Author: admin

ಬಂಟ್ಚಾಳ: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಎಂಸಿಸಿ ಬ್ಯಾಂಕ್ ಲಿ. ನ ಅಧ್ಯಕ್ಷ ಅನಿಲ್ ಲೋಬೋ ಅವರ ಅಭಿನಂದನಾ ಸಮಾರಂಭ ಎಂ ಸಿಸಿ ಬ್ಯಾಂಕ್ ಲಿ. ಅಭಿಮಾನಿ ಬಳಗದ ವತಿಯಿಂದ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಫರ್ಲಾ ವೆಲಂಕಣಿ ಚರ್ಚ್ ನ ಧರ್ಮಗುರುಗಳಾದ ವಂದನೀಯ ಜೋನ್ ಪ್ರಕಾಶ್ ಪಿರೇರಾ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಅನಿಲ್ ಲೋಬೋ ಅವರ ಜೀವನದಲ್ಲಿ ಅನೇಕ ಅಡಡತಡೆಗಳು ಬಂದರೂ ಅವುಗಳನ್ನು ಮೆಟ್ಟಿ ನಿಂತು ಸಾಧನೆ ಮಾಡಿದ್ದಾರೆ. ಯಾರೋ ಕಟ್ಟಿದ ಬ್ಯಾಂಕನ್ನು ಇಂದು ಅನಿಲ್ ಅವರು ಮುನ್ನಡೆಸುತ್ತಿದ್ದಾರೆ ಅವರ ಮೇಲೆ ದೇವರ ದಯೆ ಇದೆ. ಅನಿಲ್ ಅವರು ನಮಗೆಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದರು.ಸನ್ಮಾನ ಸ್ವೀಕರಿಸಿ ಅನಿಲ್ ಲೋಬೊ ಮಾತನಾಡಿ ಗ್ರಾಹಕರೇ ದೇವರು ಎಂದು ಭಾವಿಸಿದಾಗ ಬ್ಯಾಂಕ್ ಬೆಳೆಯುತ್ತದೆ. ಪ್ರೋತ್ಸಾಹ ಇದ್ದಾಗ ಮಾತ್ರ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಬೆಳೆಯಲು ಸಾಧ್ಯವಿದೆ. ಬ್ಯಾಂಕ್ ಪ್ರಗತಿಯ ಹಿಂದೆ ಕೆಲಸ ಮಾಡಿದವರು ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು, ಸಿಬ್ಬಂದಿಗಳು ಹಾಗೂ ಗ್ರಾಹಕರು.…

Read More

ಬಂಟ್ವಾಳ: ಬಿ.ಸಿ.ರೋಡ್ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಡಿಸೆಂಬರ್ 30ರಂದು ಶಾಲಾ ಆವರಣದಲ್ಲಿ ನಡೆಯಲಿದೆ. ಈ ಸಂದರ್ಭ ಮಧ್ಯಾಹ್ನ 3 ಗಂಟೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಲಿದ್ದು, ಶಾಸಕ ರಾಜೇಶ್ ನಾಯ್ಕ್, ಸ್ಥಳೀಯ ಪುರಸಭಾ ಸದಸ್ಯೆ ವಿದ್ಯಾವತಿ ಪ್ರಮೋದ್ ಕುಮಾರ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

