Author: admin

ಬಂಟ್ವಾಳ: ತಾಲೂಕಿನ ಅಮ್ಟಾಡಿ ಗ್ರಾಮದ ಬಾಂಬಿಲ, ತಲೆಂಬಿಲ ನಿವಾಸಿ ವಿಲ್ಮಾ ಪ್ರಿಯಾ ಅಲ್ಬುಕರ್ಕ್ ಸಮಗ್ರ ಕೃಷಿಯ ಮೂಲಕ ಖುಷಿ ಕಂಡು ಕೊಂಡಿದ್ದಾರೆ. ಎಂಎಸ್‌ಡಬ್ಲ್ಯು ಪದವೀಧರೆಯಾಗಿರುವ ವಿಲ್ಮಾ ಕೃಷಿಯಲ್ಲಿ ಆಸಕ್ತಿ ಕಂಡು ಕೊಂಡು ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ.ಸ್ನಾತಕೋತ್ತರ ಪದವಿಧರೆಯಾಗಿದ್ದ ವಿಲ್ಮಾ ಉದ್ಯೋಗವನ್ನು ಅರಸಿಕೊಂಡು ಹೋದರು ಸೂಕ್ತವಾದ ಕೆಲಸ ಕೈ ಹಿಡಿಯದೇ ಇದ್ದಾಗ ಕೃಷಿ ಕ್ಷೇತ್ರದತ್ತ ಆಸಕ್ತಿ ಹೊಂದಿದರು. ಇವರ ಪತಿ ಟೆರೆನ್ಸ್ ಅರುಣ್ ಡಿಸೋಜಾ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗಿಯಾಗಿದ್ದು ಬಳಿಕ ಊರಿಗೆ ಮರಳಿ ಇತರ ಉದ್ಯೋಗದತ್ತ ಗಮನ ಹರಿಸದೇ ತಮ್ಮ ಸ್ವಂತ ಭೂಮಿಯಲ್ಲಿ ಕೃಷಿ ಕ್ರಾಂತಿ ಮಾಡಲು ಮುಂದಡಿ ಇಟ್ಟರು. ಪತ್ನಿ ವಿಲ್ಮಾ ಕೂಡ ಇದೇ ಹಾದಿಯಲ್ಲಿ ಸಾಗುತ್ತಿದ್ದು ಪತ್ನಿಯ ಕೃಷಿ ಸಾಧನೆಗೆ ಪತಿ ಮಾರ್ಗದರ್ಶನ ಮಾಡುತ್ತಿದ್ದಾರೆ. ಮನೆ ಆವರಣವೇ ಕೃಷಿ ಕ್ಷೇತ್ರ: ಸಮಗ್ರ ಕೃಷಿಯನ್ನು ಅವಲಂಬಿಸಿಕೊಂಡಿರುವ ವಿಲ್ಮಾ ಅವರ ಮನೆ ಆವರಣವೇ ಕೃಷಿ ಸಾಧನೆಯ ಕ್ಷೇತ್ರ. ವಾಣಿಜ್ಯ ಬೆಳೆಗಳಾಗಿ ಅಡಿಕೆ, ತೆಂಗು, ಕಾಳುಮೆಣಸು, ರಬ್ಬರ್ ಇದ್ದರೆ ಬೆಂಡೆ,…

