Author: admin

ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ನ್ಯಾಯವಾದಿ ಸುರೇಶ್ ಕುಮಾರ್ ನಾವೂರು ಅವರನ್ನು ಸರಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ. ಬಿ.ಸಿ.ರೋಡಿನಲ್ಲಿ ನೋಟರಿ, ನ್ಯಾಯವಾದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಶ್ ಕುಮಾರ್ ನಾವೂರು ಅವರು ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಕಟ್ಟಡ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ಜೆಸಿಐ ಬಂಟ್ವಾಳದ ಪೂರ್ವಾಧ್ಯಕ್ಷರು, ರೋಟರಿ ಕ್ಲಬ್ ಬಂಟ್ವಾಳ ಟೌನ್, ವಕೀಲರ ಸಂಘ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Read More

ಬಂಟ್ವಾಳ: ಸರಕಾರಿ ಜಾಗದಲ್ಲಿ ಅಕ್ರಮ ವಾಸ್ತವ್ಯ ಹೊಂದಿರುವವರಿಗೆ ೯೪ಸಿ ಅರ್ಜಿ ಸ್ವೀಕಾರಿಸಲು ಅಧಿಕಾರಿಗಳಿಗೆ ಆದೇಶ ನೀಡುವಂತೆ ಕಂದಾಯ ಸಚಿವರಿಗೆ ತಾ.ಪಂ. ಮಾಜಿ ಸದಸ್ಯ ಪ್ರಭಾಕರ ಪ್ರಭು ಪತ್ರ ಬರೆದಿದ್ದಾರೆ.ಕರಾವಳಿ ಸೇರಿದಂತೆ ದ.ಕ ಜಿಲ್ಲೆಯಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಸರಕಾರಿ ಭೂಮಿ ಹಾಗೂ ಕುಮ್ಕಿ ಜಮೀನಿನಲ್ಲಿ ಮನೆ ಕಟ್ಟಿಕೊಂಡು ವಾಸ್ತವ್ಯ ಇರುವವರು ಹಕ್ಕು ಪತ್ರ ಪಡೆಯಲು ೯೪ಸಿ ಅಡಿಯಲ್ಲಿ ಅರ್ಜಿ ನೀಡಲು ಸಾಧ್ಯವಾಗದೇ ಕೆಲವು ಕುಟುಂಬಗಳು ಬಾಕಿ ಉಳಿದಿವೆ. ಇಂತಹ ಕುಟುಂಬಗಳಿಗೆ ಮನೆ ನಂಬರ್ ಇಲ್ಲದೆ ಸರಕಾರದ ವಿವಿಧ ಯೋಜನೆಗಳಿಗೆ ಅವಶ್ಯಕವಾಗಿ ಪಡೆಯುವ ಪಡಿತರ ಚೀಟಿ,ವಸತಿ ಯೋಜನೆ,ವಿವಿಧ ಪಿಂಚಣಿ ಸೇರಿದಂತೆ ಹಲವು ಯೋಜನೆಗಳಿಂದ ವಂಚಿತರಾಗಿದ್ದಾರೆ.ಆದುದರಿಂದ ಸರಕಾರಿ ಭೂಮಿ ಹಾಗೂ ಕುಮ್ಕಿ ಜಮೀನಿನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡು ವಾಸ್ತವ್ಯ ಇರುವವರಿಗೆ ಹಕ್ಕು ಪತ್ರ ನೀಡುವಂತಾಗಲು ೯೪ಸಿ ಅಡಿಯಲ್ಲಿ ಅರ್ಜಿಗಳನ್ನು ಸ್ವೀಕರಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಸೂಕ್ತ ಆದೇಶ ಹೊರಡಿಸುವಂತೆ ಅವರು ಪತ್ರದ ಮೂಲಕ ಆಗ್ರಹಿಸಿದ್ದಾರೆ.

