Author: admin

ಬಂಟ್ವಾಳ: ತಾಲೂಕಿನ ಗ್ರಾಮೀಣ ಪ್ರದೇಶವಾದ ಸಜೀಪಮೂಡ ಗ್ರಾಮದಲ್ಲಿ ಸ್ಥಾಪನೆಗೊಂಡ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಕನಿಷ್ಠ ಅವಧಿಯಲ್ಲಿಯೇ ಗರಿಷ್ಠ ಸಾಧನೆಯನ್ನು ಮಾಡಿಕೊಂಡು ಅವಿಭಜಿತ ದ.ಕ. ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲನ್ನು ಸಾಧಿಸಿಕೊಂಡು ಮುನ್ನಡೆಯುತ್ತಿದೆ. ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಮುಂದಾಳತ್ವದಲ್ಲಿ, ಅನುಭವಿ ನಿರ್ದೇಶಕರ ಮಾರ್ಗದರ್ಶನದಲ್ಲಿ, ಕ್ರಿಯಾಶೀಲ ಸಿಬ್ಬಂದಿಗಳ ಸಹಕಾರದೊಂದಿಗೆ ಸಂಘ ಲಾಭದಾಯಕವಾಗಿ ಪ್ರಗತಿಯ ಹೆಜ್ಜೆ ಇಟಿದ್ದು ಸಂಘದ 13ನೇ ಶಾಖೆ ಉದ್ಘಾಟನೆಗೆ ಸಜ್ಜುಗೊಂಡಿದೆ.ನ. 5ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಪುಣಚ ಪರಿಯಲ್ತಡ್ಕ ಪ್ರಗತಿ ಕಾಂಪ್ಲೆಕ್ಸ್‌ನಲ್ಲಿ ಸಂಘದ ನೂತನ 13ನೇ ಶಾಖೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ. ರಮಾನಾಥ ರೈ, ಪುಣಚ ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಅಧ್ಯಕ್ಷ, ಕರ್ನಾಟಕ ಲೋಕ ಸೇವಾ ಆಯೋಗದ ಮಾಜಿ ಸದಸ್ಯ ಎಸ್. ಆರ್. ರಂಗಮೂರ್ತಿ, ಪುಣಚ ಗ್ರಾಮ ಪಂಚಾಯತ್.…

Read More

ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕ ನಿರ್ವಹಿಸುವ ಬಂಟ್ವಾಳ ತಾಲೂಕು 17ನೆಯ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಕಡೇಶಿವಾಲಯ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಡಿ.12 ರಂದು ನಡೆಸಲಾಗುವುದು. ಸಮ್ಮೇಳನದಲ್ಲಿ ತಾಲೂಕಿನ ೧೮ ವರ್ಷ ಪ್ರಾಯಕ್ಕಿಂತ ಕೆಳಗಿನ ಮಕ್ಕಳು ಭಾಗವಹಿಸಲಿದ್ದಾರೆ. ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆತಿಥೇಯ ಸಂಸ್ಥೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಕುಮಾರಿ ಸಾನ್ವಿ ಸುವರ್ಣ ಆಯ್ಕೆಯಾಗಿರುತ್ತಾರೆ ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ. ಬಾಯಾರು ತಿಳಿಸಿದ್ದಾರೆ.ಸಾನ್ವಿಯವರು ಸುಂದರ ಪೂಜಾರಿ ವಿಶಾಲಾಕ್ಷಿ ದಂಪತಿಗಳ ಪುತ್ರಿ. ಕಲಿಕೆಯಲ್ಲಿ ಉತ್ತಮ ಸಾಧನೆ ತೋರುತ್ತಿರುವ ಬಾಲ ಪ್ರತಿಭೆ. ಎಳೆಯ ವಯಸ್ಸಿನಲ್ಲೇ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಇವರು ಭಾರತ ಸರಕಾರದ ಶಿಕ್ಷಣ ಸಚಿವಾಲಯದಿಂದ ವೀರ ಗಾಥಾ ಪ್ರಮಾಣ ಪತ್ರ ಪಡೆದಿರುವರು. ಸಶಸ್ತ್ರ ಪಡೆಗಳ ಶೂರರ ಸ್ಮರಣಾರ್ಥವಾಗಿ ಈ ಪ್ರಮಾಣ ಪತ್ರ ನೀಡಲಾಗಿದೆ. Advertisement ಭಾರತೀಯ ಜೀವವಿಮಾ ನಿಗಮ ನೀಡುವ ಸಾಧನಾ ಪ್ರಶಸ್ತಿಯನ್ನು ಪಡೆದ ಇವರು ಉತ್ತಮ…

