Author: admin
ಬಂಟ್ವಾಳ: ಬಿ.ಸಿ.ರೋಡ್ನ ಶ್ರೀ ಸಾಯಿ ಕಿಡ್ ಝೋನ್ ವಿದ್ಯಾಸಂಸ್ಥೆಯಲ್ಲಿ ಕಿಂಡರ್ಗಾರ್ಟನ್ ಪದವಿ ಪ್ರದಾನ ಸಮಾರಂಭವು ವಿಜೃಂಭಣೆಯಿಂದ ನಡೆಯಿತು. ಶಾರದಾ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯರಾದ ನಾರಾಯಣ ಮೊಡಂಕಾಪು ಅವರು ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ತೇಜಸ್ವಿನಿ ಪೂಜಾರಿ, ಉಪಾಧ್ಯಕ್ಷರಾದ ಸುಂದರ್, ಕೋಶಾಧ್ಯಕ್ಷೆ ಜಯಶ್ರೀ, ಆಡಳಿತ ಮಂಡಳಿ ಸದಸ್ಯೆ ಆರತಿ ಅಮೀನ್ ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಸಂಚಾಲಕರಾದ ಐತಪ್ಪ ಪೂಜಾರಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಸಂಸ್ಥೆಗೆ ಸಹಕರಿಸಿದ ಪೋಷಕರು, ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದಕ್ಕೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಂದ ಸಂಸ್ಥೆಗೆ ಸ್ಮಾರ್ಟ್ ಟಿವಿ ಕಾಣಿಕೆಯಾಗಿ ನೀಡಲಾಯಿತು. ಬಳಿಕ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಶಿಕ್ಷಕಿ ಪುಷ್ಪಲತಾ ಸ್ವಾಗತಿಸಿ, ಶಿಕ್ಷಕಿ ಚೈತ್ರ ಧನ್ಯವಾದ ಸಲ್ಲಿಸಿದರು.…
ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿರುವ ಹಿಂದೂ ಯುವ ಸೇನೆ ಏಕಲವ್ಯ ಶಾಖೆ ಮಣಿ ಹಳ್ಳ ಇದರ ಹಿರಿಯ ಕಾರ್ಯಕರ್ತ ಸದಾನಂದ ಕುಲಾಲ್ ಅವರ ಮನೆಗೆ ಏಕಲವ್ಯ ಶಾಖೆಯ ನೇತೃತ್ವದಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿ ಧನ ಸಹಾಯವನ್ನು ನೀಡಲಾಯಿತು. ಈ ಸಂದರ್ಭ ಕೇಂದ್ರೀಯ ಮಂಡಳಿ ಗೌರವಾಧ್ಯಕ್ಷ ಭಾಸ್ಕರ ಚಂದ್ರ ಶೆಟ್ಟಿ, ಅಧ್ಯಕ್ಷ ಯಶೋಧರ ಚೌಟ, ಉದ್ಯಮಿ ರವಿಚಂದ್ರ ಬಂಟ್ವಾಳ, ಬಂಟ್ವಾಳ ತಾಲೂಕು ಅಧ್ಯಕ್ಷ ವಸಂತ್ ಕುಮಾರ್ ಮಣಿಹಳ್ಳ, ಏಕಲವ್ಯ ಶಾಖೆ ಅಧ್ಯಕ್ಷ ತಾರಾನಾಥ ಗೌಡ, ಕಾರ್ಯದರ್ಶಿ, ಮಾಜಿ ಅಧ್ಯಕ್ಷ ನವೀನ್ ಕುಮಾರ್, ಸಂಘಟನಾ ಕಾರ್ಯದರ್ಶಿ ಲೋಕನಾಥ್, ರಿಕ್ಷಾ ಚಾಲಕರಾದ ರವಿಕುಮಾರ್ ಶ್ರೀನಿವಾಸ್, ಗಣೇಶ ಇದ್ದರು. ಈ ಸಂದರ್ಭದಲ್ಲಿ ಕೇಬಲ್ ಮಾಸಿಕ ಕಂತನ್ನು ಉಚಿತವಾಗಿ ನೀಡುವ ಭರವಸೆಯನ್ನು ರವಿಚಂದ್ರ ಬಂಟ್ವಾಳ ನೀಡಿದರು. Advertisement
