Author: admin
ಬಂಟ್ವಾಳ: ವಿಶ್ವಕಪ್ ಕ್ರಿಕೆಟ್ ನಲ್ಲಿ ಸೆಮಿಫೈನಲ್ಸ್ ಅನ್ನು ಜಯಗಳಿಸಿ, ಭಾರತ ಫೈನಲ್ಸ್ ನತ್ತ ಮುನ್ನುಗ್ಗಿದ್ದು, ಈ ಸಂತಸದ ಕ್ಷಣದಲ್ಲಿ ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಭದ್ರಾ ಹೋಂ ಅಪ್ಲೈಯನ್ಸಸ್ ಗ್ರಾಹಕರಿಗೆ ‘ವಿಜಯೀಭವ’ ಹೆಸರಲ್ಲಿ ಭರ್ಜರಿ ಆಫರ್ ನೀಡಿದೆ. ಗ್ರಾಹಕರು 32 ಇಂಚು ಮೇಲ್ಪಟ್ಟು ಖರೀದಿಸುವ ಟಿ.ವಿ.ಗಳಿಗೆ ಖರೀದಿಯ ಸಂದರ್ಭ ಹೇಗೂ ರಿಯಾಯತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ, ಜತೆಗೆ ಭದ್ರಾ ವಾರ್ಷಿಕೋತ್ಸವದ ಆಕರ್ಷಕ ಬಹುಮಾನಗಳು ಇರುತ್ತವೆ. ವಿಶ್ವಕಪ್ ಫೈನಲ್ ಪಂದ್ಯಾಟವನ್ನೂ ಭಾರತ ಗೆದ್ದರೆ, ನವೆಂಬರ್ 16ರಿಂದ 19ರವರೆಗೆ ಯಾರೆಲ್ಲಾ ಎಲ್.ಇ.ಡಿ. ಟಿವಿಯನ್ನು ಭದ್ರಾದಲ್ಲಿ ಖರೀದಿ ಮಾಡುತ್ತಾರೋ ಅವರಿಗೆಲ್ಲಾ ಎಕ್ಸ್ ಟ್ರಾ ಆಫರ್ ನೀಡಲಾಗುತ್ತದೆ. ವಿಶ್ವಕಪ್ ವಿಜಯದ ಖುಷಿಗಾಗಿ 1500 ರೂಗಳ ಎಕ್ಸ್ಟ್ರಾ ಕ್ಯಾಷ್ ಬ್ಯಾಕ್ ನೀಡಲಾಗುತ್ತದೆ ಎಂದು ಭದ್ರಾದ ಪ್ರವರ್ತಕ ಮಂಜುನಾಥ ಆಚಾರ್ಯ ತಿಳಿಸಿದ್ದಾರೆ. ವಿಶ್ವಕಪ್ ಗೆಲ್ಲುವ ಖುಷಿಗಾಗಿ ಇದು ನಮ್ಮ ಕೊಡುಗೆ ಹಾಗೂ ಸಂಭ್ರಮಾಚರಣೆಯಾಗಿದೆ ಎಂದು ಹೇಳಿರುವ ಅವರು ಈ ಮೂಲಕ ಗ್ರಾಹಕರ ಖರೀದಿ ಖುಷಿಯ ಜೊತೆಗೆ ನಾವೂ ವಿಶ್ವಕಪ್ ಗೆಲುವಿನ ಹಾರೈಕೆಯಲ್ಲಿರುತ್ತೇವೆ ಎಂದಿದ್ದಾರೆ.
