Author: admin

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ದವಸಧಾನ್ಯ ವಿತರಣ ಕಾರ್ಯಕ್ರಮ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಆಶ್ರಯದಲ್ಲಿ ಬ್ಯಾಂಕ್ ಆಫ್ ಬರೋಡ ಇದರ ಸಹಕಾರದೊಂದಿಗೆ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಶಿವಕುಮಾರ್ ಪಿ. ಮಾತನಾಡಿ ಕೆ. ಎಸ್.ಹೆಗ್ಡೆ ಆಸ್ಪತ್ರೆಯವರೊಂದಿಗೆ ಕೈ ಜೋಡಿಸಿಕೊಂಡು ಕೃಷ್ಣಕುಮಾರ್ ಪೂಂಜ ಅವರು ಕಳೆದ ೪೦ ವರ್ಷಗಳಿಂದ ಸೇವಾ ಕಾರ್ಯಕಮವನ್ನು ನಡೆಸಿಕೊಂಡು ಬಂದಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ, ಕ್ಷಯ ರೋಗಿಗಳು ಇಲ್ಲಿ ನೀಡುವ ಪೌಷ್ಟಿಕ ಆಹಾರವನ್ನು ಸೇವಿಸಿಕೊಂಡು ರೋಗ ಮುಕ್ತರಾಗಿ ಆರೋಗ್ಯವಂತ ಜೀವನ ನಡೆಸಬೇಕೆಂದು ತಿಳಿಸಿದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ೧೭ ತಿಂಗಳಿನಿಂದ ಈ ಕಾರ್ಯಕ್ರಮವನ್ನು ದಾನಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ನಡಸಿಕೊಂಡು ಬರುತ್ತಿದ್ದೇವೆ. ಸುಮಾರು ೬ ಲಕ್ಷ ರೂಪಾಯಿಯನ್ನು ಖರ್ಚು ಮಾಡಲಾಗಿದ್ದು ಈವರೆಗೆ ಸುಮಾರು ೯೮ ಕ್ಷಯ ರೋಗಿಗಳನ್ನು ಗುರುತಿಸಿ ಅವರಿಗೆ ಆಹಾರದ…

Read More

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರು ಸಮೃದ್ದವಾಗಿದ್ದು, ೧೬೦ ಎಂಎಲ್‌ಡಿ ನೀರು ಮಂಗಳೂರಿಗೆ ಸರಬರಾಜಾಗುತ್ತಿದೆ. ಉಳ್ಳಾಲ, ಮೂಲ್ಕಿಯ ಜೊತೆಗೆ ಸುತ್ತಲಿನ ಗ್ರಾಮೀಣ ಪ್ರದೇಶದ ಜನತೆಗೆ ಕುಡಿಯುವ ನೀರು ಒದಗಿಸುವ ಜೀವನದಿ ನೇತ್ರಾವತಿ ಫೆಬ್ರವರಿ ತಿಂಗಳಿನಲ್ಲಿಯೂ ಪೂರ್ಣವಾಗಿ ತುಂಬಿಕೊಂಡು ಡ್ಯಾಂನ ಒಂದು ಗೇಟ್ ಮೂಲಕ ಹೆಚ್ಚುವರಿ ನೀರನ್ನು ಹೊರಗೆ ಹರಿಯಲು ಬಿಡುತ್ತಿದ್ದೇವೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು. ಅವರು ತುಂಬೆ ವೆಂಟೆಡ್ ಡ್ಯಾಂನಲ್ಲಿ ಸೋಮವಾರ ಗಂಗಾಪೂಜೆ ನೆರವೇರಿಸಿ ಬಳಿಕ ನೇತ್ರಾವತಿ ನದಿಗೆ ಭಾಗಿನ ಅರ್ಪಿಸಿ ಮಾತನಾಡಿದರು. ಕಳೆದ ಸಾಮಾನ್ಯ ಸಭೆಯಲ್ಲಿ ನೀರಿನ ಸಮಸ್ಯೆ ಬಗ್ಗೆ ಸದಸ್ಯರು ಪ್ರತಿಭಟನೆಯನ್ನು ಮಾಡಿದ್ದು ತಕ್ಷಣ ನಾಲ್ಕು ತಂಡವನ್ನು ಮಾಡಿ ಕಾರ್ಯಚರಣೆ ನಡೆಸಿ ಅನಧಿಕೃತ ನಳ್ಳಿ ನೀರಿನ ಸಂಪರ್ಕವನ್ನು ಪತ್ತೆ ಮಾಡಿ ಸಂಪರ್ಕ ಕಡಿತಗೊಳಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದರು. ಕೋಟ್ಯಂತರ ರೂ. ವೆಚ್ಚದಲ್ಲಿ ಡ್ಯಾಂ ಕಟ್ಟಿ, ಜನರಿಂದ ಶುಲ್ಕ ಪಡೆದು ಕುಡಿಯುವ ನೀರನ್ನು ಮಂಗಳೂರಿನ ಜನತೆಗೆ ಪೂರೈಸಲಾಗುತ್ತಿದೆ. ಆದರೆ ಕೆಲವೊಂದು ಗ್ರಾಮೀಣ…

