Author: admin

ಬಂಟ್ವಾಳ: ನಾವು ಮಾಡುವ ಕರ್ಮವನ್ನು ನಿಷ್ಠೆ, ಶ್ರದ್ಧೆಯಿಂದ ಮಾಡಿದರೆ ಭಗವಂತ ಒಲಿಯುತ್ತಾನೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಅರ್ಚಕ ವೆಂಕಟರಮಣ ಅಸ್ರಣ್ಣ ಹೇಳಿದರು.ಮೊಡಂಕಾಪುವಿನ ಶಮ್ಯಾಪ್ರಾಸ ಮನೆಯಲ್ಲಿ ನಡೆದ ಸರಿದಂತರ ಗೌರ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಕೀಲ ಮಹೇಶ್ ಕಜೆ ಅವರು ಬದುಕು ಭಾಗ್ಯ- ಜೀವನ ಸುಗಮ ವಿಷಯದಲ್ಲಿ ವಿಶೇಷ ಉಪನ್ಯಾಸ ನೀಡಿ ನಮ್ಮಲ್ಲಿ ಹೃದಯ ವೈಶಾಲ್ಯತೆ ಇದ್ದಾಗ ರಸವತ್ತಾಗಿ ಹಾಗೂ ಸುಗಮವಾಗಿ ಬದುಕಲು ಸಾಧ್ಯವಿದೆ. ಹಣವಿಲ್ಲದಿರುವುದು ಬಡತನವಲ್ಲ ಬದಲಾಗಿ ಪ್ರೀತಿ ಒಲುಮೆಯಿಲ್ಲದಿರುವುದೇ ಬಡತನ ಎಂದು ವ್ಯಾಖ್ಯಾನಿಸಿದ ಅವರು ಬದುಕು ಭಾಗ್ಯ ಆಗಬೇಕಾದರೆ ನಮ್ಮಲ್ಲಿ ಪ್ರಯತ್ನ ಬೇಕು ಎಂದರು.ಬಂಟ್ವಾಳದ ಉದ್ಯಮಿ ಬಿ. ಲಕ್ಷ್ಮಣ ಅಚ್ಯುತ ಬಾಳಿಗ ಅಧ್ಯಕ್ಷತೆ ವಹಿಸಿದ್ದರು. ಖ್ಯಾತ ವೈದ್ಯೆ, ಸಮಾಜಸೇವಕಿ ಡಾ. ಗೌರಿ ಪೈ ಅವರಿಗೆ ಸರಿದಂತರ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಚಾಲಕ ಪ್ರೊ. ರಾಜಮಣಿ ರಾಮಕುಂಜ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.ಭಾರತೀ ರಾಜಮಣಿ ಸನ್ಮಾನಿತರ ಅಭಿನಂದನಾ ಪತ್ರ ವಾಚಿಸಿದರು. ಮೇಘನ ರಾವ್ ದೇಶಭಕ್ತಿ…

Read More

ಬಂಟ್ವಾಳ: ಕುರಿಯಾಳ ಗ್ರಾಮದ ದುರ್ಗಾನಗರದಲ್ಲಿರುವ ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರದ ವಾರ್ಷಿಕೋತ್ಸವ ಮಂಗಳವಾರ ನಡೆಯಿತು. ವಾರ್ಷಿಕೋತ್ಸವದ ಪ್ರಯುಕ್ತ ಗಣಹೋಮ, ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ನಾಗತಂಬಿಲ, ಶ್ರೀದೇವಿಗೆ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನೆರವೇರಿತು

Read More

ಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂ ನಿಂದ ನೀರು ಹರಿದು ಬರುವ ರಭಸಕ್ಕೆ ಕೆಳಭಾಗದ ಬಲ ಪಾರ್ಶ್ವ ದಲ್ಲಿರುವ ಕೃಷಿ ಭೂಮಿ ಕೊಚ್ಚಿ ಹೋಗಿ ರೈತರು ನಷ್ಟ ಅನುಭವಿಸಿದ್ದು ಸೂಕ್ತ ಪರಿಹಾರ ಹಾಗೂ ಪರ್ಯಾಯ ವ್ಯವಸ್ಥೆ ಒದಗಿಸಿಕೊಡಿ ಎಂದು ಆಗ್ರಹಿಸಿ ರೈತ ಸಂಘ ಹಸಿರು ಸೇನೆಯ ನೇತೃತ್ವದಲ್ಲಿ ರೈತರು ತುಂಬೆ ವೆಂಟೆಡ್ ಡ್ಯಾಂಗೆ ಮುತ್ತಿಗೆ ಹಾಕಿದರು.ಡ್ಯಾಂನ ಪ್ರವೇಶ ಗೇಟ್ ಗೆ ಬೀಗ ಜಡಿದು ಪ್ರತಿಭಟನೆ ನಡೆಸಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಸ್ಥಳಕ್ಕೆ ಬಾರದೆ ಇಲ್ಲಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸ್ಥಳದಲ್ಲೇ ಅಡಿಗೆ ತಯಾರಿಸಲು ಆರಂಭಿಸಿದರು. ಸ್ಥಳಕ್ಕೆ ಮನಪಾ ಇಂಜಿನಿಯರ್ ನರೇಶ್ ಶಣೈ, ತಹಶೀಲ್ದಾರ್ ಎಸ್ ಬಿ. ಕೂಡಲಗಿ ಮತ್ತಿತರು ಭೇಟಿ ನೀಡಿ ರೈತರ ಮನವೊಲಿಸುವ ಪ್ರಯತ್ನ ನಡೆಸಿದರೂ ಜಗ್ಗದೆ ಪ್ರತಿಭಟನೆ ಮುಂದುವರೆಸಿರು. ರೈತ ಸಂಘದ ಮನೋಹರ ಶೆಟ್ಟಿ, ಶ್ರೀದರ ಶೆಟ್ಟಿ, ಸುಬ್ರಹ್ಮಣ್ಯ ಭಟ್, ಮುರುವ ಮಹಾಬಲ ಭಟ್, ಇದಿನಬ್ಬ ಸುದೇಶ್ ಮಯ್ಯ, ಭಾಸ್ಕರ, ಆಮ್ ಆದ್ಮಿ ಪಕ್ಷದ ವಿಷುಕುಮಾರ್…

Read More

ಬಂಟ್ವಾಳ: ಇತ್ತೀಚೆಗೆ ಬಿ.ಸಿ.ರೋಡಿನ ಕೈಕಂಬದಲ್ಲಿ ಸರಣಿ ಕಳವು ನಡೆದು ಜನತೆ ಆತಂಕದಲ್ಲಿರುವ ಮಧ್ಯೆಯೇ ಇದೀಗ ಬಿ.ಸಿ.ರೋಡಿನ ಹೃದಯ ಭಾಗದಲ್ಲಿ, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಅಂಗಡಿ, ಹೊಟೇಲ್ ಗಳಿಗೆ ಕಳ್ಳರು ನುಗ್ಗಿ ಸರಣಿ ಕಳವು ನಡೆಸಿದ್ದಾರೆ. ಬಿ.ಸಿ.ರೋಡಿನ ಹೃದಯ ಭಾಗದಲ್ಲಿರುವ ಹಾಗೂ ಬಂಟ್ವಾಳ ನಗರ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲಿರುವ ಹೊಟೇಲ್ ಆನಿಯಾ ದರ್ಬಾರ್ ಹಾಗೂ ಅದರ ಸುತ್ತಮುತ್ತಲಿನ ಕೆಲ ಅಂಗಡಿಗಳ ಶಟರ್ ಬೀಗ ಮುರಿದು ನಗದು ಕಳ್ಳತನ ನಡೆಸಿರುವುದು ಸೋಮವಾರ ಬೆಳಕಿದೆ ಬಂದಿದೆ. ಅಂಗಡಿ, ಹೊಟೇಲ್ ಗಳನ್ನೇ ಕಳ್ಳರು ಟಾರ್ಗೆಟ್ ಮಾಡುತ್ತಿರುವುದು ವ್ಯಾಪರಿಗಳ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ಬಿ.ಸಿ.ರೋಡು ಪರಿಸರದಲ್ಲಿ ಕಳ್ಳತನ, ಚಿನ್ನಾಭರಣ ದೋಚುವ ಘಟನೆ ನಡೆಯುತ್ತಿದ್ದು ಜನರಲ್ಲಿ ಭಯ ಹುಟ್ಟಿಸಿದೆ. ಕಳ್ಳತನ‌ ನಡೆಸುವ ಸಿಸಿ ಟಿವಿ ದೃಶ್ಯ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ.

