Author: admin
ಬಂಟ್ವಾಳ: ಮೂರ್ತೆದಾರರ ಸೇವಾ ಸಹಕಾರಿ ಸಂಘ ಶಂಭೂರು ಇದರ ೨೦೨೨-೨೩ನೇ ವಾರ್ಷಿಕ ಮಹಾಸಭೆಯಲ್ಲಿ ನರಿಕೊಂಬು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾದ ಸಂತೋಷ್ ಕುಮಾರ್ ಅಡ್ಡದಪಾದೆ ಹಾಗೂ ಬಿರುವೆರ್ ಸೇವಾ ಟ್ರಸ್ಟ್ ಇದರ ನೂತನ ಅಧ್ಯಕ್ಷರಾದ ಸೀತಾರಾಮ ಪೂಜಾರಿ ಬೋಳಂತೂರು ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ನ ನಿರ್ದೇಶಕ ಪುರುಷೋತ್ತಮ ಸಾಲ್ಯಾನ್ ನರಿಕೊಂಬು, ಸಂಘದ ಉಪಾಧ್ಯಕ್ಷ ಮಾಧವ ಕೆ.ಕರ್ಬೆಟ್ಟು, ನಿರ್ದೇಶಕರಾದ ಮೋನಪ್ಪ ಪೂಜಾರಿ ಬೊಂಡಾಲ, ಆಶೋಕ್ ಆರ್., ನಾರಾಯಣ ಪೂಜಾರಿ ಕೇದಿಗೆ, ಕೃಷ್ಣಪ್ಪ ಪೂಜಾರಿ ಬಾಳ್ತಿಲ, ವಿಜಯ ತುಕರಾಮ, ಜಯಂತಿ ಈಶ್ವರ ಪೂಜಾರಿ, ರಾಜೇಶ್ ಶೇಡಿಗುರಿ, ಬಿರುವೆರ್ ಸೇವಾ ಟ್ರಸ್ಟ್ನ ಉಪಾಧ್ಯಕ್ಷ ಹರೀಶ್ ಪೂಜಾರಿ ಮರ್ದೋಳಿ, ಕೋಶಾಧಿಕಾರಿ ಉಮೇಶ್ ನೆಲ್ಲಿಗುಡ್ಡೆ, ಪ್ರಧಾನ ಕಾರ್ಯದರ್ಶಿ ಮನೋಜ್ ನಿರ್ಮಲ್, ಮಾಜಿ ಕಾರ್ಯದರ್ಶಿ ಸಂಜೀವ ಪೂಜಾರಿ ನಾಟಿ, ಗ್ರಾ.ಪಂ. ಸದಸ್ಯ ರವಿ ಅಂಚನ್ ಅಬೆರೊಟ್ಟು, ಹಿರಿಯ ಮೂರ್ತೆದಾರ ಸದಸ್ಯರಾದ ಚಂದು ಪೂಜಾರಿ ಕೇದಿಗೆ, ಮೋಹನ ಪೂಜಾರಿ ಬೊಂಡಾಲ, ಪದ್ಮನಾಭ…
ಬಂಟ್ವಾಳ: ಲಯನ್ಸ್ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿ ಅವರು ಲಯನ್ಸ್ ಕ್ಲಬ್ ಬಂಟ್ವಾಳಕ್ಕೆ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು.ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಶಾಂತ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಪ್ರಥಮ ಮಹಿಳೆ ಸಂಧ್ಯಾ ವಲಯಾಧ್ಯಕ್ಷ ಡೋನಾಲ್ಡ್ ಬಂಟ್ವಾಳ, ಪ್ರಾಂತೀಯ ರಾಯಬಾರಿ ದಾಮೋದರ ಬಿ.ಎಂ., ಕೋಶಾಧಿಕಾರಿ ಕೇಶವ ಆಚಾರ್, ವಿಜಯ್ ರೈ ಹಾಗೂ ವಿವಿಧ ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು. ಬಂಟ್ವಾಳ ತಾಲೂಕಿನ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಕಿರಣ್ ಕುಮಾರ್, ರೀಟಾ ತಾವ್ರೋ. ಉಮರಗಿ ಶರಣಪ್ಪ, ಹೇಮಾವತಿ, ವಲಯಾಧ್ಯಕ್ಷ ರಮಾನಂದ ಅವರನ್ನು ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ಬಂಟ್ವಾಳದ ಸದಸ್ಯರಾಗಿರುವ ಶಿಕ್ಷಕರನ್ನು ಗೌರವಿಸಲಾಯಿತು.ಕಾರ್ಯದರ್ಶಿ ಸುನೀಲ್ ಬಿ. ವರದಿ ವಾಚಿಸಿದರು. ತಪೋದನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ ಆಚಾರ್ಯ ವಂದಿಸಿದರು.