ಬಂಟ್ಚಾಳ : ಇಲ್ಲಿನ ನಂದನಹಿತ್ಲು ಶ್ರೀ ವೈದ್ಯನಾಥ,ಅರಸು, ಜುಮಾದಿ ಬಂಟ ದೈವಸ್ಥಾನಕ್ಕೆ ಸಂಚರಿಸುವ ಮುಖ್ಯರಸ್ತೆ ಟೂರಿಸ್ಟ್ ಕಾರು ಪಾರ್ಕಿಂಗ್ ಬಳಿ ಹಿಂದೂ ಯುವ ಸೇನೆ ಬಂಟ್ವಾಳ ತಾಲೂಕು ಘಟಕ ಹಾಗೂ ದೈವಸ್ಥಾನದ ಆಡಳಿತ ಸಮಿತಿ ವತಿಯಿಂದ ನಿರ್ಮಿಸಲಾದ ನೂತನ ಮಹಾದ್ವಾರದ ಲೋಕಾರ್ಪಣೆಯು ಮಂಗಳವಾರ ನೆರವೇರಿಸಲಾಯಿತು. ದೈವಸ್ಥಾನದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿ ಮಹಾದ್ವಾರದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಮಹಾದ್ವಾರಕ್ಕೆ ವಿಶೇಷ ಮಹತ್ವ ಇದೆ. ಧರ್ಮ ದೈವಗಳ ಕ್ಷೇತ್ರಕ್ಕೆ ಬರುವಾಗ ಅಧರ್ಮವನ್ನು ಮೆಟ್ಟಿ ಧರ್ಮದ್ವಾರದ ಮೂಲಕ ಬರಬೇಕು, ಸತ್ ಚಿಂತನೆಯಿಂದ ಹಿಂದೂ ಯುವ ಸೇನೆ ಇಲ್ಲಿ ದ್ವಾರ ನಿರ್ಮಿಸಿದೆ.ಇಲ್ಲಿಗೆ ಬರುವ ಭಕ್ತರ ಕಷ್ಟಗಳು ದೂರವಾಗಿ ಸುಖ ಸಂತೋಷ ಮೆರೆಯಲಿ ಎಂದು ಆಶಿಸಿದರು. ಹಿಂದೂ ಯುವ ಸೇನೆಯ ಕೇಂದ್ರೀಯ ಮಂಡಳಿಯ ಗೌರವಾಧ್ಯಕ್ಷ ಭಾಸ್ಕರಚಂದ್ರ ಶೆಟ್ಟಿ ಮಾತನಾಡಿ ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ಇಂತಹ ಅನೇಕ ಕೊಡುಗೆಗಳನ್ನು ಹಿಂದೂ ಯುವ ಸೇನೆ ನೀಡುತ್ತಾ ಬಂದಿದೆ.ಹಿಂದೂಗಳು ಸಂಘಟಿತರಾಗಬೇಕೆನ್ನುವುದೇ ಯುವ ಸೇನೆಯ ಆಶಯ ಎಂದರು. ಜಿ.ಪಂ.ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ…
ಬಂಟ್ವಾಳ: ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ವಿದ್ಯಾರ್ಥಿನಿ ವೀಕ್ಷಾ ವಿ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ತಿಪಟೂರಿನ ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಅವರು 21 ಕಿಮೀ ಹಾಫ್ ಮ್ಯಾರಥಾನ್ನಲ್ಲಿ ಬೆಳ್ಳಿ ಪದಕ ಮತ್ತು 10 ಕಿ.ಮೀ ಓಟದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ವೀಕ್ಷಾ ಅವರು ಮಂಜುಳಾ ಮತ್ತು ಬಂಟ್ವಾಳ ನಗರ ಠಾಣೆಯ ಎಎಸೈ ವಿಜಯಗೌಡ ಅವರ ಪುತ್ರಿ. .