Read More

ಬಂಟ್ವಾಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಸಜೀಪ ಮೂಡ ಗ್ರಾಮದ ಶೇಖರ ಪಂಬದ ಅವರಿಗೆ ಅಮ್ಟಾಡಿ ಗ್ರಾಮದ ಮಂಗ್ಲಿಮಾರು ಶ್ರೀ ಅಣ್ಣಪ್ಪ ಸ್ವಾಮಿ ಜುಮಾದಿ ಬಂಟ ಪರಿವಾರ ದೈವಗಳ ದೈವಸ್ಥಾನದ ಆಡಳಿತ ಮಂಡಳಿ ಮೊಕ್ತೇಸರ ರವಿಶಂಕರ ಶೆಟ್ಟಿ ಬಡಾಜೆಗುತ್ತು ಅವರ ನೇತೃತ್ವದಲ್ಲಿ ಸಮಿತಿ ವತಿಯಿಂದ ಅಭಿನಂದನ ಕಾರ್ಯಕ್ರಮ ರವಿವಾರ ಮಂಗ್ಲಿಮಾರು ದೈವಸ್ಥಾನದ ಆವರಣದಲ್ಲಿ ನಡೆಯಿತು.ಬಿ.ಸಿ. ರೋಡ್ ಶ್ರೀ ಚಂಡಿಕಾಪರಮೇಶ್ವರೀ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಲೋಕನಾಥ ಶೆಟ್ಟಿ ಅವರು ಅಭಿನಂದನ ಭಾಷಣ ಮಾಡಿ, ತುಳುನಾಡು ದೈವಾರಾಧನೆಯ ಬೀಡಾಗಿದ್ದು, ಶ್ರದ್ಧೆ , ಭಕ್ತಿ, ನಿಷ್ಠೆಯಿಂದ ದೈವದ ಚಾಕರಿ ಮಾಡುವ ಶೇಖರ ಪಂಬದರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರಕಿರುವುದು ದೈವಾರಾಧನೆಗೆ ಸಂದ ಗೌರವವಾಗಿದೆ. ಅವರಿಗೆ ಮತ್ತಷ್ಟು ಪ್ರಶಸ್ತಿಗಳು ಲಭಿಸಲಿ ಎಂದರು. ಜಿ.ಪಂ. ಮಾಜಿ ಸದಸ್ಯ ರವೀಂದ್ರ ಕಂಬಳಿ ಅವರು ಮಾತನಾಡಿ, ತಾಲೂಕಿನಾದ್ಯಂತ ದೈವ ನರ್ತನ ಸೇವೆ ಸಲ್ಲಿಸುವ ಶೇಖರ ಪಂಬದರನ್ನು ಮಂಗ್ಲಿಮಾರುನಲ್ಲಿ ಅಭಿನಂದಿಸುವ ಮೂಲಕ ರವಿಶಂಕರ ಶೆಟ್ಟಿ ಅವರು ಉತ್ತಮ ಕಾರ್ಯ…

