Author: admin

ಬಂಟ್ವಾಳ: ಇಲ್ಲಿನ ಬಂಟ್ವಾಳ ವಿಧಾನಸಭಾ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಶಾಸಕರ ಕಾಲಿಗೆ ಗಾಯವಾಗಿದೆ. ಭಾನುವಾರ ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ಘಟನೆ ನಡೆದಿದ್ದು ಬಜಪೆ ಠಾಣೆಯಲ್ಲಿ ಕಾರು ಚಾಲಕ ಮೊಹಮ್ಮದ್ ಸುಫೈಲ್ ಎಂಬಾತನ ವಿರುದ್ದ ಶಾಸಕರ ಆಪ್ತಕಾರ್ಯದರ್ಶಿ ಪವನ್ ಕುಮಾರ್ ಶೆಟ್ಟಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಶಾಸಕ ರಾಜೇಶ್ ನಾಯ್ಕ್ ಅವರು ಮಕರ ಸಂಕ್ರಮಣದ ಪ್ರಯುಕ್ತ ತೆಂಕ ಎಡಪದವಿನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಾಸು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿರುವ ವೇಳೆ ಅತೀ ವೇಗದಿಂದ ಬಂದ ಕಾರು ಡಿಕ್ಕಿಯಾಗಿ ಅಪಘಾತವಾಗಿದೆ. ಬಳಿಕ ಚಾಲಕ ಕಾರು ನಿಲ್ಲಿಸಿದೆ ಅತೀ ವೇಗವಾಗಿ ಹೋಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಶಾಸಕರು ಬಿದ್ದು ಗಾಯವಾಗಿದ್ದು, ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಶಾಸಕರು ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಾರು ಚಾಲಕನನ್ನು ಪೋಲೀಸರು ವಶಕ್ಕೆ…

Read More

ಬಂಟ್ವಾಳ: ಮಹಿಳೆಯರು ಗಂಡಸರನ್ನೆ ಅವಲಂಬಿಸುವ ಕಾಲಘಟ್ಟವೊಂದಿತ್ತು. ಆದರೆ ಇಂದು ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಿದ್ದು ಸ್ವಸಹಾಯ ಗುಂಪು ಚಟುವಟಿಕೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.ಉಳ್ಳಾಲ ತಾಲೂಕಿನ ದೇರಳಕಟ್ಟೆಯ ನಿತ್ಯಾನಂದ ಕಾಂಪ್ಲೆಕ್ಸ್ ನಲ್ಲಿ ಸಮಾಜ ಸೇವಾ ಸಹಕಾರಿ ಸಂಘ ನಿ. ಬಂಟ್ವಾಳ ಇದರ ನೂತನ ತೊಕ್ಕೊಟ್ಟು ದೇರಳಕಟ್ಟೆ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು. ಡಾ.ಅಮ್ಮೆಂಬಳ ಬಾಳಪ್ಪ ರು ಕಟ್ಟಿ ಬೆಳೆಸಿದ ಬ್ಯಾಂಕ್ ಹಲವರಿಗೆ ದಾರಿದೀಪವಾಗಿದೆ. ಜೀವನದ ಬದ್ಧತೆಗೆ ಸಿಕ್ಕಿರುವ ಶಕ್ತಿಕೇಂದ್ರವಾಗಿ ಬ್ಯಾಂಕ್ ಹೊರಹೊಮ್ಮಿದೆ. ಅಮ್ಮೆಂಬಳ ಬಾಳಪ್ಪರ ಸರಳತೆ, ನಿರಾಂಡಬರದ ಜೀವನ, ಅವರ ತತ್ವ, ಸಿದ್ದಾಂತವನ್ನು ಮಕ್ಕಳಿಗೆ ತಿಳಿಸಿಕೊಡವ ಕಾರ್ಯ ಆಗಬೇಕಾಗಿದೆ ಎಂದರು. Advertisement ದ.ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ನೂತನ ಶಾಖೆ ಉದ್ಘಾಟಿಸಿ ಮಾತನಾಡಿ ಜನರಿಗೆ ಈ ಬ್ಯಾಂಕಿನ ಮೇಲೆ ಅಪಾರವಾದ ಪ್ರೀತಿ ಇರುವುದು ಈ ಕಾರ್ಯಕ್ರಮದ ಮೂಲಕ ಸಾಬೀತಾಗಿದೆ. ಆಡಳಿತ ಮಂಡಳಿ, ಹಾಗೂ ಸಿಬ್ಬಂದಿಗಳ…

