Author: admin

ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಕುಲಾಲ ಸಂಘಗಳ ಸಮಾಗಮ ಕುಲಾಲ ಸಂಘ ಸಮ್ಮಿಲನ ಕಾರ್ಯಕ್ರಮ ಭಾನುವಾರ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ನಡೆಯಿತು. ಬೆಳಿಗ್ಗೆ ಬಿಎಸ್‌ಎನ್‌ಎಲ್ ನಿವೃತ್ತ ಎಜಿಎಂ ಕೃಷ್ಣಶ್ಯಾಂ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಮಧ್ಯಾಹ್ನ ಸಂಘದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆ ಒಕ್ಕೂಟದ ಪರವಾಗಿ ಜಿಲ್ಲಾಧ್ಯಕ್ಷ ಸುಕುಮಾರ್ ಬಂಟ್ವಾಳ ಹಾಗೂ ಬಿ.ಫಾರ್ಮದಲ್ಲಿ ಚಿನ್ನದ ಪದಕ ವಿಜೇತೆಯಾದ ಶಿವಾನಿ ಅವರನ್ನು ಅಭಿನಂದಿಸಲಾಯಿತು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಮುಖ್ಯ ಅತಿಥಿಯಾಗಿ ಕೆಪಿಸಿ ಲಿ. ನ ನಿವೃತ್ತ ಸಹಾಯಕ ಕಾರ್ಯನಿವಾಹಕ ಅಭಿಯಂತರ ಶಿವಪ್ಪ ಅಲೆತ್ತೂರು, ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಮಾಜಿ ಅಧ್ಯಕ್ಷ ರಾಜೇಂದ್ರ ಕುಮಾರ್ ಅಳಪೆ, ನಿವೃತ್ತ ಉಪತಹಶೀಲ್ದಾರ್ ಪದ್ಮನಾಭ ಮಯ್ಯರಬೈಲು,ಬಿಎಸ್‌ಎನ್‌ಎಲ್…

Read More

ಬಂಟ್ವಾಳ: ತುಳುನಾಡಿನ ಕಾರಣಿಕ ಪ್ರಸಿದ್ದ ದೈವಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಶುಕ್ರವಾರ ರಾತ್ರಿ ವರ್ಷಾವಧಿ ಕೋಲ ನಡೆಯಿತು. ಬೆಳಿಗ್ಗೆ ಸಜೀಪ ಮಾಗಣೆಯ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ಪೌರೋಹಿತ್ಯದಲ್ಲಿ ಪುಣ್ಯಾಹ, ಪಂಚಗವ್ಯ ದ್ವಾದಶ ನಾಳಿಕೇರ ಗಣಯಾಗ, ನಾಗತಂಬಿಲ, ಫಲಪಂಚಾಮೃತ ಅಭಿಷೇಕ, ಆಶ್ಲೇಷ ಬಲಿ ಪೂಜೆ, ಪಲ್ಲಪೂಜೆ ನಡೆಯಿತು. ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ. ರಮನಾಥ ರೈ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮೊದಲಾದ ಪ್ರಮುಖರು ಭೇಟಿ ನೀಡಿ ಶ್ರೀ ದೈವದ ಗಂಧಪ್ರಸಾದ ಸ್ವೀಕರಿಸಿದರು. ದೈವಸ್ಥಾನದ ಪ್ರಧಾನ ಅರ್ಚಕ ವಾಸುದೇವ ಮೂಲ್ಯ, ಕಾರ್ಯನಿರ್ವಾಹಣಾಧಿಕಾರಿ ಪ್ರವೀಣ್ ಮೊದಲಾವರು ಉಪಸ್ಥಿತರಿದ್ದರು. ರಾತ್ರಿ ಶ್ರೀ ದೈವಗಳ ಕೋಲ ನಡೆದಿದ್ದು ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಕೋಲ ವೀಕ್ಷಿಸಿದರು.

