Author: admin

ಬಂಟ್ವಾಳ: ಹಲವು ವೈಶಿಷ್ಠ್ಯತೆಯೊಂದಿಗೆ ಸುಮಾರು ಐದು ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಸಂತ ಅಂತೋನಿಯವರ ನವೀಕೃತ ಚರ್ಚ್ ಕಟ್ಟಡ ಹಾಗೂ ನೂತನ ಗುರು ನಿವಾಸದ ಉದ್ಘಾಟನಾ ಸಮಾರಂಭ ಸೋಮವಾರ ಸಂಭ್ರಮದಿಂದ ನಡೆಯಿತು. https://youtu.be/XqoJuztqLpw ಅಲ್ಲಿಪಾದೆ ಸಂತ ಅಂತೋನಿಯವರ ನವೀಕೃತ ಚರ್ಚ್ ಕಟ್ಟಡ ಹಾಗೂ ನೂತನ ಗುರು ನಿವಾಸದ ಉದ್ಘಾಟನಾ ಸಮಾರಂಭ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯ ದ ಧರ್ಮಾಧ್ಯಕ್ಷರಾದ ಡಾ.ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ನೂತನ ಚರ್ಚ್ ಕಟ್ಟಡ ಹಾಗೂ ನೂತನ ಗುರು ನಿವಾಸವನ್ನು ಉದ್ಘಾಟಿಸಿ ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಅವರು ಆಶೀರ್ವಚನಗೈದು ಜನರ ಸಹಕಾರ, ತ್ಯಾಗದ ಪ್ರತೀಕವಾಗಿ ಚರ್ಚ್‌ನ ಧರ್ಮಗುರುಗಳಾದ ಫೆಡ್ರಿಕ್ ಮೊಂತೆರೋ ಅವರ ಕನಸಿ ನೂತನ ಚರ್ಚ್ ಕಟ್ಟಡ ಸುಂದರವಾಗಿ ನಿರ್ಮಾಣಗೊಂಡಿರುವುದು ಅತೀವ ಸಂತಸ ತಂದಿದೆ. ಇದಕ್ಕೆ ಸಹಕರಿಸಿದವರೆಲ್ಲರು ಅಭಿನಂದನಾರ್ಹರು ಎಂದು ಹೇಳಿದರು.ಮುಖ್ಯ ಅತಿಥಿಯಾಗಿದ್ದ ಮಾಜಿ ಸಚಿವ ರಮಾನಾಥ ರೈ ಅವರು ಮಾತನಾಡಿ, ಸುಂದರ ಚರ್ಚ್ ರೂಪುಗೊಳ್ಳುವಲ್ಲಿ ಫಾ.ಪೆಡ್ರಿಕ್ ಅವರ ಕಾರ್ಯ ಅಭಿನಂದನೀಯವಾಗಿದೆ. ಅಲ್ಲಿಪಾದೆ ಭಾಗದ ಅಭಿವೃದ್ಧಿಯಲ್ಲಿ ಚರ್ಚ್‌ನ…

Read More

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 10 ನೇ ಕಾವಳಮುಡೂರು – ಎನ್. ಸಿ.ರೋಡು ಶಾಖೆ ಕಾವಳಮೂಡೂರು ಗ್ರಾಮದ ಎನ್.ಸಿ. ರೋಡಿನಲ್ಲಿರುವ ತೌಹೀದ್ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು. https://youtu.be/ms0tyvT48ss ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 10ನೇ ಕಾವಳಮುಡೂರು – ಎನ್.ಸಿ.ರೋಡು ಶಾಖೆ ಉದ್ಘಾಟನೆ ನೂತನ ಶಾಖೆಯನ್ನು ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಉದ್ಘಾಟಿಸಿದರು. ಅವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಜನರಿಗೆ ಆರ್ಥಿಕ ವ್ಯವಹಾರವನ್ನು ಒದಗಿಸುವ ಕಾರ್ಯವನ್ನು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಮಾಡಿಕೊಂಡು ಬರುತ್ತಿದೆ. ಇಂದು ಈ ಸಹಕಾರಿ ಸಂಘ ಕೇವಲ ಮೂರ್ತೆದಾರರಿಗೆ ಮಾತ್ರ ಸೀಮಿತವಾಗಿ ಉಳಿಯದೇ ಸಮಾಜದ ಎಲ್ಲಾ ವರ್ಗದ ಜನರು ಆರ್ಥಿಕ ವ್ಯವಹಾರ ಮಾಡುವ ನಿಟ್ಟಿನಲ್ಲಿ ಮುಂದುವರಿಯುತ್ತಿದೆ ಎಂದರು. ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಂಘದ ಆಡಳಿತ ಮಂಡಳಿ ಮಹಿಳೆಯರಿಗೆ ಉದ್ಯೋಗ ಒದಗಿಸಿ ಕೊಡುತ್ತಿರುವುದು ವಿಶೇಷ. ಗ್ರಾಹಕರೇ ಸಂಘದ ಶಕ್ತಿಯಾಗಿದ್ದು ಗ್ರಾಹಕರ ಕಷ್ಟದ ಸಂದರ್ಭದಲ್ಲಿ ಆರ್ಥಿಕ ಚೈತನ್ಯವನ್ನು ನೀಡುವ ಕಾರ್ಯವನ್ನು ಸಜೀಪಮುನ್ನೂರು…

Read More

ಬಂಟ್ವಾಳ: ನಾವೂರು ಗ್ರಾಮದ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದಲ್ಲಿ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ವಿಜ್ರಂಭಣೆಯಿಂದ ನಡೆಯಿತು. https://youtu.be/Tucyu_qgaCo ನಾವೂರು ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ವೀಡಿಯೋ ನೋಡಲು ಕ್ಲಿಕ್ ಮಾಡಿ ಕ್ಷೇತ್ರದ ತಂತ್ರಿಗಳಾದ ಶ್ರೀ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು ಶನಿವಾರ ಸಂಜೆ ದೇವತಾ ಪ್ರಾರ್ಥನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡು ದುರ್ಗಾ ನಮಸ್ಕಾರ ಪೂಜೆ, ಮಹಾಪೂಜೆ, ಉತ್ಸವ ಬಲಿ, ವಸಂತಕಟ್ಟೆ ಪೂಜೆ, ಪ್ರಸಾದ ವಿತರಣೆ ಅನ್ನಸಂರ್ಪಣೆ ಜರುಗಿತು.ಅಪಾರ ಸಂಖ್ಯೆಯಲ್ಲಿ ಭಕ್ತರು ಈ ಎಲ್ಲಾ ಪೂಜಾ ಕಾರ್ಯಗಳಲ್ಲಿ ಭಾಗಿಯಾಗಿ ದೇವರ ಪ್ರಸಾದ ಸ್ವೀಕರಿಸಿದರು. ಭಾನುವಾರ ಪ್ರಾತಃಕಾಲದಿಂದ ೧೨ ಕಾಯಿ ಗಣಪತಿ ಹೋಮ, ನವಕಲಶ ಪ್ರಧಾನ ಹೋಮ, ಕಲಶಾಭಿಷೇಕ, ಮಹಾಪೂಜೆ, ದರ್ಶನ ಬಲಿ ಉತ್ಸವ, ವಸಂತ ಕಟ್ಟೆ ಪೂಜೆ, ಬಟ್ಟಲು ಕಾಣಿಕೆ ಪ್ರಸಾದ, ಪಿಲಿಚಾಮುಂಡಿ ದೈವಕ್ಕೆ ಬಿಂಬ ಸಮರ್ಪಣೆ, ಪಂಚ ಪರ್ವ, ಪ್ರಸನ್ನ ಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ಹಾಗೂ…