Read More

ಬಂಟ್ವಾಳ: ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದಡ್ಡಲ ಕಾಡು ಇಲ್ಲಿನ ವಿದ್ಯಾರ್ಥಿಗಳು ಅಭಿನಯಿಸಿದ ಒಂದೊಂದು ಮನೆಯ ಒಂದೊಂದು ಕಥೆ ಕಿರುಚಿತ್ರ ಜ.14 ರಂದು ಮಕರ ಸಂಕ್ರಾಮಣದ ಶುಭ ಸಂದರ್ಭದಲ್ಲಿ ಯೂಟ್ಯೂಬ್ ಮೂಲಕ ಬಿಡುಗಡೆಗೊಳ್ಳಲಿದೆ. Advertisement ದಡ್ಡಲಕಾಡು ಆಂಗ್ಲಮಾಧ್ಯಮ ಪ್ರೌಢಶಾಲೆ ಶಿಕ್ಷಣ ವ್ಯವಸ್ಥೆಯಲ್ಲಿ ವಿಶೇಷ ಚಾಪು ಮೂಡಿಸಿರುವ ಶಾಲೆ. ಇದೀಗ ಹೊಸದೊಂದು ಮೈಲಿಗಲ್ಲು ಸೃಷ್ಟಿಸಲು ಸಜ್ಜಾಗಿ ನಿಂತಿದ್ದು, ಶಾಲೆಯ ಡ್ರಾಮಾ ವಿದ್ಯಾರ್ಥಿಗಳೊಂದಿಗೆ ಪ್ರೌಢಶಾಲಾ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷ ಪುರುಷೋತ್ತಮ್ ಅಂಚನ್ ನಿರ್ಮಿಸಿ, ನಿರ್ದೇಶಿಸಿರುವ ” ಒಂದೊಂದು ಮನೆಯ ಒಂದೊಂದು ಕಥೆ ” ಕಿರು ಚಿತ್ರ ನಿರ್ಮಾಣಗೊಂಡಿದೆ. ಕೇವಲ ಮೊಬೈಲ್ ಬಳಸಿ ಚಿತ್ರೀಕರಣ, ಸಂಕಲನ ಮಾಡಲಾಗಿದ್ದು ಅತ್ಯಂತ ಕಡಿಮೆ ಖರ್ಚಿನಲ್ಲಿ ಈ ಕಿರುಚಿತ್ರವನ್ನು ನಿರ್ಮಿಸಲಾಗಿದೆ. ಇದೊಂದು ದಾಖಲೆಯಾಗಿದ್ದುಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಈ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಶನಿವಾರ ಶಾಲೆಯಲ್ಲಿ ಕಿರುಚಿತ್ರದ ಪೋಸ್ಟರ್ ಬಿಡುಗಡೆ ಸಮಾರಂಭ ನಡೆಯಿತು. ಈ ಸಂದರ್ಭ ಶಾಲೆಯ ಮುಖ್ಯೋಪಾಧ್ಯಾಯ ರಮಾನಂದ , ಪ್ರೌಢಶಾಲಾ ವಿಭಾಗದ ಎಸ್ ಡಿ…

