Author: admin

ಬಂಟ್ವಾಳ : ಇಲ್ಲಿನ ಬಂಟ್ವಾಳ ಕಸ್ಬಾ ಗ್ರಾಮದ ನೇರಂಬೋಳು ಶ್ರೀ ರಕ್ತೇಶ್ವರಿ ಯುವಕ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಗೌಜಿದ ಲೇಸ್ ಕಾರ್ಯಕ್ರಮ ನ.12ರಂದು ನೇರಂಬೋಳಿನ ಶ್ರೀ ರಕ್ತೇಶ್ವರಿ ಸಭಾಭವನದಲ್ಲಿ ನಡೆಯಲಿದೆ.ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹರೀಶ್ ಕುಲಾಲ್ ನೇರಂಬೋಳು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಳು ಸಾಹಿತಿ ಕುವಿಕು ಕಣ್ವತೀರ್ಥ, ಪಣೋಲಿಬೈಲು ಭಂಡಾರದ ಮನೆಯ ರಮೇಶ್ ಕುಲಾಲ್ ಪಣೋಲಿಬೈಲು, ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕ ಜಯಶಂಕರ ಕಾನ್ಸಾಲೆ, ಉದ್ಯಮಿ ನಾಗೇಶ್ ಸಾಲ್ಯಾನ್, ಭಾರತ ಸೇವಾದಳದ ಅಧ್ಯಕ್ಷ ಸೇಸಪ್ಪ ಮಾಸ್ತರ್ ಭಾಗವಹಿಸಲಿದ್ದಾರೆ. ಬೆಳಿಗ್ಗೆ ಸನಾತನ ಸತ್ಸಂಗ ಧಾರ್ಮಿಕ ಭಾಷಣ, ತುಳುನಾಡಿನ ಆಯ್ದ ಸ್ಥಳೀಯ ಕ್ರೀಡಾಕೂಟ, ಸ್ಥಳೀಯ ಪ್ರತಿಭೆಗಳಿಂದ ಮನೋರಂಜನಾ ಕಾರ್ಯಕ್ರಮ ಮತ್ತು ಮಧ್ಯಾಹ್ನದ ನಂತರ ಸಂಜೀವ ಕಜೆಪದವು ಇವರ ನಿರ್ದೇಶನದಲ್ಲಿ ಸಂಘದ ಸದಸ್ಯರಿಂದ ಪಾಪಣ್ಣ ವಿಜಯ ಗುಣಸುಂದರಿ ತುಳು ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಸಚಿನ್ ನೇರಂಬೋಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಾಣಿ.ನ.10ಅಂಟಿದ ಬಂದಣಿಕೆಯಿಂದಾಗಿ ಮರ ಬೇಗನೆ ಸಾಯುವಂತೆ ದುಶ್ಚಟಗಳಿಗೆ ಬಲಿಯಾದವರು ನರಕಯಾತನೆ ಅನುಭವಿಸಿ ಸಾಯಬೇಕಾಗುತ್ತದೆ.ಒಳ್ಳೆಯ ಚಟ ಇರಲಿ ಆದರೆ ಕೆಟ್ಟ ಚಟಗಳಿಂದ ದೂರವಿರಬೇಕು ಎಂದು ಜಯಾನಂದ ಪೆರಾಜೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕರ್ನಾಟಕ ಪ್ರೌಢಶಾಲೆ ಮಾಣಿಯಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಡಾ. ಮನೋಹರ್ ರೈ ಶುಭ ಹಾರೈಸಿದರು. ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷಬಾಲಕೃಷ್ಣ ಆಳ್ವ ಕೊಡಾಜೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಸಂಚಾಲಕ ಇಬ್ರಾಹಿಂ ಕೆ.ಮಾಣಿ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಮುಖ್ಯೋಪಾಧ್ಯಾಯರಾದ ಎಸ್. ಚೆನ್ನಪ್ಪ ಗೌಡ, ಹಿರಿಯ ಶಿಕ್ಷಕಿ ಜಯಲಕ್ಷ್ಮಿ, ಶ್ಯಾಮಲ ಕೆ.,ಸುಶ್ಮಿತಾ ಉಪಸ್ಥಿತರಿದ್ದರು. ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾಪಾರ್ವತಿ ಸ್ವಾಗತಿಸಿದರು. ಶಿಕ್ಷಕ ಎನ್. ಗಂಗಾಧರ ಗೌಡ ವಂದಿಸಿ, ಜಯರಾಮ ಕಾಂಚನ ನಿರೂಪಿಸಿದರು.ಯೋಜನೆಯ ಸೇವಾ ಪ್ರತಿನಿಧಿ ಲೈಲಾಬಿ ಸಹಕರಿಸಿದರು.