Read More

ಬಂಟ್ವಾಳ: ಇಲ್ಲಿಯ ನಂದನಹಿತ್ಲು ಶ್ರೀ ವೈದ್ಯನಾಥ ,ಅರಸು,ಜುಮಾದಿಬಂಟ ದೈವಸ್ಥಾನಕ್ಕೆನೂತನ ಧ್ವಜ ಸ್ತಂಭ ಸಮರ್ಪಣೆಯ ಹಿನ್ನಲೆಯಲ್ಲಿ ಬಂಟ್ವಾಳ ತ್ಯಾಗರಾಜರಸ್ತೆಯಲ್ಲಿ ಗುರುತಿಸಲಾದ ವೃಕ್ಷದಛೇಧಕ್ಕೆ ಸ್ಥಳದಲ್ಲಿ ಮುಹೂರ್ತಪೂಜಾ ವಿಧಿ ವಿಧಾನವನ್ನು ಶನಿವಾರ ನಡೆಸಲಾಯಿತು.ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿಯವರ ನೇತೃತ್ವದಲ್ಲಿ ವೃಕ್ಷಕ್ಕೆ ಧಾರ್ಮಿಕ ವಿಧಿವಧಾನಗಳನ್ನು ನೆರವೇರಿಸಲಾಯಿತು.ಈ ಸಂದರ್ಭ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ,ಬಾಳಿಗಾ ಮನೆತನದಬಿ. ಸುಧೀರ್ ಬಾಳಿಗಾ,ಮನೆತನದ ವಿಶ್ವನಾಥ ಪೂಜಾರಿ ಪೊನ್ನಂಗಿಲಗುತ್ತು,ಸಂಜೀವಪೂಜಾರಿ ಪೆಲತ್ತಿಮಾರು, ಲೋಕೇಶ್ ಬಂಗೇರ ಗಾಣದಪಡ್ಪು,ಲೋಕನಾಥ ಪೂಜಾರಿ ಬಡಕೊಟ್ಟು, ಧ್ವಜಸ್ತಂಭಕ್ಕಾಗಿ ಮರವನ್ನು ಉಚಿತವಾಗಿ ದಾನಗೈದ ಅವಿನಾಶ್ ಕಾಮತ್ ಉಪಸ್ಥಿತರಿದ್ದರು.ಶಿಲ್ಪಿ ಸದಾಶಿವ ಶೆಣೈ, ವಸಂತಪ್ರಭು,ಅಮ್ಮು ತುಂಬೆ,ದೇವದಾಸ ಅಮೀನ್ ಬಂಟ್ವಾಳ,ಜಯ ಸುವರ್ಣ, ಶಿವಪ್ರಸಾದ್ ಕೊಟ್ಟಾರಿ,ಜಗನ್ನಾಥ ಸಾಲಿಯಾನ್ ತುಂಬೆ,ಅರುಣ್ ಕುಮಾರ್ ಬೊಳ್ಳಾರಿ,ಯೋಗೀಶ್ ಕೋಟ್ಯಾನ್ ತುಂಬೆ,ಸಂತೋಷ್ ಕುಮಾರ್ ತುಂಬೆ,ಶೇಖರ್ ಮಂಡಾಡಿ,ರಿಷಿ ಮಹಾಬಲ ಬಂಗೇರ,ಗೋಪಾಲಕೃಷ್ಣ ,ಅಶ್ವಿತ್,ಸರೇಶ್ ನಾವೂರು,ಅಕ್ಷಿತ್ ಮುಗ್ಡಾಲ್ ಗುಡ್ಡೆ ಮೊದಲಾದವರಿದ್ದರು.ಇದೇ ವೇಳೆ ಮರ ಕತ್ತರಿಸುವುದು ಸಹಿತ ಮುಂದಿನ ಪ್ರಕ್ರಿಯೆಗೆ ವಿಶ್ವಕರ್ಮರಿಗೆ ವೀಳ್ಯ‌ ನೀಡಲಾಯಿತು.ಇದಕ್ಕು ಮುನ್ನ ಶ್ರೀ ವೈದ್ಯನಾಥ ,ಅರಸು,ಜುಮಾದಿಬಂಟ ದೈವಸ್ಥಾನದಲ್ಲಿ ಪ್ರಾರ್ಥಿಸಲಾಯಿತು. ದೈವಸ್ಥಾನದ ಆಡಳಿತ ಸಮಿತಿ…

