Author: admin
ಬಂಟ್ವಾಳ: ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರವು ಜೀರ್ಣೋದ್ಧಾರ ಹಂತದಲ್ಲಿದ್ದು, ಶ್ರೀ ಮಹಾಲಿಂಗೇಶ್ವರನ ದಿವ್ಯ ಸಾನಿಧ್ಯದಲ್ಲಿ ಪ್ರತಿಷ್ಠಾಪನೆಗೊಳ್ಳಲಿರಯವ ನೂತನ ಧ್ವಜ ಸ್ತಂಭದ ತೈಲಾಧಿವಾಸ ಕಾರ್ಯಕ್ರಮವು ಜರುಗಿತು.ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ಧ್ವಜ ಸ್ತಂಭದ ಪ್ರತಿಷ್ಠಾಪನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಮಾಣಿಲ ಶ್ರೀಧಾಮದ ಶ್ರೀದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಸಭಾಧ್ಯಕ್ಷತೆ ವಹಿಸಿದ್ದರು. ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಮಂಜುನಾಥ ಭಂಡಾರಿ ಶೆಡ್ಡೆ, ಉದ್ಯಮಿಗಳಾದ ರಘುನಾಥ ಸೋಮಾಯಾಜಿ, ಪ್ರಶಾಂತ್ ಸನಿಲ್, ಬಂಟ್ವಾಳದ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಬಂಟ್ವಾಳ ಬಿಲ್ಲವರ ಸಂಘದ ಉಪಾಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜಿ.ಪಂ. ಮಾಝಿ ಸದಸ್ಯ ರವೀಂದ್ರ ಕಂಬಳಿ ಮತ್ತಿತತರರು ಉಪಸ್ಥಿತರಿದ್ದರು.
ಬಂಟ್ವಾಳ: ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸಿಟ್ಯೂಷನ್ ಪ್ರವರ್ತಿತ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ತುಂಬೆ ಇದರ ಉದ್ಘಾಟನಾ ಸಮಾರಂಭ ತುಂಬೆಯಲ್ಲಿ ನಡೆಯಿತು. ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಹಾಗೂ ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸಿಟ್ಯೂಷನ್ನ ಅಧ್ಯಕ್ಷ ರೆ.ಫಾ. ಡಾ. ಪೀಟರ್ ಪೌಲ್ ಸಲ್ದಾನ ನೂತನ ನರ್ಸಿಂಗ್ ಕಾಲೇಜನ್ನು ಉದ್ಘಾಟಿಸಿದರು. ಅವರು ಕಾರ್ಯಕ್ರಮದ ಸಭಾದ್ಯಕ್ಷತೆ ವಹಿಸಿ ಆಶೀರ್ವಚನ ನೀಡಿ ವೈದ್ಯರೊಂದಿಗೆ ನರ್ಸ್ಗಳು ಕೂಡ ರೋಗಿಗಳಿಗೆ ಉತ್ತಮ ಸೇವೆ, ಆರೈಕೆ ನೀಡಿದಾಗ ಸಂಸ್ಥೆ ಬೆಳೆಯಲು ಸಾಧ್ಯವಿದೆ. ನಮ್ಮ ಬಾಹ್ಯ ಸೌಂದರ್ಯಕ್ಕಿಂತ ರೋಗಿಯ ಸೇವೆ ಮಾಡುವಂತ ಆಂತರ್ಯದ ಸೌಂದರ್ಯ ನಮ್ಮನ್ನು ಇನ್ನಷ್ಟು ಸುಂದರಗೊಳಿಸುತ್ತದೆ. ಇಲ್ಲಿ ಶಿಕ್ಷಣ ಪಡೆಯುವ ಪ್ರತಿಯೊಬ್ಬ ವಿದ್ಯಾರ್ಥಿಯು ಇದನ್ನು ಮನಗಂಡು ತಮ್ಮ ಭವಿಷ್ಯವನ್ನು ಉತ್ತಮ ಪಡಿಸಿಕೊಳ್ಳುವಂತೆ ಶುಭ ಹಾರೈಸಿದರು. ಮುಖ್ಯ ಅತಿಥಿ ರಾಜ್ಯ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಶಿಲಾಫಲಕ ಅನಾವರಣಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು ಫಾದರ್ ಮುಲ್ಲರ್ ಆಸ್ಪತ್ರೆ ಉದ್ಘಾಟನೆಗೊಂಡಿರುವುದು ಕೇವಲ ಸಂಸ್ಥೆಗೆ ಮಾತ್ರವಲ್ಲ ಇಡೀ ತುಂಬೆ ಗ್ರಾಮಕ್ಕೆ ಕೀರ್ತಿ…
ಬಂಟ್ವಾಳ: ಅಮಿತ್ ಎಸ್. ಪೈ ಮೆಮೋರಿಯಲ್ ಸ್ವಾಮಿ ವಿವೇಕಾನಂದ ಧ್ಯಾನ ಮತ್ತು ಯೋಗ ಮಂದಿರಪೆರ್ವಾಜೆ ಕಾರ್ಕಳ ಇಲ್ಲಿ ಪ್ರತಿ ಷ್ಠಾಪಿಸಲ್ಪಟ್ಟ ಶ್ರೀ ವಾಲ್ಮೀಕಿ ವಿಗ್ರಹಕ್ಕೆ ವಾಲ್ಮೀಕಿ ಜಯಂತಿ ಯ ಪ್ರಯುಕ್ತ ನಡೆದ ವಿಶೇಷ ಪೂಜೆಯ ಸಂದರ್ಭದಲ್ಲಿ ಕುಕ್ಕೆಶ್ರೀ ಕಲಾಕುಠೀರದ ಮಾಲಕ, ಫೈಬರ್ ಆರ್ಟ್ ಕಲಾವಿದ ಮನೋಜ್ ಕನಪಾಡಿ ಅವರನ್ನು ಗೌರವಿಸಲಾಯಿತು. ಈ ಸಂದರ್ಭ ಶ್ರೀನಿವಾಸ್ ಜಿ. ಕೆ. ಪೈ ಮತ್ತು ಟ್ರಸ್ಟ್ ನ ಪ್ರಮುಖರು ಹಾಜರಿದ್ದರು.
