Author: admin
ಬಂಟ್ವಾಳ: ಯುವ ಸಮೂಹದ ಸದ್ಬಳಕೆಯು ದೇಶದ ಅಭಿವೃದ್ದಿಗೆ ಪೂರಕವಾಗಿದೆ. ಯುವ ಸಮುದಾಯದ ಸಕಾರಾತ್ಮಕ ಚಿಂತನೆಗಳಲ್ಲಿ ತೊಡಗಿಸಿಕೊಂಡಾಗ ಸಮಾಜದ ಎಲ್ಲ ರೀತಿಯ ದುಷ್ಚಟಗಳಿಗೆ ಕಡಿವಾಣ ಬೀಳುವುದರ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅಭಿಪ್ರಾಯಪಟ್ಟರು. ಭೂಯಾ ಸ್ಪೋಟ್ರ್ಸ್ ಕ್ಲಬ್ ಆಲಡ್ಕ-ಪಾಣೆಮಂಗಳೂರು ಇದರ ಆಶ್ರಯದಲ್ಲಿ ಹಾಗೂ ರಮಾನಾಥ ರೈ ಅಭಿಮಾನಿ ಬಳಗ ಬಂಟ್ವಾಳ ವಿಧಾನಸಭಾ ಕ್ಷೇತ್ರ ಇದರ ಸಹಯೋಗದಲ್ಲಿ ಆಹ್ವಾನಿತ 16 ತಂಡಗಳ ನಿಗದಿತ ಓವರ್ ಗಳ “ಕಾಂಗ್ರೆಸ್ ಟ್ರೋಫಿ-2023” ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಭೂಯಾ ಸ್ಪೋಟ್ರ್ಸ್ ಕ್ಲಬ್ ಆಲಡ್ಕ-ಪಾಣೆಮಂಗಳೂರು ಇದರ ಆಶ್ರಯದಲ್ಲಿ ಹಾಗೂ ರಮಾನಾಥ ರೈ ಅಭಿಮಾನಿ ಬಳಗ ಬಂಟ್ವಾಳ ವಿಧಾನಸಭಾ ಕ್ಷೇತ್ರ ಇದರ ಸಹಯೋಗದಲ್ಲಿ ಆಹ್ವಾನಿತ 16 ತಂಡಗಳ ನಿಗದಿತ ಓವರ್ ಗಳ “ಕಾಂಗ್ರೆಸ್ ಟ್ರೋಫಿ-2023” ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ಪ್ರಯುಕ್ತ ಭಾನುವಾರ ಆಲಡ್ಕ ಮೈದಾನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್…
ಮಹಿಳೆಯರು ಸಂಘಟಿತರಾದಾಗ ಸಮಾಜಕ್ಕೆ ಒಳಿತು . ಬಂಟ ಮಹಿಳೆಯರು , ಯುವತಿಯರು ವಿವಿಧ ಕ್ಷೇತ್ರ ಗಳಲ್ಲಿ ವಿಶ್ವ ದಲ್ಲೇ ಗಣನೀಯ ಸಾಧನೆ ಮಾಡಿರುತ್ತಾರೆ . ಎಂದು ಬಂಟ್ವಾಳ ತಾಲೂಕು ಬಂಟರ ಸಂಘ ದ ಅಧ್ಯಕ್ಷರಾದ ಚಂದ್ರಹಾಸ್ ಶೆಟ್ಟಿ ಯವರು ಫರಂಗಿಪೇಟೆ ವಲಯ ಬಂಟರ ಸಂಘ ಮಹಿಳಾ ವಿಭಾಗದ ದಶ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಯಾಗಿ ಭಾಗವಹಿಸಿ ಮಾತನಾಡಿದರು .ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಬಂಟ ಸಮಾಜದ ಯುವತಿಯರನ್ನು ವೇದಿಕೆಯಲ್ಲಿ ಗೌರವಿಸಲಾಯಿತುವೇದಿಕೆಯಲ್ಲಿ ಬಂಟ್ವಾಳ ತಾಲೂಕು ಬಂಟರ ಸಂಘ ಮಹಿಳಾ ವಿಭಾಗದ ಅಧ್ಯಕ್ಷೆ ರಮಾ ಎಸ್ ಭಂಡಾರಿ , ಫರಂಗಿಪೇಟೆ ವಲಯ ಬಂಟರ ಸಂಘ ದ ಮಾಜಿ ಅಧ್ಯಕ್ಷರಾದ ಸದಾನಂದ ಆಳ್ವ ಕಂಪ , ಫರಂಗಿಪೇಟೆ ವಲಯ ಬಂಟರ ಸಂಘ ಅಧ್ಯಕ್ಷ ದೇವದಾಸ್ ಶೆಟ್ಟಿ ಕೊಡ್ಮಾಣ್ , ಕಾರ್ಯದರ್ಶಿ ಗಿರೀಶ್ ಶೆಟ್ಟಿ ಮಹಿಳಾ ವಿಭಾಗದ ಅಧ್ಯಕ್ಷೆ ವೀಣಾ ಎಂ ಶೆಟ್ಟಿ , ಕಾರ್ಯದರ್ಶಿ ಸರೋಜಿನಿ ಆಳ್ವ , ಸಂಚಾಲಕಿ ನಾಗರತ್ನ ಯು ರೈ ,…