Read More

ಬಂಟ್ವಾಳ: ಲಯನ್ಸ್ ಇಂಟರ್ ನ್ಯಾಶನಲ್ ಜಿಲ್ಲೆ 317 ಡಿ ಪ್ರಾಂತ್ಯ 5 ಇದರ ಪ್ರಾಂತೀಯ ಸಮ್ಮಿಲನ “ಸಂಧ್ಯಾ” ಫೆ. 11 ರಂದು ಇರಾ ಬಂಟರ ಭವನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಸಂಜೆ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ ನಡೆಯಿತು.ಪ್ರಾಂತಿಯ ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಹಾಗೂ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿ ಮಾತನಾಡಿ ಸಮ್ಮಿಲನದ ಯಶಸ್ಸಿಗೆ ಸಹಕಾರ ಕೋರಿದರು. Advertisement ಸಮ್ಮಿಲನ ಸಮಿತಿಯ ಗೌರವಾಧ್ಯಕ್ಷ ಡಾ. ಗೋಪಾಲ್ ಆಚಾರ್, ಗೌರವ ಮಾರ್ಗದರ್ಶಕರಾದ ವಸಂತ ಕುಮಾರ್ ಶೆಟ್ಟಿ, ಕೆ.ದೇವದಾಸ್ ಭಂಡಾರಿ, ಗೌರವ ಸಲಹೆಗಾರ ಮನೋರಂನ್ ಕೆ.ಆರ್., ಕಾರ್ಯದರ್ಶಿ ಜಯಪ್ರಕಾಶ್ ರೈ ಮೇರಾವು, ರಾಮ್ ಪ್ರಸಾದ್ ರೈ, ಪ್ರಾಂತಿಯ ಸಂಯೋಜಕ ವಿಜಯ ರೈ ಕೆ., ವಲಯಾಧ್ಯಕ್ಷ ರಾದ ಯುಜೀನ್ ಲೋಬೋ, ಡೊನಾಲ್ಡ್ ಬಂಟ್ವಾಳ್, ವಲಯ ಸಂಯೋಜಕ ಸತೀಶ್ ಭಂಡಾರಿ, ವಿವಿಧ ಸಮಿತಿಗಳ ಪ್ರಮುಖರಾದ ಶ್ರೀನಿವಾಸ ಪೂಜಾರಿ ಮೆಲ್ಕಾರ್, ರಾಮಣ್ಣ ಶೆಟ್ಟಿ, ಉಮಾನಾಥ ರೈ…

Read More

ಹರೇಕಳ: ದ.ಕ ಜಿಲ್ಲೆಯ ಇತಿಹಾಸ ಪ್ರಸಿದ್ದ ಕಾರಣಿಕ ಕ್ಷೇತ್ರ ಉಳ್ಳಾಲ ತಾಲೂಕಿನ ಅಂಬ್ಲಮೊಗರು, ಪಾವೂರು ಹರೆಕಳೆ ಮೂರು ಗ್ರಾಮ ವ್ಯಾಪ್ತಿಗೊಳಪಟ್ಟ ಮಾಗಣೆಯ ಕುತ್ತಿಮೊಗರು ಜಾತ್ರಾಮಹೋತ್ಸವದ ಪೂರ್ವಭಾವಿಯಾಗಿ ದೈವಗಳ ಭಂಡಾರ ಬರುವ ಕಾರ್ಯಕ್ರಮ ಶುಕ್ರವಾರ ಮುಂಜಾನೆ ಅತ್ಯಂತ ವಿಜ್ರಂಭಣೆಯಿಂದ ನಡೆಯಿತು. Advertisement ಡೆಬ್ಬೇಲಿ ಗುತ್ತಿನಿಂದ ಶ್ರೀ ಧೂಮಾವತಿ ಬಂಟ, ಪಾವೂರು ಗುತ್ತಿನಿಂದ ಶ್ರೀ ವೈದ್ಯನಾಥ ಹಾಗೂ ಮಣಿಬೆಟ್ಟು ಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವಗಳ ಭಂಡಾರ ಏಕಕಾಲದಲ್ಲಿ ಹೊರಟು ಸಂಪಿಗೆದಡಿ ಮನೆತನಕ್ಕೊಳಪಟ್ಟ ಜಾಗದಲ್ಲಿ ಮೂರುದೈವಗಳು ಪರಸ್ಪರ ಭೇಟಿಯಾಗಿ ನೇಮೋತ್ಸವ ನಡೆಯುವುದು ಇಲ್ಲಿನ ವಿಶೇಷತೆ. ವರ್ಷಪ್ರತಿಯಂತೆ ಸಾವಿರಾರು ಮಂದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೂವರು ದೈವಗಳ ಕೃಪೆಗೆ ಪಾತ್ರರಾದರು.ತಮ್ಮ ಕಷ್ಟದ ಸಂದರ್ಭದಲ್ಲಿ ಹಾಗೂ ಇಷ್ಟಾರ್ಥ ಸಿದ್ದಿಗಾಗಿ ಹರಕೆ ಹೆಳಿಕೊಂಡಂತೆ ಸೇವಂತಿಗೆ ಹಾಗೂ ಮಲ್ಲಿಗೆ ಹೂವಿನ ಹಾರವನ್ನು ದೈವಗಳ ಸನ್ನಿಧಾನಕ್ಕೆ ಸಮರ್ಪಿಸುವುದು ಇಲ್ಲಿ ನಡೆದು ಬಂದಿರುವ ಪದ್ದತಿ. ಪ್ರಾತಃಕಾಲದಲ್ಲಿ ೪ ಗಂಟೆಯ ಸುಮಾರಿಗೆ ದೈವಗಳ ಭಂಡಾರವೇರುವುದಾದರೂ ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಹಾಜರಿದ್ದು ಹರಕೆಯ…

Read More

ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಘಟನೆ ಶುಕ್ರವಾರ ಮುಂಜಾನೆ ವಗ್ಗ ಸಮೀಪದ ಮೇನಾಡು ಎಂಬಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನಾ ಪಿಂಟೋ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಮಾತ್ರ ಇದ್ದು, ಕಪಾಟಿನಲ್ಲಿರಿಸಲಾಗಿದ್ದ ಸುಮಾರು 82 ಗ್ರಾಂ ತೂಕದ ಚಿನ್ನಾಭರಣ, 11 ಸಾವಿರ ಮೌಲ್ಯದ ಎರಡು ಮೊಬೈಲ್ ಪೋನ್, 30 ಸಾವಿರ ರೂಪಾಯಿ ನಗದು ಹಾಗೂ ಒಂದು ಮೊಬೈಲ್ ಪೋನ್ ಸೇರಿ ಅಂದಾಜು 3.20 ಲಕ್ಷ ಮೌಲ್ಯದ ಸೊತ್ತು ದರೋಡೆಯಾಗಿರುವುದಾಗಿ ತಿಳಿದು ಬಂದಿದೆ. ಬೆಳಿಗ್ಗೆ ಸುಮಾರು 6.30 ರ ಸಮಯದಲ್ಲಿ ಮನೆಯ ಕಾಲಿಂಗ್ ಬೆಲ್ ಸದ್ದು ಕೇಳಿ ಬಾಗಿಲು ತೆಗೆದಾಗ ನಾಲ್ವರು ಮುಸುಕುಧಾರಿಗಳು ಮನೆಯೊಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿರುವ ಹಣ, ಚಿನ್ನವನ್ನು ಕೊಡುವಂತೆ ಬೆದರಿಸಿದ್ದಾರೆ. ಬೆದರಿಕೆಗೆ ಜಗ್ಗದಿದ್ದಾಗ…

