Author: admin
ಬಂಟ್ವಾಳ: ಕಳೆದ 18 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರನ್ನು ಕೇಂದ್ರವಾಗಿಸಿರಿಕೊಂಡು, ಇಸ್ಕಾನ್ ಅಕ್ಷಯ ಪಾತ್ರೆ ಫೌಂಡೇಶನ್ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುತ್ತಿದೆ. ಇದನ್ನು ವಿಸ್ತರಿಸಿರುವ ಸಂಸ್ಥೆ, ಇದೀಗ ದಿನಕ್ಕೆ 25 ಸಾವಿರ ಮಕ್ಕಳಿಗೆ ಬಿಸಿಯೂಟ ನೀಡಲು ಸಜ್ಜಾಗುತ್ತಿದೆ. ಹೆಚ್ಚು ಬೇಡಿಕೆ ಹಿನ್ನೆಲೆ, ಇನ್ನಷ್ಟು ವಿದ್ಯಾರ್ಥಿಗಳನ್ನು ತಲುಪುವ ಉದ್ದೇಶದಿಂದ ಅಕ್ಷಯಪಾತ್ರೆ ಫೌಂಡೇಶನ್ ಈ ಯೋಜನೆ ಆರಂಭಿಸಿದೆ. ಬಂಟ್ವಾಳದ ಬೆಂಜನಪದವು ಎಂಬಲ್ಲಿ ಈಗಾಗಲೇ ಇದರ ಘಟಕ ತಯಾರಾಗಿದ್ದು, ಡಿ.೩ರಂದು ಭಾನುವಾರ ವಿದ್ಯುಕ್ತವಾಗಿ ಚಾಲನೆಗೊಳ್ಳಲಿದೆ ಎಂದು ಇಸ್ಕಾನ್ ಸಂಸ್ಥೆಯ ಗುಣಕರ ರಾಮದಾಸ ಸ್ವಾಮೀಜಿ ತಿಳಿಸಿದರು.ಅವರು ಬಿ.ಸಿ.ರೋಡು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಡಿ. 3ರಂದು ಭಾನುವಾರ ಬೆಳಿಗ್ಗೆ 11.30ಕ್ಕೆ ಮೆಗಾ ಕಿಚನ್ ಉದ್ಘಾಟನಾ ಸಮಾರಂಭ ನಡೆಯಲಿದೆ. ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ದಿವ್ಯ ಉಪಸ್ಥಿತಿಯಲ್ಲಿ ಅಕ್ಷಯ ಪಾತ್ರೆ ಫೌಂಡೇಷನ್ ಅಧ್ಯಕ್ಷ ಮಧು ಪಂಡಿತದಾಸ, ಉಪಾಧ್ಯಕ್ಷ ಚಂಚಲಪತಿ ದಾಸ, ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲು, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉದ್ಯಮಿ ಡಾ.…
ಬಂಟ್ವಾಳ: ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ, ಹಾಗೂ ಕ್ರೀಡಾ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯೊದಗಿಸುವ ನಿಟ್ಟಿನಲ್ಲಿ ಎರಡನೇ ವರ್ಷದ ದಡ್ಡಲಕಾಡು ಚಿಣ್ಣರೋತ್ಸವಕ್ಕೆ ಬಂಟ್ವಾಳ ತಾಲೂಕಿನ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಿದ್ದಗೊಳ್ಳುತ್ತಿದೆ. ಕಳೆದ ವರ್ಷದ ಅತ್ಯದ್ಭುತ ಯಶಸ್ಸಿನಿಂದ ಪ್ರೇರಣೆ ಪಡೆದು ಈ ವರ್ಷವೂ ಹಲವಾರು ವಿಶಿಷ್ಠ, ವಿನೂತನ ಕಾರ್ಯಕ್ರಮ ನೀಡಲು ಶಾಲೆಯ ಸಾವಿರಾರು ವಿದ್ಯಾರ್ಥಿಗಳು ತಯಾರಾಗಿದ್ದು ಸರ್ಕಾರಿ ಶಾಲೆಯಲ್ಲಿ ಇಂತಹ ದೊಡ್ಡಮಟ್ಟದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯುತ್ತಿರುವುದು ಪ್ರಥಮ.ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ತಲುಪಿದ್ದ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಅವರ ನೇತೃತ್ವದಲ್ಲಿ ಮಾದರಿ ಶಾಲೆಯಾಗಿ ಬೆಳೆದಿರುವುದು ಈಗ ಇತಿಹಾಸ. ೨೮ ಮಕ್ಕಳಿದ್ದ ಶಾಲೆ ಈಗ ಸರಕಾರಿ ಆಂಗ್ಲಮಾಧ್ಯಮ ಶಾಲೆಯಾಗಿ ಪರಿವರ್ತನೆಗೊಂಡು ೧೨೦೦ಕ್ಕಿಂತಲೂ ಅಧಿಕ ಮಂದಿ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಶಾಲಾ ವೇದಿಕೆ ಕಿರಿದಾದಾಗ ಅನೇಕ ವಿದ್ಯಾರ್ಥಿಗಳು ತಮ್ಮ ಪ್ರತಿಭಾ ಪ್ರದರ್ಶನದಿಂದ ವಂಚಿತರಾಗುತ್ತಾರೆ.…
ಕರ್ನಾಟಕ ಜೂಡೋ ಸಂಸ್ಥೆ ಬೆಂಗಳೂರು ಇದರ ಆಶ್ರಯದಲ್ಲಿ ಬೆಂಗಳೂರು ನಗರ ಜಿಲ್ಲಾ ಜೂಡೋ ಸಂಸ್ಥೆ ಮತ್ತು ಡಿಬಿಕೆಡಿಓ ಜೈನ್ ವಿಕ್ಕಂ ಸಂಯೋಜನೆಯಲ್ಲಿ ನ.29 ಮತ್ತು 30 ರಂದು ನಡೆದ 41ನೇ ಕರ್ನಾಟಕ ರಾಜ್ಯ ಸಬ್ ಜ್ಯೂನಿಯರ್ ಮತ್ತು ಮಿನಿ ಜೂಡೋ ಚಾಂಪಿಯನ್ ಶಿಪ್ 2023-24 ರಲ್ಲಿ ಆಳ್ವಾಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ತನ್ಮಯ್ ಪಿ.ಶೆಟ್ಟಿ 66 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಗೆದ್ದುಕೊಂಡಿದ್ದಾನೆ. ಈತ ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಮಾರ್ಷಲ್ ಆರ್ಟ್ಸ್ ತರಬೇತಿ ಪಡೆಯುತ್ತಿದ್ದಾನೆ.
ಬಂಟ್ವಾಳ: ಬಂಟ್ವಾಳದ ಬಸ್ತಿಪಡ್ಡುವಿನಲ್ಲಿರುವ ಭದ್ರಾಹೋಂ ಅಪ್ಲೆನ್ಸಸ್ ತನ್ನ ಮೂರನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಖರೀದಿಯ ಕೂಪನ್ ಗಳನ್ನು ನೀಡಿತ್ತು. ಅದೃಷ್ಟಚೀಟಿಯ ಫಲಿತಾಂಶವನ್ನು ಗುರುವಾರ ನಡೆಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ನಿರೀಕ್ಷಕರಾದ ಶಿವಕುಮಾರ್ ನೆರವೇರಿಸಿದರು. ಬಂಪರ್ ಬಹುಮಾನ 0578 ನಂಬರ್ ಗೆ ಬಂದಿದ್ದು, ಪ್ರೋತ್ಸಾಹಕರ ដក 0524, 0512, 16388, 0830 ಮತ್ತು 1785 ನಂಬರ್ ಗಳಿಗೆ ಬಂದಿವೆ ಎಂದು ಮಾಲಕರಾದ ಮಂಜುನಾಥ ಆಚಾರ್ಯ ಮತ್ತು ಮೇಘಾ ಆಚಾರ್ಯ ತಿಳಿಸಿದ್ದಾರೆ. ಈ ಸಂದರ್ಭ ಮಡಂತ್ಯಾರು ಪ್ರಾಥಮಿಕ ಕೃಷಿ ಕ್ರೆಡಿಟ್ ಸಹಕಾರ ಸೊಸೈಟಿಯ ಅಧ್ಯಕ್ಷಕೆ. ಅರವಿಂದ ಜೈನ್, ನಿರ್ದೇಶಕ ಅಬ್ದುಲ್ ರಹಮಾನ್ ಪಡ್ಪು ಇದ್ದರು.