ಬಂಟ್ವಾಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನೀಡಿದ ಬಂದ್ ಕರೆಯನ್ವಯ ಬಂಟ್ವಾಳ ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳು ಬಂದ್ ನಡೆಸಿ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿತು. ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸಂಘಟನೆಯ ಒಗ್ಗಟ್ಟು ಪ್ರದರ್ಶಿಸಿದರು. ಸದಾ ಸಾರ್ವಜನಿಕರಿಂದ ತುಂಬಿರುತ್ತಿದ್ದ ತಾಲೂಕು ಆಡಳಿತ ಸೌಧ, ಪುರಸಭೆ ಕಾರ್ಯಲಯ, ಸರ್ಕಾರಿ ಆಸ್ಪತ್ರೆ, ನೋಂದಾಣಿ ಕಚೇರಿ ಬಿಕೋ ಎನ್ನುತ್ತಿದ್ದವು. ಸಾರ್ವಜನಿಕ ಸೇವೆ ಲಭ್ಯವಾಗದೆ ಜನರು ತೊಂದರೆ ಪಡುವಂತಾಯಿತು. ಮುಷ್ಕರದ ಬಗ್ಗೆ ಮಾಹಿತಿ ಇಲ್ಲದೆ ಜನರು ಸರ್ಕಾರಿ ಕಚೇರಿಗೆ ಆಗಮ,ಇಸಿ ವಾಪಸ್ಸು ತೆರಳುವ ದೃಶ್ಯ ಅಲ್ಲಲ್ಲಿ ಕಂಡು ಬಂತು. ಸರ್ಕಾರಿ ಕಚೇರಿಗಳು ಕಾರ್ಯ ಸ್ಥಗಿತಗೊಳಿಸಿರುವುದರಿಂದ ಬಂದ್ ಬಿಸಿ ನೇರವಾಗಿ ಸಾರ್ವಜನಿಕರ ಮೇಲೆ ತಟ್ಟಿತು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇದರ ಬಂಟ್ವಾಳ ಶಾಖೆಯ ಅಧ್ಯಕ್ಷ ಉಮನಾಥ ರೈ ಹಾಗೂ ಕಾರ್ಯದರ್ಶಿ ಸಂತೋಷ್ ತುಂಬೆ ಪ್ರತಿಕ್ರಿಯಿಸಿ ಸರ್ಕಾರ ನಮ್ಮ ಬೇಡಿಕೆಗೆ ಆಂಶಿಕ ಒಪ್ಪಿಗೆಯನ್ನು ನೀಡಿದ ಹಿನ್ನಲೆಯಲ್ಲಿ ಮುಷ್ಕರವನ್ನು ವಾಪಸ್ಸು ಪಡೆಯಲಾಗಿದೆ. ಬಂಟ್ವಾಳ ತಾಲೂಕಿನಲ್ಲಿ ಸರ್ಕಾರಿ…
ಬಂಟ್ವಾಳ: ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಬಂಟ್ವಾಳ ತಾಲೂಕೊನ ಪುದು ಗ್ರಾಮ ಪಂಚಾಯತ್ ಗೆ ಫೆ.25 ರಂದು ನಡೆದ ಚುನಾವಣೆಯ ಮತ ಎಣಿಕೆ ಶನಿವಾರ ಬಿ.ಸಿ.ರೋಡಿನ ಆಡಳಿತ ಸೌಧದಲ್ಲಿ ಮಂಗಳವಾರ ನಡೆದಿದ್ದು,ರಾತ್ರಿ ವೇಳೆಗೆ ಸಂಪೂರ್ಣ ಫಲಿತಾಂಶ ಪ್ರಕಟಗೊಂಡು ನಿರೀಕ್ಷೆಯಂತೆ ಕಾಂಗ್ರೆಸ್ ಬೆಂಬಲಿತರು 21 ಸ್ಥಾನಗಳಲ್ಲಿ ಜಯಭೇರಿ ಸಾಧಿಸುವ ಮೂಲಕ ಮರಳಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.