Read More

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಡಿಪು ಶಾಖೆಯು ಸಂಘದ ಸ್ವಂತ ಕಟ್ಟಡ ಮುಡಿಪು ಜಂಕ್ಷನ್ ನಲ್ಲಿರುವ ಶಂಕರಿ ಕಾಂಪ್ಲೆಕ್ಸ್‌ನ ಒಂದನೇ ಮಹಡಿಗೆ ಸ್ಥಳಾಂತರಗೊಂಡು ಉದ್ಘಾಟನೆ ಹಾಗೂ 2022-23 ನೇ ಸಾಲಿನ ಡಾ.ಅಮ್ಮೆಂಬಳ ಬಾಳಪ್ಪ ಪ್ರಶಸ್ತಿ ಪ್ರಧಾನ ಸಮಾರಂಭ ಭಾನುವಾರ ನಡೆಯಿತು.ಶ್ರೀದಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ, ಆಶೀರ್ವಚನ ನೀಡುತ್ತಾ, ಸಹಕಾರಿ ಕ್ಷೇತ್ರದಲ್ಲಿ ಸಮಾಜಸೇವಾ ಸಹಕಾರಿ ಬ್ಯಾಂಕ್ ನ ಕಾರ್ಯವ್ಯಾಪ್ತಿ ವಿಶಾಲವಾಗಿದ್ದು, ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ಮುಡಿಪುವಿನಲ್ಲಿ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡ ಬ್ಯಾಂಕ್ ಇನ್ನಷ್ಟು ಬೆಳವಣಿಗೆಯೊಂದಿಗೆ ಮುನ್ನಡೆಯಲಿ ಎಂದರು.ಶಾಸಕರಾದ ಯು.ಟಿ.ಖಾದರ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಇದೇ ವೇಳೆ ದೈವದ ಮೂಲ್ಯಣ್ಣ ಬಾಲಕೃಷ್ಣ ಸಾಲ್ಯಾನ್ ಅವರಿಗೆ 2022-23 ನೇ ಸಾಲಿನ ಡಾ.ಅಮ್ಮೆಂಬಳ ಬಾಳಪ್ಪ ಪ್ರಶಸ್ತಿ ಪ್ರಧಾನಗೈದು ಶುಭ ಹಾರೈಸಿದರು.ದ.ಕ‌.ಬಿಜೆಪಿ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್ ಭದ್ರತಾ ಕೊಠಡಿಯನ್ನು ಉದ್ಘಾಟಿಸಿ ಶುಭ ಕೋರಿದರು.ಸಮಾಜ ಸೇವಾ ಸಹಕಾರಿ ಸಂಘ…

Read More

https://youtu.be/z_TyxoIhWkc ಅಲ್ಲಿಪಾದೆ ಸಂತ ಅಂತೋನಿಯವರ ದೇವಾಲಯಕ್ಕೆ ಸರ್ವಧರ್ಮೀಯರ ಹೊರೆಕಾಣಿಕೆ ಮೆರವಣಿಗೆ ಬಂಟ್ವಾಳ: ಅಲ್ಲಿಪಾದೆ ಸಂತ ಅಂತೋನಿಯವರ ದೇವಾಲಯದಲ್ಲಿ ನವೀಕೃತ ಚರ್ಚ್ ಹಾಗೂ ನೂತನ ಗುರುನಿವಾಸದ ಉದ್ಘಾಟನೆ ಪ್ರಯುಕ್ತ ಪೂರ್ವಭಾವಿಯಾಗಿ ಭಾನುವಾರ ಸಂಜೆ ಮೊಡಂಕಾಪು ಚರ್ಚ್ ವಠಾರದಿಂದ ಸರ್ವಧರ್ಮೀಯರ ಹೊರೆಕಾಣಿಕೆ ಮೆರವಣಿಗೆ ವಿಜ್ರಂಭಣೆಯಿಂದ ನಡೆಯಿತು. ಅಗ್ರಾರ್ ಚರ್ಚ್ ಧರ್ಮಗುರು ವಂ.ಫಾ.ಪೀಟರ್ ಡಿಸೋಜ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ವಲಯ ಪ್ರಧಾನ ಧರ್ಮಗುರು ಅತಿ ವಂದನೀಯ ಫಾಧರ್ ವಲೇರಿಯನ್ ಡಿಸೋಜ ಮುಖ್ಯ ಅತಿಥಿಗಳಾಗಿ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭ ಸೂರಿಕುಮೇರು ಚರ್ಚ್ ಧರ್ಮಗುರು ವಂದನೀಯ ಫಾದರ್ ಗ್ರೆಗರಿ ಪಿರೇರ, ಲೊರೆಟ್ಟೊ ಚರ್ಚ್ ಧರ್ಮಗುರು ವಂ.ಫಾ.ಫ್ರಾನ್ಸಿಸ್ ಕ್ರಾಸ್ತಾ, ಅಮ್ಟೂರ್ ಚರ್ಚ್ ಧರ್ಮಗುರು ವಂ.ಫಾ.ಆಲ್ವಿನ್ ಡಿಕುನ್ಹ, ಪಿಡಬ್ಲ್ಯುಪಿಎನ್ ನಿರ್ದೇಶಕ ವಂ.ಫಾ.ರೂಪೇಶ್ ತಾವ್ರೊ, ಸಹಾಯಕ ಧರ್ಮಗುರು ವಂದನೀಯ ಫಾಧರ್ ರಾಹುಲ್ ರಾಹುಲ್ ಡೆಕ್ಸ್ಟರ್ ಡಿಸೋಜ, ಅಲ್ಲಿಪಾದೆ ಧರ್ಮಗುರು ವಂ.ಫಾ. ಫ್ರೆಡ್ರಿಕ್ ಮೊಂತೇರೊ, ಸುಪೀರಿಯರ್ ಕ್ಲೂನಿ ಕಾನ್ವೆಂಟ್ ವಂದನೀಯ ಭಗಿನಿ ನರ್ಸಿಜಾ ಸಿಕ್ವೇರಾ, ಮಾಜಿ ಸಚಿವ ಬಿ ರಮಾನಾಥ…

