Author: admin
ಬಂಟ್ವಾಳ: ಸ್ವಚ್ಚತೆ ಹಾಗೂ ತ್ಯಾಜ್ಯ ವಿಲೇವಾರಿಯ ಬಗ್ಗೆ ಅರಿವು ಮೂಡಿಸುವ ಕಸ ಪ್ರಸಂಗ ವಿಶೇಷ ಜಾಗೃತಿ ಕಾರ್ಯಕ್ರಮ ಮಂಗಳವಾರ ಬಂಟ್ವಾಳ ಪುರಸಭೆಯ ಸಭಾಂಗಣದಲ್ಲಿ ನಡೆಯಿತು. ಹಸಿರುದಳ ಸಂಯೋಜಕ ನಾಗರಾಜ್ ಬಜಾಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೌರಕಾರ್ಮಿಕರಿಗೆ ತ್ಯಾಜ್ಯ ವಿಲೇವಾರಿಯ ಬಗ್ಗೆ ಅರಿವು ಹಾಗೂ ಅವರ ಜವಾಬ್ದಾರಿಯ ಬಗ್ಗೆ ತಿಳಿಸಿಕೊಟ್ಟರು. ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಸಂದೀಪ್ ಸಾಲ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ನಿರೀಕ್ಷಕ ರತ್ನಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಿರಿಯ ಎಂಜಿನಿಯರ್ ಡೊಮೆನಿಕ್ ಡಿಮೆಲ್ಲೋ, ಸಮುದಾಯ ಸಂಘಟಕಿ ಉಮಾವತಿ, ಪುರಸಭೆಯ ಸಿಬ್ಬಂದಿಗಳು, ಪೌರಕಾರ್ಮಿಕರು ಉಪಸ್ಥಿತರಿದ್ದರು.
ಬಂಟ್ವಾಳ: ಉತ್ತರದ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನಿಗೆ ಸುಂದರವಾದ ದೇವಸ್ಥಾನ ನಿರ್ಮಾಣಗೊಂಡು ಬಾಲರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆಗೊಳ್ಳುವ ಸುಸಂದರ್ಭದಲ್ಲೇ ದಕ್ಷಿಣದಲ್ಲಿರುವ ಬಂಟ್ವಾಳದ ತಾಲೂಕಿನ ಫರಂಗಿಪೇಟೆಯಲ್ಲಿ ಶ್ರೀರಾಮ ಧೂತ ಹನುಮನಿಗೂ ಸುಂದರವಾದ ಶಿಲಾಮಯ ದೇವಸ್ಥಾನ ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ. ದೇವಸ್ಥಾನ ನಿರ್ಮಾಣದ ಅಂತಿಮ ಹಂತದ ಕೆಲಸಗಳು ಭರದಿಂದ ನಡೆಯುತ್ತಿದ್ದು ಫರಂಗಿಪೇಟೆ ಆಸುಪಾಸಿನ ಆರು ಗ್ರಾಮದ ಜನರಲ್ಲಿ ಸಂಭ್ರಮ ಮನೆ ಮಾಡಿದೆ. ಜಿಲ್ಲೆಯ ಜೀವನದಿ ನೇತ್ರಾವದಿಯ ದಂಡೆಯಲ್ಲಿರುವ ಪುದು ಗ್ರಾಮದ ಫರಂಗಿಪೇಟೆ ಬೆಳೆಯುತ್ತಿರುವ ಸಣ್ಣ ಪಟ್ಟಣ. ಇಲ್ಲಿನ ವಿಜಯನಗರದಲ್ಲಿ ಸುಮಾರು 40 ವರ್ಷಗಳ ಹಿಂದೆ ಊರಿನ ಯುವಕರು ವ್ಯಾಯಮ, ತಾಲೀಮು, ಕುಸ್ತಿ ಮೊದಲಾದ ಅಂಗ ಸಾಧನೆಗಾಗಿ ಮುಳಿಹುಲ್ಲಿನ ಜೋಪಡಿಯಲ್ಲಿ ಓಂ ಶ್ರೀ ವೀರಾಂಜನೇಯ ಎನ್ನುವ ವ್ಯಾಯಮ ಶಾಲೆಯನ್ನು