Author: admin
ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದಲ್ಲಿ ಗುರುವಾರ ಪ್ರಾತಃ ಗಂಟೆ 8ರಿಂದ 8.17ರ ಮಕರ ಲಗ್ನದ ಶುಭ ಮುಹೂರ್ತದಲ್ಲಿ ಸಪರಿವಾರ ಶ್ರೀ ಶರಭೇಶ್ವರ ದೇವರಿಗೆ ಪರಿಕಲಶ ಸಹಿತ ಬ್ರಹ್ಮಕಲಶಾಭಿಷೇಕವು ವೇ|ಮೂ| ದಿನೇಶಕೃಷ್ಣ ತಂತ್ರಿಗಳ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.ಕಾರ್ಯಕ್ರಮದಲ್ಲಿ ಪುಣ್ಯಾಹ, ಗಣಪತಿ ಹವನ, ಕವಾಟೋದ್ಘಾಟನೆ, ನೀರಾಂಜನ ದರ್ಶನ, ತೈಲಾಭಿಷೇಕ, ಪಂಚಾಮೃತಾಭಿಷೇಕ, ಪ್ರಾಯಶ್ಚಿತ ಹೋಮಗಳ ಕಲಶಾಭಿಷೇಕ, ತತ್ವ ಕಲಶಾಭಿಷೇಕ, ಶ್ರೀ ಗಣಪತಿ, ಮಹಿಷಮರ್ಧಿನಿ, ವೀರಾಂಜನೇಯ ದೇವರಿಗೆ ಪರಿಕಲಶ ಸಹಿತ ಬ್ರಹ್ಮಕಲಶಾಭಿಷೇಕ, ಶ್ರೀ ರುದ್ರ ಯಾಗ, ಪ್ರಸನ್ನ ಪೂಜೆ, ಅವಸೃತ ಬಲಿ, ಪಲ್ಲ ಪೂಜೆ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ, ಮಂತ್ರಾಕ್ಷತೆ ನೆರವೇರಿತು.ದೇವಸ್ಥಾನದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ, ಅರ್ಚಕ ಜಯರಾಮ ಕಾರಂತ, ಪುರೋಹಿತ ವಿಜಯಕೃಷ್ಣ ಐತಾಳ್ ಪೂಂಜೂರು ಹಾಗೂ ವೈದಿಕ ವೃಂದ ಧಾರ್ಮಿಕ ವಿಧಿ ನೆರವೇರಿಸಿದರು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎಂ.ಎಸ್.ಶೆಟ್ಟಿ ಸರಪಾಡಿ, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಪ್ರಧಾನ ಕಾರ್ಯದರ್ಶಿ ನಾರಾಯಣ ಶೆಟ್ಟಿ ಹೊಳ್ಳರಗುತ್ತು, ಕಾರ್ಯದರ್ಶಿ…
ಕೂರಿಯಾಳ: ಅಯೋಧ್ಯೆ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠೆಯ ಹಿನ್ನೆಲೆಯಲ್ಲಿ ಶ್ರೀ ಓಂಕಾರೇಶ್ವರಿ ದೇವಿ ಭಜನಾ ಮಂದಿರ ದುರ್ಗಾನಗರದಲ್ಲಿ ರಾಮತಾರಕ ಜಪ,ಭಜನಾ ಸಂಕೀರ್ತನೆ ಹಾಗೂ ವಿಶೇಷ ಪೂಜೆ ನಡೆಯಿತು. ರಾತ್ರಿ ಮಂದಿರದ ಸುತ್ತ ಹಣತೆಗಳನ್ನು ಹಚ್ಚಲಾಯಿತು.