ಬಂಟ್ವಾಳ: ಕಾರ್ಮಿಕ ವಿದ್ಯಾರ್ಥಿ ವೇತನ ಪರಿಷ್ಕರಣೆ ಪ್ರಸ್ತಾಪ ಕೈಬಿಡುವಂತೆ ತಾ.ಒಂ. ಮಾಜಿ ಸದಸ್ಯ ಪ್ರಭಾಕರ ಪ್ರಭು ಕಾಂಇಕ ಸಚಿವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.ರಾಜ್ಯದಲ್ಲಿ ಕಾರ್ಮಿಕ ಇಲಾಖೆಯ ಅಡಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ಹಲವಾರು ವರ್ಷಗಳಿಂದ ಸರಕಾರದಿಂದ ನೀಡಲಾಗುತ್ತಿತ್ತು. ಇದರಿಂದ ಕಾರ್ಮಿಕರ ಮಕ್ಕಳಿಗೆ ಉನ್ನತ ವ್ಯಾಸಂಗ ಸೇರಿದಂತೆ ಇಂಜಿನಿಯರಿಂಗ್, ವೈದ್ಯಕೀಯ ಹಾಗೂ ಇನ್ನಿತರ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ ಬರುತ್ತಿರುವುದರಿಂದ ಆರ್ಥಿಕ ತೊಂದರೆ ಇರುವ ವಿದ್ಯಾರ್ಥಿಗಳಿಗೆ ತುಂಬಾ ಅನೂಕೂಲವಾಗುತ್ತಿತ್ತು . ಆದರೆ ಸರಕಾರ ಅಭಿವೃದ್ದಿ ಯೋಜನೆ ಮತ್ತು ಗ್ಯಾರಂಟಿ ಪೂರೈಕೆಯ ನೆಪವೊಡ್ಡಿ ಕಾರ್ಮಿಕರ ಮಕ್ಕಳಿಗೆ ವಿದ್ಯಾಭ್ಯಾಸ ನಿಮಿತ್ತ ಸಿಗುವ ವಿದ್ಯಾರ್ಥಿ ವೇತನವನ್ನು ಭಾರಿ ಪ್ರಮಾಣದಲ್ಲಿ ಕಡಿತ ಮಾಡಲು ನಿರ್ಧರಿಸಿರುವುದು ಎಂದು ತಿಳಿದು ಬಂದಿರುತ್ತದೆ. ಈ ರೀತಿಯ ಸರಕಾರದ ನಿರ್ಧಾರವು ಅಕ್ಷಮ್ಯ ಅಪರಾಧದ ಪರಮಾವಧಿಯಾಗಿದೆ. ಆದುದರಿಂದ ಕಾರ್ಮಿಕರ ಮಕ್ಕಳಿಗೆ ವಿದ್ಯಾಭ್ಯಾಸ ನಿಮಿತ್ತ ನೀಡಲಾಗುತ್ತಿರುವ ವಿವಿಧ ಸ್ತರದ ವಿದ್ಯಾರ್ಥಿ ವೇತನಗಳನ್ನು ಈ ಹಿಂದಿನ ಪ್ರಮಾಣದಲ್ಲಿ…
ಬಂಟ್ವಾಳ: ಕಳೆದ ಮೂರು ದಿನಗಳಿಂದ ಫರಂಗಿಪೇಟೆ ಬೀದಿಯಲ್ಲಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಮೂಲಕ ಫರಂಗಿಪೇಟೆಯ ಸೇವಾಂಜಲಿ ಸಂಸ್ಥೆ ಮಾನವೀಯತೆ ಮೆರೆದಿದೆ.ಬುಧವಾರ ಬೆಳಿಗ್ಗೆ ಫರಂಗಿಪೇಟೆಯ ಶ್ರೀರಾಮ ವಿದ್ಯಾಕೇಂದ್ರದ ಆವರಣದ ಬಳಿ ಹಳೆ ಬಟ್ಟೆ ಧರಿಸಿಕೊಂಡು ಮರಳಿನಲ್ಲಿ ಹೊರಳಾಡುತ್ತಿದ್ದ ವ್ಯಕ್ತಿಯನ್ನು ಗಮನಿಸಿದ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಅವರು ವಿಚಾರಿಸಿದಾಗ ಆತ ಮಾನಸಿಕ ಸ್ಥಿಮಿತ ಕಳಕೊಂಡಿರುವುದು ತಿಳಿದು ಬಂದಿದೆ. ತನ್ನ ಹೆಸರನ್ನು ಉಮಾಮಹೇಶ್ವರ ಎಂದು ಹೇಳುವ ಆತ ಊರು ಯಾವುದು ಎಂದು ವಿಚಾರಿಸಿದಾಗ ಊರಿನ ಹೆಸರು ಹೇಳುವ ಬದಲು ಆ ಊರು ಸರಿ ಇಲ್ಲ, ಅಲ್ಲಿನ ಜನರು ಸರಿ ಇಲ್ಲ ಎಂದಷ್ಟೇ ಹೇಳುತ್ತಿದ್ದ. ತಕ್ಷಣ ಕೃಷ್ಣ ಕುಮಾರ್ ಪೂಂಜ ಅವರು ಆತನಿಗೆ ಊಟೋಪಚಾರ ನೀಡಿದರು. ಬಳಿಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಮುಂದಿನ ಚಿಕಿತ್ಸೆಯ ಉದ್ದೇಶಕ್ಕಾಗಿ ಅಂಬ್ಯುಲೆನ್ಸ್ ಮೂಲಕ ಕರೆದೊಯ್ದು ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಬಟ್ಟೆಬರೆಗಳನ್ನು ಸೇವಾಂಜಲಿ ವತಿಯಿಂದ…
ಬಂಟ್ವಾಳ: ಪುದು ಗ್ರಾಮದ ಗೋವಿನ ತೋಟ ಬ್ರಹ್ಮಗಿರಿಯ ಶ್ರೀ ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಲೋಕ ಕಲ್ಯಾಣಾರ್ಥ ಸನಾತನ ಧರ್ಮದ ಉಳಿವಿಗಾಗಿ, ಭಕ್ತಜನರಲ್ಲಿ ಶ್ರೀಮಧ್ಭಾಗವತ ಮತ್ತು ಗೋವಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ದಕ್ಷಿಣ ಭಾರತದಲ್ಲಿಯೇ ಪ್ರಥಮ ಬಾರಿಗೆ ಬಂಟ್ವಾಳ ತಾಲೂಕಿನ ಶ್ರೀ ರಾಧಾ ಸುರಭಿ ಗೋಮಂದಿರದಲ್ಲಿ ಅಷ್ಟೋತ್ತರ ಶತ (108) ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಾಗ ಮತ್ತು ಗೋ ನವರಾತ್ರಿ ಉತ್ಸವ ಹಾಗೂ 1108 ನಾರಾಯಣ ಕವಚ ಯಾಗ ನ.14ರಿಂದ ನ.22ರವರೆಗೆ ಉಡುಪಿ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದಂಗಳವರ ಗೌರವ ಮಾರ್ಗದರ್ಶನದಲ್ಲಿ ಭಕ್ತಿಭೂಷಣದಾಸ ಪ್ರಭೂಜಿ ಹಾಗೂ ವೃಂದಾವನದ ಶ್ರೀ ರಮೇಶ ಗೋಸ್ವಾಮಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ಅಷ್ಟೋತ್ತರ ಶತ ಶ್ರೀಂದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಜ್ಞ ಸಮಿತಿ ಕಾರ್ಯಾಧ್ಯಕ್ಷ ತೇವು ತಾರಾನಾಥ ಕೊಟ್ಟಾರಿ ತಿಳಿಸಿದರು. ನ.14 ಮಂಗಳವಾರ ತೋರಣ ಮುಹೂರ್ತ, ಗಣಪತಿ…