Read More

Advertisement ಬಂಟ್ವಾಳ: ಪುರಸಭೆಯ ಬಿ.ಕಸ್ಬಾ ಗ್ರಾಮದ ಗಿರಿಗುಡ್ಡೆ ಜಕ್ರಿಬೆಟ್ಟು ನೀರು ಶುದ್ಧೀಕರಣ ಘಟಕದ ಪಿಲ್ಟರ್ ದುರಸ್ಥಿ ಕೆಲಸ ನಡೆಯುತ್ತಿರುವುದರಿಂದ ೧೫ ದಿನಗಳ ಕಾಲ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಸಮರ್ಪಕವಾಗಿ ಪೂರೈಸಲು ವ್ಯತ್ಯಯ ಉಂಟಾಗುವುದಾಗಿ ಬಂಟ್ವಾಳ ಪುರಸಭೆಯ ಪ್ರಕಟಣೆ ತಿಳಿಸಿದೆ.

Read More

ಬಂಟ್ವಾಳ: ಗೆಲುವು ಎನ್ನುವುದು ಎಲ್ಲರಿಂದಲೂ ಸಾಧ್ಯವಾಗದು, ಆದರೂ ಪ್ರಯತ್ನ ಬಹಳ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮ ವಹಿಸಬೇಕಾಗುವುದು ಅಗತ್ಯವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಹೇಳಿದರು.ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಹಾಗೂ ತುಂಬೆ ಪ್ರೌಢಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರು ಮಂಗಳಾ ಸ್ಟೇಡಿಯಂನಲ್ಲಿ ಜರಗಿದಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. Advertisement ಬಂಟ್ವಾಳ ತಾಲೂಕಿಗೆ ಸುಸಜ್ಜಿತ ಕ್ರೀಡಾಂಗಣಕ್ಕಾಗಿ ಒಂದು ನೂರು ಕೋಟಿ ರೂಪಾಯಿಗಳ ಅನುದಾನಕ್ಕಾಗಿ ಕೇಲ್ ಇಂಡಿಯಾಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದು ಶೀಘ್ರ ಮಂಜೂರಾಗಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದರು.ಅಧ್ಯಕ್ಷತೆಯನ್ನು ವಹಿಸಿದ್ದ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಿ. ಅಬ್ದುಲ್ ಸಲಾಂ ಮಾತನಾಡಿ ಕ್ರೀಡೆ ಎನ್ನುವುದು ಆರೋಗ್ಯಪೂರ್ಣ ಸ್ಪರ್ಧೆಯಾಗಿದ್ದು ಶಿಸ್ತು ಮತ್ತು ಸಂಯಮವನ್ನು ಕಲಿಸಿಕೊಡುತ್ತದೆ. ಪ್ರತಿಭೆಯನ್ನು ಪ್ರದರ್ಶಿಸಲು ಒಳ್ಳೆಯ ವೇದಿಕೆಯಾಗಿ ಕ್ರೀಡಾ ಕ್ಷೇತ್ರ ಸಹಕರಿಸುತ್ತದೆಯಲ್ಲದೆ ಕ್ರೀಡಾಕೂಟವೆನ್ನುವುದು ಒಂದು ಸ್ಮರಣೀಯ ಕ್ಷಣಗಳಾಗಿ ಉಳಿಯುತ್ತದೆ ಎಂದರು.ಬಂಟ್ವಾಳ…