Read More

ಬಂಟ್ವಾಳ: ತೆಂಗಿನ ಗೆರಟೆಯ ಮೂಲಕ ಕಲಾಕೃತಿಗಳನ್ನು ತಯಾರಿಸುವ ಇರಾ ಗ್ರಾಮದ ಸಚ್ಚೀಂದ್ರ ಅವರು ದಸರಾ ಹಬ್ಬದ ಸುಸಂದರ್ಭದಲ್ಲಿ ಗೆರಟೆಯಿಂದಲೇ ಆಕರ್ಷಕ ಹುಲಿ ಮುಖವರ್ಣಿಕೆಯನ್ನು ರಚಿಸಿದ್ದಾರೆ. ತೆಂಗಿನ ಗೆರಟೆ, ಗೆರಟೆ ಹುಡಿ, ಅಂಟು ಬಳಸಿ ಹುಲಿ ಮುಖವಾಡ ರಚಿಸಿದ್ದಾರೆ. ಸುಮಾರು 17 ದಿನಗಳ ಪರಿಶ್ರಮದಿಂದ ಸುಂದರವಾದ ಘರ್ಜಿಸುವ ಹುಲಿ ಮುಖ ಸಿದ್ದಗೊಂಡಿದೆ. ವ್ಯರ್ಥ ವಾಗಿ ಹೋಗುವ ತೆಂಗಿನ ಗೆರಟೆಳನ್ನು ಬಳಸಿಕೊಂಡು ಆಕರ್ಷಕ ಕಲಾಕೃತಿಗಳನ್ನು ಸಚ್ಚೀಂದ್ರ ಅವರು ರಚಿಸುವ ಬಗ್ಗೆ ಇತ್ತೀಚೆಗೆ ವಿಜಯವಾಣಿ ವರದಿ ಪ್ರಕಟಿಸಿ ಗಮನ ಸೆಳೆದಿತ್ತು. ಇದೀಗ ಸಚ್ಚೀಂದ್ರ ಅವರ ಕೈಚಳಕದಲ್ಲಿ ಪ್ರಥಮ ಬಾರಿಗೆ ಹುಲಿ ಮುಖವರ್ಣಿಕೆ ತಯಾರಾಗಿದ್ದು, ಜನರನ್ನು ತನ್ನತ್ತ ಸೆಳೆಯುತ್ತಿದೆ.

Read More

ಬಂಟ್ವಾಳ: ಹಣಕಾಸಿನ ತೊಂದರೆಯಿಂದ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗದೇ ಅರ್ಧದಲ್ಲೇ ಬಾಕಿ ಉಳಿದಿದ್ದ ಬಡ ಮಹಿಳೆಯ ಮನೆ ನಿರ್ಮಾಣದ ಕೆಲಸವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸುಭಾಷ್ ನಗರ ಸಜೀಪಮೂಡ ಇದರ ಬೊಳ್ಳಾಯಿ ಉಪ ಸಮಿತಿ ಪೂರ್ಣಗೊಳಿಸಿ ಮಾನವೀಯತೆ ಮೆರೆದಿದೆ. ಸೋಮವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗೃಹಪ್ರವೇಶ ಮಾಡಿ ಗಣ್ಯರ ಉಪಸ್ಥಿತಿಯಲ್ಲಿ ಮನೆಯನ್ನು ಮನೆಯೊಡತಿಗೆ ಹಸ್ತಾಂತರಿಸಿದೆ. ಸಜೀಪಮೂಡ ಗ್ರಾಮದ ನಿವಾಸಿ ವಿಮಲ ಎಂಬವರ ಪತಿ ಎರಡೂವರೆ ವರ್ಷಗಳ ಹಿಂದೆ ನಿಧನರಾಗಿದ್ದರು. ಕೂಲಿ ಕೆಲಸ ಮಾಡಿ ತನ್ನೋರ್ವ ಮಗಳೊಂದಿಗೆ ಬಾಡಿಗೆ ಮನೆಯಲ್ಲಿ ಬಡತನದಲ್ಲಿ ಜೀವನ ನಡೆಸುತ್ತಿದ್ದ ಅವರು ಸ್ವಂತ ಸೂರು ನಿರ್ಮಿಸಬೇಕು ಎನ್ನುವ ಕನಸಿನೊಂದಿಗೆ ಮಿತ್ತಮಜಲು ಬಳಿಯ ನೈಪಾಡಿ ಎಂಬಲ್ಲಿ ೩ ಸೆಂಟ್ಸ್ ಜಮೀನು ಖರೀದಿಸಿ ಸ್ಥಳೀಯ ಪಂಚಾಯತಿ ಮುಖಾಂತರ ವಸತಿ ಯೋಜನೆಯಡಿ ಮನೆ ನಿರ್ಮಿಸಲು ಮುಂದಾಗಿದ್ದರು. ಆದರೆ ಹಣಕಾಸಿನ ಅಡಚಣೆಯಂದ ಮನೆ ಪೂರ್ಣಗೊಳಿಸಲು ಸಾಧ್ಯವಾಗದೆ ಪರಿತಪಿಸಬೇಕಾಯಿತು. ಈ ಬಗ್ಗೆ ಮಾಹಿತಿ ಪಡೆದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸುಭಾಷ್ ನಗರ ಸಜೀಪಮೂಡ…

