಮ ಕಣ್ಣೆದುರೇ ತಾವು ಬೆಳೆದ ಅಪಾರ ಪ್ರಮಾಣದ ಅಡಿಕೆ ಹಾಗೂ ತೆಂಗಿನ ಮರ ನದಿಗೆ ಆಹುತಿಯಾಗಿದೆ. ಇತ್ತೀಚಿಗೆ ರೈತ ಸಂಘ ಹಸಿರು ಸೇನೆಯ ನೇತೃತ್ವದಲ್ಲಿ ಸ್ಥಳೀಯ ರೈತರು ತುಂಬೆ ವೆಂಟೆಡ್ ಡ್ಯಾಂಗೆ ಮುತ್ತಿಗೆ ಹಾಕಿ ಕೃಷಿ ಭೂಮಿ ಕಳಕೊಂಡ ರೈತರಿಗೆ ಪರಿಹಾರ ಹಾಗೂ ಪರ್ಯಯ ವ್ಯವಸ್ಥೆ ಒದಗಿಸುವಂತೆ ಆಗ್ರಹಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಮನಪಾ…
ಬಂಟ್ವಾಳ: ವೆಲಂಕಣಿ ಆರೋಗ್ಯ ಮಾತೆ ದೇವಾಲಯ ಫರ್ಲಾ, ಇಲ್ಲಿಯ ಸ್ತ್ರೀ ಸಂಘಟನೆಯ ರಜತ ಮಹೋತ್ಸವವು ಭಾನುವಾರ ನಡೆಯಿತು. ದಿವ್ಯ ಬಲಿ ಪೂಜೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ಸಭಾ ಕಾರ್ಯಕ್ರಮ ನೆರವೇರಿತು. ಚರ್ಚಿನ ಧರ್ಮಗುರು ವಂ. ಜೋನ್ ಪ್ರಕಾಶ್ ಪಿರೇರಾ ಮಾತನಾಡಿ ಕುಟುಂಬ, ಸಮಾಜ ಮತ್ತು ಪ್ರತಿಯೊಂದು ಕ್ಷೇತ್ರದಲ್ಲಿ ಸ್ತ್ರೀಯರ ಪಾತ್ರ ಮಹತ್ವದ್ದಾಗಿದ್ದು, ೨೫ ವರ್ಷಗಳ ಅವಧಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಎಲ್ಲಾ ಸ್ತ್ರೀಯರನ್ನು ಸ್ಮರಿಸಿದರು. ಧರ್ಮ ಪ್ರಾಂತ್ಯದ ಸ್ತ್ರೀ ಸಂಘಟನೆಯ ನಿರ್ದೇಶಕರಾದ ವಂ ಫ್ರಾನ್ಸಿಸ್ ಡಿಸೋಜರವರು ಮಾತನಾಡಿದರು. ವೇದಿಕೆಯಲ್ಲಿ ಪ್ರಥಮ ಅಧ್ಯಕ್ಷೆ ಐರಿನ್ ಮಸ್ಕರೇನ್ಹಸ್, ವಂ.ಅರುಣ್ ರೊಡ್ರಿಗಸ್, ಪ್ರಾಂತೀಯ ಅಧ್ಯಕ್ಷೆ ಗ್ರೇಟ್ಟಾ ಪಿಂಟೋ, ವಲಯ ಅಧ್ಯಕ್ಷೆ ಗ್ರೇಟ್ಟಾ ಫೆರ್ನಾಂಡಿಸ್, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷರು, ಕಾರ್ಯದರ್ಶಿ ಮತ್ತಿತರರು ಉಪಸ್ಥಿತರಿದ್ದರು. ಈವರೆಗೆ ಸೇವೆ ಸಲ್ಲಿಸಿದ ಪದಾಧಿಕಾರಿಗಳನ್ನು ಹಾಗೂ ವಿಶೇಷ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಲಾಯಿತು.ವಿವಿಧ ಸಂಘಟನೆಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು. ಅಧ್ಯಕ್ಷೆ ಐರಿನ್ ಡಿಸೋಜ ಸ್ವಾಗತಿಸಿ, ವಂದಿಸಿದರು. ಕಾರ್ಯದರ್ಶಿ ಜೊಯ್ಸ್ ಡಿಸೋಜರವರು ವರದಿ ವಾಚಿಸಿದರು.ಝೀಟಾ ಮಿನೇಜಸ್…