ಮೂಡಬಿದಿರೆ; ಡಾ.ಮೋಹನ ಆಳ್ವ ಅವರ ತೀರ್ಥರೂಪ ಶತಾಯುಷಿ ಆನಂದ ಆಳ್ವ ನಿಧನಮೂಡುಬಿದಿರೆ:ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾಎಂ. ಮೋಹನ ಆಳ್ವ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವ(106) ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನ ನಿಧನರಾದರು. ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳ ಹಿಂದೆ ಅವರನ್ನು ಮೂಡುಬಿದಿರೆಯ ಆಳ್ವಾಸ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಕಂಬಳ ಯಜಮಾನರಾಗಿದ್ದು ಮಿಜಾರಿನಲ್ಲಿ ಕಂಬಳ ಆಯೋಜಿಸಿ ಆಗಿನ ಮುಖ್ಯಮಂತ್ರಿ ಗುಂಡೂರಾವ್ ಅವರಿಂದ ಉದ್ಘಾಟಿಸಿದ್ದರು. ಪ್ರಗತಿಪರ ಕ್ರಷಿಕರಾಗಿದ್ದು ಭತ್ತ, ಅಡಿಕೆ, ತೆಂಗು, ಕೊಕ್ಕೊ ಬೆಳೆಸುತ್ತಿದ್ದರು. ಹೈನುಗಾರಿಕೆಯಲ್ಲು ತೊಡಗಿಸಿಕೊಂಡಿದ್ದರು. ಪುತ್ರ ಡಾ. ಎಂ ಮೋಹನ ಆಳ್ವ ಅವರ ಆಳ್ವಾಸ್ ಹೆಲ್ತ್ ಸೆಂಟರ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಪ್ರಗತಿಗೆ ತಂದೆ ಬೆಂಬಲವಾಗಿದ್ದರು. ಡಾ.ಎಂ. ಮೋಹನ ಆಳ್ವ ಸಹಿತ ಮೂವರು ಪುತ್ರರು ಓರ್ವ ಪುತ್ರಿ ಇದ್ದಾರೆ
ಮುಂಬಯಿ: ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಇಲಾಖೆಯ ರಂಗಭೂಮಿ ಪ್ರಯೋಗಗಳ ತಪಾಸಣಾ (ಸೇನ್ಸರ್) ಮಂಡಳಿ ಸದಸ್ಯರನ್ನಾಗಿ ಕಳೆದ ಅನೇಕ ವರ್ಷಗಳಿಂದ ಕನ್ನಡ ಮತ್ತು ತುಳು ಭಾಷಾ ಪರಾಮರ್ಶಕರಾಗಿದ್ದ ರಂಗ ಎಸ್.ಪೂಜಾರಿ ಮತ್ತು ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರನ್ನು ನೇಮಗೊಳಿಸಿದೆ. ಸರ್ಕಾರದ ಸಾಂಸ್ಕೃತಿಕ ವ್ಯವಹಾರಗಳ ಇಲಾಖೆಯು ನಾಟಕಗಳು, ಏಕಾಂಕ ನಾಟಕಗಳು ಮತ್ತು ವಿವಿಧ ಮನರಂಜನೆಗಳ ಸಂಹಿತೆಯನ್ನು