Read More

ಬಂಟ್ವಾಳ: ಪ್ರಾದೇಶಿಕವಾರು ಜಾತಿ ವಿಂಗಡನೆಯಲ್ಲಿ ನಾವು ಸೋತಿದ್ದೇವೆ. ವಿಶ್ವದಲ್ಲಿ ನಾವು ಗರಿಷ್ಠ ಸಂಖ್ಯೆಯಲ್ಲಿದ್ದರೂ ಜಾತಿಗಣತಿಯಲ್ಲಿ ನಾವು ಕನಿಷ್ಟರಾಗಿದ್ದೇವೆ ಅದಕ್ಕೆ ಕಾರಣ ನಮ್ಮ ಕುಲ ಕಸುಬು ಒಂದೇ ಆಗಿದ್ದರೂ ಬೇರೆ ಬೇರೆ ಜಾತಿ ಹೆಸರಲ್ಲಿ ನಮ್ಮ ಕುಲ ಬೇರ್ಪಡಿಸಿದೆ, ನಮ್ಮ ಒಗ್ಗಟ್ಟಿನ ಶಕ್ತಿ ಇನ್ನೂ ಹೆಚ್ಚ ಬೇಕು ಎಂದು ಶ್ರೀ ಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.ಅವರು ಬಿ.ಸಿ.ರೋಡು ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಕರ್ನಾಟಕ ರಾಜ್ಯ ಕುಲಾಲ- ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇದರ ೨೦೨೩-೨೫ ರ ಸಾಲಿನ ನೂತನ ಆಡಳಿತ ಸಮಿತಿಯ ಪದ ಪ್ರದಾನ, ನೂತನ ಕಛೇರಿಯ ಉದ್ಘಾಟನೆ ಹಾಗೂ ಜಿಲ್ಲಾ ಮಟ್ಟದ ಒಸರ್ದ ಕಂಡೊಡು ಕೆಸರ್ದ ಗೊಬ್ಬುಲು ಎನ್ನುವ ಕೆಸರುಗದ್ದೆ ಪಂದ್ಯಾಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು. ಮುಳಿಯ ಶ್ರೀ ವೈಷ್ಣವಿ ಆದಿಶಕ್ತಿ ಕ್ಷೇತ್ರದ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದ ಸಂಘಟನೆಗಳು ದುಂದುವೆಚ್ಚವನ್ನು ಬಿಟ್ಟು…

Read More

ಬಂಟ್ವಾಳ: ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪ ಮೂಡ ಇದರ ಪ್ರೌಢಶಾಲಾ ವಿಭಾಗದ ಮೂರು ದಿನಗಳ ಚಿಗುರು ವ್ಯಕ್ತಿತ್ವ ವಿಕಸನ ಶಿಬಿರವನ್ನು ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಅಧ್ಯಕ್ಷೆ ರಮಾ ಜಿ. ಆಚಾರ್ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಿ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಪೆರ್ವ ಅಧ್ಯಕ್ಷತೆ ವಹಿಸಿದ್ದರು. ‌ವೇದಿಕೆಯಲ್ಲಿ ಶಿಕ್ಷಣ ಸಂಯೋಜಕಿ ಸುಜಾತ ಕುಮಾರಿ, ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ., ಹಿರಿಯ ವಿದ್ಯಾರ್ಥಿ ಸಂದೀಪ್ ಸಾಲ್ಯಾನ್, ಎಸ್ ಡಿಎಂ ಸಿ ಸದಸ್ಯ ಸೀತಾರಾಮ ಅಗೋಳಿಬೆಟ್ಟು, ಸಂಪನ್ಮೂಲ ವ್ಯಕ್ತಿ ಶೀನ ನಾಡೋಳಿ ಮೊದಲಾದವರು ಉಪಸ್ಥಿತರಿದ್ದರು. ಉಪಪ್ರಾಂಶುಪಾಲೆ ಆಲಿಸ್ ಪಾಯಿಸ್ ಸ್ವಾಗತಿಸಿದರು, ಶಿಬಿರ ಸಂಯೋಜಕ ಬಾಲಕೃಷ್ಣ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಚಕರಾದ ಸುಲೋಚನ ಭಟ್ ವಂದಿಸಿದರು, ವೆಂಕಟರಮಣ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

