Author: admin
ಬಂಟ್ವಾಳ: ತಾಲೂಕಿನ ಬಿಳಿಯೂರು ಗ್ರಾಮದ ಕುಲಗದ್ದೆ ಎಂಬಲ್ಲಿ ಪುನರ್ ನಿರ್ಮಾಣಗೊಳ್ಳಲಿರುವ ಶ್ರೀ ಉಮಾಮಹೇಶ್ವರ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಸೋಮವಾರ ನಡೆಯಿತು. ಬೆಳಿಗ್ಗೆ 9 ಗಂಟೆಯ ಶುಭಮುಹೂರ್ತದಲ್ಲಿ ವರ್ಮುಡಿ ವೇ. ಮೂ. ಗೋಪಾಲಕೃಷ್ಣ ಭಟ್ ತಂತ್ರಿಯವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಸಂಪತ್ತನ್ನು ದಾನಧರ್ಮದ ಮೂಲಕ ಪರಿವರ್ತನೆ ಮಾಡಿದರೆ ಪುಣ್ಯ ಸಂಚಯವಾಗುತ್ತದೆ. ಭಕ್ತಿಯ ಮೂಲಕ ಮುಕ್ತಿಯೆಡೆಗೆ ಸಾಗಲು ಶಿವ ನಾಮ ಸಂಕೀರ್ತನೆಯಿಂದ ಸಾಧ್ಯವಿದೆ. ಇಲ್ಲಿ ಕೇವಲ ದೇವಸ್ಥಾನಕ್ಕೆ ಮಾತ್ರವಲ್ಲದೆ ಧರ್ಮ ಹಾಗೂ ಸಂಸ್ಕೃತಿ ಯ ಪುನರುತ್ಥಾನಕ್ಕೂ ಶಿಲಾನ್ಯಾಸವಾಗಿದೆ ಎಂದ ಅವರು ಬಿಳಿಯೂರಿನಲ್ಲಿ ಉತ್ತಮ ಜನರಿರುವುದರಿಂದ ಶೀಘ್ರದಲ್ಲಿ ಕ್ಷೇತ್ರ ನಿರ್ಮಾಣ ಕಾರ್ಯ ಆಗಲಿದೆ ಎಂದರು. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಮನಶುದ್ದಿ, ಭಾವಶುದ್ದಿ, ಕರ್ಮ ಶುದ್ಧಿಯೊಂದಿಗೆ ಧನಾತ್ಮಕತೆಯಿಂದ ಚಿಂತನೆ ಮಾಡಿದಾಗ ದೇವರನ್ನು ಕಾಣಲು ಸಾಧ್ಯವಿದೆ. ಇದು ಇತಿಹಾಸ…
ಬಂಟ್ವಾಳ: ಇಲ್ಲಿನ ರೋಟರಿ ಕ್ಲಬ್ ಬಂಟ್ವಾಳಕ್ಕೆ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ.ಅವರ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು. ಭಾನುವಾರ ಸಂಜೆ ಬಿ.ಎ. ಸೋಮಯಾಜಿ ಮೆಮೋರಿಯಲ್ ರೋಟರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಅಂತರಾಷ್ಟ್ರೀಯ ರೋಟರಿ ಸಂಸ್ಥೆಯ ಮೂಲಕ ಇಂದು ಅನೇಕ ಸೇವಾ ಕಾರ್ಯಕ್ರಮಗಳು ನಡೆಯುತ್ತಿದೆ. ರೋಟರಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಸಮಾಜದ ಸೇವೆ ಮಾಡಲು ಅವಕಾಶವಿದೆ. ಬಂಟ್ವಾಳ ರೋಟರಿ ಕ್ಲಬ್ ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡಿ, ಶಾಶ್ವತ ಕೊಡುಗೆಗಳನ್ನು ನೀಡಿ ಜಿಲ್ಲೆಯ ರೋಟರಿ ಕ್ಲಬ್ ಗಳ ಪೈಕಿ ಮುಂಚೂಣಿಯಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಹಾಯಕ ಗವರ್ನರ್ ಡಾ. ಎ. ಜಯಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ನಮ್ಮ ಸೇವಾ ಪ್ರಯಾಣವನ್ನು ಪುನರ್ ಪರಿಶೀಲನೆ ಮಾಡಲು, ನಮ್ಮಚಟುವಟಿಕೆಗಳನ್ನು ಪುನರ್ ಸಂಯೋಜಿಸಲು, ಹೊಸ ಉತ್ಸಾಹದಿಂದ ಕೆಲಸ ಮಾಡಲು ಗವರ್ನರ್ ಅಧಿಕೃತ ಬೇಟಿ ಕಾರ್ಯಕ್ರಮದಿಂದ ಸಾಧ್ಯವಿದೆ ಎಂದರು. ಬಂಟ್ವಾಳ ರೋಟರಿ ಕ್ಲಬ್ ಹೃದಯವಂತಿಕೆಯಲ್ಲೂ ದೊಡ್ಡ ಕ್ಲಬ್, ಸೇವಾ ಕಾರ್ಯಗಳ…
ಬಂಟ್ವಾಳ: ಮೊಡಂಕಾಪು ಬಳಿ ರೈಲ್ವೇ ಓವರ್ ಬ್ರಿಡ್ಜ್ ಬಳಿ ಹಾಕಲಾದ ಕಬ್ಬಿಣ ಬೀಮ್ ಗೆ ಲಾರಿ ಡಿಕ್ಕಿಯಾಗಿ ಅದು ಸ್ಕೂಟರ್ ಸವಾರನ ಮೇಲೆ ಬಿದ್ದು ಆತ ಗಂಭೀರ ಗಾಯಗೊಂಡ ಘಟನೆ ಬುಧವಾರ ಸಂಜೆಯ ವೇಳೆ ನಡೆದಿದೆ. ವಾಹನ ಸಾಗಾಟದ ಕಂಟೈನರ್ ಲಾರಿ ರೈಲ್ವೇ ಮೇಲ್ಸೆತುವೆಯ ತಡೆಬೇಲಿಗೆ ಡಿಕ್ಕಿಯಾಗಿದೆ. ಈ ಸಂದರ್ಭ ಕಬ್ಬಿಣದ ಬೀಮ್ ಸೇತುವೆಯ ಅಡಿಯಲ್ಲಿ ಸಂಚರಿಸುತ್ತಿದ್ದ ಪಚ್ಚಿನಡ್ಕ ಬಳಿಕ ನೂರ್ನಡ್ಕ ನಿವಾಸಿಯ ಮೇಲೆ ಬಿದ್ದು ಅವರಿಗೆ ಗಂಭೀರ ಗಾಯವಾಗಿದೆ. ಗಾಯಾಳುವನ್ನು ತಕ್ಷಣ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಬೀಮ್ ಬಿದ್ದು ಸ್ಕೂಟರ್ ಜಖಂಗೊಂಡಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಬಂಟ್ವಾಳ : ತಾಲೂಕಿನ ಇರ್ವತ್ತೂರುಪದವು ಶ್ರೀ ಶಾರದಾ ಸೇವಾ ಟ್ರಸ್ಟ್ ಮತ್ತು ಜೆ ಸಿ ಐ ಬಂಟ್ವಾಳ ಸಹಯೋಗದಲ್ಲಿ ಮೂಡುಪಡುಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಬೇಸಿಗೆಯ “ಕಲಾ ಮತ್ತು ಶೂನ್ಯ ತ್ಯಾಜ್ಯ ಮಾಹಿತಿ ಶಿಬಿರ”ಕ್ಕೆ ಮೂಡುಪಡುಕೋಡಿ ಹಿ.ಪ್ರಾ. ಶಾಲಾ ಸಭಾಂಗಣದಲ್ಲಿ ಬುಧವಾರ ಚಾಲನೆ ನೀಡಲಾಯಿತು. ವಾಮದಪದವು ಸ. ಪ. ಪೂ. ಕಾಲೇಜಿನ ಚಿತ್ರಕಲಾ ಶಿಕ್ಷಕರಾದ ಮುರಳೀಕೃಷ್ಣ ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ,ಇರ್ವತ್ತೂರುಪದವು ಶ್ರೀ ಶಾರದಾ ಸೇವಾ ಟ್ರಸ್ಟ್ ಸ್ಥಳೀಯವಾಗಿ ಸಮಾಜಮುಖಿ ಚಟುವಟಿಕೆಯಿಂದ ಗುರುತಿಸಿಕೊಂಡಿದ್ದು, ಬೇಸಿಗೆ ಶಿಬಿರವನ್ನು ಆಯೋಜಿಸುವ ಮೂಲಕ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲು ಅವಕಾಶವನ್ನು ಒದಗಿಸಿದ್ದು,ಇದರ ಸದುಪಯೋಗಪಡೆದುಕೊಳ್ಳಬೇಕೆಂದರು. ರಂಗಭೂಮಿ ಕಲಾವಿದ ರತ್ನ ದೇವ್ ಪುಂಜಾಲಕಟ್ಟೆ ಮಾತನಾಡಿ, ಒಂದಲ್ಲ ಒಂದು ರೀತಿಯಲ್ಲಿ ಮಕ್ಕಳು ಕೂಡ ಕಲಾವಿದರೇ ಅಗಿದ್ದಾರೆ.