Read More

ಬಂಟ್ವಾಳ :ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ರೂಡಿಸಿಕೊಂಡಲ್ಲಿ ಯಶಸ್ಸಿನ ಗುರಿ ತಲುಪಲು ಸಾಧ್ಯ, ಬಾಲ್ಯದಲ್ಲಿಯೇ ಸದ್ವಿಚಾರ ಹಾಗೂ ಸದ್ಗುಣಗಳನ್ನು ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಗುರುತಿಸಿ, ಎಂದು ಕೋಸ್ಟಲ್ ಬುಲೆಟಿನ್ ಸುದ್ದಿ ಮಾಧ್ಯಮದ ಪ್ರವರ್ತಕ ಸಂತೋಷ್ ಕುಲಾಲ್ ನೆತ್ತರಕೆರೆ ಹೇಳಿದರು. ಅವರು ತುಂಬೆ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹಳೇ ವಿದ್ಯಾರ್ಥಿಗಳ ನೆರವಿನೊಂದಿಗೆ ನಿರ್ಮಾಣವಾದ ಬಿಸಿಯೂಟ ಸೇವನೆಯ ಉಪಹಾರ ಗೃಹದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಅಬ್ದುಲ್ ಸಲಾಂ ಮಾತನಾಡಿ, ವಿದ್ಯಾರ್ಥಿಗಳು ಶಾಲೆಯಲ್ಲಿ ಸಿಗುವ ಸೌಲಭ್ಯ ಹಾಗೂ ಅವಕಾಶಗಳನ್ನು ಸದ್ಭಳಕೆ ಮಾಡಿ ಉತ್ತಮ ವಿದ್ಯಾರ್ಥಿಗಳಾಗಿ ಶಾಲೆಗೆ ಹಾಗೂ ಸಮಾಜಕ್ಕೆ ಹೆಸರು ತನ್ನಿ ಎಂದು ಹೇಳಿದರು. ನಿವೃತ್ತ ಮುಖ್ಯೋಪಾಧ್ಯಾಯ ಶ್ರೀನಿವಾಸ ಕೆದಿಲ ಶಾಲಾ ಆಡಳಿತ ಮಂಡಳಿ ಹಾಗೂ ಹಳೇ ವಿದ್ಯಾರ್ಥಿಗಳ ಸಹಕಾರದಿಂದ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಶುಭ ಹಾರೈಸಿದರು.ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹಮದ್ ವಳವೂರು…

Read More

ಬಂಟ್ವಾಳ: ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಇದರ 28ನೇ ವಾರ್ಷಿಕ ಸಹಮಿಲನ ಕಾರ್ಯಕ್ರಮ ಹಾಗೂ ನೂತನವಾಗಿ ನಿರ್ಮಿಸಿದ ಡಾ. ಎನ್. ನರಸಿಂಹ ಹೊಳ್ಳ ಕಲಾ ವೇದಿಕೆಯ ಉದ್ಘಾಟನಾ ಸಮಾರಂಭ ನಡೆಯಿತು.ನಾಗರಿಕ ಕ್ರಿಯಾ ಸಮಿತಿ ಗೌರವಾಧ್ಯಕ್ಷ ಎನ್. ನರಸಿಂಹರಾಜ್ ಹೊಳ್ಳ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸ್ಥಾಪಕಾಧ್ಯಕ್ಷ ಪ್ರೊ ಶಂಕರ್ ಭಟ್ ದೀಪ ಪ್ರಜ್ವಲಿಸಿ ಮಾತನಾಡಿಸ್ಥಾಪಕಾಧ್ಯಕ್ಷ ಪ್ರೊ ಶಂಕರ್ ಭಟ್ ದೀಪ ಪ್ರಜ್ವಲಿಸಿ ಮಾತನಾಡಿ ಯಾವುದೋ ಊರಿನವರು, ಯಾವುದೋ ಉದ್ಯೋಗದವರು ಈ ಪ್ರದೇಶದಲ್ಲಿ ವಾಸ್ತವ್ಯ ಹೂಡಿ ಈ ಪ್ರದೇಶ ಸಂಚಯಗಿರಿ ಯಾಯಿತು. ಒಂದು ಮುಖ್ಯ ರಸ್ತೆ ಇದ್ದ ಈ ಪ್ರದೇಶದಲ್ಲಿ ಇಂದು 4 ಮುಖ್ಯ ರಸ್ತೆ, ಉಪರಸ್ತೆಗಳು ನಿರ್ಮಾಣಗೊಂಡಿತು. ಸಂಚಯಗಿರಿಯಲ್ಲಿ ವಾಸಿಸಲು ಪುಣ್ಯ ಬೇಕು. ನಾವು ಅನಿವಾರ್ಯವಾಗಿ ಬೇರೆ ಊರಿಗೆ ಹೋದರು ನಮ್ಮ ಮೂಲ ಬೇರು ಇಲ್ಲೇ ಇದೆ ಎಂದ ಅವರು ನಾಗರಿಕ ಕ್ರಿಯಾ ಸಮಿತಿಯು ಔನತ್ಯಕ್ಕೆ ಬೆಳೆಯುತ್ತಿರಲಿ ಎಂದು ಶುಭ ಹಾರೈಸಿದರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ…