Read More

ಬಂಟ್ವಾಳ: ಮಡಿವಾಳ ಯುವ ಬಳಗ ಬಂಟ್ವಾಳ ಇದರ ನೂತನ ಅಧ್ಯಕ್ಷರಾಗಿ ಸಂದೇಶ್ ಕೊಯಿಲ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ನಿತಿನ್ ಕೆಲಿಂಜ, ಪ್ರಧಾನ ಕಾರ್ಯದರ್ಶಿಯಾಗಿ ವಕ್ಷೀತ್ ಇನೋಳಿ, ಜತೆ ಕಾರ್ಯದರ್ಶಿಯಾಗಿ ತಿಲಕ್ ಮಡಿವಾಳಪಡ್ಪು, ಕೋಶಾಧಿಕಾರಿಯಾಗಿ ಗಣೇಶ್ ಅಬೀರಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ ಮಂಗಳೂರು, ಜಿಲ್ಲಾಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು, ಚಿತ್ರಕಲಾ ಶಿಕ್ಷಕ ಸಂಘ ಬಂಟ್ವಾಳ ತಾಲೂಕು ಘಟಕ ಇದರ ಸಹಯೋಗದಲ್ಲಿ ಚಿತ್ರಕಲಾ ಶಿಕ್ಷಕರಿಗೆ ಶೈಕ್ಷಣಿಕ ಕಲಾ ಕಾರ್ಯಗಾರ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಬುಧವಾರ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಕಾರ್ಯಗಾರ ಉದ್ಘಾಟಿಸಿದರು. ಅವರು ಮಾತನಾಡಿ ಪ್ರಕೃತಿಯೇ ಒಂದು ಚಿತ್ರ. ಪ್ರಕೃತಿಯ ಸೌಂದರ್ಯವನ್ನು ಆಸ್ವಾಸಿದವರೇ ಚಿತ್ರಕಲೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯ. ಚಿತ್ರಕಲೆ ಸುಂದರ ಹಾಗೂ ಅದ್ಭುತವಾದ ಕೆಲಸ. ಇದು ಎಲ್ಲರಿಗೂ ಒಲಿಯುವುದಿಲ್ಲ. ನನ್ನ ಬಾಲ್ಯದಲ್ಲೂ ಚಿತ್ರಕಲಾ ಶಿಕ್ಷಕರು ಪ್ರಭಾವ ಬೀರಿದ್ದರು ಎಂದು ತಿಳಿಸಿದರು.ಸಂಘದ ಜಿಲ್ಲಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ನಾವೆಲ್ಲರು ಒಟ್ಟಿ ಸೇರಿ ನಮ್ಮೊಳಗೆ ಚರ್ಚೆಗಳು ನಡೆದಾಗ ಹೊಸ ವಿಷಯ ಕಲಿಯಲು ವೇದಿಕೆ ದೊರೆಯುತ್ತದೆ. ಆ ಕಾರಣಕ್ಕಾಗಿ ಇಂತಹ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗುತ್ತಿದೆ. ನಾವು ಎಲ್ಲಾ ಸರಕಾರಿ ಕಚೇರಿಗಳನ್ನು ಸುಂದರಗೊಳಿಸಿದ್ದೇವೆ. ಅಂತೆಯೇ ಚಿತ್ರಕಲಾ ಶಿಕ್ಷಕನ ಬದುಕು ಸುಂದರಗೊಳ್ಳುವಂತೆ ಶಿಕ್ಷಣ ಇಲಾಖೆ ನೋಡಿಕೊಳ್ಳಬೇಕಾಗಿದೆ. ಇಲಾಕೆಯಿಂದ…