ಬಂಟ್ವಾಳ: ಹಿರಿಯ ರಂಗಕರ್ಮಿ ಮಂಜು ವಿಟ್ಲ ನಿಧನ ಹೊಂದಿದ ಹಿನ್ನೆಯಲ್ಲಿ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಬುಧವಾರ ಶ್ರದ್ಧಾಂಜಲಿ ಸಭೆ ನಡೆಯಿತು.ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾತನಾಡಿ ಮಂಜುವಿಟ್ಲ ಪ್ರೀತಿಯ ಸದ್ಗುಣವನ್ನು ಬೆಳೆಸಿಕೊಂಡವರು, ಮಾಣಿಲವೆಂಬ ಕುಗ್ರಾಮವನ್ನು ಪರಿವರ್ತಿಸಲು ಮಂಜು ವಿಟ್ಲ ಅವರು ನಗುನಗುತ್ತಾ ಸಮಾಜವನ್ನು ಎದುರಿಸಿದ ರೀತಿ ಮಾದರಿಯಾಗಿತ್ತು ಎಂದರು. ಪ್ರೀತಿಯೇ ದೇವರು ಎಂಬ ತತ್ವವನ್ನು ಅವರು ಅನೂಚಾನವಾಗಿ ಪಾಲಿಸುತ್ತಿದ್ದರು, ಕ್ಷೇತ್ರದಲ್ಲಿ ನಡೆಯುವ ಪ್ರತಿಷ್ಟಾ ವರ್ಧಂತಿ ಕಾರ್ಯಕ್ರಮದ ವೇದಿಕೆಗೆ ಅವರ ಹೆಸರಿಡಲಾಗುವುದು ಹಾಗೂ ಮಂಜಿ ವಿಟ್ಲ ಅವರ ನೆನೆಪಿಗಾಗಿ ಕಲಾವಿದರಿಗೆ ಯೋಜನೆ ಹಾಕಿಕೊಳ್ಳಲಾಗುವುದು ಎಂದು ತಿಳಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ ಮಂಜು ವಿಟ್ಲ ಯಾರನ್ನೂ ದ್ವೇಷ ಮಾಡುವ ವ್ಯಕ್ತಿತ್ವದವರಲ್ಲ. ಲವಲವಿಕೆಯಿಂದ ತೊಡಗಿಸಿಕೊಳ್ಳುತ್ತಿದ್ದ ಅವರ ಮನುಷ್ಯ ಪ್ರೀತಿ, ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದರು ಎಂದರು. ಹಿರಿಯ ರಂಗಕರ್ಮಿ ಮಹಾಬಲೇಶ್ವರ ಹೆಬ್ಬಾರ್ ಪಾಸ್ತವಿಕವಾಗಿ ಮಾತನಾಡಿ ರಂಗಭೂಮಿಯ ಸೆಳೆತಕ್ಕೊಳಗಾದ ಮಂಜು ವಿಟ್ಲ ನಾನಾ ವಿಭಾಗಗಳಲ್ಲಿ ದುಡಿದವರು ಎಂದರು.ಹಿರಿಯರಾದ ಕೈಯೂರು ನಾರಾಯಣ…
ಜೆಸಿಐ ಬಂಟ್ವಾಳದಿಂದ ಗುಂಡೂರಿ ಸೇವಾಶ್ರಮಕ್ಕೆ ಆಹಾರದ ಕಿಟ್ ವಿತರಣೆ ಬಂಟ್ವಾಳ: ಜೆಸಿಐ ಬಂಟ್ವಾಳದ ಜೇಸಿ ಸಪ್ತಾಹದ ಅಂಗವಾಗಿ ಗುಂಡೂರಿ ಸೇವಾಶ್ರಮ ಕ್ಕೆ ಆಹಾರ ದಾನ ಹಾಗೂ ಆಹಾರ ಕಿಟ್ ವಿತರಣೆ ಮಾಡಲಾಯಿತು.ಈ ಸಂದರ್ಭ ವಲಯ ಉಪಾಧ್ಯಕ್ಷ ಭರತ್ ಶೆಟ್ಟಿ, ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಕಾರ್ಯದರ್ಶಿ ರಶ್ಮಿ ಶೆಟ್ಟಿ, ಸದಸ್ಯರಾದ ಸಂತೋಷ್ ಜೈನ್, ವಚನ್ ಶೆಟ್ಟಿ, ಆಶಾಮಣಿ ರೈ, ಪ್ರಸಾದ್, ಸುಧಾಕರ್, ದೀಪ್ತಿ ರೈ ಉಪಸ್ಥಿತರಿದ್ದರು.
ಬಂಟ್ವಾಳ: ಜೆಸಿಐ ಜೋಡುಮಾರ್ಗ ನೇತ್ರಾವತಿ ಅತ್ಯುತ್ತಮವಾದ ಕಾರ್ಯಕ್ರಮವನ್ನು ವಲಯಾಧ್ಯಕ್ಷರ ಅಧಿಕೃತ ಭೇಟಿ ಕಾರ್ಯಕ್ರಮದ ವೇಳೆ ನೀಡಿರುವುದು ಅಭಿನಂದನೀಯ. ಮೂರು ಶಾಲೆಗಳಿಗೆ ನೀಡಿದ ಯೋಜನೆಗಳು ಹೆಚ್ಚು ಪ್ರಯೋಜನಕಾರಿಯಾಗಿದ್ದು ನನಗೆ ಹೆಚ್ಚು ಖುಷಿ ನೀಡಿದೆ, ಕೊಡಬೇಕಲ್ಲ ಎಂದು ಕೊಡುವ ಬದಲು ಅಗತ್ಯ ಇರುವಲ್ಲಿಗೆ ಅಗತ್ಯ ಇರುವ ವಸ್ತುಗಳನ್ನು ನೀಡುವುದು ಹೆಚ್ಚು ಅರ್ಥಪೂರ್ಣ. ಆ ನಿಟ್ಟಿನಲ್ಲಿ ಘಟಕ ಹೆಚ್ಚು ಉಪಯುಕ್ತ ಯೋಜನೆಗಳನ್ನು ವಲಯಾಧ್ಯಕ್ಷರ ಭೇಟಿ ವೇಳೆ ನೀಡಿದೆ ಎಂದು ಜೇಸಿ ವಲಯ 15ರ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಹೇಳಿದರು. ಜೆಸಿಐ ಜೋಡುಮಾರ್ಗ ನೇತ್ರಾವತಿ ಇಲ್ಲಿಗೆ ವಲಯಾಧ್ಯಕ್ಷರ ಅಧಿಕೃತ ಭೇಟಿ ಕಾರ್ಯಕ್ರಮ ವೇ ಜೆಸಿಐ ಜೋಡುಮಾರ್ಗ ನೇತ್ರಾವತಿ ವತಿಯಿಂದ ಒಟ್ಟು 6 ಲಕ್ಷ ರೂಪಾಯಿ ವೆಚ್ಚದ ವಿವಿಧ ಶಾಶ್ವತ ಯೋಜನೆಗಳನ್ನು ಹಸ್ತಾಂತರಿಸಿ ಸಂಜೆ ಬಿ.ಸಿ.ರೋಡಿನ ಪ್ರೀತಿ ಕಾಂಪ್ಲೆಕ್ಸ್ ಸಭಾಭವನದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಮಾತನಾಡಿದರು.ಕಾಯರ್ ಪಲ್ಕೆಯ ಹೆಗ್ಡೆಸ್ ಆಂಗ್ಲಮಾಧ್ಯಮ ಶಾಲೆಗೆ ಕೊಡುಗೆಯಾಗಿ ನೀಡಿದ ಜೇಸಿ ಕಿಂಡರ್ ಪ್ಲೇ ಯಾರ್ಡ್ ಅನ್ನು ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಉದ್ಘಾಟಿಸಿದರು. ಬಳಿಕ ನಡೆದ…
ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಹಾಸಭೆ ಬಂಟ್ವಾಳ: ಮೂರ್ತೆದಾರರ ಸೇವಾ ಸಹಕಾರಿ ಸಂಘ ಶಂಭೂರು ಇದರ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಭಾನುವಾರ ಸಂಘದ ವಠಾರದಲ್ಲಿರುವ ಬಿರುವೆರ್ ಸೇವಾ ಟ್ರಸ್ಟ್ನ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ನ ನಿರ್ದೇಶಕ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಅಧ್ಯಕ್ಷತೆ ವಹಿಸಿದ್ದರು. ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಹಾಸಭೆ ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಹಾಸಭೆ ಮುಖ್ಯ ಅತಿಥಿಗಳಾಗಿ ಬಿರುವೆರ್ ಸೇವಾ ಟ್ರಸ್ಟ್ ನರಿಕೊಂಬು ಇದರ ಅಧ್ಯಕ್ಷ ಸೀತಾರಾಮ ಪೂಜಾರಿ ಬೋಳಂತ್ತೂರು, ನರಿಕೊಂಬು ಗ್ರಾ.ಪಂ. ಅಧ್ಯಕ್ಷ ಸಂತೋಷ್ ಕುಮಾರ್, ಸದಸ್ಯ ರವಿ ಅಂಚನ್ ಅಬೆರೊಟ್ಟು, ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಮಾಧವ ಕೆ.ಕರ್ಬೆಟ್ಟು, ಬಿರುವೆರ್ ಸೇವಾ ಟ್ರಸ್ಟ್ನ ಉಪಾಧ್ಯಕ್ಷ ಹರೀಶ್ ಪೂಜಾರಿ ಮರ್ದೋಳಿ, ಕೋಶಾಧಿಕಾರಿ ಉಮೇಶ್ ನೆಲ್ಲಿಗುಡ್ಡೆ, ಪ್ರಧಾನ ಕಾರ್ಯದರ್ಶಿ ಮನೋಜ್ ನಿರ್ಮಲ್, ಮಾಜಿ ಕಾರ್ಯದರ್ಶಿ ಸಂಜೀವ ಪೂಜಾರಿ ನಾಟಿ, ನಿರ್ದೇಶಕರಾದ ಮೋನಪ್ಪ ಪೂಜಾರಿ…
ಬಂಟ್ವಾಳ: ಜೆಸಿಐ ಬಂಟ್ವಾಳದ ಜೇಸಿ ಸಪ್ತಾಹದ ಮೂರನೇ ದಿನದ ಕಾರ್ಯಕ್ರಮದಂಗವಾಗಿ ತಂಬಾಕು ವಿರೋಧಿ ಜಾಗೃತಿ, ಕಾನೂನು ಮಾಹಿತಿ ಶಿಬಿರ ಕಾರ್ಯಕ್ರಮ ಬೆಂಜನಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ವಲಯದ ಕಾರ್ಯಕ್ರಮ ವಿಭಾಗದ ನಿರ್ದೇಶಕಿ ಅಕ್ಷತಾ ಗಿರೀಶ್ ಉದ್ಘಾಟಿಸಿದರು. ಪೂರ್ವಾಧ್ಯಕ್ಷ ಸುರೇಶ್ ಕುಮಾರ್ ನಾವೂರು ಕಾನೂನು ಮಾಹಿತಿ ನೀಡಿದರು. ಅಧ್ಯಕ್ಷ ರಾಜೇಂದ್ರ ಕೆ. ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲೆ ಕವಿತಾ ಹೇಮಚಂದ್ರ ಉಪಸ್ಥಿತರಿದ್ದರು. ಬಳಿಕ ಸಸ್ಯಗಳ ಪೋಷಣೆ, ಸಾರ್ವಜನಿಕ ಆಶ್ರಯಗಳ ನಿರ್ವಹಣೆ ಕಾರ್ಯಕ್ರಮವೂ ಜರುಗಿತು. ಕಾರ್ಯಕ್ರಮ ದ ಸಂಯೋಜಕರಾದ ದಯಾನಂದ ರೈ, ಮನೋಜ್ ಕನಪಾಡಿ, ವರುಣ್, ಪ್ರಶಾಂತ್, ವಚನ್ ಶೆಟ್ಟಿ, ಅಶ್ವಿನ್ ಮುಂಡಾಜೆ, ಉಮೇಶ್ ಪೂಜಾರಿ, ಪೂರ್ವಧ್ಯಕ್ಷ ಸದಾನಂದ ಬಂಗೇರ,ಉಪಾಧ್ಯಕ್ಷ ಕಿಶೋರ್ ಆಚಾರ್ಯ, ಸದಸ್ಯ ರವೀಣ ಬಂಗೇರ ಭಾಗವಹಿಸಿದ್ದರು.
ಬಂಟ್ವಾಳ : ದುರಾಸೆಯೇ ಭ್ರಷ್ಟಾಚಾರದ ಮೂಲವಾಗಿದ್ದು ದುರಾಸೆಗೆ ಯಾವುದೇ ಔಷಧಿ ಇಲ್ಲ ಎಂದು ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದರು. ಜಮೀಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕ ಹಾಗೂ ತುಂಬೆ ಪದವಿಪೂರ್ವ ಕಾಲೇಜು ಇದರ ಆಶ್ರಯದಲ್ಲಿ ಸೋಮವಾರ ಕಾಲೇಜು ಸಭಾಂಗಣದಲ್ಲಿ “ಭ್ರಷ್ಟಾಚಾರ ಮುಕ್ತ ಸಮಾಜ, ಯುವ ಜನತೆಯ ಪಾತ್ರ” ಎಂಬ ವಿಷಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶ್ರೀಮಂತಿಕೆ, ಅಧಿಕಾರವನ್ನು ಪೂಜಿಸುವ ಈಗಿನ ಸಮಾಜದಲ್ಲಿ ಪ್ರಾಮಾಣಿಕತೆಗೆ ಬೆಲೆ ಇಲ್ಲದಂತಾಗಿದೆ, ಕ್ರಿಮಿನಲ್ ಪ್ರಕರಣ ದಲ್ಲಿ ಜೈಲುಪಾಲಾದ ವ್ಯಕ್ತಿ ಬಿಡುಗಡೆಗೂಂಡಾಗ ಸಂಭ್ರಮದ ಸ್ವಾಗತ ನೀಡುವಂತಹ ಸಮಾಜದಲ್ಲಿ ನಾವಿದ್ದೇವೆ, ವ್ಯವಸ್ಥೆ ಹಾಗೂ ದುರಾಸೆಗಳು ಇದೇ ರೀತಿ ಮುಂದುವರಿಯುತ್ತಾ ಹೋದರೆ ಮುಂದಿನ ದಿನಗಳು ಏನಾಗಬಹುದು ..? ಎಂದು ಸಂತೋಷ್ ಹೆಗ್ಡೆ ಕಳವಳ ವ್ಯಕ್ತಪಡಿಸಿದರು. ಹಿರಿಯರು ಕಟ್ಟಿದ ಮೌಲ್ಯ, ಮಾನವೀಯ ಸಿದ್ದಾಂತಗಳು ಮರೆಯಾಗುತ್ತಿದ್ದು ಶಾಂತಿ, ಸೌಹಾರ್ದತೆಗೆ ಧಕ್ಕೆಯಾಗುತ್ತಿದೆ. ಭ್ರಷ್ಟಾಚಾರ ಪ್ರತಿಯೋರ್ವ ನಾಗರಿಕನ ಸಮಸ್ಯೆಯಾಗಿದ್ದು ಇದನ್ನು ಸಮರ್ಥವಾಗಿ ಎದುರಿಸಬೇಕು ಎಂದ ಅವರು ನ್ಯಾಯಾಲಯದ ವ್ಯವಸ್ಥೆಯ ದುರ್ಬಲಕೆಯಾಗುತ್ತಿದ್ದು ಈಗ ಇರುವ…
