Author: admin
ಬಂಟ್ವಾಳ: ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ಸಜೀಪ ಮೂಡ ಇಲ್ಲಿನ ಶ್ರೀ ಮಹಾಶಿವರಾತ್ರಿ ಪೂಜಾ ಮಹೋತ್ಸವ ಹಾಗೂವಾರ್ಷಿಕ ಜಾತ್ರಾ ಮಹೋತ್ಸವ ಆಮಂತ್ರಣ ಪತ್ರವನ್ನು ಬ್ರಹ್ಮಶ್ರೀ ನೀಲೇಶ್ವರ ಕೆ.ಯು. ಪದ್ಮನಾಭ ತಂತ್ರಿಗಳು ಬುಧವಾರದಂದು ಶ್ರೀ ಕ್ಷೇತ್ರ ನಂದಾವರ ವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ, ಜಯ ಶಂಕರ ಬಾಸ್ರಿತ್ತಾಯ. ಮುಳ್ಳಂಜ ವೆಂಕಟೇಶ್ವರ ಭಟ್. ದೇವಿಪ್ರಸಾದ್ ಪೂಂಜ, ಪ್ರಮುಖರಾದ ವೇದಮೂರ್ತಿ ಮಹೇಶ್ ಭಟ್, ಸಂತೋಷಕುಮಾರ್ ಜಿ ಶೆಟ್ಟಿ ದಲಂದಿಲ, ಶ್ವೇತ ಎಸ್ .ಶೆಟ್ಟಿ, ರವೀಂದ್ರನಾಥ ಭಂಡಾರಿ ಪುಣ್ಕೆ ಮಜಲು. ಎಸ್. ಶ್ರೀಕಾಂತ್ ಶೆಟ್ಟಿ. ರಾಮ್ ಪ್ರಸಾದ್ ಪೂಂಜ ಬರಂಗರೆ, ಕೆ ಸಂಜೀವ ಪೂಜಾರಿ, ಯಶವಂತ ದೇರಾಜೆ ಗುತ್ತು, ಜಯಪ್ರಕಾಶ್, ಬಾಲಕೃಷ್ಣ, ರಾಕೇಶ್ ಶೆಟ್ಟಿ, ಸುರೇಶ್ ಬಂಗೇರ, ವಸಂತ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು
ಬಂಟ್ವಾಳ: ಕರೋನಾ ಮಹಾಮಾರಿಯಿಂದಾಗಿ ಮಕ್ಕಳ ಕಲಿಕೆಯಲ್ಲಿ ಉಂಟಾದ ಅಡೆತಡೆಗಳಿಗೆ ಪರಿಹಾರವಾಗಿ ಜಾರಿಗೊಳಿಸಿದ ಕಲಿಕಾ ಚೇತರಿಕೆಗೆ ಪೂರಕವಾಗಿ ರಾಜ್ಯಾದ್ಯಂತ ಕಲಿಕಾ ಹಬ್ಬವನ್ನು ಜಾರಿಗೊಳಿಸಲಾಗಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕ ದ ದಕ್ಷಿಣ ಕನ್ನಡ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಮಂಜುಳಾ ಹೇಳಿದರು. ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ -ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಬಾಳ್ತಿಲ ಇವುಗಳ ಆಶ್ರಯದಲ್ಲಿ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿ ನಡೆದ ಬಾಳ್ತಿಲ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದರು.ಕಾರ್ಯಕ್ರಮದಲ್ಲಿಮುಖ್ಯ ಅತಿಥಿಗಳಾಗಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ರವರು ಮಕ್ಕಳು ಆಸಕ್ತಿಯಿಂದ ಸ್ವ ಪ್ರೇರಣೆಯಿಂದ ಕಲಿಕೆಯಲ್ಲಿ ತೊಡಗಲು ಕಲಿಕಾ ಹಬ್ಬ ಹಮ್ಮಿಕೊಳ್ಳಲಾಗಿದೆ ಎಂದರು. ಕಾರ್ಯಕ್ರಮದ ಅಂಗವಾಗಿ ನಡೆದ ಮೆರಣಿಗೆಗೆ ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಹಿರಣ್ಮಯಿ ಮತ್ತು ನರಿಕೊಂಬು ಪಂಚಾಯತ್ ಸದಸ್ಯ ಸಂತೋಷ್ ಚಾಲನೆ ನೀಡಿ ಶುಭ ಹಾರೈಸಿದರು.…
ಬಂಟ್ವಾಳ: ಬಿ.ಸಿ.ರೋಡ್ ನ ಹೃದಯಭಾಗದಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಫರ್ನೀಚರ್ಸ್ ಮತ್ತು ಕೊಮಾಕಿ ಎಲೆಕ್ಟ್ರಿಕ್ ವೈಕಲ್ ಡಿವಿಜನ್ ನ ಮಳಿಗೆಯ ಮಾಳಿಗೆಯಲ್ಲಿ ಗುರುವಾರ ಬೆಳಗ್ಗೆ ದಟ್ಟವಾದ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಮಾಡುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳು ಇರುವ ಜಾಗದಲ್ಲಿ ಬೆಂಕಿ ದಟ್ಟವಾಗಿದ್ದು, ವ್ಯಾಪಕವಾಗಿ ಹರಡುತ್ತಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಹಲವಾರು ಜನ ಜಮಾವಣೆಗೊಂಡಿದ್ದು, ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. https://youtu.be/oaM6nhN5g7U ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸಂಶಯಿಸಲಾಗಿದೆ. ಕೊಮಾಕಿ ಕಂಪೆನಿಯ ಬ್ಯಾಟರಿ ಚಾಲಿತ ಸ್ಕೂಟರ್ ಗಳು ಇಲ್ಲಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಚ್ಚಿಕೊಂಡಿರಬಹುದು ಎನ್ನಲಾಗುತ್ತಿದೆ. ಸ್ಥಳೀಯ ವಿಜಯಲಕ್ಷ್ಮೀ ಸ್ಟೀಲ್ಸ್ ನ ರಾಘವೇಂದ್ರ ಸಹಿತ ಸಿಬ್ಬಂದಿ ವರ್ಗ, ಸ್ಥಳೀಯರೊಂದಿಗೆ ಸೇರಿಕೊಂಡು ಬೆಂಕಿ ನಂದಿಸುವಲ್ಲಿ ಸಹಕರಿಸುತ್ತಿದ್ದಾರೆ.
ಬಂಟ್ವಾಳ: ಮೇರಮಜಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗೆ ಮಂಗಳೂರು ಶಾಸಕ ಯು.ಟಿ.ಖಾದರ್ ಬುಧವಾರ ಶಿಲಾನ್ಯಾಸ ನೆರವೇರಿಸಿದರು.