Author: admin

ಬಂಟ್ವಾಳ: ಇತಿಹಾಸ ಪ್ರಸಿದ್ದ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಅಷ್ಡಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದ್ದೂರಿ ಹೊರೆಕಾಣಿಕೆ ಮೆರವಣಿಗೆಗೆ ಮಾರ್ನಬೈಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಭಾನುವಾರ ಸಂಜೆ ಚಾಲನೆ ನೀಡಿದರು.ಮಾರ್ನಬೈಲು ಮುಖ್ಯ ರಸ್ತೆಯ ಮೂಲಕ ದೇವಸ್ಥಾನಕ್ಕೆ ಸಾಗಿ ಬಂದ ಮೆರವಣಿಗೆಗೆ ಗೊಂಬೆ ಕುಣಿತ, ಚೆಂಡೆ ವಾದನ, ಕೊಂಬು ವಾದ್ಯ ವಾದನ, ತಾಲೀಮ್ ತಂಡ, ಭಜನಾ ತಂಡ, ಪೂರ್ಣ ಕುಂಭ ಕಲಶ ಹೊತ್ತ ಮಹಿಳೆಯರ ತಂಡ , ಸುಡು ಮದ್ದು ಪ್ರದರ್ಶನ ವಿಶೇಷ ಮೆರುಗು ನೀಡಿತು.ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ರಾಜೇಶ್ ನಾಯ್ಕ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಶ್ ಜಿ.ಶೆಟ್ಟಿ ದಳಂದಿಲ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿರಾಜ ರಾವ್ ನೂಯಿ, ಕಾರ್ಯಧ್ಯಕ್ಷ ಕೆ.‌ ವಿಶ್ವನಾಥ ಆಳ್ವ ಕಾಂತಾಡಿಗುತ್ತು, ಕಾರ್ಯನಿರ್ವಾಹಣಾಧಿಕಾರಿ ಜಯಮ್ಮ ಪಿ.,…

Read More

ಚಿತ್ರ: ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಬಂಟ್ವಾಳ: ತಾಲೂಕಿನ ಬಿ.ಸಿ.ರೋಡ್ ಚಂಡಿಕಾನಗರದಲ್ಲಿರುವ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರೋತ್ಸವ ಫೆ.22ರಿಂದ 28ರವರೆಗೆ ನಡೆಯುವ ಹಿನ್ನೆಲೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ಕ್ಷೇತ್ರದಲ್ಲಿ ನಡೆಯಿತು. ಉದ್ಯಮಿ ರವಿ ಶೆಟ್ಟಿ ಕತಾರ್ ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಕೇಶ್ ಮಲ್ಲಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ, ಕೋಶಾಧಿಕಾರಿ ಐತಪ್ಪ ಆಳ್ವ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ಚರಣ್ ಜುಮಾದಿಗುಡ್ಡೆ, ಪ್ರದೀಪ್ ರಾವ್ ಬಂಟ್ವಾಳ, ಪ್ರಧಾನ ಕಾರ್ಯದರ್ಶಿ ಬಿ.ರಾಮಚಂದ್ರ ರಾವ್, ಜೊತೆ ಕಾರ್ಯದರ್ಶಿ ಐತಪ್ಪ ಪೂಜಾರಿ, ಕೋಶಾಧಿಕಾರಿ ಸಂಕಪ್ಪ ಶೆಟ್ಟಿ ಸಹಿತ ವಿವಿಧ ಸಮಿತಿಗಳ ಪ್ರಮುಖರು ಹಾಜರಿದ್ದರು.

