Author: admin
ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ವಾರ್ಷಿಕ ಮಹಾಸಭೆ ಸಜೀಪಮೂಡ ಸುಭಾಷ್ ನಗರದ ಶ್ರೀ ಗುರು ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆಯಿತು.ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಿಬ್ಬಂದಿಗಳು ಹಾಗೂ ನಿರ್ದೇಶಕರ ಸಹಕಾರದಿಂದಾಗಿ ಬ್ಯಾಂಕ್ ಅಭಿವೃದ್ದಿಯ ಪಥದಲ್ಲಿ ಮುನ್ನಡೆಯುತ್ತಿದ್ದು ಎಲ್ಲಾ ಶಾಖೆಗಳು ಲಾಭದಾಯಕವಾಗಿದೆ ಎಂದು ತಿಳಿಸಿದರು. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ Advertisement ಶಾಖೆಗಳನ್ನು ಎಷ್ಟು ಬೇಕಾದರೂ ತೆರೆಯ ಬಹುದು ಆದರೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಿದಾಗ ಉತ್ತಮ ಸೇವೆ ನೀಡಲು ಸಾಧ್ಯವಿದ್ದು ನಮ್ಮ ಸಂಘ ಅಂತಹ ಅತ್ಯುತ್ತಮ ಸೇವೆಯನ್ನು ಗ್ರಾಹಕರಿಗೆ ನೀಡುತ್ತಿದೆ. ಗ್ರಾಹಕರು ನಮ್ಮ ಸಂಘದ ಮೇಲೆ ಇಟ್ಟಿರುವ ನಂಬಿಕೆ ಇದಕ್ಕೆ ಸಾಕ್ಷಿ ಎಂದರು. ಸಂಘಕ್ಕೆ ಸ್ವಂತ ಜಾಗ ಖರೀದಿಸಿದ್ದು ನೋಂದಾವಣೆಯೂ ಆಗಿದೆ. ಸರಕಾರದ ಸಹಾಯಧನ ಪಡೆದು ಇದರಲ್ಲಿ ಸಮುದಾಯ ಭವನ ನಿರ್ಮಿಸುವ ಯೋಚನೆ ಇದೆ. ಮುಂದಿನ ವರ್ಷದಿಂದಲೇ ಆ ಕೆಲಸ ಪ್ರಾರಂಭಿಸುವುದಾಗಿ ಅವರು ತಿಳಿಸಿದರು. ಮುಂದಿನ…
ಜೆಸಿಐ ಬಂಟ್ವಾಳದ ಜೇಸಿ ಸ್ತಪಾಹಕ್ಕೆ ಚಾಲನೆ, ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆಬಾ ಕಾರ್ಡ್ ನೋಂದಾವಣೆ ಕಾರ್ಯಕ್ರಮ Advertisement ಬಂಟ್ವಾಳ: ಜೆಸಿಐ ಬಂಟ್ವಾಳ ಇದರ ಜೇಸಿ ಸಪ್ತಾಹದ ಅಂಗವಾಗಿ ಜೆಸಿಐ ಬಂಟ್ವಾಳ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳ ಇದರ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆಬಾ ಕಾರ್ಡ್ ನೋಂದಾವಣೆ ಕಾರ್ಯಕ್ರಮ ಶುಕ್ರವಾರ ಭಂಡಾರಿಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಉದ್ಘಾಟಿಸಿದರು. ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಎಸ್ಕೆಪಿಎ ಬಂಟ್ವಾಳ ವಲಯ ಅಧ್ಯಕ್ಷ ಹರೀಶ್ ಕುಂದರ್, ಜೆಸಿಐ ಬಂಟ್ವಾಳದ ನಿಕಟಪೂರ್ವಾಧ್ಯಕ್ಷ ರೋಷನ್ ರೈ, ಪೂರ್ವಾಧ್ಯಕ್ಷರಾದ ಸದಾನಂದ ಬಂಗೇರ, ಯತೀಶ್ ಕರ್ಕೆರಾ, ಸಂತೋಷ್ ಜೈನ್, ಉಪಾಧ್ಯಕ್ಷರಾದ ಕಿಶೋರ್ ಆಚಾರ್ಯ, ಗಣೇಶ್ ಕುಲಾಲ್, ಕಾರ್ಯದರ್ಶಿ ರಶ್ಮಿ ಶೆಟ್ಟಿ, ಸದಸ್ಯರಾದ ಯೋಗೀಶ್ ಮತ್ತಿತರರು ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ಮಹಾಸಭೆ ಬಂಟ್ವಾಳ: ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲದ ಮಹಾಸಭೆಯು ಬಿರ್ವಸೆಂಟರ್ನ ಅರ್ಚಿಡ್ ಮಿನಿ ಹಾಲ್ನಲ್ಲಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.ಅವರು ಮಾತನಾಡಿ ಮಹಾಮಂಡಲವು ಪ್ರಸ್ತುತ ಲಾಭದಲ್ಲಿ ಮುಂದುವರೆಯುತ್ತಿದ್ದು ಮುಂದಿನ ವರ್ಷದಲ್ಲಿ ಮಹಾಮಂಡಲದ ವತಿಯಿಂದ ಶಾಖೆಯನ್ನು ತೆರೆದು ಕಾರ್ಯನಿರ್ವಹಿಸಲಾಗುವುದೆಂದು ತಿಳಿಸಿದರು.ಪ್ರಾಥಮಿಕ ಮೂರ್ತೆದಾರರ ಸಹಕಾರ ಸಂಘಗಳು ಹಾಗೂ ಸದಸ್ಯರ ಸಹಕಾರದಿಂದ ಮಹಾಮಂಡಲವು ಬೆಳೆಯುತ್ತಿದ್ದು ಎಲ್ಲರ ಸಹಾಯದಿಂದ ಮಹಾಮಂಡಲವು ಇನ್ನಷ್ಟುಅಭಿವೃದ್ಧಿಯಾಗಲಿ ಎಂದು ಆಶಿಸಿದರು. ಪ್ರಾಥಮಿಕ ಮೂರ್ತೆದಾರರ ಸಹಕಾರಿ ಸಂಘದವರ ಕ್ಷೇಮನಿಧಿ ಮತ್ತು ನಿರಖುಠೇವಣಿಯನ್ನು ಮಹಾಮಂಡದಲ್ಲಿ ತೊಡಗಿಸಿಕೊಳ್ಳುವುದರಿಂದ ಮಹಾಮಂಡಲದ ಬೆಳವಣಿಗೆ ಸಾಧ್ಯ ಎಂದ ಅವರು ದ.ಕ.ಜಿಲ್ಲೆಯಲ್ಲಿ 18 ಪ್ರಾಥಮಿಕ ಮೂರ್ತೆದಾರರ ಸಹಕಾರಿ ಸಂಘಗಳು ಬ್ಯಾಂಕಿಂಗ್ ಕಾರ್ಯನಿರ್ವಹಿಸುತ್ತಿದ್ದು ನಿರ್ಜೀವ ಸ್ಥಿತಿಯಲ್ಲಿ ಇರುವ ಎಲ್ಲಾ ಪ್ರಾಥಮಿಕ ಮೂರ್ತೆದಾರರ ಸಹಕಾರಿ ಸಂಘವನ್ನು ಕಾರ್ಯರೂಪಕ್ಕೆ ತರುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು. ಮೂರ್ತೆದಾರರ ಮಹಾಮಂಡಲವು ಅಭಿವೃದ್ದಿ ಆದರೆ ಎಲ್ಲಾ ಪ್ರಾಥಮಿಕ ಮೂರ್ತೆದಾರರ ಸಹಕಾರಿ ಸಂಘಗಳು ಅಭಿವೃದಿಗೊಂಡಂತೆ, ಇನ್ನಷ್ಡು ಶಾಖೆಗಳನ್ನು ವಿಸ್ತರಿಸಿ ಅಭಿವೃದ್ದಿಗೊಳಿಸಿ ಸಮಾಜ…
