Author: admin
ಜೆಸಿಐ ಬಂಟ್ವಾಳ ಇದರ ವತಿಯಿಂದ ಮೊಡಂಕಾಪುವಿನ ದೀಪಿಕಾ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪೂರ್ವ ತಯಾರಿ ತರಬೇತಿ ಕಾರ್ಯಗಾರ ಮಂಗಳವಾರ ನಡೆಯಿತು. ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ನಂದಕಿಶೋರ್ ಅವರು ಸಂನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತರಬೇತಿ ನೀಡಿದರು. ಈ ಸಂದರ್ಭ ಟ್ರಾಫಿಕ್ ವಾರ್ಡ್ ನ್ ದೊಡ್ಡಮನೆ ಎ.ಆರ್. ಪಟೇಲ್ ಅವರಿಗೆ ಸೆಲ್ಯೂಟ್ ಟೂ ಸೈಲೆಂಟ್ ವರ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಶಾಲೆಯ ಮುಖ್ಯ ಶಿಕ್ಷಕ ಸಾಧು, ಜೆಸಿಐ ಬಂಟ್ವಾಳದ ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಕಾರ್ಯಕ್ರಮ ಸಂಯೋಜಕ ಸದಾನಂದ ಬಂಗೇರ, ಕಾರ್ಯದರ್ಶಿ ರಶ್ಮಿ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೂರ್ವಾಧ್ಯಕ್ಷರಾದ ಸುರೇಶ್ ನಾವೂರು, ಸಂತೋಷ್ ಜೈನ್, ಉಮೇಶ್ ಪೂಜಾರಿ,ಉಪಾಧ್ಯಕ್ಷ ಕಿಶೋರ್ ಆಚಾರ್ಯಸಹಕರಿಸಿದರು.
ಬಂಟ್ವಾಳ: ಸಂಬಂಧ, ಸಹಬಾಳ್ವೆ, ಸಹಯೋಗ, ಸಂಸ್ಕೃತಿ, ಸಂತತಿ, ಸಂಸ್ಕಾರ, ಸತ್ಕಾರ ಈ ೭ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮೌಲ್ಯಯುತ ಕುಟುಂಬ ಜೀವನವನ್ನು ನಡೆಸಿದಾಗ ಜೀವನದಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯವಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮಂಗಳೂರು ವಿಭಾಗದ ಕುಟುಂಬ ಪ್ರಭೋದಿನಿ ಪ್ರಮುಖ್ ಗಜಾನನ ಪೈ ಹೇಳಿದರು. ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ನೂತನ ರಥ ಸಮರ್ಪಣೆ ಹಾಗೂ ಜಾತ್ರಾಮಹೋತ್ಸವದ ಪ್ರಯುಕ್ತ ನಡೆದ ದಂಪತಿ ಸಮಾವೇಶದಲ್ಲಿ ಸನಾತನ ಕುಟುಂಬ ಪದ್ದತಿಯ ಮೌಲ್ಯ ಮತ್ತು ಜವಾಬ್ದಾರಿಯ ಬಗ್ಗೆ ಅವರು ಮಾತನಾಡಿದರು. ಮನೆಯ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಕ್ಷಮತೆಯನ್ನು ದೇವರು ತಾಯಂದಿರಿಗೆ ನೀಡಿದ್ದಾನೆ. ತಾಯಿ ಮಾತೃಸ್ಥಾನದಲ್ಲಿ ಇದ್ದರೂ ಆಕೆಗೆ ಪೂರಕವಾದ ಅನುಕೂಲವನ್ನು ಒದಗಿಸಿಕೊಡುವ ಜವಬ್ದಾರಿ ಪುರುಷರದ್ದು ಎಂದು ತಿಳಿಸಿದರು.