ಬಂಟ್ವಾಳ: ಇಲ್ಲಿನ ಪ್ರತಿಷ್ಠಿತ ಗೃಹಪಯೋಗಿ ವಸ್ತುಗಳ ಮಾರಾಟ ಮಳಿಗೆ ಭದ್ರಾ ಹೋಂ ಅಪ್ಲೈಯೆನ್ಸಸ್ ನ 3 ನೇ ವಾರ್ಷಿಕೋತ್ಸವದ ಪ್ರಯುಕ್ತ ಅಳವಡಿಸಲಾಗಿರುವ ಐ ಲವ್ ಬಂಟ್ವಾಳ ಸೆಲ್ಪೀ ಕಾರ್ನರ್ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.ಸಂಸ್ಥೆಗೆ ಭೇಟಿ ನೀಡುವ ಗ್ರಾಹಕರು ಇದರ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬೀಳುತ್ತಿದ್ದಾರೆ. ಭದ್ರಾ ಹೋಂ ಅಪ್ಲೈಯೆನ್ಸಸ್ ನ 3ನೇ ವರ್ಷದ ಅಂಗವಾಗಿ ವಿಶೇಷ ಮಾರಾಟ ಮೇಳ ಆರಂಭವಾಗಿದ್ದು ಹಲವಾರು ವಿಶೇಷತೆಗಳೊಂದಿಗೆ ನಡೆಯುತ್ತಿದೆ. ರಿಯಾಯತಿ ದರದಲ್ಲಿ ಎಲೆಕ್ಟ್ರಾನಿಕ್ಸ್, ಫರ್ನಿಚರ್ಸ್ ಸಹಿತ ಗೃಹೋಪಯೋಗಿ ವಸ್ತುಗಳನ್ನು ಮನೆಗೆ ಕೊಂಡೊಯ್ಯ ಬಹುದಾಗಿದೆ. ಈ ವಿಶೇಷ ಅವಕಾಶವನ್ನು ಬಳಸಿಕೊಳ್ಳುವಂತೆ ಭದ್ರಾ ಹೋಂ ಅಪ್ಲೈಯೆನ್ಸಸ್ ಮಾಲಕಿ ಮೇಘಾ ಆಚಾರ್ಯ ತಿಳಿಸಿದ್ದಾರೆ.
ಬಂಟ್ವಾಳ: ಇಲ್ಲಿಯ ನಂದನಹಿತ್ಲು ಶ್ರೀ ವೈದ್ಯನಾಥ ಜುಮಾದಿಬಂಟ ದೈವಸ್ಥಾನಕ್ಕೆನೂತನ ಧ್ವಜ ಸ್ತಂಭ( ಕೊಡಿಮರ) ಸಮರ್ಪಣೆಯ ಕುರಿತು ಪೂರ್ವಭಾವಿಸಭೆ ಹಾಗೂ ದೈವನರ್ತಕ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಶೇಖರ ಪಂಬದ ಸಜೀಪಅವರಿ ಅಭಿನಂದನಾ ಕಾರ್ಯಕ್ರಮ ದೈವ ಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು. ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷಗಣೇಶ್ ಸುವರ್ಣ ತುಂಬೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,ದೈವ ಇಚ್ಚೆ ಮತ್ತು ದೈವನುಡಿಯಂತೆ ದೈವಸ್ಥಾನದ ಸಮೀಪವೇ ಧ್ವಜಸ್ತಂಭಕ್ಕೆ ಸೂಕ್ತವಾದ ಮರ ದೊರೆತಿದೆ. ಸಂಬಂಧಪಟ್ಟವರ ಜೊತೆ ಮಾತುಕತೆಯು ನಡೆಸಲಾಗಿದ್ದು,ದೈವಸ್ಥಾನಕ್ಕೆ ಮರ ಒದಗಿಸಲು ಒಪ್ಪಿಗೆಯನ್ನು ನೀಡಿದ್ದಾರೆ ಇದನ್ನು ಕ್ಷೇತ್ರಕ್ಜೆ ತರುವ ನಿಟ್ಟಿನಲ್ಲಿ ತಂತ್ರಿಯವರ ಮೂಲಕ ವೈಧಿಕವಿಧಿವಿಧಾನ ಕ್ಕಾಗಿ ಶೀಘ್ರವೇ ದಿನ ನಿಗದಿಪಡಿಸಲಾಗುವುದು 2024 ರ ಎಪ್ರಿಲ್ ಮೊದಲವಾರದಲ್ಲಿ ನಡೆಯುವ ಕ್ಷೇತ್ರದ ವಾರ್ಷಿಕ ಜಾತ್ರೆಗೆ ಮುನ್ನ ಧ್ವಜಸ್ತಂಭ ಸಮರ್ಪಣಾ ಕಾರ್ಯ ನಡೆಸಲಾಗುವುದು ಎಂದರು. ಬಾಳಿಗಾ ಮನೆತನದಬಿ. ಸುಧೀರ್ ಬಾಳಿಗಾ ಅವರು ಮಾತನಾಡಿ, ಸ್ಥಳೀಯ ಕಾಮತ್ ಎಂಬವರು ಕೊಡಿಮರವನ್ನು ದೈವಸ್ಥಾನಕ್ಕೆ ಉಚಿತವಾಗಿ ನೀಡಲಿದ್ದಾರೆ.ಮರವನ್ನು ಕ್ಷೇತ್ರಕ್ಕೆ ತಲುಪಿಸುವ ಮತ್ರು ಮುಂದಿನ ವ್ಯವಸ್ಥೆಯ ಬಗ್ಗೆ…
ಪುಂಜಾಲಕಟ್ಟೆ : ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ ೩೯ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಂಜು ವಿಟ್ಲ ವೇದಿಕೆಯಲ್ಲಿ ಎರಡು ದಿನಗಳ ಕಾಲ ನಡೆಯುವ ಸ್ವಸ್ತಿಕ್ ಪ್ರೊ ಕಬಡ್ಡಿ ಉತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು.ಗುತ್ತಿಗೆದಾರ ಮೋಹನ್ ಶೆಟ್ಟಿ ನರ್ವಲ್ದಡ್ಡ ಹಾಗೂ ಪ್ರಗತಿಪರ ಕೃಷಿಕ ಜಯಚಂದ್ರ ಬೊಳ್ಮಾರು ಅವರು ಕ್ರೀಡಾ ಜ್ಯೋತಿ ಪ್ರಜ್ವಲನಗೊಳಿಸಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ ಅವರು ಸಭಾಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ ಸ್ಥಾಪಕರಾದ ತುಂಗಪ್ಪ ಬಂಗೇರ ,ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅವರ ನೇತೃತ್ವದಲ್ಲಿ ನಡೆಯವ ಸಮಾಜಮುಖಿ ಚಟುವಟಿಕೆಗಳು, ಕಬಡ್ಡಿ ಪಂದ್ಯಾಟ,ಸಾಧಕರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡುತ್ತಿರುವುದು ಅಭಿನಂದನೀಯವಾಗಿದೆ ಎಂದು ಹೇಳಿದರು. ಕ್ಲಬ್ ಸ್ಥಾಪಕಾಧ್ಯಕ್ಷ, ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಮಾತನಾಡಿ, ದೇಶೀಯ ಮಣ್ಣಿನ ಕ್ರೀಡೆ ಕಬಡ್ಡಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕ್ಲಬ್ ವತಿಯಿಂದ ದಾನಿಗಳ ಸಹಕಾರದಿಂದ ೩೯…