https://youtu.be/vwlAz36dY8I?si=HMSBiPWH4x91ywUQ ಬಂಟ್ವಾಳ: ಲೊರೆಟ್ಟೊ ಪದವಿನಲ್ಲಿರುವ ಲೊರೆಟ್ಟೊ ಮಾತಾ ಚರ್ಚಿನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವನ್ನು ತೆನೆಹಬ್ಬವಾಗಿ ವಿಜ್ರಂಭಣೆಯಿಂದ ಆಚರಿಸಲಾಯಿತು. ಚರ್ಚ್ ಧರ್ಮಗುರುಗಳಾದ ವಂದನೀಯ ಫ್ರಾನ್ಸಿಸ್ ಕ್ರಾಸ್ತ, ಲೋರೆಟ್ಟೋ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಂದನೀಯ ಜೇಸನ್ ಮೋನಿಸ್ ಪ್ರಧಾನ ಧರ್ಮಗುರುಗಳಾಗಿ ಹಾಗೂ ವಂದನೀಯ ಪ್ರತಾಪ್ ನಾಯಕ್ ಬಲಿಪೂಜೆಯನ್ನು ಅರ್ಪಿಸಿದರು. Advertisement ಚರ್ಚ್ ಧರ್ಮಗುರುಗಳು ದೇವರ ವಾಕ್ಯದ ಸಂದೇಶದಲ್ಲಿ ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ತ್ಯಾಗಮಯ ಜೀವನದ ಬಗ್ಗೆ ಅರ್ಥ ಪೂರ್ಣ ಪ್ರವಚನ ನೀಡಿದರು. ಪೂಜೆಯಲ್ಲಿ ಮಕ್ಕಳು, ಭಕ್ತಾದಿಗಳು ಭಕ್ತಿ-ಶ್ರದ್ಧೆಯಿಂದ ಪಾಲ್ಗೊಂಡರು. ಕನ್ಯಾಮಾತೆಯ ಪಲ್ಲಕ್ಕಿಯನ್ನು ಲೊರೆಟ್ಟೋ ಜಂಕ್ಷನ್ ಬಳಿಯಿಂದ ಚಚರ್ಚವರೆಗೆ ಆಕರ್ಷಕ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಕ್ರೈಸ್ತ ಬಂಧುಗಳು ಶಿಸ್ತು ಹಾಗೂ ಶ್ರದ್ದಾಭಕ್ತಿಯಿಂದ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದಾರು. ಕಳೆದ 9 ದಿನಗಳಿಂದ ನಡೆದ ಮಾತೆ ಮರಿಯಮ್ಮನವರ ನೋವೆನಾ ಪ್ರಾರ್ಥನೆಗೆ ಮಕ್ಕಳು ಹೂಗಳನ್ನು ಅರ್ಪಿಸಿದರು ಈ ಸಂದರ್ಭ ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು . ವಿವಿಧ ಬಗೆಯ ಹೂಗಳನ್ನು ತಂದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು ಹಾಗೂ ಸಂಭ್ರಮಕ್ಕೆ ಸಹಕರಿಸಿದ…
ಬಂಟ್ವಾಳ: ಕಲ್ಲಡ್ಕದ ಶ್ರೀ ರಾಮ ಮಂದಿರದ 91 ನೇ ವರ್ಷದ ಮೊಸರು ಕುಡಿಕೆ ಉತ್ಸವ ಗುರುವಾರ ಸಂಜೆ ವಿಜೃಂಭಣೆಯಿಂದ ಜರಗಿತು.