Read More

ದೇರಳಕಟ್ಟೆ: ಕೇಶ ವಿನ್ಯಾಸದಲ್ಲಿ ಪ್ರಖ್ಯಾತಿ ಪಡೆದಿರುವ ಮುಂಬೈಯ ಪ್ರತಿಷ್ಠಿತ ಶಿವಾಸ್ ಸಂಸ್ಥೆಯ ಶಿವಾಸ್ ಕಾಲೇಜ್ , ಶಿವಾಸ್ ಇಂಟರ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಪ್ರೊಫೆಷನಲ್ ಇನ್ನೋವೇಷನ್ ( SIIPI ) ಸಂಸ್ಥೆ ಹಾಗೂ ಶಿವಾಸ್ ಸಿಗ್ನೇಚರ್ ಫ್ಯಾಮಿಲಿ ಸೆಲೂನ್ ದೇರಳಕಟ್ಟೆಯ ಪ್ಲಾಮಾ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟನೆ ನೆರವೇರಿಸಿದರು. ಅವರು ಮಾತನಾಡಿ ಬಹಳಷ್ಟು ಜನರ ಜೀವನದಲ್ಲಿ ಹೊಸಬೆಳಕು ಮೂಡಿಸಿದ ಶಿವರಾಮ್ ಭಂಡಾರಿ, ಧರ್ಮಸ್ಥಳದಲ್ಲಿಯೂ ಅವರ ಸೇವೆ ನಡೆಸುತ್ತಾ ಬಂದಿರುವರು. ರುಡ್ಸೆಟ್ ನಲ್ಲಿಯೂ ಸೇವೆ ನೀಡಿ ಯುವಸಮುದಾಯಕ್ಕೆ ಜೀವನದ ದಾರಿ ಮಾಡಿಕೊಟ್ಟವರು. ಶಿವರಾಮ್ ಭಂಡಾರಿ ಮುಂಬೈನಿಂದ ಉಜಿರೆಗೆ ಬರುತ್ತಾರೋ ಅನ್ನುವ ಕಾತುರವಿತ್ತು. ಆದರೆ ಖುದ್ದಾಗಿ ಬಂದು ತರಬೇತಿ ನೀಡಿರುವುದು ಆಶ್ಚರ್ಯ ತಂದಿತ್ತು. ಮೂರು ದಿನಗಳ ಕಾಲ ನಿಂತು ತರಬೇತಿ ನೀಡಿ ಅನೇಕರಿಗೆ ಬೆಳಕಾಗಿದ್ದಾರೆ. ಕೇಶವಿನ್ಯಾಸಕ್ಕೆ ಮುಂಬೈನಲ್ಲಿ ಡಿಪ್ಲೊಮಾ ಕೋಸ್೯ ಆರಂಭಿಸುವ ಮೂಲಕ ವಿಶೇಷ ರೂಪು ನೀಡಿ ಅನೇಕ ಮಂದಿ ಉತ್ತಮ ಸಂಪಾದನೆಯ ಉದ್ಯೋಗವಾಕಾಶ ಮಾಡಿಕೊಟ್ಟವರು. ಬಹಿರಂಗ ಸೌಂದರ್ಯ…