Read More

ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಶನಿವಾರ ನಡೆಯಿತು.ಬೆಳಿಗ್ಗೆ ಶಾಲಾ ಎನ್‌ಸಿಸಿ ತಂಡ ಹಾಗೂ ಬಣ್ಣದ ಸಮವಸ್ತ್ರ ತೊಟ್ಟ ವಿದ್ಯಾರ್ಥಿಗಳಿಂದ ಶಾಲಾ ಮೈದಾನದಲ್ಲಿ ಆಕರ್ಷಕ ಪಥಸಂಚಲನ ನಡೆದು ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು. ಉದ್ಯಮಿ ಕೃಷ್ಣಾನಂದ ಅವರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಸಾಧಕ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ತಂದು ಅತಿಥಿ ರಾಜೇಶ್ ನೆಕ್ಕರೆ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಶಾಲಾ ದತ್ತು ಸಂಸ್ಥೆ ಶ್ರೀದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಮಾತನಾಡಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು. ಸೋಲು ಗೆಲುವು ಸಹಜವಾದುದು. ಗೆಲುವಿಗೆ ಹಿಗ್ಗದೆ, ಸೋಲಿಗೆ ಕುಗ್ಗದೆ ಕ್ರೀಡಾಸ್ಪೂರ್ತಿಯಿಂದ ತೊಡಗಿಸಿಕೊಳ್ಳಬೇಕು, ಇಂದಿನ ಕ್ರೀಡಾಕೂಟ ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಪ್ರೇರಣದಾಯಕವಾಗಲಿ ಎಂದು ಶುಭ ಹಾರೈಸಿದರು. ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದ.ಕ. ಜಿಲ್ಲೆಯನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಗೆದ್ದುಕೊಂಡ ಪ್ರಚನ್ ಪೂಜಾರಿಯನ್ನು ಅಭಿನಂದಿಸಲಾಯಿತು.ಇದೇ ವೇಳೆ ಮ್ಯಾಥ್ಸ್ ಕ್ಲಬ್ ಆಯೋಜಿಸಿದ ಮೆಟ್ರಿಕ್ ಮೇಳವನ್ನು ಉದ್ಯಮಿ ನಾಗೇಶ್ ಸಾಲ್ಯಾನ್…

Read More

ಬಂಟ್ವಾಳ: ತಾಲೂಲು ಕುಲಾಲ ಸುಧಾರಕ ಸಂಘ ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಕುಲಾಲ ಸಂಘಗಳ ಸಮಾಗಮ ಕುಲಾಲ ಸಂಘ ಸಮ್ಮಿಲನ ಕಾರ್ಯಕ್ರಮ ನ.26ರಂದು ಭಾನುವಾರ ಬೆಳಿಗ್ಗೆ ಬಿ.ಸಿ.ರೋಡಿನ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9ಕ್ಕೆ ಬಿಎಸ್‌ಎನ್‌ಎಲ್‌ನ ನಿವೃತ್ತ ಎಜಿಎಂ ಕೃಷ್ಣಶ್ಯಾಮ್ ದೀಪ ಪ್ರಜ್ವಲನೆ ಮಾಡುವರು, ಮಧ್ಯಾಹ್ನ 12.15ರಿಂದ ಸಭಾಕಾರ್ಯಕ್ರಮ ನಡೆಯಲಿದ್ದು ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಕೆಪಿಸಿ ಲಿ.ನ ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವಪ್ಪ ಅಲೆತ್ತೂರು, ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲ ಮಾತೃ ಸಂಘದದ ಮಾಜಿ ಅಧ್ಯಕ್ಷ ರಾಜೇಂದ್ರ ಕುಮಾರ್ ಅಳಪೆ, ನಿವೃತ್ತ ಉಪ ತಹಶೀಲ್ದಾರ್ ಪದ್ಮನಾಭ ಎಂ. ಮಯ್ಯರಬೈಲು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಕುಲಾಲ ಸಂಘಗಳ ಜೊತೆ ಮಾತುಕತೆ, ಸಂವಾದ ವಿಚಾರ ವಿನಿಮಯ ಹಾಗೂ ಮನೋರಂಜನಾ ಆಟಗಳು ನಡೆಯಲಿದೆ.ಲೀ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕರ್ನಾಟಕ…