Read More

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕಾಪು ಶ್ರೀ ಉಮಾಮಹೇಶ್ವರ ದೇವಸ್ಥಾನದ ಪುನರ್ ನಿರ್ಮಾಣದ ಪ್ರಯುಕ್ತ ನೂತನ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು. ಉಡುಪಿ ಅದಮಾರು ಮಠದ ಕಿರಿಯ ಯತಿವರ್ಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರು ಶಿಲಾನ್ಯಾಸ ನೆರವೇರಿಸಿದರು. ಬಳಿಕ ನಡೆದ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಆಶೀರ್ವಚನ ನೀಡಿ ಮಾತನಾಡಿ, ಪ್ರಕೃತಿಯಲ್ಲಿ ದೇವರನ್ನು ಕಂಡ ಸಂಸ್ಕೃತಿ ನಮ್ಮದು. ಪ್ರಕೃತಿ ಆರಾಧನೆ ಮೂಲಕ ದೇವರನ್ನು ಕಾಣಬೇಕು.ಪ್ರಕೃತಿಗೆ ಹಾನಿಯಾಗದಂತೆ ದೇವಸ್ಥಾನ ನಿರ್ಮಾಣವಾಗುವ ಮೂಲಕ ಮಾದರಿ ಬ್ರಹ್ಮಕಲಶೋತ್ಸವ ನಡೆಯಬೇಕು ಎಂದು ನುಡಿದರು.ಶ್ರೀ ಕ್ಷೇತ್ರ ಕಟೀಲಿನ ಆನುವಂಶಿಕ ಪ್ರ.ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ ಅವರು ಆಶೀರ್ವಚನ ನೀಡಿದರು. ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರು ಅಧ್ಯಕ್ಷತೆ ವಹಿಸಿದ್ದರು.ಕ್ಷೇತ್ರದ ತಂತ್ರಿಗಳಾದ ಶ್ರೀಪಾದ ಪಾಂಗಣ್ಣಾಯ ಪ್ರಸ್ತಾವಿಸಿದರು. ಅಂಡಿಂಜೆ ಶ್ರೀ ಸುಽಂದ್ರ ವಿಷ್ಣುತೀರ್ಥ ಪ್ರಭು ಶ್ರೀ ಪಾದರು,ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಮುದಾಯ ಮತ್ತು ಅಭಿವೃದ್ಧಿ ವಿಭಾಗ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಇರ್ವತ್ತೂರು ಗ್ರಾ.ಪಂ.ಅಧ್ಯಕ್ಷ…

Read More

ಬಂಟ್ವಾಳ: ನಾನು ಶ್ರೇಷ್ಠ ಎನ್ನುವ ಪೈಪೋಟಿ ಬಿಟ್ಟು ಹೊಂದಾಣಿಕೆ, ಸಾಮರಸ್ಯದಿಂದ‌ ಬದುಕುವುದೇ ಮದುವೆಯ ಸಾರ ಎಂದು ಪುತ್ತೂರು ಶ್ರೀವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.ಬಂಟ್ವಾಳ ಬೈಪಾಸ್ ನಿತ್ಯಾನಂದ ನಗರ ಶ್ರೀಸದ್ಗುರು ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರ ಟ್ರಸ್ಟ್ ನ ಸುವರ್ಣ ಮಹೋತ್ಸವದ ವರ್ಷಾಚರಣೆಯ ಪ್ರಯುಕ್ತ ಶುಕ್ರವಾರ ನಡೆದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಧರ್ಮ ದೇಶದ ಆತ್ಮವಿದ್ದಂತೆ, ಧರ್ಮದ ಆಚರಣೆಯನ್ನು ಮುಂದಿನ ತಲೆಮಾರಿಗೆ ರವಾನಿಸುವ ಕಾರ್ಯ ಆಗಬೇಕಾಗಿದೆ ಎಂದರು. ಸಾಮೂಹಿಕ ವಿವಾಹದ ಮೂಲಕ ಆಗುವ ಸರಳ ವಿವಾಹ ತ್ಯಾಗದ ಜೀವನಕ್ಕೂ ಪ್ರೇರಣೆ ಎಂದರು.ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಡುಪಿ,ಮುಂಬೈ ಗಣೇಶ್ ಪುರಿ ಶ್ರೀನಿತ್ಯಾನಂದ ಸ್ವಾಮಿ ಸಮಾಧಿ ಮಂದಿರದ ಪ್ರಧಾನ ಅರ್ಚಕ ನಂದು ಮಹಾರಾಜ್,ಹಿಮಾಚಲ ಪ್ರದೇಶದ ವಿಜಯಾನಂದ ಮಹಂತ್ ಸರಸ್ವತಿ ಸ್ವಾಮೀಜಿ, ಕಾಂಞಗಾಡ್ ಗುರುವನ ಶ್ರೀವಿದ್ಯಾನಂದ ಭಾರತಿ ಸ್ವಾಮೀಜಿ,ಉಡುಪಿ ಶ್ರೀ ರಾಜರಾಜೇಶ್ವರೀ ಸಂಸ್ಥಾನದ ವಿಶ್ವಾಧೀ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮುಂಬೈಯ ಉದ್ಯಮಿ,ಸಮಾಜಿಕ ಕಾರ್ಯಕರ್ತ…

