Author: admin
ಬಂಟ್ವಾಳ: ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರಿ ದೇವಸ್ಥಾನದಲ್ಲಿ ಬೆಳಿಗ್ಗೆ 9.25ಕ್ಕೆ ಶ್ರೀ ಗಾಯತ್ರಿ ದೇವಿಗೆ ಪರಿಕಲಶ ಸಹಿತ ಬ್ರಹ್ಮಕಲಶಾಭಿಷೇಕ ನಡೆಯಿತು. ಬಳಿಕ ನ್ಯಾಸ ಪೂಜೆ, ಗಾಯತ್ರಿ ಯಾಗ, ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಗಾಯತ್ರಿ ಮಂತ್ರ, ಮಂತ್ರಗಳಿಗೆ ರಾಜನಿದ್ದಂತೆ. ಗಾಯತ್ರೀ ಮಂತ್ರದಲ್ಲಿ 24 ಅಕ್ಷರಗಳಿವೆ. ಮನುಷ್ಯನ ಬದುಕಿನ ಲೆಕ್ಕಚಾರದದಲ್ಲೂ 24 ಅಂಶಗಳಿದ್ದು ಅದನ್ನು ಮೀರಿದಾಗ ಅದು ಆಧ್ಯಾತ್ಮ ಸಾಧನೆಯಾಗುತ್ತದೆ ಎಂದರು. ಕಷ್ಟಗಳನ್ನು ಗೋಡೆಗಳನ್ನಾಗಿ ಮಾಡುವ ಬದಲು ಕಷ್ಟಗಳನ್ನು ಮೆಟ್ಟಿಲುಗಳನ್ನಾಗಿ ಮಾಡಿದಾಗ ಸಾಧನೆ ಮಾಡಲು ಸಾಧ್ಯವಿದೆ.ಬದುಕು ಸಾರ್ಥಕವಾಗಲು ಶ್ರದ್ದಾಕೇಂದ್ರಗಳು ಬೇಕು. ಗಾಯತ್ರಿ ದೇವಸ್ಥಾನನಿರ್ವಿಘ್ನವಾಗಿ ಬೆಳೆದು, ಬೆಳಗುತ್ತಾ ಬರಲಿ ಎಂದು ಆಶಿಸಿದರು.ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿ ವೇದಗಳಿಗೆ ತಾಯಿ ಗಾಯತ್ರಿ. ಅವಳ ಮಂತ್ರವನ್ನು ಗಾಯನ ಮಾಡುವವರನ್ನು ತಾಯಿ ರಕ್ಷಿಸುತ್ತಾಳೆ. ವೇದ ಎನ್ನುವ ಪದದ ಅರ್ಥ ಜ್ಞಾನ. ಜಗತ್ತಿಗಾಗಿ ಪ್ರಾರ್ಥಿಸುವ ಮನುಕುಲದ…
ಬಂಟ್ವಾಳ: ಇಲ್ಲಿನ ಬಂಟ್ವಾಳ ಬೈಪಾಸ್ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಮಾಜ ಸೇವಾ ಸಹಕಾರಿ ಸಂಘ ನಿ. ಬಂಟ್ವಾಳ ಇದರ ಬಾಡಿಗೆ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದ ಮುಡಿಪು ಶಾಖೆಯನ್ನು ಮುಡಿಪುವಿನ ಶಂಕರಿ ಕಾಂಪ್ಲೆಕ್ಸ್ನಲ್ಲಿರುವ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಿದ್ದು ಇದರ ಉದ್ಘಾಟನಾ ಸಮಾರಂಭ ಫೆ. 12 ರಂದು ಆದಿತ್ಯವಾರ ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮಾಣಿಲ ಶ್ರೀಧಾಮ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪಪ್ರಜ್ವಲನೆಗೈದು ಆಶೀರ್ವಚನ ನೀಡುವರು, ವಿರೋಧ ಪಕ್ಷದ ಉಪನಾಯಕ, ಮಂಗಳೂರು ಶಾಸಕ ಯು.ಟಿ.ಖಾದರ್ ಸ್ಥಳಾಂತರಿತ ಶಾಖೆಯ ಸ್ವಂತ ಕಟ್ಟಡವನ್ನು ಉದ್ಘಾಟಿಸುವರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು ಭದ್ರತಾ ಕೊಠಡಿ ಉದ್ಘಾಟಿಸುವರು, ಸಂಘದ ಅಧ್ಯಕ್ಷ ಸುರೇಶ್ ಕುಲಾಳ್ ಅಧ್ಯಕ್ಷತೆ ವಹಿಸುವರು, ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಕಂಪ್ಯೂಟರ್ ಉದ್ಘಾಟಿಸುವರು, ಅಮ್ಮೆಂಬಳ ಸೇವಾ ಸಹಕಾರಿ ಸಂಘದ ನಿ. ಅಧ್ಯಕ್ಷ ಟಿ.ಜೆ. ರಾಜರಾಮ ಭಟ್ ಸೇಫ್ ಲಾಕರ್ ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ…