ಸ್ಥಳೀಯ ಜನರು ಹಾಗೂ ರೈತರ ಬಹುಬೇಡಿಕೆಯ ಮೇರಮಜಲುವಿನಿಂದ ಬಡ್ಡೂರು ಕಾನ ಸಂಪರ್ಕ ರಸ್ತೆ ಅಭಿವೃದ್ಧಿ, ಕಿರು ಸೇತುವೆ ನಿರ್ಮಾಣ, ಮಯ್ಯಾಡಿ ರಸ್ತೆ ಕಾಂಕ್ರೀಟ್ ಕಾಮಗಾರಿ, ಕುಟ್ಟಿಕಳ ರಸ್ತೆಗೆ ಡಾಮರೀಕರಣ ಸೇರಿದಂತೆ ವಿವಿಧ ರಸ್ತೆ ನಿರ್ಮಾಣ ಕೆಲಸಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಮೇರಮಜಲುವಿನಿಂದ ಬಡ್ಡೂರು ಕಾನ ಸಂಪರ್ಕ ರಸ್ತೆ ಅಭಿವೃದ್ಧಿ, ಕಿರು ಸೇತುವೆ ನಿರ್ಮಾಣ, ಮಯ್ಯಾಡಿ ರಸ್ತೆ ಕಾಂಕ್ರೀಟ್ ಕಾಮಗಾರಿ, ಕುಟ್ಟಿಕಳ ರಸ್ತೆಗೆ ಡಾಮರೀಕರಣ ಸೇರಿದಂತೆ ವಿವಿಧ ರಸ್ತೆ ನಿರ್ಮಾಣ ಕೆಲಸಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಈ ಸಂದರ್ಭ ಶಾಸಕ ಯು.ಟಿ. ಖಾದರ್ ಮಾತನಾಡಿ ಮೇರಮಜಲಿನಿಂದ ಬಡ್ಡೂರು ಮೂಲಕ ಕಾನಕ್ಕೆ ಸಂಪರ್ಕಿಸುವ ರಸ್ತೆ ಈ ಭಾಗದ ಸ್ಥಳೀಯರು ಹಾಗೂ ರೈತರ ಬಹುಬೇಡಿಕೆಯ ರಸ್ತೆಯಾಗಿದೆ. ಈ ಭಾಗದ ಎಲ್ಲಾ ರಸ್ತೆಗಳು ಈಗಾಗಲೇ ಅಭಿವೃದ್ಧಿಯಾಗಿದ್ದು ಈ ಒಂದು ರಸ್ತೆ ಬಾಕಿ ಉಳಿದಿತ್ತು.…
ಬಂಟ್ವಾಳ: ಸಂಸ್ಕೃತಿ ಮತ್ತು ಸಂಸ್ಕಾರದ ವಿಕೃತಿಯಾದಾಗ ಸಮಾಜ ಅಂಧಕಾರದತ್ತ ಸಾಗುತ್ತದೆ ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮ ಹಂಸ ಸ್ವಾಮೀಜಿ ಹೇಳಿದರು. ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ನೂತನ ರಥ ಸಮರ್ಪಣೆ ಹಾಗೂ ಜಾತ್ರಾಮಹೋತ್ಸವದ ಪ್ರಯುಕ್ತ ಬುಧವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರುಮಗು ಜನಿಸಿದಾಗ ತಾಯಿ ಪುನರ್ ಜನ್ಮ ಪಡೆವಷ್ಟು ನೋವು ಅನುಭವಿಸಿದರೂ ಕೂಡ ಮಗುವಿನ ನಗುವನ್ನು ಕಂಡು ತನ್ನ ಎಲ್ಲಾ ನೋವುಗಳನ್ನು ಮರೆತು ಆನಂದ ಪಡುತ್ತಾಳೆ. ಆದ್ದರಿಂದ ಅರಿವಿನ ಮೊದಲ ಗುರು ತಾಯಿ ಎಂದು ತಿಳಿಸಿದರು. ದೇವಸ್ಥಾನ ಪ್ರಭಾವಲಯ, ಪಾವಿತ್ರ್ಯ ವಾದ ಪ್ರದೇಶ, ದೇವಸ್ಥಾನಕ್ಕೆ ಯಾಕೆ ಬರಬೇಕು, ಅಲ್ಲಿ ಹೇಗಿರಬೇಕು ಎನ್ನುವ ಬಗ್ಗೆ ಮಕ್ಕಳಿಗೆ ತಂದೆ ತಾಯಿ ತಿಳಿ ಹೇಳಬೇಕು. ತಂದೆ ತಾಯಿಯನ್ನು ದೇವರಂತೆ ಪೂಜಿಸುವ ಔದಾರ್ಯತೆ ಮಕ್ಕಳಲ್ಲಿ ಇರಬೇಕಾಗಿದೆ. ಇಂತಹ ಪ್ರಯತ್ನಗಳು ಶ್ರದ್ಧಾ ಕೇಂದ್ರದ ಮೂಲಕ ಆಗಬೇಕು ಎಂದ ಅವರು ಮಾತ್ಸರ್ಯ, ದೂಷಣೆಯನ್ನು ಬಿಟ್ಟು ಹಿಂದೂ ಸಮಾಜ…