Read More

ಬಂಟ್ವಾಳ: ರಾಜ್ಯ ಅರಣ್ಯ ಸಚಿವ ಈಶ್ವರ ಖಂಡೆ ಅವರು ಸೋಮವಾರ ರಾತ್ರಿ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿಯವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.ತನ್ನ ಇಂದಿನ ಸ್ಥಾನಮಾನಗಳಿಗೆ ಪೂಜಾರಿಯವರ ಮಾರ್ಗದರ್ಶನವೇ ಕಾರಣ ಎಂದು ಪೂಜಾರಿಯವರನ್ನು ಕೊಂಡಾಡಿದ ಈಶ್ವರ್ ಖಂಡ್ರೆಯವರು ಸಚಿವನಾದ ಬಳಿಕ ಇದೇ ಮೊದಲ ಭಾರಿಗೆ ಮಂಗಳೂರಿಗೆ ಬಂದಿದ್ದು ನಿಮ್ಮ ಆಶಿರ್ವಾದ ಪಡೆಯುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ ಎಂದರು. ಕಾಂಗ್ರೆಸ್ ನಾಯಕರನ್ನು ನೋಡಿ ಇದು ನನ್ನ ಕುಟುಂಬ ಎಂದು ನಗುಬೀರಿದ ಪೂಜಾರಿ ಉತ್ತಮ ಕೆಲಸ ಮಾಡುವಂತೆ ಆಶೀರ್ವದಿಸಿದರು. ಈ ಸಂದರ್ಭ ಮಾಜಿ ಸಚಿವ ಬಿ. ರಮಾನಾಥ ರೈಯವರ ಪರವಾಗಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಹೂಗುಚ್ಛ ನೀಡಿ ಬರಮಾಡಿಕೊಂಡರು. ಕಾಂಗ್ರೆಸ್ ನಾಯಕರಾದ ರಕ್ಷಿತ್ ಶಿವರಾಮಯ್ಯ, ವೆಂಕಪ್ಪ ಪೂಜಾರಿ, ಈಶ್ವರ್ ಖಂಡ್ರೆಯವರ ಪುತ್ರ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಬಂಟ್ವಾಳ: ಜಿಲ್ಲೆಯ ಅತ್ಯಂತ ಕಾರಣಿಕ ಪ್ರಸಿದ್ದ ದೈವ ಕ್ಷೇತ್ರವಾದ ಪಣೋಲಿಬೈಲು ಕಲ್ಲುರ್ಟಿ ಕ್ಷೇತ್ರದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹರಕೆ ಕೋಲವನ್ನು ಭಾನುವಾರ ರಾತ್ರಿ ಸಲ್ಲಿಸಿದ್ದಾರೆ.ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ಯು.ಟಿ. ಕಾದರ್ ಅವರು ದೈವಸ್ಥಾನಕ್ಕೆ ಭೇಟಿ ನೀಡಿ ಸಂಪ್ರದಾಯ ಬದ್ದವಾಗಿ ಕೋಲ ನೆರವೇರಿದ್ದರು. ಸ್ವತಃ ಖಾದರ್ ಅವರೇ ದೈವಗಳಿಗೆ ಹೂವಿನ ಹಾರವನ್ನು ಹಾಕಿ ಶ್ರದ್ದೆಯಿಂದ ಪಾಲ್ಗೊಂಡಿದ್ದರು. ಆಕ್ಷೇಪ:ಯು.ಟಿ. ಖಾದರ್ ಅವರು ಪಣೋಲಿಬೈಲು ಕೋಲದಲ್ಲಿ ಭಾಗಿಯಾಗಿರುವ ಬಗ್ಗೆ ಸಾಮಾಜಿಕ ಜಾಲಾತಾಣಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಧಾರ್ಮಿಕ ಮುಖಂಡರೋರ್ವರು ತನ್ನ ಸಾಮಾಜಿಕ ಜಾಲಾತಾಣದಲ್ಲಿ ಖಾದರ್ ಹಿಂದೂ ಸಂಪ್ರದಾಯದ ಭೂತರಾಧನೆಯಲ್ಲಿ ಭಾಗವಹಿಸಿರುವುದಕ್ಕೆ ಕಿಡಿ ಕಾರಿದ್ದಾರೆ.