Read More

ಬಂಟ್ವಾಳ: ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾಗಿರುವ ನ್ಯಾಯವಾದಿ ಸುರೇಶ್ ಕುಮಾರ್ ನಾವೂರು ಅವರನ್ನುವ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲ ಸಂಘದ ವತಿಯಿಂದ ಅಭಿನಂದಿಸಲಾಯಿತು.ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಪ್ರಮುಖರಾದಮಾತೃ ಸಂಘಕ್ಕೆ ಇಂದು ಬೇಟಿ ನೀಡಿದ್ದರು ಈ ಸಂದರ್ಭದಲ್ಲಿ ಅವರಿಗೆ ಮಾತೃ ಸಂಘದ ವತಿಯಿಂದ ಗೌರವ ಸಲ್ಲಿಸಲಾಯಿತು ಪ್ರೊ. .ಯತೀಶ್ ಕುಮಾರ್, ಉಪನ್ಯಾಸಕಿ ಆಶಾ, ಸರ್ಕಾರಿ ಅಭಿಯೋಜಕಿ ಸ್ವಾತಿ ಬಂಗೇರ, ಮುಡಿಪು ಕುಲಾಕ ಸಂಘದ ಅಧ್ಯಕ್ಷ ಪುಂಡರಿಕಾಕ್ಷ ಮೂಲ್ಯ , ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ್ ನಿಕಟ ಪೂರ್ವ ಅಧ್ಯಕ್ಷ ನಾರಾಯಣ ಸಿ.ಪೆರ್ನೆ , ರಮೇಶ್ ಕುಲಾಲ್ ಪಣೋಲಿಬೈಲು ,ವಕೀಲ ಉಮಾಕರ್ , ದಯಾನಂದ ನೆರಂಬೋಳ್ ಉಪಸ್ಥಿತರಿದ್ದರು

Read More

ಬಂಟ್ವಾಳ: ಪುದು ಗ್ರಾಮದ ಸುಜೀರು ದತ್ತನಗರದ ಶ್ರೀ ವೀರ ಹನುಮಾನ್ ಮಂದಿರದ 22ನೇ ವಾರ್ಷಿಕೋತ್ಸವ ಜ. 15ರಂದು ನಡೆಯಲಿದೆ. ಅಂದು ಬೆಳಿಗ್ಗೆ ಗಣಹೋಮ, ಪಂಚಾಮೃತ ಅಭಿಷೇಕ, ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ ನಡೆಯಲಿದೆ. ಬೆಳಿಗ್ಗೆ 11ಕ್ಕೆ ಒಡಿಯೂರು ಶ್ರೀ ಗುರುದೇವಾದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಗಣ್ಯರು ಭಾಗವಹಿಸಲಿದ್ದಾರೆ. ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರ್ರಿ 9 ರಿಂದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕೃಪಾಪೋಷಿತ ದಶಾವತಾರ ಯಕ್ಷ ಮಂಡಳಿಯಿಂದ ಶಿವಧೂತ ಗುಳಿಗೆ ಯಕ್ಷಗಾನ ನಡೆಯಲಿದೆ. Advertisement