Read More

ಬಂಟ್ವಾಳ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವವಾದುದು ಎಂದು ಬಂಟ್ವಾಳಜೆಎಮ್‌ಎಫ್‌ನ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ವೈ ಕಳವಾರ ಇವರು ತಿಳಿಸಿದರು. ಮತದಾರ ಸಾಕ್ಷಾರತಾ ಸಂಘ, ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ಬಂಟ್ವಾಳ, ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ, ಬಂಟ್ವಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪಾರದರ್ಶಕ ಆಡಳಿತ ವ್ಯವಸ್ಥೆ ರೂಪಿಸಲು ಸಂವಿಧಾನವು ನಮಗೆ ಅತ್ಯಮೂಲ್ಯವಾದ ಮತದಾನದ ಹಕ್ಕು ನೀಡಿದೆ. 18ವರ್ಷ ತುಂಬಿದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಶಿವಪ್ರಕಾಶ್‌ ಮಾತನಾಡಿ ಪ್ರಪಂಚದ ಹಲವಾರು ದೇಶಗಳಲ್ಲಿ ಮತದಾನದ ಹಕ್ಕನ್ನು ಪಡೆಯಲು ಕೆಲವು ನಿಬಂಧನೆಗಳಿದ್ದು, ಭಾರತವು ಈ ಪಟ್ಟಿಯಲ್ಲಿ ಅತ್ಯಂತ ವಿಶಿಷ್ಟವಾದ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಪ್ರಜಾಪ್ರಭುತ್ವದಲ್ಲಿ ಮತದಾನ ಎಂಬುವುದು ಪ್ರಜೆಗಳಿಗಿರುವ ಅತ್ಯಂತ ಪ್ರಬಲವಾದ ಅಸ್ತ್ರ. ತಮ್ಮ ನಾಯಕನನ್ನು ತಾವೇ ಆಯ್ಕೆ ಮಾಡಿಕೊಳ್ಳುವ ಒಂದು ಅಪರೂಪದ ಅವಕಾಶವನ್ನು ಮತದಾನ ನೀಡುತ್ತದೆ. ಪ್ರತಿಯೊಬ್ಬನೂ ಕೂಡ…

Read More

ಬಂಟ್ವಾಳ: ಹಿರಿಯ ಉದ್ಯಮಿ, ಸಮಾಜ ಸೇವಕ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ 2022-23 ರ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಪಚ್ಚಿನಡ್ಕ ಕೆ.ಸೇಸಪ್ಪ ಕೋಟ್ಯಾನ್ (75) ಜನವರಿ 26ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು. ಅವರು ಪತ್ನಿ ಚಂದ್ರಾವತಿ, ಪುತ್ರ ಭುವನೇಶ್ ಪಚ್ಚಿನಡ್ಕ, ಹಾಗು ನಾಲ್ಕು ಹೆಣ್ಣುಮಕ್ಕಳ ಸಹಿತ ಬಂಧುಮಿತ್ರರನ್ನು ಅಗಲಿದ್ದಾರೆ. .ಶುಭ ಬೀಡಿಗಳು ಹೆಸರಿನಲ್ಲಿ ಬೀಡಿ ಉದ್ಯಮವನ್ನು ಆರಂಭಿಸಿ ಸಹಸ್ರಾರು ಮಂದಿಗೆ ಉದ್ಯೋಗದಾತರಾದ ಅವರು, ರಿಕ್ಷಾ, ಸ್ಕೂಟರ್ ಮೂಲಕ ಮಾರುಕಟ್ಟೆ ಮಾಡಿದ್ದು ಹಂತಹಂತವಾಗಿ ಅದು ರಾಜ್ಯವ್ಯಾಪಿ ಬೆಳೆದದ್ದು ಇತಿಹಾಸ. ಶುಭಲಕ್ಷ್ಮೀ ಟ್ರಾವೆಲ್ಸ್ ಮೂಲಕ ಬಸ್ ಉದ್ಯಮವನ್ನೂ ಆರಂಭಿಸಿ, ಹಳ್ಳಿಪ್ರದೇಶದ ಜನರಿಗೆ ನೆರವಾದರು. ಸಿಹಿ ಪಾನೀಯ ಘಟಕ, ಶುಭಲಕ್ಷ್ಮೀ ಆಡಿಟೋರಿಯಂ ಸಭಾಂಗಣವನ್ನು ಆರಂಭಿಸಿ ಗಮನ ಸೆಳೆದ ಅವರು,ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದರು. ಸತತ 26 ವರ್ಷಗಳಿಂದ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿದ್ದರು. ಪಚ್ಚಿನಡ್ಕದ ಆದಿ ಮೊಗೇರ್ಕಳ ಕೊರಗಜ್ಜ ಕ್ಷೇತ್ರ, ಕೈಕಂಬ ಶ್ರೀ ಕ್ಷೇತ್ರ…