ಆರಂಭಿಸಿದರು. ಕ್ರಮೇಣ ಮುಳಿಹುಲ್ಲಿನ ವ್ಯಾಯಾಮ ಶಾಲೆ ಸುಸಜ್ಜಿತ ಕಟ್ಟಡವಾಗಿ ಮಾರ್ಪಡುಗೊಂಡು ಶ್ರೀ ಆಂಜನೇಯ ಸ್ವಾಮಿಯ ಶಿಲಾಮೂರ್ತಿ ಪ್ರತಿಷ್ಠಾಪನೆಗೊಂಡಿತು. ನಿತ್ಯ ಪೂಜೆ, ಪುನಸ್ಕಾರಗಳಿಂದ ವ್ಯಾಯಮಶಾಲೆ ಶ್ರದ್ದಾಕೇಂದ್ರವಾಗಿ ಬೆಳೆಯುತ್ತಾ ಭಕ್ತ ಜನಾಕರ್ಷಣೆಯನ್ನು ಪಡೆಯಲಾರಂಭಿಸಿತು. ಪ್ರಶ್ನಾಚಿಂತನೆಯಲ್ಲಿ ಈ ಸ್ಥಳದಲ್ಲಿ ಶ್ರೀ ಆಂಜನೇಯನಿಗೆ…
ಬಂಟ್ವಾಳ: ಜೆಸಿಐ ಬಂಟ್ವಾಳದ 2024ನೇ ಸಾಲಿನ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಾಪ್ರದಾನ ಸಮಾರಂಭ ಬಂಟರ ಭವನದಲ್ಲಿ ನಡೆಯಿತು.ಶಕ್ತಿ ಎಜುಕೇಶನ್ ಟ್ರಸ್ಟ್ ನ ಮುಖ್ಯ ಸಲಹೆಗಾರ ರಮೇಶ್ ಕೆ. ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ವಲಯ 15 ರ ಪ್ರಾಂತ್ಯ ಬಿ ಯ ಉಪಾಧ್ಯಕ್ಷ ಶಂಕರ್ ರಾವ್ ಭಾಗವಹಿಸಿದ್ದರು.ನಿರ್ಗಮನ ಅಧ್ಯಕ್ಷ ರಾಜೇಂದ್ರ ಕೆ. ನೂತನ ಅಧ್ಯಕ್ಷೆ ರಶ್ಮಿ ಶೆಟ್ಟಿ ಯವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಪದಾಧಿಕಾರಿಗಳು ಹಾಗೂ ನೂತನ ಸದಸ್ಯರುಗಳಿಗೆ ವಲಯ ಉಪಾಧ್ಯಕ್ಷರು ಪ್ರಮಾಣ ವಚನ ಭೋದಿಸಿದರು.ವೇದಿಕೆಯಲ್ಲಿ ಕಾರ್ಯದರ್ಶಿ ಶ್ರೀನಿವಾಸ್ ಅರ್ಬಿಗುಡ್ಡೆ, ಕೋಶಾಧಿಕಾರಿ ಮನೋಜ್ ಕನಪಾಡಿ, ಲೇಡಿ ಜೇಸಿ ಅಧ್ಯಕ್ಷೆ ಆಶಾಮಣಿ ಡಿ. ರೈ, ನಿಕಟಪೂರ್ವಾಧ್ಯಕ್ಷ ರೋಶನ್ ರೈ, ನಿರ್ಗಮನ ಲೇಡಿ ಜೇಸಿ ಅಧ್ಯಕ್ಷೆ ದೀಪ್ತಿ ಆರ್. ರೈ, ಜೆಜೆಸಿ ಅಧ್ಯಕ್ಷೆ ವೀಕ್ಷಿತಾ ಉಪಸ್ಥಿತರಿದ್ದರು
ಬಂಟ್ವಾಳ: ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ ಪುತ್ತೂರು ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದೊಂದಿಗೆ ನೃತ್ಯಧಾರ ಮತ್ತು ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಭಾನುವಾರ ಸಂಜೆ ನಡೆಯಿತು.