Read More

https://youtu.be/9lvIhMtk-cw ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ ಆಶ್ರಯದಲ್ಲಿ ಸರ್ಕಾರಿ ನೌಕರರಿಗೆ ಮಾಹಿತಿ ಕಾರ್ಯಗಾರ ಮತ್ತು ವಿಶ್ರಾಂತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ ಆಶ್ರಯದಲ್ಲಿ ಸರ್ಕಾರಿ ನೌಕರರಿಗೆ ಮಾಹಿತಿ ಕಾರ್ಯಗಾರ ಮತ್ತು ವಿಶ್ರಾಂತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು ೨೦೨೧-೨೨ ನೇ ಸಾಲಿನ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಬಾಲ್ಯ, ಯೌವನ ನಮ್ಮ ಸಂಪತ್ತು ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಪ್ರಕೃತಿ ನಮಗೆ ನೀಡಿರುವ ಜೀವನವನ್ನು ಸುಂದರ ಮಾಡಿಕೊಳ್ಳಬೇಕು ಎಂದರು.ಭಾವ ಇಲ್ಲದೆಡೆ ಸೌಂದರ್ಯ ಅನುಭವಿಸಲು ಸಾಧ್ಯವಿಲ್ಲ. ಸಂತೋಷವೇ ಸಂಪತ್ತು. ಒಳ್ಳೆಯದು ಕೆಟ್ಟದ್ದು ಎರಡನ್ನೂ ಕಣ್ಣು ನೋಡಿದರೂ ನಾವು ಸಮಾಜಕ್ಕೆ ಒಳ್ಳೆಯದನ್ನು ಮಾತ್ರ ನುಡಿಯಬೇಕು ಎಂದರು.ಸಂಘದ ಅಧ್ಯಕ್ಷ ಉಮನಾಥ ರೈ ಮೇರಾವು ಅಧ್ಯಕ್ಷತೆ ವಹಿಸಿದ್ದರು. ಅವರು…

