Author: admin
ಬಂಟ್ವಾಳ: ನೇತ್ರಾವತಿ ಕಿನಾರೆಯಲ್ಲಿ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಸುಮಾರು 7 ಕೋ.ರೂ.ವೆಚ್ಚದಲ್ಲಿ ಭರದಿಂದ ಸಾಗುತ್ತಿದೆ. ಈಗಾಗಲೇ ಪ್ರಧಾನ ಗರ್ಭಗುಡಿ, ತೀರ್ಥಮಂಟಪದ ಮೇಲ್ಛಾವಣಿಗೆ ತಾಮ್ರದ ಹೊದಿಕೆಯ ಕಾರ್ಯ ಪೂರ್ಣಗೊಂಡಿದ್ದು, 2024ರ ಜ. 17ರಿಂದ 25ರವರೆಗೆ ಕ್ಷೇತ್ರದ ಬ್ರಹ್ಮಕಲಶೋತ್ಸವ ನೆರವೇರಲಿದೆ.ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಆಗಮ ಶಾಸ್ತ್ರಕ್ಕೆ ಪೂರಕವಾಗಿ ದೇವಸ್ಥಾನದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಈಗಾಗಲೇ ಸುಮಾರು 2.5 ಕೋ.ರೂ.ಗಳ ಕಾಮಗಾರಿಗಳು ಪೂರ್ಣಗೊಂಡಿದೆ. ಸುತ್ತಪೌಳಿಯ ಶಿಲಾಮಯ ಗೋಡೆಗಳು ಬಹುತೇಕ ಪೂರ್ಣಗೊಂಡಿದ್ದು, ಮೇಲ್ಛಾವಣಿಯ ದಾರುಶಿಲ್ಪದ ಕಾರ್ಯ ಪ್ರಗತಿಯಲ್ಲಿದೆ. ಧ್ವಜಸ್ತಂಭದ ತೈಲಾಧಿವಾಸ ನಡೆದಿದ್ದು, ಪ್ರಸ್ತುತ ಪ್ರತಿನಿತ್ಯವೂ ಭಕ್ತರು ಎಳ್ಳೆಣ್ಣೆ ಸಮರ್ಪಿಸುತ್ತಿದ್ದಾರೆ. ಪ್ರಧಾನ ಗರ್ಭಗುಡಿಯ ಮೇಲ್ಛಾವಣಿಗೆ ತಾಮ್ರದ ಹೊದಿಕೆಗೆ ಪ್ರತಿ ಮನೆಯ ಭಕ್ತರ ಸೇವೆ ಸಂದಾಯವಾಗಬೇಕು ಎನ್ನುವ ನಿಟ್ಟಿನಲ್ಲಿ ಕೂಪನ್ಗಳನ್ನು ನೀಡಲಾಗಿದ್ದು, ಜತೆಗೆ ಸ್ವರ್ಣಲೇಪಿತ ಪ್ರಧಾನ ಕಲಶಕ್ಕೂ ಪ್ರತಿ ಭಕ್ತರ ಸೇವೆಯ ನಿಟ್ಟಿನಲ್ಲಿ ದೇವಸ್ಥಾನದಲ್ಲಿ ಪ್ರತ್ಯೇಕ ಕಾಣಿಕೆ ಡಬ್ಬಿಯನ್ನಿಟ್ಟು ಭಕ್ತರ ಇಚ್ಛಾನುಸಾರ ಕಾಣಿಕೆ ನೀಡಲು ಜೀರ್ಣೊದ್ಧಾರ ಸಮಿತಿ ಅವಕಾಶ ಕಲ್ಪಿಸಿದೆ.…
ಬಂಟ್ವಾಳ: ಕಳೆದ ಒಂದು ವರ್ಷದಿಂದ ಸೇವಾಂಜಲಿ ಸಂಸ್ಥೆಯು ದಾನಿಗಳ ಸಹಕಾರದೊಂದಿಗೆ ನಿರಂತರವಾಗಿ ಕ್ಷಯ ರೋಗಿಗಳಿಗೆ ಸಮತೋಲನ ಆಹಾರದ ಕಿಟ್ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಬದ್ರುದ್ದೀನ್ ಹೇಳಿದರು.ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಗುರುವಾರ ಸೇವಾಂಜಲಿ ಸಭಾಗ್ರಹದಲ್ಲಿ ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ದವಸ ಧಾನ್ಯಗಳ ಆಹಾರದ ಕಿಟ್ ವಿತರಿಸಿ ಅವರು ಮಾತನಾಡಿದರು. ಕ್ಷಯ ರೋಗಿಗಳಲ್ಲಿ ಪ್ರೋಟಿನ್ ಅಂಶ ಹೆಚ್ಚಿಸುವ ಉದ್ದೇಶದಿಂದ ಸಮತೋಲನ ಆಹಾರವನ್ನು ನೀಡಲಾಗುತ್ತದೆ. ಆದ್ದರಿಂದ ಕ್ಷಯರೋಗಿಗಳು ಈ ಆಹಾರವನ್ನು ಸೇವಿಸಿ ಆರೋಗ್ಯ ಉತ್ತಮ ಪಡಿಸುವಂತೆ ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಮಾತನಾಡಿ ಸೇವಾಂಜಲಿ ಪ್ರತಿಷ್ಠಾನದ ಮೂಲಕ ಕೃಷ್ಣಕುಮಾರ್ ಪೂಂಜಾ ಅವರು ನಿರಂತರವಾಗಿ ಸೇವಾ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಕ್ಷಯ ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಅವರನ್ನು ಗುರುತಿಸಿ ದವಸ ಧಾನ್ಯಗಳ ಕಿಟ್ ನೀಡುತ್ತಿದ್ದಾರೆ. ಇದನ್ನು ಕ್ಷಯರೋಗಿಗಳು ಸದುಪಯೋಗಪಡಿಸಿಕೊಳ್ಳಬೇಕು…
ಬಂಟ್ವಾಳ: ಓಂಕಾರ ಸೇವಾ ಬಳಗ ದುರ್ಗಾನಗರ ಕುರಿಯಾಳ ಇದರ ದಶಮಾನೋತ್ಸವದ ಪ್ರಯುಕ್ತ ಕೆಸರ್ದ ಕಂಡೊಂಡು ಕುಸಾಲ್ದ ಗೊಬ್ಬು, ಸಾಧಕರಿಗೆ ಗೌರವಾರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮ ವನ್ನು ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಕೃಷ್ಣ ಅರಳಿತ್ತಾಯ ಉದ್ಘಾಟಿಸಿದರು, ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ವಿಜಯ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಂಚಾಯತಿ ಸದಸ್ಯ ರೂಪೇಶ್ ಕುಟೀಲ, ದ.ಕ.ಸೌಹಾರ್ದ ಸಹಕಾರಿ ಸಂಘ ಅಣ್ಣಳಿಕೆ ಇದರ ಉಪಾಧ್ಯಕ್ಷ ದೇವಪ್ಪ ಕುಲಾಲ್ ಪಂಜಿಕಲ್ಲು ಮೊದಲಾದವರು ಭಾಗವಹಿಸಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಉದ್ಯಮಿ ಧನರಾಜ್ ಶೆಟ್ಟಿ ಫರಂಗಿಪೇಟೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ತುಳುನಾಡ ಸಾಂಸ್ಕೃತಿಕ ವಿಮರ್ಶಕ ತಮ್ಮಣ್ಣ ಶೆಟ್ಟಿ, ನಮ್ಮ ಕುಡ್ಲ ವಾಹಿನಿಯ ವಾರ್ತವಾಚಕಿ ಡಾ ಪ್ರಿಯ ಹರೀಶ್, ಅಮ್ಟಾಡಿ ಗ್ರಾ.ಪಂ. ಸದಸ್ಯರಾದ ಹರೀಶ್ ಶೆಟ್ಟಿ ಪಡು, ಯಶೋಧ ಮೇಗಿನ ಕುರಿಯಾಳ, ಉದ್ಯಮಿ ದಿನೇಶ್ ಬಡಕೊಟ್ಟು, ಪತ್ರಕರ್ತ ಸಂದೀಪ್ ಸಾಲ್ಯಾನ್, ಮೆಸ್ಕಾಂ ಶಾಖಾಧಿಕಾರಿ ಯೋಗೀಶ್ ಅಂಚನ್, ಉದ್ಯಮಿ ರತ್ನಕರ ಬಳ್ಳಿ, ಚಿತ್ತಾರ ಡಿಜಿಟಲ್ಸ್ ನ ಚಿದಾನಂದ, ಓಂಕಾರ…
ಬಂಟ್ವಾಳ: ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ಮಕ್ಕಳು ಒಂದೇ ತರಗತಿಯಲ್ಲಿ ಕಲಿಯುತ್ತಿದ್ದು ಗಮನ ಸೆಳೆದಿದ್ದಾರೆ. ಶಾಲೆಯ ಎಂಟನೇ ತರಗತಿಯಲ್ಲಿ ಈ ಅವಳಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ಜವಳಿ ವಿದ್ಯಾರ್ಥಿಗಳಾಗಿದ್ದು, 5 ಜೋಡಿ ಅವಳಿ ಮಕ್ಕಳು ಒಂದೇ ಶಾಲೆಯ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವುದು ಅಚ್ಚರಿಯ ಸಂಗತಿಯಾಗಿದೆ.
ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ಬಿ.ಸಿ.ರೋಡಿನ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ಭಾನುವಾರ ನಡೆದ ಕುಲಾಲ ಗುರು ಸಮ್ಮಿಲನ, ಗುರುವಂದನೆ ಕಾರ್ಯಕ್ರಮ ಹಲವಾರು ವಿಶೇಷತೆಗಳೊಂದಿಗೆ ಗಮನ ಸೆಳೆಯಿತು.ಬೆಳಿಗ್ಗೆ ಕಟ್ಟಡ ಸಮಿತಿ ಗೌರವಾಧ್ಯಕ್ಷ ಕೃಷ್ಣಪ್ಪ ಬಿ. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನಾ ಆಟಗಳನ್ನು ನಡೆಸಲಾಯಿತು. ಶಿಕ್ಷಕರು, ಹಾಡಿ, ಕುಣಿದು, ವಿವಿಧ ಚಟುವಟಿಕೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಬಳಿಕ ಎಲ್ಲಾ ಶಿಕ್ಷಕರಿಗೆ ಆರತಿ ಬೆಳಗಿ, ಕುಂಕುಮ ಹರಶಿನ ಹಚ್ಚಿ, ಪುಷ್ಪ ಸಮರ್ಪಿಸಿ, ಶಾಲು, ಉಡುಗೊರೆ ನೀಡಿ ವಿನೂತನ ರೀತಿಯಲ್ಲಿ ಗುರುವಂದನೆ ಸಲ್ಲಿಸಲಾಯಿತು. ಇದೇ ಮೊದಲ ಬಾರಿಗೆ ಕುಲಾಲ ಸಂಘದ ವತಿಯಿಂದ ಕುಲಾಲ ಗುರು ಸಮ್ಮಿಲನ ಕಾರ್ಯಕ್ರಮ ನಡೆಯುತ್ತಿದ್ದು ಸಮುದಾಯದ ಶಿಕ್ಷಕ ವೃಂದ ಈ ವಿನೂತನ ಕಾರ್ಯಕ್ರದಿಮದ ಪುಳಕಿತಗೊಂಡಿತು. ಪ್ರತಿದಿನ ಮನೆ, ಶಾಲೆಯ ಒತ್ತಡದ ಕೆಲಸ ಮಧ್ಯೆ ಕುಲಾಲ ಗುರು ಸಮ್ಮಿಲನ ಕಾರ್ಯಕ್ರಮದ ಮೂಲಕ ವಿವಿಧಾ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶಿಕ್ಷಕರು ಮನೋಲ್ಲಾಸದಿಂದ ಸಂಭ್ರಮಿಸಿದರು.ಬಳಿಕ ನಡೆದ ಸಭಾ…
ಬಂಟ್ವಾಳ: ಪುರಸಭೆ ಹಾಗೂ ನಾಗರಿಕ ಕ್ರಿಯಾ ಸಮಿತಿ ವತಿಯಿಂದ ಸಂಚಯಗಿರಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. ನಾಗರಿಕ ಕ್ರಿಯಾ ಸಮಿತಿ ಅಧ್ಯಕ್ಷ ಸುರೇಶ್ ಬಂಗೇರ, ಪರಿಸರ ಪ್ರೇಮಿ ಎ. ದಾಮೋದರ್ ನೇತೃತ್ವ ವಹಿಸಿದ್ದರು. ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಆರೋಗ್ಯ ನಿರೀಕ್ಷಕ ರತ್ನಪ್ರಸಾದ್ ನಾಗರಿಕ ಕ್ರಿಯಾ ಸಮಿತಿ ಪದಾಧಿಕಾರಿಗಳು, ಸಂಚಯಗಿರಿ ನಾಗರಿಕರು, ಪುರಸಭೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯದಿಂದ ಸ್ವಚ್ಛತಾ ಕಾರ್ಯಕ್ರಮವು ಬಿ.