ಬಂಟ್ವಾಳ:ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನಕ್ಕೆ ಬ್ರಹ್ಮಕಲಶೋತ್ಸವ ಪ್ರಯುಕ್ತ ಬುಧವಾರ ಸಂಜೆ ಆಕರ್ಷಕ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಕ್ಷೇತ್ರದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ಅವರು ವಗ್ಗ ಕಾರಿಂಜ ದ್ವಾರ ಬಳಿ ಮೆರಣಿಗೆಗೆ ಚಾಲನೆ ನೀಡಿದರು.ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಶುಭ ಹಾರೈಸಿದರು. ಭಜನೆ ತರಬೇತುದಾರ ಯೋಗೀಶ ಪೊಯ್ತಾಜೆ ನೇತೃತ್ವದಲ್ಲಿ ಆಕರ್ಷಕ ನೃತ್ಯ ಭಜನೆ, ಚೆಂಡೆ, ವಾದ್ಯ, ಕೊಂಬು, ಗೊಂಬೆ ಕುಣಿತ, ಕಲಶ ಹೊತ್ತ ನಾರಿಯರು ಮೆರವಣಿಗೆಗೆ ವಿಶೇಷ ಮೆರುಗು ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನವೋದಯ ಸ್ಸಹಾಯ ಸಂಘ, ಒಡಿಯೂರು ಸ್ವಸಹಾಯ ಸಂಘ ಮತ್ತಿತರ ಸಂಘಟನೆ ಸದಸ್ಯರು ಪಾಲ್ಗೊಂಡರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ.ತುಂಗಪ್ಪ ಬಂಗೇರ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘು ಸಪಲ್ಯ ಪಾಣೆಮಂಗಳೂರು, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸದಸ್ಯೆ ಸುಲೋಚನಾ ಜಿ.ಕೆ.ಭಟ್, ಸಮಿತಿ ಉಪಾಧ್ಯಕ್ಷರಾದ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ಎಂ.ಬೂಬ ಸಪಲ್ಯ ಮುಂಡಬೈಲು, ಉಮೇಶ ಬೋಳಂತೂರು,…
ಬಂಟ್ವಾಳ: ಅಂತ:ಕರಣ ಶುದ್ಧಿಯ ಪರಿಪೂರ್ಣತೆಯಿಂದ ದೈವ, ದೇವಸ್ಥಾನಗಳಲ್ಲಿ ತೊಡಗಿಸಿಕೊಂಡಾಗ ದೇವರ ಅನುಗ್ರಹ ಪ್ರಾಪ್ತಿಯಾಗುವುದು ಎಂದು ಉಳಿಯ ಧರ್ಮರಸು ಉಳ್ಳಾಲ್ತಿ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣ ಅವರು ಹೇಳಿದರು. ಸುಮಾರು 1ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಬಂಟ್ವಾಳ ತಾಲೂಕು ಕಾಡಬೆಟ್ಟು ಗ್ರಾಮ ದ ಪಿಲಿಂಗಾಲು ಶ್ರೀ ಗಾಯತ್ರಿದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಗುರುವಾರ ನಡೆದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ದೇಗುಲದ ಧರ್ಮದರ್ಶಿ ಕೆ.ಎಸ್.ಪಂಡಿತ್ ಅವರ ಸಾಧನೆಯಿಂದ ಕ್ಷೇತ್ರದಲ್ಲಿ ಗಾಯತ್ರಿ ದೇವಿ ನೆಲೆಯಾಗಿದ್ದಾಳೆ ಎಂದರು.ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ದೇವಸ್ಥಾನಗಳ ಅಭಿವೃದ್ಧಿಯಿಂದ ಗ್ರಾಮ ಸುಭಿಕ್ಷವಾಗುವುದು ಎಂದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದ.ಕ.ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅವರು ಮಾತನಾಡಿ, ಊರ ದೇವಸ್ಥಾನದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳಬೇಕು ಎಂದರು.ಬೆಂಗಳೂರು ಅಖಿಲ ಕರ್ನಾಟಕ ಗಾಣಿಗರ ಸಂಘದ ರಾಜ್ಯಾಧ್ಯಕ್ಷ ರಾಜಶೇಖರ ಗಾಣಿಗ, ಧ.ಗ್ರಾ.ಯೋಜನೆ ಬಂಟ್ವಾಳ ತಾ.ಯೋಜನಾಧಿಕಾರಿ ಜಯಾನಂದ , ಮುಂಬಯಿ ಉದ್ಯಮಿ ನಿತ್ಯಾನಂದ ಪೂಜಾರಿ ಕೆಂತಲೆ, ಬಂಟ್ವಾಳ ತಾ. ವಿಶ್ವಕರ್ಮಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ…
ಬಂಟ್ವಾಳ: ಸೋಮಯ್ಯ ವಿದ್ಯಾವಿಹಾರ್ ಯೂನಿವರ್ಸಿಟಿ ಸ್ಪೋರ್ಟ್ಸ್ ಅಕಾಡೆಮಿಯ ವತಿಯಿಂದ ಫೆ. ೯ ರಂದು ಮುಂಬೈನಲ್ಲಿ ಜರುಗಿದ ರಾಷ್ಟ್ರ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ನಲ್ಲಿ ಸಹೋದರಿಯರಿಬ್ಬರು ಬಹುಮಾನ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕರ್ನಾಟಕವನ್ನು ಪ್ರತಿನಿಧಿಸಿದ ಬಂಟ್ವಾಳ ತಾಲೂಕಿನ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆತ್ತರಕೆರೆ ಇಲ್ಲಿಯ ವಿದ್ಯಾರ್ಥಿನಿಯರಾದ ಏಳನೇ ತರಗತಿಯ ಹಂಸಿಕಾ ಹಾಗೂ ಆಕೆಯ ಸಹೋದರಿ ಒಂದನೇ ತರಗತಿಯ ಭೂಮಿಕ ಸ್ಕೇಟಿಂಗ್ನಲ್ಲಿ ಬಹುಮಾನವನ್ನು ಗೆದ್ದುಕೊಂಡ ಕ್ರೀಡಾಪಟುಗಳಾಗಿದ್ದಾರೆ. ೧೨ ವರ್ಷಕಿಂತ ಕೆಳಗಿನ ವಯೋಮಾನದ ವಿದ್ಯಾರ್ಥಿಗಳಿಗೆ ನಡೆದ ಸ್ಕೇಟಿಂಗ್ನಲ್ಲಿ ಹಂಸಿಕಾ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಹಾಗೂ ೭ನೇ ವರ್ಷಕ್ಕಿಂತ ಕೆಳಗಿನ ವಯೋಮಾನದ ವಿದ್ಯಾರ್ಥಿಗಳಿಗೆ ನಡೆದ ಸ್ಕೇಟಿಂಗ್ನಲ್ಲಿ ಭೂಮಿಕಾ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕವನ್ನು ಗೆದ್ದುಕೊಂಡು ಸಾಧನೆ ಮಾಡಿದ್ದಾರೆ.ಇವರು ನೆತ್ತರೆಕೆರೆ ನಿವಾಸಿಗಳಾದ ರಾಜೇಶ್ ಹಾಗು ಶೋಭಾ ದಂಪತಿಯ ಸುಪುತ್ರಿಯಾಗಿದ್ದು ಪೊಳಲಿ ಶ್ರೀ ರಾಮಕೃಷ್ಣ ಆಶ್ರಮ ತಪೋವನದಲ್ಲಿ ತರಬೇತುದಾರರಾದ ಎನ್ಐಟಿಕೆ ವಿದ್ಯಾರ್ಥಿನಿ ವೆನಿಲ್ಲಾ ಮಣಿಕಂಠ ಇವರ ಬಳಿ ತರಬೇತಿಯನ್ನು ಪಡೆಯುತಿದ್ದರೆ. ಸಹೋದರಿಯರ ಸಾಧನೆಯನ್ನು ಪೊಳಲಿ…