ಬಂಟ್ವಾಳ : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಜ. 11 ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26), ದಿನೇಶ್ ನಾಯ್ಕ (22), ಸಾಗರ್ ಶೆಟ್ಟಿ (21) ಮಂಗಳೂರು, ಐಕಳ ಗ್ರಾಮದ ರಾಕೇಶ್ ಎಲ್. ಪಿಂಟೋ (29), ಕಡಬ ಬೆಳಂದೂರು ಗ್ರಾಮದ ಎಂ.ಸೀತಾರಾಮ ಯಾನೆ ಪ್ರವೀಣ್ (36), ಸುಧೀರ್ (29) ಹಾಗೂ ದರೋಡೆಗೈದ ಚಿನ್ನಾಭರಣವನ್ನು ಸ್ವೀಕರಿಸಿದ ಮೂಲತ: ಬಂಟ್ವಾಳ ತಾಲೂಕಿನ, ಇರಾ ಗ್ರಾಮದವನಾದ ಪ್ರಸ್ತುತ ಗೌರಿ ಕಾಲುವೆ, ಚಿಕ್ಕಮಗಳೂರು ಜಿಲ್ಲೆ ವಾಸಿ ಮಹಮ್ಮದ್ ಹನೀಫ್ (49) ಎಬವರುಗಳನ್ನು ಬಂಧಿಸಲಾಗಿದ್ದು ಆರೋಪಿಗಳಿಂದ ರೂ.3.15 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ದರೋಡೆಗೆ ಬಳಸಿದ ಅಂದಾಜು ರೂ. 8 ಲಕ್ಷ ಮೌಲ್ಯದ ಇನ್ನೋವಾ ಕಾರು ಹಾಗು ಅಂದಾಜು ರೂ. 2 ಲಕ್ಷ ಮೌಲ್ಯದ ಟಾಟಾ ಇಂಡಿಕಾ ಕಾರು ವಶಪಡಿಸಿಕೊಂಡಿದ್ದಾರೆ.ಮನೆಯಲ್ಲಿ ಇಬ್ಬರು ಮಹಿಳೆಯರು ಇರುವುದನ್ನು ಖಾತ್ರಿಪಡಿಸಿ…
ಬಂಟ್ವಾಳ : ಕುಲಾಲ ಸಮುದಾಯ ಸಾಂಸ್ಕೃತಿಕವಾಗಿ ಬೆಳೆದಿದ್ದು ಪ್ರಸ್ತುತ ಶೈಕ್ಷಣಿಕವಾಗಿ, ಆರ್ಥಿಕವಾಗಿಯೂ ಬೆಳೆಯುತ್ತಿದೆ. ಕುಲಾಲರಿಗೆ ಅರ್ಹತೆಯ ಆಧಾರದ ಮೇಲೆ ಗೌರವಗಳು ಸಿಗುತ್ತಿದೆ. ಕುಲಾಲರ ಸ್ವಾಭಿಮಾನದ ಸಂಕೇತವಾಗಿರುವ ವೀರನಾರಾಯಣ ದೇವಸ್ಥಾನ ಪುನರ್ ನಿರ್ಮಾಣಗೊಂಡಿರವುದೇ ಇದಕ್ಕೆಲ್ಲಾ ಕಾರಣ ಎಂದು ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಹೇಳಿದರು. ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ಭಾನುವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆದ ಅವಿಭಜಿತ ಜಿಲ್ಲೆಯ ಕುಲಾಲ ಸಂಘಗಳ ಸಾಂಸ್ಕೃತಿಕ ಕಾರ್ಯಕ್ರಮ ಕಲಾವಳಿಗೆ-೨೦೨೪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಗುಣಮಟ್ಟವನ್ನು ಕಾಯ್ದುಕೊಂಡು ತುಳುನಾಡಿನ ಸಾಂಸ್ಕೃತಿಕ ವೈಭವವನ್ನು ತೆರೆದಿಡುವ ಕಾರ್ಯವನ್ನು ಕಲಾವಳಿ ಮಾಡಿದೆ. ಮುಂದಿನ ವರ್ಷ ಮುಂಬೈ ಕುಲಾಲ ಸಂಘದ ಸಹಕಾರದೊಂದಿಗೆ ಜಿಲ್ಲಾ ಮಾತೃ ಸಂಘ ಕಲಾವಳಿ ಆಯೋಜಿಸಲಿದೆ ಎಂದು ಘೋಷಿಸಿದರು. ಮುಂಬಯಿ ಕುಲಾಲ ಸಂಘದ ಅಧ್ಯಕ್ಷ ರಘು ಎ. ಮೂಲ್ಯ ಮಾತನಾಡಿ ಬಂಟ್ವಾಳ ಕುಲಾಲ ಸಂಘ ರಾಧಕೃಷ್ಣ ಬಂಟ್ವಾಳ ಅವರ ನೇತೃತ್ವದಲ್ಲಿ ಅತ್ಯುತ್ತಮವಾದ ಕಾರ್ಯವನ್ನು ಮಾಡಿದೆ.…