Read More

ಬಂಟ್ವಾಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳ ಇದರ ಆಶ್ರಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಯುಷ್ಮಾನ್ ಆರೋಗ್ಯ ಮಂದಿರ ಜಕ್ರಿಬೆಟ್ಟುವಿನಲ್ಲಿ ಉದ್ಘಾಟನೆಗೊಂಡಿತು.ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರಾದ ಮೀನಾಕ್ಷಿ ಜೆ. ಗೌಡ, ಜನಾರ್ದನ, ಜಯಂತ್ ಕುಲಾಲ್ ಸಮುದಾಯ ಆರೋಗ್ಯ ಅಧಿಕಾರಿ ಜಯಂತಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

Read More

ಬಂಟ್ವಾಳ: ವಾಹನ ಮನೆಯಲ್ಲಿದ್ದರೂ ಟೋಲ್‌ಗೇಟ್‌ಗೆಂದು ಖಾತೆಯಿಂದ ಹಣ ಕಡಿತವಾಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಗ್ರಾಹಕರು ಈ ಹಗಲು ದರೋಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಕಳೆದ ದಿನಗಳ ಹಿಂದೆಯಷ್ಟೇ ಬಂಟ್ವಾಳದ ಉದ್ಯಮಿಯೊಬ್ಬರ ಕಾರು ಮನೆಯಲ್ಲಿಯೇ ಇದ್ದರೂ ಕೂಡ ಬ್ರಹ್ಮರಕೂಟ್ಲು ಟೋಲ್‌ಗೇಟ್‌ಗಾಗಿ ತನ್ನ ಖಾತೆಯಿಂದ ಹಣ ಕಡಿತಗೊಂಡಿರುವ ಬಗ್ಗೆ ದೂರಿಕೊಂಡಿದ್ದರು. ಕಳೆದ ಗುರುವಾರ ಬಂಟ್ವಾಳದ ವೈದ್ಯರೊಬ್ಬರ ಖಾತೆಯಿಂದಲೂ ಟೋಲ್ ಸುಂಕವೆಂದು ಹಣ ಕಡಿತಗೊಂಡಿದೆ. ಡಾ. ಬಾಲಕೃಷ್ಣ ಅಗ್ರಬೈಲು ಅವರ ಕಾರು ಮನೆಯಲ್ಲಿಯೇ ಇದ್ದರೂ ಕೂಡ ರಾತ್ರಿ 7.30ರ ವೇಳೆಗೆ ಹಣ ಕಡಿತಗೊಂಡು ಅದರ ಮೆಸೆಜ್ ಮೋಬೈಲ್‌ಗೆ ಬಂದಿದೆ. ಈ ಹಗಲು ದರೋಡೆಗೆ ಪ್ರತಿದಿನ ಗ್ರಾಹಕರು ಹಣ ಕಳೆದುಕೊಳ್ಳುತ್ತಿದ್ದು ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸಿ ಸಾರ್ವಜನಿಕರಿಗಾಗುತ್ತಿರುವ ಸಮಸ್ಯೆಯಯನ್ನು ಪರಿಹರಿಸುವಂತೆ ಆಗ್ರಹಿಸಿದ್ದಾರೆ.