ಕಲ್ಲಡ್ಕ ಮಂದಿರದಿಂದ ಹೊರಟು ಪ್ರಮುಖ ರಸ್ತೆಯಲ್ಲಿ ಹಲವು ಟ್ಯಾಬ್ಲೋ ಸಹಿತ ಶ್ರೀಕೃಷ್ಣನ ಶೋಭಾಯಾತ್ರೆ ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆಯಿಂದ ಸಂಪನ್ನಗೊಂಡಿತು. ಶ್ರೀ ರಾಮ ವಿದ್ಯಾಕೇಂದ್ರದ 500 ಕ್ಕೂ ಹೆಚ್ಚು ಮಕ್ಕಳು ಕೃಷ್ಣ ಯಶೋದೆಯ ವೇಷದಲ್ಲಿ ಪಾಲ್ಗೊಂಡು ಕೃಷ್ಣಲೋಕ ಸೃಷ್ಟಿ ಸಿದರು.ಓಂ ಶಕ್ತಿ ಬಳಗದ ಗಜಾಸುರ ವಧೆ,ಕುದ್ರೆಬೆಟ್ಟು ಮಣಿಕಂಠ ಯುವಶಕ್ತಿಯ ಅರುಣಾಸುರ ವಧೆ,ರಾಯಪ್ಪಕೋಡಿ ತ್ರಿಶೂಲ್ ಫ್ರೆಂಡ್ಸ್ ನ ವೃತ್ತಾಸುರ ವಧೆ,ಕಟ್ಟೆಮಾರು ಮಂತ್ರದೇವತಾ ಕ್ಷೇತ್ರದ ಬಂಡಾಸುರ ವಧೆ,ವಿಶ್ವ ಹಿಂದು ಪರಿಷತ್ ಭಜರಂಗ ದಳದ ಚೆಂಡೆವಾದನ,ನಾಸಿಕ್ ಬೇಂಡ್ ಮೊದಲಾದ ಹಲವು ಸ್ತಬ್ದಚಿತ್ರಗಳುಆಕರ್ಷಣೆ ನೀಡಿದವು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್,ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ,ಶ್ರೀ ರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಮೊದಲಾದ ಪ್ರಮುಖರಿದ್ದರು . Advertisement ಶ್ರೀ ರಾಮಾಂಜನೇಯ ಸೇವಾಟ್ರಸ್ಟ್ ಅಧ್ಯಕ್ಷ ಡಾ.ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾಕಾರ್ಯಕ್ರಮ ನೆರವೇರಿತು.ಮಂಗಳೂರು ವಿಭಾಗ ಸಹ ಕಾರ್ಯವಾಹ ಸುಭಾಶ್ಚಂದ್ರ ಕಳಂಜ ಮೊಸರು…
ಬಂಟ್ವಾಳ: ದೇವ ದೇವತೆಗಳ ಜತೆಯಲ್ಲಿ ತನ್ನ ಅಳಿಲ ಸೇವೆ ಗೈದ ಎಲ್ಲಾ ಪುರಾಣ ಕಾಲದಲ್ಲೂ ಪ್ರಾಮಾಣಿಕ ಸೇವೆಗೈದವರು ಕುಂಬಾರ ಕುಲಾಲ ಸಮುದಾಯದ ಜನರು ಎಂದು ಚಿತ್ರದುರ್ಗ ಕುಂಬಾರ ಗುಂಡಯ್ಯ ಮಹಾ ಸಂಸ್ಥಾನ ಕುಂಬಾರ ಗುರುಪೀಠದ ಶ್ರೀ ಬಸವಮೂರ್ತಿ ಕುಂಭಾರ ಗುಂಡಯ್ಯ ಸ್ವಾಮೀಜಿ ಹೇಳಿದರು. ಇತ್ತೀಚೆಗೆ ಬಿ.ಸಿ.ರೋಡಿನ ಕುಲಾಲ ಭವನದಲ್ಲಿ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇದರ ಮಹಾಸಭೆ ಹಾಗೂ ಮರಿಯಾಲದ ನೆಂಪು- ಹಿರಿಯರ ಸಮ್ಮಿಲನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಬೆಳಿಗ್ಗೆ ಮಹಾಸಭೆಯನ್ನು ಛಾಯಾಗ್ರಾಹಕ ದಯಾನಂದ ಬಂಟ್ವಾಳ ಉದ್ಘಾಟಿಸಿ ಶುಭ ಹಾರೈಸಿದರು. ಚುನಾವಣಾ ಅಧಿಕಾರಿಯಾಗಿ ಮಹಾಬಲ ಮಾಸ್ಟರ್ ಸಹಕರಿಸಿದರು. ವೇದಿಕೆಯಲ್ಲಿ ಜಿಲ್ಲಾ ಅಧ್ಯಕ್ಷ ಸುಕುಮಾರ್ ಬಂಟ್ವಾಳ, ದಿನಕರ್ ನೀರುಮಾರ್ಗ, ಅಧ್ಯಕ್ಷ ಸಂತೋಷ್ ಮರ್ತಾಜೆ. ಕಾರ್ಯದರ್ಶಿ ನಿತೇಶ್ ಪಲ್ಲಿಕಂಡ, ಗೌರವಾಧ್ಯಕ್ಷ ಮಾಧವ ಬಿ.