Read More

ಬಂಟ್ವಾಳ: ತನ್ನ ಕೆಲಸದ ಸಹಾಯಕನೇ ಮನೆಯಲ್ಲಿ ಕಳ್ಳತನ ಮಾಡಿ ನಗ ನಗದು ದೋಚಿ ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪುದುವಿನಲ್ಲಿ ನಡೆದಿದೆ.ಇಲ್ಲಿನ ನಿವಾಸಿ ಮೊಹಮ್ಮದ್ ಝಫರುಲ್ಲಾ (36) ಎಂಬವರ ಮನೆಯಲ್ಲಿ ಕಳ್ಳತನವಾಗಿದ್ದು ಅವರ ಕಟ್ಟಡ ಕಾಮಗಾರಿಯ ಸಹಾಯಕ ಅಲಿ ಎಂಬಾತನೇ ಮಾಲಕನಿಗೆ ವಿಶ್ವಾನದ್ರೋಹ ಎಸಗಿ ಕಳವು ನಡೆಸಿದ ಆರೋಪಿ. ಮೊಹಮ್ಮದ್ ಝಫರುಲ್ಲಾ (36) ಅವರು ಬಿಲ್ಡರ್ ವ್ಯವಹಾರ ಮಾಡಿಕೊಂಡಿದ್ದು ಅವರ ಜೊತೆ ಸುಮಾರು 7-8 ತಿಂಗಳಿಂದ ಕಟ್ಟಡ ಕಾಮಗಾರಿಯ ಸಹಾಯಕನಾಗಿ ಆಲಿ ಎಂಬಾತನು ಕೆಲಸ ಮಾಡಿಕೊಂಡಿದ್ದು ಮಾಲಕನ ಜೊತೆ ವಿಶ್ವಾಸದಿಂದ ಇದ್ದ. ಅ. 18 ರಂದು ಝಪರುಲ್ಲಾ ಅವರ ಮನೆಯಲ್ಲಿದ್ದ ಅವರ ತಂದೆ, ತಾಯಿ, ಅಕ್ಕ, ತಂಗಿ ಯವರು ಅವರ ತಮ್ಮನ ಮನೆಗೆ ಹೋಗಲು ತಮ್ಮ ಮನೆಗೆ ಬೀಗ ಹಾಕಿ ಮನೆಯ ಕೀಯನ್ನು ಆಲಿಗೆ ನೀಡಿದ್ದಾರೆ. ಅ. 23 ರಾತ್ರಿ ಝಪರುಲ್ಲಾ ಮನೆಯವರು ಮನೆಗೆ ಹಿಂತಿರುಗಿ, ಮನೆಯ ಕೀಯನ್ನು ಪಡೆಯಲು ಆಲಿಗೆ ಪೋನ್ ಕರೆ ಮಾಡಿದಾಗ ಮೊಬೈಲ್…

Read More

ಬಂಟ್ವಾಳ: ಕುರಿಯಾಳ ಗ್ರಾಮ ದುರ್ಗಾ ನಗರದ ಶ್ರೀ ಓಂಕಾರೇಶ್ವರಿ ದೇವಿ ಭಜನಾ ಮಂದಿರದಲ್ಲಿ ನವರಾತ್ರಿ ದುರ್ಗಾಷ್ಟಮಿಯ ಪ್ರಯುಕ್ತ ಶ್ರೀ ದೇವರಿಗೆ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ ಸಂಪನ್ನಗೊಂಡಿತು.ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅರ್ಚಕ ಸುದರ್ಶನ್ ಬಲ್ಲಾಳ್ ಪೌರೋಹಿತ್ಯ ನೆರವೇರಿಸಿದರು.ಈ ಸಂದರ್ಭ ಭಜನೆ ಮಂಗಳ, ನವರಾತ್ರಿ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು. ವೇಷಗಳ ಪ್ರದರ್ಶನ:ಅ. 23ರಂದು ಸೋಮವಾರ ಬೆಳಗ್ಗೆ 8ಕ್ಕೆ ಶ್ರೀ ದೇವಿಗೆ ಪೂಜೆ, ವಾಹನ ಪೂಜೆ, ಸಂಜೆ 6.30ರಿಂದ ಭಜನೆ ಪ್ರಾರಂಭಗೊಂಡು ರಾತ್ರಿ 8.30ಕ್ಕೆ ಭಜನೆ ಮಂಗಳ, ನವರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 9.30ರಿಂದ ವೇಷಗಳ ಪ್ರದರ್ಶನ ಹಾಗೂ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ. ತುಳಸಿಕಲಾ ತಂಡ ಕುರಿಯಳದಿಂದ ‘ಪೊಣ್ಣು ಬಾಲೆ’ ನಾಟಕ ಪ್ರದರ್ಶನಗೊಳ್ಳಲಿದೆ