ಒಡಿಯೂರು ಗುರುದೇವದತ್ತ ಸಂಸ್ಥಾನಂನ ಸಾಧ್ವಿ ಶ್ರೀ ಮಾತಾನಂದಮಯಿದಂಪತಿ ಸಮಾವೇಶವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷ ವಿಶ್ವನಾಥ ಆಳ್ವ ಕಾಂತಾಡಿಗುತ್ತು ಅಧ್ಯಕ್ಷತೆ ವಹಿಸಿದ್ದರು.ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ…
ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ಕ್ಷೇತ್ರ ದೇವಾಡಿಗ ಸಮಾಜ ಶ್ರೀ ನಂದಾವರ ದೇವಸ್ಥಾನ ರಥ ಸಮರ್ಪಣ ಸಮಿತಿ ಇದರ ವತಿಯಿಂದ ನಂದಾವರ ಕ್ಷೇತ್ರಕ್ಕೆ ಸಮರ್ಪಿಸುವ ರಥಕ್ಕೆ ರಥ ಪರಿಗ್ರಹ, ರಥ ಭೂ ಸ್ಪರ್ಶ, ರುದ್ರಹೋಮ, ಪೂರ್ಣಾಹುತಿ, ಹೋಮ ಕಲಶಾಭಿಷೇಕ ಕಾರ್ಯಕ್ರಮ ಸೋಮವಾರ ನಡೆಯಿತುದೇವಸ್ಥಾನದ ಪ್ರಧಾನ ಅರ್ಚಕ ಮಹೇಶ್ ಭಟ್ ಪೌರೋಹಿತ್ಯ ನೆರವೇರಿಸಿದರು.ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್, ರಥ ಸಮರ್ಪಣಾ ಸಮಿತಿ ಅಧ್ಯಕ್ಷ ರಾಮದಾಸ ಬಂಟ್ಚಾಳ, ಪ್ರಧಾನ ಕಾರ್ಯದರ್ಶಿ ಸದಾಶಿವ ಮೊಯಿಲಿ, ಕೋಶಾಧಿಕಾರಿ ಪ್ರವೀಣ್ ದೇವಾಡಿಗ, ಪ್ರಮುಖರಾದ ಪದ್ಮನಾಭ ದೇವಾಡಿಗ, ಡಾ. ಸುಂದರ ಮೊಯಿಲಿ, ಸುಧೀರ್ ಕುಮಾರ್, ದಾಮೋದರ ದೇವಾಡಿಗ, ಸುಧಾಕರ ದೇವಾಡಿಗ, ಪ್ರಮೀಳಾ ದೇವಾಡಿಗ, ಹರೀಶ್ ದೇವಾಡಿಗ, ವಿಜಯಪ್ರಕಾಶ್ ದೇವಾಡಿಗ, ಶೀತಲ್ ದೇವಾಡಿಗ, ಜ್ಞಾನೇಶ್ ದೇವಾಡಿಗ, ಜಯಶಂಕರ ಬಾಸ್ರಿತ್ತಾಯ, ಅರುಣ್ ಕುಮಾರ್ ಕುಕ್ಕುದಕಟ್ಟೆ, ವಸಂತ ಕೊಯಮಜಲು, ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.
https://youtu.be/QWDV3AWGUCw
ಬಂಟ್ವಾಳ: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರಿನ ಪುರಭವನದಲ್ಲಿ ನಡೆಯುವ ಪ್ರಪ್ರಥಮ ಉಭಯ ಜಿಲ್ಲೆಗಳ ಗ್ಯಾರೇಜ್ ಮಾಲಕರ ಹಾಗೂ ನೌಕರರ ಬೃಹತ್ ಮಹಾಸಮಾವೇಶದ ಪ್ರಯುಕ್ತ ಬಂಟ್ವಾಳ ವಲಯ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಸೋಮವಾರ ಬೆಳಿಗ್ಗೆ ಬಿ.ಸಿ.ರೋಡಿನಿಂದ ಬೈಕ್ ರ್ಯಾಲಿ ಹಾಗೂ ವಾಹನ ಜಾಥ ನಡೆಯಿತು. ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ವಾಹನ ಜಾಥಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.