Author: admin

ಬಂಟ್ವಾಳ: ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಿಕೊಂಡು ಪೌಷ್ಟಿಕ ಆಹಾರವನ್ನು ಸೇವಿಸಿಕೊಂಡು ಆರೋಗ್ಯ ರಕ್ಷಣೆ ಮಾಡಬೇಕು. ಆ ಮೂಲಕ ತಾವು ಕ್ಷಯ ರೋಗ ಮುಕ್ತರಾಗಿ ಕ್ಷಯ ಮುಕ್ತ ಭಾರತ ನಿರ್ಮಿಸಲು ಸಹಕರಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ2025 ರ ವೇಳೆಗೆ ಭಾರತವನ್ನು‌ ಕ್ಷಯ ಮುಕ್ತ ರಾಷ್ಟ್ರವನ್ನಾಗಿ ರೂಪಿಸುವ ಉದ್ದೇಶದಿಂದ ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ದವಸ ಧಾನ್ಯ ವಿತರಿಸಿ ಮಾತನಾಡಿದರು. ಇದೊಂದು ಪವಿತ್ರವಾದ ಕೆಲಸ. ನಮ್ಮ ಜಿಲ್ಲೆಯಲ್ಲಿ ಸಿಡುಬು, ಆನೆಕಾಲು ರೋಗದಂತಹ ಮಾರಣಾಂತಕ ರೋಗಗಳು ಇದ್ದರೂ ಈಗ ಸಂಪೂರ್ಣ ನಿರ್ಮೂಲನವಾಗಿದೆ. ಸೂಕ್ತ ಔಷಧಿ ಹಾಗೂ ಪೌಷ್ಟಿಕ ಆಹಾರವನ್ನು ಸೇವಿಸುವುದರಿಂದ ಕ್ಷಯ ರೋಗವನ್ನು ಗುಣಪಡಿಸಲು ಸಾಧ್ಯವಿದೆ ಎಂದು ತಿಳಿಸಿದರು. ಪೌಷ್ಟಿಕ ಆಹಾರವನ್ನು ನೀಡುವ ಕೆಲಸವನ್ನು ಸಂಘ ಸಂಸ್ಥೆಗಳು ಮಾಡಬೇಕಾಗಿದ್ದು ಆರ್ಥಿಕ ಹೊರೆಯ ಮಧ್ಯೆಯೂ ಕೃಷ್ಣ ಕುಮಾರ್ ಪೂಂಜ ಅವರ ನೇತೃತ್ವದಲ್ಲಿ ಸೇವಾಂಜಲಿ ಸಂಸ್ಥೆ ನಿಸ್ವಾರ್ಥವಾಗಿ, ನಿರಂತರವಾಗಿ ಮಾಡಿಕೊಂಡು…