ಬಂಟ್ವಾಳ: ಇಲ್ಲಿನ ಬಂಟ್ವಾಳ ಪೇಟೆಯ ನಂದನಹಿತ್ತಲುಶ್ರೀ ವೈದ್ಯನಾಥ, ಅರಸು ಜುಮಾದಿ ಬಂಟ ದೈವಸ್ಥಾನಕ್ಕೆ ನೂತನ ಧ್ವಜಸ್ತಂಭ ತರುವ ಬಗ್ಗೆ ಹಾಗೂ ಧ್ವಜಸ್ತಂಭವನ್ನು ತೈಲಾಧಿವಾಸ ಮಾಡುವ ಬಗ್ಗೆ ಪೂರ್ವಭಾವಿ ಸಮಾಲೋಚನ ಸಭೆ ದೈವಸ್ಥಾನದಲ್ಲಿ ಭಾನುವಾರ ನಡೆಯಿತು.ಈ ಸಂದರ್ಭ ಪೊಳಲಿ ಗಿರಿಪ್ರಕಾಶ್ ತಂತ್ರಿಯವರು ಮಾರ್ಗದರ್ಶನ ಮಾಡಿದರು. ಫೆಬ್ರವರಿ 4 ರಂದು 12.44 ರ ಒಳಗಾಗಿ ವೃಷಭ ಲಗ್ನ ಸುಮುಹೂರ್ತದಲ್ಲಿ ವೈಭವದ ಮೆರವಣಿಗೆಯಲ್ಲಿ ದೈವಸ್ಥಾನಕ್ಕೆ ಕೊಡಿಮರ ತರುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ ಕೊಡಿಮರ ತರುವ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭ ರಾಮದಾಸ್ ಬಂಟ್ವಾಳ ಮಾತನಾಡಿ ಇದು ಗ್ರಾಮಸ್ಥರಿಗೆ ಸಿಕ್ಕ ಪೂರ್ವ ಜನ್ಮದ ಸುಕೃತ. ಈ ಅವಕಾಶವನ್ನು ಬಳಸಿಕೊಂಡು ಶುದ್ದಾಚಾರದಲ್ಲಿದ್ದುಕೊಂಡು ಗ್ರಾಮದ ಪ್ರತಿಯೊಬ್ಬರು ಕೈ ಸೇರಿಸಿ ಈ ಪುಣ್ಯ ಕಾರ್ಯದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದರು.ಬಾಳಿಗ ಮನೆತನದ ಸುಧೀರ್ ಬಾಳಿಗ ಕೊಡಿಮರಕ್ಕೆ ಬೆಳ್ಳಿಯ ಗರುಡ ನೀಡುವುದಾಗಿ ಘೋಷಿಸಿದರು. ಅವಿನಾಶ್ ಕಾಮತ್, ವಿವಿಧ ಮನೆತನದ ಸಂಜೀವ ಪೂಜಾರಿ ಪೆಲತ್ತಿಮಾರು, ವಿಶ್ವನಾಥ ಪೂಜಾರಿ…
ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘ ಬಂಟ್ವಾಳ ಇದರ ಆಶ್ರಯದಲ್ಲಿ ಕುಲಾಲ ಸಂಘಗಳ ಸಾಂಸ್ಕೃತಿಕ ಕಾರ್ಯಕ್ರಮ ಕಲಾವಳಿಗೆ ಹಿರಿಯ ರಂಗಕರ್ಮಿ ರಮಾ ಬಿ.ಸಿ.ರೋಡು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ದೀಪಪ್ರಜ್ವಲಿಸಿ ಚಾಲನೆ ನೀಡಿದರು.ಅವರು ಮಾತಮಾಡಿ ನಿಸ್ವಾರ್ಥ ಸೇವೆಗೆ ನಿದರ್ಶನ ದೀಪ. ತಾನು ಕತ್ತಲಲ್ಲಿದ್ದರೂ ದೀಪ ಇತರರಿಗೆ ಬೆಳಕು ನೀಡುತ್ತದೆ. ಅಂತೆಯೇ ಇಂದು ದೀಪಪ್ರಜ್ವಲಿಸುವ ಮೂಲಕ ಕಲಾಂಜಲಿ ಉದ್ಘಾಟನೆಗೊಂಡಿದೆ. ಕುಲಾಲರ ಮೂಲ ಕಲೆ. ಚಕ್ರ ಕುಲಾಲರ ಸಂಕೇತ, ಅಭಿವೃದ್ದಿಯ ಸಂಕೇತ. ಅನೇಕ ಮಂದಿ ಕಲಾವಿದರು ಕುಲಾಲ ಸಮಾಜದಲ್ಲಿದ್ದಾರೆ. ಕಲಾವಿದರಿಗೆ ವೇದಿಕೆ ಒದಗಿಸುವ ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಸಂಘದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಸ್ವಾಗತಿಸಿದರು,ಕೋಶಾಧಿಕಾರಿ ರಮೇಶ್ ಸಾಲ್ಯಾನ್ ವಂದಿಸಿದರು. ಸಂದೀಪ್ ಸಾಲ್ಯಾನ್ ಉದ್ಘಾಟಕರನ್ನು ಪರಿಚಯಿಸಿದರು. ರಂಗಕಲಾವಿದ ಎಚ್ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು
ಬಂಟ್ವಾಳ: ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘದ ವತಿಯಿಂದ ಬಿ.ಸಿ.ರೋಡ್ ನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಮತ್ತು ಇನ್ವರ್ಟರ್, ಯುಪಿಎಸ್ ಕೊಡುಗೆ ಹಸ್ತಾಂತರ ಕಾರ್ಯಕ್ರಮ ಶುಕ್ರವಾರ ಶಾಲೆಯಲ್ಲಿ ನಡೆಯಿತು.ಸಂಘದ ಜಿಲ್ಲಾಧ್ಯಕ್ಷ ಆನಂದ ಕುಮಾರ್ ಅವರು ಶಾಲಾ ಮುಖ್ಯ ಶಿಕ್ಷಕಿ ಲಕ್ಷ್ಮೀ ಕೆ. ಅವರಿಗೆ ಕೊಡುಗೆಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ ಮಾಂಬಾಡಿ ಮಾತನಾಡಿ, ಭೂಮಾಪನ ಕಾರ್ಯನಿರ್ವಾಹಕ ನೌಕರರ ಸಂಘ ಇತರ ಸಂಘಟನೆಗಳಿಗೆ ಮಾದರಿಯಾಗುವ ಕಾರ್ಯ ಮಾಡುತ್ತಿದ್ದು, ಬಿ.ಮೂಡ ಶಾಲೆಯಲ್ಲಿ ಕಂಪ್ಯೂಟರ್ ಉಚಿತ ತರಗತಿ ಆರಂಭಗೊಳ್ಳಲು ಪ್ರೇರಣೆಯಾಗಿದೆ. ತರಗತಿಗೆ ಬೇಕಾದ ಎಲ್ಲ ಸವಲತ್ತುಗಳನ್ನು ಒದಗಿಸುವ ಮೂಲಕ ಬಡ ವಿದ್ಯಾರ್ಥಿಗಳೂ ಆಧುನಿಕ ವ್ಯವಸ್ಥೆಯನ್ನು ಅರಿತುಕೊಳ್ಳುವ ಮೂಲಕ ಸ್ಪರ್ಧಾತ್ಮಕ ಜಗತ್ತಿಗೆ ತೆರೆದುಕೊಳ್ಳಲು ಅನುಕೂಲವಾಗಿದೆ ಎಂದು ಹೇಳಿದರು. ಈಗಾಗಲೇ ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ನೆತ್ತರ ಎಂಬಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ…
ಬಂಟ್ವಾಳ: ನೇತ್ರಾವತಿ ನದಿ ತೀರದ ರಮಣೀಯ ಪರಿಸರದಲ್ಲಿ ಪಶ್ಚಿಮಾಭಿಕವಾಗಿ ನಿರ್ಮಾಣಗೊಂಡಿರುವ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಶ್ರೀಶರಭೇಶ್ವರ ದೇವಸ್ಥಾನದಲ್ಲಿ ಸಪರಿವಾರ ಶ್ರೀಶರಭೇಶ್ವರ ದೇವರ ಪುನರ್ ಪ್ರತಿಷ್ಠಾಷ್ಠಬಂಧ, ನೂತನ ಧ್ವಜಸ್ತಂಭ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕವು ಜ.19 ರಿಂದ 25ರವರೆಗೆ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ದೇವಳದ ಜೀರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಜಗನ್ಮಾಥ ಶೆಟ್ಟಿ ಬದಿಗುಡ್ಡೆ ಹೇಳಿದರು.ಬುಧವಾರ ಕ್ಷೇತ್ರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ದಿನೇಶ್ ಕೃಷ್ಣ ತಂತ್ರ ವರ್ಕಾಡಿ ಅವರ ಮಾರ್ಗದರ್ಶನದಲ್ಲಿ ನೆರವೇರಲಿದೆ ಎಂದರು. ಸುಮಾರು 7 ಕೋ.ರೂ.