ಇಂತಹ ಶಿಬಿರದಲ್ಲಿ ದೊರಕುವ ತರಬೇತಿಯನ್ನು ಆಸಕ್ತಿಯಿಂದ ಬಳಸಿಕೊಳ್ಳಬೇಕು ಎಂದರು. ಬಂಟ್ವಾಳ ಜೆ.ಸಿ.ಐ.ಅಧ್ಯಕ್ಷ ಕಿಶೋರ್ ಆಚಾರ್ಯ ಅವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ,ಇಂತಹ ಉಪಯುಕ್ತ ಕಾರ್ಯಕ್ರಮಗಳಿಗೆ ಜೆಸಿಐಯು ಸದಾ ಸಹಯೋಗವನ್ನು ನೀಡುತ್ತಾ ಬರುತ್ತಿದೆ.…
ಬಂಟ್ವಾಳ: ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ಆಡಳಿತ ಸಮಿಯ ನೂತನ ಅಧ್ಯಕ್ಷರಾಗಿ ಚುನಾಯಿತರಾದ ಎನ್. ಪ್ರಕಾಶ್ ಕಾರಂತ್ ನರಿಕೊಂಬು ಇವರಿಂದ ಕೂಟಬಂಧು ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಪಾಣೆಮಂಗಳೂರಿನ ಶ್ರೀ ಭಯಂಕೇಶ್ವರ ದೇವಸ್ಥಾನದಲ್ಲಿ ವಿಜ್ರಂಭಣೆಯಿಂದ ನಡೆಯಿತು. ಹಿರಿಯರಾದ ವೇದಮೂರ್ತಿ ವೆಂಕಪ್ಪಯ್ಯ ಭಟ್ ಕರ್ಬೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಾಣೆಮಂಗಳೂರು ಶ್ರೀ ಭಯಂಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಘುನಾಥ ಸೋಮಯಾಜಿ ಭಾಗವಹಿಸಿ ಮಾತನಾಡಿ ಸಾಲಿಗ್ರಾಮ ದೇವಸ್ಥಾನ ಹಾಗೂ ತನಗೂ ಇದ್ದ ಭಕ್ತಿ ಸಂಬಂಧದ ಬಗ್ಗೆ ವಿಚಾರಗಳನ್ನು ತೆರೆದಿಟ್ಟರು. ಶ್ರೀ ಗುರುನರಸಿಂಹ ದೇವರ ಅನುಗ್ರಹದಿಂದ ತಾನು ಈ ಹಂತಕ್ಕೆ ಬೆಳೆದಿರುವುದಾಗಿ ತಿಳಿಸಿದ ಅವರು ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರಕಾಶ್ ಕಾರಂತ್ ಅವರಿಗೆ ಶುಭ ಹಾರೈಸಿದರು. ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ರಮೇಶಾನಂದ ಸೋಮಯಾಜಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಈ ಸ್ಥಾನಕ್ಕೆ ಪ್ರಕಾಶ್ ಕಾರಂತ್ ಅರ್ಹ ವ್ಯಕ್ತಿ. ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದು, ಆ ಕಾರಣಕ್ಕಾಗಿ ಅವರು ಗೆದ್ದಿದ್ದಾರೆ.…