Read More

ಬಂಟ್ವಾಳ: ಮೆಲ್ಕಾರ್‌ನ ನರಹರಿ ಪರ್ವತ ಶ್ರೀ ಸದಾಶಿವ ದೇವಾಲಯದ ಜೀರ್ಣೋದ್ಧಾರದ ಪ್ರಯುಕ್ತ ಸಹಸ್ರ ಸೀಯಾಳಾಭಿಷೇಕ ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಕಳೆದ ಮೇ.೨೬ರಂದು ಶ್ರೀ ಕ್ಷೇತ್ರದಲ್ಲಿ ವೇದಮೂರ್ತಿ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಉಪಸ್ಥಿತಿಯಲ್ಲಿ ಪ್ರಶ್ನಾಚಿಂತನೆಯು ನಡೆದಿದ್ದು ಅದರಂತೆ ದೇವಸ್ಥಾನಕ್ಕೆ ಸಂಬಂಧಿಸಿದ ಅಮ್ಟೂರು, ಗೋಳ್ತಮಜಲು, ಬೊಂಡಾಲ, ಶಂಭೂರು, ಪಾಣೆಮಂಗಳೂರು ಗ್ರಾಮಗಳ ಪ್ರತೀ ಮನೆಗಳಲ್ಲಿ ನಗರ ಭಜನೆಯನ್ನು ನಡೆಸಿ ಶ್ರೀ ದೇವರಿಗೆ ಸೀಯಾಳಾಭಿಷೇಕ ನಡೆಸಲಾಗಿದೆ. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ| ಪ್ರಶಾಂತ ಮಾರ್ಲ, ಜೀಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಆತ್ಮರಂಜನ್ ರೈ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ತಹಶೀಲ್ದಾರ್ ಎಸ್.ಬಿ.ಕೂಡಲಗಿ, ಉಪತಹಶೀಲ್ದಾರ್ ನವೀನ್ ಬೆಂಜನಪದವು ಆಡಳಿತ ಸಮಿತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಬಂಟ್ವಾಳ: ಸಜೀಪಮೂಡ ಗ್ರಾಮದ ಸುಭಾಷ್‌ನಗರ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ರಮೇಶ್ ಅನ್ನಪ್ಪಾಡಿ ಆಯ್ಕೆಯಾದರು. ಇತ್ತೀಚೆಗೆ ನಡೆದ ಸಮಿತಿಯ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ, ಉಪಾಧ್ಯಕ್ಷರಾಗಿ ತಿಲಕರ ಪೂಜಾರಿ, ಕಾರ್ಯದರ್ಶಿಯಾಗಿ ಅಶ್ವಿನ್ ಪೂಜಾರಿ ಭಜನಾಧ್ಯಕ್ಷರಾಗಿ ಲೋಕೇಶ್ ಸುಭಾಷ್ ನಗರ, ಕೋಶಾಧಿಕಾರಿಯಾಗಿ ನಾರಾಯಣ್ ಪೂಜಾರಿ ಕೊಟ್ಟರಿಪಾಲು, ಜೊತೆ ಕಾರ್ಯದರ್ಶಿಯಾಗಿ ನಾರಾಯಣ್ ಅಮೀನ್, ಸಂಘಟನಾ ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ಕೊಮಾಲಿ, ಭಜನಾ ಉಪಾಧ್ಯಕ್ಷರಾಗಿ ಸಂತೋಷ್ ದಾಸರಗುಡ್ಡೆ, ಭಜನಾ ಕಾರ್ಯದರ್ಶಿಯಾಗಿ ನಿತಿನ್ ಮಾರ್ನಬೈಲ್ ಜೊತೆ ಕಾರ್ಯದರ್ಶಿಯಾಗಿ ಲಕ್ಷ್ಮೀಶ ಅಗರಿ ಮತ್ತು ಮಧುಸೂಧನ್ ಕರಂದಾಡಿ ಸಂಚಾಲಕರಾಗಿ ಮಹೇಶ್ ಪೂಜಾರಿ ಪಟ್ಟುಗುಡ್ಡೆ ಆಯ್ಕೆಯಾದರು.