ಬಂಟ್ವಾಳ : ಏಡ್ಸ್ ಬಗ್ಗೆ ಜಗತ್ತಿನಲ್ಲಿ ಉಂಟುಮಾಡಿರುವ ಜಾಗೃತಿಯ ಪರಿಣಾಮವಾಗಿ ಇಂದು ಈ ಆರ್ಜಿತ ರೋಗವು ಗಣನೀಯ ಪ್ರಮಾಣದಲ್ಲಿ ನಿಯಂತ್ರಿಸಲು ಸಾಧ್ಯವಾಗಿದೆ ಎಂದು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪುಷ್ಪಲತಾ ಹೇಳಿದರು. ಅವರು ಶುಕ್ರವಾರ ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ವಿಶ್ವ ಏಡ್ಸ್ ದಿನಾಚರಣೆನ್ನುದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.ವಿದ್ಯಾರ್ಥಿ ಜೀವನದಲ್ಲೇ ಏಡ್ಸ್ ಮತ್ತಿತರ ಕಾಯಿಲೆಗಳ ಬಗ್ಗೆ ಸೂಕ್ತ ಅರಿವು ಮೂಡುವುದೇ ಭವಿಷ್ಯದ ಸುಂದರ ಬದುಕಿಗೆ ರಹದಾರಿ ಎಂದು ಅವರು ಅಭಿಪ್ರಾಯ ಪಟ್ಟರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಯೂಸುಫ್ ವಿಟ್ಲ ಮಾತನಾಡಿ ಜನ ಸಮುದಾಯದಲ್ಲಿ ಏಡ್ಸ್ ಬಗ್ಗೆ ಅರಿವು ಮೂಡಿಸುವುದೇ ಈ ಸಾಲಿನ ಆಚರಣೆಯ ಪ್ರಧಾನ ಧ್ಯೇಯ ಎಂದು ಹೇಳಿದರು. ನಿವೃತ್ತ ಮಲೇರಿಯಾ ಜಿಲ್ಲಾ ನಿಯಂತ್ರಣಾಧಿಕಾರಿ ಜಯರಾಮ ಪೂಜಾರಿ ಏಡ್ಸ್ ಜಾಗೃತಿ ಉಪನ್ಯಾಸ ನೀಡಿದರು. ಕಾರ್ಯಕ್ರಮವನ್ನು ಜಿಲ್ಲಾ ಏಡ್ಸ್ ನಿಯಂತ್ರಣ ಸೊಸೈಟಿ, ತಾಲೂಕು ಆರೋಗ್ಯ ಇಲಾಖೆ, ತಾಲೂಕು ಸಾರ್ವಜನಿಕ ಆಸ್ಪತ್ರೆ…
ಬಂಟ್ವಾಳ: ಬಂಟ್ವಾಳ ತಾಲೂಕು ಮಡಿವಾಳರ ಸಮಾಜ ಸೇವಾ ಸಂಘ ಇದರ 32ನೇ ವಾರ್ಷಿಕ ಮಹೋತ್ಸವ ಪ್ರಯುಕ್ತ ಮಡಿವಾಳ ಯುವ ಬಳಗ ಪ್ರಯೋಜಕತ್ವದಲ್ಲಿ ಕಂದೂರು ಶ್ರೀ ಗುರು ಮಾಚಿದೇವ ಸಮುದಾಯ ಭವನದ ಮುಂಭಾಗದ ಮೈದಾನದಲ್ಲಿ ಡಿ. 10ರಂದು ಭಾನುವಾರ ಕ್ರೀಡೋತ್ಸವ ಏರ್ಪಡಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ಕ್ರೀಡೋತ್ಸವ ಸಭಾ ಕಾರ್ಯಕ್ರಮವನ್ನು ಮಂಗಳೂರು ವಿಶೇಷ ಆರ್ಥಿಕ ವಲಯ ಪ್ರಬಂಧಕ ಯೋಗೀಶ ಕಲಸಡ್ಕ ಉದ್ಘಾಟಿಸಲಿರುವರು. ಸಂಘದ ಅಧ್ಯಕ್ಷ ಎನ್.