ಶ್ರೀ ಕರ್ನಾಟಕ ಕಲಾಶ್ರೀ ಕೆ. ವಿದ್ವಾನ್ ಚಂದ್ರಶೇಖರ್ ನಾವಡ ಅಧ್ಯಕ್ಷತೆ ವಹಿಸಿ ಮಾತನಾಡಿಭಾರತೀಯ ಕಲಾ ಪ್ರಜ್ಞೆ , ಸಂಸ್ಕಾರ, ಸಂಸ್ಕೃತಿ ಹಾಗೂ ಕಲಾ ವಿದ್ಯೆಯನ್ನು ಕಲಿಸುವ ಶ್ರೀದೇವಿ ನೃತ್ಯಾರಾಧನಾ ಶಾಶ್ವತವಾಗಿ ಉಳಿಯ ಬೇಕು ಎಂದರು. ಸಂಸ್ಕಾರ ಉಳಿದರೆ ಸಂಸ್ಕೃತಿ ಉಳಿಯುತ್ತದೆ. ವಿದ್ಯಾರ್ಥಿಗಳಿಗೆ ಭಕ್ತಿ ಪೂರ್ವಕ ನಡೆ ನುಡಿಯನ್ನು ನೀಡುವುದು ಭಾರತೀಯ ನೃತ್ಯ ಕಲೆಗಳು ಮಾತ್ರ. ಮಕ್ಕಳಿಗೆ ಸಂಸ್ಕಾರ ಕಲಿಸಿ ಕೊಟ್ಟಾಗ ಅವರು ತಮ್ಮ ತಂದೆ ತಾಯಿಯನ್ನು ದೂರ ಮಾಡುವುದಿಲ್ಲ. ಅಂತಹ ಪಕ್ವತೆ ಭಾರತೀಯ ಶಾಸ್ತ್ರೀಯ ಕಲೆಗಳಲ್ಲಿದೆ ಎಂದು ತಿಳಿಸಿದರು.ತುಳುವೆರೆ ಜನಪದ ಕೂಟ ಕೊಡಗು ಇದರ ಜಿಲ್ಲಾ ಖಜಾಂಚಿ ಪ್ರಭು ರೈ ಮಾತನಾಡಿ ವಿದ್ಯಾರ್ಥಿಗಳಿಗೆ ಕಲೆಯನ್ನು ಮತ್ತು ಪ್ರತಿಭೆಯನ್ನು ಈ ಸಂಸ್ಥೆ ಧಾರೆ ಎರೆಯುತ್ತ ಬರುತ್ತಿದೆ,…
ಬಂಟ್ವಾಳ: ತುಂಬೆಯ ಗುಲಾಬಿ ಶೆಟ್ಟಿ ಎಜುಕೇಷನ್ ಮತ್ತು ಸರ್ವೀಸ್ ಟ್ರಸ್ಟ್ ಅಧೀನದ ದಿವೀಶ್ ಫ್ರೀ- ಪ್ರೈಮರಿ ಶಾಲೆಯ ವಾರ್ಷಿಕೋತ್ಸವ ನಡೆಯಿತು.ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಟ್ರಸ್ಟ್ ಅಧ್ಯಕ್ಷ, ಜಿ.ಪಂ.ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ ತುಂಬೆ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಸಂಸ್ಥೆಯ ಸಂಚಾಲಕಿ ಉಷಾ ಚಂದ್ರಪ್ರಕಾಶ್ ಶೆಟ್ಟಿ,ಟ್ರಸ್ಟಿ ಸುಕನ್ಯಾ ಶೆಟ್ಟಿ ಹಾಜರಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಸ್ವಾತಿಶ್ರೀ , ಸಹ ಶಿಕ್ಷಕಿ ಉಷಾ ಸಹಕರಿಸಿದರು. ಸಹ ಶಿಕ್ಷಕಿ ರುಬೀನಾ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಬಂಟ್ವಾಳ: ಸಾರ್ವಜನಿಕರಿಗೆ ಅತ್ಯಾವಶ್ಯಕವಾಗುವ ಕಂದಾಯ ಇಲಾಖೆಯ ಕೆಲಸ ಕಾರ್ಯಗಳು ತುಂಬಾ ವಿಳಂಬವಾಗುತ್ತಿದ್ದು, ಜನಸಾಮಾನ್ಯರು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಮೇಲೆ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದು, ನೊಂದವರು ಜಿಲ್ಲಾಡಳಿತ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ತಾ.ಪಂ. ಮಾಜಿ ಸದಸ್ಯ ಪ್ರಭಾರಕ ಪ್ರಭು ಆರೋಪಿಸಿದರು.