ಬಂಟ್ವಾಳ : ಕಳೆದ 41 ವರ್ಷಗಳಿಂದ ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಹಾಗೂ ಶ್ರೀ ಮುರುಘೇಂದ್ರ ವನಿತಾ ಸಮಾಜ ಇದರ ವತಿಯಿಂದ ಮಿತ್ರ ಮಂಡಳಿ ಸದಸ್ಯರು, ರಂಗಭೂಮಿ ಕಲಾವಿದರಾಗಿದ್ದ ದಿ.ಲಕ್ಷ್ಮಣ ಶೆಟ್ಟಿಗಾರ್,ದಿ.ಶ್ರೀಧರ್ ಕೆ.ವಿ., ದಿ.ರಘುರಾಮ ಶೆಟ್ಟಿ ಅವರ ಸ್ಮರಣಾರ್ಥ ಏಳು ದಿನಗಳ ದ.ಕ.,ಉಡುಪಿ ಹಾಗೂ ಕಾಸರಗೋಡು ಜಿಲ್ಲಾ ಮಟ್ಟದ ತುಳು ನಾಟಕ ಸ್ಪರ್ಧೆ ಫೆ.4ರಿಂದ ಫೆ.11ರವರೆಗೆ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಲಿದೆ.ಫೆ.4ರಂದು ಪಲ್ಲವಿ ಕಲಾವಿದರು ಕಾರ್ಕಳ ಇವರಿಂದ ದಿಬ್ಬಣ ಫೆ.5 ರಂದು ಅಭಿನಯ ಕಲಾವಿದೆರ್ ಮಂಕುಡೆ ಇವರಿಂದ ಅಜ್ಜ ತತ್ತ್ಂಡಾ ಫೆ.6 ರಂದು ಕಲಾಮೃತ ಕಲಾವಿದೆರ್ ವಾಮಂಜೂರು ಇವರಿಂದ *ಕಥೆ ಏರ್ ಬರೆಪ್ಪೆರ್?, ಫೆ.7 ರಂದು ಕಲಾಶ್ರೀ ಬೆದ್ರ ಇವರಿಂದ ಉಲಾಯಿ ಲೆಪ್ಪುಗಾ, ಫೆ.8 ರಂದು ರಾಜರಾಜೇಶ್ವರಿ ಕಲಾವಿದೆರ್ ಮುಂಡಪಳ್ಳ ಕಾಸರಗೋಡು ಇವರಿಂದ ಲಿಂಕ್ ಲಿಂಗಪ್ಪೆ, ಫೆ.9ರಂದು ಕೃಷ್ಣ ಕಲಾವಿದೆರ್ ಉಡುಪಿ ಇವರಿಂದ ಆನಿದ ಮನದಾನಿ, ಫೆ.10ರಂದು…
ಬಂಟ್ವಾಳ : ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ವೇಳೆ ಕುಶಲಕರ್ಮಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ.ಪುಂಜಾಲಕಟ್ಟೆ ನಿವಾಸಿ ಪುರುಷೋತ್ತಮ ಆಚಾರ್ಯ(66) ಮೃತಪಟ್ಟವರಾಗಿದ್ದಾರೆ. ಮೃತರು ಪತ್ನಿ, ಅಂಗನವಾಡಿ ಕಾರ್ಯಕರ್ತೆ ಗೀತಾ ಕೆ.ಆಚಾರ್ಯ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ನೇರಳಕಟ್ಟೆಯಲ್ಲಿ ಪೀಠೋಪಕರಣ ತಯಾರಿ ಅಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಅವರು ಏಕಾಏಕಿ ಕುಸಿದು ಬಿದ್ದಿದ್ದರು.ತತ್ಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪುರುಷೋತ್ತಮ ಅವರು ಹಿಂದೆ ವಿದೇಶದಲ್ಲಿ ಉದ್ಯೋಗಲ್ಲಿದ್ದು, ಬಳಿಕ ಪುಂಜಾಲಕಟ್ಟೆ ಸ.ಪ್ರೌ.ಶಾಲೆಯಲ್ಲಿ ಕಾವಲುಗಾರರಾಗಿ ಮತ್ತು ಮಡಂತ್ಯಾರು ಗ್ರಾ.ಪಂ.ನಲ್ಲಿ ಪಂಪ್ ಆಪರೇಟರ್ ಆಗಿ ಕಾರ್ಯ ನಿರ್ವಹಿಸಿದ್ದರು.