ಬಂಟ್ವಾಳ: ಭದ್ರಾ ಹೋಂ ಅಪ್ಲೈಯೆನ್ಸಸ್ ಮೂರನೇ ವಾರ್ಷಿಕೊತ್ಸವದ ಪ್ರಯುಕ್ತ ಗ್ರಾಹಕರಿಗೆ ಸೆಲ್ಫಿ ವಿದ್ ಭದ್ರಾ ವಿಶೇಷ ಸ್ಪರ್ಧೆ ಆಯೋಜಿಸಲಾಗಿದೆ.ಭದ್ರಾ ಶೋರೂಂ ಮುಂಭಾಗದ ಆನಿವರ್ಸರಿ ಲೋಗೋ ದ ಮುಂಭಾಗದಲ್ಲಿ ಸೆಲ್ಸಿ ತೆಗೆದುಕೊಳ್ಳಬೇಕು. ಫೇಸ್ಬುಕ್, ಇನ್ಸ್ಟಾಗ್ರಾಮ್, ವಾಟ್ಸಪ್ ಸ್ಟೇಟಸ್ ನಲ್ಲಿ ಹಂಚಬೇಕು. ಸಿಂಗಲ್, ಕಪಲ್, ಫ್ಯಾಮಿಲಿ ಹೀಗೆ ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಗ್ರಾಹಕರು ಮೂರೂ ವಿಭಾಗದಲ್ಲಿಯೂ ಸ್ಪರ್ಧಿಸಬಹುದು. ಒಂದು ವಿಭಾಗದಲ್ಲಿ ಮಾತ್ರ ಬಹುಮಾನ ಗೆಲ್ಲಲು ಅವಕಾಶ.ಫ್ಯಾಮಿಲಿ ವಿಭಾಗದ ಸೆಲ್ಸಿಯಲ್ಲಿ 2+ ಸದಸ್ಯರು ಕಡ್ಡಾಯ.ಸೆಲ್ಲೀ ಫೊಟೋವನ್ನು ನ.12 ರಂದು ಕಳಿಸಬೇಕು.. ಅದನ್ನು ಸಂಸ್ಥೆ ಇನ್ಷ್ಟಾಗ್ರಾಮ್ ಮತ್ತು ಫೇಸ್ ಬುಕ್ ನಲ್ಲಿ ಪ್ರಕಟಿಸಲಿದೆ. ನ.12 ಮತ್ತು 13ರಂದು ಸೆಲ್ಸಿ ಕಳಿಸಲು ಅವಕಾಶ. ನ.14 ರವರೆಗೆ ಅತ್ಯಂತ ಹೆಚ್ಚು ಶೇರ್, ಲೈಕ್ ದೊರೆತವರನ್ನು ವಿಜೇತರೆಂದು ಪರಿಗಣಿಸಲಾಗುವುದು. ನ.14 ರ ಅಪರಾಹ್ನ 2 ರವರೆಗೆ ಅವಕಾಶ. ನೀವು ತೆಗೆದ ಸೆಲ್ಫಿ ಫೊಟೋವನ್ನು ನಿಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ ಪ್ರಕಟಿಸಬೇಕು. ಅತ್ಯಂತ ಹೆಚ್ಚು ವೀಕ್ಷಣೆಮಾಡಿದ ಸ್ಟೇಟಸ್ ನ ಸ್ಟೀನ್ ಶಾಟ್…
ಬಂಟ್ವಾಳ: ದ.ಕ. ಜಿ.ಪಂ. ಹಿ. ಪ್ರಾ ಶಾಲೆ ಬಾಳ್ತಿಲ ಇಲ್ಲಿ ಶಾಲೆಯ ನೂತನ ೭ತರಗತಿ ಕೊಠಡಿ, ಬಯಲು ರಂಗ ಮಂದಿರ ಮತ್ತು ಶಾಲಾ ಉದ್ಯಾನವನದ ಉದ್ಘಾಟನೆ, ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ, ಪೀಠೋಪಕರಣ ಹಸ್ತಾಂತರ, ಶಾಲಾ ವಾರ್ಷಿಕೋತ್ಸವ, ಆಯುರ್ವೇದ ವನ ಉದ್ಘಾಟನೆ, ಕೈ ತೊಳೆಯುವ ಘಟಕದ ಉದ್ಘಾಟನಾ ಸಮಾರಂಭ ಶುಕ್ರವಾರ ನಡೆಯಿತು.ಬೆಳಿಗ್ಗೆ ಬಾಳ್ತಿಲ ಗ್ರಾ.