Read More

ಬಂಟ್ವಾಳ ತಾಲೂಕಿನ ಬೆಂಜನಪದವು ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಕ್ಲಾಂತ ಕನ್ನಡ ಚಿತ್ರದ ತುಳು ಧ್ವನಿಸುರುಳಿ ಕಾರ್ಯಕ್ರಮ ನಡೆಯಿತು. ಖ್ಯಾತ ಹಿನ್ನಲೆಗಾಯಕ ರಾಜೆಶ್ ಕೃಷ್ಣನ್ ಅವರು ಈ ತುಳು ಹಾಡನ್ನು ಹಾಡಿದ್ದು ಸ್ವತಃ ಅವರೇ ಧ್ವನಿ ಸುರುಳಿಯನ್ನು ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ಬಿಡುಗಡೆಗೊಳಿದರು. ಈ ಸಂದರ್ಭ ಕ್ಲಾಂತ ಚಿತ್ರತಂಡ ಅವರ ಜೊತೆಗಿತ್ತು.ತುಳುನಾಡಿನ ಕಾರಣಕ ದೈವ ಕೊರಗಜ್ಜನ ಕ್ಷೇತ್ರಕ್ಕೆ ಆಗಮಿಸಿದ ರಾಜೇಶ್ ಕೃಷ್ಣನ್ ಭಕ್ತಿಯಿಂದ ಶ್ರೀ ಕೊರಗಜ್ಜನಿಗೆ ನಮಿಸಿ ಚಿತ್ರದ ತುಳು ಧ್ವನಿ ಸುರುಳಿ ಬಿಡುಗಡೆಗೊಳಿಸಿದರು. ಹಾಡು ಕೇಳಿ ಬರುತ್ತಿದ್ದಂತೆಯೇ ಕೈ ಮುಗಿದು ಹಾಡನ್ನು ಹಾಡುತ್ತ ಭಾವಪರವಶರಾದರು. ಬಳಿಕ ಬೆಂಜನಪದವು ಕೊರಗಜ್ಜ ಕ್ಷೇತ್ರ ಹಾಗೂ ಕ್ಲಾಂತ ಚಿತ್ರ ತಂಡದ ವತಿಯಿಂದ ರಾಜೇಶ್ ಕೃಷ್ಣನ್ ಅವರನ್ನು ಗೌರವಿಸಲಾಯಿತು. ಕ್ಷೇತ್ರದ ಧರ್ಮದರ್ಶಿಗಳು ದೈವದ ಕರಿಗಂಧ, ಪ್ರಸಾದವನ್ನು ಚಿತ್ರತಂಡ ಹಾಗೂ ರಾಜೇಶ್ ಕೃಷ್ಣನ್ ಅವರಿಗೆ ನೀಡಿದರು. ಚಿತ್ರದ ನಿರ್ದೆಶಕ ವೈಭವ್ ಪ್ರಶಾಂತ್ ಅವರು ಮಾತನಾಡಿ ಈಗಾಗಲೇ ಕ್ಲಾಂತ ಚಿತ್ರೀಕರಣ ಪೂರ್ಣಗೊಂಡಿದ್ದು ಆದಷ್ಟು ಬೇಗ ಚಿತ್ರ ಸಿನಿಮಾ ಮಂದಿರಕ್ಕೆ ಬರಲಿದೆ.…

Read More

ಬಂಟ್ವಾಳ: ಅಕ್ಷಯಪಾತ್ರೆ ಫೌಂಡೇಶನ್‌ನ ವತಿಯಿಂದ ಕೃಷ್ಣನ ಪ್ರಸಾದವನ್ನು ಮಕ್ಕಳಿಗೆ ವಿತರಿಸುವ ಸತ್ಕಾರ್ಯ ಹಲವು ವರ್ಷಗಳಿಂದ ನಡೆಯುತ್ತಿದೆ. ಇಸ್ಕಾನ್ ಫೌಂಡೇಶನ್ ಮೂಲಕ ಇಡೀ ದೇಶದಲ್ಲಿ ೨೩ ಲಕ್ಷ ಮಂದಿಗೆ ಮಧ್ಯಾಹ್ನದ ಊಟ ತಲುಪುತ್ತಿದ್ದು, ಇದು ಅತ್ಯಂತ ಶ್ಲಾಘನೀಯ ಕೆಲಸವಾಗಿದೆ. ಅಕ್ಷಯಪಾತ್ರ ನೀಡುವ ಸಾತ್ವಿಕ ಆಹಾರದ ಮೂಲಕ ಮಕ್ಕಳಿಗೆ ಆದ್ಯಾತ್ಮಿಕ ಸಾಧನೆಯನ್ನು ನೀಡುವ ಕಾರ್ಯವನ್ನು ಇಸ್ಕಾನ್ ನಡೆಸುತ್ತಿದೆ. ಗ್ರಾಮೀಣ ಭಾಗದಲ್ಲಿ ತಲೆ ಎತ್ತಿನಿಂತಿರುವ ಈ ಘಟಕ ಯಶಸ್ವಿಯಾಗಿ ನಡೆಯಲಿ. ಇಸ್ಕಾನ್ ಮೂಲಕ ಕೃಷ್ಣನ ಪ್ರಸಾದದ ರವಾನೆ ಇಡೀ ಪ್ರಪಂಚಾದಾದ್ಯಂತ ನಡೆಯಲಿ ಎಂದು ಎಂದು ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಹೇಳಿದರು.ಅಕ್ಷಯ ಪಾತ್ರೆ ಫೌಂಡೇಶನ್ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ನಿರ್ಮಿಸಿರುವ ಕೇಂದ್ರೀಕೃತ ಅಡುಗೆ ಮನೆಗೆ ಚಾಲನೆ ನೀಡಿ ಆರ್ಶೀವಚನ ನೀಡಿದರು. ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ ಮಾತನಾಡಿ ಮಂಗಳೂರಿನಲ್ಲಿ ನಮ್ಮ ಅತ್ಯಾಧುನಿಕ ಅಡುಗೆಮನೆಯ ಪ್ರಾರಂಭವು ಅಕ್ಷಯ ಪಾತ್ರ ಫೌಂಡೇಶನ್ನ…