ಬಂಟ್ವಾಳ: ಸೋಮಯ್ಯ ವಿದ್ಯಾವಿಹಾರ್ ಯೂನಿವರ್ಸಿಟಿ ಸ್ಪೋರ್ಟ್ಸ್ ಅಕಾಡೆಮಿಯ ವತಿಯಿಂದ ಫೆ. 9 ರಂದು ಮುಂಬೈನಲ್ಲಿ ಜರುಗಿದ ರಾಷ್ಟ್ರ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಬಂಟ್ವಾಳ ತಾಲೂಕಿನ ದ.ಕ. ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆತ್ತರಕೆರೆ ಇಲ್ಲಿಯ ವಿದ್ಯಾರ್ಥಿನಿ ಹಂಸಿಕಾ ಇವರು ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುತ್ತಾರೆ . ಇವರು ರಾಜೇಶ್ ಹಾಗು ಶೋಭಾ ದಂಪತಿಯ ಸುಪುತ್ರಿಯಾಗಿದ್ದು ಪೊಳಲಿ ಶ್ರೀ ರಾಮಕೃಷ್ಣ ಆಶ್ರಮ ತಪೋವನದಲ್ಲಿ ತರಬೇತುದಾರರಾದ ಎನ್ ಐ ಟಿ ಕೆ ವಿದ್ಯಾರ್ಥಿನಿ ವೆನಿಲ್ಲಾ ಮಣಿಕಂಠ ಇವರ ಬಳಿ ತರಬೇತಿಯನ್ನು ಪಡೆಯುತಿದ್ದರೆ. ವಿದ್ಯಾರ್ಥಿನಿಯ ಸಾಧನೆಯನ್ನು ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕಾ ಚೈತನ್ಯಾನಂದ ಸ್ವಾಮೀಜಿಯವರು ಅಭಿನಂದಿಸಿದ್ದಾರೆ. Advertisement Advertisement
ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ರಥಬೀದಿಯಲ್ಲಿದ್ದ ಬೃಹತ್ ಗಾತ್ರದ ಅರಳಿ ಮರ(ಅಶ್ವತ್ಥ)ವೊಂದು ಗುರುವಾರ ಬೆಳೆಗ್ಗೆ ಧರೆಗುರುಳಿದ್ದು, ಮರ ವಿದ್ಯುತ್ ತಂತಿಯ ಮೇಲೆ ಬಿದ್ದು ೫-೬ ವಿದ್ಯುತ್ ಕಂಬಗಳು ಧರೆಗುರುಳಿರುವ ಜತೆಗೆ ರಸ್ತೆಗೆ ಬಿದ್ದ ಪರಿಣಾಮ ಕೆಲವೊತ್ತು ಸಂಚಾರ ವ್ಯತ್ಯಯ ಉಂಟಾಯಿತು. ಬೆಳ್ಳಗ್ಗಿನ ಹೊತ್ತು ಜನಸಂಚಾರ ಹಾಗೂ ವಾಹನ ಸಂಚಾರ ಹೆಚ್ಚಿರುವ ಸಮಯವಾದರೂ, ದೇವರ ಪವಾಡದ ರೀತಿಯಲ್ಲಿ ಯಾವುದೇ ಜೀವಹಾನಿ ಉಂಟಾಗಿಲ್ಲ.ಕಳೆದೆರಡು ದಿನಗಳಲ್ಲಿ ಮರದ ರೆಂಬೆಗಳು ಬಿದ್ದಿದ್ದು, ಆಗಲೂ ಯಾವುದೇ ಹಾನಿ ಉಂಟಾಗಿಲ್ಲ.ಗುರುವಾರ ಬೆಳಗ್ಗಿನ ಹೊತ್ತು ಮರ ಏಕಾಏಕಿ ಬುಡದ ಭಾಗದಲ್ಲಿ ತುಂಡಾಗಿ ಬಿದ್ದಿದ್ದು, ವಿದ್ಯುತ್ ಕಂಬಗಳು ಧರೆಗುರುಳಿರುವುದು ಬಿಟ್ಟರೆ, ಪಕ್ಕದಲ್ಲಿದ್ದ ಪ್ರಯಾಣಿಕರ ತಂಗುದಾಣ, ಅಂಗಡಿಗೆ ಯಾವುದೇ ಹಾನಿಯಾಗಿಲ್ಲ. ಮರ ಬೀಳುವ ಕೆಲ ಹೊತ್ತಿನ ಮೊದಲೇ ಶಾಲಾ ಬಸ್ಸುಗಳು, ಇತರ ವಾಹನಗಳು ಮರದ ಬಿದ್ದಿರುವ ಭಾಗದಲ್ಲೇ ಹಾದು ಹೋಗಿದ್ದವು. ಜತೆಗೆ ಬೀಳುವ ಹೊತ್ತಿನಲ್ಲೂ ದೂರದಲ್ಲಿ ದ್ವಿಚಕ್ರ ವಾಹನಗಳು ಅದೇ ಭಾಗಕ್ಕೆ ಆಗಮಿಸುತ್ತಿತ್ತು. ಬೀಳುವ ಹೊತ್ತಿನಲ್ಲಿ ಜೋರಾದ ಶಬ್ದ ಕೇಳಿಬಂದಿದ್ದು, ತಂಗುದಾಣದಲ್ಲಿ ಕೂತವರು…