ಪೂರ್ವವೀಕ್ಷಿಸಲು ಭಾಷಾತಜ್ಞತರ ನೇಮಕ ನಡೆಸಿ ಮಂಡಳಿ ತನ್ನ ಆದೇಶ ಹೊರಡಿಸಿದೆ. ಸರ್ಕಾರದ ನಿರ್ಧಾರದಂತೆ ರಾಜ್ಯದ ಮರಾಠಿ ಮತ್ತು ಹಿಂದಿ ಹೊರತುಪಡಿಸಿ ಇತರ ಭಾಷೆಗಳ ಲ್ಲಿ ಸ್ವೀಕರಿಸಿದ ಮನರಂಜನಾ ಪ್ರಯೋಗಗಳ ಸಂಹಿತೆಯನ್ನು ಪರಿಶೀಲಿಸಲು ಇನ್ನಿತರ ಭಾಷೆಗಳಿಗೆ ಭಾಷಾತಜ್ಞರ ಪರಿನಿರೀಕ್ಷಕರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಕನ್ನಡ, ತುಳು ಮತ್ತು ರೋಮನ್ ಲಿಪಿಯನ್ನೊಳಗೊಂಡ (ಗೋವಾ) ಕೊಂಕಣಿ ಭಾಷೆಗಳಿಗೆ ರೋನ್ಸ್ ಬಂಟ್ವಾಳ್ ಅವರನ್ನು ನೇಮಿಸಿದೆ. ಬೆಂಗಾಲಿ, ಇಂಗ್ಲಿಷ್, ಪಂಜಾಬಿ, ಗುಜರಾತಿ, ತೆಲುಗು, ತಮಿಳು, ಮಾಲ್ವಾನಿ, ರಾಜಸ್ಥಾನಿ, ಸಿಂದಿ ಗೋವಾ, ಮಲಯಾಳಂ ಭಾಷೆಗಳಿಗೂ ನುರಿತ ಭಾಷಾತಜ್ಞತರನ್ನು ನೇಮಿಸಿ ಆದೇಶ…
ಬಂಟ್ವಾಳ: ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಬೆಂಗಳೂರು ಇದರ ಆಶ್ರಯದಲ್ಲಿ ಅ.28ಮತ್ತು 29 ರಂದು ಬೆಂಗಳೂರಿನಲ್ಲಿ ನಡೆದ 14ರಿಂದ 17 ವರ್ಷ ವಯೋಮಿತಿಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ ಬಾಲಕಿಯರ ರಾಜ್ಯಮಟ್ಟದ ಜೂಡೋ ಪಂದ್ಯಾವಳಿಯಲ್ಲಿ ಪೊಳಲಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ವೆಂಕಟೇಶ್ ಬೆಳ್ಳಿ ಪದಕ, ಸತೀಶ್ ಹಾಗೂ ಜತೀನ್ ಅಯ್ಯಪ್ಪ ಕಂಚಿನ ಪದಕ ಗೆದ್ದುಕೊಂಡು ಜಿಲ್ಲೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. ಇವರು ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಮಾರ್ಷಲ್ ಆರ್ಟ್ ತರಬೇತಿ ಪಡೆಯುತ್ತಿದ್ದಾರೆ. ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಟೀಮ್ ಮ್ಯಾನೇಜರ್ ಜಯಂತ್ ಆಚಾರ್ಯ ಹಾಗೂ ಸಹಾಯಕ ತರಬೇತುಗಾರ್ತಿ ಅಸ್ಮಿತಾ ರೈ ಸಹಕರಿಸಿದ್ದಾರೆ.