Read More

ಬಂಟ್ವಾಳ: ಹೊಟೇಲ್ ಉದ್ಯಮದಲ್ಲಿ ಹೊಸ ಮೈಲು ಗಲ್ಲು ಸಾಧಿಸಿರುವ ಆನಿಯಾ ದರ್ಬಾರ್ ಗ್ರೂಫ್ ಆಪ್ ಹೊಟೇಲ್ಸ್ ಇದರ ನೂತನ ಆಲಿಯಾ ಸಾಗರ್ ಮಲ್ಟಿ ಕುಶನ್ ವೆಜ್ ರೆಸ್ಟೊರೆಂಟ್ ಬಿ.ಸಿ.ರೋಡಿನ ಸ್ಮಾರ್ಟ್ ಸಿಟಿ ಕಟ್ಟಡದ ಕೆಳ ಅಂತಸ್ತಿನಲ್ಲಿ ಶುಭಾರಂಭಗೊಂಡಿತು. ಧರ್ಮಗುರುಗಳಾದ ಬಂಬ್ರಾಣ ಅಬ್ದುಲ್ ಖಾದಿರ್ ಅಲ್ ಖಾಸಿಮಿ ಉಸ್ತಾದ್ ದುವಾಶಿರ್ವಾಚನಗೈದರು. ಇರ್ಷಾದ್ ದಾರಿಮಿ ಮಿತ್ತಬೈಲ್, ಎಂ.ವೈ. ಅಶ್ರಫ್ ಫೈಝಿ ಮಿತ್ತಬೈಲ್, ಎಂ.ಕೆ. ಅಝೀಝ್ ಅಮ್ಝದಿ ಮಾವಿನಕಟ್ಟೆ, ಉಪಸ್ಥಿತಿಯಲ್ಲಿ ಜಮೀಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ, ಎಂ. ಫ್ರೆಂಡ್ಸ್ ಕಾರ್ಯದರ್ಶಿ ರಶೀದ್ ವಿಟ್ಲ, ಉದ್ಘಾಟಿಸಿದರು. ಈ ಸಂದರ್ಭ ಮಾಜಿ ಸಚಿವ ಬಿ. ರಮಾನಾಥ ರೈ, ನ್ಯಾಯವಾದಿ ಅಶ್ವನಿ ಕುಮಾರ್ ರೈ, ಬಂಟ್ವಾಳ ತಾಲೂಕು ಹೊಟೇಲ್ ಅಸೋಸಿಯೇಷನ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಜಿ.ಪಂ. ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ, ಪತ್ರಕರ್ತ ಲತೀಫ್ ನೇರಳಕಟ್ಟೆ, ಮಹಮ್ಮದ್ ಕಳವಾರು, ಸಂಚಾರಿ ಠಾಣೆ ಎಸೈ ಸುತೇಶ್, ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಸುರೇಶ್ ಸಾಲ್ಯಾನ್,…