ಎಸ್.ಡಿ.ಪಿ.ಐ. ಬೆಂಬಲಿತ 7 ಸ್ಥಾನಗಳಲ್ಲಿ ಗೆಲುವನ್ನು ದಾಖಲಿಸಿದರೆ,ನಿರೀಕ್ಷಿತ 6 ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿ.ಸಿ.ರೋಡಿನ ಆಡಳಿತ ಸೌಧದಲ್ಲಿ ಮತ ಎಣಿಕೆ ನಡೆಯುತ್ತಿರುವುದು ಕಳೆದ ಅವಧಿಯಲ್ಲಿ 27 ಸ್ಥಾನಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಬೆಂಬಲಿತರು ಈ ಚುನಾವಣೆಯಲ್ಲಿ ಆರು ಸ್ಥಾನವನ್ನು ಕಳೆದುಕೊಂಡಿದ್ದು,ಒಂದು ಸ್ಥಾನದಲ್ಲಿದ್ದ ಎಸ್ ಡಿಪಿಐ ಆರು ಸ್ಥಾನವನ್ನು ಹೆಚ್ಚಿಸಿಕೊಂಡು 7 ಸ್ಥಾನ ಪಡೆದು ಬೀಗಿದೆ.ಇತ್ತ ಬಿಜೆಪಿ ಬೆಂಬಲಿತರು ನಿರೀಕ್ಷಿತ ಆರುಸ್ಥಾನವನ್ನು ಪಡೆದು ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ.ರಿಯಾಜ್,ಮಹಮ್ಮದ್,ಇಸಾಮ್,ರಜಿಯಾ,ರಮ್ಲಾನ್,ರಜಾಕ್,ಮಹಮ್ಮದ್ ಅನ್ಸ್,ಸಹರಾ,ಅಥಿಕಾ ,ಲಿಡಿಯಾ ಪಿಂಟೋ,ಇಕ್ಬಾಲ್ ಸುಜೀರ್, ಈಶು ಕುಮಾರ್,ಮಮ್ತಾಜ್,ರೆಹನಾ,ಹುಸೈನ್ ಪಾಡಿ,ನಬೀಸಾ,ರುಕ್ಸಾನ,ಜಯಂತಿ,ರಶೀದಾಬಾನು (ಎಲ್ಲರೂ ಕಾಂಗ್ರೆಸ್ ಬೆಂಬಲಿತ ವಿಜೇತರು)ಪದ್ಮನಾಭ ಶೆಟ್ಟಿ ಪುಂಚಮೆ, ಸುಬ್ರಹ್ಮಣ್ಯರಾವ್,ಸುಗುಣ,ಮನೋಜ್ ಅಚಾರ್ಯ…
ಬಂಟ್ವಾಳ: ಮಂಗಳೂರು ಕ್ಷೇತ್ರ ಹಾಗೂ ಬಂಟ್ವಾಳ ಕ್ಷೇತ್ರದ ಹಲವು ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಯ ಪೈಪ್ಲೈನ್ ಕಾಮಗಾರಿ ಗೊಂದಲದ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಸಜೀಪ ಮುನ್ನೂರು ಗ್ರಾ.ಪಂ. ವ್ಯಾಪ್ತಿಯ ಆಲಡಿಯಲ್ಲಿ ನಿರ್ಮಾಣ ಗೊಂಡಿರುವ ಜಾಕ್ವೆಲ್ಗೆ ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್ ಭೇಟಿ ನೀಡಿ ಅಧಿಕಾರಿಗಳು ಹಾಗೂ ಗ್ರಾ.ಪಂ.ಸದಸ್ಯರ ಜೊತೆ ಸಮಾಲೋಚನೆ ನಡೆಸಿದರು. ಸಜೀಪ ಮುನ್ನೂರು ಸೇರಿದಂತೆ 5 ಗ್ರಾ.ಪಂ.ವ್ಯಾಪ್ತಿಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ವಿಶೇಷ ಪ್ರಯತ್ನ ದಿಂದ 279 ಕೋಟಿ ರೂ ಗಳು ಮಂಜೂರಾಗಿದ್ದು, ಅದರ ಅನುಷ್ಠಾನ ಕೊಂಚ ವಿಳಂಬವಾಗುವುದರಿಂದ, ಈ ಗ್ರಾಮದ ಜನತೆಗೆ ಕುಡಿಯುವ ನೀರು ತತಕ್ಷಣ ನೀಡಲು ಕರೋಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ನೀರು ಶುದ್ದೀಕರಣಕ್ಕಾಗಿ ಪಿಲ್ಟರ್ ಅಳವಡಿಸಿ, 0.2 ಎಂ.ಎಲ್.ಡಿ. ನೀರನ್ನು ಸಜೀಪ ಮುನ್ನೂರು ಗ್ರಾಮಕ್ಕೆ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.ಜತೆಗೆ ಉಳ್ಳಾಲ ಹಾಗೂ ಬಂಟ್ವಾಳದ ಹಲವು ಗ್ರಾಮಗಳಿಗೆ ನೀರನ್ನು ಒದಗಿಸುವ ಕಚ್ಚಾನೀರು…
ಬಂಟ್ವಾಳ: ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಕ್ಯಾಂಟೀನ್ ಒಂದರಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಸೊತ್ತುಗಳು ಅಗ್ನಿಗಾಹುತಿಯಾದವು. ಸಣ್ಣ ಕ್ಯಾಂಟೀನ್ ಒಂದರಲ್ಲಿ ರಾತ್ರಿ ಸುಮಾರು 7.30ರ ವೇಳೆ ಬೆಂಕಿ ಕಾಣಿಸಿಕೊಂಡಿದ್ದನ್ನು ಹತ್ತಿರದ ಮನೆಯವರು ನೋಡಿ ಆತಂಕದಿಂದ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸಾರ್ವಜನಿಕರು ಬೆಂಕಿ ನಂದಿಸಿದ್ದು, ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಲಾಗಿದೆ. ಕಲ್ಲಡ್ಕದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಅಗ್ನಿಶಾಮಕದಳ ಆಗಮಿಸುವುದು ತಡವಾದರೂ ಬಳಿಕ ಕಾರ್ಯಾಚರಣೆ ನಡೆಸಿದರು. ಘಟನೆಯಲ್ಲಿ ಅಪಾರ ಪ್ರಮಾಣದ ಸೊತ್ತುಗಳು ನಾಶವಾಗಿದೆ.
ಬಂಟ್ವಾಳ : ಸಜಿಪಮೂಡ ಗ್ರಾಮದ ಕೊಳಕೆ ನಿವಾಸಿ, ಕೃಷಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಎಸ್.ಗಂಗಾಧರ ಭಟ್ ಕೊಳಕೆ(77) ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ಫೆ.27ರಂದು ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರು ನಂದಾವರ ಶ್ರೀ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ಮಾಜಿ ಟ್ರಸ್ಟಿಯಾಗಿ, ಬಂಟ್ವಾಳ ತಾಲೂಕು ಕಸಾಪ ಕನ್ನಡ ಭವನ ನಿರ್ಮಾಣ ಕಟ್ಟಡ ಸಮಿತಿ ಅಧ್ಯಕ್ಷರಾಗಿ, ನೀರ್ಪಾಜೆ ಭೀಮಭಟ್ ಅಭಿಮಾನಿ ಬಳಗದ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ತನ್ನ ದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ದಾನ ಮಾಡಿದ್ದರು.