Read More

ಬಂಟ್ವಾಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಊರ ಪರವೂರ ದಾನಿಗಳು ಹಾಗೂ ಕುಡುಬಿ ಸಮಾಜದ ವತಿಯಿಂದ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನ ಸಿದ್ದಕಟ್ಟೆ ಕೋರ್ಯಾರು ಎಂಬಲ್ಲಿ ನಿರ್ಮಿಸಲಾದ ಕುಡುಬಿ ಸಮುದಾಯ ಭವನದ ಶ್ರೀ ದುರ್ಗಾ ಸಭಾ ಭವನ ಹಾಗೂ ಮಹಮ್ಮಾಯಿ ಅನ್ನಛತ್ರ ಮತ್ತು ಪಾಕಶಾಲೆಯು ಫೆ.12ರಂದು ಭಾನುವಾರ ಲೋಕಾರ್ಪಣೆಗೊಳ್ಳಲಿದೆ ಎಂದು ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಹೇಮಚಂದ್ರ ಗೌಡ ಸಿದ್ದಕಟ್ಟೆ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ಸಿದ್ಧಕಟ್ಟೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕುಡುಬಿ ಸಮುದಾಯ ಭವನವನ್ನು ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟನೆ ಮಾಡಲಿದ್ದಾರೆ, ಅನ್ನಛತ್ರವನ್ನು ಇಂಧನ ಸಚಿವ ವಿ.ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ, ಪಾಕಶಾಲೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದಾರೆ, ಸಭಾ ಕಾರ್ಯಕ್ರಮವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ದೀಪ ಪ್ರಜ್ವಲಿಸುವರು, ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ…

Read More

ಬಂಟ್ವಾಳ: ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರಿ ದೇವಸ್ಥಾನದಲ್ಲಿ ಬೆಳಿಗ್ಗೆ 9.25ಕ್ಕೆ ಶ್ರೀ ಗಾಯತ್ರಿ ದೇವಿಗೆ ಪರಿಕಲಶ ಸಹಿತ ಬ್ರಹ್ಮಕಲಶಾಭಿಷೇಕ ನಡೆಯಿತು. ಬಳಿಕ ನ್ಯಾಸ ಪೂಜೆ, ಗಾಯತ್ರಿ ಯಾಗ, ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಗಾಯತ್ರಿ ಮಂತ್ರ, ಮಂತ್ರಗಳಿಗೆ ರಾಜನಿದ್ದಂತೆ. ಗಾಯತ್ರೀ ಮಂತ್ರದಲ್ಲಿ 24 ಅಕ್ಷರಗಳಿವೆ. ಮನುಷ್ಯನ ಬದುಕಿನ ಲೆಕ್ಕಚಾರದದಲ್ಲೂ 24 ಅಂಶಗಳಿದ್ದು ಅದನ್ನು ಮೀರಿದಾಗ ಅದು ಆಧ್ಯಾತ್ಮ ಸಾಧನೆಯಾಗುತ್ತದೆ ಎಂದರು. ಕಷ್ಟಗಳನ್ನು ಗೋಡೆಗಳನ್ನಾಗಿ ಮಾಡುವ ಬದಲು ಕಷ್ಟಗಳನ್ನು ಮೆಟ್ಟಿಲುಗಳನ್ನಾಗಿ ಮಾಡಿದಾಗ ಸಾಧನೆ ಮಾಡಲು ಸಾಧ್ಯವಿದೆ.ಬದುಕು ಸಾರ್ಥಕವಾಗಲು ಶ್ರದ್ದಾಕೇಂದ್ರಗಳು ಬೇಕು. ಗಾಯತ್ರಿ ದೇವಸ್ಥಾನನಿರ್ವಿಘ್ನವಾಗಿ ಬೆಳೆದು, ಬೆಳಗುತ್ತಾ ಬರಲಿ ಎಂದು ಆಶಿಸಿದರು.ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿ ವೇದಗಳಿಗೆ ತಾಯಿ ಗಾಯತ್ರಿ. ಅವಳ ಮಂತ್ರವನ್ನು ಗಾಯನ ಮಾಡುವವರನ್ನು ತಾಯಿ ರಕ್ಷಿಸುತ್ತಾಳೆ. ವೇದ ಎನ್ನುವ ಪದದ ಅರ್ಥ ಜ್ಞಾನ. ಜಗತ್ತಿಗಾಗಿ ಪ್ರಾರ್ಥಿಸುವ ಮನುಕುಲದ…