Read More

ಬಂಟ್ಚಾಳ: ಲಯನ್ಸ್ ಕ್ಲಬ್ ಕೊಳ್ನಾಡು – ಸಾಲೆತ್ತೂರು ಇಲ್ಲಿಗೆ ಲಯನ್ಸ್ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿ ಅವರ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು.ಸಭಾಕಾರ್ಯಕ್ರಮದಲ್ಲಿ ಅವರು ಮಾತನಾಡಿ ಕಾನೂನು ಹಾಗೂ ಶಿಸ್ತಿನ ಮೂಲಕ ವ್ಯಕ್ತಿತ್ವ ನಿರ್ಮಾಣಗೊಳ್ಳುತ್ತದೆ. ನಾವೆಲ್ಲರೂ ಲಯನ್ಸ್ ನ ಒಂದೊಂದು ಬಿಂದುಗಳು. ಲಯನ್ಸ್ ಮೂಲಕ ನಮ್ಮ ಪ್ರಯತ್ನಗಳು, ಸೇವಾ ಕಾರ್ಯಗಳು ಸಾಗಲಿ ಇದರಿಂದ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಪ್ರಯೋಜನವಾಗುತ್ತದೆ ಎಂದು ತಿಳಿಸಿದರು.ಉತ್ತಮ ನಾಯಕರು ನಮ್ಮ ಕ್ಲಬ್ ನಲ್ಲಿದ್ದಾರೆ. ಪ್ರಾಮಾಣಿಕರಾಗಿ ಕ್ಲಬ್ ನ ಬೆಳವಣಿಗೆಗೆ ಸಹಕರಿಸುವವರಿದ್ದಾರೆ, ಇಂತಹ ಕ್ಲಬ್ ನ ಸದಸ್ಯನಾದ ನಾನು ಪ್ರಾಂತೀಯ ಅಧ್ಯಕ್ಷನಾಗಿರುವುದು ನನಗೆ ಹೆಮ್ಮೆ ಎಂದರು. ಇದೇ ಸಂದರ್ಭ ಪ್ರಾಂತೀಯ ಅಧ್ಯಕ್ಷ ರಮನಾಂದ ನೂಜಿಪ್ಪಾಡಿ ದಂಪತಿಯನ್ನು ಸನ್ಮಾನಿಸಲಾಯಿತು. ಪ್ರಾಂತೀಯ ರಾಯಭಾರಿ ದಾಮೋದರ ಬಿ.ಎಂ. ಮಾತನಾಡಿ ಲಯನ್ಸ್ ಕ್ಲಬ್ ಕೊಳ್ನಾಡು – ಸಾಲೆತ್ತೂರು ಕಾಐವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ವೇದಿಕೆಯಲ್ಲಿ ಪ್ರಾಂತೀಯ ಪ್ರಥಮ ಮಹಿಳೆ ಸಂಧ್ಯಾ ರಮಾನಂದ, ಪ್ರಾಂತೀಯ ಸಂಯೋಜಕ ವಿಜಯ ರೈ ಕೆ, ಎರಡನೇ ವಲಯಾಧ್ಯಕ್ಷ ಡೊನಾಲ್ಡ್ ಬಂಟ್ವಾಳಅಮ್ಟೂರು…

Read More

ಬಂಟ್ವಾಳ: ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಪಾಣೆಮಂಗಳೂರಿನ ಹಳೆ ಉಕ್ಕಿನ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಸ್ಥಳೀಯರೊಬ್ಬರು ಭಾನುವಾರ ರಾತ್ರಿ ಸೇತುವೆಯಲ್ಲಿ ಬಿರುಕನ್ನು ಗಮನಿಸಿ ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ತಕ್ಷಣ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಘನ ವಾಹನಗಳು ಸೇತುವೆಯಲ್ಲಿ ಸಂಚರಿಸದಂತೆ ನಿರ್ಭಂದ ವಿಧಿಸಲು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾಣೆಮಂಗಳೂರಿನ ಹಳೆಯ ಉಕ್ಕಿನ‌ಸೇತುವೆ 1914 ರಲ್ಲಿ ನಿರ್ಮಾಣಗೊಂಡಿದ್ದು ಶತಮಾನ ಪೂರೈಸಿದೆ. ಅವಿಭಜಿತ ದ.ಕ. ಜಿಲ್ಲೆಯ ಮೊದಲ ಸಂಪರ್ಕ ಕೊಂಡಿ ಎನ್ನುವ ಹೆಗ್ಗಲಿಕೆಯೂ ಈ ಸೇತುವೆಗಿದೆ.