ಈ ಸಂದರ್ಭ ಗ್ಯಾರೇಜ್ ಮಾಲಕರ ಸಂಘದ ಬಂಟ್ವಾಳ ವಲಯ ಅಧ್ಯಕ್ಷ ಜಗದೀಶ್ ರೈ, ಪ್ರಧಾನ ಕಾರ್ಯದರ್ಶಿ ರಾಜೇಶ್ ಸಾಲ್ಯಾನ್, ಕೋಶಾಧಿಕಾರಿ ಜನಾರ್ದನ ಕುಲಾಲ್, ಸಂಚಾಲಕ ಸುಧಾಕರ ಸಾಲ್ಯಾನ್, ಪ್ರಮುಖರಾದ ಗಣೇಶ್ ಸುವರ್ಣ ತುಂಬೆ, ಅಣ್ಣು ಪೂಜಾರಿ, ರಾಜೇಶ್, ರಮೇಶ್ ಗಣೇಶ್ ಟಯರ್ಸ್, ಸುಧೀರ್, ರಮೇಶ್ ಭಂಡಾರಿ, ಪ್ರಶಾಂತ ಭಂಡಾರ್ಕರ್ ಮೊದಲಾದವರು ಉಪಸ್ಥಿತರಿದ್ದರು. ಪೇಟ ಧರಿಸಿ ಗ್ಯಾರೇಜ್ ಮಾಲಕರ ಸಂಘದ ಸದಸ್ಯರು ಗಮನ ಸೆಳೆದರೆ, ಗ್ಯಾರೇಜ್ ಜೀವನ…
https://www.youtube.com/embed/qVumASJGlu8
ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದ ಅಷ್ಟಬಂಧ ಬ್ರಹ್ಮಕಲಶಾಭೀಷೇಕದ ಪ್ರಯುಕ್ತ ಜ.31 ಮತ್ತು ಫೆ. 3 ರಂದು ಪಣೋಲಿ ಬೈಲು ಕಲ್ಲುರ್ಟಿ ಕ್ಷೇತ್ರದಲ್ಲಿ ಅಗೇಲು ಸೇವೆ ಇರುವುದಿಲ್ಲ. ಫೆ. 5ರಂದು “ಅಗೇಲು ಸೇವೆ” ಇರಲಿದೆ. ನಂದಾವರ ಕ್ಷೇತ್ರದ ವಾರ್ಷಿಕ ಜಾತ್ರೆಯ ಪ್ರಯುಕ್ತ ಫೆ. 07 ರಂದು ಸದ್ರಿ ಕ್ಷೇತ್ರದಲ್ಲಿ ಅಗೇಲು ಸೇವೆ” ನಡೆಯುವುದಿಲ್ಲ. ನಂತರದ ದಿನಗಳಲ್ಲಿ ಎಂದಿನಂತೆ “ಅಗೇಲು ಸೇವೆ” ನಡೆಯುತ್ತದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ
ಬಂಟ್ವಾಳ: ಪ್ರತಿಯೊಂದು ಚರಾಚರ ವಸ್ತುವಿನಲ್ಲೂ ಜ್ಞಾನವಾಗಿ ದೇವರ ಅಸ್ಥಿತ್ವವಿದೆ. ದೇವರ ವಿರಾಟ್ ಸ್ವರೂಪವನ್ನು ಗ್ರಹಿಸುವ ಜ್ಞಾನ ನಮ್ಮಲ್ಲಿದ್ದಾಗ ದೇವರ ಸಾಕ್ಷತ್ಕಾರ ಪಡೆಯಲು ಸಾಧ್ಯವಿದೆ, ದೇವರನ್ನು ನಾವು ಉಪಾಸನೆ ಮಾಡಿದಾಗ ನಾವು ವಿಜ್ಞಾನಿಗಳಾಗುತ್ತೇವೆ ಎಂದು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಹೇಳಿದರು. ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ನೂತನ ರಥ ಸಮರ್ಪಣೆ ಹಾಗೂ ಜಾತ್ರಾಮಹೋತ್ಸವದ ಪ್ರಯುಕ್ತ ನಡೆದ ಮೊದಲ ದಿನದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.