Author: admin
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸಂದೀಪ್ ಮೊಡಂಕಾಪು ಆಯ್ಕೆಯಾಗಿದ್ದಾರೆ.ಸಂಘದ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು ಗೌರವ ಅಧ್ಯಕ್ಷರಾಗಿ ಉಮೇಶ್ ಸಾಲ್ಯಾನ್ ಹಾಗು ಇಸ್ಮಾಯಿಲ್ ತುಂಬೆ, ಉಪಾಧ್ಯಕ್ಷರಾಗಿ ಇರ್ಫಾನ್ ಪಲ್ಲಮಜಲ್,ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ನೋರ್ಣಡ್ಕಜೊತೆ ಕಾರ್ಯದರ್ಶಿಯಾಗಿ ಪುರುಷೋತ್ತಮ ಬೆದ್ರಗುಡ್ಡೆಆಯ್ಕೆಯಾದರು.
ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿಯ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುವಂತೆ ಬ್ಯಾಂಕ್ ಆಫ್ ಬರೋಡಾದ ಬಂಟ್ವಾಳ ಶಾಖೆ ವತಿಯಿಂದ ಕಲಿಕಾ ಆಟಿಕೆಗಳನ್ನು ಮಂಗಳವಾರ ಜ.30ರಂದು ಹಸ್ತಾಂತರಿಸಲಾಯಿತು. ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ್ ವಾಮನ್ ನಾಯಕ್ ಮತ್ತು ಸಿಬಂದಿ ಹಾಗೂ ಹಳೆ ವಿದ್ಯಾರ್ಥಿ ಚೇತನ್ ಕುಮಾರ್ ಅವರು ಮುಖ್ಯೋಪಾಧ್ಯಾಯರಾದ ಲಕ್ಷ್ಮೀ ಕೆ. ಅವರಿಗೆ ಹಸ್ತಾಂತರ ಮಾಡಿ ಇದು ಮಕ್ಕಳಿಗೆ ಉಪಯೋಗವಾಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭ ಎಸ್.ಡಿ.ಎಂ.ಸಿ. ಅಧ್ಯಕ್ಷ ಹರೀಶ ಮಾಂಬಾಡಿ, ಸಹಶಿಕ್ಷಕರಾದ ತಾಹಿರಾ, ಸುಶೀಲಾ, ಶಿಕ್ಷಕಿಯರಾದ ಪೂರ್ಣಿಮಾ, ಲಾವಣ್ಯ ಉಪಸ್ಥಿತರಿದ್ದರು.
ಮಂಗಳೂರು: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು. ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರುಗಳ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು. ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಬಂಟ್ವಾಳ: ಸಜೀಪ ಸಮೀಪದ ಕೋಟೆಕಣಿಯಲ್ಲಿ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಸುಮಾರು 2 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ.ಬಂಟ್ವಾಳ ಹಾಗೂ ಪಾಂಡೇಶ್ವರ ಅಗ್ನಿಶಾಮಕ ವಾಹನಗಳು ತೆರಳಿ ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಶಬೀರ್ ಅವರಿಗೆ ಸೇರಿದ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಮರದ ಅವಶೇಷ ರಾಶಿ ಹಾಕಿದ್ದ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.ಕಾರ್ಯಾಚರಣೆಯಲ್ಲಿ ಪಾಂಡೇಶ್ವರ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜ, ಬಂಟ್ವಾಳ ಅಗ್ನಿಶಾಮಕ ಠಾಣೆಯ ಸಿಬಂದಿ ಚಂದ್ರಕಾಂತ, ಪುರುಷೋತ್ತಮ, ರಾಜೇಶ್ ಶೆಟ್ಟಿ, ಕಿರಣ್ ಕುಮಾರ್, ರುಕ್ಕಯ್ಯ ಅಮೀನ್, ಕೆ.ಸುರೇಂದ್ರ, ನಾಗರಾಜ್, ಜಾಂಟಿ ಭಾಗವಹಿಸಿದ್ದರು.