Read More

ಗಣೇಶ ಕೊಲೆಕಾಡಿಯವರಿಗೆ ಯಕ್ಷಾವಾಸ್ಯಮ್ ಪ್ರಶಸ್ತಿ ಪ್ರದಾನಬಂಟ್ವಾಳ: ಯಕ್ಷಾವಾಸ್ಯಂ ಕಾರಿಂಜ ಇದರ ತೃತೀಯ ವಾರ್ಷಿಕೋತ್ಸವ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾ.ಪಂ.ನ ವಗ್ಗ , ಕಾಡಬೆಟ್ಟು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನ. ೫ರಂದು ನಡೆಯಿತು.ಬೆಳಗ್ಗೆ ಪಚ್ಚಾಜೆಗುತ್ತು ಜಿನರಾಜ ಆರಿಗ ಅವರು ಕಾರ್ಯಕ್ರಮ ಉದ್ಘಾಟಿಸಿದರು.ಯಕ್ಷ ಕೂಟ ಮಧ್ವ ಇದರ ಅಧ್ಯಕ್ಷ ಭಾಸ್ಕರ ಶೆಟ್ಟಿ ಮಧ್ವ, ಹಿರಿಯ ಯಕ್ಷ ಕಲಾವಿದ ದಿವಾಕರ ದಾಸ್ ಕಾವಳಕಟ್ಟೆ , ಜನಾರ್ದನ ಭಟ್ ಕಾರಿಂಜ ಆವರು ಉಪಸ್ಥಿತರಿದ್ದರು. ಸಂಸ್ಥೆಯ ವಿದ್ಯಾರ್ಥಿಗಳಿಂದ ಯಕ್ಷಗಾನ ಪೂರ್ವರಂಗ, ಮಕ್ಕಳ ಯಕ್ಷಗಾನ ಗಣಪತಿ ಕೌತುಕ,ಭಾಗವತಿಕೆ ನಡೆಯಿತು.ಬಳಿಕ ಯಕ್ಷಗಾನ ವಿದ್ವಾಂಸ, ಪ್ರಸಂಗಕರ್ತ ಗಣೇಶ ಕೊಲೆಕ್ಕಾಡಿ ಅವರಿಗೆ ಅವರ ಅನುಪಸ್ಥಿತಿಯಲ್ಲಿ ಯಕ್ಷಾವಾಸ್ಯಮ್ ಪ್ರಶಸ್ತಿ ಪ್ರದಾನ ನಡೆಸಲಾಯಿತು. ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಮಾಧವ ಎಂ.ಕೆ. ಅವರು ಅದ್ಯಕ್ಷತೆ ವಹಿಸಿ ಮಾತನಾಡಿ, ಯಕ್ಷಗಾನ ಕಲೆಯ ಜತೆ ಸಂಸ್ಕೃತಿ ಮತ್ತು ಧರ್ಮವಿದೆ. ಕಲೆಯ ಮೇಲೆ ಅಭಿರುಚಿ ಹೊಂದಿದಾಗ ಉತ್ತಮ ನಾಗರಿಕ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ.…

Read More

ಬಂಟ್ವಾಳ: ಬಿ.ಸಿ.ರೋಡಿನ ಬಾಡಿಗೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಂಟ್ವಾಳ ನಗರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವು ಬಂಟ್ವಾಳ ಗಿರಿಗುಡ್ಡೆಯ ಸರಕಾರಿ ಪಾಲಿಟೆಕ್ನಿಕ್ ಹಾಸ್ಟೆಲ್ ಕಟ್ಟಡಕ್ಕೆ ಸ್ಥಳಾಂತರಗೊಂಡು ಉದ್ಘಾಟನೆಗೊಂಡಿತು. ಸ್ಥಳಾಂತರಗೊಂಡ ಹಾಸ್ಟೆಲನ್ನು ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಹಾಸ್ಟೆಲ್ ಪ್ರಸ್ತುತ ಬಾಡಿಗೆ ಕಟ್ಟಡದಿಂದ ವಾಸ್ತವ್ಯ ಯೋಗ್ಯ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು, ಇಲ್ಲಿ ಸುಮಾರು 150 ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅವಕಾಶವಿದೆ. ಮುಂದೆ ಆಟದ ಮೈದಾನ ಸೇರಿದಂತೆ ಅವಕಾಶ ಸಿಕ್ಕಾಗ ಹಾಸ್ಟೆಲ್‌ಗೆ ಬೇಕಾದ ಸೌಲಭ್ಯಗಳನ್ನು ಒದಗಿಸಸಲಾಗುವುದು ಎಂದರು.ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಬಿಂದಿಯಾ ನಾಯಕ್ ಅವರು ಪ್ರಸ್ತಾವನೆಗೈದು ಸ್ವಾಗತಿಸಿದರು. ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ಭಗವಾನ್‌ಪ್ರಸಾದ್, ಪ್ರಮುಖರಾದ ಮೋಹನರಾಜ್ ಜಿ.ಎಸ್, ಭುವನೇಶ್ವರಿ, ಸುಧಾಕರ ಸಿ.ಎಸ್, ಮೋಹನ ಎನ್, ಹಮೀದ್ ಡಿ, ಬಂಟ್ವಾಳ ಹಿಂದುಳಿದ ವರ್ಗಗಳ ಇಲಾಖೆಯ ಸಿಬಂದಿ, ಹಾಸ್ಟೆಲ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 13ನೇ ಪುಣಚ ಶಾಖೆ ಭಾನುವಾರ ಪುಣಚ ಪರಿಯಲ್ತಡ್ಕ ಪ್ರಗತಿ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭ ಗೊಂಡಿತು.ನೂತನ ಶಾಖೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಿದರು. ಅವರು ಮಾತನಾಡಿ ದ.ಕ. ಜಿಲ್ಲೆಯಲ್ಲಿ ಸಹಕಾರ ಬ್ಯಾಂಕ್‌ಗಳು ಮುಂಚೂಣಿಯಲ್ಲಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ತುಲನೆ ಮಾಡಿದರೆ ಇಂದು ಸಹಕಾರಿ ಬ್ಯಾಂಕ್‌ಗಳು ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ ಎಂದರು. ಉದ್ಯಮ ಕ್ಷೇತ್ರ ಪ್ರಗತಿ ಕಂಡಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲೂ ಅಭಿವೃದ್ಧಿಯನ್ನು ಕಾಣಲು ಸಾಧ್ಯವಿದೆ, ವ್ಯವಹಾರ ಇದ್ದರೆ ಮಾತ್ರ ಬ್ಯಾಂಕ್‌ಗಳು, ಸಹಕಾರಿ ಸಂಘಗಳು ಅಭಿವೃದ್ಧಿಯಾಗುತ್ತದೆ ಎಂದ ಅವರು ಇಂದು ಸಹಕಾರಿ ಕ್ಷೇತ್ರದಲ್ಲೂ ಸೌಲಭ್ಯಗಳನ್ನು ಕೊಡುವ ಕೆಲಸ ಆಗುತ್ತಿದೆ ಎಂದು ತಿಳಿಸಿದರು. ಮಹಿಳೆಯರಿಂದು ಆರ್ಥಿಕವಾಗಿ ಸಬಲರಾಗುತ್ತಿದ್ದು ಸರಕಾರದ ಗೃಹಲಕ್ಷಿ ಯೋಜನೆಯ ಮೂಲಕ 2 ಸಾವಿರ ಹಣವನ್ನು ಪಡೆಯುತ್ತಿದ್ದಾರೆ. ಅವುಗಳನ್ನು ಸಹಕಾರಿ ಸಂಘಗಳ ಮೂಲಕ ಉಳಿತಾಯ ಮಾಡುವುದರಿಂದ ತಾವು ಸಬಲರಾಗುವುದರ ಜೊತೆಗೆ ಸಹಕಾರಿ ಸಂಘಗಳ ಅಭ್ಯುದಯವೂ ಆಗುತ್ತಿದೆ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಸಚಿವ…