Read More

ಬಂಟ್ವಾಳ: ಸಾಮಾಜಿಕ ಜಾಲಾತಾಣ ವಾಟ್ಸಪ್ ಮೂಲಕ ಬಂದ ಮೇಸ್‌ಜ್‌ನ ಮೇರೆಗೆ ಷೇರ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿ ಗ್ರಾಹಕರೊಬ್ಬರು ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿಸಿಕೊಂಡ ಘಟನೆ ಇಲ್ಲಿನ ಬಿ.ಮೂಡ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿಸುಬ್ರಾಯ ರಾಮ ಮಡಿವಾಳ 18.92 ಲಕ್ಷ ರೂಪಾಯಿ ಕಳಕೊಂಡಿದ್ದು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುಬ್ರಾಯ ಮಡಿವಾಳರ ಮೊಬೈಲ್‌ಗೆ 2023 ರ ನವೆಂಬರ್ ತಿಂಗಳಿನಲ್ಲಿ ಷೇರ್ ಟ್ರೇಡಿಂಗ್ ಗಾಗಿ ಹೂಡಿಕೆ ಮಾಡಿ ಲಾಭ ಪಡೆಯುವಂತೆ ವಾಟ್ಸ್‌ಪ್ ಮೂಲಕ ಮೇಸೆಜ್‌ಗೆ ಬಂದಿತ್ತು. ಅದಕ್ಕೆ ಸ್ಪಂದಿಸಿ ಅಪರಿಚಿತ ಆರೋಪಿಗಳು ನೀಡಿದ ಸೂಚನೆಗಳನ್ನು ಅನುಸರಿಸಿ ಜ.9 ರಿಂದ ಈವರೆಗೆ ಹಂತ ಹಂತವಾಗಿ ಆರೋಪಿಗಳು ತಿಳಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 18,92,200 ರೂ ಹಣವನ್ನು ಪಾವತಿಸಿದ್ದಾರೆ. ಆದರೆ ಆರೋಪಿಗಳು ಲಾಭಾಂಶವನ್ನು ನೀಡದೆ, ಪಾವತಿಸಿದ ಹಣವನ್ನೂ ವಾಪಾಸ್ಸು ನೀಡದೆ ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದು ಪ್ರಕರಣ ದಾಖಲಾಗಿದೆ.

Read More

ಬಂಟ್ವಾಳ: ಅಧಿಕಾರಿ ವರ್ಗದವರ ಸಹಕಾರ, ಶ್ರಮ, ಇದ್ದಾಗ ಧಾರ್ಮಿಕ ಕೇಂದ್ರಗಳು ಪವಿತ್ರ ಹಾಗೂ ಸೌಹಾರ್ದತೆಯ ತಾಣಗಳಾಗುತ್ತವೆ ಎಂದು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ. 13ರಿಂದ ಫೆ. 23ರವರೆಗೆ ನಡೆಯಲಿರುವ ಪುನಃ ಪ್ರತಿಷ್ಠೆ, ಅಷ್ಟಬಂಧ, ಬ್ರಹ್ಮಕಲಶಾಭಿಷೇಕ ಮತ್ತು ಧ್ವಜಸ್ತಂಭ ಪ್ರತಿಷ್ಠೆ ಹಾಗೂ ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ ತಾಲೂಕಿನ ಅಧಿಕಾರಿಗಳ ಸಭೆ ನಡೆಸಿ ಮಾರ್ಗದರ್ಶನ ಮಾಡಿದರು.ಬ್ರಹ್ಮಕಲಶೋತ್ಸವದ ಸಂದರ್ಭ ಸಾವಿರಾರು ಮಂದಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನಲೆಯಲ್ಲಿ ಸ್ವಚ್ಛತೆ, ಬಂದೋಬಸ್ತ್ ವಿಚಾರವಾಗಿ ಅಧಿಕಾರಿಗಳು ತಮ್ಮ ಇಲಾಖೆಯ ಮೂಲಕ ಸಹಕಾರ ನೀಡಿದಾಗ ಅದು ಯಶಸ್ವಿಯಾಗಲು ಸಾಧ್ಯವಿದೆ ಎಂದರು. ಅಧಿಕಾರಿಗಳ ಸಹಕಾರಕ್ಕಾಗಿ ಸಮಿತಿಯ ಒರ್ವ ಪದಾಧಿಕಾರಿಯನ್ನು ನೀಡಬೇಕು ಎಂದು ತಿಳಿಸಿದ ಖಾದರ್ ಬ್ರಹ್ಮಕಲಶೋತ್ಸವದ 10 ದಿನಗಳಲ್ಲೂ ಪವರ್ ಕಟ್ ಆಗದಂತೆ ಎಚ್ಚರ ವಹಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಸವಿರಾರು ಮಂದಿ ಅನ್ನ ಪ್ರಸಾದ ಸ್ವೀಕರಿಸುವುದರಿಂದ ಸ್ವಚ್ಛತೆಯತ್ತ ಗಮನ ಹರಿಸಬೇಕು ಸ್ಥಳೀಯ ಪಂಚಾಯತಿ ಜೊತೆಗೆ ಪುರಸಭೆಯ ಸಹಕಾರ ಪಡೆದು ಸೂಕ್ತ ವ್ಯವಸ್ಥೆ…