ಬಂಟ್ವಾಳ: ಇಲ್ಲಿನ ತಾಲೂಕು ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ ಬಿ ಕೂಡಲಗಿ ಅವರು ಭಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ತಹಶೀಲ್ದಾರರಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಗೌರವಿಸಿ ಬೀಳ್ಕೊಡಲಾಯಿತು. ಬಿ.ಸಿ. ರೋಡಿನಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ನೂತನ ತಹಶೀಲ್ದಾರ್ ಅರ್ಚನಾ ಭಟ್ ರವರು ಮಾತನಾಡಿ ಹೊಸತನ್ನು ಕಲಿಯುವ ಛಲ ಮತ್ತು ಧೈರ್ಯ ಇದ್ದರೆ ಯಾವುದೇ ಕರ್ತವ್ಯವನ್ನಾದರೂ ಸುಲಭವಾಗಿ ನಿರ್ವಹಿಸಬಹುದು. ತಾಲೂಕು ಆಡಳಿತದ ಯಶಸ್ಸಿಗೆ ಎಲ್ಲರೂ ಒಂದಾಗಿ ದುಡಿಯೋಣ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಎಸ್.ಬಿ. ಕೂಡಲಗಿ ಅವರು ಬಂಟ್ವಾಳ ತಾಲೂಕಿನ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಅತ್ಯುತ್ತಮವಾದ ಸಹಕಾರ ನೀಡಿದ್ದರಿಂದಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಯಿತು ಎಂದರು. ಬಂಟ್ವಾಳ ತಾಲೂಕು ಕಛೇರಿ ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು, ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ತಹಶೀಲ್ದಾರರಿಗೆಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು, ರಾಜೇಶ್ ನಾಯ್ಕ್, ದಿವಾಕರ ಮುಗುಳಿಯ…
ಬಂಟ್ವಾಳ: ತಾಲೂಕಿನ ಅಮ್ಮುಂಜೆ ಗ್ರಾಮದ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಭಾನುವಾರ ಬ್ರಹ್ಮ ಶ್ರೀ ಸುಬ್ರಹ್ಮಣ್ಯ ತಂತ್ರಿ ಹಾಗೂ ವೆಂಕಟೇಶ್ ತಂತ್ರಿ ಅವರ ನೇತೃತ್ವದಲ್ಲಿ ಶ್ರೀ ದೇವರಿಗೆ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವವು ನೆರವೇರಿತು. ಬೆಳಿಗ್ಗೆ ೧೦.೦೫ರ ಮೀನ ಲಗ್ನ ಸುಮೂಹೂರ್ತದಲ್ಲಿ ಅಪಾರ ಸಂಖ್ಯೆಯ ಭಕ್ತರ ಉಪಸ್ಥಿತಿಯಲ್ಲಿ ಬ್ರಹ್ಮಕಲಶಾಭಿಷೇಕ ನಡೆದು ಧಾರ್ಮಿಕ ಸಭೆ ನಡೆಯಿತು. ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ, ಸಂಸದ ನಳೀನ್ ಕುಮಾರ್ ಕಟೀಲು, ಮಾಜಿ ಸಚಿವ ಬಿ.ರಮಾನಾಥ ರೈ ಮತ್ತಿತರ ಗಣ್ಯರು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕೊಂಜಾಲುಗುತ್ತು ದಿವಾಕರ ಶೆಟ್ಟಿ, ಅಮುಂಜೆಗುತ್ತು ಯಶೋಧ ಡಿ.ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷ ಕೃಷ್ಣಕುಮಾರ ಪೂಂಜ, ಸಂತೋಷ್ ಶೆಟ್ಟಿ, ರಂಗನಾಥ್ ಶೆಟ್ಟಿ, ರವೀಂದ್ರ ಶೆಟ್ಟಿ, ಲಕ್ಷ್ಮೀಪ್ರಸಾದ್ ಶೆಟ್ಟಿ, ಡಾ. ಮಂಜಯ್ಯ ಶೆಟ್ಟಿ, ಸತ್ಯಪ್ರಸಾದ್ ಶೆಟ್ಟಿ ಅಮುಂಜೆಗುತ್ತು, ದಕ್ಷರಾಜ್ ಶೆಟ್ಟಿ, ಸುದೇಶ್ ರೈ ಬಾರಿಂಜೆ, ಸಂಪತ್ ಕುಮಾರ್ ಶೆಟ್ಟಿ, ದೇವದಾಸ್ ಹೆಗ್ಡೆ ಅಮುಂಜೆಗುತ್ತು, ನಿಕ್ಷಾ ನಾಯ್ಕ್ , ಪ್ರಫುಲ್ಲ ವಿ. ಶೆಟ್ಟಿ, ಜ್ಯೋತಿ…