Read More

ಬಂಟ್ವಾಳ: ನಾಟಕ ಕಲಾವಿದನೋರ್ವ ಮರಕ್ಕೆ ಬೈಕ್ ಡಿಕ್ಕಿಯಾಗಿ ಮೃತಪಟ್ಟ ಘಟನೆ ದೇವಸ್ಯ ಪಡೂರು ಗ್ರಾಮದ ಮರಾಯಿದೊಟ್ಟು ಕೊಡ್ಯಮಲೆ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.‌ಕೊಡ್ಯಮಲೆ ನಿವಾಸಿ ಗೌತಮ್ (27) ಮೃತಪಟ್ಟ ದುರ್ದೈವಿ. ನಾಟಕ ಕಲಾವಿದನಾಗಿರುವ ಈತ ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ಈ ದುರ್ಘಟನೆ ನಡೆದಿದೆ. ಸರಪಾಡಿ ನಿವಾಸಿ ಪ್ರವೀಣ್ ಕುಮಾರ್ ಎಂಬವರು ತನ್ನ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಯಾರೋ ವ್ಯಕ್ತಿ ಬೈಕ್ ಗೆ ಡಿಕ್ಕಿಯಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಹತ್ತಿರ ಹೋಗಿ ನೋಡಿದಾಗ ತನ್ನ ಪರಿಚಯದ ಗೌತಮ್ ಎಂಬುದು ಗೊತ್ತಾಗಿದೆ. ತಕ್ಷಣ ಅವರ ಮನೆಯವರಿಗೆ ವಿಷಯ ತಿಳಿಸಿ ಆಂಬ್ಯುಲೆನ್ಸ್ ಮೂಲಕ ಬಂಟ್ವಾಳದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅವರನ್ನು ಪರೀಕ್ಷಿಸಿದ ವೈದ್ಯರು ಮೃತ ಪಟ್ಟಿರಯವುದಾಗಿ ತಿಳಿಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಂಟ್ವಾಳ: ಸರಕಾರಿ ಶಾಲೆಗಳಲ್ಲಿ ಓದಿದ ಮಕ್ಕಳೇ ಇಂದು ವಿಜ್ಞಾನ, ಆಡಳಿತ ಸಹಿತ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದು, ತಾವು ಕಲಿತ ಶಾಲಾಭಿವೃದ್ಧಿಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಹೇಳಿದರು.ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿ.ಮೂಡದ ವಾರ್ಷಿಕೋತ್ಸವ, ದಾನಿಗಳ ನೆರವಿನಿಂದ ಆರಂಭಗೊಂಡ ಉಚಿತ ಕಂಪ್ಯೂಟರ್ ತರಗತಿ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು. ಸೈನಿಕರು ಮತ್ತು ಶಿಕ್ಷಕರೊಂದಿಗೆ ಗೌರವಪೂರ್ವಕವಾಗಿ ಸಮಾಜ ನಡೆಸಿಕೊಳ್ಳಬೇಕು ಎಂದ ಅವರು, ಶಾಲೆಗಳನ್ನು ದೇವಾಲಯದ ರೂಪದಲ್ಲಿ ನಾವು ಕಾಣಬೇಕು. ಬಂಟ್ವಾಳ ತಾಲೂಕಿನಲ್ಲಿ ಶಾಲಾಭಿವೃದ್ಧಿಗೆ ಸಮಾಜದ ಕೊಡುಗೆ ಅಪಾರವಾಗಿದೆ. ಹಿರಿಯ ವಿದ್ಯಾರ್ಥಿಗಳು ಮನಸ್ಸು ಮಾಡಿದರೆ, ಶಾಲೆಯನ್ನು ಸುಂದರವಾಗಿ ರೂಪಿಸಬಹುದು ಎಂದು ಬಂಟ್ವಾಳ ತಾಲೂಕಿನ ಹಲವು ಶಾಲೆಗಳನ್ನು ಗಮನಿಸಿದಾಗ ಗೊತ್ತಾಗುತ್ತದೆ. ಇಂಥ ಶಾಲಾಪ್ರೀತಿ ನಮ್ಮ ನಿಮ್ಮಲ್ಲಿರಲಿ, ಇದು ನಿಜವಾದ ಮಾನವೀಯ ಧರ್ಮ ಎಂದರು. ನಿಮ್ಮ ಮಕ್ಕಳನ್ನು ಅತಿಯಾಗಿ ಪ್ರೀತಿಸುವುದು ಒಳ್ಳೆಯದಲ್ಲ. ಪ್ರೀತಿಸುವುದರ ಜೊತೆಗೆ ಧೈರ್ಯವನ್ನು ತುಂಬಿ ಎಂದು ಅವರು…