Read More

ಬಂಟ್ವಾಳ: ಇಲ್ಲಿನ ಬಡ್ಡಕಟ್ಟೆ ರಾಯರ ಚಾವಡಿಯ ಶ್ರೀ ಪಂಜುರ್ಲಿ ಪಿಲಿಚಾಮುಂಡಿ ಕಲ್ಲುರ್ಟಿ ಕಲ್ಕುಡ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವವು ಜ.26 ಮತ್ತು ಜ.27ರಂದು ನಡೆಯಲಿದೆ. ಜ. 26ರಂದು ಬೆಳಿಗ್ಗೆ ಗಣಹೋಮ, ನೇಮೋತ್ಸವದ ಮುಹೂರ್ತ, ಶ್ರೀ ಮುಖ್ಯಪ್ರಾಣ ದೇವರ ಸನ್ನಧಿಯಲ್ಲಿ ಪೂಜೆ, ನಾಗಸನ್ನಿಧಿಯಲ್ಲಿ ನಾಗತಂಬಿಲ, ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಮಹಾಪೂಜೆ, ಮಧ್ಯಾಹ್ನ ಅಶ್ವಥ ಕಟ್ಟೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಅಶ್ವತ್ಥ ನಾರಾಯಣ ಕಟ್ಟೆ ಪೂಜೆ, ಪ್ರಸಾಧ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4ಕ್ಕೆ ದೈವಸ್ಥಾನದಲ್ಲಿ ನವಕ ಪ್ರಧಾನ ಹೋಮ, ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ದುರ್ಗಾ ಪೂಜೆ, ರಂಗಪೂಜೆ ರಾತ್ರಿ 8ಕ್ಕೆ ದೈವಸ್ಥಾನದಿಂದ ನೇಮೋತ್ಸವದ ಗದ್ದೆಗೆ ಭಂಡಾರ ಹೊರಟು ಶ್ರೀ ಪಿಲಿಚಾಮುಂಡಿ, ಕಲ್ಕುಡ ದೈವಗಳಿಗೆ ನೇಮೋತ್ಸವ, ರಾತ್ರಿ 12.30ಕ್ಕೆ ಶ್ರೀ ಪಿಲಿಚಾಮುಂಡಿ ಕಲ್ಕುಡ ದೈವಗಳ ವಲಸರಿ ನಡೆಯಲಿದೆ. Advertisement ಜ.27ರಂದು ಶನಿವಾರ ಸಂಜೆ 5.30ಕ್ಕೆ ಶ್ರೀ ಪಂಜುರ್ಲಿ ದೈವದ ಎಣ್ಣೆಬೂಳ್ಯ, ರಾತ್ರಿ 9ಕ್ಕೆ ಶ್ರೀ ಪಂಜುರ್ಲಿ ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ ನಡೆಯಲಿದೆ ಎಂದು ಪ್ರಕಟಣೆ…

Read More

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಇದರ 16ನೇ ತೊಕ್ಕೊಟ್ಟು- ದೇರಳಕಟ್ಟೆ ಶಾಖೆಯು ಜ.14ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಉಳ್ಳಾಲ ತಾಲೂಕಿನ ದೇರಳಕಟ್ಟೆಯಲ್ಲಿರುವ ನಿತ್ಯಾನಂದ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಳ್ಳಲಿದೆ.ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಪ್ರಜ್ವಲಿಸಿ, ಆಶೀರ್ವಚನ ನೀಡುವರು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ನೂತನ ಶಾಖೆ ಉದ್ಘಾಟಿಸುವರು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ವಹಿಸುವರು. ಭದ್ರತಾ ಕೊಠಡಿಯಯನ್ನು ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ ಕುಮಾರ್ ರೈ ಬೋಳಿಯಾರ್, ಸೇಫ್ ಲಾಕರನ್ನು ದೈವದ ಮೂಲ್ಯಣ್ಣ ಕೆ. ಬಾಲಕೃಷ್ಣ ಸಾಲಿಯಾನ್, ಕಂಪ್ಯೂಟರನ್ನು ಬೆಳ್ಮಾ ಗ್ರಾಮ ಪಂಚಾಯತಿ ಅಧ್ಯಕ್ಷೆ ರಜೀಯ ಉದ್ಘಾಟಿಸುವರು, ಕುಂಭೇಶ್ವರ ವಿ.ಸ.ಸಂಘ ನಿ. ಕೊಲ್ಯ ಇದರ ಅಧ್ಯಕ್ಷ ಗೋಪಾಲ ಕಣ್ವತೀರ್ಥ ಠೇವಣಿ ಪತ್ರ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಸಹಕಾರ ಸಂಘಗಳ ಉಪ ನಿಬಂಧಕ ಎಚ್. ಎನ್. ರಮೇಶ್, ಕೊಂಡಾಣ ದೇವಸ್ಥಾನದ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರು, ದೇರಳಕಟ್ಟೆಯ ಪಾನೀರು ಚರ್ಚ್‌ನ ಧರ್ಮಗುರು ವಂ. ರೇ| ಫಾ|…

Read More