ಬಂಟ್ವಾಳ: ಶಾಲಾ ಬಾಲಕಿಯೊಬ್ಬಳು ತನ್ನ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿ ಗಮನ ಸೆಳೆದಿದ್ದಾಳೆ.ತಾಲೂಕಿನ ಕಣಿಯೂರು ಸರಕಾರಿ ಪ್ರಾಥಮಿಕ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ ಹರ್ಷಿಕ ಕೇಶ ದಾನ ಮಾಡಿದ ವಿದ್ಯಾರ್ಥಿನಿಯಾಗಿದ್ದು ಕಣಿಯೂರಿನ ಲೋಕೇಶ್ ಮತ್ತು ರೇಣುಕಾ ಅವರ ಪುತ್ರಿಯಾಗಿದ್ದಾಳೆ.ತಾಯಿ ರೇಣುಕಾ ಕಾಣಿಯೂರು ಶಿಕ್ಷಕಿಯಾಗಿದ್ದು, ತನ್ನ ಮಗಳು 1ನೇ ತರಗತಿಯಲ್ಲಿ ಇರುವಾಗ ಶಾಲೆಯಲ್ಲಿ ತನ್ನ ಸಹಪಾಠಿಗಳು ಕೂದಲು ಕತ್ತರಿಸಿರುವುದನ್ನು ನೋಡಿ ಮನೆಗೆ ಬಂದು ತನ್ನ ಅಮ್ಮನಲ್ಲಿ ತನ್ನ ಕೂದಲನ್ನು ಕತ್ತರಿಸುವಂತೆ ಹೇಳಿದಾಗ ಬೇಡ ಎಂದಿದ್ದರು. ಕೂದಲು ಉದ್ದ ಬಂದ ಮೇಲೆ ಕತ್ತರಿಸಿದರೆ ಕೂದಲು ಇಲ್ಲದ ಅದೆಷ್ಟೋ ಮಂದಿಗೆ ನಮ್ಮ ಕೂದಲು ನೀಡಿ ಅವರು ಸುಂದರವಾಗಿ ಕಾಣುವಂತೆ ಮಾಡಬಹುದು ಎಂದು ಹೇಳಿ ಕೂದಲು ಇಲ್ಲದ ಕ್ಯಾನ್ಸರ್ ಪೀಡಿತರ ಫೋಟೋ ತೋರಿಸಿದರು, ಆ ದಿನದಿಂದ ಮಗು ಕೂದಲು ಬೆಳೆಸವ ಯೋಚನೆಯಲ್ಲಿ ಇತ್ತು, ಪೋಷಕರು ಮರೆತರು ಮಗು ಈ ವಿಚಾರ ಮರೆತಿರಲಿಲ್ಲ. ಪ್ರತಿ ವಾರ ತನ್ನ ಕೂದಲನ್ನು ಅಳತೆ ಮಾಡುತ್ತಿದ್ದ ಹರ್ಷಿತಾ ಇತ್ತೀಚೆಗೆ ಅಮ್ಮ ನನ್ನ…
ಲೊರೆಟ್ಟೊ: ಬೆಂಕಿ ಅವಘಡ, ಅಗ್ನಿಗೆ ಬಲಿಯಾದ ದಂಪತಿ ಬಂಟ್ವಾಳ: ಬೆಂಕಿ ಅವಘಡಕ್ಕೆ ಸಿಕ್ಕಿ ದಂಪತಿ ಸುಟ್ಟು ಮೃತಪಟ್ಟ ಘಟನೆ ಬಂಟ್ವಾಳದ ಅಮ್ಟಾಡಿ ಗ್ರಾ.ಪಂ. ವ್ಯಾಪ್ತಿಯ ತುಂಡು ಪದವು ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಗಿಲ್ಬರ್ಟ್ ಕಾರ್ಲೋ ( 78) ಹಾಗೂ ಕ್ರಿಸ್ಟಿನಾ ಕಾರ್ಲೋ ಕಾರ್ಲೊ ( 70) ಮೃತಪಟ್ಟ ದುರ್ದೈವಿಗಳು.ಮನೆಯ ಪಕ್ಕ ಕಸ ಕಡ್ಡಿಗೆ ಹಾಕಿದ ಬೆಂಕಿ ವ್ಯಾಪಿಸಿ ಮನೆಯ ಸಮೀಪದ ಕಾಡನ್ನು ಆವರಿಸಿದ ವೇಳೆ ಅದನ್ನು ನಂದಿಸಲು ತೆರಳಿದ ವೃದ್ದ ದಂಪತಿಗಳು ಬೆಂಕಿಗೆ ಸಿಕ್ಕಿ ಸುಟ್ಟು ಹೋಗಿದ್ದಾರೆ. ಮೃತರಿಗೆ 3 ಮಕ್ಕಳಿದ್ದು ಇಬ್ಬರು ವಿದೇಶದಲ್ಲಿ ಇನ್ನೊಬ್ಬಕೆ ಮಂಗಳೂರಿನಲ್ಲಿ ನೆಲೆಸಿದ್ದು ಮನೆಯಲ್ಲಿ ಇಬ್ಬರು ದಂಪತಿಗಳು ಮಾತ್ರ ವಾಸವಿದ್ದರು ಎಂದು ತಿಳಿದು ಬಂದಿದೆ. ಭಾನುವಾರ ಮಧ್ಯಾಹ್ದದ ವೇಳೆಗೆ ಘಟನೆ ನಡೆದಿದೆ. Advertisement