Read More

ಬಂಟ್ವಾಳ: ಮೂಲತಃ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾನೆ. ತಾಲೂಕಿನ ಕುಕ್ಕಿಪ್ಪಾಡಿ ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯದ್ದಲ್ಲಿದ್ದು ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಉತ್ತಮ ಕ್ರೀಡಾಪಟು ಆಗಿರುವ ಅವರಿಗೆ ಕ್ರಿಕೆಟ್ ಎಂದರೆ ಅಚ್ಚುಮೆಚ್ಚು. ಇದೀಗ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದ್ದಿದ್ದು ಊರಿನ ಜನರಲ್ಲಿ ಸಂಭ್ರಮ ಮನೆ ಮಾಡಿದೆ.

Read More

ಬಂಟ್ವಾಳ: ಐಡಿಯಲ್ ಕಾಶ್ಯು ಇಂಡಸ್ಟ್ರೀಸ್ ಶೇರಾ ಇಲ್ಲಿ ದೀಪಾವಳಿಯನ್ನು ಆಚರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಹಿರಿಯ ಮಾರ್ಗದರ್ಶಕ ಜೆ ಕೆ ನಾಯರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯಾವುದೇ ಸಂಸ್ಥೆ ಬೆಳೆಯಬೇಕಾದರೆ ಕೆಲಸಮಾಡುವ ಸಿಬ್ಬಂದಿಗಳ ಪ್ರಾಮಾಣಿಕ ಸೇವೆ ಅಗತ್ಯ ಅಂತಹ ಸಿಬ್ಬಂದಿಗಳು ನಮ್ಮಲ್ಲಿದ್ದಾರೆ. ಅದಕ್ಕೆ ಪೂರಕವಾಗಿ ಸಹೃದಯಿ ಸಿಬ್ಬಂದಿಗಳ ಬೇಕು ಬೇಡ ಗಳಿಗೆ ಸ್ಪಂದಿಸುವ ಮಾಲಕರು ಅನ್ಯೋನ್ಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ಪರವಾಗಿ ಕರ್ನಾಟಕ ರಾಜ್ಯ ಕರಾವಳಿ ಕುಲಾಲ ಕುಂಬಾರ ಯುವೇದಿಕೆ (ರಿ) ಜಿಲ್ಲಾಧ್ಯಕ್ಷ ಸುಕುಮಾರ್ ಬಂಟ್ವಾಳ್, ನಿವೃತ್ತ ಪ್ರಾಚಾರ್ಯ ಎಸ್.ಮಹೇಶ್ವರ ಭಟ್, ಕಡೇಶ್ವಾಲ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್.ರಾವ್ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಮಾಲಕರಾದ ಎಸ್. ಗಂಗಾಧರ್ ಶೇರಾ ಸ್ವಾಗತಿಸಿದರು. ಮಲ್ಲಿಕಾ ಗಂಗಾಧರ್, ನೂತನ್ ಕುಮಾರ್, ವತನ್ ಕುಮಾರ್ ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ಶ್ರೀಧರ್ ಶೆಟ್ಟಿ, ಚಂದ್ರಶೇಖರ್, ಪುರುಷೋತ್ತಮ್, ಕೃಷ್ಣಪ್ಪ ಪೂಜಾರಿ, ಸುಭಾಸ್, ಉಮೇಶ್,ದೇಜಪ್ಪ ಪೂಜಾರಿ, ಸೌಮ್ಯ, ಶ್ರೀಜಾ,ಧನಲಕ್ಶ್ಮೀ,…

Read More

ಬಂಟ್ವಾಳ: ಭಾನುವಾರ ಬ್ರಾಹ್ಮೀಮುಹೂರ್ತದಲ್ಲಿ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವರ ದಿವ್ಯ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ೨೨ನೇ ವರ್ಷದ ವಿಶ್ವರೂಪದರ್ಶನ ಸೇವೆಯನ್ನು ನಡೆಸಲಾಯಿತು. ಬೆಳಗ್ಗೆ ಹಣತೆ ಮೂಲಕ ದೀಪ ಬೆಳಗಿಸಿ ವಿವಿಧ ರೂಪಗಳಲ್ಲಿ ದೇವಸ್ಥಾನವನ್ನು ಅಲಂಕರಿಸಲಾಯಿತು. ಕಾಕಡಾರತಿ, ಜಾಗರ ಪೂಜೆ, ವಿಶೇಶಾಲಂಕಾರ ಬಳಿಕ ವಿಶ್ವರೂಪದರ್ಶನ, ಪ್ರಸಾದ ವಿತರಣೆ ನಡೆಯಿತು. ವಿಶ್ವಕಪ್ ಪಂದ್ಯಾದಲ್ಲಿ ಭಾರತ ಗೆಲುವು ಸಾಧಿಸಲಿ ಎಂದು ಆಶಿಸುವ ಹೂವು ಹಾಗೂ ದೀಪಗಳಿಂದ ಅಲಂಕರಿಸಿದ ಕಲಾಕೃತಿ ಗಮನ ಸೆಳೆಯಿತು. ಈ ಸಂದರ್ಭ ಶಿಲೆ ಶಿಲೆ ಹಕ್ಕಿನ ಮೋಕ್ತೇಸರರಾದ ಬಿ. ಸೂರ್ಯನಾರಾಯಣ ಬಾಳಿಗ, ಆಡಳಿತ ಮೋಕ್ತೇಸರ ಬಿ. ಅಶೋಕ್ ಶೆಣೈ, ಮೋಕ್ತೇಸರರಾದ ಭಾಮಿ ನಾಗೇಂದರ ಶೆಣೈ, ಬಿ.ಸುರೇಶ್ ವಿ. ಬಾಳಿಗ ಮೊದಲಾದವರು ಉಪಸ್ಥಿತರಿದ್ದರು.

Read More

ಬಂಟ್ವಾಳ: ಸಜೀಪಮೂಡ ಗ್ರಾಮದ ಪಣೋಲಿಬೈಲಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕಮಲಾಕ್ಷಿ ಕಾಂಪ್ಲೆಕ್ಸ್ ನ ಉದ್ಘಾಟನಾ ಸಮಾರಂಭ ನಡೆಯಿತು.ಮಾಣಿಲ ಶ್ರೀ ಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮ ಹಂಸ ಸ್ವಾಮೀಜಿ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಪಪ್ರಜ್ವಲಿಸಿ ಆಶೀರ್ವಚನ ನೀಡಿಕಮಲಾಕ್ಷಿ ಕಾಂಪ್ಲೆಕ್ಸ್ ಆದರ್ಶ ಕಟ್ಟಡ. ಪಣೋಲಿಬೈಲು ಕ್ಷೇತ್ರದಲ್ಲಿ ಇಂತಹ ಕಟ್ಟಡ ನಿರ್ಮಾಣವಾಗಿರುವುದು ಮಾಲಕರ ಅತೀ ದೊಡ್ಡ ಯೋಗ ಎಂದರು. ಯಾರೇ ಅಭಿವೃದ್ಧಿ ಕೆಲಸ ಮಾಡಿದರೂ ಮತ್ಸರ ಬಿಟ್ಟು ಎಲ್ಲರೂ ನಮ್ಮವರೆಂದು ತಿಳಿದು ಸಹಕಾರ ನೀಡಬೇಕು ಎಂದು ತಿಳಿಸಿದರು. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಮಾತನಾಡಿ ಹಿಂದುಳಿದ ವರ್ಗದಲ್ಲಿ ಹುಟ್ಟಿ ಕಟ್ಟಡ ನಿರ್ಮಿಸುವಂತಹ ಸಾಧನೆ ಮಾಡಲು ಹಿರಿಯರ ಆಶೀರ್ವಾದದಿಂದ ಸಾಧ್ಯವಾಗಿದೆ. ಪಣೋಲಿಬೈಲು ಕ್ಷೇತ್ರದಲ್ಲಿ ಕಟ್ಟಡ ನಿರ್ಮಾಣಗೊಂಡಿರುವುದರಿಂದ ಊರಿನ ಅಭಿವೃದಿಯ ಜೊತೆಗೆ ಈ ದೈವಸ್ಥಾನಕ್ಕೆ ಬರುವ ಭಕ್ತರಿಗೂ ಅನುಕೂಲವಾಗಲಿದೆ ಎಂದರು.ಅರ್ಚಕ ಶಿವಾನಂದ ಐತಾಳ್, ಸಜೀಪಮೂಡ ಗ್ರಾ.ಪಂ.‌ಮಾಜಿ ದೇವಿ ಪ್ರಸಾದ್ ಪೂಂಜಅರ್ಚಕ ಶಿವಾನಂದ ಐತಾಳ್, ಸಜೀಪಮೂಡ…