ಸಿ.ರೋಡಿನ ಬೈಪಾಸ್ ಗಾಣದ ಪಡ್ಪುವಿನಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಸಮಘದ ಅಧ್ಯಕ್ಷ ಜಗದೀಶ್ ರೈ ಮಾತನಾಡಿ ಪ್ರತೀ ಸೇವಾ ಸಂಘಗಳು ಸ್ವಚ್ಚಥಾ ಅಭಿಯಾನದಲ್ಲಿ ಕೈ ಜೋಡಿಸಿದರೆ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವೀ ಯಾಗುವುದರಲ್ಲಿ ಸಂದೇಹವಿಲ್ಲ ಎಂದು ತಿಳಿಸಿದರು, ಪ್ರಧಾನ ಕಾರ್ಯದರ್ಶಿ ರಾಜೇಶ್ ಸಾಲ್ಯಾನ್, ಕೋಶಧಿಕಾರಿ ಜನಾರ್ದನ್ ಕುಲಾಲ್ ಹಾಗು ಸಂಘದ ಪ್ರಮುಖರು ಉಪಸ್ಥಿತರಿದ್ದರು, ನಿಕಟಪೂರ್ವ ಅಧ್ಯಕ್ಷ ಅಣ್ಣು ಪೂಜಾರಿ ಸ್ವಾಗತಿಸಿ, ಸುಧೀರ್ ಬೈಪಾಸ್ ವಂದಿಸಿದರು.
ಬಂಟ್ವಾಳ: ಬಿ.ಸಿ.ರೋಡಿನ ಹಳೆಯ ಉಪನೋಂದಾಣಿ ಕಚೇರಿ ಬಳಿ ಕಸದ ರಾಶಿ ತುಂಬಿಕೊಂಡಿದ್ದ ಮುರುಕಲು ಶೆಡ್ನಲ್ಲಿ ಕಳೆದ ಹಲವಾರು ದಿನಗಳಿಂದ ಊಟ, ತಿಂಡಿಯಿಲ್ಲದೆ ನಿರ್ಗತಿಕರಾಗಿ ಬಿದ್ದುಕೊಂಡಿದ್ದ ವ್ಯಕ್ತಿಯನ್ನು ಜೆಸಿಐ ಬಂಟ್ವಾಳ ಸಂಸ್ಥೆ ಉಪಚರಿಸಿ ಗುಂಡೂರಿಯ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದೆ. Advertisement ಕುಟುಂಬ ಬಂಧುಗಳಿಂದ ದೂರವಾಗಿ ಕಳೆದ ಹಲವು ದಿನಗಳಿಂದ ಬಿ.ಸಿ.ರೋಡಿನಲ್ಲಿಯೇ ಇದ್ದ ಉಳ್ಳಾಲ ತಾಲೂಕಿನ ಸಜೀಪಪಡು ಗ್ರಾಮದ ರಾಜೇಂದ್ರ ಮೂಲ್ಯ ಎಂಬವರು ಕಳೆದ ಕೆಲವು ದಿನಗಳಿಂದ ಊಟಕ್ಕಿಲ್ಲದೆ ನಿತ್ರಾಣರಾಗಿ ಬಿ.ಸಿ.ರೋಡಿನ ಮುರುಕಲು ಶೆಡ್ ನಲ್ಲಿಯೇ ಉಳಿದುಕೊಂಡಿದ್ದು, ಈ ಬಗ್ಗೆ ಭೂ ಅಭಿವೃದ್ದಿ ಬ್ಯಾಂಕಿನ ಸಿಬ್ಬಂದಿ ಯೋಗೀಶ್ ಅವರು ಜೆಸಿಐ ಬಂಟ್ವಾಳದ ಗಮನಕ್ಕೆ ತಂದಿದ್ದರು. ತಕ್ಷಣ ರಾಜೇಂದ್ರ ಅವರನ್ನು ಭೇಟಿ ಆದ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ, ಪೂರ್ವಾಧ್ಯಕ್ಷ ಸದಾನಂದ ಬಂಗೇರ, ನಿಕಪೂರ್ವಾಧ್ಯಕ್ಷ ರೋಷನ್ ರೈ, ಸದಸ್ಯರಾದ ನಾರಾಯಣ ಸಿ. ಪೆರ್ನೆ, ಕಿಶೋರ್ ಆಚಾರ್ಯ ಆಹಾರ, ನೀರು ನೀಡಿ ಉಪಚರಿಸಿದರು. ಬೆಳಗ್ಗಿನ ಉಪಾಹಾರ ಹಾಗೂ ಮಧ್ಯಾಹ್ನದ…
