Author: admin
ಬಂಟ್ವಾಳ: ನೀರಿನ ಅಂತರ್ಜಲ ಕೊರತೆಯ ಬಗ್ಗೆ ಸಂವಾದ ಕಾರ್ಯಕ್ರಮ ಬಿ.ಸಿ.ರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ನೇತ್ರಾವತಿ ಕೃಷಿಕರ ಅಭಿವೃದ್ಧಿ ಸಂಘದ ಒಕ್ಕೂಟ ಬಂಟ್ವಾಳ ಇದರ ಅಧ್ಯಕ್ಷ ಚಂದಪ್ಪ ಮೂಲ್ಯ ಅಧ್ಯಕ್ಷತೆ ವಹಿಸಿದರು, ತಾಲೂಕು ಪಂಚಾಯತ್ ಸಹಾಯಕ ಲೆಕ್ಕಾಧಿಕಾರಿ ಹಾಗೂ ವ್ಯವಸ್ಥಾಪಕಿ ಶಾಂಭವಿ.ಎಸ್.ರಾವ್ , ತಾಲೂಕು ಪಂಚಾಯತ್ ಜಲ್ ಜೀವನ್ ಮಿಷನ್ ಕೇಸ್ ವರ್ಕರ್ ಬಾಲಕೃಷ್ಣ ಮೂಲ್ಯ, ದಿಶಾ ಸಂಸ್ಥೆ ಕೈಕಂಬ ಮಂಗಳೂರು ಇದರ ಯೋಜನಾ ನಿರ್ದೇಶಕ ಸಿಲ್ವೆಸ್ಟರ್ ಡಿ, ಸೋಜಾ, ನೇತ್ರಾವತಿ ಕೃಷಿಕರ ಅಭಿವೃದ್ಧಿ ಸಂಘಗಳ ಒಕ್ಕೂಟ ಬಂಟ್ವಾಳ ಇದರ ಕಾರ್ಯದರ್ಶಿ ದೇವಪ್ಪ ಕುಲಾಲ್, ಮೀನುಗಾರಿಕಾ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ|ರಾಮಚಂದ್ರ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕುಂಭಕಂಠಿಣಿ ಸಂಘದ ಅಧ್ಯಕ್ಷ ರಾಮಕೃಷ್ಣ ನಾಯಕ್ ಸ್ವಾಗತಿಸಿದರು. ಸಿಲ್ವೆಸ್ಟರ್ ಡಿ ಸೋಜಾ ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವಪ್ಪ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು, ದಿಶಾ ಸಂಸ್ಥೆಯ ಯೋಜನಾ ಸಂಯೋಜಕ ನಿಹಾಲ್ ಮಚಾದೊ ರವರು ವಂದಿಸಿದರು.ಬಂಟ್ಟಾಳ ತಾಲೂಕಿನ 10 ಪಂಚಾಯತ್ ವ್ಯಾಪ್ತಿಯಲ್ಲಿ ರುವ 40 ಕೃಷಿಕರ ಅಭಿವೃದ್ಧಿ ಸಂಘದ…
ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ ಹೊಕ್ಕಾಡಿಗೋಳಿ ಇದರ ವತಿಯಿಂದ 2024 ಮಾರ್ಚ್ 16 ರಂದು ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾ ಡಿಗೋಳಿ ಕಂಬಳದ ಕರೆ ಮುಹೂರ್ತವು ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಕೃಷ್ಣ ಪ್ರಸಾದ್ ಅಸ್ರ ಣ್ಣರ ದಿವ್ಯ ಹಸ್ತದಿಂದ ಶುಭ ಮುಹೂರ್ತದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಹೊಕ್ಕಾಡಿಗೋಳಿ ಕಂಬಳ ಸಮಿತಿಯ ಅಧ್ಯಕ್ಷರಾದ ಶ್ರೀ ರಶ್ಮಿತ್ ಶೆಟ್ಟಿ ಕೈತ್ರೋಡಿ ನೊಣಲ್ ಗುತ್ತು, ಗೌರವ ಅಧ್ಯಕ್ಷರಾದ ಶ್ರೀ ಸಂಜೀವ ಶೆಟ್ಟಿ ಗುಂಡ್ಯಾರು,ಪ್ರದಾನ ಕಾರ್ಯದರ್ಶಿ ಪ್ರಭಾಕರ್ ಎಚ್ ಹುಲಿಮೇರು,ಕಾಯದರ್ಶಿ ಪುಷ್ಪರಾಜ್ ಜೈನ್.