ಮುಗಿಯದಷ್ಟು ಸಂಶೋಧನೆ ಮಾಡಬಹುದಾದ ರಹಸ್ಯ ಈ ಭೂ ಮಂಡಲದಲ್ಲಿದೆ. ಪ್ರಕೃತಿಯೊಂದಿಗೆ ಈ ದೇಹವನ್ನು ಸಂಯೋಜಿಸಲಾಗಿದೆ. ಪಂಚಭೂತಗಳ ತತ್ವವು ನಮ್ಮ ದೇಹದಲ್ಲಿದೆ. ಸೃಷ್ಡಿಯನ್ನು ಸೃಷ್ಟಿಸಿದ ಚೈತನ್ಯ ನಮ್ಮ ದೇಹದಲ್ಲೂ ಇದೆ. ದೇವಸ್ಥಾನ ಪಂಚ ಪ್ರಾಕಾರಗಳಿಂದ ನಿರ್ಮಾಣವಾದರೆ ದೇಹವು ಪಂಚ ಕೋಶಗಳಿಂದ ರಚಿತವಾಗಿದೆ. ದೇಹ ಎನ್ನುವ ನಮ್ಮ ದೇವಸ್ಥಾನಕ್ಕೆ ತಂತ್ರಿಗಳು ನಾವೇ, ಅಲ್ಲಿಗೆ ಕಲಶಾಭಿಷೇಕ ಮಾಡ ಬೇಕಾದವರು ನಾವು. ಆದ್ದರಿಂದ ಉತ್ತಮವಾದ ಆಚಾರ ವಿಚಾರಗಳನ್ನು ನಾವು ಮೈಗೂಡಿಸಿಕೊಳ್ಳಬೇಕು ಎಂದರು.ಈ ಸಂದರ್ಭ…
ಬಂಟ್ವಾಳ: ತಾಲೂಕಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರು ಮತ್ತು ಸ್ಥಳೀಯ ಭಕ್ತರು ಭಾನುವಾರ ಶ್ರಮದಾನ ನಡೆಸಿದರು. ಕ್ಷೇತ್ರದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ.ತುಂಗಪ್ಪ ಬಂಗೇರ, ಉಪಾಧ್ಯಕ್ಷರಾದ ಎಂ.ಬೂಬ ಸಪಲ್ಯ, ಪುರುಷೋತ್ತಮ ಶೆಟ್ಟಿ ಬಾರೆಕ್ಕಿನಡೆ, ಕೆ.ಬಾಬು ಸಪಲ್ಯ, ಪ್ರಧಾನ ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ, ಕೋಶಾಧಿಕಾರಿ ಅಭಿಷೇಕ್ ಪಿಲಿಂಗಾಲು, ಹರೀಶ ಪಿಲಿಂಗಾಲು, ಯೋಜನೆ ಮೇಲ್ವಿಚಾರಕಿ ರೇಖಾ ಕಾಡಬೆಟ್ಟು, ವಲಯಾಧ್ಯಕ್ಷ ಉಮೇಶ್ ಮತ್ತಿತರರು ಇದ್ದರು.
ಬಂಟ್ವಾಳ: ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ,ನೇತ್ರಾವತಿ ವಲಯ ಜಿಲ್ಲಾ ಸಮಿತಿ ವತಿಯಿಂದ ಮಹಾತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನ, ಬಂಟ್ವಾಳ ರಥ ಸಪ್ತಮಿ ಪ್ರಯುಕ್ತ ಭಾನುವಾರ ಮುಂಜಾನೆ ಸಾಮೂಹಿಕ 108 ಸೂರ್ಯ ನಮಸ್ಕಾರ ನಡೆಯಿತು.ಮಹಾತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ,ಗ್ರಾಮಣಿ ವೆಂಕಟರಮಣ ಮುಚ್ಚಿನ್ನಯ ಕಳಿಮರ್ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ ದಕ್ಷಿಣ ಕನ್ನಡ ಬಂಟ್ವಾಳ ತಾಲೂಕು ಪ್ರಾಂತ ಸಂಚಾಲಕ, ಸಂಘಟನ ವಿಭಾಗದ ಹರೀಶ, ಪ್ರಾಂತ ಪ್ರತಿನಿಧಿ ಶಿವಾನಂದ, ಜಿಲ್ಲಾ ಶಿಕ್ಷಣ ಪ್ರಮುಖ ಹರೀಶ್. ತಾಲೂಕು ಸಹ ಸಂಚಾಲಕಿ ನಯನ, ತಾಲೂಕು ವಿಸ್ತರಣ ಪ್ರಮುಖ್ ಕಿಶೋರ್ ಉಪಸ್ಥಿತರಿದ್ದರು.ರಥಸಪ್ತಮಿಯ ವಿಶೇಷತೆ ಬಗ್ಗೆ ಲೋಕಯ್ಯ ಬೌದ್ಧಿಕ್ ನೀಡಿದರು. ವಿದ್ಯಾ ಕಾರ್ಯಕ್ರಮ ನಿರೂಪಿಸಿದರು. ಸುರೇಶ ವಂದಿಸಿದರು.