Read More

ಬಂಟ್ವಾಳ: ದ.ಕ. ಗ್ಯಾರೇಜ್ ಮಾಲಕರ ಸಂಘ ಬಂಟ್ವಾಳ ವಲಯದ ವಾರ್ಷಿಕ ಕ್ರೀಡಾಕೂಟ ಬಂಟ್ವಾಳದ ಎಸ್ ವಿ ಎಸ್ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಆಡಳಿತ ಮೋಕ್ತೇಸರ ಅಶೋಕ್ ಶೆಣೈ ಉದ್ಘಾಟಿಸಿದರು.ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಜಿಲ್ಲಾಧ್ಯಕ್ಷ ಕಿಶೋರ್ ಕೇಶವ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕ್ರೀಡಾಕೂಟದಲ್ಲಿ ಸೋಲು ಗೆಲುವು ಸಹಜ. ಅದನ್ನು ಸಮಾನವಾಗಿ ಸ್ವೀಕರಿಸಿಕೊಂಡು ಸೌಹಾರ್ದಯುತವಾಗಿ ಕ್ರೀಡೆಯಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.ದ.ಕ. ಗ್ಯಾರೇಜು ಮಾಲಕರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ ಮಾತನಾಡಿ ಬಂಟ್ವಾಳ ವಲಯ ಹೆಚ್ಚು ಸಂಘಟನಾತ್ಮಕವಾಗಿ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿರುವುದು ಅಭಿನಂದನೀಯ ಎಂದರು. ಸಂಘದ ಅಧ್ಯಕ್ಷ ಜಗದೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ. ಗ್ಯಾರೇಜು ಮಾಲಕರ ಸಂಘದ ಚೇರ್‌ಮನ್ ಎಂ. ದಿವಾಕರ್ ಭಾಗವಹಿಸಿದ್ದರು. ಸಂಘದ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ಜನಾರ್ದನ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಗೌರವ ಸಲಹೆಗಾರ ಸುಧಾಕರ ಸಾಲ್ಯಾನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪ್ರಶಾಂತ್ ಭಂಡಾರ್ಕರ್ ವಂದಿಸಿದರು.

Read More

ಬಂಟ್ವಾಳ: ರಾಜಕೀಯ ಅಧಿಕಾರವನ್ನು ಅಭಿವೃದ್ದಿಯ ಹೆಬ್ಬಾಗಿಲು ತೆಗೆಯುವ ಕೀಲಿ ಕೈ ಎಂದು ಅಂಬೇಡ್ಕರ್ ಹೇಳಿದ್ದರು. ರಾಜಕೀಯ ಅಧಿಕಾರ ಕೈಗೆ ಬಂದಾಗ ಅಭಿವೃದ್ದಿಯ ಹೆಬ್ಬಾಗಿಲು ತೆಗೆಯುವ ಪ್ರಯತ್ನವನ್ನು ಸಮಸ್ತ ಶೋಷಿತ ಅವಕಾಶ ವಂಚಿತ ಜನರ ಪರವಾಗಿ ನಾವು ಮಾಡಬೇಕು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಯುವವಾಹಿನಿಯಿಂದ ಆಗುತ್ತಿದೆ ನಾವೆಲ್ಲರೂ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಹಾದಿಯಲ್ಲಿ ಮುನ್ನಡೆಯ ಬೇಕಾಗಿದೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಶ್ಲಾಘಿಸಿದರು.ಬೆಂಜನಪದವಿನಲ್ಲಿ ಯುವವಾಹಿನಿ ಸಂಸ್ಥೆಯ ೩೬ ನೇ ವಾರ್ಷಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದರು.ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ರಾಜೇಶ್ ಬಿ. ಅಧ್ಯಕ್ಷತೆ ವಹಿಸಿದ್ದರು.ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ಡಾ.ತುಕರಾಮ ಪೂಜಾರಿ ಪ್ರಧಾನ ಭಾಷಣ ಮಾಡಿದರು. ಮುಖ್ಯಮಂತ್ರಿಗಳ ಮಾಜಿ ಆಪ್ತ ಸಹಾಯಕ ನಿರ್ಮಲ್ ಜಗನ್ನಾಥ ಬಂಗೇರ, ಉದ್ಯಮಿಗಳಾದ ನಟೇಶ್ ಪೂಜಾರಿ…