ಬಂಟ್ವಾಳ: ಸಜೀಪಮೂಡ ಗ್ರಾಮದ ಕಾಂತಾಡಿ ಗುತ್ತು ದಿ.ಐತಪ್ಪ ರೈ ಮತ್ತು ಬಾವಂತ ಕೋಡಿ ದಿ. ದೈಯಕ್ಕೂ ರೈ ಅವರ ಮೂರನೇ ಸುಪುತ್ರಿ, ಮಂಗಜೆ ದಿ.ರಘುನಾಥ ಶೆಟ್ಟಿಯವರ ಧರ್ಮಪತ್ನಿ ಶತಾಯುಷಿ ಬಾವಂತಕೋಡಿ ಲಕ್ಷ್ಮೀ ಆರ್. ಶೆಟ್ಟಿಯವರ ಜನ್ಮಶತಮಾನೋತ್ಸವವನ್ನು ಸಜೀಪಮೂಡ ಗ್ರಾಮದ ಕೊಯಮಜಲು ಮನೆಯಲ್ಲಿ ವಿಜ್ರಂಭಣೆಯಿಂದ ಆಚರಿಸಲಾಯಿತು. ನೂರು ವರ್ಷವನ್ನು ಪೂರೈಹಿಸಿದ ಹಿನ್ನಲೆಯಲ್ಲಿ ಲಕ್ಷ್ಮಿ ಆರ್.ಶೆಟ್ಟಿಯವರ ಮಕ್ಕಳು, ಮರಿಮಕ್ಕಳು, ಅಳಿಯ, ಸೊಸೆಯಂದಿರು ಹಾಗೂ ಬಂಧು ಮಿತ್ರರು ಹುಟ್ಟು ಹಬ್ಬದ ಆಚರಣೆಯನ್ನು ಸಂಭ್ರಮಿಸಿದರು. ನೂರನೇ ಹುಟ್ಟುಹಬ್ಬ ಕಾರ್ಯಕ್ರಮದ ಅಂಗವಾಗಿ ಹಿಂದೂ ಸಂಸ್ಕೃತಿ ಮಂದಿರ ರಾಮ ಧಾಮ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಸುಭಾಷ್ ನಗರ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಗಣಹೋಮ, ಮೃತ್ಯಂಜಯ ಶಾಂತಿ ಹೋಮ, ಪವಮಾನ ಹೋಮ ನಡೆಯಿತು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ನೂರನೇ ಜನ್ಮ ದಿನವನ್ನು ಆಚರಿಸುತ್ತಿರುವ ಲಕ್ಷ್ಮೀ ಆರ್.ಶೆಟ್ಟಿಯವರನ್ನು ಶಾಲು, ಹಾರ ತೊಡಿಸಿ, ಫಲಪುಷ್ಪ ನೀಡಿ ಗೌರವಿಸಿದರು. ಈ ಸಂದರ್ಭ ಗಣ್ಯರಾದ ಕಾಂತಾಡಿ ಗುತ್ತು ಗಡಿ…
ಬಂಟ್ವಾಳ: ನಾವು ತಿನ್ನುವ ಆಹಾರವೇ ನಮ್ಮ ದೇಹಕ್ಕೆ ಔಷಧಿಕಾಗಿ ಪರಿವರ್ತನೆಯಾದರೆ ಪ್ರತ್ಯೇಕ ಔಷಧಿಯ ಅಗತ್ಯವಿಲ್ಲ. ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಬೇಕಾದರೆ ಪೌಷ್ಠಿಕ ಆಹಾರ ಸೇವನೆ ಅಗತ್ಯ. ಆ ಮೂಲಕ ಸ್ವಾಸ್ಥ್ಯ ವ್ಯಕ್ತಿಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ದ.ಕ. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್.ಭೂಮರಡ್ಡಿ ಹೇಳಿದರು. ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆದ ಕ್ಷಯ ರೋಗಿಗಳಿಗೆ ಆಹಾರ ದವಸಧಾನ್ಯ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕ್ಷಯ ರೋಗಿಗಳು ಪೌಷ್ಠಿಕ ಆಹಾರವನ್ನು ಹೆಚ್ಚು ಸೇವಿಸಿದಾಗ ಅವರು ರೋಗ ಮುಕ್ತರಾಗಿ ಉತ್ತಮ ಜೀವನ ನಡೆಸಲು ಸಾಧ್ಯವಿದೆ ಎಂದರು. ಪುದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಡಾ. ಸ್ಮೃತಿ ಯು., ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಪ್ರಧಾನ ಮಂತ್ರಿಯವರ ಆಶಯದಂತೆ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಪೌಷ್ಠಿಕ ಆಹಾರವನ್ನು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸೇವಾಂಜಲಿ ಸಂಸ್ಥೆ ನೀಡುತ್ತಿರುವುದು ಅಭಿನಂದನೀಯ. ಸ್ವಾರ್ಥ ರಹಿತ ಮನೋಭಾವದ…
ಬಂಟ್ವಾಳ: ಸಜೀಪ ಮುನ್ನೂರು ಗ್ರಾಮ.ಪಂ. ನಲ್ಲಿ ಶೂನ್ಯ ಕಸ ನಿರ್ವಹಣೆ ಸ್ವಚ್ಚ ಮನೆ ಸ್ವಯಂ ಘೋಷಣೆ ಮೂಲಕ ಕಸ ಮುಕ್ತ ಗ್ರಾಮ ನಿರ್ಮಾಣಕ್ಕೆ ಗ್ರಾಮ.ಪಂ. ಅಧಿಕಾರಿಗಳು ಹಾಗೂ ಝೇಂಕಾರ ಸಂಜೀವಿನಿ ಒಕ್ಕೂಟ ಸಂಕಲ್ಪ ಮಾಡಿದೆ. ಗ್ರಾ.ಪಂ. ಎನ್ ಆರ್ ಎಲ್ ಎಮ್ ತರಬೇತಿ ಕೇಂದ್ರ ದಲ್ಲಿ ಜನ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ನಡೆದ ಶೂನ್ಯ ಕಸ ನಿರ್ವಹಣೆ ಮತ್ತು ಸ್ವಚ್ಚತೆಯ ವಿಶೇಷ, ಮಾಹಿತಿ ಮತ್ತು ಪ್ರೇರಣಾ ಕಾರ್ಯಕ್ರಮ ದಲ್ಲಿ ಭಾಗವಹಿದ್ದ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಪ್ಲಾಸ್ಟಿಕ್ ಮತ್ತು ಸ್ಯಾನಿಟರಿ ಪ್ಯಾಡ್ ತ್ಯಾಜ್ಯಗಳಿಂದ ಸೃಷ್ಟಿ ಯಾಗಿರವ ಬಯಲು ಕಸಾಲಯ , ಪ್ಲಾಸ್ಟಿಕ್ ಬೆಂಕಿ, ಪ್ಲಾಸ್ಟಿಕ್ ಮಾಲಿನ್ಯ ತಡೆದು ಸುಸ್ಥಿರ ಸ್ವಚ್ಛತೆ ಸಾಧಿಸಲು ಶೂನ್ಯ ಕಸ ನಿರ್ವಹಣೆ ಸ್ವಚ್ಛ ಮನೆ ಸ್ವಯಂ ಘೋಷಣೆ ಸುಸ್ಥಿರ ಪರಿಹಾರೋಪಾಯ ಆಗಿದೆ ಎಂದರು. ಹಸಿ ಕಸಗಳಿಂದ ಬಯೋ ಗ್ಯಾಸ್ ಅಳವಡಿಸಿ ಕೊಳ್ಳುವ ಕುಟುಂಬಗಳಿಗೆ ಪಂಚಾಯತಿ ವತಿಯಿಂದ ಸರ್ವ ಸಹಕಾರ ನೀಡುವುದಾಗಿ ಪಿಡಿಒ ಗೋಕುಲ್ ದಾಸ್ ಭಕ್ತ ತಿಳಿಸಿದರು.…
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಹೇಮಾವತಿ ವಿ. ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಬಂಟ್ವಾಳ ಯೋಜನಾ ಕಚೇರಿ ವ್ಯಾಪ್ತಿಯ ತಾಲೂಕಿನ ಅಶಕ್ತರಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ತಾಲೂಕಿನಲ್ಲಿ ಅತ್ಯಂತ ಅಸಹಾಯಕ ಸ್ಥಿತಿಯಲ್ಲಿರುವ ಯೋಜನೆಯಿಂದ ಮಾಶಾಸನ ಪಡೆಯುವ 89 ಮಂದಿಗೆ ಹಣ್ಣು ಹಂಪಲು