ವೆಚ್ಚದಲ್ಲಿ ಶಿಲಾಮಯವಾಗಿ ನಿರ್ಮಾಣಗೊಂಡಿರುವ ಈ ದೇವಾಲಯಕ್ಕೆ ಸಂಸದ ನಳಿನ್ಕುಮಾರ್ ಕಟೀಲ್ ಅವರು ಧ್ವಜ ಸ್ತಂಭವನ್ನು ಹರಕೆ ರೂಪದಲ್ಲಿ ಸಮರ್ಪಿಸಿದ್ದಾರೆ. ಶಾಸಕ ರಾಜೇಶ್ ನಾಕ್ ಅವರು ತಮ್ಮ ಶಾಸಕತ್ವದ ನಿಧಿಯಡಿ 2 ಕೋ.ರೂ.ವೆಚ್ಚದಲ್ಲಿ ರಥಬೀದಿ ಸುತ್ತಲು ಕಾಂಕ್ರೀಟಿಕರಣಗೊಳಿಸುವ ಕಾರ್ಯ ನಡೆದಿದೆ ಎಂದರು.7 ದಿನಗಳ ಬ್ರಹ್ಮಕಲಶೋತ್ಸವ ಸಂಭ್ರಮದ ಪ್ರಯುಕ್ತ ಪ್ರತಿದಿನ ಧಾರ್ಮಿಕ ಸಭಾ ಕಾರ್ಯ ಕ್ರಮ ಆಯೋಜಿಸಲಾಗಿದೆ.…
ಬಂಟ್ವಾಳ: ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ ನೂತನ ಅಧ್ಯಕ್ಷರಾಗಿ ಸುರೇಶ್ ಬಂಗೇರ ಅವಿರೋಧವಾಗಿ ಪುನರಾಯ್ಕೆಗೊಂಡರು.ಸಮಿತಿಯ ೨೮ನೇ ವಾರ್ಷಿಕ ಮಹಾಸಭೆಯು ಡಾ.ಎನ್ ನರಸಿಂಹ ಹೊಳ್ಳ ಕಲಾವೇದಿಕೆಯಲ್ಲಿ ಜರಗಿದ್ದು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಕಾರ್ಯದರ್ಶಿಯಾಗಿ ಶೇಖರ್ ಕುಲಾಲ್, ಕೋಶಧಿಕಾರಿಯಾಗಿ ಎ.ದಾಮೋದರ್, ಉಪಾಧ್ಯಕ್ಷರಾಗಿ ಪ್ರಿಯಲತಾ ವಾಮನ, ಕ್ರೀಡಾಕಾರ್ಯದರ್ಶಿಯಾಗಿ ಪುರಂದರ ಶೆಟ್ಟಿ ಹಾಗೂ ಗೌರವಾಧ್ಯಕ್ಷರಾಗಿ ನರಸಿಂಹರಾಜ್ ಹೊಳ್ಳ ಆಯ್ಕೆಯಾದರು.
ಬಂಟ್ವಾಳ: ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ, ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಮಂಗಳವಾರ ನಡೆಯಿತು. ಶಾಲಾ ಸಂಚಾಲಕ ಹಾಗೂ ಅಕ್ಕರಂಗಡಿ ಜುಮ್ಮಾ ಮಸೀದಿ ಅಧ್ಯಕ್ಷ ಅಬ್ದುಲ್ ಹಮೀದ್ ಬಾವುಂಞಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ, ನಾರ್ಶಾ ಮೈದಾನ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣರಾವ್, ಪಾಣೆಮಂಗಳೂರು ಎಸ್ ಎಲ್ ಎನ್ ಪಿ ಶಾಲಾ ಮುಖ್ಯ ಶಿಕ್ಷಕಿ ಶ್ವೇತಾ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ವೇಳೆ ಶಾಲೆಯಲ್ಲಿ ಸುಮಾರು 30 ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಜಯಲಕ್ಷ್ಮಿ ಭಟ್ ಅವರಿಗೆ ಶಾಲಾಡಳಿತ ಮಂಡಳಿ ಹಾಗೂ ಹಳೆ ವಿದ್ಯಾರ್ಥಿಗಳ ವತಿಯಿಂದ 4 ಪವನ್ ಚಿನ್ನಾಭರಣ ಉಡುಗೊರೆಯಾಗಿ ನೀಡಿ ಸನ್ಮಾನಿಸಿ, ಗೌರವಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ, ಗೌರವ ಶಿಕ್ಷಕರಾದ ನಿಶಾಂತ್ ಮತ್ತು ಆಯಿಶಾ ಸುನೈನ, ಸಲಹಾ ಸಮಿತಿ ಸದಸ್ಯ ಅಬ್ದುಲ್ ರಹಿಮಾನ್,…