ಉಳ್ಳಾಲ: ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುವ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಸ್ನಾತಕೋತ್ತರ ವಿದ್ಯಾರ್ಥಿ ನಿಲಯದ ರಜತ ಸಂಭ್ರಮದ ಹಾಸ್ಟೆಲ್ ಡೇ ಅನರ್ಘ್ಯ- 2026 ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು. ಚಿತ್ರನಟ, ಹಿರಿಯ ರಂಗಭೂಮಿ ಕಲಾವಿದ ಅರವಿಂದ ಬೋಳಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬೇರೆ ಬೇರೆ ಮನೆಯಿಂದ ಬಂದರೂ ಇಲ್ಲಿ ಒಂದೇ ಕುಟುಂಬದ ಸದಸ್ಯರಂತೆ ವಿದ್ಯಾರ್ಥಿಗಳು ಜೊತೆಯಾಗಿರುವುದು ವಿಶೇಷವಾದ ಅನುಭವವನ್ನು ನೀಡುತ್ತದೆ , ವಿದ್ಯಾ ಸಂಸ್ಥೆಗಳು ದೇವಸ್ಥಾನದಂತೆ ಶ್ರೇಷ್ಟ ಎಂದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಬಿಂದಿಯಾ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಶ್ರದ್ಧೆಯಿಂದ ಕೆಲಸ ಮಾಡಿದಾಗ ಯಶಸ್ಸು ಸಾಧಿಸಲು ಸಾಧ್ಯವಿದೆ. ಏನನ್ನು ಯೋಚಿಸುತ್ತೇವೆಯೋ ಅದೇ ಆಗುತ್ತೇವೆ, ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪ್ರಯತ್ನ ಇರಲಿ ಎಂದು ಆಶಿಸಿದರು. ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಮಾಧವ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಜೀವನ ನಡೆಸಿ ನಮ್ಮ ಗುರಿಯನ್ನು ಸಾಧಿಸ…
ಬಂಟ್ವಾಳ: ತುರ್ತು ಸಂದರ್ಭದಲ್ಲಿ ಜನರಿಗೆ ಆಗೂ ಆಸ್ಪತ್ರೆಗಳ ರಕ್ತನಿಧಿಗೆ ರಕ್ತದ ಅವಶ್ಯಕತೆ ಇದ್ದಾಗ ಸೇವಾಂಜಲಿ ಸಂಸ್ಥೆ ನಿರಂತರ ಶಿಬಿರಗಳನ್ನು ಹಮ್ಮಿಕೊಂಡು ರಕ್ತದ ಬೇಡಿಕೆಯನ್ನು ಪೂರೈಸುತ್ತಿರುವುದು ಉತ್ತಮ ಕಾರ್ಯ ಎಂದು ಬಂಟ್ವಾಳ ಉಪವಿಭಾಗದ ಸಹಾಯಕ ಅಧೀಕ್ಷಕ ಯಶ್ ಕುಮಾರ್ ಶರ್ಮ ಹೇಳಿದರು. ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ , ಕೆ. ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದೊಂದಿಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ಭಾನುವಾರ ನಡೆದ 135 ನೇ ರಕ್ತದಾನ ಶಿಬಿರವನ್ನು ದೀಪ ಬೆಳಗಿಸಿ, ಸ್ವಯಂ ರಕ್ತದಾನ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ನಗರ ಭಾಗದಲ್ಲಿ ಬ್ಲಡ್ ಬ್ಯಾಂಕ್ ಗಳು ಅಗತ್ಯ ಸಂದರ್ಭದಲ್ಲಿ ರಕ್ತ ಒದಗಿಸುವ ಕೆಲಸಮಾಡುತ್ತದೆ ಆದರೆ ಗ್ರಾಮೀಣ ಭಾಗಗಳಲ್ಲಿ ಅತಂಹ ವ್ಯವಸ್ಥೆಗಳು ಇರುವುದಿಲ್ಲ. ಸೇವಾಂಜಲಿ ಸಂಸ್ಥೆ ಹಲವು ವರ್ಷಗಳಿಂದ ಇಂತಹ ಸೇವಾ ಕಾರ್ಯ ನಡೆಸುತ್ತಿರುವುದು ಅಭಿನಂದನೀಯ ಎಂದರು. ರೋಟರಿ ಜಿಲ್ಲೆ 3181ನ ಮಾಜಿ ಗವರ್ನರ್ ಎನ್.ಪ್ರಕಾಶ್ ಕಾರಂತ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಕ್ತದ ಕೊರತೆ ಎದುರಿಸುತ್ತಿರುವ ಈ ಕಾಲಘಟ್ಟದಲ್ಲಿ ಆಸ್ಪತ್ರೆಗಳ…
ಬಂಟ್ವಾಳ :ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆ. ಎಸ್. ಹೆಗ್ಡೆ ಆಸ್ಪತ್ರೆ, ದೇರಳಕಟ್ಟೆ ಇವರ ಸಹಯೋಗದಲ್ಲಿ 135ನೇ ರಕ್ತದಾನ ಶಿಬಿರವು ಮಾ.29ರಂದು ಭಾನುವಾರ ಬೆಳಿಗ್ಗೆ ಗಂಟೆ 9ರಿಂದ 1ರ ವರೆಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ. ಬಂಟ್ವಾಳ ಉಪವಿಭಾಗದ ಎಎಸ್ಪಿ ಯಶ್ ಕುಮಾರ್ ಶರ್ಮ ಶಿಬಿರ ಉದ್ಘಾಟಿಸುವರು, ರೋಟರಿ ಜಿಲ್ಲಾ ಮಾಜಿ ಗವರ್ನರ್ ಎನ್. ಪ್ರಶಾಂತ್ ಕಾರಂತ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೆ ಕೃಷ್ಣಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ಚಾಳ : ಇಲ್ಲಿಯ ನಗರದ ನಂದನಹಿತ್ಲು ಶ್ರೀ ವೈದ್ಯನಾಥ,ಅರಸು, ಜುಮಾದಿ ಬಂಟ ದೈವಸ್ಥಾನದ ವರ್ಷಾವಧಿ ಉತ್ಸವವು ಎ.1 ರಿಂದ 3 ರವರೆಗೆ ನಡೆಯಲಿರುವ ಪ್ರಯುಕ್ತ ಕೋಳಿಕುಂಟವು ಮಂಗಳವಾರ ನೆರವೇರಿತು. ಈ ಸಂದರ್ಭ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಕ್ಷೇತ್ರದ ಮನೆತನದವರಾದ ವಿಶ್ವನಾಥ ಪೊಣ್ಣಂಗಿಲಗುತ್ತು,ಲೋಕೇಶ್ ಬಂಗೇರಗಾಣದಪಡ್ಪು,ಲೋಕನಾಥ ಬಡಕೊಟ್ಟು, ಸಂಜೀವ ಪೆಲತ್ತಿಮಾರು ಹಾಗೂ ಸ್ಥಳೀಯ ಪ್ರಮುಖರು,ಗ್ರಾಮಸ್ಥರು, ಉಪಸ್ಥಿತರಿದ್ದರು. ಕ್ಷೇತ್ರದಲ್ಲಿ ಪುನರ್ ಕಲಶಾಭಿಷೇಕ ಪ್ರಯುಕ್ತ ಮಾ. 30 ರಂದು ಸಂಜೆ ವೈಧಿಕ ವಿಧಿ ವಿಧನಗಳು ನಡೆಯಲಿದೆ.ಮಾ.31 ರಂದು ಕಲಶಾಭಿಷೇಕ,ನಾಗತಂಬಿಲ ಸೇವೆ ಬಳಿಕ ಹಿಂದುಯುವ ಸೇನೆ ಬಂಟ್ವಾಳ ತಾಲೂಕು ಹಾಗೂ ಕ್ಷೇತ್ರದ ಅಡಳಿತ ಸಮಿತಿ ವತಿಯಿಂದ ನಿರ್ಮಿಸಲಾದ ನೂತನ ದ್ವಾರದ ಉದ್ಘಾಟನೆ ನಡೆಯಲಿದೆ.