Read More

ಬಂಟ್ವಾಳ: ಕರಾವಳಿಯ ಜನರು ಗೌರವಿಸಿ, ಅರಾಧಿಸುವ ತುಳುನಾಡಿನ ಶ್ರೇಷ್ಠ ಜಾನಪದ ಕಲೆ ಯಕ್ಷಗಾನದ ವೇಷ ಧರಿಸಿ ದಸರ ವೇಷವೆಂದು ಜನರಲ್ಲಿ ಭಿಕ್ಷೆ ಬೇಡುವುದನ್ನು ಆಕ್ಷೇಪಿಸಿದ ಹಿರಿಯ ಯಕ್ಷಗಾನ ಕಲಾವಿದರು ಸ್ಥಳದಲ್ಲೇ ವೇಷಧಾರಿಯೊಬ್ಬನ ವೇಷವನ್ನು ಕಳಚಿದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ದಸರ ಹಬ್ಬದ ನೆಪದಲ್ಲಿ ದಾವಣಗೆರೆಯ ವ್ಯಕ್ತಿಯೊಬ್ಬ ಯಕ್ಷಗಾನದ ವೇಷ ಧರಿಸಿ ಸಾರ್ವಜನಿಕರಲ್ಲಿ ಭಿಕ್ಷೆ ಬೇಡಿ ಹಣ ಸಂಗ್ರಹ ಮಾಡುತ್ತಿದ್ದ. ಇದನ್ನು ಗಮನಿಸಿದಂತಹ ಹಿರಿಯ ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿಯವರು ವೇಷಧಾರಿಯನ್ನು ನಿಲ್ಲಿಸಿ ಯಕ್ಷಗಾನದ ವೇಷಕ್ಕೆ ತನ್ನದೇ ಆದ ಗೌರವ ಇದೆ.‌ ಅದು ಅನೇಕ ಮಂದಿ ಕಲಾವಿದರಿಗೆ ಬದುಕು ನೀಡಿದೆ. ಯಕ್ಷ ವೇಷ ಧರಿಸಿ ಭಿಕ್ಷೆ ಬೇಡುವುದು, ಯಕ್ಷಗಾನವನ್ನು ಅವಮಾನಿಸುವುದು ಸರಿಯಲ್ಲ. ತಕ್ಷಣ ವೇಷ ಕಳಚುವಂತೆ ಒತ್ತಾಯಿಸಿದ್ದಲ್ಲದೆ ವೇಷ ಕಳಚುವರೆಗೂ ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ ಯಕ್ಷಗಾನ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿ ಕೊನೆಗೂ ವೇಷ ಕಳಚಿ, ಕ್ಷಮೆ ಕೇಳಿ ತೆರಳ ಬೇಕಾಯಿತು.

Read More

ಬಂಟ್ವಾಳ: ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡು ಶತಮಾನ ಪೂರೈಸಿರುವ ಪಾಣೆಮಂಗಳೂರಿನ ಹಳೆ ಉಕ್ಕಿನ ಸೇತುವೆಯಲ್ಲಿ ಘನವಾಹನಗಳ ಸಂಚಾರ ನಿಷೇಧಿಸುವ ಉದ್ದೇಶದಿಂದ ಮೇಲ್ಭಾಗಕ್ಕೆ ಹಾಕಿರುವ ತಡೆಬೇಲಿ ಒಂದೇ ದಿನದಲ್ಲಿ ಕಿತ್ತು ಬಿದ್ದಿದೆ. ಶುಕ್ರವಾರ ಸೇತುವೆಯ ಎರಡೂ ಬದಿಗಳಲ್ಲೂ ಕಬ್ಬಿಣದ ತಡೆಬೇಲಿ ಅಳವಾಡಿಸಲಾಗಿತ್ತು. ಶನಿವಾರ ಬೆಳಿಗ್ಗೆ ಸರಕು ಸಾಗಿಸುವ ಗೂಡ್ಸ್ ಟೆಂಪೊವೊಂದು ತಡೆಬೇಲಿಯ ಅರಿವಿಲ್ಲದೆ ಸಂಚರಿಸಿದ ಕಾರಣ ಒಂದು ಪಾರ್ಶ್ವದ ಕಬ್ಬಿಣದ ಬೀಮ್ ಕೆಳಕ್ಕುರುಳಿದೆ. ಕಳೆದ ಕೆಲ ದಿನಗಳ ಹಿಂದೆ ಪಾಣೆಮಂಗಳೂರಿನ ಉಕ್ಕಿನ ಸೇತುವೆಯಲ್ಲಿ ಡಾಮರು ಕಿತ್ತು ಹೋಗಿ ಬಿರುಕು ಮೂಡಿದೆ ಎನ್ನುವ ಸುದ್ದಿ ಹಬ್ಬಿತ್ತು. ಘಟನಾ ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ಸಹಿತ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಘನವಾಹನಗಳ ಸಂಚಾರದಿಂದ ಬಿರುಕು ಕಾಣಿಸಿದೆ ಎನ್ನುವ ದೂರುಗಳು ಸಾರ್ವಜನಿಕ ವಲಯದಿಂದ ಕೇಳಿ ಬಂದ ಹಿನ್ನಲೆಯಲ್ಲಿಘನ ವಾಹನಗಳ ಸಂಚಾರವನ್ನು ನಿರ್ಬಂಧಿಸುವ ನಿಟ್ಟಿನಲ್ಲಿ ಸೇತುವೆಯ ಮೇಲ್ಬಾಗದಲ್ಲಿ ಅಡ್ಡಲಾಗಿ ತಡೆಬೇಲಿಯನ್ನು ಅಳವಡಿಸಲು ತೀರ್ಮಾನಿಸಲಾಗಿತ್ತು. ಸೇತುವೆಯ ಸುರಕ್ಷತೆಯ ದೃಷ್ಟಿಯಿಂದ ಇನ್ನು ಮುಂದೆ ದ್ವಿಚಕ್ರ, ತ್ರಿಚಕ್ರ ಹಾಗೂ ಕಾರುಗಳ ಸಂಚಾರಕ್ಕೆ…