ಬಂಟ್ವಾಳ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ವತಿಯಿಂದ ೧೬ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಮಾ.೨೪ ರಂದು ಆದಿತ್ಯವಾರ ೧೧.೨೧ ರ ವೃಷಭ ಲಗ್ನದ ಸುಮುಹೂರ್ತದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ, ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ ತಿಳಿಸಿದರು.ಮುಂಬಯಿ ಉದ್ಯಮಿ ಕಕ್ಯಪದವು ನಾರಾಯಣ ಶೆಟ್ಟಿ ಯವರ ಸಾರಥ್ಯದಲ್ಲಿ ೧೬ನೇ ವರ್ಷದ ಸಾಮೂಹಿಕ ವಿವಾಹ ನಡೆಯಲಿದ್ದು ನಡೆಯಲಿದ್ದು ವಿವಾಹ ಅಪೇಕ್ಷಿತ ವಧು ವರರು ಫೆ. ೨೦ ರ ಒಳಗಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಅವರು ಸುದ್ದಿಗೋಷ್ಟಿಯ ಮೂಲಕ ಮನವಿ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಕ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಮಾ.೧೭ ರಂದು ವಿವಾಹದ ಪೂರ್ವಭಾವಿಯಾಗಿ ನೊಂದಾಯಿತ ಜೋಡಿಗಳಿಗೆ ಅದ್ದೂರಿಯಾಗಿ ನಿಶ್ಚಿತಾರ್ಥ ನಡೆಯಲಿದೆ ಎಂದ ಅವರು ಮೊದಲ ವರ್ಷ ೭೯ ಜೋಡಿ ಸಾಮೂಹಿಕ ವಿವಾಹದಲ್ಲಿ ವೈವಾಹಿಕ ಜೀವನಕ್ಕೆ ಪಾದಾರ್ಪಣೆ ಮಾಡಿದ್ದು…
ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ 75ನೇ ವರ್ಷದ ಗಣರಾಜ್ಯೋತ್ಸವವನ್ನು ಬಂಟ್ವಾಳ ತಾಲೂಕಾಡಳಿತದ ವತಿಯಿಂದ ಬಿ.ಸಿ.ರೋಡಿನಲ್ಲಿ ಆಚರಿಸಲಾಯಿತು.ತಾಲೂಕು ಆಡಳಿತ ಸೌಧದ ಮುಂಭಾಗ ತಹಶೀಲ್ದಾರ್ ಎಸ್.ಬಿ. ಕೂಡಲಗಿ ಧ್ವಜಾರೋಹಣ ನೆರವೇರಿಸಿದರು. ಶಾಸಕ ರಾಜೇಶ್ ನಾಕ್ ಮತ್ತಿತರ ಗಣ್ಯರು ಉಪಸ್ಥಿತರಿದ್ದು ವಿವಿಧ ತುಕುಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.ಬಳಿಕ ಬಿ.ಸಿ.ರೋಡಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಕ್ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ತಹಶೀಲ್ದಾರ್ ಎಸ್.ಬಿ. ಕೂಡಲಗಿ ಗಣರಾಜ್ಯೋತ್ಸವ ಸಂದೇಶ ನೀಡಿ ಇಂದು ಭಾರತೀಯರಾದ ನಾವು ಹೆಮ್ಮೆ ಪಡುವ ದಿನ. ವಿಶ್ವದಲ್ಲಿಯೇ ಮಾದರಿಯಾದ ಸಂವಿಧಾನ ಭಾರತದ್ದಾಗಿದ್ದು ಸಂವಿಧಾನದಡಿಯಲ್ಲಿ ಎಲ್ಲಾ ನಾಗರಿಕರು ಸಮಾನವಾದ ಜೀವನ ಮಾಡುವ ಅವಕಾಶ ಸಿಕ್ಕಿದೆ ಎಂದು ತಿಳಿಸಿದರು. ಶಿಕ್ಷಣ ಸಂಯೋಜಕಿ ಸುಜಾತ ಕುಮಾರಿ ಪ್ರಧಾನ ಭಾಷಣ ಮಾಡಿ ಆಚರಣೆಗಳು ನಮ್ಮನ್ನು ಬೆಸೆಯುವ ಕೊಂಡಿಯಾಗಿದೆ. ಎಲ್ಲಾ ದೇಶಗಳ ಸಂವಿಧಾನವನ್ನು ಕ್ರೋಡಿಕರಿಸಿ ಅದರ ಮುಖ್ಯ ಅಂಶಗಳನ್ನು ನಮ್ಮ ಸಂವಿಧಾನದಲ್ಲಿ ಅಳವಡಿಸಲಾಗಿದೆ ಎಂದು ತಿಳಿಸಿದರು.ತೋಟಗಾರಿಕಾ ಇಲಾಖಾ ಹಿರಿಯ ಸಹಾಯಕ ನಿರ್ದೇಶಕ ಜೋ…