ಪಂ. ಅಧ್ಯಕ್ಷ ಅಣ್ಣು ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಆ ಬಳಿಕ ಶಾಲೆಯಿಂದ ಶೈಕ್ಷಣಿಕ ಜಾಗೃತಿಯ ಆಕರ್ಷಕ ಮೆರವಣಿಗೆ ಹೊರಟು ನೀರಪಾದೆಯವರೆಗೆ ಸಾಗಿ ಶಾಲೆಗೆ ಮರಳಿತು. ಗೊಂಬೆ, ಬಣ್ಣದ ಕೊಡೆ, ಚೆಂಡೆ , ವಾದ್ಯ ಬ್ಯಾಂಡ್ ನ ಹಿಮ್ಮೇಳ ಮೆರವಣಿಗೆಗೆ ಮೆರುಗು ನೀಡಿತು. ನೂತನ ಕೊಠಡಿಯನ್ನು ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ ಸುಂದರ ವಾತವರಣದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಗೊಂಡಿರುವುದು ಊರಿಗೆ ಸಿಕ್ಕ ಗೌರವವಾಗಿದೆ. ಊರವರು ಹಾಗೂ ಅಧ್ಯಾಪಕ ವೃಂದದವರ ಶ್ರಮ ಇಲ್ಲಿ ಎದ್ದು ಕಾಣುತ್ತಿದೆ ಎಂದು ತಿಳಿಸಿದರು.…
Imaginaire image ಬಂಟ್ವಾಳ: ಅಂಗನವಾಡಿ ಕೇಂದ್ರದ ಬೀಗ ಮುರಿದ ಕಳ್ಳರು ಪಾತ್ರೆ ವಸ್ತುಗಳು ಸಹಿತ ದಿನಸಿ ಹಾಗೂ ನಗದು ಕಳವು ನಡೆಸಿದ ಘಟನೆ ತಾಲೂಕಿನ ಬೊಂಡಾಲ ಅಂಗನವಾಡಿ ಕೇಂದ್ರದಲ್ಲಿ ಬುಧವಾರ ರಾತ್ರಿ ನಡೆದಿದೆ.ಕುಕ್ಕರ್, 1 ಸಾವಿರ ರೂಪಾಯಿ ನಗದು ಹಾಗೂ ದಿನಸಿ ಸಾಮಾಗ್ರಿ ಕಳ್ಳರ ಪಾಲಾಗಿದೆ. ಪಾಣೆಮಂಗಳೂರು ಗ್ರಾಮದ ಬೊಂಡಾಲ ಶಾಂತಿಗುಡ್ಡೆ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿದ್ದ ದೇವಕಿಯವರು ಬುಧವಾರ ಕಚೇರಿಯಲ್ಲಿ ಮಿಟಿಂಗ್ ಇದ್ದ ಕಾರಣ ಅಂಗನವಾಡಿಗೆ ಬಾರದೇ, ಅಡುಗೆ ಸಹಾಯಕಿಯಾದ ವಿಜಯಶ್ರೀಯವರು ಅಂಗನವಾಡಿಯಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 4.00 ಗಂಟೆಯವರೆಗೆ ಕರ್ತವ್ಯ ನಿರ್ವಹಿಸಿ ಅಂಗನವಾಡಿಗೆ ಬೀಗ ಹಾಕಿ ತೆರಳಿದ್ದಾರೆ. ಗುರುವಾರ ಬೆಳಿಗ್ಗೆ 9 ಗಂಟೆಗೆ ಅಡುಗೆ ಸಹಾಯಕಿ ವಿಜಯಶ್ರೀ ಅಂಗನವಾಡಿಗೆ ಬಂದಾಗ, ಕಳ್ಳರು ಬಾಗಿಲ ಬೀಗ ಮುರಿದು ಅಂಗನವಾಡಿ ಒಳಗೆ ಇದ್ದ 2 ಅಲ್ಯುಮಿನಿಯಂ ಕುಕ್ಕರ್ 1ಅಲ್ಯುಮಿನಿಯಂ ಡಬ್ಬ , ರೂ, 1000ನಗದು ಹಾಗೂ ದಿನಸಿ ವಸ್ತುಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್…