Read More

ಬಂಟ್ವಾಳ: ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರುವಿನಿಂದ ಕಡೇಶಿವಾಲಯ ಗ್ರಾಮದ ಮಧ್ಯೆ ನೇತ್ರಾವತಿ ನದಿಗೆ ಸೌಹಾರ್ದ ಸೇತುವೆ ನಿರ್ಮಿಸಲು ೨೦೧೪ರಲ್ಲಿ ಮಾಜಿ ಸಚಿವ ಬಿ. ರಮನಾಥ ರೈವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುದಾನ ಮಂಜೂರುಗೊಳಿಸಿದ್ದರು ಪ್ರಸ್ತುತ ಸೇತುವೆ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಕೆಆರ್‌ಡಿಸಿಎಲ್ ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು 2024ರ ಜುಲೈ ತಿಂಗಳಿನಲ್ಲಿ ಸೌಹಾರ್ದ ಸೇತುವೆಯ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆಗೆ ಸಿದ್ದಗೊಳಿಸುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಪ್ರಮುಖರಾದ ಬೇಬಿ ಕುಂದರ್, ಅಬ್ಬಾಸ್ ಅಲಿ, ಸಂಪತ್ ಕುಮಾರ್‌ಶೆಟ್ಟಿ, ಶಿವಪ್ಪ ಪೂಜಾರಿ, ಕಾಂಚಲಾಕ್ಷಿ, ವಿಮಲಾ, ಖಾದರ್, ಅಬ್ದುಲ್ ಹಮೀದ್ ಯಾನೆ ಚೇರಿಮೋನು, ಸುರೇಶ್ ಪೂಜಾರಿ, ದಾವೂದ್, ಈಶ್ವರ ಪೂಜಾರಿ, ಹರಿಶ್ಚಂದ್ರ ಕಾಡಬೆಟ್ಟು, ಸಂಜೀವ ಕಡೇಶಿವಾಲಯ, ಸಂಜೀವ ಪೂಜಾರಿ ದಾಸಕೋಡಿ, ಫಾರೂಕ್, ಗೀತಾ, ಸಂಜೀವ ಪೂಜಾರಿ ಕಟ್ಟದಡೆ,…

Read More

ಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂನ ಕೆಳಭಾಗದ ಬಲಪಾರ್ಶ್ವದಲ್ಲಿ ಡ್ಯಾಂನಿಂದ ಹರಿದು ಹೋಗುವ ನೀರಿನ ರಭಸಕ್ಕೆ ಸುಮಾರು 10 ಎಕರೆ ಯಷ್ಟು ವಿಸ್ತೀರ್ಣದ ಅಡಿಕೆ ತೋಟ, ತೆಂಗಿನ ತೋಟ, ಗದ್ದೆಗಳು ಕೊಚ್ಚಿಕೊಂಡು ಹೋಗಿ ಸ್ಥಳೀಯ ರೈತರಿಗೆ ನಷ್ಟ ಉಂಟಾದರೂ, ಜಿಲ್ಲಾಡಳಿತವಾಗಲಿ, ಮಹಾನಗರ ಪಾಲಿಕೆಯಾಗಲಿ, ಸ್ಥಳೀಯ ಜನಪ್ರತಿನಿಧಿಗಳಾಗಲಿ ಈ ಸಮಸ್ಯೆಗೆ ಯಾವುದೇ ಪರಿಹಾರ ಕಂಡುಕೊಳ್ಳದೆ ಭೂಮಿ ನದಿ ಪಾಲಾಗಲು ಸಹಕರಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಜಿಲ್ಲಾಧಿಕಾರಿ ಸಹಿತ ಮಂಗಳೂರು ಮಹಾನಗರ ಪಾಲಿಕೆಯವರ ಗಮನಕ್ಕೆ ತಂದರೂ ಯಾವುದೇ ಪರ್‍ಯಾಯ ವ್ಯವಸ್ಥೆ ಮತ್ತು ಪರಿಹಾರದ ವ್ಯವಸ್ಥೆಯನ್ನು ಕಲ್ಪಿಸಲು ಅಸಾಧ್ಯವಾಗಿದೆ. ಮನಪಾ ಸ್ಥಳೀಯ ರೈತರನ್ನು ಕೂಪಕ್ಕೆ ತಳ್ಳಿ ಮಂಗಳೂರಿನ ಜನರಿಗೆ ನೀರು ಪೂರೈಸುವುದು ಬೇಡ ಎಂದು ಜಿಲ್ಲಾ ಸಮಿತಿಯ ಸಭೆಯಲ್ಲಿ ತಿರ್ಮಾನಿಸಿದಂತೆ ಡಿ. 26ರಂದು ತುಂಬೆ ಡ್ಯಾಂ ಬಳಿ ಇರುವ ನೀರು ಸರಬರಾಜು ಸ್ಥಾವರಕ್ಕೆ ಬೀಗ ಜಡಿದು ಆಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಬಿ. ಶ್ರೀಧರ ಶೆಟ್ಟಿ ಬೈಲುಗುತ್ತು ಎಚ್ಚರಿಸಿದ್ದಾರೆ. ಶುಕ್ರವಾರ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ…