ಕೆ. ಶಿವ ಅಧ್ಯಕ್ಷತೆ ವಹಿಸಲಿರುವರು. ಕುಡ್ತಮುಗೇರು ಪಂ. ಸದಸ್ಯ ಹರೀಶ್ ಮಂಕುಡೆ, ಶಿಕ್ಷಕ ವೆಂಕಟೇಶ್ ಅನಂತಾಡಿ, ನಿವೃತ್ತ ಶಿಕ್ಷಕ ಸೋಮಪ್ಪ ಮಡಿವಾಳ ರಾಯಿ, ಉದ್ಯಮಿ ನವೀನ್ ರಾಧುಕಟ್ಟೆ, ಮಹಾವೀರ ಬ್ಯಾಂಕ್ ಪ್ರಬಂಧಕ ಪುಷ್ಪರಾಜ್ ಕುಕ್ಕಾಜೆ, ವಕೀಲೆ ವಿನೋದ ರವಿರಾಜ್ ಬಿ.ಸಿರೋಡ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಮಹಿಳಾ ಹಾಗೂ ಪುರುಷರಿಗೆ ಪ್ರತ್ಯೇಕ ವಿಭಾಗದಲ್ಲಿ ಕ್ರೀಡಾಕೂಟ ನಡೆಯಲಿದೆ. ಬಂಟ್ವಾಳ ತಾಲೂಕಿನ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಡಿವಾಳ ಯುವ ಬಳಗ ಅಧ್ಯಕ್ಷ ಸಂದೇಶ್ ಕೊಯಿಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇದರ ಆಶ್ರಯದಲ್ಲಿ ಬಂಟ್ವಾಳ ಗಿರಿಗುಡ್ಡೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತುಕಾರ್ಯಕ್ರಮವನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿಂದಿಯ ನಾಯಕ್ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಮಾನವೀಯ ಮಾಲ್ಯಗಳಿಗೆ ಬೆಲೆಕೊಟ್ಟು ತೃಪ್ತಿಯುತ ಜೀವನ ನಡೆಸಬೇಕು, ದುಶ್ಚಟಗಳಿಗೆ ಬಲಿಯಾಗಿ ಜೀವನವನ್ನು ಹಾಳು ಮಾಡಿಕೊಳ್ಳದಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 25 ವರ್ಷದಿಂದ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ನಿರ್ವಹಿಸಿ ನಿವೃತ್ತರಾದ ಸಂತೋಷ್ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಸಿಬ್ಬಂದಿಗಳಾದ ರೇಖಾ, ಅರ್ಪಿತಾ, ಹಾಸ್ಟೆಲ್ ಮೇಲ್ವಿಚಾರಕ ವಿಜಯ್,ವೀರಪ್ಪ, ವಸತಿ ನಿಲಯದ ಅಧ್ಯಕ್ಷ ಚೇತನ್ಉಪಾಧ್ಯಕ್ಷ ಅವಿನಾಶ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತ ಪಡಿಸಿದರು. ವಿನೀತ್ ಸ್ವಾಗತಿಸಿ, ಕಿರಣ್ ವಂದಿಸಿದರು.