Read More

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ೧೨೪ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ಭಾನುವಾರ ನಡೆಯಿತು. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಶಿಬಿರ ಉದ್ಘಾಟಿಸಿದರು. ಅವರು ಮಾತನಾಡಿ ರಕ್ತದಾನ ಅತ್ಯಂತ ಪುಣ್ಯದ ಕೆಲಸ. ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯವು ಉತ್ತಮವಾಗುವುದರ ಜೊತೆಗೆ ಇನ್ನೊಬ್ಬರ ಪ್ರಾಣ ಉಳಿಸಲು ಸಾಧ್ಯವಿದೆ ಎಂದರು. ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಅವರು ಸೇವೆಯೇ ತನ್ನ ಗುರಿ ಎನ್ನುವ ಉದ್ದೇಶದೊಂದಿಗೆ ನಿರಂತರವಾಗಿ ಇಂತಹ ಸೇವಾ ಕೆಲಸಗಳನ್ನು ನಡೆಸಿಕೊಂಡು ಬರುತ್ತಿರುವುದು ಅಭಿನಂದನೀಯ ಎಂದರು. ಪೊಲೀಸ್ ಸಿಬ್ಬಂದಿ ಪ್ರಮೋದ್ ದೇವಾಡಿಗ, ಸುಕೇಶ್ ಶೆಟ್ಟಿ ತೇವು ಮೊದಲಾದ ಪ್ರಮುಖರು ರಕ್ತದಾನ ಮಾಡಿದರು. ಈ ಸಂದರ್ಭ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ಪ್ರಮುಖರಾದ ನಾರಾಯಣ ಬಡ್ಡೂರು, ಕೆಎಂಸಿ ಆಸ್ಪತ್ರೆಯ ವೈದ್ಯೆ ಡಾ. ಅಧಿತಿ. ಬ್ಲಡ್ ಬ್ಯಾಂಕಿನ ಸೆಲಿನ್ ಜೋಸೆಫ್, ಅರ್ಜುನ್ ಪೂಂಜ, ಮೋಹನ್, ಸತ್ಯರಾಜ್…

Read More

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ೧೨೪ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ಭಾನುವಾರ ನಡೆಯಿತು. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಶಿಬಿರ ಉದ್ಘಾಟಿಸಿದರು. ಅವರು ಮಾತನಾಡಿ ರಕ್ತದಾನ ಅತ್ಯಂತ ಪುಣ್ಯದ ಕೆಲಸ. ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯವು ಉತ್ತಮವಾಗುವುದರ ಜೊತೆಗೆ ಇನ್ನೊಬ್ಬರ ಪ್ರಾಣ ಉಳಿಸಲು ಸಾಧ್ಯವಿದೆ ಎಂದರು. ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಅವರು ಸೇವೆಯೇ ತನ್ನ ಗುರಿ ಎನ್ನುವ ಉದ್ದೇಶದೊಂದಿಗೆ ನಿರಂತರವಾಗಿ ಇಂತಹ ಸೇವಾ ಕೆಲಸಗಳನ್ನು ನಡೆಸಿಕೊಂಡು ಬರುತ್ತಿರುವುದು ಅಭಿನಂದನೀಯ ಎಂದರು. ಪೊಲೀಸ್ ಸಿಬ್ಬಂದಿ ಪ್ರಮೋದ್ ದೇವಾಡಿಗ, ಸುಕೇಶ್ ಶೆಟ್ಟಿ ತೇವು ಮೊದಲಾದ ಪ್ರಮುಖರು ರಕ್ತದಾನ ಮಾಡಿದರು. ಈ ಸಂದರ್ಭ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ಪ್ರಮುಖರಾದ ನಾರಾಯಣ ಬಡ್ಡೂರು, ಕೆಎಂಸಿ ಆಸ್ಪತ್ರೆಯ ವೈದ್ಯೆ ಡಾ. ಅಧಿತಿ. ಬ್ಲಡ್ ಬ್ಯಾಂಕಿನ ಸೆಲಿನ್ ಜೋಸೆಫ್, ಅರ್ಜುನ್ ಪೂಂಜ, ಮೋಹನ್, ಸತ್ಯರಾಜ್…