ಸಿ.ರೋಡ್ ಉಪಸ್ಥಿತರಿದ್ದರು. ಅಧ್ಯಕ್ಷ ಸಂತೋಷ್ ಮರ್ತಾಜೆ ಸ್ವಾಗತಿಸಿ, ಗತ ವರ್ಷಗಳ ವರದಿ ಮತ್ತು ಲೆಕ್ಕಪತ್ರವನ್ನು ಕಾರ್ಯದರ್ಶಿ ನಿತೀಶ್ ಪಲ್ಲಿಕಂಡ ಮತ್ತು ಕಾರ್ತಿಕ್ ಮಯ್ಯರಬೈಲು ವಾಚಿಸಿದರು.…
ಬಂಟ್ವಾಳ: ಹಿರಿಯ ರಂಗಕರ್ಮಿ ನಟ ನಿರ್ದೇಶಕ, ಕಾರ್ಯಕ್ರಮ ನಿರೂಪಕ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ರಂದು ನಿಧನರಾದರು. Advertisement ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕಲಾ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಹಿರಿಯ ತರಬೇತುದಾರರಾಗಿ, ಚಿತ್ರಕಲಾವಿದರಾಗಿ, ಕಾರ್ಯಕ್ರಮ ನಿರೂಪಕನಾಗಿ ,ರಂಗ ನಟ ನಿರ್ದೇಶಕರಾಗಿ,ಸಂಪನ್ಮೂಲ ವ್ಯಕ್ತಿಯಾಗಿ ಅಪಾರ ಜನಮನ್ನಣೆ ಗಳಿಸಿದ್ದರು. ಮೃತರು ಪತ್ನಿ, ಪುತ್ರಿ, ಸಹೋದರ, ಸಹೋದರಿ ಯರು ಮೊಮ್ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಬಂಟ್ವಾಳ: ನಿಕ್ಷಯಮಿತ್ರ ಯೋಜನೆಯಡಿ ಸೇವಾಂಜಲಿ ಪ್ರತಿಷ್ಠಾನವು ಬದ್ದತೆ ಹಾಗೂ ದೀಕ್ಷೆ ತೊಟ್ಟಂತೆ ಅರ್ಹ ಕ್ಷಯ ರೋಗಿಗಳಿಗೆ ಒಂದು ವರ್ಷದಿಂದ ಪೌಷ್ಠಿಕ ಆಹಾರದ ಕಿಟ್ ವಿತರಿಸುವ ಕಾರ್ಯ ಮಾಡುತ್ತಿರುವುದು ಅಭಿನಂದನೀಯ ಎಂದು ನಿಕಟಪೂರ್ವ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಹೇಳಿದರು.ಫರಂಗಿಪೇಟೆ ಸೇವಾಂಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಸೇವಾಂಜಲಿ ಸಭಾಗ್ರಹದಲ್ಲಿ ನಡೆದ ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ದವಸ ಧಾನ್ಯ ವಿತರಿಸಿ ಮಾತನಾಡಿದರು. ಯಾವುದೇ ಪ್ರತಿಫಲಾಪೇಕ್ಷೆ ಬಯಸದೆ ಸರಕಾರ, ಜನಪ್ರತಿನಿಧಿಗಳು ಮಾಡಬೇಕಾದ ಕೆಲಸವನ್ನು ಕೃಷ್ಣ ಕುಮಾರ್ ಪೂಂಜ ಅವರ ನೇತೃತ್ವದಲ್ಲಿ ಸೇವಾಂಜಲಿ ಪ್ರತಿಷ್ಠಾನ ನಿರಂತರವಾಗಿ ಮಾಡುತ್ತಿದೆ. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಆರೋಗ್ಯ ಸೇವಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿರುವುದು ಇತರ ಸಂಘ ಸಂಸ್ಥೆಗಳಿಗೆ ಆದರ್ಶ ಎಂದು ತಿಳಿಸಿದರು. Advertisement ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಪ್ರಾಸ್ತಾವಿಕವಾಗಿ ಮಾತನಾಡಿ ಕ್ಷಯರೋಗಿಗಳಿಗೆ ನೀಡುವ ಆಹಾರವನ್ನು ಅವರೇ ಸೇವಿಸಿ ಆರೋಗ್ಯವನ್ನು ಉತ್ತಮಗೊಳಿಸಬೇಕು ಎಂದು ತಿಳಿಸಿದರು. ವೇದಿಕೆಯಲ್ಲಿ ಪ್ರಮುಖರಾದ ಸುಕೇಶ್ ಶೆಟ್ಟಿ…
ತಲಪಾಡಿಯಲ್ಲಿ ರಸ್ತೆಗೆ ಉರುಳಿದ ಗೂಡ್ಸ್ ಟೆಂಪೊ ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಟೆಂಪೊವೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ಬಿ.ಸಿ.ರೋಡಿನ ತಲಪಾಡಿ ಬಳಿ ನಡೆದಿದೆ. ಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಚಾಲಕನಿಗೆ ತರಚಿದ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ಟ್ರಾಫಿಕ್ ಜಾಂ ಉಂಟಾಯಿತು.
ಪ್ರಗತಿಪರ ಕೃಷಿಕ ಹರಿನಾಥ ಭಂಡಾರಿ ನಿಧನ ಬಂಟ್ವಾಳ: ತುಂಬೆಯ ಹರಿನಾಥ್ ಭಂಡಾರಿ ವಳವೂರುಗುತ್ತು(೯೦) ಸೆ. ೪ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಸಾಮಾಜಿಕ ಮುಂದಾಳುವಾಗಿ, ಪ್ರಗತಿಪರ ಕೃಷಿಕರಾಗಿದ್ದ ಅವರು ತುಂಬೆ ಶ್ರೀ ಶಾರದಾ ಮಹೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷರಾಗಿದ್ದರು. ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ತಮ್ಮ ಗುತ್ತಿಗೆ ಸಂಬಂಧಪಟ್ಟ ದೈವಸ್ಥಾನಗಳ ಧಾರ್ಮಿಕ ಕಾರ್ಯಗಳಲ್ಲಿ ಸಕ್ರೀಯರಾಗಿದ್ದರು. ಕೊಡುಗೈ ದಾನಿಯಾಗಿದ್ದರು. ಮೃತರು ಪತ್ನಿ, ಪುತ್ರಿ, ಅಳಿಯ, ಪುತ್ರ, ಸೊಸೆ, ನಾಲ್ಕು ಮಂದಿ ಮೊಮ್ಮಕ್ಕಳು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ Advertisement