Read More

ಉಳ್ಳಾಲ: ತಾಲೂಕಿನ ಪಾವೂರು, ಹರೆಕಳ, ಅಂಬ್ಲಮೊಗರು, ಗ್ರಾಮ ವ್ಯಾಪ್ತಿಗೊಳಪಟ್ಟ ಸಂಪಿಗೆದಡಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ವಿಜ್ರಂಭಣೆಯಿಂದ ನಡೆಯುತ್ತಿದ್ದು ಹರೇಕಳ ಸಂಪಿಗೆದಡಿ ಮನೆತನದವರಿಂದ ಶ್ರೀ ದೇವರಿಗೆ ಸರ್ವಾಲಂಕರ ಪೂಜೆ ನಡೆಯಿತು. ಬೆಳಿಗ್ಗೆ 7.30ಕ್ಕೆ ದೇವರಿಗೆ ನಿತ್ಯ ಪೂಜೆ ನಡೆಯಿತು. 8.30ರಿಂದ ಗಣಹೋಮ, ನಾಗದೇವರಿಗೆ ತಂಬಿಲ ಸೇವೆ, ಪರಿವಾರ ದೈವಗಳಿಗೆ ಪಂಚಪರ್ವ ನಡೆಯಿತು. ಬಳಿಕ ಕ್ಷೇತ್ರದ ಮಹಿಳಾ ಭಕ್ತರಿಂದ ಲಲತಾ ಸಹಸ್ರನಾಮ ಪಠಣ ನೆರವೇರಿತು. ಮಧ್ಯಾಹ್ನ 12.15ಕ್ಕೆ ಸಂಪಿಗೆದಡಿ ಮನೆತನದವರಿಂದ ಸರ್ವಾಲಂಕರ ಪೂಜೆ ಹಾಗೂ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮೋಕ್ತೇಸರ ಮೋಹನದಾಸ ರೈ, ಗೌರವಾಧ್ಯಕ್ಷ ರಾಜೀವ ಆಳ್ವ, ಭಾಸ್ಕರ ರೈ ಸಹಿತ ಸಂಪಿಗೆದಡಿ ಮನೆತನದ ಕುಟುಂಬಿಕರು, ಗ್ರಾಮಸ್ಥರು ಹಾಗೂ ಭಕ್ತರು ಉಪಸ್ಥಿತರಿದ್ದರು. ಬಳಿಕ ಅನ್ನಸಂತರ್ಪಣೆ ನಡೆಯಿತು. ಸಂಜೆ 6 ಗಂಟೆಯಿಂದ ಸಾಮೂಹಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ, ರಾತ್ರಿ ಭಜನಾ ಸಂಕೀರ್ತನೆ, ಬಳಿಕ ಟಿ. ಆರ್ ಪೂಂಜ ಮತ್ತು ಕುಟುಂಬಸ್ಥರಿಂದ ಶ್ರೀ ದೇವರಿಗೆ ರಂಗಪೂಜೆ…

Read More