ಪೂಂಜ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ರತ್ನಕುಮಾರ್ ಚೌಟ, ಹಿರಿಯ ಕಂಬಳ ಸಂಘಟಕರಾದ ಜಗತ್ಪಾಲ್ ಶೆಟ್ಟಿ ಉಮನೊಟ್ಟು,ಕುಟ್ಟಿ ಶೆಟ್ಟಿ ಹಕ್ಕೇರಿ,ಆನಂದ್ ಶೆಟ್ಟಿ ಹಕ್ಕೇರಿ, ಸುರೇಶ್ ಕೆ ಶೆಟ್ಟಿ ಹಕ್ಕೇರಿ, ಸಚಿನ್ ಶೆಟ್ಟಿ ಹಕ್ಕೇರಿ,ಜಯಂತ್ ಶೆಟ್ಟಿ ಹಕ್ಕೇರಿ, ಸಂತೋಷ್ ಶೆಟ್ಟಿ ಕೊನೆರೊಟ್ಟು, ರಾಜೇಶ್ ಶೆಟ್ಟಿ ಸಿದ್ದಕಟ್ಟೆ ಸ್ಥಳ ದಾನಿಗಳಾದ: ರಾಜು ಶೆಟ್ಟಿ ಮತ್ತು…
ಬಂಟ್ವಾಳ: ಕಳೆದ ಜೂನ್ ಅಂತ್ಯದವರೆಗೂ ಮಳೆಯಿಲ್ಲದೆ ಬರಗಾಲ ಎದುರಾಗಿ ಕಣ್ಣೆದುರೇ ತಾವು ಬೆಳೆಸಿದ ಕೃಷಿ ನಾಶವಾಗುವುತ್ತಿರುವ ಸಂಕಷ್ಟವನ್ನು ಜಿಲ್ಲೆಯ ಅನೇಕ ರೈತರು ಅನುಭವಿಸಿದ್ದರು. ಇದರಿಂದ ಎಚ್ಚೆತ್ತುಕೊಂಡಿರುವ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮಸ್ಥರು ಈ ಭಾರಿ ಮಳೆ ಮುಗಿಯುತ್ತಿದ್ದಂತೆಯೇ ತಮ್ಮ ಗ್ರಾಮಗಳಲ್ಲಿ ಹರಿಯುವ ತೊರೆಗಳ ಚೆಕ್ ಡ್ಯಾಂಗಳಿಗೆ ಶ್ರಮದಾನದ ಮೂಲಕ ಒಡ್ಡುಗಳನ್ನು ನಿರ್ಮಿಸಿ ವ್ಯರ್ಥವಾಗಿ ಹರಿದು ನದಿ ಸೇರುತ್ತಿದ್ದ ನೀರನ್ನು ಸಂರಕ್ಷಿಸಿ ಜಲಕ್ರಾಂತಿ ಮಾಡಿದ್ದಾರೆ. ಇದರಿಂದಾಗಿ ಇಡೀ ಅಮ್ಟಾಡಿ ಗ್ರಾಮ ಪರಿಸರದ ತೊರೆ, ಬಾವಿ ಕೆರೆಗಳು ಹಾಗೂ ಕೊಳವೆ ಬಾವಿಗಳಲ್ಲಿ ಅಂತರ್ಜಲ ಹೆಚ್ಚಿ ಜಲಸಮೃದ್ಧಗೊಂಡಿದೆ. ಕಳೆದ ಬೇಸಿಗೆಯಲ್ಲಿನ ನೀರಿನ ಸಮಸ್ಯೆ ಅನೇಕ ಕೃಷಿಕರನ್ನು ಕಂಗೆಡಿಸಿದೆ. ಅಮ್ಟಾಡಿ ಪರಿಸರದಲ್ಲಿ ದೊಡ್ಡ ತೊರೆಗಳಿದ್ದು ಅದಕ್ಕೆ ಚೆಕ್ ಡ್ಯಾಂಗಳಿದ್ದರೂ ಸಕಾಲದಲ್ಲಿ ಹಲಗೆಯಾಕದ ಕಾರಣ ಹಾಗೂ ಒಡ್ಡು ನಿರ್ಮಿಸಿದ ಕಾರಣ ನೀರು ನದಿ ಸೇರುತ್ತಿತ್ತು. ಮೊಡಂಕಾಫು ಇನ್ಪೆಂಟ್ ಜೀಸಸ್ ಚರ್ಚ್ನ ಧರ್ಮಗರುಗಳಾದ ವಂದನೀಯ ವಲೇರಿಯನ್ ಡಿಸೋಜಾ ಅವರ ಮಾರ್ಗದರ್ಶನಂತೆ ಅಮ್ಟಾಡಿ ಗ್ರಾಮದ ತೊರೆಗಳಲ್ಲಿರುವ ಚೆಕ್ಡ್ಯಾಂಗಳಿಗೆ ಒಡ್ಡುಕಟ್ಟಿ ನೀರು ನಿಲ್ಲಿಸುವ…
ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ನಡೆಯಲಿರುವ ಕಲಾವಳಿ-2024 ಕಾರ್ಯಕ್ರಮದ ಲಾಂಛನ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ ದ.ಕ.ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ವಾರ್ಷಿಕ ಮಹಾ ಸಭೆ ಕಾರ್ಯಕ್ರಮದಲ್ಲಿ ನಡೆಯಿತು. ಜಿಲ್ಲಾ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಲಾಛಂನ ಬಿಡುಗಡೆ ಗೊಳಿಸಿದರು. ಬಂಟ್ವಾಳ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ, ಉಪಾಧ್ಯಕ್ಷ ಸುಕುಮಾರ್ ಬಂಟ್ವಾಳ, ಕೋಶಾಧಿಕಾರಿ ರಮೇಶ್ ಸಾಲಿಯಾನ್ , ಸಮಿತಿ ಸದಸ್ಯರಾದ ಮಚೇಂದ್ರ ಸಾಲಿಯಾನ್, ಸುರೇಶ ಕುಲಾಲ್, ರಮೇಶ್ ಸಾಲಿಯಾನ್ ಸಂಚಯಗಿರಿ, ನಾರಾಯಣ ಸಿ.ಪೆರ್ನೆ, ಆಶಾ , ಜಲಜಾಕ್ಷಿ ಕುಲಾಲ್ ಹಾಗೂ ಜಿಲ್ಲೆಯ ಪ್ರಮುಖ ಕುಲಾಲ ಸಂಘದ ಅಧ್ಯಕ್ಷರುಗಳು, ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು
ಬಂಟ್ವಾಳ: ಫರಂಗಿಪೇಟೆ ಬೀದಿಯಲ್ಲಿ ಅನಾಥನಾಗಿ ಬಿದ್ದುಕೊಂಡಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿ ಸಕಾಲದಲ್ಲಿ ಸಿಕ್ಕ ಚಿಕಿತ್ಸೆಯಿಂದ ಸಂಪೂರ್ಣ ಗುಣಮುಖನಾಗಿದ್ದಾನೆ. ಮಾತ್ರವಲ್ಲದೆ, ಕಳೆದ 12 ವರ್ಷಗಳಿಂದ ಕುಟುಂಬ ಬಂಧುಗಳಿಂದ ದೂರವಾಗಿ ಉಳಿದಿದ್ದ ಈತ ಇದೀಗ ತನ್ನ ಕುಟುಂಬ ಬಂಧುಗಳನ್ನು ಮರಳಿ ಪಡೆದಿದ್ದಾನೆ.ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಅವರ ಸಕಾಲಿಕ ಸೇವೆ ಮಾನಸಿಕ ಅಸ್ವಸ್ಥ ವ್ಯಕ್ತಿಯ ಜೀವನದಲ್ಲಿ ಮಹತ್ತರವಾದ ಬದಲಾವಣೆ ತಂದಿದೆ. ಕಳೆದ ನವೆಂಬರ್ 15 ರಂದು ಫರಂಗಿಪೇಟೆಯ ಶ್ರೀರಾಮ ವಿದ್ಯಾಸಂಸ್ಥೆಯ ಬಳಿ ಮರಳಿನಲ್ಲಿ ಮಾನಸಿಕ ಅಸ್ವಸ್ಥ ಉಮಾಮಹೇಶ್ವರ ಹೊರಳಾಡಿಕೊಂಡಿದ್ದಾಗ ಗಮನಿಸಿದ ಕೃಷ್ಣ ಕುಮಾರ್ ಪೂಂಜ ಊಟ, ಉಪಹಾರ, ಬಟ್ಟೆ ನೀಡಿ ಸೇವಾಂಜಲಿಯ ಬಂಧುಗಳ ಸಹಕಾರ ಪಡೆದು ಅಂದೇ, ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಮನೋವೈದ್ಯ ಡಾ. ಶ್ರೀನಿವಾಸ್ ಭಟ್ ಅವರ ಒಂದು ತಿಂಗಳ ಚಿಕಿತ್ಸೆಯ ಬಳಿಕ ಮಾನಸಿಕ ಅಸ್ವಸ್ಥನಾಗಿದ್ದ ಉಮಾಮಹೇಶ್ವರ ಗುಣ ಮುಖನಾಗಿದ್ದಾನೆ. ಈ ಸಂದರ್ಭ ಕೃಷ್ಣ ಕುಮಾರ್…