Read More

ಬಂಟ್ವಾಳ :ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಇದರ ಆಶ್ರಯದಲ್ಲಿ ವರ್ಣಾಂಜಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯು ರವಿವಾರ ಬೆಳಿಗ್ಗೆ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಏರ್ಯ ಆಳ್ವ ಫೌಂಡೇಷನ್‌ನ ಅಧ್ಯಕ್ಷ ಏರ್ಯ ಬಾಲಕೃಷ್ಣ ಹೆಗ್ಡೆ ಉದ್ಘಾಟಿಸಿದರು. ಅವರು ಮಾತನಾಡಿ, ಚಿತ್ರಕಲೆ, ಸಂಗೀತ, ಸಾಹಿತ್ಯ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ಕಲಿಸಿಕೊಡುತ್ತದೆ, ಮಕ್ಕಳಿಗೆ ಬಾಲ್ಯದಲ್ಲಿಯೇ ಸಂಸ್ಕಾರ ಶಿಕ್ಷಣ ಅಗತ್ಯವಾಗಿದ್ದು, ಕಲಾ ಪ್ರಾಕಾರಗಳಿಗೆ ಪ್ರಾಮುಖ್ಯತೆ ಸಿಗಬೇಕು, ಸಾವಿರಾರು ಮಕ್ಕಳಿಗೆ ಸೇವಾಂಜಲಿ ಪ್ರತಿಷ್ಠಾಪನದ ಮೂಲಕ ಸ್ಪೂರ್ತಿ ಸಿಗಲಿ ಎಂದರು. ಅತಿಥಿಗಳಾಗಿ ನಿವೃತ್ತ ಮುಖ್ಯ ಶಿಕ್ಷಕರಾದ ಬಿ. ರಾಮಚಂದ್ರ ರಾವ್, ಹಾಗೂ ಮಹಾಬಲೇಶ್ವರ ಹೆಬ್ಬಾರ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ ಪೂಂಜ ಪ್ರಾಸ್ತವಿಕವಾಗಿ ಮಾತನಾಡಿ ಪ್ರತಿ ವರ್ಷ ಕೂಡ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಸಂಘಟಿಸುವುದಾಗಿ ತಿಳಿಸಿದರು . ಮಧ್ಯಾಹ್ನ ನಡೆದ ಸ್ಪರ್ಧಾ ವಿಜೇತರ ಬಹುಮಾನ ವಿತರಣ ಕಾರ್ಯಕ್ರಮದಲ್ಲಿ ಚಿತ್ರಕಲಾ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ಮಂಚಿ, ಪೆರ್ಮುದೆ ಮೋಹನ್ ಕುಮಾರ, ಮುರಳಿಧರ ಪೊಳಲಿ,…

Read More

ಬಂಟ್ವಾಳ: ಪುನರ್ ನಿರ್ಮಾಣಗೊಳ್ಳುತ್ತಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜ.19 ರಿಂದ ಜ. 25ರವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಭಾನುವಾರ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಡೆಯಿತು.ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎಸ್. ಸುಬ್ರಹ್ಮಣ್ಯ ಐತಾಳ್ ಮಂಗಳೂರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಜೀರ್ಣೋದ್ಧಾರ ಸಮಿತಿ ಸಂಚಾಲಕ ಡಾ. ಮೋಹನ್ ಆಳ್ವ ಮೂಡಬಿದಿರೆ ಅಧ್ಯಕ್ಷತೆ ವಹಿಸಿ ಮಾತನಾಡಿ ಮನೆ, ಮನಗಳಲ್ಲಿ ಧಾರ್ಮಿಕ ವಾತವರಣವನ್ನು ನಿರ್ಮಿಸಿಕೊಳ್ಳಬೇಕು, ಏಕ ಮನಸ್ಸಿನಿಂದ ನಾವೆಲ್ಲರೂ ಸೇರಿ ಬ್ರಹ್ಮಕಲಶೋತ್ಸವವನ್ನು ಯಶಸ್ವಿಗೊಳಿಸಬೇಕು., ವೈದಿಕ ವಿಧಿವಿಧಾನ, ಅನ್ನ ಸಂತರ್ಪಣೆ, ಹೊರೆಕಾಣಿಕೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ಯತಾವತ್ತಾಗಿ ನಡೆಯಲು ನಾವೆಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.ಮಾಜಿ ಸಚಿವ ಬಿ. ರಮನಾಥ ರೈ ಮಾತನಾಡಿ ದೈವೇಚ್ಚೇಯಂತೆ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಸುಗಮವಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಬ್ರಹ್ಮಕಲಶೋತ್ಸವ ಸಮಿತಿ ರವಿಶಂಕರ್ ಶೆಟ್ಟಿ ಬಡಾಜೆಗುತ್ತು ಮಾತನಾಡಿ ಭಕ್ತಿ ಇದ್ದಾಗ ದೇವಸ್ಥಾನ ನಿರ್ಮಾಣ ಕಾರ್ಯ ಸುಸೂತ್ರವಾಗಿ ನಡೆಯುತ್ತದೆ ಎಂದು ತಿಳಿಸಿದರು. ಜೀರ್ಣೋದ್ಧಾರ…