ಅವರು ಶನಿವಾರ ಸಂಜೆ ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಸಾರ್ವಜನಿಕರಕುಂದು ಕೊರತೆ ನಿವಾರಿಸುವಲ್ಲಿ ಕಂದಾಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಸರಕಾರಿ ಜಮೀನು ದಾರ್ಖಾಸು ಮಂಜೂರಾತಿದಾರರು ತಮ್ಮ ಜಮೀನಿನ ಪ್ಲೋಟಿಂಗ್ ಬಗ್ಗೆ 1-5 ಅರ್ಜಿ ಸಲ್ಲಿಸಿ ಹತ್ತು ವರ್ಷಗಳಾದರೂ ಸಹ ಇನ್ನೂ ಮುಕ್ಕಿ ಸಿಕ್ಕಿಲ್ಲ. ಅಂಕಿ ಅಂಶಗಳ ಪ್ರಕಾರ ಬಂಟ್ವಾಳ ತಾಲೂಕಿನಲ್ಲಿ 2013 ರಿಂದ 2023 ರವರೆಗೆ 1-5 ಪ್ಲೋಟಿಂಗ್ ಮಾಡುವ 371 ಪ್ರಕರಣಗಳು ಬಾಕಿ ಉಳಿದು ಗೆದ್ದಲು ತಿನ್ನುತ್ತಿದೆ. 2014ರಲ್ಲಿ ಸಲ್ಲಿಸಿದ 45 ಪ್ರಕರಣಗಳು ಬಾಕಿ ಇದೆ. ೨೦೧೫ ರಲ್ಲಿ ೫೯ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ಬಾಕಿ ಇವೆ. ಈ ಬಾಕಿ ಪ್ರಕರಣಗಳಿಗೆ ಬಂಟ್ವಾಳ ತಾಲೂಕಿನಲ್ಲಿ ಸೇವೆ ಸಲ್ಲಿಸಿದ ತಹಶೀಲ್ದಾರರು,…
ಬಂಟ್ವಾಳ: ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳುವ ಸಂಸ್ಕಾರ ನಮ್ಮದಾಗಬೇಕು,ಭಜನೆಯಿಂದ ಮನ ಮತ್ತು ಮನೆ ಎರಡೂ ಪರಿವರ್ತನೆ ಯಾಗುತ್ತದೆ. ಮನ ಪರಿವರ್ತನೆ ಯಾದಾಗ ವ್ಯಕ್ತಿ ಧೀಶಕ್ತಿ ಪಡೆಯುತ್ತಾನೆ ಎಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಹೇಳಿದರು. ಅವರು ಶ್ರೀ ಮೂಕಾಂಬಿಕಾ ಕೃಪಾ ಭಜನಾ ಮಂದಿರ (ರಿ)ಬ್ರಹ್ಮರಕೂಟ್ಲು ಇಲ್ಲಿ ಶುಕ್ರವಾರ ನಡೆದ ೫೨ನೇ ಏಕಾಹ ಭಜನಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ದೇವರ ನಾಮಸ್ಮರಣೆಯಲ್ಲಿ ಶಕ್ತಿ ಇದೆ. ಅದರಿಂದ ನಮ್ಮ ಪಾಪ ಪರಿಹಾರ ವಾಗುತ್ತದೆ. ಪ್ರೀತಿ ಹಾಗೂ ಭಕ್ತಿಯನ್ನು ಜೀವನದಲ್ಲಿ ಮೈಗೂಡಿಸಿಕೊಂಡಾಗ ಜೀವನ ಸಾರ್ಥಕವಾಗುತ್ತದೆ. ಹೃದಯ ಕಮಲದಲ್ಲಿ ಶ್ರೀ ರಾಮನನ್ನು ಪ್ರತಿಷ್ಠಾಪಿಸಿ ಭಕ್ತಿಯ ರಸವನ್ನು ದೇವರಿಗೆ ಸಮರ್ಪಿಸಬೇಕು ಎಂದು ತಿಳಿಸಿದರು. . ಜವಳಿ ಉದ್ಯಮಿ ಎಂ.ಪಿ.ದಿನೇಶ್ ಮಾತನಾಡಿ ನಮ್ಮಲ್ಲಿ ಭಾವ ಭಕ್ತಿ ಇಲ್ಲದಿರುರುವುದರಿಂದ ನಮ್ಮ ಪುಣ್ಯ ಕ್ಷೇತ್ರಗಳ ಪ್ರಾಮುಖ್ಯತೆ ಗೊತ್ತಾಗುವುದಿಲ್ಲ. ಸನಾತನ ಧರ್ಮದ ಬಗ್ಗೆ ಹೆಚ್ಚೆಚ್ಚು ಅರ್ಥೈಸಿಕೊಂಡು ನಮ್ಮ ಧರ್ಮಕ್ಕೆ ಏನು ಕೊಡಲು ಸಾಧ್ಯ ಎನ್ನುವುದನ್ನು ತಿಳಿದು ಕೊಳ್ಳಬೇಕು.…