ಬಂಟ್ವಾಳ: ಲಯನ್ಸ್ ಜಿಲ್ಲೆ ೩೧೭ಡಿ ಯ ಪ್ರಾಂತ್ಯ ೫ರ ಪ್ರಾಂತೀಯ ಸಮ್ಮಿಲನ ನಡೆಸುವ ಹಾಗೂ ಪ್ರಾಂತೀಯ ಸಮ್ಮಿಲನ ಸಮಿತಿ ರಚಿಸುವ ಬಗ್ಗೆ ಪೂರ್ವಭಾವಿ ಸಭೆ ಮಂಗಳವಾರ ಮಂಚಿ ಲಯನ್ಸ್ ಸೇವಾ ಮಂದಿರದಲ್ಲಿ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.ಪ್ರಾಂತೀಯ ಸಮ್ಮಿಲನ ಸಮಿತಿ ಅಧ್ಯಕ್ಷರಾಗಿ ದಾಮೋದರ ಬಿ.ಎಂ. ಮಾರ್ನಬೈಲು ಆಯ್ಕೆಗೊಂಡರು. ಕಾರ್ಯದರ್ಶಿಯಾಗಿ ಜಯಪ್ರಕಾಶ್ ರೈ ಮೇರಾವು, ಕೋಶಾಧಿಕಾರಿಯಾಗಿ ರಾಮ್ಪ್ರಸಾದ್ ರೈ, ಗೌರವ ಮಾರ್ಗದರ್ಶಕರಾಗಿ ವಸಂತ ಕುಮಾರ್ ಶೆಟ್ಟಿ, ಕೆ. ದೇವದಾಸ ಭಂಡಾರಿ, ಗೌರವ ಅಧ್ಯಕ್ಷರಾಗಿ ಡಾ| ಗೋಪಾಲ ಆಚಾರ್ ಮಂಚಿ, ಗೌರವ ಸಲಹೆಗಾರರಾಗಿ ವಿಠಲ ಕುಮಾರ್ ಶೆಟ್ಟಿ, ಮನೋರಂಜನ್ ಕೆ. ಆರ್. ಮತ್ತಿತರರನ್ನು ಆಯ್ಕೆ ಮಾಡಲಾಯಿತು. ಫೆ. ೧೧ ಆದಿತ್ಯವಾರ ನಡೆಯಲಿರುವ ಪ್ರಾಂತೀಯ ಸಮ್ಮಿಲನವು ವಿವಿಧ ಸೇವಾ ಕಾರ್ಯಕ್ರಮಗಳ ಸಹಿತವಾಗಿ ಪ್ರಾಂತ್ಯದ ಎಲ್ಲಾ ೧೦ ಕ್ಲಬ್ಗಳ ಸಂಪೂರ್ಣ ತೊಡಗಿಸುವಿಕೆ ಮೂಲಕ ಯಶಸ್ವಿಯಾಗಿ ನೆರವೇರಬೇಕೆಂದು ಲಯನ್ಸ್ ಜಿಲ್ಲೆಯ ನಾಯಕರು, ಪೂರ್ವ ಪ್ರಾಂತೀಯ ಅಧ್ಯಕ್ಷರುಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಆತಿಥೇಯ ಸಂಸ್ಥೆ ಲಯನ್ಸ್ ಕ್ಲಬ್ ಕೊಳ್ನಾಡು…
ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಮಂಡ್ಯದ ವಿಶ್ವ ಮಾನವ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಮೈಸೂರು ವಿಭಾಗ ಮಟ್ಟದ ಭಾವ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟದ ಸ್ಪರ್ಧೆಗೆ ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜು, ಮೊಡಂಕಾಪು ಇಲ್ಲಿನ ವಿದ್ಯಾರ್ಥಿನಿ ಶೃತಿ ಆಯ್ಕೆಯಾಗಿದ್ದಾರೆ. ರಾಜ್ಯ ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲೂ ದ.ಕ.ಜಿಲ್ಲೆಯನ್ನು ಪ್ರತಿನಿಧಿಸಿದ್ದರು.