ಬಂಟ್ವಾಳ: ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆ ( ರಿ) ರಾಮನಗರ ಬಂಟ್ವಾಳ ಇವರ ವತಿಯಿಂದಶ್ರೀ ರಾಮ ಭಜನಾ ಮಂದಿರದಿಂದ ಬೈಪಾಸ್ ಕೆಂಪುಗುಡ್ಡೆ ಕ್ರಾಸ್ ವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಾಯಿತು. ಈ ಸಂದರ್ಭ ಬೂಡ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ರಾಮಾಂಜನೇಯ ವ್ಯಾಯಾಮ ಶಾಲೆಯ ಮಾಜಿ ಅಧ್ಯಕ್ಷ ಹರೀಶ್ ಅಜೆಕಲ, ಸಂದೇಶ್ ಹೊಸ್ಮರ್. ಧನರಾಜ್ ಅಜೆಕಲ, ಅಧ್ಯಕ್ಷ ಲತೀಶ್ ಬೈಪಾಸ್, ಕೋಶಾಧಿಕಾರಿ ಮಯೂರ್ ಕಲ್ಲಗುಡ್ಡೆ, ಕಾರ್ಯದರ್ಶಿ ಚಿತ್ತರಂಜನ್ ಕಲ್ಲಗುಡ್ಡೆ, ಉಪಾಧ್ಯಕ್ಷ ವರುಣ್ ಬೈಪಾಸ್, ಕೃತಿಕ್ ರಾಮನಗರ. ಸಲಹೆಗಾರರಾದ ಪ್ರಭಾಕರ್ ಪೂಜಾರಿ ಅರ್ಬಿಗುಡ್ಡೆ, ಕೀರ್ತನ್ ಬೈಪಾಸ್, ದಿನೇಶ್ , ಮೋಕ್ಷಿತ್, ಸೂರಜ್ ಯಜ್ಞೇಶ್, ದಿತೇಶ್, ಜೀವನ್ ರಾಹುಲ್, ಧೀರಜ್ , ಪ್ರಜ್ವಲ್ ಸಜನ್, ಹಾಗೂ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯ ಸದಸ್ಯರು ಉಪಸ್ಥಿತರಿದ್ದರು.
ಬಂಟ್ವಾಳ: ಜೆಸಿಐ ಬಂಟ್ವಾಳದ 2024 ರ ಸಾಲಿನ ಅಧ್ಯಕ್ಷರಾಗಿ ರಶ್ಮಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಶ್ರೀನಿವಾಸ್ ಅರ್ಬಿಗುಡ್ಡೆ, ಕೋಶಾಧಿಕಾರಿಯಾಗಿ ಮನೋಜ್ ಕನಪಾಡಿ, ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಕಿಶೋರ್ ಆಚಾರ್ಯ ಯೋಗೀಶ್, ಉಮೇಶ್ ಪೂಜಾರಿ, ಶಿವರಾಮ್ ಮರ್ತಾಜೆ, ನಾರಾಯಣ ಸಿ. ಪೆರ್ನೆ, ಲೇಡಿ ಜೇಸಿ ಸಂಯೋಜಕರಾಗಿ ಆಶಾಮಣಿ ಡಿ. ರೈ, ಜೂನಿಯರ್ ಜೇಸಿ ಸಂಯೋಜಕರಾಗಿ ರೋಶನ್ ರೈ, ಗೋಗ್ರೀನ್ ನಿರ್ದೇಶಕರಾಗಿ ವಚನ್ ಶೆಟ್ಟಿ, ಬ್ಲಡ್ ಡೊನೇಷನ್ ನಿರ್ದೇಶಕರಾಗಿ ರೋಷನ್, ಸೆಲ್ಯೂಟ್ ಟು ಸೈಲೆಂಟ್ ವರ್ಕರ್ ನಿರ್ದೇಶಕರಾಗಿ ಕಿರಣ್, ಸಾಂಸ್ಕೃತಿಕ ನಿರ್ದೇಶಕರಾಗಿ ನಾಗೇಶ್, ದಾನ್ ಕಾರ್ಯಕ್ರಮ ನಿರ್ದೇಶಕರಾಗಿ ವೆಂಕಟೇಶ್ ಕೃಷ್ಣಾಪುರ ಆಯ್ಕೆಯಾಗಿದ್ದಾರೆ.