Read More

ಬಂಟ್ವಾಳ: ಮಂದಿರಗಳು ಪ್ರತಿಯೊಂದು ಊರಿನಲ್ಲಿಯೂ ಶ್ರದ್ಧಾಕೇಂದ್ರಗಳಾಗಿ ರೂಪುಗೊಳ್ಳಬೇಕು. ಅಯೋಧ್ಯೆಯಂತೆ ಬೆಳಗಬೇಕು. ಶ್ರೀ ರಾಮ ಎಲ್ಲರಿಗೂ ಆದರ್ಶವಾಗಬೇಕು. ಸಮಾಜದಲ್ಲಿ ಸಾಮರಸ್ಯವಾಗಿಸುಶಿಕ್ಷಿತರಾಗಬೇಕು ಎಂದು ಅವಧೂತ ಶ್ರೀ ವಿನಯ ಗುರೂಜಿ ಗೌರಿಗದ್ದೆಯವರು ನುಡಿದರು.ಅವರು ಕಲ್ಲಡ್ಕ ಶ್ರೀರಾಮ ಮಂದಿರ ರಾಮನಗರದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶ್ರೀ ವಿದ್ಯಾಗಣಪತಿ ದೇವರ ಗುಡಿಗೆ ಶಿಲಾನ್ಯಾಸ ಸಂದರ್ಭದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.ಶ್ರೀ ರಾಮ ಕಾರುಣ್ಯ ಮೂರ್ತಿ.ಸದ್ಗುಣವಂತ, ಸೂರ್ಯವಂಶಜ, ಅವನ ಆದರ್ಶವನ್ನು ಮೈಗೂಡಿಸಿಕೊಂಡಿರುವ ಕಲ್ಲಡ್ಕ ಪ್ರಭಾಕರ ಭಟ್ಟರು ವಿದ್ಯಾಕೇಂದ್ರದ ಮೂಲಕ ಮಕ್ಕಳಲ್ಲಿ ಆದರ್ಶ ಸಂಸ್ಕೃತಿಯ ನ್ನು ಬೆಳೆಸುತಿದ್ದಾರೆ ಎಂದರು. ಕರಾವಳಿಯಲ್ಲಿ ದೈವಾರಾಧನಾ ಪದ್ಧತಿ ಕೌಟುಂಬಿಕ ಜೀವನವನ್ನು ಉಳಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಶ್ರೀ ರಾಮಾಂಜನೇಯ ಸೇವಾಟ್ರಸ್ಟ್ ಅಧ್ಯಕ್ಷ ಡಾ.ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಿದ್ದರು.ಅತಿಥಿಗಳಾಗಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀ ನಿವಾಸ ಪೂಜಾರಿ ಬೆಂಗಳೂರಿನ ಎಂ.ಆರ್.ಜಿ.ಗ್ರೂಪ್ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಮಾಜಿಸಚಿವ ಕೃಷ್ಣ ಜೆ.ಪಾಲೆಮಾರ್,ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ಉದ್ಯಮಿ ಸಂತೋಷ ಜಿ.ಶೆಟ್ಟಿ ದಲಂಬಿಲ ಮುಂಬಯಿ,ಅನಂತ ಮೂರ್ತಿ ಸಿರ್ಸಿ ಭಾಗವಹಿಸಿದ್ದರು.ಶ್ರೀ…

Read More

ಬಂಟ್ವಾಳ: ನಾವೂರು ಗ್ರಾಮದ ಶ್ರೀ ಸುಬ್ರಾಯವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದಲ್ಲಿ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಕ್ಷೇತ್ರದ ತಂತ್ರಿಗಳಾದ ನಡ್ವಾಂತಾಡಿ ಶ್ರೀಪಾದ ಪಾಂಗಣ್ಣಯರ ನೇತೃತ್ವದಲ್ಲಿ ನಡೆಯಿತು. ಸಂಜೆ ಸ್ವಸ್ತಿ ಪುಣ್ಯಾಹ ವಾಚನ, ದುರ್ಗಾ ನಮಸ್ಕಾರ ಪೂಜೆ, ಮಹಾಪೂಜೆ, ಉತ್ಸವ ಬಲಿ, ವಸಂತಕಟ್ಟೆ ಪೂಜೆ ನಡೆಯಿತು. ಊರ ಪರವೂರ ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

Read More