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇದರ ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ವಿಶ್ವನಾಥ್ ವಹಿಸಿದ್ದರು. ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಗಿರಿಯಪ್ಪ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಚಿದಾನಂದ ರೈ ಅವರು ಮಾತಾಡಿ ಗ್ರಾಮ ಅಭಿವೃದ್ಧಿ ಯೋಜನೆಯಿಂದ ಮಹಿಳೆಯರ ಸಬಲೀಕರಣಕ್ಕಾಗಿ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಾತೃಶ್ರೀ ಹೇಮಾವತಿ ಅಮ್ಮನವರ ಈ ಸಮಾಜಮುಖಿ ಕಾರ್ಯಕ್ರಮದಿಂದ ಅದೆಷ್ಟು ಕುಟುಂಬ ತನ್ನ ಸ್ವಂತ ಕಾಲಲ್ಲಿ ನಿಲ್ಲಲು ಸಹಕಾರಿಯಾಗಿದೆ. ಎಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ವಿದ್ಯಾ ಮಹಿಳೆಯರ ಹಕ್ಕು ಮತ್ತು ಕಾನೂನಿನ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೇಂದ್ರದ ಸದಸ್ಯರಿಗೆ ಸ್ಪರ್ಧೆ ಏರ್ಪಡಿಸಲಾಯಿತು . ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕೇಂದ್ರದ ಸದಸ್ಯರು…
ಬಂಟ್ವಾಳ: ಇಲ್ಲಿಯ ನಗರದ ನಂದನಹಿತ್ಲು ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನ ದ ಪುನರ್ ಕಲಶಾಭಿಷೇಕ ಹಾಗೂ ಕಾಲಾವಧಿ ನೇಮೋತ್ಸವವು ಮಾ.30ರಿಂದ ಎ. 3 ರವರೆಗೆ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾ.30 ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ ಸ್ವಸ್ತಿ ಪುಣ್ಯಾಹವಾಚನ, ಸಪ್ತಶುದ್ಧಿ, ವಾಸ್ತು ಪೂಜೆ, ವಾಸ್ತು ಹೋಮ, ರಾಕ್ಷೆಘ್ನ ಹೋಮ, ದಿಕ್ಪಾಲಕ ಬಲಿ ಮಾ. 31 ಬೆಳಿಗ್ಗೆ 6 ಕ್ಕೆ ಗಣಹೋಮ, ಶ್ರೀ ನಾಗದೇವರಿಗೆ ಪಂಚವಿಂಶತಿ ಕಲಶಾಭಿಷೇಕ, ನಾಗತಂಬಿಲ (ಸರ್ಪತ್ರಯ ಹೋಮ)ಸಂಜೆ 6 ಕ್ಕೆ ಶ್ರೀ ಕ್ಷೇತ್ರದ ಧರ್ಮ ದೈವಗಳಿಗೆ ಕಲಶಾಧಿವಾಸ, ಅಧಿವಾಸ ಹೋಮಗಳು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಎ.1ರಂದು ಬೆಳಿಗ್ಗೆ 6 ಕ್ಕೆ ಗಣಹೋಮ, ಕಲಶ ಪ್ರತಿಷ್ಠೆ, ಪ್ರಧಾನ ಹೋಮ, ಶ್ರೀ ದೈವಗಳಿಗೆ ಪುನರ್ ಕಲಶಾಭಿಷೇಕ, ನಾಗದೇವರಿಗೆ ತಂಬಿಲ ಸೇವೆ,ಮಧ್ಯಾಹ್ನ 12 ಕ್ಕೆ ಮಹಾಪೂಜೆ, 12.30ಕ್ಕೆ ಅನ್ನಸಂತರ್ಪಣೆ, ಸಂಜೆ 7 ರಿಂದ 8.30 ರವರೆಗೆ ಭಜನಾ…