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ ಆಶ್ರಯದಲ್ಲಿ ಎ.ಬಿ.ಶೆಟ್ಟಿ ಸ್ಮಾರಕ ದಂತ ವಿದ್ಯಾಲಯ ಇದರ ಸಹಭಾಗಿತ್ವದೊಂದಿಗೆ ದಂತ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಅ.31 ರಂದು ಬೆಳಿಗ್ಗೆ 9 ರಿಂದ ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇಲ್ಲಿಗೆ ಜಿಲ್ಲಾ ಗವರ್ನರ್ ಎಚ್ . ಆರ್. ಕೇಶವ್ ಅವರ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು.ಬಿ.ಸಿ.ರೋಡಿನ ರೋಟರಿ ಬಿ.ಎ. ಸೋಮಯಾಜಿ ಮೆಮೋರಿಯಲ್ ಹಾಲ್ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ ಮಾತನಾಡಿ ಬಂಟ್ವಾಳ ಆರ್ ಸಿ ಬಿ. ಯಾವಾಗಲೂ ಗೆಲುವಿನ ಹಾದಿಯಲ್ಲಿ ಸಾಗುತ್ತಿದೆ ಎಂದು ತಿಳಿಸಿದರು. ಕಲ್ಲಡ್ಕ ಮ್ಯೂಸಿಯಂ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಇಂಟರಾಕ್ಟ್ ಕ್ಲಬ್ ಸದಸ್ಯರನ್ನು ಮ್ಯೂಸಿಯಂ ಗೆ ಭೇಟಿ ಮಾಡಿಸುವಂತೆ ಮನವಿ ಮಾಡಿದ ಅವರು ಅಲ್ಲಿ ಅದ್ಬುತ ಸಂಗ್ರಹಗಳು ಇದೆ ಎಂದರು. ರೋಟರಿ ಕ್ಲಬ್ ಬಂಟ್ವಾಳದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. Advertisement ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ ಪ್ರಾಸ್ತಾವಿಕ ವಾಗಿ ಮಾತನಾಡಿ ರೂ. 75 ಲಕ್ಷ ವೆಚ್ಚದಲ್ಲಿ ರೋಟರಿ ಕ್ಲಬ್ ಬಂಟ್ವಾಳ ಬ್ಲಡ್ ಬ್ಯಾಂಕ್ ಸ್ಥಾಪಿಸುತ್ತಿದ್ದು ಈಗಾಗಲೇ 56.40 ಲಕ್ಷ ರೂಪಾಯಿ ಗ್ಲೋಬಲ್ ಗ್ರಾಂಟ್ ಬಂದು ಖಾತೆಗೆ ಜಮೆಯಾಗಿದ್ದು ಆದಷ್ಟು…
ಬಂಟ್ವಾಳ : ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿ ಎಂದು ಕೊಯಿಲ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಭಾರತಿ ಕಾರಂತ್ ಹೇಳಿದರು.ಬಂಟ್ಚಾಳ ತಾಲೂಕು ಕೊಯಿಲ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಗೊಂಡ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಕೇವಲ ಮಣ್ಣು ಹೋರುವ ಕೆಲಸ ಮಾತ್ರವಲ್ಲ ಅದು ವಿದ್ಯಾರ್ಥಿಯ ಸರ್ವಾಂಗೀಣ ಪ್ರಗತಿಗೆ ಉತ್ತೇಜನ ನೀಡುತ್ತದೆ. ವಿದ್ಯಾರ್ಥಿಯಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆಯನ್ನು ಒದಗಿಸಿಕೊಡುತ್ತದೆ. ದೇಹ ಮನಸ್ಸು ಸ್ವಚ್ಚತೆ ವ್ಯಕ್ತಿಯ ಮಾನಸಿಕ ಸ್ಥೈರ್ಯ ತುಂಬಿ ಹೊಂದಾಣಿಕೆ ಮನೋಭಾವವನ್ನು ಬೆಳೆಸುತ್ತದೆ ಎಂದು ಹೇಳಿದರು. Advertisement ಎಸ್.ವಿ.ಎಸ್. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಯೋಗವರ್ಧನ್ ಡಿ. ಎಂ. ಅಧ್ಯಕ್ಷತೆ ವಹಿಸಿ, ನಾವೆಲ್ಲರೂ ಒಂದೇ ಎನ್ನುವ ಮನೋಭಾವ ಬೆಳೆಸುವ ಜತೆ ಕೀಳರಿಮೆಯನ್ನು ಹೋಗಲಾಡಿಸುತ್ತದೆ. ಜಾತಿ-ಧರ್ಮ, ಮೇಲು-ಕೀಳು ಎನ್ನುವ ಭೇದಭಾವವಿಲ್ಲದೆ ಎಲ್ಲರೂ ಒಂದೇ ಸೂರಿನಡಿಯಲ್ಲಿ ಒಟ್ಟಾಗಿ ಜೀವಿಸುವ ಭಾವೈಕ್ಯತೆಯ ಗುಣವನ್ನು…
Advertisement ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಘನವಾಹನಗಳ ಸಂಚಾರವನ್ನು ನಿಷೇಧಿಸಿದ್ದರೂ ಕೂಡ ಪಾಣೆಮಂಗಳೂರು ಪೇಟೆಗೆ ಸರಕು ಹೊತ್ತು ತರವ ವಾಹನಗಳು ಇದೇ ಸೇತುವೆಯನ್ನು ಬಳಸುತ್ತಿದೆ. ಲಾರಿಯೊಂದು ಇದೇ ಸೇತುವೆಯಲ್ಲಿ ಸಂಚರಿಸಿ ಕೆಲ ಹೊತ್ತುಗಳ ಕಾಲ ಟ್ರಾಫಿಕ್ ಜಾಂ ಉಂಟಾಯಿತು. ಘನ ವಾಹನಗಳ ಸಂಚಾರ ನಿಷೇಧ ಎನ್ನುವ ಜಿಲ್ಲಾಧಿಕಾರಿಯವತರ ಸೂಚನಾ ಫಲಕಕ್ಕೆ ಬೆಲೆ ಇಲ್ಲದಂತಾಗಿದೆ.