Read More

ಬಂಟ್ವಾಳ: ರಾರಾಸಂ ಫೌಂಡೇಷನ್ ಬಂಟ್ವಾಳ ಇದರ ಆಶ್ರಯದಲ್ಲಿ 13ನೇ ವರ್ಷದ ಸಾಂಸ್ಕೃತಿಕ ಕಲರವ ರಾರಾಸಂಭ್ರಮ ಡಿ.25ರಂದು ಸೋಮವಾರ ಬೆಳಿಗ್ಗೆ 9 ರಿಂ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.ಬೆಳಿಗ್ಗೆ 10ಕ್ಕೆ ವಿಜಯ ಬ್ಯಾಂಕಿನ ನಿವೃತ್ತ ಪ್ರಬಂಧಕ ಸೋಮಯ್ಯ ಮೂಲ್ಯ ಹನೈನೆಡೆ ಕಾರ್ಯಕ್ರಮ ಉದ್ಘಾಟಿಸುವರು, ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಎಸ್‌ವಿಎಸ್ ಅನುದಾನಿತ ಹಿ. ಪ್ರಾ. ಶಾಲೆ ಪಾಣೆಮಂಗಳೂರು ಇಲ್ಲಿನ ಮುಖ್ಯ ಶಿಕ್ಷಕ ವಿನೋದ್ ಎನ್., ಜೆಸಿಐ ಬಂಟ್ವಾಳದ ನಿಯೋಜಿತ ಅಧ್ಯಕ್ಷೆ ರಶ್ಮಿ ಶೆಟ್ಟಿ, ಉದ್ಯಮಿ ಸೋಮನಾಥ ಸಾಲಿಯಾನ್ ಭಾಗವಹಿಸುವರು, ಸಂಜೆ ಯೂನಿಯನ್ ಬ್ಯಾಂಕ್ ಪೊಳಲಿ ಶಾಖೆಯ ಪ್ರಬಂಧಕ ಪ್ರಸಾದ್ ಕುಮಾರ್ ಮಾರ್ನಬೈಲು ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಅತಿಥಿಗಳಾಗಿ ನಿವೃತ್ತ ಮುಖ್ಯ ಶಿಕ್ಷಕ ಬಿ. ರಾಮಚಂದ್ರ ರಾವ್, ರೋಟರಿ ಕ್ಲಬ್ ಬೈಕಂಪಾಡಿಯ ಅಧ್ಯಕ್ಷ ಸುಧಾಕರ ಸಾಲ್ಯಾನ್, ಮಡಂತ್ಯಾರು ಹೈಸ್ಕೂಲ್ ರಿಯೂನಿಯನ್ ಸಂಯೋಜಕ ರಾಯನ್ ಡಿಸೋಜಾ ಮಸ್ಕತ್, ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಶಾಂತ್…

Read More