ಬಂಟ್ವಾಳ: ಸಜೀಪಮೂಡ ಗ್ರಾಮದ ದ.ಕ. ಜಿ. ಪಂ. ಹಿ. ಪ್ರಾಥಮಿಕ ಶಾಲೆ ಕಾರಾಜೆ ಇದರ ಬೆಳ್ಳಿ ಹಬ್ಬ ಸಂಭ್ರಮದ ಸವಿನೆನೆಪು ಕಾರ್ಯಕ್ರಮ ನಡೆಯಿತು.ಸಜೀಪಮೂಡ ಗ್ರಾ. ಪಂ. ಅಧ್ಯಕ್ಷೆ ಶೋಭಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ. ರಮಾನಾಥ ರೈ,. ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ಕೆ. ಸಂಜೀವ ಪೂಜಾರಿ, ಪಂಚಾಯತಿ ಉಪಾಧ್ಯಕ್ಷೆ ಫೌಝಿಯಾ, ಸದಸ್ಯರಾದ ಸೀತರಾಮ ಅಗೋಳಿಬೆಟ್ಟು, ಸೋಮನಾಥ ಬಂಗೇರ, ಕುಶಾಲಾಕ್ಷ, ಮಹಾದೇವಿ, ಶಿಕ್ಷಣ ಸಂಯೋಜಕಿ ಪ್ರತಿಮಾ ವೈ.ವಿ., ಬಿಆರ್ಪಿ ವಿದ್ಯಾ, ಸಜೀಪಮೂಡ ಕ್ಲಸ್ಟರ್ ಸಂಪನ್ಮೂಲ ಅಧಿಕಾರಿ ಇಂದಿರಾ, ನೂರುಲ್ ಹುದಾ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಶೇಕಬ್ಬ, ಸಿವಿಲ್ ಎಂಜಿನಿಯರ್ ಶೈಲೇಶ್ ಪೂಜಾರಿ, ಸುಶೀಲಾ ಪೂಜಾರಿ, ಸಹಾಯಕ ಪ್ರಾಧ್ಯಪಕ ದಿನೇಶ್ ನಾಯಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಪಿ.ಎಸ್. ಉಪಸ್ಥಿತರಿದ್ದರು. ಪ್ರಭಾರ ಮುಖ್ಯೋಪಾಧ್ಯಾಯಿನಿ ಸುಜಾತ ಎಂ. ಸ್ವಾಗತಿಸಿ, ಪ್ರಾಸ್ತವಿಕ ಮಾತುಗಳನ್ನಾಡಿದರು.