Read More

ಬಂಟ್ವಾಳ: ತುಳುನಾಡು ಸತ್ಯ, ಧರ್ಮ, ನ್ಯಾಯ, ನೀತಿಗಳ ನೆಲೆಬೀಡು. ಈ ನಾಡೇ ಆರಾಧನಾಲಯಗಳ ತವರೂರು. ಅದೆಷ್ಟೋ ದೈವಸ್ಥಾನಗಳು, ದೇವಸ್ಥಾನಗಳು, ಮಠ, ಮಂದಿರ, ಗುಡಿ, ಗರಡಿಗಳು, ಮಾಡಗಳು, ಬನಗಳು ತನ್ನ ಕಲೆ ಕಾರ್ಣಿಕ ಮೆರೆಯುತ್ತಾ ತುಳುನಾಡಿನ ಧಾರ್ಮಿಕ ಪರಂಪರೆಗೆ ಕೀರ್ತಿ ತಂದಿದೆ. ಇಂತಹ ಧಾರ್ಮಿಕ ಶ್ರದ್ಧಾಕೇಂದ್ರಗಳ ಪೈಕಿ ತುಳುನಾಡಿನಲ್ಲಿ ಪುರಾಣ ಕಾಲಘಟ್ಟದಲ್ಲಿ ಮತ್ತು ಇತಿಹಾಸದಲ್ಲಿ ವೈಭವದಿಂದ ಮೆರೆದ ಸಾನಿಧ್ಯವೊಂದು ಬಂಟ್ವಾಳ ತಾಲೂಕಿನ ಅಗ್ರಾರ್ ಸಮೀಪ ದ ದರ್ಬೆಯಲ್ಲಿದ್ದು ಭಕ್ತಸಮುದಾಯದ ಆಕರ್ಷಣೆಗೆ ಪಾತ್ರವಾಗಿದೆ.ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಅಗ್ರಾರ್ ದರ್ಬೆ ದೇವಿ ಪುರ ಎಂಬಲ್ಲಿನ ನಿಸರ್ಗದ ಮಡಿಲಿನ ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿರುವ ಶ್ರೀ ಆದಿಶಕ್ತಿ ರಾಜ ಚಾಮುಂಡೇಶ್ವರೀ ಕ್ಷೇತ್ರವನ್ನು ಇದೀಗ ಪುನರ್ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು ಪುನುರುತ್ಥಾನದೊಂದಿಗೆ ಗತವೈಭವ ಸಾರಲು ಸಜ್ಜಾಗುತ್ತಿದೆ.ಪೌರಾಣಿಕ ಹಿನ್ನೆಲೆಯೊಂದಿಗೆ ಇತಿಹಾಸದಲ್ಲಿ ವೈಭವದಿಂದ ಮೆರೆದ ತುಳುನಾಡಿನಲ್ಲೇ ಅತ್ಯಂತ ಅಪರೂಪದ ಈ ದೈವೀ ಸಾನಿಧ್ಯವನ್ನು ಅಂದಾಜು ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ಷೇತ್ರವಾಗಿ ಪುನರ್ ನಿರ್ಮಿಸಲು ಚಿಂತನೆ ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ…

Read More

ಬಂಟ್ವಾಳ: ಬೆಂಜನಪದವಿನ ಶುಭಲಜ್ಷ ಸಭಾಂಗಣದಲ್ಲಿ ನಡೆದ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ 36ನೇ ಸಮಾವೇಶದಲ್ಲಿ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿಯಮಿತಕ್ಕೆ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಕ. ಸಂಜೀವ ಪೂಜಾರಿ ಪ್ರಶಸ್ತಿ ಸ್ವೀಕರಿಸಿದರು. ಗೋಕರ್ಣಥ ಕ್ಷೇತ್ರ ಕುದ್ರೋಳಿ ಇದರ ಕೋಶಾಧಿಕಾರಿಯಾಗಿ ಆರ್ ಪದ್ಮರಾಜ್, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ರಾಜೇಶ್ ಬಿ. ಗಣ್ಯರಾದ ನಾರ್ದನ್ ಸ್ಕೈ ಪ್ರಾಪರ್ಟೀಸ್ ನಿರ್ದೇಶಕರಾದ ಕೃತಿನ್ ಅಮೀನ್, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಂ ಪೂಜಾರಿ ಮುಖ್ಯ ಮಂತ್ರಿಗಳ ಮಾಜಿ ಆಪ್ತ ಸಹಾಯಕ ನಿರ್ಮಲ್ ಜಗನ್ನಾಥ್ ಬಂಗೇರ, ಉದ್ಯಮಿಗಳಾದ ನಟೇಶ್ ಪೂಜಾರಿ ಬೆಂಗಳೂರು ಲೋಕೇಶ್ ಪೂಜಾರಿ ಕಲ್ಲಡ್ಕ ವಾರ್ಷಿಕ ಸಮಾವೇಶದ ನಿರ್ದೇಶಕ ಭುವನೇಶ್ ಪಚ್ಚಿನಡ್ಕ, ದಿನಕರ್ ಬಂಗೇರ, ಜಗದೀಶ್ ಚಂದ್ರ ಡಿ.ಕೆ. ಬಂಟ್ವಾಳ ಘಟಕದ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ ಉದಯ್ ಅಮೀನ್ ಮಟ್ಟ,‌ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಕುಸುಮಾಕರ ಕುಂಪಲ…