Read More

ಬಂಟ್ವಾಳ: ನಾವೂರು ಸರಕಾರಿ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಅರ್ಚನಾ ಸಿ.ಪಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಪಾಠ ಪ್ರವಚನಗಳ ಜೊತೆ ಕ್ರೀಡೆಯಲ್ಲಿ ಭಾಗವಹಿಸುವುದ್ದರಿಂದ ನಮ್ಮ ದೇಹ ಸದೃಢ ವಾಗುವುದ್ದಲ್ಲದೆ ಉತ್ತಮ‌ ಆರೋಗ್ಯವನ್ನು ಪಡೆಯಲು ಸಾಧ್ಯ ಎಂದು ತಿಳಿಸಿದರು.ಮುಖ್ಯ ಅಥಿತಿಗಳಾಗಿ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಸುನೀತಾ, ಪ್ರೌಢ ಶಾಲಾ‌ ಶಿಕ್ಷಕರಾದ ವಿದ್ಯಾಕುಮಾರಿ, ಕವಿತಾ ಭಂಡಾರಿ, ವಲೇರಿಯನ್ ಗಿಲ್ಬರ್ಟ್ ಡಯಾಸ್, ರೂಪ ನಾಟಿಕರ , ಆತ್ಮಿಕ, ರಮ್ಯ, ವಿದ್ಯಾರ್ಥಿ ನಾಯಕಿ ನಿಖಿತ ಹಾಜರಿದ್ದರು. ಚಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಚಿನ್ನಪ್ಪ.ಕೆ ಜಾಲ್ಸೂರು ಸ್ವಾಗತಿಸಿ, ಶಾಲಾ ನಾಯಕಿ ನಿಖಿತಾ ವಂದಿಸಿದರು. ಶ್ರಾವ್ಯ ಕಾರ್ಯಕ್ರಮ ನಿರೂಪಿಸಿದರು.