ಬಂಟ್ವಾಳ: ಇತ್ತೀಚೆಗೆ ನಿಧನರಾದ ಹಿರಿಯ ರಂಗಕರ್ಮಿ, ಪಂಚಾಯತ್ ರಾಜ್ ರಾಜ್ಯ ತರಬೇತುದಾರ ಮಂಜು ವಿಟ್ಲ ಅವರ ಶಿಷ್ಯವೃಂದ ಹಾಗೂ ಅಭಿಮಾನಿ ಬಳಗದ ವತಿಯಿಂದ ಶ್ರದ್ದಾಂಜಲಿ ಸಭೆ ಸೆ.13ರಂದು ಬುಧವಾರ ಸಂಜೆ 4.30ಕ್ಕೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. Advertisement ಸಾಮಾಜಿಕ, ಧಾರ್ಮಿಕ, ರಾಜಕೀಯ, ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ತರಬೇತಿ ಪಡೆದ ಅಧಿಕಾರಿ ವರ್ಗ, ಶಿಷ್ಯಂದಿರು ಸಂತಾಪ ಸೂಚಕ ಸಭೆಯಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಜೆಸಿಐ ಬಂಟ್ವಾಳದಿಂದ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ Advertisement ಬಂಟ್ವಾಳ: ಜೆಸಿಐ ಬಂಟ್ವಾಳ ಇದರ ಜೇಸಿ ಸಪ್ತಾಹದ ಅಂಗವಾಗಿ 2ನೇ ದಿನದ ಕಾರ್ಯಕ್ರಮವಾಗಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಕಾರ್ಲ, ಪೆರ್ನೆ ಇಲ್ಲಿಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರಿಸಲಾಯಿತು. ಕಾರ್ಯಕ್ರಮ ಸಂಯೋಜಕ, ಪೂರ್ವಧ್ಯಕ್ಷ ಸುರೇಶ್ ಕುಮಾರ್ ನಾವೂರು ಉದ್ಘಾಟಿಸಿದರು. ಅಧ್ಯಕ್ಷ ರಾಜೇಂದ್ರ ಕೆ. ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷ ಯತೀಶ್ ಕರ್ಕೇರ, ಸದಸ್ಯರಾದ ನಾರಾಯಣ ಸಿ.ಪೆರ್ನೆ, ಸುಧಾಕರ್ ಶೆಟ್ಟಿ, ವಿಶು ಕುಂದರ್, ಕಿರಣ್ ಶಾಲಾ ಮುಖ್ಯ ಶಿಕ್ಷಕಿ ಜಾನಕಿ ಉಪಸ್ಥಿತರಿದ್ದರು.