Read More

ಬಂಟ್ವಾಳ,ಜ. 26 : ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರಳಕಟ್ಟೆ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಮಾಣಿ ಕ್ಲಸ್ಟರ್ ಇವುಗಳ ಸಹಯೋಗದೊಂದಿಗೆ ಎರಡು ದಿನಗಳ ಕಲಿಕಾ ಹಬ್ಬವು ನೇರಳಕಟ್ಟೆ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ನೇರಳಕಟ್ಟೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎನ್.ಕೆ.ಅಬೂಬಕ್ಕರ್ (ಅಬ್ಬು) ಅಧ್ಯಕ್ಷತೆ ವಹಿಸಿದ್ದರು.ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಕೀಲಾ ಕೆ.ಪೂಜಾರಿ, ಸದಸ್ಯರಾದ ಕೆ. ಶ್ರೀಧರ ರೈ, ಲತೀಫ್ ನೇರಳಕಟ್ಟೆ, ಧನುಂಜಯ ಗೌಡ, ಸಮಿತಾ ಡಿ. ಪೂಜಾರಿ, ಪ್ರೇಮ, ಲಕ್ಷ್ಮಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಷಾ, ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಪೂಜಾರಿ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಬಾಲಕೃಷ್ಣ ಆಳ್ವ, ನೇರಳಕಟ್ಟೆ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಕೆ. ನಿರಂಜನ್ ರೈ, ಮಾಣಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್, ಕಾರ್ಯಕ್ರಮ ನೋಡೆಲ್ ಅಧಿಕಾರಿ, ಶಂಭೂರು ಶಾಲಾ ಮುಖ್ಯ ಶಿಕ್ಷಕ ಕಮಲಾಕ್ಷ…

Read More

ಬಂಟ್ವಾಳ: ರೈಡ್ ಫಾರ್ ರೋಟರಿ ಕಾರ್ಯಕ್ರಮದಂಗವಾಗಿ 13 ದೇಶಗಳ 41 ಮಂದಿ ರೋಟರಿ ಸದಸ್ಯರು ಬಂಟ್ವಾಳ ರೋಟರಿ ಕ್ಲಬ್ ಗೆ ಭೇಟಿ ನೀಡಿದರು.ಬೈಕ್ ನಲ್ಲಿ ಆಗಮಿಸಿದ ರೋಟರಿ ಸದಸ್ಯರನ್ನು ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಮತ್ತವರ ತಂಡ ಬಿ.ಸಿ.ರೋಡಿನ ರೋಟರಿ ಸಭಾಂಗಣದ ಬಳಿ ಬರಮಾಡಿಕೊಂಡರು. ಬಳಿಕ ನಡೆದ ಜಂಟಿ ಸಭೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರು ರೋಟರಿ ಕ್ಲಬ್ ಬಂಟ್ವಾಳದ ಕಾರ್ಯಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭ ವಿದೇಶಿ ರೋಟರಿ ಸದಸ್ಯರು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು. ರೈಟ್ ಫಾರ್ ರೋಟರಿ ಚೇರ್ ಮನ್ ಕೃಷ್ಣ ನಾರಾಯಣ್ ಮುಳಿಯ ಮಾತನಾಡಿದರು. ವೇದಿಕೆಯಲ್ಲಿ ಸಹಾಯಕ ಗವರ್ನರ್ ಮಂಜುನಾಥ ಆಚಾರ್ಯ, ರೈಟ್ ಫಾರ್ ರೋಟರಿ ಕಾರ್ಯದರ್ಶಿ ಪಶುಪತಿ ಶರ್ಮ, ಉಪಸ್ಥಿತರಿದ್ದರು. ರೋಟರಿ ಕ್ಲಬ್ ಬಂಟ್ವಾಳದ ಕಾರ್ಯದರ್ಶಿ ವಂದಿಸಿದರು.