Read More

ಬಂಟ್ವಾಳ: ಇಲ್ಲಿನ ಬಂಟ್ವಾಳ ಬೈಪಾಸ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಮಾಜ ಸೇವಾ ಸಹಕಾರಿ ಸಂಘ ನಿ. ಬಂಟ್ವಾಳ ಇದರ ಬಾಡಿಗೆ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದ ಮುಡಿಪು ಶಾಖೆಯನ್ನು ಮುಡಿಪುವಿನ ಶಂಕರಿ ಕಾಂಪ್ಲೆಕ್ಸ್‌ನಲ್ಲಿರುವ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಿದ್ದು ಇದರ ಉದ್ಘಾಟನಾ ಸಮಾರಂಭ ಫೆ. 12 ರಂದು ಆದಿತ್ಯವಾರ ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮಾಣಿಲ ಶ್ರೀಧಾಮ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪಪ್ರಜ್ವಲನೆಗೈದು ಆಶೀರ್ವಚನ ನೀಡುವರು, ವಿರೋಧ ಪಕ್ಷದ ಉಪನಾಯಕ, ಮಂಗಳೂರು ಶಾಸಕ ಯು.ಟಿ.ಖಾದರ್ ಸ್ಥಳಾಂತರಿತ ಶಾಖೆಯ ಸ್ವಂತ ಕಟ್ಟಡವನ್ನು ಉದ್ಘಾಟಿಸುವರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು ಭದ್ರತಾ ಕೊಠಡಿ ಉದ್ಘಾಟಿಸುವರು, ಸಂಘದ ಅಧ್ಯಕ್ಷ ಸುರೇಶ್ ಕುಲಾಳ್ ಅಧ್ಯಕ್ಷತೆ ವಹಿಸುವರು, ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಕಂಪ್ಯೂಟರ್ ಉದ್ಘಾಟಿಸುವರು, ಅಮ್ಮೆಂಬಳ ಸೇವಾ ಸಹಕಾರಿ ಸಂಘದ ನಿ. ಅಧ್ಯಕ್ಷ ಟಿ.ಜೆ. ರಾಜರಾಮ ಭಟ್ ಸೇಫ್ ಲಾಕರ್ ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ…

Read More

ಬಂಟ್ವಾಳ:ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನಕ್ಕೆ ಬ್ರಹ್ಮಕಲಶೋತ್ಸವ ಪ್ರಯುಕ್ತ ಬುಧವಾರ ಸಂಜೆ ಆಕರ್ಷಕ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಕ್ಷೇತ್ರದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ಅವರು ವಗ್ಗ ಕಾರಿಂಜ ದ್ವಾರ ಬಳಿ ಮೆರಣಿಗೆಗೆ ಚಾಲನೆ ನೀಡಿದರು.ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಶುಭ ಹಾರೈಸಿದರು. ಭಜನೆ ತರಬೇತುದಾರ ಯೋಗೀಶ ಪೊಯ್ತಾಜೆ ನೇತೃತ್ವದಲ್ಲಿ ಆಕರ್ಷಕ ನೃತ್ಯ ಭಜನೆ, ಚೆಂಡೆ, ವಾದ್ಯ, ಕೊಂಬು, ಗೊಂಬೆ ಕುಣಿತ, ಕಲಶ ಹೊತ್ತ ನಾರಿಯರು ಮೆರವಣಿಗೆಗೆ ವಿಶೇಷ ಮೆರುಗು ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನವೋದಯ ಸ್ಸಹಾಯ ಸಂಘ, ಒಡಿಯೂರು ಸ್ವಸಹಾಯ ಸಂಘ ಮತ್ತಿತರ ಸಂಘಟನೆ ಸದಸ್ಯರು ಪಾಲ್ಗೊಂಡರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ.ತುಂಗಪ್ಪ ಬಂಗೇರ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘು ಸಪಲ್ಯ ಪಾಣೆಮಂಗಳೂರು, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸದಸ್ಯೆ ಸುಲೋಚನಾ ಜಿ.ಕೆ.ಭಟ್, ಸಮಿತಿ ಉಪಾಧ್ಯಕ್ಷರಾದ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ಎಂ.ಬೂಬ ಸಪಲ್ಯ ಮುಂಡಬೈಲು, ಉಮೇಶ ಬೋಳಂತೂರು,…

Read More