ವಿತರಿಸಲಾಯಿತು. ತಾಲೂಕಿನಲ್ಲಿ ಒಟ್ಟು 89 ಮಂದಿ ಅಶಕ್ತರನ್ನು ಗುರುತಿಸಿ ಪ್ರತಿ ತಿಂಗಳು ತಲಾ 1000 ದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಾಶಾಸನ ಒದಗಿಸಲಾಗುತ್ತಿದೆ. ಪೌಷ್ಟಿಕಾಂಶದ ಕೊರತೆ ಎದುರಿಸುತ್ತಿರುವ 4 ಮಂದಿಗೆ ವಾತ್ಸಲ್ಯ ಮಿಕ್ಸ್ ಪೌಷ್ಟಿಕಾಂಶ ಆಹಾರಗಳನ್ನು, 11 ಮಂದಿ ನಿರ್ಗತಿಕರಿಗೆ ದಿನ ನಿತ್ಯದ ಗೃಹ ಉಪಯೋಗಿ ಪರಿಕರಗಳ ಕಿಟ್ ನೀಡಲಾಗುತಿದೆ. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಜಯಾನಂದ ಪಿ, ತಾಲೂಕಿನ ಎಲ್ಲಾ ವಲಯ ಮೇಲ್ವಿಚಾರಕರು, ಕೃಷಿ ಅಧಿಕಾರಿ, ಸೇವಾ ಪ್ರತಿನಿಧಿಗಳು, ಜ್ಞಾನ ವಿಕಾಸ ಸಮನ್ವಯಾಧಿಕಾರಿ, ಒಕ್ಕೂಟಗಳ ಪದಾಧಿಕಾರಿಗಳು,…
ಬಂಟ್ವಾಳ: ದುರ್ಗೆ ನಮ್ಮೊಳಗಿನ ದುಃಖವನ್ನು ದೂರ ಮಾಡುವ ಶಕ್ತಿ. ಅಂತಹ ಜಗದಾಂಬಿಕೆಯ ಭವ್ಯವಾದ ಮಂದಿರ ಇಲ್ಲಿ ರೂಪುಗೊಂಡಿದೆ ಎಂದು ಬ್ರಹ್ಮಶ್ರೀ ಆನಂದ ಸಿದ್ದೀಪೀಠ ಮತ್ತು ಶ್ರೀ ಲಕ್ಷ್ಮೀ ಭೂವರಾಹ ಸ್ವಾಮೀ ಸಾಲಿಗ್ರಾಮ ಕ್ಷೇತ್ರದ ಸಂಸ್ಥಾಪಕ ಡಾ. ಮಹರ್ಷಿ ಆನಂದ ಗುರೂಜಿ ಹೇಳಿದರು. ಬಂಟ್ವಾಳ ತಾಲೂಕಿನ ಮೂಡನಡುಗೋಡು ಗ್ರಾಮದ ದಡ್ಡಲಕಾಡು-ದೇವಿನಗರಶ್ರೀ ಜಗದಂಬಿಕಾ ಶ್ರೀ ಮಹಮ್ಮಾಯಿ ಗುಳಿಗ ಅಣ್ಣಪ್ಪ ಕ್ಷೇತ್ರದ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಗುರುವಾರ ನಡೆದ ಸುಧರ್ಮ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದ ಯಾವುದೇ ಭಾಗಕ್ಕೆ ಹೋದರೂ ಜನರ ಪ್ರೀತಿ ಸಿಗುತ್ತಿರುವುದು ನನ್ನ ಜೀವನದ ಪುಣ್ಯ. ಆ ಕಾರಣಕ್ಕಾಗಿ ಇನ್ನಷ್ಟು ಧರ್ಮಕಾರ್ಯಗಳನ್ನು ಮಾಡುವ ನಿಟ್ಟಿನಲ್ಲಿ ಮುಂಚೂಣಿಯಲ್ಲಿ ನಿಂತಿರುತ್ತೇನೆ. ಪರಶುರಾಮ ಸೃಷ್ಟಿಯ ಕರಾವಳಿಯಲ್ಲಿ ನಿತ್ಯ ಧರ್ಮ ಕಾರ್ಯಗಳು ನಡೆಯುತ್ತಿರುವುದು ಅಭಿನಂದನೀಯ ಎಂದರು. ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರು ವಿವೇಕಾನಂದ ವಿದ್ಯಾ ವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಅವರು ಮಾತನಾಡಿ, ಹಿಂದೂ ಸಮಾಜದ ಮೇಲೆ ಆಕ್ರಮಣಗಳಾದಾಗ ಅಗೋಚರವಾದ ದೈವೀ ಶಕ್ತಿ…