ಜೆಸಿಐ ಬಂಟ್ವಾಳ ಇದರ ವತಿಯಿಂದ ಮೊಡಂಕಾಪುವಿನ ದೀಪಿಕಾ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪೂರ್ವ ತಯಾರಿ ತರಬೇತಿ ಕಾರ್ಯಗಾರ ಮಂಗಳವಾರ ನಡೆಯಿತು. ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ನಂದಕಿಶೋರ್ ಅವರು ಸಂನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತರಬೇತಿ ನೀಡಿದರು. ಈ ಸಂದರ್ಭ ಟ್ರಾಫಿಕ್ ವಾರ್ಡ್ ನ್ ದೊಡ್ಡಮನೆ ಎ.ಆರ್. ಪಟೇಲ್ ಅವರಿಗೆ ಸೆಲ್ಯೂಟ್ ಟೂ ಸೈಲೆಂಟ್ ವರ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಶಾಲೆಯ ಮುಖ್ಯ ಶಿಕ್ಷಕ ಸಾಧು, ಜೆಸಿಐ ಬಂಟ್ವಾಳದ ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಕಾರ್ಯಕ್ರಮ ಸಂಯೋಜಕ ಸದಾನಂದ ಬಂಗೇರ, ಕಾರ್ಯದರ್ಶಿ ರಶ್ಮಿ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೂರ್ವಾಧ್ಯಕ್ಷರಾದ ಸುರೇಶ್ ನಾವೂರು, ಸಂತೋಷ್ ಜೈನ್, ಉಮೇಶ್ ಪೂಜಾರಿ,ಉಪಾಧ್ಯಕ್ಷ ಕಿಶೋರ್ ಆಚಾರ್ಯಸಹಕರಿಸಿದರು.
ಬಂಟ್ವಾಳ: ಸಂಬಂಧ, ಸಹಬಾಳ್ವೆ, ಸಹಯೋಗ, ಸಂಸ್ಕೃತಿ, ಸಂತತಿ, ಸಂಸ್ಕಾರ, ಸತ್ಕಾರ ಈ ೭ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮೌಲ್ಯಯುತ ಕುಟುಂಬ ಜೀವನವನ್ನು ನಡೆಸಿದಾಗ ಜೀವನದಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯವಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮಂಗಳೂರು ವಿಭಾಗದ ಕುಟುಂಬ ಪ್ರಭೋದಿನಿ ಪ್ರಮುಖ್ ಗಜಾನನ ಪೈ ಹೇಳಿದರು. ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ನೂತನ ರಥ ಸಮರ್ಪಣೆ ಹಾಗೂ ಜಾತ್ರಾಮಹೋತ್ಸವದ ಪ್ರಯುಕ್ತ ನಡೆದ ದಂಪತಿ ಸಮಾವೇಶದಲ್ಲಿ ಸನಾತನ ಕುಟುಂಬ ಪದ್ದತಿಯ ಮೌಲ್ಯ ಮತ್ತು ಜವಾಬ್ದಾರಿಯ ಬಗ್ಗೆ ಅವರು ಮಾತನಾಡಿದರು. ಮನೆಯ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಕ್ಷಮತೆಯನ್ನು ದೇವರು ತಾಯಂದಿರಿಗೆ ನೀಡಿದ್ದಾನೆ. ತಾಯಿ ಮಾತೃಸ್ಥಾನದಲ್ಲಿ ಇದ್ದರೂ ಆಕೆಗೆ ಪೂರಕವಾದ ಅನುಕೂಲವನ್ನು ಒದಗಿಸಿಕೊಡುವ ಜವಬ್ದಾರಿ ಪುರುಷರದ್ದು ಎಂದು ತಿಳಿಸಿದರು.ಒಡಿಯೂರು ಗುರುದೇವದತ್ತ ಸಂಸ್ಥಾನಂನ ಸಾಧ್ವಿ ಶ್ರೀ ಮಾತಾನಂದಮಯಿದಂಪತಿ ಸಮಾವೇಶವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷ ವಿಶ್ವನಾಥ ಆಳ್ವ ಕಾಂತಾಡಿಗುತ್ತು ಅಧ್ಯಕ್ಷತೆ ವಹಿಸಿದ್ದರು.ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ…
ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ಕ್ಷೇತ್ರ ದೇವಾಡಿಗ ಸಮಾಜ ಶ್ರೀ ನಂದಾವರ ದೇವಸ್ಥಾನ ರಥ ಸಮರ್ಪಣ ಸಮಿತಿ ಇದರ ವತಿಯಿಂದ ನಂದಾವರ ಕ್ಷೇತ್ರಕ್ಕೆ ಸಮರ್ಪಿಸುವ ರಥಕ್ಕೆ ರಥ ಪರಿಗ್ರಹ, ರಥ ಭೂ ಸ್ಪರ್ಶ, ರುದ್ರಹೋಮ, ಪೂರ್ಣಾಹುತಿ, ಹೋಮ ಕಲಶಾಭಿಷೇಕ ಕಾರ್ಯಕ್ರಮ ಸೋಮವಾರ ನಡೆಯಿತುದೇವಸ್ಥಾನದ ಪ್ರಧಾನ ಅರ್ಚಕ ಮಹೇಶ್ ಭಟ್ ಪೌರೋಹಿತ್ಯ ನೆರವೇರಿಸಿದರು.ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್, ರಥ ಸಮರ್ಪಣಾ ಸಮಿತಿ ಅಧ್ಯಕ್ಷ ರಾಮದಾಸ ಬಂಟ್ಚಾಳ, ಪ್ರಧಾನ ಕಾರ್ಯದರ್ಶಿ ಸದಾಶಿವ ಮೊಯಿಲಿ, ಕೋಶಾಧಿಕಾರಿ ಪ್ರವೀಣ್ ದೇವಾಡಿಗ, ಪ್ರಮುಖರಾದ ಪದ್ಮನಾಭ ದೇವಾಡಿಗ, ಡಾ. ಸುಂದರ ಮೊಯಿಲಿ, ಸುಧೀರ್ ಕುಮಾರ್, ದಾಮೋದರ ದೇವಾಡಿಗ, ಸುಧಾಕರ ದೇವಾಡಿಗ, ಪ್ರಮೀಳಾ ದೇವಾಡಿಗ, ಹರೀಶ್ ದೇವಾಡಿಗ, ವಿಜಯಪ್ರಕಾಶ್ ದೇವಾಡಿಗ, ಶೀತಲ್ ದೇವಾಡಿಗ, ಜ್ಞಾನೇಶ್ ದೇವಾಡಿಗ, ಜಯಶಂಕರ ಬಾಸ್ರಿತ್ತಾಯ, ಅರುಣ್ ಕುಮಾರ್ ಕುಕ್ಕುದಕಟ್ಟೆ, ವಸಂತ ಕೊಯಮಜಲು, ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.