Read More

ಬಂಟ್ವಾಳ :ಕಂಬಳ ಋತುವಿನ ಮೊದಲ ಕಂಬಳ ಕೂಟ ಬಂಟ್ವಾಳ ತಾಲೂಕಿನ ಉಳಿಗ್ರಾಮದ ಕಕ್ಯಪದವು ಮೈರಾ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಆಶ್ರಯದಲ್ಲಿ ಕಕ್ಯಪದವು ಮೈರ-ಬರ್ಕೆಜಾಲು ಎಂಬಲ್ಲಿ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳಕ್ಕೆ ಶನಿವಾರ ಬೆಳಗ್ಗೆ ಅದ್ದೂರಿಯ ಚಾಲನೆ ನೀಡಲಾಯಿತು. ವೇ.ಮೂ.ರಾಘವೇಂದ್ರ ಭಟ್ ಕೊಡಂಬೆಟ್ಟು ಅವರು ಧಾರ್ಮಿಕ ವಿಧಿವಿಧಾನವನ್ನು ನೆರವೇರಿಸಿದರು. ಮಾಜಿ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಽಕಾರಿ ಜಗನ್ನಾಥ ಬಂಗೇರ ನಿರ್ಮಲ್ ನರಿಕೊಂಬು ಅವರು ಸತ್ಯ-ಧರ್ಮ ಜೋಡುಕರೆಯನ್ನು ಉದ್ಘಾಟಿಸಿ ಮಾತನಾಡಿ,ಆಧುನಿಕ ಟಿ.ವಿ.ಸಂಸ್ಕೃತಿಯ ಈ ಕಾಲಘಟ್ಟದಲ್ಲಿ ತುಳುನಾಡಿನ ಸಂಸ್ಕೃತಿಯ ಪ್ರತೀಕವಾದ ಕಂಬಳ, ದೈವಾರಾಧನೆಯನ್ನು ಉಳಿಸುವ ಕಾರ್ಯ ನಡೆಸುತ್ತಿರುವ ಮೈರದ ಯುವಕರ ಕಾರ್ಯ ಅಭಿನಂದನೀಯವಾಗಿದೆ ಎಂದರು. ಪ್ರಗತಿಪರ ಕೃಷಿಕ ಚಯಚಂದ್ರ ಬೊಳ್ಮಾರು ಅವರು ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಅತಿಥಿಯಾಗಿದ್ದ ಕಿಯೋನಿಕ್ಸ್ ನಿಗಮದ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರು ಮಾತನಾಡಿ, ಕಂಬಳ ತುಳುನಾಡಿನ ಅದ್ಭುತ ಸಂಸ್ಕೃತಿಯಾಗಿದ್ದು,ಇದಕ್ಕೆ ಎಲ್ಲರ ಸಹಕಾರದ ಅಗತ್ಯವಿದೆ ಎಂದರು. ಕಂಬಳ ಸಮಿತಿ ಅಧ್ಯಕ್ಷ ಕುಸುಮಾಧರ ಉರ್ಕಿ ಅವರು ಸಭಾಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಂಬಳ…

Read More