ಕೋಸ್ಟಲ್ ಸ್ಮ್ಯಾಶರ್ಸ್ ತಂಡ ಚಾಂಪಿಯನ್ 2023ರಲ್ಲಿ ಒಟ್ಟು 8 ಲೀಗ್ ಕೂಟದಲ್ಲಿ ಚಾಂಪಿಯನ್ ಆದ ಮುಹಮ್ಮದ್ ಹನೀಫ್ ಮಾಲಕತ್ವದ ಕೋಸ್ಟಲ್ ಸ್ಮ್ಯಾಶರ್ಸ್ ತಂಡ ಬಂಟ್ವಾಳ, ಡಿ.13: ಉಡುಪಿಯ ಅಜ್ಜರಕಾಡು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಎರ್ಮಲ್ ಸ್ಪೋರ್ಟ್ಸ್ ಬ್ಯಾಡ್ಮಿಂಟನ್ ಲೀಗ್ – 2023ರಲ್ಲಿ ಕೋಸ್ಟಲ್ ಸ್ಮ್ಯಾಶರ್ಸ್ ತಂಡ ಚಾಂಪಿಯನ್ ಆಗಿದೆ. ಈ ಮೂಲಕ ಕೋಸ್ಟಲ್ ಸ್ಮ್ಯಾಶರ್ಸ್ ತಂಡ 2023ರಲ್ಲಿ 8 ಚಾಂಪಿಯನ್ ಕಿರೀಟವನ್ನು ತನ್ನ ಮುಡಿಗೇರಿಸಿದೆ. ಉಡುಪಿಯ ಅಜ್ಜರಕಾಡು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಲ್ಲಿ ಡಿ.10ರಂದು ನಡೆದ ಎರ್ಮಲ್ ಸ್ಪೋರ್ಟ್ಸ್ ಬ್ಯಾಡ್ಮಿಂಟನ್ ಲೀಗ್ – 2023ರಲ್ಲಿ 10 ಮಾಲಕತ್ವದ 50 ತಂಡಗಳು ಭಾಗವಹಿಸಿದ್ದು, ಒಟ್ಟು 110 ಮಂದಿ ಆಟಗಾರರು ಪಾಲ್ಗೊಂಡಿದ್ದರು. ಈ ಲೀಗ್ ಟೂರ್ನಮೆಂಟ್ನಲ್ಲಿ ಭಾಗವಹಿಸಿದ್ದ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಕೋಸ್ಟಲ್ ಟಿಂಬರ್ ಆ್ಯಂಡ್ ಪ್ಲೈವುಡ್ ಮಾಲಕ, ಉದ್ಯಮಿ ಮುಹಮ್ಮದ್ ಹನೀಫ್ ಅವರ ಮಾಲಕತ್ವದ ಕೋಸ್ಟಲ್ ಸ್ಮ್ಯಾಶರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಉಡುಪಿ ಅಜ್ಜರಕಾಡು ಇಲ್ಲಿ ನಡೆದ ಲೀಗ್ ಚಾಂಪಿಯನ್ ಶಿಪ್…
ಬಂಟ್ವಾಳ: ಪುದು ಗ್ರಾಮದ ಕೋಡಿಮಜಲು ನಿವಾಸಿ ಮೊಹಮ್ಮದ್ ಜಾಪರುಲ್ಲಾ ಎಂಬವರ ಮನೆಯಲ್ಲಿ ನಡೆದ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು ಆರೋಪಿಗಳಿಂದ ಚಿನ್ನಾಭರಣ ಹಾಗೂ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಮೊಹಮ್ಮದ್ ಜಾಪರುಲ್ಲಾ ಮನೆಯಲ್ಲಿ ಇತ್ತೀಚೆಗೆ ರೂಪಾಯಿ 27.50 ಲಕ್ಷ ನಗದು ಹಾಗೂ ರೂ 4.96ಲಕ್ಷ ಮೌಲ್ಯದ ಚಿನ್ನಾಭರಣಗಳ ಕಳವು ನಡೆದಿತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿ ಆರೋಪಿಗಳಾದ ಅಶ್ರಪ್ ಆಲಿ ಮತ್ತು ಬೆಂಗ್ರೆಯ ಕಬೀರ್ ಎಂಬವರನ್ನು ಬಂಧಿಸಿ ಅವರಿಂದ 4.50 ಲಕ್ಷ ಮೌಲ್ಯದ ಮೌಲ್ಯ ಚಿನ್ನ ಮತ್ತು ರೂ. 4 ಲಕ್ಷ ನಗದನ್ನು ವಶಪಡಿಸಿಕೊಂಡಿರುತ್ತಾರೆ.