Read More

ಬಂಟ್ವಾಳ: ಬಸ್ತಿಪಡ್ಪುವಿನ ಭದ್ರಾ ಹೋಂ ಅಪ್ಲೈನ್ಸಸ್ ನ ತೃತೀಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮಳಿಗೆಯಲ್ಲಿ ಶನಿವಾರ ಸಂಜೆ ಚಾಲನೆ ನೀಡಲಾಯಿತು.ಸಂಸ್ಥೆಯ ಹಿತೈಷಿ ಸ್ವಪ್ನಾ ಹರೀಶ್ ಶೆಣೈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸ್ಥೆಯ ಹಿರಿಯರಾದ ಆಶಾಲತಾಬಾಯಿ, ಭದ್ರಾ ಹೋಂ ಅಪ್ಲೈನ್ಸಸ್ ಮಾಲಕಿ ಮೇಘಾ ಆಚಾರ್ಯ, ಗ್ರಾಹಕರಾದ ಭವ್ಯ ಪವನ್ ರಾವ್, ಗಾಯತ್ರಿ ಭಟ್ ಈ ಸಂದರ್ಭ ಉಪಸ್ಥಿತರಿದ್ದರು. ನವೆಂಬರ್ 4ರಿಂದ 15ರವರೆಗೆ ದೀಪಾವಳಿ ಮತ್ತು 3ನೇ ವಾರ್ಷಿಕೋತ್ಸವ ಪ್ರಯುಕ್ತ ಭರ್ಜರಿ ಆಫರ್ ಗಳನ್ನು ಒಳಗೊಂಡ ಈ ವರ್ಷದ ಅತಿ ದೊಡ್ಡ ಸೇಲ್ ಇದಾಗಿದೆ ಎಂದು ಕಾರ್ಯಕ್ರಮ ನಿರ್ವಹಿಸಿದ ಭದ್ರಾ ಸಮೂಹ ಸಂಸ್ಥೆಗಳ ಮಾಲೀಕರಾದ ಮಂಜುನಾಥ ಆಚಾರ್ಯ ಈ ಸಂದರ್ಭ ತಿಳಿಸಿದರು. ಭದ್ರಾ ಸಮೂಹ ಸಂಸ್ಥೆಗಳ ಮುಖ್ಯಸ್ಥರೂ ಹಿರಿಯರೂ ಆಗಿರುವ ವರದ ಆಚಾರ್ಯ, ಆಶಾಲತಾಬಾಯಿ ದಂಪತಿ ಈ ಸಂದರ್ಭ ಉಪಸ್ಥಿತರಿದ್ದು, ಶುಭ ಹಾರೈಸಿದರು. ಈ ಸಂದರ್ಭ ಮೊದಲ ಗ್ರಾಹಕರಿಗೆ ಆಕರ್ಷಕ ಉಡುಗೊರೆ ವಿತರಿಸಲಾಯಿತು. ವಿವಿಧ ಬ್ರಾಂಡ್ ಗಳ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನೀಚರ್ ಉತ್ಪನ್ನಗಳ ವಿಶೇಷ ಪ್ರದರ್ಶನ…