ಮೆಲ್ಕಾರ್: ಇಲ್ಲಿನ ಮೆಲ್ಕಾರ್ ಮಹಿಳಾ ಕಾಲೇಜಿನ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಬಿ.ಕೆ. ಅಬ್ದುಲ್ ಲತೀಫ್ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಮಹತ್ವದ ಕುರಿತು ವಿವರಿಸಿದರು. ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವ ತಯಾರಿಯ ಬಗ್ಗೆ ಇತಿಹಾಸ ಉಪನ್ಯಾಸಕ ಅಬ್ದುಲ್ ಮಜೀದ್ ಎಸ್ ಮಾಹಿತಿ ನೀಡಿದರು. ಉಪ ಪ್ರಾಂಶುಪಾಲೆ ಆಂಜಲಿನ ಸುನಿತಾ ಪಿರೇರಾ ಸದ್ರಿ ಶೈಕ್ಷಣಿಕ ವರ್ಷದ ಉತ್ತಮ ವಿದ್ಯಾರ್ಥಿನಿಯರಾದ ಹವ್ವಾ ನೌಫಾ ಹಾಗೂ ಫಾತಿಮಾ ಸ್ವಾಲಿಹ ರವರ ಹೆಸರು ಘೋಷಣೆ ಮಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಉಪನ್ಯಾಸಕಿ ಮಮತಾ ರಾವ್ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕಿಯರಾದ ಫಿದಾ ನಹಿಮಾ, ಹವ್ವಾ ನೌಫಾ, ಆಯಿಷಾ ತಮ್ಮ ಎರಡು ವರ್ಷದ ಕಾಲೇಜಿನ ಸವಿನೆನಪುಗಳನ್ನು ಹಂಚಿ ಕೊಂಡರು.ಆಯಿಷಾ ಶೈಬಾ ಸ್ವಾಗತಿಸಿ, ರಫಾ ಮರಿಯಮ್ ಧನ್ಯವಾದವಿತ್ತರು. ಆಯಿಷಾ ಝುಲ್ಫ ಕಾರ್ಯಕ್ರಮ ನಿರೂಪಿಸಿದರು.
ಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಕ್ಷಯ ರೋಗಿಗಳಿಗೆ ಪೌಷ್ಠಿಕ ಆಹಾರದ ಕಿಟ್ ಹಸ್ತಾಂತರಿಸಲಾಯಿತು. ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ., ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಉಪಾಧ್ಯಕ್ಷ ಕಿಶೋರ್ ಆಚಾರ್ಯ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ ಹಾಜರಿದ್ದರು.
.ಬಂಟ್ವಾಳ: ಬೊಳ್ಳಾಯಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 10 ನೇ ಕಾವಳಮೂಡೂರು ಶಾಖೆಯು ಕಾವಳಮೂಡೂರು ಗ್ರಾಮದ ಎನ್.ಸಿ. ರೋಡಿನಲ್ಲಿರುವ ತೌಹೀದ್ ಕಾಂಪ್ಲೆಕ್ಸ್ ನಲ್ಲಿ ಫೆ.12ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದೆ. ಈಗಾಗಲೇ ತಾಲೂಕಿನ ವಿವಿಧ ಭಾಗಗಳಲ್ಲಿ ಸಂಘದ ಒಂಭತ್ತು ಶಾಖೆಗಳು ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಇದೀಗ ಗ್ರಾಹಕರ ಅನುಕೂಲಕ್ಕಾಗಿ ಸಂಪೂರ್ಣ ಗಣಕೀಕೃತಗೊಂಡ, ಮೂರ್ತೆದಾರರ ಸಾಲ, ಆಭರಣ ಸಾಲ, ವಾಹನ ಸಾಲ, ಗೃಹಸಾಲ, ವ್ಯಾಪಾರ ಸಾಲ, ಮಹಿಳೆಯರಿಗೆ ತ್ವರಿತ ಸಾಲ, ಕೃಷಿಯೇತರ ಸಾಲ, ಸ್ವ-ಸಹಾಯ ಸಾಲ ಸೌಲಭ್ಯಗಳೊಂದಿಗೆ ನೂತನ ಶಾಖೆ ಆರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಕುಚ್ಚಿಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.