Read More

ಬಂಟ್ವಾಳ: ರಾಮಕೃಷ್ಣ ಮಠ, ಮಂಗಳಾದೇವಿ ಮಂಗಳೂರು ಹಾಗೂ ದೇಲಂಪಾಡಿ ಯೋಗ ಪ್ರತಿಷ್ಠಾನ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ, ಅವಿಭಜಿತ ದ.ಕ.ಜಿಲ್ಲಾಮಟ್ಟದಲ್ಲಿ ನಡೆದ ರಜತಾಭಿನಂದನೆ ಕಾರ್ಯಕ್ರಮದಲ್ಲಿ 25 ಸಂವತ್ಸರಗಳಿಗೂ ಮಿಗಿಲಾದ ಯೋಗ ಸೇವೆಯನ್ನು ಗುರುತಿಸಿ ನಿವೃತ್ತ ಪ್ರಾಧ್ಯಪಕ ರಾಜಮಣಿ ರಾಮಕುಂಜ ಅವರನ್ನು ಗೌರವಿಸಲಾಯಿತು

Read More

ಬಂಟ್ವಾಳ: ತಾಲೂಕು ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಸತತ ೩ನೇ ಬಾರಿಗೆ ವಿಶ್ವನಾಥ ಚೆಂಡ್ತಿಮಾರ್ ಅವರು ಪುನರಾಯ್ಕೆಗೊಂಡಿದ್ದಾರೆ.ಗೌರವಾಧ್ಯಕ್ಷರಾಗಿ ವಸಂತ ಮಣಿಹಳ್ಳ, ಕಾರ್ಯದರ್ಶಿಯಾಗಿ ಶ್ರೀಕಾಂತ್ ಪಾಣೆಮಂಗಳೂರು, ಕೋಶಾಧಿಕಾರಿಯಾಗಿ ರವಿ ಪಾಣೆಮಂಗಳೂರು ಆಯ್ಕೆಗೊಂಡರು. —

Read More

ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ದಶಂಬರ್ 6ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯದ ಸಹಯೋಗದಲ್ಲಿ ಜರಗಿಸಲಿದೆ. ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ರಾವ್ ಮೆರವಣಿಗೆಯನ್ನು ಉದ್ಘಾಟಿಸುವರು. ಕಡೇಶಿವಾಲಯ ಶಾಲಾ ಏಳನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಾನ್ವಿ ಸುವರ್ಣ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿರುತ್ತಾರೆ. ಹಿಂದಿನ ಸಮ್ಮೇಳನಾಧ್ಯಕ್ಷೆ ಓಜಾಲ ಶಾಲಾ ವಿದ್ಯಾರ್ಥಿನಿ ಕುಮಾರಿ ಶ್ರುತಿಕಾ ಬಾಕಿಮಾರು ಉದ್ಘಾಟಿಸುವರು. ಮಕ್ಕಳ ಸ್ವರಚಿತ ಕೃತಿಗಳನ್ನು ಕವಿ ವಿಶ್ವನಾಥ ಕುಲಾಲ್ ಮಿತ್ತೂರು ಬಿಡುಗಡೆಗೊಳಿಸುವರು. ಬದಿಯಡ್ಕ ಶ್ರೀ ಭಾರತಿ ವಿದ್ಯಾ ಪೀಠದ 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಆರಾಧ್ಯ ರೈ ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಕುರುಂಬ್ಲಾಜೆ ಕಿಟ್ಟಣ್ಣ ಶೆಟ್ಟಿ ವಿವರಿಸಿದರು.ಪ್ರಾಥಮಿಕದಿಂದ ಪದವಿಪೂರ್ವ ಕಾಲೇಜು ತನಕದ ಸುಮಾರಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಮ್ಮೇಳನದ ವಿವಿಧ ಚಟುವಟಿಕೆಗಳಾದ ಚಿತ್ತ ಚಿತ್ತಾರ, ಕಿರುನಾಟಕ, ಸಾಹಿತ್ಯ ಸ್ವರಚನೆ,…

Read More