Read More

ಬಂಟ್ವಾಳ: ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ ಎಂಬ ಧ್ಯೇಯದೊಂದಿಗೆ ಪ್ರತಿಯೊಬ್ಬರೂ ಕೂಡ ಆರೋಗ್ಯ ಕುರಿತು ವಿಶೇಷ ಕಾಳಜಿ ವಹಿಸುವುದು ಅತಿ ಅಗತ್ಯವಾಗಿದ್ದು, ಕ್ಷಯರೋಗಿಗಳು ಯಾವುದೇ ರೀತಿಯಲ್ಲಿ ಮಾನಸಿಕವಾಗಿ ಕುಗ್ಗದೆ ಸಮರ್ಪಕ ಔಷಧ, ಪೌಷ್ಟಿಕ ಆಹಾರ ಸೇವನೆಯಿಂದ ಗುಣಮುಖರಾಗಲು ಸಾಧ್ಯ ಎಂದು ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ‌.ತಿಮ್ಮಯ್ಯ ಎಚ್.ಆರ್.ಹೇಳಿದರು.ಅವರು ಫರಂಗಿಪೇಟೆ ಸೇವಾಂಜಲಿ ಸಭಾಂಗಣದಲ್ಲಿ ಕೇಂದ್ರ ಸರಕಾರದ ನಿಕ್ಷಯ ಮಿತ್ರ ಯೋಜನೆಯಡಿ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಕ್ಷಯ ರೋಗಗಳಿಗೆ ಆಹಾರ-ಧವಸ ಧಾನ್ಯ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರಕಾರದ ಯೋಜನೆಗೆ ಬೆಂಬಲ ಸೂಚಿಸಿ ಸೇವಾಂಜಲಿ ಪ್ರತಿಷ್ಠಾನವು ಉತ್ತಮ ಕಾರ್ಯ ಮಾಡುತ್ತಿದ್ದು, ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದೆ ಎಂದರು. ಜಿ.ಪಂ.ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಮಾತನಾಡಿ, ಜೀವನದಲ್ಲಿ ಆರೋಗ್ಯ ಅತಿ ಅಗತ್ಯವಾಗಿದ್ದು, ಶುದ್ಧ ನೀರು, ಗಾಳಿ, ಆಹಾರ ಸೇವನೆಯಿಂದ ನಮ್ಮ ಜೀವನ ಸುಂದರವಾಗುತ್ತದೆ. ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಾಗ ತಕ್ಷಣ ವೈದ್ಯರನ್ನು ಕಂಡು ಕಾಳಜಿ ವಹಿಸಿದಾಗ ಆರೋಗ್ಯ ಸುಧಾರಿಸುತ್ತದೆ. ಕ್ಷಯ ರೋಗಿಗಳ ಕಾಳಜಿಯಿಂದ ಆಹಾರ ವಿತರಿಸುವ ಸೇವಾಂಜಲಿ…

Read More