ಬಂಟ್ವಾಳ: ಭವತಿ ಬಿಕ್ಷಾಂ ದೇಹಿ ಬಡವರ ಬಂಧು ಸೇವಾ ತಂಡ ಕುಕ್ಕಿಪಾಡಿ ಇದರ ಪ್ರಥಮ ವಾರ್ಷಿಕೋತ್ಸವ ಹಾಗೂ 10ನೇ ಸೇವಾ ಯೋಜನೆಯ ಪ್ರಯುಕ್ತ ತುಳುನಾಡ ರಕ್ಷಣಾ ವೇದಿಕೆ (ರಿ.) ವಾಮದಪದವು ಘಟಕ, ಸೂಕ್ತ ನ್ಯೂಸ್, ಸಿದ್ದಕಟ್ಟೆ ಬಂಟ್ವಾಳ, ಟೀಮ್ ಒಳಿತು ಮಾಡು ಮನುಷ ಸೇವಾ ತಂಡ ಪುತ್ತೂರು, ತೆಲಿಕೆದ ಕಲಾವಿದೆರ್ ಕೊಯಿಲ ಇವರ ಸಂಯುಕ್ತ ಆಶ್ರಯದಲ್ಲಿ ಅನಾರೋಗ್ಯ ಪೀಡಿತರ ಚಿಕಿತ್ಸಾ ವೆಚ್ಚ, ಆಶ್ರಮವಾಸಿಗಳಿಗೆ ಅನ್ನದಾನ ಸಹಾಯಾರ್ಥವಾಗಿ ಬಡವರ ಬಂಧು ಸಹಾಯ ನಿಧಿ ಕಾರ್ಯಕ್ರಮ ಜನವರಿ 7ರ ಆದಿತ್ಯವಾರ ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಮಾವಿನಕಟ್ಟೆ ಕೇಂದ್ರ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಹಾಗೂ ಆಯ್ದ ಬಡ ಕುಟುಂಬಕ್ಕೆ ಅಕ್ಕಿ ವಿತರಣಾ ಕಾರ್ಯಕ್ರಮ ನಡೆಯಲಿದೆ. 10ನೇ ಸೇವಾ ಯೋಜನೆಯ ಫಲಾನುಭವಿಗಳ ಸಹಾಯಾರ್ಥವಾಗಿ ಟಿಕೆಟ್ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾರ್ಯಕ್ರಮದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬಂಟ್ವಾಳ: ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ ಪುತ್ತೂರು ಅರ್ಪಿಸುವ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದೊಂದಿಗೆ ನೃತ್ಯಧಾರ ಮತ್ತು ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭ ಜ.7ರಂದು ಭಾನುವಾರ ಸಂಜೆ 4 ಗಂಟೆಗೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದೆ. ಸಂಜೆ 6.30 ಕ್ಕೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ ಸುರತ್ಕಲ್ ಇದರ ನಿರ್ದೇಶಕ ವಿದ್ವಾನ್ ಕೆ. ಚಂದ್ರಶೇಖರ ನಾವಡ ವಹಿಸುವರು. ಮುಖ್ಯ ಅತಿಥಿಗಳಾಗಿ ತುಳುವೆರೆ ಜನಪದ ಕೂಟ ಕೊಡಗು ಇದರ ಜಿಲ್ಲಾ ಖಜಾಂಚಿ ಪ್ರಭು ರೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಭಾಗವಹಿಸುವರು. ಖ್ಯಾತ ಚರ್ಮವಾದ್ಯ ತಯಾರಕ ಮತ್ತು ಕೊಳಲು ವಾದಕರಾಗಿರುವ ಪಿ. ರಾಜರತ್ನಂ ದೇವಾಡಿಗ ಅವರಿಗೆ ಕಲಾನಯನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಹಾಗೂ ಖ್ಯಾತ ವಸ್ತ್ರ ವಿನ್ಯಾಸಕಾರ ಮತ್ತು ಮುಖವರ್ಣಿಕೆ ಕಲಾವಿದ ಸುನೀಲ್ ಉಚ್ಚಿಲ ಅವರನ್ನು ಸನ್ಮಾನಿಸುವುದಾಗಿ ಸಂಚಾಲಕ ಉದಯ್ ವೆಂಕಟೇಶ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಜೆ…
ಬಂಟ್ವಾಳ: ಪ್ರಧಾನಿಯವರ ಕಲ್ಪನೆಯಾದ ಕ್ಷಯ ಮುಕ್ತ ಭಾರತ ನಿರ್ಮಣ ಮಾಡುವಲ್ಲಿ ಸೇವಾ ಸಂಸ್ಥೆಯಾಗಿರುವ ಸೇವಾಂಜಲಿಯ ಕಾರ್ಯ ಜಿಲ್ಲೆಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಸಂಸದ ನಳಿನ್ ಕುಮಾರ್ ಹೇಳಿದರು.ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಕ್ಷಯ ರೋಗಿಗಳಿಗೆ ಆಹಾರಧಾನ್ಯದ ಕಿಟ್ ವಿತರಿಸಿ ಮಾತನಾಡಿದರು. ದೇಶದ ಸಾಮಾನ್ಯ ಜನರ ಆರೋಗ್ಯ ಕಾಳಜಿಯನ್ನು ವಹಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಭಾರತ್, ಜನೌಷಧಿ ಕೇಂದ್ರ ಮೊದಲಾದ ಯೋಜನೆಗಳನ್ನು ಜಾರಿಗೊಳಿಸಿದ್ದು ಇಂದು ಅನೇಕ ಮಂದಿ ರೋಗಿಗಳ ಬಾಳಿಗೆ ಆಶಾಕಿರಣವಾಗಿದ್ದಾರೆ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ನಮ್ಮ ಆರೋಗ್ಯ ಸ್ಥಿರವಾಗಿರಬೇಕಾದರೆ ದುರಾಭ್ಯಾಸಗಳಿಂದ ದೂರ ಇರಬೇಕು. ದೇಹವೇ ದೇವಾಲಯ ಎನ್ನುವಂತೆದೇಹ ಸುಸ್ಥಿತಿಯಲ್ಲಿದ್ದಾಗ ಕಾಯಿಲೆಗಳು ನಮ್ಮನ್ನು ಭಾದಿಸುವುದಿಲ್ಲ. ಸೇವಾಂಜಲಿ ಸಂಸ್ಥೆ ನಿರಂತರವಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಜನಸೇವೆ ಮಾಡುತ್ತಿರುವುದು ಅಭಿನಂದನೀಯ ಎಂದರು.ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಪ್ರಾಸ್ತಾವಿಕವಾಗಿ ಮಾತನಾಡಿದರು.…