Read More

ಬಂಟ್ವಾಳ: ಶ್ರೀ ಶಾರದಾ ಸೇವಾ ಪ್ರತಿಷ್ಠಾನ ತುಂಬೆ ಇದರ ಆಶ್ರಯದಲ್ಲಿ ನಡೆಯಲಿರುವ 23ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ತುಂಬೆಯ ಶ್ರೀ ಶಾರದಾ ಸಭಾ ಭವನದಲ್ಲಿ ನಡೆಯಿತು. ಈ ಸಂದರ್ಭ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬಿ ತುಂಬೆ, ಕೋಶಾಧಿಕಾರಿ ಸೋಮಪ್ಪ ಕೋಟ್ಯಾನ್, ಉಪಾಧ್ಯಕ್ಷೆ ಶೋಭಾ ಗೋಪಾಲ್ ಮೈಂದಾನ್, ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಪೂಜಾರಿ ಕುಮ್ಡೇಲ್, ಪ್ರಧಾನ ಕಾರ್ಯದರ್ಶಿ ವಿನೋದ್ ಬೊಳ್ಳಾರಿ, ಕೋಶಾಧಿಕಾರಿ ಮನೋಹರ್ ಕೊಟ್ಟಾರಿ, ಉಪಾಧ್ಯಕ್ಷರಾದ ಸದಾನಂದ ಕುಲಾಲ್ ಕೋಡಿಯಡ್ಕ ಸೇರಿದಂತೆ ಪ್ರತಿಷ್ಠಾನದ ಟ್ರಸ್ಟಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Read More

ಬಂಟ್ವಾಳ: ಕರ್ನಾಟಕ ರಾಜ್ಯ ಕುಲಾಲ-ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಬಂಟ್ವಾಳ ವಿಧಾನಸಭಾ ಕ್ಷೇತ್ರ ಇದರ 2023-25 ನೇ ಪದ-ಪ್ರಧಾನ ಸಮಾರಂಭ ಮತ್ತು ಜಿಲ್ಲಾ ಮಟ್ಟದ ಕೆಸರುಗದ್ದೆ ಪಂದ್ಯಾಟ ಹಾಗೂ ನೂತನ ಕಛೇರಿ ಉದ್ಘಾಟನೆ ಕಾರ್ಯಕ್ರಮ ಅ.08 ರಂದು ಭಾನುವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದೆ. ಬೆಳಗ್ಗೆ ಗಂಟೆ 8.30ಕ್ಕೆ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಮುಳಿಯ ಶ್ರೀ ವೈಷ್ಣವಿ ಆದಿಶಕ್ತಿ ಕ್ಷೇತ್ರದ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ನಿತೀಶ್‌ ಕುಲಾಲ್ ಪಲ್ಲಿಕಂಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಭಾರತ ಕುಂಬಾರರ ಫೆಡರೇಶನ್ ಅಧ್ಯಕ್ಷ ಡಾ. ಶಿವಕುಮಾರ್‌ ಚೌಡಶೆಟ್ಟಿ, ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆಯ ಸ್ಥಾಪಕ ಅಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್‌ ಉಳ್ತೂರು, ನೇಪಾಳದ…

Read More

ಬಂಟ್ವಾಳ: ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘ ಇದರ 25ನೇ ವಾರ್ಷಿಕ ಮಹಾಸಭೆಯು ಅ.8ರಂದು ಆದಿತ್ಯವಾರ ಮಧ್ಯಾಹ್ನ 2ಕ್ಕೆ ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ನಡೆಯಲಿದೆ. ತಾಲೂಕಿನ ಎಲ್ಲಾ ಪರಿಶಿಷ್ಟ ಜಾತಿ, ಪಂಗಡದ ಸಂಘ ಸಂಸ್ಥೆಗಳು, ಸಮುದಾಯದವರು, ಮತ್ತು ದಲಿತ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷ ಕೆ. ಸತೀಶ್ ಅರಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More