ಇರುವೈಲು ತಾಟೆ ಹೆಸರುಳ್ಳ ಜಯಂತ್ ಅಂಚನ್ ರವರ ಹೋಟೆಲ್ ಬಂಟ್ವಾಳ: ತುಳುನಾಡಿನ ಕಂಬಳ ಕ್ರೀಡೆ ದೇಶ ವಿದೇಶಗಳಲ್ಲಿ ಜನಪ್ರಿಯತೆಯನ್ನು ಪಡೆದುಕೊಳ್ಳುತ್ತಿರುವಂತೆಯೇ ಕಂಬಳದ ಕೋಣಗಳಿಗೂ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಾಲಿವುಡ್, ಸ್ಯಾಂಡಲ್ವುಡ್, ಕ್ರಿಕೆಟ್ ತಾರೆಗಳಂತೆ ಕಂಬಳದ ಕೋಣಗಳಿಗೂ ಸ್ಟಾರ್ ವ್ಯಾಲ್ಯೂ ಬಂದಿರುವುದು ವಿಶೇಷ. ಈ ಪೈಕಿ ಕಂಬಳ ಕ್ಷೇತ್ರದಲ್ಲಿ ಅತೀ ಹೆಚ್ಚು ಅಭಿಮಾನಿಯನ್ನು ಹೊಂದಿರುವ ಕೋಣ ಇರುವೈಲು ಪಾಣೆಲದ ತಾಟೆ. ಬಂಟ್ವಾಳ ತಾಲೂಕಿನ ತಾಟೆಯ ಅಪ್ಪಟ ಅಭಿಮಾನಿಯೋರ್ವ ತನ್ನ ಹೊಟೇಲ್ ಗೆ “ಇರುವೈಲು ತಾಟೆ” ಎಂದು ಹೆಸರು ಇಟ್ಟುಕೊಂಡು ತಾಟೆಯ ಮೇಲಿನ ಪ್ರೀತಿ, ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಶಂಭೂರಿನ ಕೊಪ್ಪಳ ನಿವಾಸಿಯಾಗಿರುವ ಜಯಂತ್ ಅಂಚನ್ 9 ವರ್ಷಗಳಿಂದ ಶಿವಶಕ್ತಿ ಎನ್ನುವ ಫಾಸ್ಟ್ ಪುಡ್ ಉದ್ಯಮ ನಡೆಸುತ್ತಿದ್ದರು. ಕಂಬಳ ಪ್ರೇಮಿಯಾಗಿರುವ ಇವರು ಇರುವೈಲು ತಾಟೆಯ ಅಪ್ಪಟ ಅಭಿಮಾನಿ. ಕಳೆದ ಒಂದು ವರ್ಷದ ಹಿಂದೆ ತನ್ನ ಫಾಸ್ಟ್ಪುಡ್ ಕೇಂದ್ರವನ್ನು ಹೊಟೇಲ್ ಆಗಿ ಮೇಲ್ದರ್ಜೆಗೇರಿಸಿದಾಗ ಇರುವೈಲು ತಾಟೆ ಎಂದು ನಾಮಕರಣಗೊಳಿಸಿದ್ದಾರೆ. ಶಂಭೂರಿನ ಶೇಡಿಗುರಿಯಲ್ಲಿರುವ “ಹೊಟೇಲ್…
https://youtu.be/vXJ0jt5lniA ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರೀ ದೇವಿಗೆ ಬ್ರಹ್ಮಕುಂಭಾಭಿಷೇಕ ಬಂಟ್ವಾಳ: ಬಿ.ಸಿ.ರೋಡಿನ ಚಂಡಿಕಾನಗರದ ಶ್ರೀ ಚಂಡಿಕಾ ಪರಮೇಶ್ವರೀ ಅಮ್ಮನವರಿಗೆ ಸೋಮವಾರ ವಿಜ್ರಂಭ್ರಣೆಯಿಂದ ಬ್ರಹ್ಮ ಕುಂಭಾಭಿಷೇಕ ನಡೆಯಿತು. ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ ಗಣಹೋಮ, 7.43ರ ಮೀನ ಲಗ್ನದಲ್ಲಿ ಅಷ್ಟಬಂಧ ಲೇಪನ, ಬಳಿಕ ಪರಿಕಲಶಾಭಿಷೇಕ ನಡೆದು ಶ್ರೀ ದೇವಿಗೆ ಬ್ರಹ್ಮಕುಂಭಾಭಿಷೇಕ ನಡೆಯಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಈ ಸಂದರ್ಭ ಉಪಸ್ಥಿತರಿದ್ದು ಪುಣ್ಯದಾಯಕ ದೃಶ್ಯವನ್ನು ಕಣ್ತುಂಬಿಕೊಂಡು ಪುನೀತರಾದರು. ಬಳಿಕ ಅಲಂಕಾರ ನಡೆದು ಮಹಾಪೂಜೆ ಜರುಗಿ ಪ್ರಸಾದ ವಿತರಿಸಲಾಯಿತು. ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡರು. ಈ ಸಂದರ್ಭ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶ ಮಹೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಮಲ್ಲಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ, ಗೌರವಾಧ್ಯಕ್ಷ ತಿಮ್ಮಪ್ಪ ರೈ ಏರಿಮಾರ್, ಉಪಾಧ್ಯಕ್ಷ ಸದಾಶಿವ ನಾಯಕ್, ಕಾರ್ಯದರ್ಶಿ ಇಂದಿರೇಶ್, ಜತೆ ಕಾರ್ಯದರ್ಶಿ ಮಂಜುನಾಥ ಪೈ, ಕೋಶಾಧಿಕಾರಿ ಐತಪ್ಪ ಆಳ್ವ, ಬ್ರಹ್ಮಕಲಶ ಮಹೋತ್ಸವ ಸಮಿತಿ ಗೌರವಾಧ್ಯಕ್ಷರಾದ ಸದಾನಂದ ಶೆಟ್ಟಿ,…
ಮಂಗಳೂರು: ತಮ್ಮ ಕಚೇರಿಯಲ್ಲಿ ಪ್ರತಿದಿನವೂ ಸ್ವಚ್ಛತೆಯ ಕೆಲಸ ಮಾಡುವ ಹಿರಿಯ ಮಹಿಳೆಯೂ ಸೇರಿ, 32 ಸಿಬ್ಬಂದಿಯನ್ನು ವಿಮಾನದ ಮೂಲಕ ಪುಣ್ಯಕ್ಷೇತ್ರಗಳಿಗೆ ಪ್ರವಾಸ ಕರೆದುಕೊಂಡು ಹೋಗಿರುವ ಸಂಸ್ಥೆಯೊಂದರ ಮುಖ್ಯಸ್ಥರು ತಮ್ಮ ಬಹುಕಾಲದ ಕನಸು ಪೂರೈಸಿದ್ದಾರೆ.ಸಹಕಾರಿ ವಲಯದಲ್ಲಿ ಸಾಫ್ಟ್ವೇರ್ ಒದಗಿಸುವ ಪ್ರಮುಖ ಸಂಸ್ಥೆ ಆಟೋಮೇಶನ್ ಕ್ಲೌಡ್ ಸೊಲ್ಯೂಶನ್ಸ್ನ ಮುಖ್ಯಸ್ಥರಾದ ಜಗದೀಶ್ ರಾಮ ಮತ್ತು ಲೋಕೇಶ್ ಎನ್. ತಮ್ಮ ಸಂಸ್ಥೆಯ ನೌಕರರಿಗೆ ವಿಮಾನ ಪ್ರಯಾಣದ ಅನುಭವ ಒದಗಿಸಿದ್ದಾರೆ. ಒಟ್ಟು 34 ಜನ ವಿಮಾನದಲ್ಲಿ ಮಂಗಳೂರಿಂದ ಬೆಂಗಳೂರಿಗೆ ತೆರಳಿದ್ದು, ಅಲ್ಲಿಂದ ನಂದಿ ಹಿಲ್ಸ್, ಈಶ ಫೌಂಡೇಶನ್ಗೆ ತೆರಳಿ ಕೆಲವು ಪುಣ್ಯಕ್ಷೇತ್ರಗಳಿಗೂ ತೆರಳಿದ್ದಾರೆ. ಈ ಪೈಕಿ 28 ಜನರಿಗೆ ಇದು ಮೊದಲ ಸಲ ವಿಮಾನ ಪ್ರಯಾಣದ ಅನುಭವ. ಈ ಪೈಕಿ ಕಚೇರಿಯಲ್ಲಿ ಸ್ವಚ್ಛತೆಯ ಕೆಲಸ ಮಾಡುವ ಸಿಬ್ಬಂದಿ ಕಸ್ತೂರಿ ಅವರನ್ನೂ ಜತೆಯಲ್ಲಿ ಕರೆದುಕೊಂಡು ಹೋಗಿದ್ದರು. ಕೋ ಆಪರೇಟಿವ್ ಸೊಸೈಟಿಗಳಿಗೆ ತಂತ್ರಾಂಶ ಒದಗಿಸುವ ರಾಜ್ಯದ ಮುಂಚೂಣಿಯ ಸಂಸ್ಥೆಯಾದ ಆಟೋಮೇಶನ್ 2000 ಗ್ರಾಹಕರ ಗುರಿ ಮುಟ್ಟಿದ ಸಂಭ್ರಮದ ಅಂಗವಾಗಿ ಈ ಪ್ರವಾಸ…