Read More

ಬಂಟ್ವಾಳ: ದೇವಸ್ಥಾನಗಳು ಆಧ್ಯಾತ್ಮಕ್ಕೆ ಮಾತ್ರ ಸೀಮಿತವಾಗ ಬಾರದು. ಭಗವಾನ್ ಶ್ರೀ ನಿತ್ಯಾನಂದರು ಸಾಮಾಜಿಕ ಆಂದೋಲನ ಮಾಡಿದವರಾಗಿದ್ದು ದೇವಸ್ಥಾನಗಳು ಅವರ ಚಿಂತನೆಯ ಹಾದಿಯಲ್ಲಿಯೇ ಸಾಗಬೇಕಿದೆ ಎಂದು ಕೊಪ್ಪ ಗೌರಿಗದ್ದೆಯ ಶ್ರೀ ದತ್ತಾಶ್ರಮ ಸ್ವರ್ಣಪೀಠಿಕಾಪುರದ ಅವಧೂತ ಶ್ರೀ ವಿನಯ ಗುರೂಜಿ ಹೇಳಿದರು.ಬಂಟ್ವಾಳ ಬೈಪಾಸ್‌ನಲ್ಲಿರುವ ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರ ಟ್ರಸ್ಟ್‌ನ ಸುವರ್ಣ ಮಹೋತ್ಸವದ ವರ್ಷಚರಣೆ ಪ್ರಯುಕ್ತ ನೂತನ ಮಂದಿರ ಲೋಕಾರ್ಪಣೆ, ಶ್ರೀ ಗುರುವರ್ಯರ ಪಂಚಲೋಹದ ವಿಗ್ರಹ ಪ್ರತಿಷ್ಠಾ ಮಹೋತ್ಸವ ಹಾಗೂ ಉಚಿತ ಸಾಮೂಹಿಕ ವಿವಾಹದ ಪ್ರಯುಕ್ತ ಗುರುವಾರ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.ಧರ್ಮಕ್ಕೆ ನಿವೃತ್ತಿ ಇಲ್ಲ, ಪರರ ಸೇವೆಗಾಗಿ ಬದುಕಿದಾಗ ನಮಗೆ ಆತ್ಮತೃಪ್ತಿ ಸಿಗುತ್ತದೆ. ನಾವು ಎಲ್ಲವನ್ನೂ ದೇವರಲ್ಲಿ ಕೇಳುತ್ತಿದ್ದೇವೆ ವಿನಃ ದೇವರ ತರ ಬದುಕುತ್ತಿಲ್ಲ ಎಂದು ತಿಳಿಸಿದರು.ಮಂದಿರ ನಿರ್ಮಾಣದಲ್ಲಿ ಸ್ವಯಂ ಸೇವಕರ ಶ್ರಮ ಕಾಣುತ್ತಿದೆ. ದೇವಸ್ಥಾನ ನಿರ್ಮಾಣ ಪುಣ್ಯದ ಕೆಲಸವಾಗಿದ್ದು ದೇವಸ್ಥಾನ, ಅನ್ನದಾನ, ಗೋಶಾಲೆ ನಿರ್ಮಾಣಮಾಗಬೇಕಾದರೆ ನಾವು ಪುಣ್ಯ ಮಾಡಿರಬೇಕು ಎಂದು ತಿಳಿಸಿದರು. ಬಂಟ್ವಾಳದಲ್ಲಿ ಮೂರು ಭಗವಾನ್ ಶ್ರೀ…

Read More

ಬಂಟ್ವಾಳ: ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪಮೂಡ ಇಲ್ಲಿನ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ದಾನಿಗಳ ಸಹಕಾರದಿಂದ ನಿರ್ಮಿಸಲು ಉದ್ದೇಶಿಸಿರುವ ರಂಗ ಮಂದಿರ ನಿರ್ಮಾಣ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಯಿತು.ಸಜೀಪ ಮಾಗಣೆಯ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಶ್ರೀಕಾಂತ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ, ಎಸ್ ಡಿ ಎಂ ಸಿ ಸದಸ್ಯರಾದ ಸೀತಾರಾಮ ಅಗೊಳಿಬೆಟ್ಟು, ದಿನಕರ್, ರವಿ ಪಂಬದ, ನಳಿನಿ, ಪ್ರಮುಖರಾದ ವಿಶ್ವನಾಥ ಕೊಟ್ಟಾರಿ ಉಪಪ್ರಾಂಶುಪಾಲೆ ಜಯಲಕ್ಷ್ಮಿ ಪಿ.ಎನ್, ಶಾಲಾ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳಾದ ರವೀಣ ಬಂಗೇರ, ಶಿವರಾಮ ಮರ್ತಾಜೆ, ಪ್ರತಿಭಾ ಉಪಸ್ಥಿತರಿದ್ದರು.

Read More