Read More

ಬಂಟ್ವಾಳ: ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಕನ್ನಡ ಭಾಷೆ ಕಲಿಕೆಗೆ ಹೆಚ್ಚಿನ ಮಹತ್ವ ನೀಡಬೇಕು. ಜ್ಞಾನ ಸಂಪಾದಿಸಲು ಪ್ರಶ್ನೆ ಕೇಳುವ ಧೈರ್ಯವನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಪಠ್ಯಶಿಕ್ಷಣ ಸಂಪನ್ಮೂಲ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ ಹೇಳಿದರು.ಅವರು ದ.ಕ.ಜಿ.ಪ.ಮಾ.ಹಿರಿಯ ಪ್ರಾಥಮಿಕ ಶಾಲೆ ಮಾಣಿಯಲ್ಲಿ ಶಿಕ್ಷಕರಿಗೆ ಏರ್ಪಡಿಸಲಾದ ಭಾಷಾ ಬೋಧನೆಯ ತರಬೇತು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ನಲಿ-ಕಲಿ ಶಿಕ್ಷಕರು ಚಟುವಟಿಕೆಯೊಂದಿಗೆ ಪರಿಣಾಮಕಾರಿಯಾಗಿ ಕನ್ನಡ ಭಾಷಾ ಕಲಿಕೆಯಲ್ಲಿ ಉಚ್ಚಾರ ಮತ್ತು ಅಕ್ಷರ ದೋಷಗಳನ್ನು ತಿದ್ದುವ ಬಗ್ಗೆ ಚರ್ಚಿಸಲಾಯಿತು. ಮಮತಾ ಕಿರಣ್ ಬಂಟ್ರಿAಜ , ಶಾಂತಿ ಪಾಯಸ್ ಸತ್ತಿಕಲ್ಲು, ಚೇತನಾ ಬಾಲ್ತಿಲ ಕಂಠಿಕ, ಶೀಲಾವತಿ ಮಾಣಿ ಅನಿಸಿಕೆ ವ್ಯಕ್ತಪಡಿಸಿದರು. ಸಮಾಲೋಚನಾ ಸಭೆಯಲ್ಲಿ ಮಾಣಿ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಾವತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಾಣಿ ವಲಯ ಸಿಆರ್‌ಪಿ ಸತೀಶ್ ಸ್ವಾಗತಿಸಿದರು. ಶಿಕ್ಷಕ ನಾಗೇಶ್ ಮಾಣಿ ವಂದಿಸಿದರು. ಕೆದಿಲ ಸಿಆರ್‌ಪಿ ಸುಧಾಕರ ಭಟ್ , ಕಾರ್ಲ ಶಾಲೆಯ ಮುಖ್ಯ ಶಿಕ್ಷಕಿ ಜಾನಕಿ, ಶಿಕ್ಷಣ ಸಂಯೋಜಕಿ ಪ್ರತಿಮಾ ವೈ. ಶುಭ ಹಾರೈಸಿದರು.

Read More

ಬಂಟ್ವಾಳ: ಸ್ವಚ್ಚತೆ ಹಾಗೂ ಕಸ ವಿಲೇವಾರಿಯ ಬಗ್ಗೆ ಅರಿವು ಮೂಡಿಸುವ ಕಸ ಪ್ರಸಂಗ ವಿಶೇಷ ಜಾಗೃತಿ ಕಾರ್ಯಕ್ರಮ ಬಂಟ್ವಾಳ ಪುರಸಭೆ ಹಾಗೂ ಕಾರ್ಮೆಲ್ ಕಾಲೇಜು ಮೊಡಂಕಾಪು ಇದರ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಮಂಗಳವಾರ ಮೊಡಂಕಾಪುವಿನ ಕಾರ್ಮೆಲ್ ಪದವಿ ಕಾಲೇಜಿನಲ್ಲಿ ನಡೆಯಿತು. ಮಂಗಳೂರಿನ ಹಸಿರು ದಳದ ಸಂಯೋಜಕ ನಾಗರಾಜ್ ಬಜಾಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ನಮ್ಮ ಮನಸ್ಥಿತಿಯನ್ನು ಮೊದಲು ಬದಲಾಯಿಸಿಕೊಂಡು ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಬೇಕು. ನಮ್ಮಿಂದ ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿದಾಗ ಮಾತ್ರ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸಲು ಸಾಧ್ಯ ಎಂದರು.ಮುಖ್ಯ ಅತಿಥಿಗಳಾಗಿ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಆರೋಗ್ಯ ನಿರೀಕ್ಷಕ ರತ್ನಪ್ರಸಾದ್, ಪತ್ರಕರ್ತ ಸಂದೀಪ್ ಸಾಲ್ಯಾನ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಭ. ಡಾ. ಲತಾ ಫೆರ್ನಾಂಡೀಸ್ ಅಧ್ಯಕ್ಷತೆ ವಹಿಸಿದ್ದರು.‌ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ವಿಜೇತ ಕುಲಾಲ್ ವೇದಿಕೆಯಲ್ಲಿ ಹಾಜರಿದ್ದರು. ವಿದ್ಯಾರ್ಥಿಗಳಾದ ಜೋಸ್ವಿಟಾ ಸ್ವಾಗತಿಸಿದರು, ಇಮ್ದಾದ್ ವಂದಿಸಿದರು, ಪ್ರೇಕ್ಷಾ ಕಾರ್ಯಕ್ರಮ ನಿರೂಪಿಸಿದರು.