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ ಸಹಕಾರದೊಂದಿಗೆ, ಮಂಗಳೂರಿನ ಎನಿಮಲ್ ಕೇರ್ ಟ್ರಸ್ಟ್ ಸಂಸ್ಥೆಯು ಡಿ.3 ಆದಿತ್ಯವಾರ ಬಿ.ಸಿ.ರೋಡಿನ ಖಾಸಗಿ ಬಸ್ಸು ನಿಲ್ದಾಣದ ಪಕ್ಕ, ಮೇಲ್ಸೆತುವೆ ಕೆಳಗೆ ಸಂಪೂರ್ಣವಾಗಿ ಲಸಿಕೆಗಳನ್ನು ಕೊಟ್ಟ ದೇಸಿ ತಳಿಯ ನಾಯಿ ಹಾಗೂ ಬೆಕ್ಕು ಮರಿಗಳನ್ನು ಉಚಿತವಾಗಿ ದತ್ತು ನೀಡಲಿದ್ದಾರೆ. ಮರಿಗಳನ್ನು ದತ್ತು ಪಡೆಯುವವರು ತಮ್ಮ ಆಧಾರ್ ಕಾರ್ಡ್ ಖಡ್ಡಾಯವಾಗಿ ನೀಡಬೇಕು, ಅಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶಿಬಿರ ನಡೆಯಲಿದ್ದು ಹಣ ಕೊಟ್ಟು ಪ್ರಾಣಿಗಳನ್ನು ಪಡೆಯುವ ಬದಲು ರಕ್ಷಿಸಿದ ದೇಸಿಯ ಪ್ರಾಣಿಗಳಿಗೆ ಬದುಕನ್ನು ಕೊಡಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ರೋಟರಿ ಕ್ಲಬ್ ಬಂಟ್ವಾಳ ಹಾಗೂ ಎನಿಮಲ್ ಕೇರ್ ಟ್ರಸ್ಟ್ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ೧೨೪ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ಡಿ.೩ರಂದು ಭಾನುವಾರ ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೧ರ ವರೆಗೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಶಿವಕುಮಾರ್, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಭಾಗವಹಿಸುವರು. ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ: ಜಿಲ್ಲೆಯಲ್ಲಿ ಶಿಸ್ತುಬದ್ಧ ಶಿಕ್ಷಕರು ಸುಸಂಸ್ಕೃತ ಮತ್ತು ಶಿಸ್ತು ಬದ್ಧ ವಿದ್ಯಾರ್ಥಿಗಳನ್ನು ರೂಪಿಸುತ್ತಿದ್ದಾರೆ. ಶಿಕ್ಷಕರಿಗೆ ಅನಗತ್ಯ ಕರ್ತವ್ಯದ ಹೊರೆ, ಪಠ್ಯಪುಸ್ತಕ ಗಳಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು. ರಾಜ್ಯದಲ್ಲಿ ಶಿಕ್ಷಣತಜ್ಞರ ನೇತೃತ್ವದಲ್ಲಿ ಪಠ್ಯ ರಚನೆ ಮತ್ತು ಶಿಕ್ಷಣ ನೀತಿ ಜೊತೆಗೆ ಮೂಲಭೂತ ಸೌಕರ್ಯ ಒದಗಿಸಿದಾಗ ಮಾತ್ರ ಗುಣಮಟ್ಟದ ಶಿಕ್ಷಣದಿಂದ ಸಮೃದ್ಧ ಸಮಾಜ ನಿರ್ಮಾಣವಾಗುತ್ತದೆ. ರಾಜ್ಯದಲ್ಲಿ ಶೇ.45 ರಷ್ಟು ಶಿಕ್ಷಕರ ಕೊರತೆ ಸಹಿತ ಶೌಚಾಲಯ, ಕೊಠಡಿ ಸಮಸ್ಯೆ ಕಾಡುತ್ತಿದೆ. ಸರ್ಕಾರಿ ಸೇರಿದಂತೆ ಅನುದಾನಿತ, ಅನುದಾನರಹಿತ ಶಾಲೆಗಳ ನಡುವೆ ತಾರತಮ್ಯ ಸಲ್ಲದು ಎಂದು ವಿಧಾನಪರಿಷತ್ ಸದಸ್ಯ ಎಸ್ಎಲ್.ಭೋಜೇ ಗೌಡ ಹೇಳಿದರು. ಅವರು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಇದರ ದ.ಕ. ಜಿಲ್ಲಾ ಘಟಕ ಮತ್ತು ಬಂಟ್ವಾಳ ತಲೂಕು ಘಟಕದ ಸಹಯೋಗದೊಂದಿಗೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಮಂಗಳವಾರ ನಡೆದ ಪ್ರೌಢಶಾಲಾ ಸಹಶಿಕ್ಷಕರ ಜಿಲ್ಲಾ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಆರೋಗ್ಯ ಮತ್ತು ಶಿಕ್ಷಣಕ್ಕೆ ಸರ್ಕಾರ…