Read More

ಬಂಟ್ವಾಳ: ರಾರಾಸಂ ಫೌಂಡೇಷನ್ ಬಂಟ್ವಾಳ ಇದರ ಆಶ್ರಯದಲ್ಲಿ 13ನೇ ವರ್ಷದ ಸಾಂಸ್ಕೃತಿಕ ಕಲರವ ರಾರಾಸಂಭ್ರಮ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಅತಿಥಿಗಳಾಗಿ ಎಸ್‌ವಿಎಸ್ ಅನುದಾನಿತ ಹಿ. ಪ್ರಾ. ಶಾಲೆ ಪಾಣೆಮಂಗಳೂರು ಇಲ್ಲಿನ ಮುಖ್ಯ ಶಿಕ್ಷಕ ವಿನೋದ್ ಎನ್., ಜೆಸಿಐ ಬಂಟ್ವಾಳದ ನಿಯೋಜಿತ ಅಧ್ಯಕ್ಷೆ ರಶ್ಮಿ ಶೆಟ್ಟಿ, ಉದ್ಯಮಿ ಸೋಮನಾಥ ಸಾಲಿಯಾನ್ ಉಪಸ್ಥಿತರಿದರು. ಸಂಜೆ ಯೂನಿಯನ್ ಬ್ಯಾಂಕ್ ಪೊಳಲಿ ಶಾಖೆಯ ಪ್ರಬಂಧಕ ಪ್ರಸಾದ್ ಕುಮಾರ್ ಮಾರ್ನಬೈಲು ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಅತಿಥಿಗಳಾಗಿ ನಿವೃತ್ತ ಮುಖ್ಯ ಶಿಕ್ಷಕ ಬಿ. ರಾಮಚಂದ್ರ ರಾವ್, ರೋಟರಿ ಕ್ಲಬ್ ಬೈಕಂಪಾಡಿಯ ಅಧ್ಯಕ್ಷ ಸುಧಾಕರ ಸಾಲ್ಯಾನ್, ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಶಾಂತ್ ಕೋಟ್ಯಾನ್, ಜೆಸಿಐ ಮಡಂತ್ಯಾರಿನ ನಿಯೋಜಿತ ಅಧ್ಯಕ್ಷ ವಿಕೇಶ್ ಮಾನ್ಯ ಭಾಗವಹಿಸಿದ್ದರು. ಬಹುಮುಖ ಪ್ರತಿಭೆ ಶ್ರೀನಿಧಿ ಪಿ.ಎಸ್. ಅವರಿಗೆ ರಾರಾಸಂ ಪುರಸ್ಕಾರ ನೀಡಿ ಗೌರವಿಸಲಾಯಿತು.ರಾರಸಂ ಫೌಂಡೇಷನ್‌ನ ಅಧ್ಯಕ್ಷ…

Read More

ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡದ ಕಾಮಗಾರಿಗೆ ಅನುದಾನ ಕೋರಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಗೆ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷ ಸುರೇಶ್ ಕುಮಾರ್ ನಾವೂರು ಇವರ ಮುಂದಾಳತ್ವದಲ್ಲಿ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಕಟ್ಟಡ ಸಮಿತಿಯ ಕಾರ್ಯದರ್ಶಿ ಸುಕುಮಾರ್ ಬಂಟ್ವಾಳ, ಸಂಘದ ನಿಕಟ ಪೂರ್ವ ಅಧ್ಯಕ್ಷ ನಾರಾಯಣ್ ಸಿ.ಪೆರ್ನೆ, ಮಾಜಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಕುಲಾಲ್ ಅಗ್ರಬೈಲು, ಮನೋಹರ ನೇರಂಬೋಳು, ಸಂಘದ ಸದಸ್ಯರಾದ ರಮೇಶ್ ಕುಲಾಲ್ ಪನೋಲಿ ಬೈಲು ವಕೀಲ ಉಮಾಕರ್ ಉಪಸ್ಥಿತರಿದ್ದರು —

Read More