Read More

ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಸಂಭ್ರಮ ಸಡಗರದಿಂದ ಸೋಮವಾರ ನಡೆಯಿತು.ಕ್ಷೇತ್ರದ ತಂತ್ರಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯರ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ಕೆ.ಸುಂದರ ರಾವ್ ಮತ್ತು ಅರ್ಚಕ ನಾಗೇಶ ರಾವ್ ದೇವರಿಗೆ ವಿಶೇಷ ಪೂಜೆ ನೆರವೇರಿಸಿದರು.ಇದೇ ವೇಳೆ ದೇವರ ಬಲಿ, ನೃತ್ಯ ಭಜನೆ ಸಹಿತ ಪಲ್ಲಕಿ ಉತ್ಸವ, ಸಾಮೂಹಿಕ ಆಶ್ಲೇಷ ಬಲಿ ಮತ್ತು ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಭಕ್ತರು ಪಾಲ್ಗೊಂಡರು. ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ, ಸದಸ್ಯರಾದ ರಾಜೇಶ ಗೋವಿಂದಬೆಟ್ಟು, ಶರತ್ ಕುಮಾರ್ ಕೊಯಿಲ, ಆನಂದ ಬುರಾಲು, ಲೋಕೇಶ ಕೈತ್ರೋಡಿ, ನಳಿನಿ ಬದನಡಿ, ಯಮುನಾ ಕೈತ್ರೋಡಿ, ವಾಸ್ತುಶಿಲ್ಪಿ ಮೋನಪ್ಪ ಆಚಾರ್ಯ ಬೈದಗುತ್ತು, ರಾಯಿ ಗ್ರಾ.ಪಂ. ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ಮಾಜಿ ಅಧ್ಯಕ್ಷರಾದ ಬಿ.ದಯಾನಂದ ಸಪಲ್ಯ, ಹರೀಶ ಆಚಾರ್ಯ ರಾಯಿ,…

Read More

ಬಂಟ್ವಾಳ: ನೇತ್ರಾವತಿ ನದಿ ತೀರದಲ್ಲಿರುವ, ಸಜೀಪಮುನ್ನೂರು ಗ್ರಾಮದ ಮುಗುಳ್ಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಸೋಮವಾರ ಶ್ರೀಕ್ಷೇತ್ರದಲ್ಲಿ ನಡೆಯಿತು. ಕ್ಷೇತ್ರದ ನಾಗರ ಕಟ್ಟೆಯಲ್ಲಿ ನಾಗತಂಬಿಲ ನಡೆಯಿತು ಬಳಿಕ ಆಶ್ಲೇಷ ಬಲಿ ಹೋಮ, ಆಶ್ಲೇಷ ಬಲಿ ಪೂಜೆ, ಸಾನಿಧ್ಯ ಕಲಶಾಭಿಷೇಕ, ಗಣಯಾಗ ಹಾಗೂ ವಿಶೇಷ ಮಹಾಪೂಜೆ ನೆರವೇರಿತು. ಸಜೀಪಮಾಗಣೆಯ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ ಮೊದಲಾದವರು ಉಪಸ್ಥಿತರಿದ್ದರು.

Read More

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ವರ್ಣಾಂಜಲಿ ಡಿ.24ರಂದು ಭಾನುವಾರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9.30ಕ್ಕೆ ಏರ್ಯ ಆಳ್ವ ಫೌಂಢೇಷನ್‌ನ ಏರ್ಯ ಬಾಲಕೃಷ್ಣ ಹೆಗ್ಡೆ ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ಬಿ. ರಾಮಚಂದ್ರ ರಾವ್, ಕರಣ್ ಕೆಟರರ್‍ಸ್‌ನ ಕೆ.ಜಿ.ವಿಠಲ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣಕುಮಾರ್ ಪೂಂಜ ತಿಳಿಸಿದ್ದಾರೆ.

Read More